Homeಫ್ಯಾಕ್ಟ್‌ಚೆಕ್ಫ್ಯಾಕ್ಟ್‌ಚೆಕ್: ಭಾರತ-ಚೀನಾ ಸಂಘರ್ಷದ ನಂತರ ಚೀನಾದ ಬೆದರಿಕೆ ಎದುರಿಸಲು ಜಪಾನ್ ಕ್ಷಿಪಣಿಗಳನ್ನು ನಿಯೋಜಿಸಿದೆಯೇ?

ಫ್ಯಾಕ್ಟ್‌ಚೆಕ್: ಭಾರತ-ಚೀನಾ ಸಂಘರ್ಷದ ನಂತರ ಚೀನಾದ ಬೆದರಿಕೆ ಎದುರಿಸಲು ಜಪಾನ್ ಕ್ಷಿಪಣಿಗಳನ್ನು ನಿಯೋಜಿಸಿದೆಯೇ?

ಜಪಾನ್‌ ರಕ್ಷಣಾ ಸಚಿವಾಲಯದ ಪ್ರಕಾರ, ಪೇಟ್ರಿಯಾಟ್ ಸುಧಾರಿತ ಸಾಮರ್ಥ್ಯದ -3  ವಿಭಾಗದ ಸುಧಾರಿತ ಕ್ಷಿಪಣಿಯಾಗಿದೆ. ಪಿಎಸಿ -3 ವಾಯುಗಾಮಿ ಬೆದರಿಕೆಗಳನ್ನು, ನಿರ್ದಿಷ್ಟವಾಗಿ ಬ್ಯಾಲಿಸ್ಟಿಕ್ ಕ್ಷಿಪಣಿಗಳನ್ನು ಎದುರಿಸಲು ವಾಯು ರಕ್ಷಣಾ ವ್ಯವಸ್ಥೆಯಾಗಿದೆ.

- Advertisement -
- Advertisement -

ಜೂನ್ 20 ರಂದು ಥೈಲ್ಯಾಂಡ್ ಮೂಲದ ಸುದ್ದಿ ವೆಬ್‌ಸೈಟ್ ಏಷ್ಯಾ ನ್ಯೂಸ್ ‘ಭಾರತದೊಂದಿಗಿನ ಸಂಘರ್ಷದ ನಂತರ ಚೀನಾ ಗಡಿಯಲ್ಲಿ ಜಪಾನ್‌ ಬ್ಯಾಲಿಸ್ಟಿಕ್ ಕ್ಷಿಪಣಿಗಳನ್ನು ನಿಯೋಜಿಸಿತು’ ಎಂಬ ಶೀರ್ಷಿಕೆಯೊಂದಿಗೆ ಲೇಖನವೊಂದನ್ನು ಪ್ರಕಟಿಸಿತು. ಜಪಾನ್ “ಈ ವರ್ಷದ ಜೂನ್ ವೇಳೆಗೆ ನಾಲ್ಕು ಮಿಲಿಟರಿ ನೆಲೆಗಳಲ್ಲಿ ಪೇಟ್ರಿಯಾಟ್ ಪ್ಯಾಕ್ -3 ಎಂಎಸ್ಇ ಏರ್ ಡಿಫೆನ್ಸ್ ಕ್ಷಿಪಣಿ ವ್ಯವಸ್ಥೆಯನ್ನು ನಿಯೋಜಿಸಲಿದೆ” ಎಂದು ಲೇಖನ ಹೇಳಿದೆ. ಅಂದಿನಿಂದ, ಈ ವರದಿಯನ್ನು ಹಲವಾರು ಸಾಮಾಜಿಕ ಮಾಧ್ಯಮ ಬಳಕೆದಾರರು ಟ್ವಿಟರ್ ಮತ್ತು ಫೇಸ್‌ಬುಕ್‌ನಲ್ಲಿ ಹಂಚಿಕೊಂಡಿದ್ದಾರೆ.

