Homeಕರ್ನಾಟಕಮತ್ತೆ ಕಾಂಗ್ರೆಸ್ ಅನ್ನು ಅಧಿಕಾರಕ್ಕೆ ತರುತ್ತೇವೆ: ಕೆಪಿಸಿಸಿ ಅಧ್ಯಕ್ಷ ಗದ್ದುಗೆ ಏರಿ ಡಿಕೆಶಿ ಪ್ರತಿಜ್ಞೆ

ಮತ್ತೆ ಕಾಂಗ್ರೆಸ್ ಅನ್ನು ಅಧಿಕಾರಕ್ಕೆ ತರುತ್ತೇವೆ: ಕೆಪಿಸಿಸಿ ಅಧ್ಯಕ್ಷ ಗದ್ದುಗೆ ಏರಿ ಡಿಕೆಶಿ ಪ್ರತಿಜ್ಞೆ

- Advertisement -
- Advertisement -

ಕೆಪಿಸಿಸಿ ಅಧ್ಯಕ್ಷ ಹುದ್ದೆಯನ್ನು ಸವಾಲಾಗಿ ಸ್ವೀಕರಿಸುತ್ತೇನೆ. ಮತ್ತೆ ಕಾಂಗ್ರೆಸ್ ಶಾಸಕರು ವಿಧಾನಸೌಧದ ಮೂರನೇ ಮಹಡಿ ಹತ್ತುವಂತೆ ಮಾಡುತ್ತೇವೆ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ಪ್ರತಿಜ್ಞೆ ಮಾಡಿದ್ದಾರೆ.

ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿಯ ಅಧ್ಯಕ್ಷರಾಗಿ ಇಂದು ನಡೆದ ಪದಗ್ರಹಣ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಪಕ್ಷದ ಮುಖಂಡರೆಲ್ಲಾ ಸೇರಿ ತೆಗೆದುಕೊಂಡಿರುವ ನಿರ್ಧಾರ ನನಗೆ ಸಂತಸ ತಂದಿದೆ. ಈ ಸ್ಥಾನಕ್ಕೆ ಆಕಾಂಕ್ಷಿಯಲ್ಲದಿದ್ದರೂ ಸಹ ಇದು ನನ್ನ ಕರ್ತವ್ಯವೆಂದು ಭಾವಿಸಿ ನೀಡಿರುವ ಜವಾಬ್ದಾರಿಯನ್ನು ಒಂದು ಸವಾಲಾಗಿ ಸ್ವೀಕರಿಸುತ್ತೇನೆ ಎಂದಿದ್ದಾರೆ.

ವಿದ್ಯಾರ್ಥಿ ದೆಸೆಯಿಂದಲೂ ಹೋರಾಟಗಳಲ್ಲಿ ಭಾಗವಹಿಸುತ್ತಾ ಇಂದಿರಾಗಾಂಧಿಯವರಿಂದ ಪ್ರಭಾವಿತನಾಗಿ ಸಿಕ್ಕ ಅವಕಾಶಗಳನ್ನು ಸಮರ್ಪಕವಾಗಿ ಉಪಯೋಗಿಸಿಕೊಂಡು ತಾಲ್ಲೂಕು, ಜಿಲ್ಲಾ ಹಾಗೂ ರಾಜ್ಯ ಮಟ್ಟದಲ್ಲಿ ಹಲವಾರು ರಾಜಕೀಯ ಧುರೀಣರೊಂದಿಗೆ ಕೆಲಸ ಮಾಡಿದ್ದೇನೆ. ಈ ಸಂದರ್ಭದಲ್ಲಿ ಸಾಕಷ್ಟು ತೊಂದರೆಗಳನ್ನು ಮೆಟ್ಟಿ ಇಂದು ಈ ಮಟ್ಟಕ್ಕೆ ಬಂದಿದ್ದೇನೆ. ಈಗಲೂ ತೊಂದರೆಯಿದೆ. ಆದರೆ ಆದಾವುದಕ್ಕೂ ಬಗ್ಗದೇ ಪಕ್ಷದ ಸಿದ್ಧಾಂತ ಮತ್ತು ಆದರ್ಶ ಹಾಗೂ ಏಳಿಗೆಗಾಗಿ ಶ್ರಮಿಸುತ್ತೇನೆ. ಎಲ್ಲರೂ ಒಟ್ಟಿಗೆ ಶ್ರಮಿಸೋಣ ಎಂದು ಪಕ್ಷದ ನಿಷ್ಠಾವಂತರಿಗೆ ಕರೆ ನೀಡಿದರು.

