Homeಮುಖಪುಟಹೆದ್ದಾರಿ ಯೋಜನೆಗಳಲ್ಲಿ ಚೀನಾ ಕಂಪೆನಿಗಳಿಗೆ ಅನುಮತಿ ನೀಡುವುದಿಲ್ಲ: ಕೇಂದ್ರ ಸಚಿವ ನಿತಿನ್ ಗಡ್ಕರಿ

ಹೆದ್ದಾರಿ ಯೋಜನೆಗಳಲ್ಲಿ ಚೀನಾ ಕಂಪೆನಿಗಳಿಗೆ ಅನುಮತಿ ನೀಡುವುದಿಲ್ಲ: ಕೇಂದ್ರ ಸಚಿವ ನಿತಿನ್ ಗಡ್ಕರಿ

ಕಳೆದ ತಿಂಗಳು ಲಡಾಖ್ ಗಡಿಯಲ್ಲಿ 20 ಭಾರತೀಯ ಸೇನಾ ಸಿಬ್ಬಂದಿಗಳ ಸಾವಿಗೆ ಕಾರಣವಾಗಿದ್ದ ಘರ್ಷಣೆಯ ಹಿನ್ನಲೆಯಲ್ಲಿ ಸಚಿವರ ಪ್ರತಿಪಾದನೆಯು ಮಹತ್ವವನ್ನು ಪಡೆದುಕೊಂಡಿದೆ. ಉಭಯ ದೇಶಗಳ ನಡುವೆ ಉದ್ವಿಗ್ನತೆ ಹೆಚ್ಚುತ್ತಿರುವ ಮಧ್ಯೆ ಭಾರತವು ರಾಷ್ಟ್ರೀಯ ಭದ್ರತೆಗೆ ಬೆದರಿಕೆ ಹಾಕಿದೆ ಎಂದು 59 ಚೀನಿ ಆ್ಯಪ್‌ಗಳನ್ನು ನಿಷೇಧಿಸಿದೆ.

- Advertisement -
- Advertisement -

ಜಂಟಿ ಉದ್ಯಮಗಳು ಸೇರಿದಂತೆ ಹೆದ್ದಾರಿ ಯೋಜನೆಗಳಲ್ಲಿ ಚೀನಾ ಕಂಪನಿಗಳಿಗೆ ಭಾರತ ಅವಕಾಶ ನೀಡುವುದಿಲ್ಲ ಎಂದು ಕೇಂದ್ರ ಸಚಿವ ನಿತಿನ್ ಗಡ್ಕರಿ ಅವರು ತಿಳಿಸಿದ್ದಾರೆ. ಅತೀಸಣ್ಣ, ಸಣ್ಣ ಹಾಗೂ ಮಧ್ಯಮ ಉದ್ಯಮ (ಎಂಎಸ್‌ಎಂಇ) ದಂತಹ ವಿವಿಧ ಕ್ಷೇತ್ರಗಳಲ್ಲಿ ಚೀನಾದ ಹೂಡಿಕೆದಾರರಿಗೆ ಅವಕಾಶ ಸಿಗದಂತೆ ಸರ್ಕಾರ ಖಚಿತಪಡಿಸುತ್ತದೆ ಎಂದು ಅವರು ಹೇಳಿದ್ದಾರೆ.

ಕಳೆದ ತಿಂಗಳು ಲಡಾಖ್ ಗಡಿಯಲ್ಲಿ 20 ಭಾರತೀಯ ಸೇನಾ ಸಿಬ್ಬಂದಿಗಳ ಸಾವಿಗೆ ಕಾರಣವಾಗಿದ್ದ ಘರ್ಷಣೆಯ ಹಿನ್ನಲೆಯಲ್ಲಿ ಸಚಿವರ ಪ್ರತಿಪಾದನೆಯು ಮಹತ್ವವನ್ನು ಪಡೆದುಕೊಂಡಿದೆ.

ಉಭಯ ದೇಶಗಳ ನಡುವೆ ಉದ್ವಿಗ್ನತೆ ಹೆಚ್ಚುತ್ತಿರುವ ಮಧ್ಯೆ ಭಾರತವು ರಾಷ್ಟ್ರೀಯ ಭದ್ರತೆಗೆ ಬೆದರಿಕೆ ಹಾಕಿದೆ ಎಂದು 59 ಚೀನಿ ಆ್ಯಪ್‌ಗಳನ್ನು ನಿಷೇಧಿಸಿದೆ.

