Homeಕರ್ನಾಟಕಮತ್ತೆ ಕಾಂಗ್ರೆಸ್ ಅನ್ನು ಅಧಿಕಾರಕ್ಕೆ ತರುತ್ತೇವೆ: ಕೆಪಿಸಿಸಿ ಅಧ್ಯಕ್ಷ ಗದ್ದುಗೆ ಏರಿ ಡಿಕೆಶಿ ಪ್ರತಿಜ್ಞೆ

ಮತ್ತೆ ಕಾಂಗ್ರೆಸ್ ಅನ್ನು ಅಧಿಕಾರಕ್ಕೆ ತರುತ್ತೇವೆ: ಕೆಪಿಸಿಸಿ ಅಧ್ಯಕ್ಷ ಗದ್ದುಗೆ ಏರಿ ಡಿಕೆಶಿ ಪ್ರತಿಜ್ಞೆ

- Advertisement -
- Advertisement -

ಕೆಪಿಸಿಸಿ ಅಧ್ಯಕ್ಷ ಹುದ್ದೆಯನ್ನು ಸವಾಲಾಗಿ ಸ್ವೀಕರಿಸುತ್ತೇನೆ. ಮತ್ತೆ ಕಾಂಗ್ರೆಸ್ ಶಾಸಕರು ವಿಧಾನಸೌಧದ ಮೂರನೇ ಮಹಡಿ ಹತ್ತುವಂತೆ ಮಾಡುತ್ತೇವೆ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ಪ್ರತಿಜ್ಞೆ ಮಾಡಿದ್ದಾರೆ.

ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿಯ ಅಧ್ಯಕ್ಷರಾಗಿ ಇಂದು ನಡೆದ ಪದಗ್ರಹಣ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಪಕ್ಷದ ಮುಖಂಡರೆಲ್ಲಾ ಸೇರಿ ತೆಗೆದುಕೊಂಡಿರುವ ನಿರ್ಧಾರ ನನಗೆ ಸಂತಸ ತಂದಿದೆ. ಈ ಸ್ಥಾನಕ್ಕೆ ಆಕಾಂಕ್ಷಿಯಲ್ಲದಿದ್ದರೂ ಸಹ ಇದು ನನ್ನ ಕರ್ತವ್ಯವೆಂದು ಭಾವಿಸಿ ನೀಡಿರುವ ಜವಾಬ್ದಾರಿಯನ್ನು ಒಂದು ಸವಾಲಾಗಿ ಸ್ವೀಕರಿಸುತ್ತೇನೆ ಎಂದಿದ್ದಾರೆ.

ವಿದ್ಯಾರ್ಥಿ ದೆಸೆಯಿಂದಲೂ ಹೋರಾಟಗಳಲ್ಲಿ ಭಾಗವಹಿಸುತ್ತಾ ಇಂದಿರಾಗಾಂಧಿಯವರಿಂದ ಪ್ರಭಾವಿತನಾಗಿ ಸಿಕ್ಕ ಅವಕಾಶಗಳನ್ನು ಸಮರ್ಪಕವಾಗಿ ಉಪಯೋಗಿಸಿಕೊಂಡು ತಾಲ್ಲೂಕು, ಜಿಲ್ಲಾ ಹಾಗೂ ರಾಜ್ಯ ಮಟ್ಟದಲ್ಲಿ ಹಲವಾರು ರಾಜಕೀಯ ಧುರೀಣರೊಂದಿಗೆ ಕೆಲಸ ಮಾಡಿದ್ದೇನೆ. ಈ ಸಂದರ್ಭದಲ್ಲಿ ಸಾಕಷ್ಟು ತೊಂದರೆಗಳನ್ನು ಮೆಟ್ಟಿ ಇಂದು ಈ ಮಟ್ಟಕ್ಕೆ ಬಂದಿದ್ದೇನೆ. ಈಗಲೂ ತೊಂದರೆಯಿದೆ. ಆದರೆ ಆದಾವುದಕ್ಕೂ ಬಗ್ಗದೇ ಪಕ್ಷದ ಸಿದ್ಧಾಂತ ಮತ್ತು ಆದರ್ಶ ಹಾಗೂ ಏಳಿಗೆಗಾಗಿ ಶ್ರಮಿಸುತ್ತೇನೆ. ಎಲ್ಲರೂ ಒಟ್ಟಿಗೆ ಶ್ರಮಿಸೋಣ ಎಂದು ಪಕ್ಷದ ನಿಷ್ಠಾವಂತರಿಗೆ ಕರೆ ನೀಡಿದರು.

