Homeಮುಖಪುಟಹೆದ್ದಾರಿ ಯೋಜನೆಗಳಲ್ಲಿ ಚೀನಾ ಕಂಪೆನಿಗಳಿಗೆ ಅನುಮತಿ ನೀಡುವುದಿಲ್ಲ: ಕೇಂದ್ರ ಸಚಿವ ನಿತಿನ್ ಗಡ್ಕರಿ

ಹೆದ್ದಾರಿ ಯೋಜನೆಗಳಲ್ಲಿ ಚೀನಾ ಕಂಪೆನಿಗಳಿಗೆ ಅನುಮತಿ ನೀಡುವುದಿಲ್ಲ: ಕೇಂದ್ರ ಸಚಿವ ನಿತಿನ್ ಗಡ್ಕರಿ

ಕಳೆದ ತಿಂಗಳು ಲಡಾಖ್ ಗಡಿಯಲ್ಲಿ 20 ಭಾರತೀಯ ಸೇನಾ ಸಿಬ್ಬಂದಿಗಳ ಸಾವಿಗೆ ಕಾರಣವಾಗಿದ್ದ ಘರ್ಷಣೆಯ ಹಿನ್ನಲೆಯಲ್ಲಿ ಸಚಿವರ ಪ್ರತಿಪಾದನೆಯು ಮಹತ್ವವನ್ನು ಪಡೆದುಕೊಂಡಿದೆ. ಉಭಯ ದೇಶಗಳ ನಡುವೆ ಉದ್ವಿಗ್ನತೆ ಹೆಚ್ಚುತ್ತಿರುವ ಮಧ್ಯೆ ಭಾರತವು ರಾಷ್ಟ್ರೀಯ ಭದ್ರತೆಗೆ ಬೆದರಿಕೆ ಹಾಕಿದೆ ಎಂದು 59 ಚೀನಿ ಆ್ಯಪ್‌ಗಳನ್ನು ನಿಷೇಧಿಸಿದೆ.

- Advertisement -
- Advertisement -

ಜಂಟಿ ಉದ್ಯಮಗಳು ಸೇರಿದಂತೆ ಹೆದ್ದಾರಿ ಯೋಜನೆಗಳಲ್ಲಿ ಚೀನಾ ಕಂಪನಿಗಳಿಗೆ ಭಾರತ ಅವಕಾಶ ನೀಡುವುದಿಲ್ಲ ಎಂದು ಕೇಂದ್ರ ಸಚಿವ ನಿತಿನ್ ಗಡ್ಕರಿ ಅವರು ತಿಳಿಸಿದ್ದಾರೆ. ಅತೀಸಣ್ಣ, ಸಣ್ಣ ಹಾಗೂ ಮಧ್ಯಮ ಉದ್ಯಮ (ಎಂಎಸ್‌ಎಂಇ) ದಂತಹ ವಿವಿಧ ಕ್ಷೇತ್ರಗಳಲ್ಲಿ ಚೀನಾದ ಹೂಡಿಕೆದಾರರಿಗೆ ಅವಕಾಶ ಸಿಗದಂತೆ ಸರ್ಕಾರ ಖಚಿತಪಡಿಸುತ್ತದೆ ಎಂದು ಅವರು ಹೇಳಿದ್ದಾರೆ.

ಕಳೆದ ತಿಂಗಳು ಲಡಾಖ್ ಗಡಿಯಲ್ಲಿ 20 ಭಾರತೀಯ ಸೇನಾ ಸಿಬ್ಬಂದಿಗಳ ಸಾವಿಗೆ ಕಾರಣವಾಗಿದ್ದ ಘರ್ಷಣೆಯ ಹಿನ್ನಲೆಯಲ್ಲಿ ಸಚಿವರ ಪ್ರತಿಪಾದನೆಯು ಮಹತ್ವವನ್ನು ಪಡೆದುಕೊಂಡಿದೆ.

ಉಭಯ ದೇಶಗಳ ನಡುವೆ ಉದ್ವಿಗ್ನತೆ ಹೆಚ್ಚುತ್ತಿರುವ ಮಧ್ಯೆ ಭಾರತವು ರಾಷ್ಟ್ರೀಯ ಭದ್ರತೆಗೆ ಬೆದರಿಕೆ ಹಾಕಿದೆ ಎಂದು 59 ಚೀನಿ ಆ್ಯಪ್‌ಗಳನ್ನು ನಿಷೇಧಿಸಿದೆ.