ಪಿಟಿಐ ಸಂದರ್ಶನವೊಂದರಲ್ಲಿ ಮಾತನಾಡಿದ ಸಚಿವರು “ರಸ್ತೆ ನಿರ್ಮಾಣಕ್ಕಾಗಿ ಚೀನಾದ ಪಾಲುದಾರರನ್ನು ಹೊಂದಿರುವ ಜಂಟಿ ಉದ್ಯಮಗಳಿಗೆ ನಾವು ಅನುಮತಿ ನೀಡುವುದಿಲ್ಲ. ಅವರು (ಚೀನೀ ಕಂಪನಿಗಳು) ನಮ್ಮ ದೇಶದಲ್ಲಿ ಜಂಟಿ ಉದ್ಯಮದ ಮೂಲಕ ಬಂದರೆ ನಾವು ಅದನ್ನು ಅನುಮತಿಸುವುದಿಲ್ಲ ಎಂದು ನಾವು ದೃಢವಾದ ನಿಲುವನ್ನು ತೆಗೆದುಕೊಂಡಿದ್ದೇವೆ” ಎಂದು ಹೇಳಿದರು.

ಹೆದ್ದಾರಿ ಯೋಜನೆಗಳಲ್ಲಿ ಪಾಲ್ಗೊಳ್ಳಲು ತಮ್ಮ ಅರ್ಹತಾ ಮಾನದಂಡಗಳನ್ನು ವಿಸ್ತರಿಸಿ ಚೀನಾದ ಸಂಸ್ಥೆಗಳನ್ನು ನಿಷೇಧಿಸುವುದು ಮತ್ತು ಭಾರತೀಯ ಕಂಪನಿಗಳಿಗೆ ದಾರಿಗಳನ್ನು ಸಡಿಲಿಸುವುದು ಎಂಬ ನೀತಿಯನ್ನು ಶೀಘ್ರದಲ್ಲೇ ಹೊರಡಿಸಲಾಗುವುದು ಎಂದು ಅವರು ಹೇಳಿದ್ದಾರೆ.

ಪ್ರಸ್ತುತ ಈಗಾಗಲೇ ಚೀನಾದ ಕೆಲವು ಪಾಲುದಾರರನ್ನು ಒಳಗೊಂಡಿರುವ ಕೆಲವು ಯೋಜನೆಗಳ ಬಗ್ಗೆ ಕೇಳಿದ ಪ್ರಶ್ನೆಗೆ “ಹೊಸ ನಿರ್ಧಾರವನ್ನು ಪ್ರಸ್ತುತ ಮತ್ತು ಭವಿಷ್ಯದ ಟೆಂಡರ್‌ಗಳಲ್ಲಿ ಜಾರಿಗೆ ತರಲಾಗುವುದು” ಎಂದು ಹೇಳಿದರು.

ಅಸ್ತಿತ್ವದಲ್ಲಿರುವ ಟೆಂಡರ್‌ಗಳು ಮತ್ತು ಭವಿಷ್ಯದ ಬಿಡ್‌ಗಳಿಗೆ ಸಂಬಂಧಿಸಿದಂತೆ, ಚೀನಾದ ಯಾವುದೇ ಜಂಟಿ ಉದ್ಯಮಗಳು ಇದ್ದಲ್ಲಿ ಮರುಬಿಡ್ ಮಾಡಲಾಗುವುದು ಎಂದು ಗಡ್ಕರಿ ಹೇಳಿದರು.