16 ಸಾವಿರ ಜಾಗಗಳಲ್ಲಿ ಲಕ್ಷಾಂತರ ಜನರು ಪದಗ್ರಹಣ ಕಾರ್ಯಕ್ರಮ ನೋಡಿದ್ದಾರೆ. ಇದು ಒಬ್ಬ ವ್ಯಕ್ತಿಯ ಕಾರ್ಯಕ್ರಮವಲ್ಲ. ಇದು ಪಕ್ಷದ ಕಾರ್ಯಕ್ರಮ. ಇಡೀ ವಿಶ್ವವೇ ಕಾರ್ಯಕ್ರಮ ನೋಡಿದೆ ಎಂದು ಡಿ.ಕೆ.ಶಿವಕುಮಾರ್ ಹೇಳಿದರು.

ನಾನು ದೊಡ್ಡ ವಿದ್ಯಾವಂತ ಅಲ್ಲ, ನನಗೆ ಇರುವ ತಿಳಿವಳಿಕೆಯಲ್ಲಿ ಕಾರ್ಯಕ್ರಮ ಮಾಡಿದ್ದೇವೆ. ನಮ್ಮ ಕಾರ್ಯಕರ್ತರು ಆಶೀರ್ವದಿಸಿದ್ದಾರೆ. ಇದು ನನಗೆ ದೊಡ್ಡ ಜವಾಬ್ದಾರಿ. ಅವರ ನಂಬಿಕೆ ವಿಶ್ವಾಸ ಉಳಿಸಿಕೊಳ್ಳುತ್ತೇನೆ. ಜನರ ಭಾವನೆ ಅರಿತು ಕೆಲಸ ಮಾಡುತ್ತೇವೆ. ವಿಧಾನಸೌಧ ಚಪ್ಪಡಿ ಕಲ್ಲಿನಂತೆ ಜನರ ಸೇವೆ ಮಾಡುತ್ತೇನೆ ಎಂದು ಹೇಳಿದ್ದಾರೆ.

ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯನವರು ಮಾತನಾಡಿ, “ಧರ್ಮಗಳನ್ನು ಎತ್ತಿಕಟ್ಟುವ, ರೋಗದಲ್ಲೂ ಧರ್ಮದ ವಿಷ ಬೀಜ ಬಿತ್ತುವ, ದೇಶದ ಸಂವಿಧಾನದ ಬಗ್ಗೆ ಬದ್ಧತೆ ಇಲ್ಲದ ನರೇಂದ್ರ ಮೋದಿ ಪ್ರಧಾನಿಯಾಗಿ ಮುಂದುವರೆಯಲು ನಾಲಾಯಕ್” ಎಂದಿದ್ದಾರೆ.

ಬಿಜೆಪಿ ಪಕ್ಷವನ್ನು ಆರ್‌ಎಸ್ಎಸ್ ನಿಯಂತ್ರಿಸುವವರೆಗೆ ದೇಶದಲ್ಲಿ ಬಡವರು, ದಲಿತರು ಮತ್ತು ಅನ್ಯಕೋಮಿನವರ ಬದುಕು ಕಷ್ಟವಾಗಲಿದೆ. ಧರ್ಮವನ್ನು ಎತ್ತಿಕಟ್ಟಿ ಅದರ ಮೂಲಕ ರಾಜಕಾರಣ ಮಾಡುವುದೇ ಇವರು ಗುರಿ ಎಂದು ಕಿಡಿಕಾರಿದ್ದಾರೆ.