ಪಿಟಿಐ ಸಂದರ್ಶನವೊಂದರಲ್ಲಿ ಮಾತನಾಡಿದ ಸಚಿವರು “ರಸ್ತೆ ನಿರ್ಮಾಣಕ್ಕಾಗಿ ಚೀನಾದ ಪಾಲುದಾರರನ್ನು ಹೊಂದಿರುವ ಜಂಟಿ ಉದ್ಯಮಗಳಿಗೆ ನಾವು ಅನುಮತಿ ನೀಡುವುದಿಲ್ಲ. ಅವರು (ಚೀನೀ ಕಂಪನಿಗಳು) ನಮ್ಮ ದೇಶದಲ್ಲಿ ಜಂಟಿ ಉದ್ಯಮದ ಮೂಲಕ ಬಂದರೆ ನಾವು ಅದನ್ನು ಅನುಮತಿಸುವುದಿಲ್ಲ ಎಂದು ನಾವು ದೃಢವಾದ ನಿಲುವನ್ನು ತೆಗೆದುಕೊಂಡಿದ್ದೇವೆ” ಎಂದು ಹೇಳಿದರು.

ಹೆದ್ದಾರಿ ಯೋಜನೆಗಳಲ್ಲಿ ಪಾಲ್ಗೊಳ್ಳಲು ತಮ್ಮ ಅರ್ಹತಾ ಮಾನದಂಡಗಳನ್ನು ವಿಸ್ತರಿಸಿ ಚೀನಾದ ಸಂಸ್ಥೆಗಳನ್ನು ನಿಷೇಧಿಸುವುದು ಮತ್ತು ಭಾರತೀಯ ಕಂಪನಿಗಳಿಗೆ ದಾರಿಗಳನ್ನು ಸಡಿಲಿಸುವುದು ಎಂಬ ನೀತಿಯನ್ನು ಶೀಘ್ರದಲ್ಲೇ ಹೊರಡಿಸಲಾಗುವುದು ಎಂದು ಅವರು ಹೇಳಿದ್ದಾರೆ.

ಪ್ರಸ್ತುತ ಈಗಾಗಲೇ ಚೀನಾದ ಕೆಲವು ಪಾಲುದಾರರನ್ನು ಒಳಗೊಂಡಿರುವ ಕೆಲವು ಯೋಜನೆಗಳ ಬಗ್ಗೆ ಕೇಳಿದ ಪ್ರಶ್ನೆಗೆ “ಹೊಸ ನಿರ್ಧಾರವನ್ನು ಪ್ರಸ್ತುತ ಮತ್ತು ಭವಿಷ್ಯದ ಟೆಂಡರ್‌ಗಳಲ್ಲಿ ಜಾರಿಗೆ ತರಲಾಗುವುದು” ಎಂದು ಹೇಳಿದರು.

ಅಸ್ತಿತ್ವದಲ್ಲಿರುವ ಟೆಂಡರ್‌ಗಳು ಮತ್ತು ಭವಿಷ್ಯದ ಬಿಡ್‌ಗಳಿಗೆ ಸಂಬಂಧಿಸಿದಂತೆ, ಚೀನಾದ ಯಾವುದೇ ಜಂಟಿ ಉದ್ಯಮಗಳು ಇದ್ದಲ್ಲಿ ಮರುಬಿಡ್ ಮಾಡಲಾಗುವುದು ಎಂದು ಗಡ್ಕರಿ ಹೇಳಿದರು.

