Homeಅಂಕಣಗಳುಯಾವ ಧರ್ಮವೂ ಮಹಿಳೆಯರ ಪರವಲ್ಲ....

ಯಾವ ಧರ್ಮವೂ ಮಹಿಳೆಯರ ಪರವಲ್ಲ….

- Advertisement -
- Advertisement -

ಕಳೆದ ವಾರ ತೀರಿಕೊಂಡ ಪೋಪ್ ಜಾನ್ ಪಾಲ್ ಬಗ್ಗೆ ಎಲ್ಲೆಡೆಯಿಂದ ಪ್ರಶಂಸೆಯ ಶ್ರದ್ಧಾಂಜಲಿಗಳೇ ಕೇಳಿಬರುತ್ತಿವೆ. ಆತ ಶಾಂತಿಪ್ರಿಯರಾಗಿದ್ದರು ಎಂದೂ, ಮಾನವತಾವಾದಿಯಾಗಿದ್ದರು ಎಂದೂ, ಶೋಷಿತರ ಪರವಾಗಿದ್ದರೆಂದೂ ಅವರನ್ನು ಎಲ್ಲರೂ ಹೊಗಳಿದ್ದೇ ಹೊಗಳಿದ್ದು. ಆದರೆ ಅದೇ ಜಾನ್ ಪಾಲ್ ಮಹಿಳಾ ಹಕ್ಕುಗಳ ವಿರೋಧಿಯಾಗಿದ್ದರೆಂದೂ, ಅಭಿವ್ಯಕ್ತಿ ಸ್ವಾತಂತ್ರ್ಯ ವನ್ನು ನಿರಾಕರಿಸಿದ್ದರೆಂದೂ, ಕ್ರಿಶ್ಚಿಯನ್ ಧರ್ಮದ ಮೂಲಭೂತವಾದಿಗಳಿಗೆ ಬೆಂಬಲ ನೀಡಿದ್ದರೆಂದೂ ಯಾರೂ ಹೇಳುತ್ತಿಲ್ಲ! ಹಾಗೆ ಯಾರಾದರೂ ಹೇಳಿದ್ದರೂ ಹೊಗಳುಭಟ್ಟರ ಆರ್ಭಟದಲ್ಲಿ ಈ `ಅಪಸ್ವರ’ ಗಳು ಯಾರ ಕಿವಿಗೂ ಬಿದ್ದಂತಿಲ್ಲ!

ಸಂಪ್ರದಾಯದ ಹೆಸರಿನಲ್ಲಿ ಮಹಿಳೆಯರ ಹಕ್ಕುಗಳನ್ನು ಕಿತ್ತುಕೊಂಡ ಧರ್ಮಾಧಿಕಾರಿಗಳಲ್ಲಿ ಪೋಪ್ ಮೊದಲನೆ ಯವರೂ ಅಲ್ಲ; ಖಂಡಿತವಾಗಿ ಕೊನೆಯವರೂ ಅಲ್ಲ. ಏಕೆಂದರೆ ಕ್ರಿಶ್ಚಿಯನ್ ಧರ್ಮ ಮಾತ್ರವಲ್ಲ, ಜಗತ್ತಿನ ಬಹಳಷ್ಟು ಪ್ರಮುಖ ಧರ್ಮಗಳೂ ಮಹಿಳಾ ವಿರೋಧಿಯೇ ಆಗಿವೆ.

ಪೈಗಂಬರದು ಮಹಿಳೆಯರನ್ನು ಬುರ್ಕಾಗಳಲ್ಲಿ ಇರಿಸಿ ಅವರನ್ನು ಎರಡನೆ ದರ್ಜೆಯ ಪ್ರಜೆಗಳಂತೆ ಕಾಣಿ ಎಂದು ಹೇಳಿರಲಿಲ್ಲ. ಒಂದು ದಿನ ಪೈಗಂಬರರು ಬಹಳ ದಣಿದಿದ್ದರೂ ಅವರೊಂದಿಗೆ ಮಾತುಕತೆಗೆಂದು ಬಂದಿದ್ದ ಇಬ್ಬರು ಅತಿಥಿ ಗಳು ಅದೆಷ್ಟೇ ಹೊತ್ತಾದರೂ ಹೊರಡಲಿಲ್ಲ ವಾದ್ದರಿಂದ, ಪೈಗಂಬರರು ತಮ್ಮ ಓರ್ವ ಮಡದಿ ಇದ್ದ ಕೋಣೆಯ ಬಾಗಿಲಿಗೆ ಪರದೆಯನ್ನು ಹಾಕಿ ನಿದ್ದೆಗೆ ಸಜ್ಜಾದರು. ಅದನ್ನೇ ನೆಪವಾಗಿಸಿಕೊಂಡು ಇವತ್ತು ಮುಸ್ಲಿಂ ಮಹಿಳೆಯರನ್ನು ಬುರ್ಕಾಗಳಲ್ಲಿ ಇರಿಸಿ ಅವರನ್ನು ಶೋಷಿಸಲಾಗುತ್ತಿದೆ.