ಪ್ರಧಾನಿಯಾಗಿ ನರೇಂದ್ರ ಮೋದಿ ಆರ್‌ಎಸ್ಎಸ್ ಕಾರ್ಯಕ್ರಮಗಳನ್ನಷ್ಟೇ ಜಾರಿ ಮಾಡುತ್ತಿದ್ದಾರೆ. ಕೊರೊನಾ ಹರಡದಂತೆ ತಡೆಯುವಲ್ಲಿ ಮೋದಿ ವಿಫಲರಾಗಿದ್ದಾರೆ. ಈಗ ಮಾಡಬೇಕಾದ ಲಾಕ್‌ಡೌನ್‌ ಆನ್ನು ಮುಂದಾಲೋಚನೆಯಿಲ್ಲದೇ ಆಗಲೇ ಮಾಡಿ ಬಡಜನರು ಕಷ್ಟ ಅನುಭವಿಸುವಂತೆ ಮಾಡಿದರು. ಅವರಿಗೆ ಆಡಳಿತ ಜ್ಞಾನವಿಲ್ಲ ಎಂದಿದ್ದಾರೆ.

ಮೋದಿಯವರು ಇಂಧನ ಬೆಲೆ, ಗ್ಯಾಸ್ ಬೆಲೆಯನ್ನು ಹೆಚ್ಚಿಸುವ ಮೂಲಕ ಜನರ ಸಂಕಷ್ಟದ ಮೇಲೆ ಮತ್ತೆ ಬರೆ ಎಳೆದರು. ವರ್ಷವಿಡೀ ವಿದೇಶ ಪ್ರವಾಸ ಮಾಡಿ ನೆರೆ ರಾಷ್ಟ್ರಗಳ ಜೊತೆಗೆ ವೈಷಮ್ಯ ಹೆಚ್ಚಿಸಿಕೊಂಡರು. ಕೇವಲ ಸುಳ್ಳು ಭರವಸೆಗಳಲ್ಲೇ ಕಾಲ ಕಳೆದರು. ಅಸಲಿಗೆ ಇಷ್ಟೊಂದು ಸುಳ್ಳು ಹೇಳುವ ಪ್ರಧಾನಿಯನ್ನು ಭಾರತ ದೇಶ ಈವರೆಗೆ ಕಂಡಿಲ್ಲ ಎಂದು ಸಿದ್ದರಾಮಯ್ಯ ಟೀಕಾಪ್ರಹಾರ ನಡೆಸಿದ್ದಾರೆ.

“ಯಡಿಯೂರಪ್ಪ ಹಿಂಬಾಗಿಲಿನಿಂದ ಅಧಿಕಾರಕ್ಕೆ ಬಂದಿದ್ದಾರೆ. ಅವರಿಗೆ ಜನ ಆಶೀರ್ವಾದ ಮಾಡಿರಲಿಲ್ಲ. ಹೀಗಾಗಿ ಆಪರೇಷನ್ ಕಮಲದ ಮೂಲಕ ಅಧಿಕಾರದ ಚುಕ್ಕಾಣಿ ಹಿಡಿದಿದ್ದಾರೆ. ಮತ್ತೆ ಕಾಂಗ್ರೆಸ್ ಪಕ್ಷವನ್ನು ನಾವೆಲ್ಲರೂ ಒಟ್ಟಾಗಿ ಅಧಿಕಾರಕ್ಕೆ ತರುತ್ತೇವೆ ಎಂದರು.


ಇದನ್ನೂ ಓದಿ:ಕಾಂಗ್ರೆಸ್ ಪಕ್ಷವನ್ನು ಮೌಲ್ಯಾಧಾರಿತವಾಗಿ ಮರುಕಟ್ಟಲು ಡಿಕೆಶಿ ಮುಂದಾಗಲಿ: ಎಚ್.ಎಸ್ ದೊರೆಸ್ವಾಮಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಶ್ರೀಲಂಕಾ | 2019ರ ಈಸ್ಟರ್ ಬಾಂಬ್ ಸ್ಫೋಟ ಪ್ರಕರಣ: ಇಬ್ಬರು ಮಾಜಿ ಅಧಿಕಾರಿಗಳಿಗೆ ಮರಣದಂಡನೆ ವಿಧಿಸಿದ ಕೋರ್ಟ್