“ನಮ್ಮ ಕಂಪನಿಗಳು ದೊಡ್ಡ ಯೋಜನೆಗಳಲ್ಲಿ ಬಿಡ್ಡಿಂಗ್ ಮಾಡಲು ಅರ್ಹತೆ ಹೊಂದಿದೆಯೆ ಎಂದು ಖಚಿತಪಡಿಸಿಕೊಳ್ಳಲು ನಾವು ನಿಯಮಗಳನ್ನು ಸಡಿಲಿಸುವ ನಿರ್ಧಾರವನ್ನು ತೆಗೆದುಕೊಂಡಿದ್ದೇವೆ. ತಾಂತ್ರಿಕ ಮತ್ತು ಆರ್ಥಿಕ ಮಾನದಂಡಗಳನ್ನು ಸಡಿಲಿಸಲು ಸಭೆ ನಡೆಸಲು ನಾನು ಹೆದ್ದಾರಿಗಳ ಕಾರ್ಯದರ್ಶಿ (ಗಿರಿಧರ್ ಅರಮನೆ) ಮತ್ತು ಎನ್‌ಎಚ್‌ಎಐ ಅಧ್ಯಕ್ಷ (ಎಸ್‌ಎಸ್ ಸಂಧು) ಅವರಿಗೆ ನಿರ್ದೇಶನ ನೀಡಿದ್ದೇನೆ. ಆದ್ದರಿಂದ ನಮ್ಮ ಕಂಪನಿಗಳು ಕೆಲಸ ಮಾಡಲು ಅರ್ಹತೆ ಪಡೆಯಬಹುದು “ಎಂದು ಅವರು ಹೇಳಿದರು.

ನಿರ್ಧಾರವನ್ನು ವಿಸ್ತಾರವಾಗಿ ವಿವರಿಸಿದ ಗಡ್ಕರಿ, ಗುತ್ತಿಗೆದಾರನು ಸಣ್ಣ ಯೋಜನೆಗೆ ಅರ್ಹತೆ ಗಳಿಸಬಹುದಾದರೆ, ಅವನು ದೊಡ್ಡ ಯೋಜನೆಗೆ ಅರ್ಹತೆ ಪಡೆಯಬಹುದು ಎಂದು ಹೇಳಿದರು. “ನಿರ್ಮಾಣ ಮಾನದಂಡಗಳು ಉತ್ತಮವಾಗಿಲ್ಲ, ಹಾಗಾಗಿ ಅದನ್ನು ಬದಲಾಯಿಸಲು ನಾನು ಕೇಳಿದ್ದೇನೆ. ನಾವು ಅದನ್ನು ಬದಲಾಯಿಸುತ್ತಿದ್ದೇವೆ ಇದರಿಂದ ನಾವು ಭಾರತೀಯ ಕಂಪನಿಗಳನ್ನು ಪ್ರೋತ್ಸಾಹಿಸಬಹುದು” ಎಂದು ಅವರು ಹೇಳಿದರು.

“ನಾವು ತಂತ್ರಜ್ಞಾನ, ಸಲಹೆ ಅಥವಾ ವಿನ್ಯಾಸ ಕ್ಷೇತ್ರಗಳಲ್ಲಿ ವಿದೇಶಿ ಜಂಟಿ ಉದ್ಯಮದೊಂದಿಗೆ ಸೇರಲೆಬೇಕೆಂದಿದ್ದರೂ, ನಾವು ಚೀನೀಯರನ್ನು ಅನುಮತಿಸುವುದಿಲ್ಲ” ಎಂದು ಸಚಿವರು ಹೇಳಿದರು.

ಎಂಎಸ್‌ಎಂಇ ವಲಯದ ಬಗ್ಗೆ, ಸ್ಥಳೀಯ ಉತ್ಪಾದನೆಯ ಸಾಮರ್ಥ್ಯವನ್ನು ಹೆಚ್ಚಿಸುವ ಪ್ರಯತ್ನವಾಗಿದೆ ಆದರೆ ಅದೇ ಸಮಯದಲ್ಲಿ ವಿದೇಶಿ ಹೂಡಿಕೆಯನ್ನು ಉತ್ತೇಜಿಸಲಾಗುತ್ತಿದೆ ಎಂದು ಗಡ್ಕರಿ ಹೇಳಿದರು.

ಆದರೆ, ವಿದೇಶಿ ಹೂಡಿಕೆಗೆ ಉತ್ತೇಜನ ನೀಡುವ ನಿರ್ಧಾರವಿದ್ದರೂ, ಚೀನಾದ ಹೂಡಿಕೆದಾರರಿಗೆ ಅವಕಾಶ ನೀಡುವುದಿಲ್ಲ ಎಂದು ಅವರು ಸ್ಪಷ್ಟಪಡಿಸಿದರು.