16 ಸಾವಿರ ಜಾಗಗಳಲ್ಲಿ ಲಕ್ಷಾಂತರ ಜನರು ಪದಗ್ರಹಣ ಕಾರ್ಯಕ್ರಮ ನೋಡಿದ್ದಾರೆ. ಇದು ಒಬ್ಬ ವ್ಯಕ್ತಿಯ ಕಾರ್ಯಕ್ರಮವಲ್ಲ. ಇದು ಪಕ್ಷದ ಕಾರ್ಯಕ್ರಮ. ಇಡೀ ವಿಶ್ವವೇ ಕಾರ್ಯಕ್ರಮ ನೋಡಿದೆ ಎಂದು ಡಿ.ಕೆ.ಶಿವಕುಮಾರ್ ಹೇಳಿದರು.

ನಾನು ದೊಡ್ಡ ವಿದ್ಯಾವಂತ ಅಲ್ಲ, ನನಗೆ ಇರುವ ತಿಳಿವಳಿಕೆಯಲ್ಲಿ ಕಾರ್ಯಕ್ರಮ ಮಾಡಿದ್ದೇವೆ. ನಮ್ಮ ಕಾರ್ಯಕರ್ತರು ಆಶೀರ್ವದಿಸಿದ್ದಾರೆ. ಇದು ನನಗೆ ದೊಡ್ಡ ಜವಾಬ್ದಾರಿ. ಅವರ ನಂಬಿಕೆ ವಿಶ್ವಾಸ ಉಳಿಸಿಕೊಳ್ಳುತ್ತೇನೆ. ಜನರ ಭಾವನೆ ಅರಿತು ಕೆಲಸ ಮಾಡುತ್ತೇವೆ. ವಿಧಾನಸೌಧ ಚಪ್ಪಡಿ ಕಲ್ಲಿನಂತೆ ಜನರ ಸೇವೆ ಮಾಡುತ್ತೇನೆ ಎಂದು ಹೇಳಿದ್ದಾರೆ.

ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯನವರು ಮಾತನಾಡಿ, “ಧರ್ಮಗಳನ್ನು ಎತ್ತಿಕಟ್ಟುವ, ರೋಗದಲ್ಲೂ ಧರ್ಮದ ವಿಷ ಬೀಜ ಬಿತ್ತುವ, ದೇಶದ ಸಂವಿಧಾನದ ಬಗ್ಗೆ ಬದ್ಧತೆ ಇಲ್ಲದ ನರೇಂದ್ರ ಮೋದಿ ಪ್ರಧಾನಿಯಾಗಿ ಮುಂದುವರೆಯಲು ನಾಲಾಯಕ್” ಎಂದಿದ್ದಾರೆ.

ಬಿಜೆಪಿ ಪಕ್ಷವನ್ನು ಆರ್‌ಎಸ್ಎಸ್ ನಿಯಂತ್ರಿಸುವವರೆಗೆ ದೇಶದಲ್ಲಿ ಬಡವರು, ದಲಿತರು ಮತ್ತು ಅನ್ಯಕೋಮಿನವರ ಬದುಕು ಕಷ್ಟವಾಗಲಿದೆ. ಧರ್ಮವನ್ನು ಎತ್ತಿಕಟ್ಟಿ ಅದರ ಮೂಲಕ ರಾಜಕಾರಣ ಮಾಡುವುದೇ ಇವರು ಗುರಿ ಎಂದು ಕಿಡಿಕಾರಿದ್ದಾರೆ.