ಬರೋಬ್ಬರಿ 260ಕ್ಕೂ ಹೆಚ್ಚು ಜನರ ಸಾವಿಗೆ ಕಾರಣವಾಗಿದ್ದ 2019ರ ಶ್ರೀಲಂಕಾದ 'ಈಸ್ಟರ್ ಸಂಡೇ' ಬಾಂಬ್ ಸ್ಫೋಟ ಪ್ರಕರಣದಲ್ಲಿ ಕ್ರಿಮಿನಲ್ ನಿರ್ಲಕ್ಷ್ಯ ಆರೋಪ ಸಾಬೀತಾದ ಹಿನ್ನೆಲೆ, ಪೊಲೀಸ್ ಮಾಜಿ ಮುಖ್ಯಸ್ಥ ಮತ್ತು ರಕ್ಷಣಾ ಸಚಿವಾಲಯದ...

ಅಮೆರಿಕ ಓದಿಗೆ ಎಲ್ಲಿಂದ ಬಂತು ಹಣ? CJP ಸ್ಥಾಪಕ ಅಭಿಜೀತ್ ದೀಪ್ಕೆ ತಂದೆಯ ಆಸ್ತಿ ತನಿಖೆಗೆ RTI ಕಾರ್ಯಕರ್ತ ಆಗ್ರಹ

ಕಾಕ್ರೋಚ್ ಜನತಾ ಪಾರ್ಟಿ (CJP) ಸ್ಥಾಪಕ ಅಭಿಜೀತ್ ದೀಪ್ಕೆ ಅವರ ತಂದೆ, ಮಹಾರಾಷ್ಟ್ರ ಸರ್ಕಾರದ ನಿವೃತ್ತ ಉದ್ಯೋಗಿ ಭಗವಾನ್‌ರಾವ್ ದೀಪ್ಕೆ ಅವರ ಆದಾಯ ಮತ್ತು ಅಕ್ರಮ ಆಸ್ತಿ ಗಳಿಕೆ ಕುರಿತು ಸಮಗ್ರ ತನಿಖೆ...

ಕಾವೇರಿ ವಿಚಾರದಲ್ಲಿ ರಾಜಕೀಯ ಪಕ್ಕಕ್ಕಿಟ್ಟು ರಾಜ್ಯದ ಹಿತ ಕಾಯೋಣ: ಸರ್ವಪಕ್ಷ ಸಭೆಯಲ್ಲಿ ಸಿಎಂ ಡಿ.ಕೆ. ಶಿವಕುಮಾರ್ ಕರೆ

ಕಾವೇರಿ ನದಿ ನೀರು ಹಂಚಿಕೆ ವಿಚಾರವಾಗಿ ಪರಿಸ್ಥಿತಿ ಸುಧಾರಿಸುವ ಲಕ್ಷಣಗಳು ಕಂಡುಬರುತ್ತಿದ್ದು, ನದಿ ನೀರಿನ ಹಂಚಿಕೆಯಲ್ಲಿ ಸೌಹಾರ್ದಯುತವಾಗಿ ಸಮಸ್ಯೆ ನಿವಾರಿಸುವುದೇ ಸರ್ಕಾರದ ಮೊದಲ ಆದ್ಯತೆಯಾಗಿದೆ ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ತಿಳಿಸಿದ್ದಾರೆ. ಕಾವೇರಿ...

