Homeಮುಖಪುಟಮೋದಿ ಸರ್ಕಾರದ ಮುಂದಿನ ಸರ್ಜಿಕಲ್ ಸ್ಟ್ರೈಕ್: ಭಾರತೀಯ ರೈಲ್ವೆ ಮಾರಾಟಕ್ಕೆ ಸಿದ್ಧವಾಗಿದೆ!

ಮೋದಿ ಸರ್ಕಾರದ ಮುಂದಿನ ಸರ್ಜಿಕಲ್ ಸ್ಟ್ರೈಕ್: ಭಾರತೀಯ ರೈಲ್ವೆ ಮಾರಾಟಕ್ಕೆ ಸಿದ್ಧವಾಗಿದೆ!

ಭಾರತೀಯ ರೈಲ್ವೆಯು 15 ಲಕ್ಷಕ್ಕೂ ಹೆಚ್ಚು ಜನರಿಗೆ ಉದ್ಯೋಗ ನೀಡಿದೆ. ಅತಿ ಹೆಚ್ಚು ಉದ್ಯೋಗ ನೀಡಿದ ಪ್ರಪಂಚದ 7ನೇ ಉದ್ಯಮವಾಗಿದೆ. ಈಗ ಸರ್ಕಾರದ ಖಾಸಗೀಕರಣದ ನಡೆಯಿಂದಾಗಿ ಅಲ್ಲಿನ ನೌಕರರು ಆತಂಕದ ಸ್ಥಿತಿ ಎದುರಿಸುತ್ತಿದ್ದಾರೆ.

- Advertisement -
- Advertisement -

ಭಾರತೀಯ ರೈಲ್ವೆ ದೇಶದ ಜೀವಸೆಲೆಗಳಲ್ಲಿ ಒಂದಾಗಿದೆ ಎಂದು ಹೇಳುವುದು ಅತಿಶಯೋಕ್ತಿಯಲ್ಲ. ಜನಸಂಖ್ಯೆಯ ಬಹುಪಾಲು ಜನರು ಇನ್ನೂ ತಮ್ಮ ದೈನಂದಿನ ಪ್ರಯಾಣಕ್ಕಾಗಿ ಅದರ ಮೇಲೆ ಅವಲಂಬಿತರಾಗಿದ್ದಾರೆ. ಹೆಚ್ಚಿನ ವಲಸೆ ಕಾರ್ಮಿಕರಿಗೆ ಇದು ತಮ್ಮ ಕುಟುಂಬ ಮತ್ತು ತಾವು ಕೆಲಸ ಮಾಡುವ ದೂರದ ಊರುಗಳೊಂದಿಗೆ ಸಂಪರ್ಕ ಸಾಧಿಸುವ ಏಕೈಕ ಕೈಗೆಟುಕುವ ಸಾಧನವಾಗಿದೆ.

ಇಂತಹ ಮಹತ್ವದ ರೈಲ್ವೆ ಇಲಾಖೆಯನ್ನು ಕೇಂದ್ರ ಸರ್ಕಾರ ನಿರಂತರವಾಗಿ ಮತ್ತು ವ್ಯವಸ್ಥಿತವಾಗಿ ನಿರ್ಲಕ್ಷಿಸಿದೆ. ಜೊತೆಗೆ ರಹಸ್ಯವಾಗಿ ಖಾಸಗೀಕರಣಗೊಳಿಸುತ್ತಿದೆ.

ಪ್ರಯಾಣಿಕರ ರೈಲು ಸೇವೆಗಳ ಕಾರ್ಯಾಚರಣೆಗಾಗಿ ರೈಲ್ವೆ ಸಚಿವಾಲಯವು ಖಾಸಗಿ ಕಂಪನಿಗಳಿಗೆ ಆಹ್ವಾನ ನೀಡುವ ಮೂಲಕ ಖಾಸಗೀಕರಣದತ್ತ ಮೊದಲ ಹೆಜ್ಜೆ ಇಟ್ಟಿದೆ.