ಜೂನ್ 22 ರಂದು, ರಿಪಬ್ಲಿಕ್ ಟಿವಿ (ಆರ್ಕೈವ್) ಏಷ್ಯಾ ಟೈಮ್ಸ್ ವರದಿಯನ್ನು ಆಧರಿಸಿ ಲೇಖನವೊಂದನ್ನು ಪ್ರಕಟಿಸಿತು. ಈ ಲೇಖನವನ್ನು 1,200 ಬಾರಿ ರಿಟ್ವೀಟ್ ಮಾಡಲಾಗಿದೆ.

ಏಷ್ಯಾ ನ್ಯೂಸ್‌ನ ಲೇಖನವನ್ನು ಬಿಜೆಪಿ ಐಟಿ ಮುಖ್ಯಸ್ಥ ಅಮಿತ್ ಮಾಳವೀಯ, ಬಿಜೆಪಿ ರಾಷ್ಟ್ರೀಯ ಪ್ಯಾನೆಲಿಸ್ಟ್ ರೋಹಿತ್ ಚಾಹಲ್, ಎಬಿಪಿ ಆಂಕರ್ ನಮ್ರತಾ ವಾಗ್ಲೆ, ನಟ ಪ್ರವೀಣ್ ದಬಾಸ್ ಮತ್ತು ಬ್ಲಾಗರ್ ನಾರಾಯಣನ್ ಹರಿಹರನ್ ಕೂಡ ಹಂಚಿಕೊಂಡಿದ್ದಾರೆ.

ಫ್ಯಾಕ್ಟ್‌ಚೆಕ್

ಏಷ್ಯಾ ನ್ಯೂಸ್‌ನ ಲೇಖನದ ಶೀರ್ಷಿಕೆ ಜಪಾನ್ ಚೀನಾ ಗಡಿಯಲ್ಲಿ ಕ್ಷಿಪಣಿಗಳನ್ನು ನಿಯೋಜಿಸಿದೆ ಎಂದು ಹೇಳಿದೆ. ಆದರೆ ತನ್ನ ಪೂರ್ಣ ವರದಿಯಲ್ಲಿ ಇದರ ಬಗ್ಗೆ ಹೆಚ್ಚಿನ ಮಾಹಿತಿ ನೀಡಿಲ್ಲ. ಇನ್ನು ಭಾರತ-ಚೀನಾ ಸಂಘರ್ಷದ ಬಗ್ಗೆ ಆ ವರದಿಯಲ್ಲಿ ಯಾವುದೇ ಉಲ್ಲೇಖವಿಲ್ಲ. ಅದರಲ್ಲಿ “ಜಪಾನ್ ಈ ವರ್ಷದ ಜೂನ್ ವೇಳೆಗೆ ನಾಲ್ಕು ಮಿಲಿಟರಿ ನೆಲೆಗಳಲ್ಲಿ ಪೇಟ್ರಿಯಾಟ್ ಪ್ಯಾಕ್ -3 ಎಂಎಸ್ಇ ಏರ್ ಡಿಫೆನ್ಸ್ ಕ್ಷಿಪಣಿ ವ್ಯವಸ್ಥೆಯ ನಿಯೋಜನೆಯನ್ನು ಜಾರಿಗೆ ತರಲಿದೆ” ಎಂದಷ್ಟೇ ಹೇಳಿದೆ. ಇನ್ನಷ್ಟು ವಿವರವಾಗಿ ನೋಡೋಣ.

1) ಪಿಎಸಿ -3 ಎಂಎಸ್‌ಇ ಎಂದರೇನು?