ಓದಿ: ಚೀನಾ ಪಡೆಗಳನ್ನು ಹೇಗೆ ಮತ್ತು ಯಾವಾಗ ಹೊರಹಾಕಲಾಯಿತು ಬಹಿರಂಗಪಡಿಸಿ: ಕೇಂದ್ರಕ್ಕೆ ಸೋನಿಯಾ ಗಾಂಧಿ ಒತ್ತಾಯ


ವಿಡಿಯೋ ನೋಡಿ:

ಗುರುದೇವ ರವೀಂದ್ರ ಠಾಗೋರ್‌ ಅವರ ‘ಅಂತರಂಗವನು ಅರಳಿಸು!’ ಎಂ ಡಿ ಪಲ್ಲವಿ ಕಂಠಸಿರಿಯಲ್ಲಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಶ್ರೀಲಂಕಾ | 2019ರ ಈಸ್ಟರ್ ಬಾಂಬ್ ಸ್ಫೋಟ ಪ್ರಕರಣ: ಇಬ್ಬರು ಮಾಜಿ ಅಧಿಕಾರಿಗಳಿಗೆ ಮರಣದಂಡನೆ ವಿಧಿಸಿದ ಕೋರ್ಟ್

ಬರೋಬ್ಬರಿ 260ಕ್ಕೂ ಹೆಚ್ಚು ಜನರ ಸಾವಿಗೆ ಕಾರಣವಾಗಿದ್ದ 2019ರ ಶ್ರೀಲಂಕಾದ 'ಈಸ್ಟರ್ ಸಂಡೇ' ಬಾಂಬ್ ಸ್ಫೋಟ ಪ್ರಕರಣದಲ್ಲಿ ಕ್ರಿಮಿನಲ್ ನಿರ್ಲಕ್ಷ್ಯ ಆರೋಪ ಸಾಬೀತಾದ ಹಿನ್ನೆಲೆ, ಪೊಲೀಸ್ ಮಾಜಿ ಮುಖ್ಯಸ್ಥ ಮತ್ತು ರಕ್ಷಣಾ ಸಚಿವಾಲಯದ...

ಅಮೆರಿಕ ಓದಿಗೆ ಎಲ್ಲಿಂದ ಬಂತು ಹಣ? CJP ಸ್ಥಾಪಕ ಅಭಿಜೀತ್ ದೀಪ್ಕೆ ತಂದೆಯ ಆಸ್ತಿ ತನಿಖೆಗೆ RTI ಕಾರ್ಯಕರ್ತ ಆಗ್ರಹ

ಕಾಕ್ರೋಚ್ ಜನತಾ ಪಾರ್ಟಿ (CJP) ಸ್ಥಾಪಕ ಅಭಿಜೀತ್ ದೀಪ್ಕೆ ಅವರ ತಂದೆ, ಮಹಾರಾಷ್ಟ್ರ ಸರ್ಕಾರದ ನಿವೃತ್ತ ಉದ್ಯೋಗಿ ಭಗವಾನ್‌ರಾವ್ ದೀಪ್ಕೆ ಅವರ ಆದಾಯ ಮತ್ತು ಅಕ್ರಮ ಆಸ್ತಿ ಗಳಿಕೆ ಕುರಿತು ಸಮಗ್ರ ತನಿಖೆ...

ಕಾವೇರಿ ವಿಚಾರದಲ್ಲಿ ರಾಜಕೀಯ ಪಕ್ಕಕ್ಕಿಟ್ಟು ರಾಜ್ಯದ ಹಿತ ಕಾಯೋಣ: ಸರ್ವಪಕ್ಷ ಸಭೆಯಲ್ಲಿ ಸಿಎಂ ಡಿ.ಕೆ. ಶಿವಕುಮಾರ್ ಕರೆ

ಕಾವೇರಿ ನದಿ ನೀರು ಹಂಚಿಕೆ ವಿಚಾರವಾಗಿ ಪರಿಸ್ಥಿತಿ ಸುಧಾರಿಸುವ ಲಕ್ಷಣಗಳು ಕಂಡುಬರುತ್ತಿದ್ದು, ನದಿ ನೀರಿನ ಹಂಚಿಕೆಯಲ್ಲಿ ಸೌಹಾರ್ದಯುತವಾಗಿ ಸಮಸ್ಯೆ ನಿವಾರಿಸುವುದೇ ಸರ್ಕಾರದ ಮೊದಲ ಆದ್ಯತೆಯಾಗಿದೆ ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ತಿಳಿಸಿದ್ದಾರೆ. ಕಾವೇರಿ...