“ನಮ್ಮ ಕಂಪನಿಗಳು ದೊಡ್ಡ ಯೋಜನೆಗಳಲ್ಲಿ ಬಿಡ್ಡಿಂಗ್ ಮಾಡಲು ಅರ್ಹತೆ ಹೊಂದಿದೆಯೆ ಎಂದು ಖಚಿತಪಡಿಸಿಕೊಳ್ಳಲು ನಾವು ನಿಯಮಗಳನ್ನು ಸಡಿಲಿಸುವ ನಿರ್ಧಾರವನ್ನು ತೆಗೆದುಕೊಂಡಿದ್ದೇವೆ. ತಾಂತ್ರಿಕ ಮತ್ತು ಆರ್ಥಿಕ ಮಾನದಂಡಗಳನ್ನು ಸಡಿಲಿಸಲು ಸಭೆ ನಡೆಸಲು ನಾನು ಹೆದ್ದಾರಿಗಳ ಕಾರ್ಯದರ್ಶಿ (ಗಿರಿಧರ್ ಅರಮನೆ) ಮತ್ತು ಎನ್‌ಎಚ್‌ಎಐ ಅಧ್ಯಕ್ಷ (ಎಸ್‌ಎಸ್ ಸಂಧು) ಅವರಿಗೆ ನಿರ್ದೇಶನ ನೀಡಿದ್ದೇನೆ. ಆದ್ದರಿಂದ ನಮ್ಮ ಕಂಪನಿಗಳು ಕೆಲಸ ಮಾಡಲು ಅರ್ಹತೆ ಪಡೆಯಬಹುದು “ಎಂದು ಅವರು ಹೇಳಿದರು.

ನಿರ್ಧಾರವನ್ನು ವಿಸ್ತಾರವಾಗಿ ವಿವರಿಸಿದ ಗಡ್ಕರಿ, ಗುತ್ತಿಗೆದಾರನು ಸಣ್ಣ ಯೋಜನೆಗೆ ಅರ್ಹತೆ ಗಳಿಸಬಹುದಾದರೆ, ಅವನು ದೊಡ್ಡ ಯೋಜನೆಗೆ ಅರ್ಹತೆ ಪಡೆಯಬಹುದು ಎಂದು ಹೇಳಿದರು. “ನಿರ್ಮಾಣ ಮಾನದಂಡಗಳು ಉತ್ತಮವಾಗಿಲ್ಲ, ಹಾಗಾಗಿ ಅದನ್ನು ಬದಲಾಯಿಸಲು ನಾನು ಕೇಳಿದ್ದೇನೆ. ನಾವು ಅದನ್ನು ಬದಲಾಯಿಸುತ್ತಿದ್ದೇವೆ ಇದರಿಂದ ನಾವು ಭಾರತೀಯ ಕಂಪನಿಗಳನ್ನು ಪ್ರೋತ್ಸಾಹಿಸಬಹುದು” ಎಂದು ಅವರು ಹೇಳಿದರು.

“ನಾವು ತಂತ್ರಜ್ಞಾನ, ಸಲಹೆ ಅಥವಾ ವಿನ್ಯಾಸ ಕ್ಷೇತ್ರಗಳಲ್ಲಿ ವಿದೇಶಿ ಜಂಟಿ ಉದ್ಯಮದೊಂದಿಗೆ ಸೇರಲೆಬೇಕೆಂದಿದ್ದರೂ, ನಾವು ಚೀನೀಯರನ್ನು ಅನುಮತಿಸುವುದಿಲ್ಲ” ಎಂದು ಸಚಿವರು ಹೇಳಿದರು.

ಎಂಎಸ್‌ಎಂಇ ವಲಯದ ಬಗ್ಗೆ, ಸ್ಥಳೀಯ ಉತ್ಪಾದನೆಯ ಸಾಮರ್ಥ್ಯವನ್ನು ಹೆಚ್ಚಿಸುವ ಪ್ರಯತ್ನವಾಗಿದೆ ಆದರೆ ಅದೇ ಸಮಯದಲ್ಲಿ ವಿದೇಶಿ ಹೂಡಿಕೆಯನ್ನು ಉತ್ತೇಜಿಸಲಾಗುತ್ತಿದೆ ಎಂದು ಗಡ್ಕರಿ ಹೇಳಿದರು.

ಆದರೆ, ವಿದೇಶಿ ಹೂಡಿಕೆಗೆ ಉತ್ತೇಜನ ನೀಡುವ ನಿರ್ಧಾರವಿದ್ದರೂ, ಚೀನಾದ ಹೂಡಿಕೆದಾರರಿಗೆ ಅವಕಾಶ ನೀಡುವುದಿಲ್ಲ ಎಂದು ಅವರು ಸ್ಪಷ್ಟಪಡಿಸಿದರು.