ಪ್ರಧಾನಿಯಾಗಿ ನರೇಂದ್ರ ಮೋದಿ ಆರ್‌ಎಸ್ಎಸ್ ಕಾರ್ಯಕ್ರಮಗಳನ್ನಷ್ಟೇ ಜಾರಿ ಮಾಡುತ್ತಿದ್ದಾರೆ. ಕೊರೊನಾ ಹರಡದಂತೆ ತಡೆಯುವಲ್ಲಿ ಮೋದಿ ವಿಫಲರಾಗಿದ್ದಾರೆ. ಈಗ ಮಾಡಬೇಕಾದ ಲಾಕ್‌ಡೌನ್‌ ಆನ್ನು ಮುಂದಾಲೋಚನೆಯಿಲ್ಲದೇ ಆಗಲೇ ಮಾಡಿ ಬಡಜನರು ಕಷ್ಟ ಅನುಭವಿಸುವಂತೆ ಮಾಡಿದರು. ಅವರಿಗೆ ಆಡಳಿತ ಜ್ಞಾನವಿಲ್ಲ ಎಂದಿದ್ದಾರೆ.

ಮೋದಿಯವರು ಇಂಧನ ಬೆಲೆ, ಗ್ಯಾಸ್ ಬೆಲೆಯನ್ನು ಹೆಚ್ಚಿಸುವ ಮೂಲಕ ಜನರ ಸಂಕಷ್ಟದ ಮೇಲೆ ಮತ್ತೆ ಬರೆ ಎಳೆದರು. ವರ್ಷವಿಡೀ ವಿದೇಶ ಪ್ರವಾಸ ಮಾಡಿ ನೆರೆ ರಾಷ್ಟ್ರಗಳ ಜೊತೆಗೆ ವೈಷಮ್ಯ ಹೆಚ್ಚಿಸಿಕೊಂಡರು. ಕೇವಲ ಸುಳ್ಳು ಭರವಸೆಗಳಲ್ಲೇ ಕಾಲ ಕಳೆದರು. ಅಸಲಿಗೆ ಇಷ್ಟೊಂದು ಸುಳ್ಳು ಹೇಳುವ ಪ್ರಧಾನಿಯನ್ನು ಭಾರತ ದೇಶ ಈವರೆಗೆ ಕಂಡಿಲ್ಲ ಎಂದು ಸಿದ್ದರಾಮಯ್ಯ ಟೀಕಾಪ್ರಹಾರ ನಡೆಸಿದ್ದಾರೆ.

“ಯಡಿಯೂರಪ್ಪ ಹಿಂಬಾಗಿಲಿನಿಂದ ಅಧಿಕಾರಕ್ಕೆ ಬಂದಿದ್ದಾರೆ. ಅವರಿಗೆ ಜನ ಆಶೀರ್ವಾದ ಮಾಡಿರಲಿಲ್ಲ. ಹೀಗಾಗಿ ಆಪರೇಷನ್ ಕಮಲದ ಮೂಲಕ ಅಧಿಕಾರದ ಚುಕ್ಕಾಣಿ ಹಿಡಿದಿದ್ದಾರೆ. ಮತ್ತೆ ಕಾಂಗ್ರೆಸ್ ಪಕ್ಷವನ್ನು ನಾವೆಲ್ಲರೂ ಒಟ್ಟಾಗಿ ಅಧಿಕಾರಕ್ಕೆ ತರುತ್ತೇವೆ ಎಂದರು.


ಇದನ್ನೂ ಓದಿ:ಕಾಂಗ್ರೆಸ್ ಪಕ್ಷವನ್ನು ಮೌಲ್ಯಾಧಾರಿತವಾಗಿ ಮರುಕಟ್ಟಲು ಡಿಕೆಶಿ ಮುಂದಾಗಲಿ: ಎಚ್.ಎಸ್ ದೊರೆಸ್ವಾಮಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕರಾವಳಿ ಸಮಸ್ಯೆಗೆ ಶಾಶ್ವತ ಪರಿಹಾರದ ಭರವಸೆ: ಸಚಿವ ಕೆ.ಎಸ್.ಬಸವಂತಪ್ಪ