ಉತ್ತರ ಪ್ರದೇಶ : 33 ವರ್ಷಗಳ ಬಳಿಕ ದೇಶದ್ರೋಹ ಪ್ರಕರಣದಿಂದ ಮುಸ್ಲಿಂ ವ್ಯಕ್ತಿ ಖುಲಾಸೆ

ಪ್ರಾಸಿಕ್ಯೂಷನ್ ಆರೋಪಗಳನ್ನು ಸಾಂದರ್ಭಿಕ ಪುರಾವೆಗಳೊಂದಿಗೆ ಸಾಬೀತುಪಡಿಸಲು ವಿಫಲವಾಗಿದೆ ಮತ್ತು ಆರೋಪಿಯನ್ನು ಕೃತ್ಯಕ್ಕೆ ಲಿಂಕ್ ಮಾಡುವ ಪ್ರಮುಖ ಪುರಾವೆಗಳು ಕಾಣೆಯಾಗಿವೆ ಎಂದು ಅಭಿಪ್ರಾಯಪಟ್ಟ ಲಕ್ನೋದ ವಿಶೇಷ ರಾಷ್ಟ್ರೀಯ ತನಿಖಾ ದಳ (ಎನ್ಐಎ) ನ್ಯಾಯಾಲಯ, ದೇಶದ್ರೋಹ...

‘ಊರು ಕೊಳ್ಳೆ ಹೊಡೆದ ಮೇಲೆ ದಿಡ್ಡಿ ಬಾಗಿಲು ಹಾಕಿದರು’ ಎಂಬಂತೆ NTA ಯಿಂದ ₹7.5 ಕೋಟಿಯ ಬೃಹತ್ ಸೆಕ್ಯೂರಿಟಿ ಟೆಂಡರ್

ನೀಟ್ ಪ್ರಶ್ನೆಪತ್ರಿಕೆ ಸೋರಿಕೆಯಾಗಿ, ಅಮಾಯಕ ವಿದ್ಯಾರ್ಥಿಗಳ ಜೀವ-ಭವಿಷ್ಯ ಹಾಳಾದ ಮೇಲೆ, ಊರು ಕೊಳ್ಳೆ ಹೊಡೆದ ಮೇಲೆ ದಿಡ್ಡಿ ಬಾಗಿಲು ಹಾಕಿದರು ಎಂಬಂತೆ ಈಗ ಎನ್‌ಟಿಎ (NTA) ₹7.5 ಕೋಟಿ ವೆಚ್ಚದ ಭದ್ರತಾ ಟೆಂಡರ್...

SIR: ನಮೂನೆಯೂ ಇಲ್ಲ, ನೋಟಿಸ್‌ ಇಲ್ಲ ಸ್ವಂತ ಮನೆಯಲ್ಲಿದ್ದವರ ಹೆಸರನ್ನೇ ಅಳಿಸಿಹಾಕಿದ ಚುನಾವಣಾ ಆಯೋಗ

ರಾಜ್ಯದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ಒಂದಾದ ಮೇಲೊಂದರಂತೆ ಆತಂಕಕಾರಿ ಪ್ರಕರಣಗಳು ಬೆಳಕಿಗೆ ಬರುತ್ತಿವೆ. ಮನೆಮನೆಗೆ ತೆರಳಿ ಎನ್ಯುಮರೇಷನ್ ನಮೂನೆ ವಿತರಿಸುವ ಮೊದಲ ಹಂತದ ಪ್ರಕ್ರಿಯೆ...

ಲೈಂಗಿಕ ಕಿರುಕುಳ ಪ್ರಕರಣದಲ್ಲಿ ಅಮಾನತುಗೊಂಡಿದ್ದ ಯುಪಿ ಪೊಲೀಸ್ ಕಾನ್‌ಸ್ಟೇಬಲ್; ಮರುನೇಮಕದ ಬೆನ್ನಲ್ಲೇ ಬಾಲಕಿಯ ಅತ್ಯಾಚಾರ, ಕೊಲೆ!

ಹತ್ತು ವರ್ಷದ ಬಾಲಕಿಯ ಮೇಲೆ ಅತ್ಯಾಚಾರಕ್ಕೆ ಯತ್ನಿಸಿ, ಆಕೆಯ ಸಾವಿಗೆ ಕಾರಣನಾದ ಆರೋಪದ ಮೇಲೆ ಬಂಧಿತನಾದ ಉತ್ತರ ಪ್ರದೇಶದ ಪೊಲೀಸ್ ಕಾನ್‌ಸ್ಟೇಬಲ್ ಅಭಿಷೇಕ್ ಯಾದವ್‌ನನ್ನು ವೈದ್ಯಕೀಯ ತಪಾಸಣೆಗಾಗಿ ಗೋರಖ್‌ಪುರದ ಜಿಲ್ಲಾಸ್ಪತ್ರೆಗೆ ಕರೆತಂದಾಗ, ಅಲ್ಲಿನ...