ಕನಿಷ್ಠ 151 ಆಧುನಿಕ ರೈಲು‌ಗಳನ್ನು ಪರಿಚಯಿಸಲಾಗುವುದು ಮತ್ತು ಖಾಸಗಿ ರೈಲು ಕಾರ್ಯಾಚರಣೆಗಾಗಿ 109 ಜೋಡಿ ಮಾರ್ಗಗಳನ್ನು ಯೋಜಿಸಲಾಗುವುದು. ಪ್ರತಿ ರೈಲಿನಲ್ಲಿ ಕನಿಷ್ಠ 16 ಬೋಗಿಗಳು ಇರಲಿವೆ ಎಂದು ಭಾರತೀಯ ರೈಲ್ವೆ ಬುಧವಾರ ಪತ್ರಿಕಾ ಹೇಳಿಕೆಯಲ್ಲಿ ತಿಳಿಸಿದೆ.

ಈ ಪ್ರಯಾಣಿಕರ ರೈಲುಗಳ ಕಾರ್ಯಾಚರಣೆಯು “ಖಾಸಗಿ ವಲಯದ ಹೂಡಿಕೆಯನ್ನು ಸುಮಾರು 30,000 ಕೋಟಿ ರೂಗೆ ಹೆಚ್ಚಿಸುವ ಯೋಜನೆಯ ಭಾಗವಾಗಿದೆ” ಎಂದು ರೈಲ್ವೆ ಸಚಿವಾಲಯ ತಿಳಿಸಿದೆ.

“ಭಾರತೀಯ ರೈಲ್ವೆ ಜಾಲದ ಮೂಲಕ ಪ್ರಯಾಣಿಕರ ರೈಲುಗಳನ್ನು ಓಡಿಸಲು ಖಾಸಗಿ ಹೂಡಿಕೆಯ ಮೊದಲ ಕ್ರಮ ಇದಾಗಿದೆ” ಎಂದು ಅದು ಹೇಳಿದೆ.

ಭಾರತೀಯ ರೈಲ್ವೆಯ ಖಾಸಗೀಕರಣದ ಬಗ್ಗೆ ಮೋದಿ ಸರ್ಕಾರ ಕೆಲವು ಸಮಯದಿಂದ ಗಮನ ಹರಿಸುತ್ತಿದೆ. “ಪ್ರಯಾಣಿಕರಿಗೆ ಉತ್ತಮ ಸೌಲಭ್ಯಗಳನ್ನು ಒದಗಿಸುವ” ಸೋಗಿನಲ್ಲಿ ಖಾಸಗಿ ಕಂಪನಿಗಳಿಗೆ ಹೊರಗುತ್ತಿಗೆ, ವಾಣಿಜ್ಯ ಮತ್ತು ಆನ್-ಬೋರ್ಡ್ ಸೇವೆಗಳನ್ನು ಪ್ರಾರಂಭಿಸುವ ಮೂಲಕ ಇದು ಈಗಾಗಲೇ 2018 ರಲ್ಲಿ ಖಾಸಗೀಕರಣದ ಬಾಗಿಲುಗಳನ್ನು ತೆರೆದಿದೆ.

“ಭಾರತೀಯ ರೈಲ್ವೆ ಯಾವಾಗಲೂ ಭಾರತದ ಮತ್ತು ಭಾರತದ ಜನರ ಆಸ್ತಿಯಾಗಿ ಮುಂದುವರಿಯುತ್ತದೆ”. ಇದು ರೈಲ್ವೆ ಸಚಿವ ಪಿಯೂಷ್ ಗೋಯಲ್ 2019 ರ ನವೆಂಬರ್‌ನಲ್ಲಿ ಮೇಲ್ಮನೆಯಲ್ಲಿ ಹೇಳಿದ ಮಾತುಗಳು. ಆದರೆ ಅದಕ್ಕೆ ವಿರುದ್ಧವಾಗಿ ಸರ್ಕಾರ ಇಂದು ನಡೆದುಕೊಳ್ಳುತ್ತಿದೆ.