ಜಪಾನ್‌ ರಕ್ಷಣಾ ಸಚಿವಾಲಯದ ಪ್ರಕಾರ, ಪೇಟ್ರಿಯಾಟ್ ಸುಧಾರಿತ ಸಾಮರ್ಥ್ಯದ -3  ವಿಭಾಗದ ಸುಧಾರಿತ ಕ್ಷಿಪಣಿಯಾಗಿದೆ. ಪಿಎಸಿ -3 ವಾಯುಗಾಮಿ ಬೆದರಿಕೆಗಳನ್ನು, ನಿರ್ದಿಷ್ಟವಾಗಿ ಬ್ಯಾಲಿಸ್ಟಿಕ್ ಕ್ಷಿಪಣಿಗಳನ್ನು ಎದುರಿಸಲು ವಾಯು ರಕ್ಷಣಾ ವ್ಯವಸ್ಥೆಯಾಗಿದೆ. ಇದು ಪಿಎಸಿ -3 ರ ಅಪ್‌ಡೇಟ್‌ ಆವೃತ್ತಿಯಾಗಿದ್ದು, ಇದು ದ್ವಿಗುಣ ಶ್ರೇಣಿಯನ್ನು ಹೊಂದಿದೆ. ‘2017 ಡಿಫೆನ್ಸ್ ಆಫ್ ಜಪಾನ್’ ವರದಿಯಿಂದ ಕೆಳಗೆ ಲಗತ್ತಿಸಲಾದ ಗ್ರಾಫಿಕ್, ಪಿಎಸಿ -3 ಎಂಎಸ್‌ಇ ಸುಧಾರಿತ ಶ್ರೇಣಿಯನ್ನು ತೋರಿಸುತ್ತದೆ.

ಜಪಾನ್

2) ಜಪಾನ್ ಪಿಎಸಿ -3 ಎಂಎಸ್‌ಇ ಅನ್ನು ಯಾವಾಗ ನಿಯೋಜಿಸಿತು?

ಜಪಾನ್‌ನ ವಾಯು ಸ್ವರಕ್ಷಣಾ ಪಡೆಯ ಜನರಲ್ ಅಡ್ಮಿರಲ್ ಯೋಶಿನಾರಿ ಮಾರುಮೊ, ಪಿಎಸಿ -3 ಎಂಎಸ್‌ಇ ಅನ್ನು ಮಾರ್ಚ್‌ನಲ್ಲಿ ಉದ್ಘಾಟಿಸಿದ್ದಾರೆ. ಇದನ್ನು ದಿ ಸಾಂಕಿ ನ್ಯೂಸ್, ಟೋಕಿಯೊ ವೆಬ್, ದಿ ಹೊಕ್ಕೈಡೋ ಶಿಂಬುನ್ ಪ್ರೆಸ್ ಮತ್ತು ಹಲವಾರು ಇತರ ಜಪಾನ್ ವೆಬ್‌ಸೈಟ್‌ಗಳು ವರದಿ ಮಾಡಿವೆ.

ರಾಯಿಟರ್ಸ್ 2016ರ ವರದಿಯ ಪ್ರಕಾರ, ಜಪಾನ್ 2020ರ ಟೋಕಿಯೊ ಒಲಿಂಪಿಕ್ಸ್‌ನ ಸಮಯದಲ್ಲಿ ಪಿಎಸಿ -3 ರಿಂದ ಪಿಎಸಿ -3 ಎಂಎಸ್‌ಇಗೆ ಅಪ್‌ಗ್ರೇಡ್ ಮಾಡುತ್ತಿದೆ, ಈ ಪ್ರದೇಶದಲ್ಲಿ ಉತ್ತರ ಕೊರಿಯಾದ ಕ್ಷಿಪಣಿ ಬೆದರಿಕೆಗೆ ಪ್ರತಿಕ್ರಿಯೆಯಾಗಿ ಇದನ್ನು ಮಾಡಲಾಗುತ್ತಿದೆ ಎಂದು ಹೇಳಲಾಗಿದೆ.

ಮಾರ್ಚ್‌ನಲ್ಲಿಯೇ ಕ್ಷಿಪಣಿಗಳನ್ನು ನಿಯೋಜಿಸಲಾಗಿದ್ದರಿಂದ, ಇದನ್ನು ಇತ್ತೀಚಿನ ಭಾರತ-ಚೀನಾ ವಿವಾದೊಂದಿಗೆ ಸಂಬಂಧಿಸಿಲ್ಲ ಎಂಬುದು ಸ್ಪಷ್ಟವಾಗುತ್ತದೆ.