ರಾಜ್ಯದ ಕರಾವಳಿ ಭಾಗದಲ್ಲಿ ಮೀನುಗಾರಿಕೆ ಕ್ಷೇತ್ರದ ಅಭಿವೃದ್ಧಿ ಕುಂಠಿತವಾಗುತ್ತಿರುವ ಕುರಿತು ಕಳವಳ ವ್ಯಕ್ತವಾಗುತ್ತಿರುವ ಬೆನ್ನಲ್ಲೇ, ಸ್ಥಳೀಯ ಸಮಸ್ಯೆಗಳಿಗೆ ಸ್ಪಂದಿಸಲು ಸರ್ಕಾರ ಮುಂದಾಗಿದೆ. ಕರಾವಳಿ ವ್ಯಾಪ್ತಿಯ ಬಂದರುಗಳು, ಮೀನು ಮಾರುಕಟ್ಟೆಗಳು, ಬ್ರೇಕ್‌ವಾಟರ್‌ಗಳು ಹಾಗೂ ಜೆಟ್ಟಿಗಳಿಗೆ...

SIR ಪ್ರಕ್ರಿಯೆಯಲ್ಲಿ ಯಾರ ಹೆಸರು ಬಿಟ್ಟುಹೋಗಬಾರದು: PRC ನೀಡಲು ವಿಳಂಬ ಬೇಡ ಡಾ. ಜಿ. ಪರಮೇಶ್ವರ್

ಉದ್ಯೋಗ ಅಥವಾ ವಿವಿಧ ಕಾರಣಗಳಿಂದಾಗಿ ತಮ್ಮ ಸ್ವಂತ ಊರು ತೊರೆದು ಬೇರೆಡೆಗೆ ಸ್ಥಳಾಂತರಗೊಂಡು ನೆಲೆಸಿರುವ ರಾಜ್ಯದ ಯಾವುದೇ ನಾಗರಿಕರು ಯಾವುದೇ ಕಾರಣಕ್ಕೂ ಮತದಾರರ ಪಟ್ಟಿಯಿಂದ ಹೊರಗುಳಿಯಬಾರದು ಎಂದು ಉಪಮುಖ್ಯಮಂತ್ರಿ ಹಾಗೂ ಕಂದಾಯ ಸಚಿವರಾದ...

ಬಿಹಾರ ಪ್ರವಾಹದ ನಡುವೆ ಮೋದಿ ಹುಟ್ಟುಹಬ್ಬದ ಪ್ರಯುಕ್ತ ದೀಪೋತ್ಸವ; ‘ಆಶೀರ್ವಾದ್ ಕಾ ದಿಯಾ’ ಕಾರ್ಯಕ್ರಮಕ್ಕೆ ತೇಜಸ್ವಿ ಯಾದವ್ ಆಕ್ಷೇಪ

ಬಿಹಾರದಲ್ಲಿ ಪ್ರವಾಹ ಪರಿಸ್ಥಿತಿ ಮುಂದುವರಿದಿರುವ ನಡುವೆಯೇ ಪ್ರಧಾನಿ ನರೇಂದ್ರ ಮೋದಿ ಅವರ ಹುಟ್ಟುಹಬ್ಬದ ಅಂಗವಾಗಿ ಸೆಪ್ಟೆಂಬರ್ 17ರಂದು ‘ಆಶೀರ್ವಾದ್ ಕಾ ದಿಯಾ’ ಕಾರ್ಯಕ್ರಮ ಆಯೋಜಿಸಿರುವುದು ರಾಜಕೀಯ ಚರ್ಚೆಗೆ ಕಾರಣವಾಗಿದೆ. ರಾಜ್ಯದ 15 ಜಿಲ್ಲೆಗಳಲ್ಲಿ...