ಭಾರತೀಯ ರೈಲ್ವೆ: ಶ್ರೀಮಂತ ಇತಿಹಾಸ

ಭಾರತೀಯ ರೈಲ್ವೆಯು ಅತಿದೊಡ್ಡ ಸಾರ್ವಜನಿಕ ಉದ್ಯಮವಾಗಿದೆ ಮತ್ತು ದೇಶದ ಅತಿದೊಡ್ಡ ಉದ್ಯೋಗದಾತ ಸಾರ್ವಜನಿಕ ಕ್ಷೇತ್ರವಾಗಿದೆ. ಭಾರತೀಯ ರೈಲ್ವೆ ಪ್ರತಿವರ್ಷ 810 ಕೋಟಿಗೂ ಹೆಚ್ಚು ಪ್ರಯಾಣಿಕರನ್ನು ಸಾಗಿಸುತ್ತದೆ. ಇದರ 67,000 ಕಿಲೋಮೀಟರ್ ಉದ್ದದ ಮಾರ್ಗಗಳು ದೇಶದ ದೂರದ ಭಾಗಗಳನ್ನು ಪರಸ್ಪರ ಸಂಪರ್ಕಿಸುತ್ತವೆ. ಇದು ತಮ್ಮ ಹಳ್ಳಿಗಳು ಮತ್ತು ಕೆಲಸದ ನಗರಗಳ ನಡುವೆ ಕೋಟ್ಯಂತರ ಜನರಿಗೆ ಸಂಪರ್ಕ ಕಲ್ಪಿಸುವ ಏಕೈಕ ಕೈಗೆಟುಕುವ ಮಾರ್ಗವಾಗಿದೆ.

ಭಾರತೀಯ ರೈಲ್ವೆಯು 15 ಲಕ್ಷಕ್ಕೂ ಹೆಚ್ಚು ಜನರಿಗೆ ಉದ್ಯೋಗ ನೀಡಿದೆ. ಅತಿ ಹೆಚ್ಚು ಉದ್ಯೋಗ ನೀಡಿದ ಪ್ರಪಂಚದ 7ನೇ ಉದ್ಯಮವಾಗಿದೆ. ಈಗ ಸರ್ಕಾರದ ಖಾಸಗೀಕರಣದ ನಡೆಯಿಂದಾಗಿ ಅಲ್ಲಿನ ನೌಕರರು ಆತಂಕದ ಸ್ಥಿತಿ ಎದುರಿಸುತ್ತಿದ್ದಾರೆ.

ಮೋದಿ ಸರ್ಕಾರ: ಹೂಡಿಕೆ ಹಿಂತೆಗೆತ

ಮೋದಿ ಸರ್ಕಾರವು ಸ್ಪಷ್ಟವಾಗಿ ಸಾರ್ವಜನಿಕ ಕ್ಷೇತ್ರಗಳಿಂದ ಹೂಡಿಕೆ ಹಿಂತೆಗೆದುಕೊಳ್ಳುತ್ತಿದೆ. ಬಿಎಸ್‌ಎನ್‌ಎಲ್ ಮತ್ತು ಒಎನ್‌ಜಿಸಿ ಸೇರಿದಂತೆ ಹಲವು ಕಂಪನಿಗಳ ವಿಚಾರದಲ್ಲಿ ಇದು ಸ್ಪಷ್ಟವಾಗಿದೆ. ಸದ್ಯದ ಕೋವಿಡ್ ಬಿಕ್ಕಟ್ಟು ಅವರ ಖಾಸಗೀಕರಣದ ಪ್ರಯತ್ನಗಳಿಗೆ ಒದಗಿದ ಸುವರ್ಣಾವಕಾಶವಾಗಿದೆ.