ಅಂತಹ ಮೇಧಾವಿ ಗೌತಮ ಬುದ್ಧ ಕೂಡ ಒಂದು ರೀತಿಯಲ್ಲಿ ಮಹಿಳಯರ ಬಗ್ಗೆ ತಾರತಮ್ಯ ನೀತಿ ಅನುಸರಿಸಿದ್ದ. ಆತ ತನ್ನ ಮಡದಿ ಯಶೋಧರೆ ಸೇರಿದಂತೆ ಇತರ ಮಹಿಳೆಯರನ್ನು ಅನುಯಾಯಿ ಗಳಾಗಿ ಸ್ವೀಕರಿಸಿದರೂ, ಮಹಿಳೆಯರು ಬಿಕ್ಕುಗಳಾ ಗಲು ಪ್ರಾರಂಭದಲ್ಲಿ ಅನುಮತಿ ನೀಡಿರಲಿಲ್ಲ. ಬುದ್ಧನ ಚಿಕ್ಕಮ್ಮ ಮಹಾಪ್ರಜಾಪತಿ ತಾನು ಬಿಕ್ಕು ಆಗಬೇಕೆಂದು ಕೇಳಿಕೊಂಡಾಗ ಬುದ್ಧ ನಿರಾಕರಿಸಿದ. ಕೊನೆಗೆ ಬುದ್ಧನ ಆಪ್ತ ಶಿಷ್ಯ ಆನಂದ ಮಹಿಳೆಯರ ಪರವಾಗಿ ವಾದಿಸಿದ ನಂತರ “ಪುರುಷ ಬಿಕ್ಕುಗಳಿಗೆ ಮಹಿಳಾ ಬಿಕ್ಕುಗಳನ್ನು ಹಿರಿಯರು-ಕಿರಿಯರು ಎಂಬ ಭೇದಭಾವವಿಲ್ಲದೆ ಗೌರವಿಸಬೇಕು; ಪುರುಷ ಬಿಕ್ಕುಗಳನ್ನು ಯಾವುದೇ ಕಾರಣಕ್ಕೂ ಮಹಿಳಾ ಬಿಕ್ಕುಗಳು ಟೀಕಿಸಬಾರದು” ಎಂಬಂತಹ ಷರತ್ತುಗಳನ್ನು ಹೇರಿದ ನಂತರವೇ ಒಪ್ಪಿಗೆ ನೀಡಿದ್ದ ಗೌತಮ ಬುದ್ಧ.

ಇನ್ನು ಮನುವಾದಿ `ಹಿಂದೂ’ ಧರ್ಮದ ಬಗ್ಗೆ ಇಲ್ಲಿ ಹೇಳುವ ಅಗತ್ಯವಿಲ್ಲ ಎನಿಸುತ್ತದೆ. ಪುರೋಹಿತಶಾಹಿ ವ್ಯವಸ್ಥೆಯಲ್ಲಿ ಶೂದ್ರರಿಗೂ, ದಲಿತರಿಗೂ, ಮಹಿಳೆಯ ರಿಗೂ ಒಂದು ಸ್ಥಾನ, ಮೇಲುಜಾತಿಯ ಪುರುಷರಿಗೆ ಮಾತ್ರ ಮತ್ತೊಂದು ಸ್ಥಾನ….

ಹಾಗೆ ನೋಡಿದರೆ ಮಹಿಳೆಯರನ್ನು ಸಮಾನರೆಂದು ಕಾಣುವ ಒಂದೇ ಒಂದು ಧರ್ಮವೂ ಇದ್ದಂತಿಲ್ಲ. ಮಹಿಳಾ ಹಕ್ಕುಗಳು, ಸ್ವಾತಂತ್ರ್ಯ, ಸ್ವಾಭಿಮಾನ, ಸ್ವಾವಲಂಬಿ ತನ… ಇವೆಲ್ಲವನ್ನು ಗುರುತಿಸಿ, ಅವರನ್ನು ಸಮಾನರಾಗಿ ಕಾಣುವ ಒಂದೇ ಒಂದು ಗ್ರಂಥ ಯಾವುದು ಗೊತ್ತಾ?

ನಮ್ಮ ದೇಶದ ಸಂವಿಧಾನ! ಅದನ್ನೇ ಇನ್ನು ಮುಂದೆ ಎಲ್ಲಾ ಭಾರತೀಯ ನಾರಿಯರು ತಮ್ಮ ಧರ್ಮ ಗ್ರಂಥವನ್ನಾಗಿಸಿಕೊಂಡರೆ ಹೇಗೆ?!

ಗೌರಿ ಲಂಕೇಶ್
ಏಪ್ರಿಲ್ 20, 2005 (`ಕಂಡಹಾಗೆ’ ಸಂಪಾದಕೀಯದಿಂದ)

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...