ಓದಿ: ಚೀನಾ ಪಡೆಗಳನ್ನು ಹೇಗೆ ಮತ್ತು ಯಾವಾಗ ಹೊರಹಾಕಲಾಯಿತು ಬಹಿರಂಗಪಡಿಸಿ: ಕೇಂದ್ರಕ್ಕೆ ಸೋನಿಯಾ ಗಾಂಧಿ ಒತ್ತಾಯ


ವಿಡಿಯೋ ನೋಡಿ:

ಗುರುದೇವ ರವೀಂದ್ರ ಠಾಗೋರ್‌ ಅವರ ‘ಅಂತರಂಗವನು ಅರಳಿಸು!’ ಎಂ ಡಿ ಪಲ್ಲವಿ ಕಂಠಸಿರಿಯಲ್ಲಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ದೆಹಲಿ ಗಲಭೆ ಪ್ರಕರಣದಿಂದ ಒಂಬತ್ತು ಜನರನ್ನು ಖುಲಾಸೆಗೊಳಿಸಿದ ನ್ಯಾಯಾಲಯ

2020 ರ ದೆಹಲಿ ಗಲಭೆಗೆ ಸಂಬಂಧಿಸಿದ ಪ್ರಕರಣದಲ್ಲಿ ಒಂಬತ್ತು ಜನರನ್ನು ನ್ಯಾಯಾಲಯವು ಖುಲಾಸೆಗೊಳಿಸಿದೆ. ಸಾಕ್ಷ್ಯಗಳು ನಿರ್ದಿಷ್ಟತೆಯ ಕೊರತೆ ಮತ್ತು ಸಾಮಾನ್ಯ ಸ್ವರೂಪದ್ದಾಗಿರುವುದರಿಂದ ಪ್ರಕರಣದಲ್ಲಿ ಅವುಗಳನ್ನು ನಂಬಲಾಗುವುದಿಲ್ಲ ಎಂ ನ್ಯಾಯಾಲಯ ಹೇಳಿದೆ. ಹೆಚ್ಚುವರಿ ಸೆಷನ್ಸ್ ನ್ಯಾಯಾಧೀಶ...

ಚುನಾವಣಾ ಕಾರ್ಯಕ್ಕೆ ಅರಣ್ಯ ಸಿಬ್ಬಂದಿ : ಅಸ್ಸಾಂ ಸರ್ಕಾರದ ಆದೇಶಕ್ಕೆ ಎನ್‌ಜಿಟಿ ತಡೆ

ವಿಧಾನಸಭೆ ಚುನಾವಣೆಗೆ ಅಸ್ಸಾಂ ಅರಣ್ಯ ಸಂರಕ್ಷಣಾ ಪಡೆಯ 1,600 ಸಿಬ್ಬಂದಿಯನ್ನು ನಿಯೋಜಿಸಲು ಕೋರಿದ್ದ ಅಸ್ಸಾಂ ಸರ್ಕಾರದ ಆದೇಶವನ್ನು ರಾಷ್ಟ್ರೀಯ ಹಸಿರು ನ್ಯಾಯಮಂಡಳಿಯ (ಎನ್‌ಜಿಟಿ) ಪೂರ್ವ ವಲಯ ಪೀಠ ಗುರುವಾರ (ಮಾ.2) ತಡೆಹಿಡಿದಿದೆ. ಈ ಆದೇಶವನ್ನು...

‘ಕರೂರು ದುರಂತದಲ್ಲಿ ಪಿತೂರಿ ಇದೆ’ ಈ ಘಟನೆಯಲ್ಲಿ ನನಗೂ ನ್ಯಾಯ ಬೇಕು: ಟಿವಿಕೆ ಮುಖ್ಯಸ್ಥ ನಟ, ರಾಜಕಾರಣಿ ವಿಜಯ್ ಆರೋಪ  

ಕರೂರಿನಲ್ಲಿ ನಡೆದ ದುರಂತ ಕಾಲ್ತುಳಿತ ಮತ್ತು ಅವರ ಕೊನೆಯ ಚಿತ್ರ ಜನನಾಯಗನ್ ಬಿ ಡುಗಡೆಯ ಹಿಂದೆ ಜಂಟಿ ಕುತಂತ್ರ ಮತ್ತು ಪಿತೂರಿ ಇದೆ ಎಂದು ಟಿವಿಕೆ ಮುಖ್ಯಸ್ಥ ವಿಜಯ್ ಗುರುವಾರ ಆರೋಪಿಸಿದ್ದಾರೆ ಮತ್ತು...