ಭಾರತದಲ್ಲಿ 339 ಸಾರ್ವಜನಿಕ ವಲಯದ ಉದ್ಯಮಗಳಿವೆ. ಅವುಗಳು ಖಾಸಗೀಕರಣಗೊಂಡರೆ ಉತ್ತಮ ಪ್ರದರ್ಶನ ನೀಡುತ್ತವೆ ಎಂಬ ವಾದವನ್ನು ಪ್ರತಿಬಾರಿ ಹೇಳಲಾಗುತ್ತದೆ. ಆದರೆ ಅಂತಹ ಉದಾಹರಣೆಗಳು ಕಾಣಸಿಗುವುದಿಲ್ಲ. ಇದರಿಂದ ಸರ್ಕಾರಕ್ಕೆ ಎಷ್ಟು ನಷ್ಟವಾಗುತ್ತದೆ ಎಂಬುದರ ಬಗ್ಗೆ ಚರ್ಚೆಗಳು ನಡೆಯುವುದಿಲ್ಲ.

ಭಾರತ್ ಪೆಟ್ರೋಲಿಯಂ ಕಾರ್ಪೊರೇಶನ್ ಲಿಮಿಟೆಡ್ (ಬಿಪಿಸಿಎಲ್) ಇಂಡಸ್ಟ್ರಿಯಲ್ ಡೆವಲಪ್ಮೆಂಟ್ ಬ್ಯಾಂಕ್ ಆಫ್ ಇಂಡಿಯಾ (ಐಡಿಬಿಐ), ಶಿಪ್ಪಿಂಗ್ ಕಾರ್ಪೊರೇಷನ್ ಆಫ್ ಇಂಡಿಯಾ, ಕಂಟೈನರ್ ಕಾರ್ಪೊರೇಷನ್ ಆಫ್ ಇಂಡಿಯಾ, ಟಿಎಚ್‌ಡಿಸಿ ಲಿಮಿಟೆಡ್ ಮತ್ತು ನಾರ್ತ್ ಈಸ್ಟರ್ನ್ ಎಲೆಕ್ಟ್ರಿಕ್ ಪವರ್ ಕಾರ್ಪೊರೇಶನ್ ಲಿಮಿಟೆಡ್‌ ಕಂಪನಿಗಳಲ್ಲಿನ ಸರ್ಕಾರಿ ಪಾಲನ್ನು ಖಾಸಗಿಯವರಿಗೆ ಮಾರಾಟ ಮಾಡುವ ಪ್ರಸ್ತಾಪ ಮಾಡಲಾಗಿದೆ.


ಇದನ್ನೂ ಓದಿ: ಭೂ ಸುಧಾರಣಾ ಕಾನೂನಿನ ತಿದ್ದುಪಡಿ ಮತ್ತು ಅದರ ಪರಿಣಾಮಗಳು – ಡಾ.ಎ.ಆರ್ ವಾಸವಿ 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...

ಏಕರೂಪ ನಾಗರಿಕ ಸಂಹಿತೆಯನ್ನು ಸಂಸತ್ತಿನ ಬದಲು ರಾಜ್ಯಗಳ ಮೂಲಕವೇ ಜಾರಿಗೆ ಅಮಿತ್ ಶಾ ಮುಂದಾಗಿದ್ದೇಕೆ?

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೆಪ್ಟೆಂಬರ್ 13ರಂದು ಮುಂಬೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ, 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ಮತ್ತು ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ...

ದಿಶಾ ಸಾಲಿಯಾನ್ ಸಾವಿನ ಪ್ರಕರಣ : ಸಿಬಿಐ ಎಫ್ಐಆರ್‌ನಲ್ಲಿ ಆದಿತ್ಯ ಠಾಕ್ರೆ, ರಿಯಾ ಚಕ್ರವರ್ತಿ ಸೇರಿದಂತೆ ಹಲವರ ಹೆಸರು

ಬಾಂಬೆ ಹೈಕೋರ್ಟ್ ಆದೇಶದ ಮೇರೆಗೆ, ಕೇಂದ್ರೀಯ ತನಿಖಾ ದಳವು (ಸಿಬಿಐ) ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಅವರ ನಿಗೂಢ ಸಾವಿಗೆ ಸಂಬಂಧಿಸಿದಂತೆ ಸೋಮವಾರ(ಸೆ.14) ಎಫ್‌ಐಆರ್ ದಾಖಲಿಸಿದೆ. ಶಿವಸೇನೆ...