ಉಮರ್ ಖಾಲಿದ್ ಅವರನ್ನು ‘ದೇಶಪ್ರೇಮಿ’ ಎಂದ ಬಿ.ಕೆ. ಹರಿಪ್ರಸಾದ್; ವಿಧಾನಸೌಧ ಪೊಲೀಸ್ ಠಾಣೆಯಲ್ಲಿ ದೂರು ದಾಖಲು

ಬೆಂಗಳೂರಿನ ರಾಷ್ಟ್ರೀಯ ಕಾನೂನು ಶಾಲೆ (ಎನ್‌ಎಲ್‌ಎಸ್‌ಐಯು) ಯೂನಿವರ್ಸಿಟಿಯಲ್ಲಿ ಜೈಲಿನಲ್ಲಿರುವ ಹೋರಾಟಗಾರ ಉಮರ್ ಖಾಲಿದ್ ಕುರಿತಾದ ಸಾಕ್ಷ್ಯಚಿತ್ರಕ್ಕೆ ಸಂಬಂಧಿಸಿದಂತೆ ನಡೆಯುತ್ತಿರುವ ವಿವಾದದ ನಡುವೆ, ಅವರನ್ನು "ರಾಷ್ಟ್ರಪ್ರೇಮಿ" ಎಂದು ಕರೆದಿರುವ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ...

ಇಂದಿರಾ ಗಾಂಧಿಯಂತೆ ನೇರವಾಗಿ ನಿಲ್ಲಿ, ಟ್ರಂಪ್ ಮುಂದೆ ಮಂಡಿಯೂರುತ್ತಿದ್ದೀರಿ: ‘UPI ಟ್ಯಾಕ್ಸ್’ ಬಗ್ಗೆ ಮೋದಿ ವಿರುದ್ಧ ರಾಹುಲ್ ವಾಗ್ದಾಳಿ!

ಯುಪಿಐ (UPI) ವಹಿವಾಟುಗಳಿಗೆ ಸಂಬಂಧಿಸಿದಂತೆ ಜಾರಿಯಾಗುತ್ತಿರುವ ಹೊಸ 'ಮರ್ಚೆಂಟ್ ಡಿಸ್ಕೌಂಟ್ ರೇಟ್' (MDR) ವ್ಯವಸ್ಥೆ ಇದೀಗ ತೀವ್ರ ರಾಜಕೀಯ ಸಂಘರ್ಷಕ್ಕೆ ಕಾರಣವಾಗಿದೆ. ಇದನ್ನು "ಬ್ಯಾಂಕ್‌ಗಳು ವಿಧಿಸುವ ಸೇವಾ ಶುಲ್ಕ" ಎಂದು ಸರ್ಕಾರ ಸಮರ್ಥಿಸಿಕೊಳ್ಳುತ್ತಿದ್ದರೂ,...

ಲಿಯೋನೆಲ್ ಮೆಸ್ಸಿ ಕೇರಳ ಭೇಟಿ ಪ್ರಕರಣ: ಕೊಚ್ಚಿಯ ‘ರಿಪೋರ್ಟರ್ ಟಿವಿ’ ಕಚೇರಿಯಲ್ಲಿ ಪೊಲೀಸರಿಂದ ಶೋಧ

ಮಲಯಾಳಂ ಸುದ್ದಿ ವಾಹಿನಿ 'ರಿಪೋರ್ಟರ್ ಟಿವಿ'ಯ ಕೊಚ್ಚಿ ಪ್ರಧಾನ ಕಚೇರಿಯಲ್ಲಿ ಬುಧವಾರ (ಸೆ.16) ಮುಂಜಾನೆ ಪೊಲೀಸ್ ತಂಡವೊಂದು ಶೋಧ ಕಾರ್ಯ ನಡೆಸಿದ್ದು, ಇದರಿಂದಾಗಿ ತನ್ನ ಸುದ್ದಿ ಪ್ರಸಾರ ಕಾರ್ಯಾಚರಣೆಗೆ ಅಡಚಣೆಯಾಗಿದೆ ಎಂದು ವಾಹಿನಿ...