ತೆಲಂಗಾಣ| ಗೋಮಾಂಸ ಮಾರಾಟ ಆರೋಪ; ಮುಸ್ಲಿಂ ಸಮುದಾಯದ ತಂದೆ-ಮಗನ ಮೇಲೆ ಹಲ್ಲೆ

ಹನುಮಾನ್ ಜಯಂತಿ ಸಂದರ್ಭದಲ್ಲಿ ಗೋಮಾಂಸ ಮಾರಾಟ ಮಾಡಿದ ಆರೋಪದ ಮೇಲೆ ಹಿಂದುತ್ವವಾದಿ ಗುಂಪೊಂದು 60 ವರ್ಷದ ಮುಸ್ಲಿಂ ವ್ಯಕ್ತಿ ಮತ್ತು ಆತನ ಹದಿಹರೆಯದ ಮಗನ ಮೇಲೆ ಹಲ್ಲೆ ನಡೆಸಿರುವ ಘಟನೆ ತೆಲಂಗಾಣದ ಜಗ್ತಿಯಾಲ್...

‘ಕೇವಲ ಮುಸ್ಲಿಮರೇ ಶಾಸಕರಾಗಿದ್ದಾರೆ’..ಚುನಾವಣೆ ಗೆಲ್ಲಲು ಧರ್ಮ ಮುಂದಿಟ್ಟ ಗುರುವಾಯೂರು ಬಿಜೆಪಿ ಅಭ್ಯರ್ಥಿ

ಕೇರಳದ ಗುರುವಾಯೂರು ವಿಧಾನಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಬಿ. ಗೋಪಾಲಕೃಷ್ಣನ್ ಚುನಾವಣೆ ಗೆಲ್ಲಲು ಧರ್ಮವನ್ನೇ ಮುಖ್ಯ ಅಸ್ತ್ರವನ್ನಾಗಿ ಬಳಸಿಕೊಂಡಿದ್ದು, ಕಳೆದ 50 ವರ್ಷಗಳಲ್ಲಿ ಕೇವಲ ಮುಸ್ಲಿಮರೇ ಶಾಸಕರಾಗಿದ್ದಾರೆ ಎಂಬುವುದನ್ನು ಪುನರುಚ್ಚರಿಸಿದ್ದಾರೆ. ಚುನಾವಣಾ ಪ್ರಚಾರದ ಭಾಗವಾಗಿ...

ಹೊಸ ಹಿಂದೂ ದೇವಾಲಯಕ್ಕೆ ಭೂಮಿ ಮಂಜೂರು ಮಾಡಿದ ಸಿಂಗಾಪುರ ಆಡಳಿತ

ಸಿಂಗಪುರದಲ್ಲಿ ಹೆಚ್ಚುತ್ತಿರುವ ಹಿಂದೂ ಸಮುದಾಯದ ಅಗತ್ಯಗಳನ್ನು ಪೂರೈಸಲು ಸಿಂಗಾಪುರ ಸರ್ಕಾರವು ನಗರ-ರಾಜ್ಯದ ಯಿಶುನ್ ಅವೆನ್ಯೂ 3 ರಲ್ಲಿ ಹೊಸ ಹಿಂದೂ ದೇವಾಲಯವನ್ನು ನಿರ್ಮಿಸಲು ಭೂಮಿ ಮಂಜೂರು ಮಾಡಿದೆ. ಏಪ್ರಿಲ್ 1 ರ ಬುಧವಾರದ ಮಾಧ್ಯಮ...

ಕೇರಳ ಚುನಾವಣೆಗೆ ಮುನ್ನ ಕಾಂಗ್ರೆಸ್ ನೇತೃತ್ವದ ಯುಡಿಎಫ್ ಗೆ ಬೆಂಬಲ ಘೋಷಿಸಿದ ‘ಅಂಬೇಡ್ಕರ್‌ವಾದಿ ಪ್ರಜಾಸತ್ತಾತ್ಮಕ ರಂಗ’

ಎಡ ಸರ್ಕಾರ ಕೈಗೊಂಡ ಅಭಿವೃದ್ಧಿ ಉಪಕ್ರಮಗಳು ಆದಿವಾಸಿ, ದಲಿತ ಮತ್ತು ಇತರ ಅಂಚಿನಲ್ಲಿರುವ ಸಮುದಾಯಗಳನ್ನು ಬದಿಗಿಟ್ಟಿವೆ ಎಂದು ಆರೋಪಿಸಿ, ಅಂಬೇಡ್ಕರ್‌ವಾದಿ ಪ್ರಜಾಸತ್ತಾತ್ಮಕ ರಂಗ (ಎಡಿಎಫ್) ಬುಧವಾರ ಕಾಂಗ್ರೆಸ್ ನೇತೃತ್ವದ ಯುನೈಟೆಡ್ ಪ್ರಜಾಸತ್ತಾತ್ಮಕ ರಂಗ...