ಟಿ. ನರಸೀಪುರ ಇನ್ಸ್‌ಪೆಕ್ಟರ್‌ ಧನಂಜಯ್‌ ಹೇಳಿದ್ದರಲ್ಲಿ ತಪ್ಪೇನಿದೆ? ಸಾರ್ವಜನಿಕರಿಂದ ಬೆಂಬಲ

ಮಸೀದಿಗಳ ಮುಂಭಾಗ ಯಾವುದೇ ಪ್ರಚೋದನಕಾರಿ ಕೃತ್ಯಗಳಿಗೆ ಆಸ್ಪದ ನೀಡದೆ, ರಾತ್ರಿ 10:30ರ ಒಳಗಾಗಿ ಡಿಜೆ ಸದ್ದಿಲ್ಲದೆ ನಿಯಮಾನುಸಾರ ಮೆರವಣಿಗೆ ಮುಗಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಂಡ ಇನ್ಸ್‌ಪೆಕ್ಟರ್ ಧನಂಜಯ್ ಅವರ ಪರವಾಗಿ ಈಗ ಸಾಮಾಜಿಕ...

ಅತ್ಯಾಚಾರ ಪ್ರಕರಣದಲ್ಲಿ 10 ವರ್ಷ ಜೈಲು ಶಿಕ್ಷೆ: ‘ತೆಹಲ್ಕಾ’ ಸಂಸ್ಥಾಪಕ ತರುಣ್ ತೇಜ್‌ಪಾಲ್ ನ್ಯಾಯಾಲಯಕ್ಕೆ ಶರಣು, ಜೈಲಿಗೆ ರವಾನೆ 

ಪಣಜಿ: 2013ರ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್‌ನ ಗೋವಾ ಪೀಠದಿಂದ ದೋಷಿ ಎಂದು ತೀರ್ಪುಗೊಂಡು 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆಗೆ ಗುರಿಯಾಗಿರುವ ‘ತೆಹಲ್ಕಾ’ ಸಂಸ್ಥಾಪಕ ಹಾಗೂ ಮಾಜಿ ಪ್ರಧಾನ ಸಂಪಾದಕ...

ಹೈದರಾಬಾದ್‌ನಲ್ಲಿ ಗಣೇಶ ವಿಗ್ರಹ ಖರೀದಿ ವಿಚಾರಕ್ಕೆ ಘರ್ಷಣೆ: 34 ವರ್ಷದ ವ್ಯಕ್ತಿ ಸಾವು: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹ

ಹೈದರಾಬಾದ್: ಗಣೇಶ ಚತುರ್ಥಿ ಆಚರಣೆಗೆ ಮುನ್ನ ಗಣೇಶ ವಿಗ್ರಹ ಖರೀದಿಸುವ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ವಾಗ್ವಾದವು ಹಿಂಸಾತ್ಮಕ ಘರ್ಷಣೆಗೆ ತಿರುಗಿ 34 ವರ್ಷದ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಹೈದರಾಬಾದ್‌ನ ಜೋಡಿಮೆಟ್ಲಾ ಪ್ರದೇಶದಲ್ಲಿ ನಡೆದಿದೆ....