BJP ವಿರುದ್ಧದ ಆಕ್ರೋಶವೇ Gen-Z ಹೋರಾಟದ ಮೂಲ: ವಿಪಕ್ಷಗಳಿಗೆ ಇದು ದೊಡ್ಡ ಪಾಠ

ಜಂತರ್ ಮಂತರ್‌ನಲ್ಲಿ ನಡೆದ ವಿದ್ಯಾರ್ಥಿಗಳ ಹೋರಾಟವನ್ನು ನಿಮ್ಮ ರಾಜಕೀಯ ದೃಷ್ಟಿಕೋನಕ್ಕೆ ತಕ್ಕಂತೆ ನೀವು ಕ್ರಾಂತಿ ಎಂದಾದರೂ ನೋಡಬಹುದು, ಅಥವಾ ಕ್ಷಣಿಕವಾಗಿ ಎದ್ದ ಬಿರುಗಾಳಿ ಎಂದಾದರೂ ಭಾವಿಸಬಹುದು. ಆದರೆ ಇಲ್ಲಿ ನಿಜವಾಗಿಯೂ ಆಗಿದ್ದೇನು ಮತ್ತು...

ಇನ್‌ಸ್ಟಾಗ್ರಾಮ್‌ನಲ್ಲಿ ಕ್ಷಮಿಸಿದರೆ ಸಾಲದು, ವಿದ್ಯಾರ್ಥಿಗಳ ಮೇಲಿನ ಕೇಸ್ ವಾಪಸ್ ಪಡೆಯಿರಿ: ಪ್ರಧಾನಿಗೆ ದೀಪ್ಕೆ ನೇರ ಪ್ರಶ್ನೆ

ಪ್ರಧಾನಿ ನರೇಂದ್ರ ಮೋದಿ ಅವರು ಇನ್‌ಸ್ಟಾಗ್ರಾಮ್ ವಿಡಿಯೋವೊಂದರಲ್ಲಿ ತಮ್ಮ ವಿರುದ್ಧ ನಿಂದನಾತ್ಮಕ ಪದ ಬಳಸಿದ್ದ ‘ಕಾಕ್ರೋಚ್ ಜನತಾ ಪಾರ್ಟಿ’ (CJP) ಪ್ರತಿಭಟನಾ ನಿರತ ವಿದ್ಯಾರ್ಥಿಗಳನ್ನು ಕ್ಷಮಿಸಿದ್ದೇನೆ ಎಂದು ಹೇಳಿರುವುದಕ್ಕೆ ಸಿಜೆಪಿ ಸಂಸ್ಥಾಪಕ ಅಭಿಜೀತ್...

ಪ್ರತಿಭಟನೆ ಭೀತಿ : ಸಿಜೆಐ ಸೂರ್ಯಕಾಂತ್ ಭಾಗವಹಿಸಬೇಕಿದ್ದ ಘಟಿಕೋತ್ಸವ ದಿಢೀರ್ ಮುಂದೂಡಿದ TISS

ಮುಂಬೈನ ಟಾಟಾ ಇನ್‌ಸ್ಟಿಟ್ಯೂಟ್ ಆಫ್ ಸೋಷಿಯಲ್ ಸೈನ್ಸಸ್ (ಟಿಐಎಸ್‌ಎಸ್‌) ಸಂಸ್ಥೆಯು ಆಗಸ್ಟ್ 2ರಂದು ನಡೆಸಲು ನಿಗದಿಪಡಿಸಿದ್ದ ತನ್ನ 86ನೇ ವಾರ್ಷಿಕ ಘಟಿಕೋತ್ಸವವನ್ನು ದಿಢೀರ್ ಮುಂದೂಡಿದೆ. ಕ್ಯಾಂಪಸ್ ಭದ್ರತೆಯ ಬಗೆಗಿನ ಕಳವಳಗಳು ಮತ್ತು ವಿದ್ಯಾರ್ಥಿಗಳ...