ಐಎಎಸ್‌ ಅಧಿಕಾರಿ ರೋಹಿಣಿ ಸಿಂಧೂರಿ ವಿರುದ್ಧ ತನಿಖೆಗೆ ಪೂರ್ವಾನುಮತಿ ನೀಡಲು ಹೈಕೋರ್ಟ್ ನಿರ್ದೇಶನ

ಪರಿಸರ ಸ್ನೇಹಿ ಬಟ್ಟೆ ಚೀಲಗಳ ಖರೀದಿಯಲ್ಲಿ ನಡೆದಿದೆ ಎನ್ನಲಾದ ಅಕ್ರಮಗಳಿಗೆ ಸಂಬಂಧಿಸಿದಂತೆ, ಐಎಎಸ್ ಅಧಿಕಾರಿ ರೋಹಿಣಿ ಸಿಂಧೂರಿ ವಿರುದ್ಧ ಎಫ್‌ಐಆರ್ ದಾಖಲಿಸಲು ಅನುಮತಿಸುವಂತೆ ಹೈಕೋರ್ಟ್ ರಾಜ್ಯ ಸರ್ಕಾರಕ್ಕೆ ನಿರ್ದೇಶನ ನೀಡಿದೆ ಎಂದು ವರದಿಯಾಗಿದೆ....

ನ್ಯಾಯಾಂಗ ಅಧಿಕಾರಿಗಳನ್ನು ರಕ್ಷಿಸುವಲ್ಲಿ ಚುನಾವಣಾ ಆಯೋಗ ವಿಫಲವಾಗಿದೆ: ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳದ ಮಾಲ್ಡಾ ಜಿಲ್ಲೆಯಲ್ಲಿ ಎಸ್‌ಐಆರ್ ಕಾರ್ಯದಲ್ಲಿ ತೊಡಗಿರುವ ನ್ಯಾಯಾಂಗ ಅಧಿಕಾರಿಗಳನ್ನು 'ರಕ್ಷಿಸುವಲ್ಲಿ ಚುನಾವಣಾ ಆಯೋಗ ವಿಫಲವಾಗಿದೆ' ಎಂದು ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ದೂಷಿಸಿದ್ದಾರೆ. ಮತದಾರರ ಪಟ್ಟಿಯಿಂದ ಹೆಸರುಗಳನ್ನು ಅಳಿಸಿಹಾಕಿದ್ದಕ್ಕಾಗಿ ಬುಧವಾರ ಪ್ರತಿಭಟನಾಕಾರರು ಹಲವಾರು...

ಎಎಪಿಯ ರಾಜ್ಯಸಭಾ ಉಪನಾಯಕ ಸ್ಥಾನದಿಂದ ರಾಘವ್ ಚಡ್ಡಾಗೆ ಕೋಕ್, ಅಶೋಕ್ ಮಿತ್ತಲ್ ಗೆ ಅಧಿಕಾರ: ವರದಿ

ಮಹತ್ವದ ಬೆಳವಣಿಗೆಯೊಂದರಲ್ಲಿ, ಆಮ್ ಆದ್ಮಿ ಪಕ್ಷ (ಎಎಪಿ) ರಾಜ್ಯಸಭೆಯಲ್ಲಿ ರಾಘವ್ ಚಡ್ಡಾ ಅವರನ್ನು ಉಪನಾಯಕ ಹುದ್ದೆಯಿಂದ ಬದಲಾಯಿಸಲು ಮುಂದಾಗಿದ್ದು, ಇದು ಪಕ್ಷದೊಳಗಿನ ಆಂತರಿಕ ಬಿರುಕು ಉಂಟಾಗಿರುವ ಲಕ್ಷಣಗಳನ್ನು ಸೂಚಿಸುತ್ತದೆ. ಮೇಲ್ಮನೆಯಲ್ಲಿ ಪಕ್ಷದ ಹೊಸ...