ಮಹಿಳಾ ಬೈಕರ್‌ಗೆ ಬೇಕಂತಲೇ ಢಿಕ್ಕಿ ಹೊಡೆದು ಪರಾರಿಯಾದ ಕಾರು ಸವಾರ! ಬೆಚ್ಚಿಬೀಳಿಸುವ ವಿಡಿಯೋ ವೈರಲ್

ಹರ್ಯಾಣದ ಗುರುಗ್ರಾಮದ ಗಾಲ್ಫ್ ಕೋರ್ಸ್ ರಸ್ತೆಯಲ್ಲಿ ಅತಿವೇಗವಾಗಿ ಬಂದ ಕಾರೊಂದು ಮಹಿಳಾ ಬೈಕ್ ಸವಾರಿಗೆ ಉದ್ದೇಶಪೂರ್ವಕವಾಗಿ ಢಿಕ್ಕಿ ಹೊಡೆದು ಪರಾರಿಯಾಗಿರುವ ಭೀಕರ ಘಟನೆ ನಡೆದಿದೆ. ಹಿಟ್ ಆ್ಯಂಡ್ ರನ್ ಶಂಕೆ ವ್ಯಕ್ತವಾಗಿರುವ ಈ...

ಪ. ಬಂಗಾಳ | 252 ಮದ್ರಸಾಗಳನ್ನು ಮುಚ್ಚಲು ಆದೇಶಿಸಿದ ಬಿಜೆಪಿ ಸರ್ಕಾರ; 100 ಸಂಸ್ಥೆಗಳಿಗೆ ಕಾರಣ ಕೇಳಿ ನೋಟಿಸ್

ರಾಜ್ಯದಾದ್ಯಂತ ಮದ್ರಸಾಗಳ ಸಮೀಕ್ಷೆಯನ್ನು ಪ್ರಾರಂಭಿಸಿದ ಮೂರು ತಿಂಗಳ ನಂತರ, ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಅನುಮೋದನೆಯ ಕೊರತೆ ಅಥವಾ ಇತರ ಅಕ್ರಮಗಳನ್ನು ಉಲ್ಲೇಖಿಸಿ 252 ಸಂಸ್ಥೆಗಳನ್ನು ಮುಚ್ಚಲು ಆದೇಶಿಸಿದೆ ಮತ್ತು ಇತರ...

ಟಿ. ನರಸೀಪುರ ಪ್ರತಿಭಟನೆ ವೇಳೆ ವಾಕ್ಸಮರ: ಪ್ರತಾಪ್ ಸಿಂಹ ಹಾಗೂ ಎಲ್. ನಾಗೇಂದ್ರ ನಡುವೆ ಬಹಿರಂಗ ನೂಕಾಟ-ತಳ್ಳಾಟ!

ಟಿ. ನರಸೀಪುರದಲ್ಲಿ ಗಣೇಶೋತ್ಸವ ಮೆರವಣಿಗೆಗೆ ಸಂಬಂಧಿಸಿದ ವಿವಾದದ ಹಿನ್ನೆಲೆಯಲ್ಲಿ ಬಿಜೆಪಿ ಹಮ್ಮಿಕೊಂಡಿದ್ದ ಪ್ರತಿಭಟನೆ ವೇಳೆ ಮೈಸೂರು ಬಿಜೆಪಿಯಲ್ಲಿನ ಆಂತರಿಕ ಭಿನ್ನಮತ ಬಹಿರಂಗಗೊಂಡಿದೆ. ಪೊಲೀಸ್ ಇನ್ಸ್‌ಪೆಕ್ಟರ್ ಧನಂಜಯ್ ವಿರುದ್ಧ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ಮಾಜಿ...

ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನ ಮುಂದೂಡಿದ NLSIU ವಿದ್ಯಾರ್ಥಿ ಸಂಘ; ಯಾವುದೇ ಒತ್ತಡಕ್ಕೆ ಮಣಿದಿಲ್ಲವೆಂದು ಸ್ಪಷ್ಟನೆ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯ (NLSIU) ಲಾ ಅಂಡ್ ಸೊಸೈಟಿ ಕಮಿಟಿಯು (LawSoc) ಉಮರ್ ಖಾಲಿದ್ ಅವರ ಜೈಲುವಾಸದ ಕುರಿತು ಲಲಿತ್ ವಾಚಾನಿ ನಿರ್ಮಿಸಿರುವ 'ಪ್ರಿಸನರ್ ನಂ. 626710...