‘ಏಕರೂಪತೆ ಸಮಾನತೆಯಲ್ಲ’: 2029ಕ್ಕೂ ಮುನ್ನ 21 ರಾಜ್ಯಗಳಲ್ಲಿ ಯುಸಿಸಿ ಜಾರಿ ಘೋಷಿಸಿದ ಅಮಿತ್ ಶಾಗೆ ಪ್ರತಿಪಕ್ಷಗಳ ತೀವ್ರ ತಿರುಗೇಟು

ನವದೆಹಲಿ/ಮುಂಬೈ: 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ನೇತೃತ್ವದ ಎನ್‌ಡಿಎ ಸರ್ಕಾರಗಳಿರುವ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆ (ಯುಸಿಸಿ) ಜಾರಿಗೆ ತರಲಾಗುವುದು ಎಂಬ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ...

KPSC ಅಧ್ಯಕ್ಷರ ಪುತ್ರಿಯ ನಕಲಿ ಪ್ರಮಾಣಪತ್ರ ಹಗರಣ: ಅಕ್ರಮಕ್ಕೆ ಸಾಥ್ ನೀಡಿದ್ದ ಅಧಿಕಾರಿಯ ಜಾಮೀನು ಅರ್ಜಿ ವಜಾ

ಕೆಪಿಎಸ್‌ಸಿ (KPSC) ಅಧ್ಯಕ್ಷರ ಪುತ್ರಿಗೆ ಅಕ್ರಮವಾಗಿ ನಕಲಿ ಆದಾಯ ಪ್ರಮಾಣಪತ್ರ ನೀಡಿದ ಆರೋಪ ಎದುರಿಸುತ್ತಿರುವ ಕಂದಾಯ ಅಧಿಕಾರಿಯ ನಿರೀಕ್ಷಣಾ ಜಾಮೀನು ಅರ್ಜಿಯನ್ನು ಬೆಂಗಳೂರಿನ ನಗರ ಸಿವಿಲ್ ಮತ್ತು ಸೆಷನ್ಸ್ ನ್ಯಾಯಾಲಯ ಮಂಗಳವಾರ ವಜಾಗೊಳಿಸಿದೆ....

ಬಂಗಾಳದಲ್ಲಿ ಬಿಜೆಪಿ ಸರ್ಕಾರದ ನಿರ್ಬಂಧ; ನೆಲಕಚ್ಚಿದ ದನದ ಮಾಂಸ ವ್ಯಾಪಾರ

ಪಶು ಹತ್ಯೆಯ ಕುರಿತು ಮುಖ್ಯಮಂತ್ರಿ ಸುವೇಂಧು ಅಧಿಕಾರಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಸೂಚನೆ ಹೊರಡಿಸಿದ ನಂತರ, ಮಾಂಸದ ವ್ಯಾಪಾರಿ ಮುಷ್ತಾಕ್ ಕಳೆದ ಮೂರು ತಿಂಗಳಿನಿಂದ ಒಂದು ಪೈಸೆಯನ್ನೂ ಗಳಿಸಿಲ್ಲ. "ಚುನಾವಣೆಯ ಕಾರಣದಿಂದ...

ತೀವ್ರಗೊಂಡ ಸೌದಿ-ಹೌತಿ ಸಂಘರ್ಷ : ಮಕ್ಕಾ ಗುರಿಯಾಗಿಸಿದ್ದ ಡ್ರೋನ್ ಹೊಡೆದುರುಳಿಸಿದ್ದೇವೆ ಎಂದ ಸೌದಿ; ತಳ್ಳಿಹಾಕಿದ ಹೌತಿ

ಯೆಮನ್‌ನ ರೆಬೆಲ್ ಗ್ರೂಪ್ ಹೌತಿ ಮತ್ತು ಸೌದಿ ಬೆಂಬಲಿತ ಪಡೆಗಳ ಸಂಘರ್ಷ ತೀವ್ರಗೊಂಡಿದ್ದು, ಇತಿಹಾಸದಲ್ಲೇ ಮೊದಲ ಬಾರಿಗೆ ಮುಸ್ಲಿಮರ ಪವಿತ್ರ ನಗರ ಮಕ್ಕಾದಲ್ಲಿ ಸೌದಿ ಅರೇಬಿಯಾದ ನಾಗರಿಕ ರಕ್ಷಣಾ (ಸಿವಿಲ್ ಡಿಫೆನ್ಸ್) ಇಲಾಖೆಯು...