ಹೀಗಾಗಿ, ಚೀನಾ ಗಡಿಯಲ್ಲಿ ಪಿಎಸಿ -3 ಎಂಎಸ್‌ಇ ಕ್ಷಿಪಣಿಗಳನ್ನು ನಿಯೋಜಿಸಲಾಗಿದೆ ಎಂಬ ಏಷ್ಯಾ ನ್ಯೂಸ್ ಹೇಳಿಕೆಯು ಸುಳ್ಳು ಮತ್ತು ದಾರಿತಪ್ಪಿಸುವಂತಿದೆ.

3) ಏಷ್ಯಾ ನ್ಯೂಸ್ ಯಾವುದು?

ಏಷ್ಯಾ ನ್ಯೂಸ್ ವೆಬ್‌ಸೈಟ್‌ನಲ್ಲಿನ ಎಲ್ಲಾ ಲೇಖನಗಳ ಬೈಲೈನ್‌ಗಳು ಒಂದೇ ಆಗಿರುತ್ತವೆ. ಇದು ಥೈಲ್ಯಾಂಡ್ ಮೂಲದ ವೆಬ್‌ಸೈಟ್ ಆಗಿದ್ದು ಥೈಲ್ಯಾಂಡ್, ಭಾರತ, ನೇಪಾಳ, ಕಾಂಬೋಡಿಯಾ, ಮ್ಯಾನ್ಮಾರ್, ವಿಯೆಟ್ನಾಂ, ಲಾವೋಸ್ ಮತ್ತು ಇಂಡೋನೇಷ್ಯಾದಿಂದ ಸುದ್ದಿಗಳನ್ನು ಒಳಗೊಂಡಿದೆ ಎಂದು ಹೇಳುತ್ತದೆ. ಆದರೂ ಕಳೆದ ಆರು ತಿಂಗಳಲ್ಲಿ, ಅದರ ಪರಿಶೀಲಿಸದ ಯೂಟ್ಯೂಬ್ ಚಾನೆಲ್‌ನಲ್ಲಿ (ಆರ್ಕೈವ್ ಲಿಂಕ್) ಅಪ್‌ಲೋಡ್ ಮಾಡಲಾದ ಎಲ್ಲಾ ವೀಡಿಯೊಗಳು ಭಾರತಕ್ಕೆ ಸಂಬಂಧಿಸಿವೆ. ವಾಸ್ತವವಾಗಿ, ಕೊನೆಯ ವೀಡಿಯೊವನ್ನು ಹಿಂದಿಯಲ್ಲಿ ಮಾಡಲಾಗಿದ್ದು, ಥೈಲ್ಯಾಂಡ್ ಮೂಲದ ಸುದ್ದಿ ವೆಬ್‌ಸೈಟ್‌ಗೆ ವಿರುದ್ಧವಾಗಿದೆ.

ಈ ಏಷ್ಯಾನ್ಯೂಸ್ ಈ ಲೇಖನದಲ್ಲಿ ತನ್ನ ಸುದ್ದಿಯ ಮೂಲವನ್ನು ಉಲ್ಲೇಖಿಸಿಲ್ಲ. ಅದು ಬೇಕಂತಲೇ ಭಾರತ ಚೀನಾದೊಂದಿಗೆ ಸಂಬಂಧ ಬೆಸೆಯಲು ಈ ಸುಳ್ಳು ಸುದ್ದಿಯನ್ನು ಎಣೆದಿದೆ ಎಂದು ಆಲ್ಟ್‌ನ್ಯೂಸ್‌ ವಿವರವಾಗಿ ಫ್ಯಾಕ್ಟ್‌ಚೆಕ್ ನಡೆಸಿದೆ.

ಕೃಪೆ: ಆಲ್ಟ್‌ನ್ಯೂಸ್


ಇದನ್ನೂ ಓದಿ: ಜಿಯೋ ಜಾಹಿರಾತಿನಿಂದ ಶಾರುಖ್ ಖಾನ್‌ನನ್ನು ಕಿತ್ತೆಸೆದರೆ ಮುಖೇಶ್ ಅಂಬಾನಿ ?; ಫ್ಯಾಕ್ಟ್‌ಚೆಕ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...