ಉತ್ತರ ಪ್ರದೇಶ : 33 ವರ್ಷಗಳ ಬಳಿಕ ದೇಶದ್ರೋಹ ಪ್ರಕರಣದಿಂದ ಮುಸ್ಲಿಂ ವ್ಯಕ್ತಿ ಖುಲಾಸೆ

ಪ್ರಾಸಿಕ್ಯೂಷನ್ ಆರೋಪಗಳನ್ನು ಸಾಂದರ್ಭಿಕ ಪುರಾವೆಗಳೊಂದಿಗೆ ಸಾಬೀತುಪಡಿಸಲು ವಿಫಲವಾಗಿದೆ ಮತ್ತು ಆರೋಪಿಯನ್ನು ಕೃತ್ಯಕ್ಕೆ ಲಿಂಕ್ ಮಾಡುವ ಪ್ರಮುಖ ಪುರಾವೆಗಳು ಕಾಣೆಯಾಗಿವೆ ಎಂದು ಅಭಿಪ್ರಾಯಪಟ್ಟ ಲಕ್ನೋದ ವಿಶೇಷ ರಾಷ್ಟ್ರೀಯ ತನಿಖಾ ದಳ (ಎನ್ಐಎ) ನ್ಯಾಯಾಲಯ, ದೇಶದ್ರೋಹ...

‘ಊರು ಕೊಳ್ಳೆ ಹೊಡೆದ ಮೇಲೆ ದಿಡ್ಡಿ ಬಾಗಿಲು ಹಾಕಿದರು’ ಎಂಬಂತೆ NTA ಯಿಂದ ₹7.5 ಕೋಟಿಯ ಬೃಹತ್ ಸೆಕ್ಯೂರಿಟಿ ಟೆಂಡರ್

ನೀಟ್ ಪ್ರಶ್ನೆಪತ್ರಿಕೆ ಸೋರಿಕೆಯಾಗಿ, ಅಮಾಯಕ ವಿದ್ಯಾರ್ಥಿಗಳ ಜೀವ-ಭವಿಷ್ಯ ಹಾಳಾದ ಮೇಲೆ, ಊರು ಕೊಳ್ಳೆ ಹೊಡೆದ ಮೇಲೆ ದಿಡ್ಡಿ ಬಾಗಿಲು ಹಾಕಿದರು ಎಂಬಂತೆ ಈಗ ಎನ್‌ಟಿಎ (NTA) ₹7.5 ಕೋಟಿ ವೆಚ್ಚದ ಭದ್ರತಾ ಟೆಂಡರ್...

SIR: ನಮೂನೆಯೂ ಇಲ್ಲ, ನೋಟಿಸ್‌ ಇಲ್ಲ ಸ್ವಂತ ಮನೆಯಲ್ಲಿದ್ದವರ ಹೆಸರನ್ನೇ ಅಳಿಸಿಹಾಕಿದ ಚುನಾವಣಾ ಆಯೋಗ

ರಾಜ್ಯದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ಒಂದಾದ ಮೇಲೊಂದರಂತೆ ಆತಂಕಕಾರಿ ಪ್ರಕರಣಗಳು ಬೆಳಕಿಗೆ ಬರುತ್ತಿವೆ. ಮನೆಮನೆಗೆ ತೆರಳಿ ಎನ್ಯುಮರೇಷನ್ ನಮೂನೆ ವಿತರಿಸುವ ಮೊದಲ ಹಂತದ ಪ್ರಕ್ರಿಯೆ...

ಲೈಂಗಿಕ ಕಿರುಕುಳ ಪ್ರಕರಣದಲ್ಲಿ ಅಮಾನತುಗೊಂಡಿದ್ದ ಯುಪಿ ಪೊಲೀಸ್ ಕಾನ್‌ಸ್ಟೇಬಲ್; ಮರುನೇಮಕದ ಬೆನ್ನಲ್ಲೇ ಬಾಲಕಿಯ ಅತ್ಯಾಚಾರ, ಕೊಲೆ!

ಹತ್ತು ವರ್ಷದ ಬಾಲಕಿಯ ಮೇಲೆ ಅತ್ಯಾಚಾರಕ್ಕೆ ಯತ್ನಿಸಿ, ಆಕೆಯ ಸಾವಿಗೆ ಕಾರಣನಾದ ಆರೋಪದ ಮೇಲೆ ಬಂಧಿತನಾದ ಉತ್ತರ ಪ್ರದೇಶದ ಪೊಲೀಸ್ ಕಾನ್‌ಸ್ಟೇಬಲ್ ಅಭಿಷೇಕ್ ಯಾದವ್‌ನನ್ನು ವೈದ್ಯಕೀಯ ತಪಾಸಣೆಗಾಗಿ ಗೋರಖ್‌ಪುರದ ಜಿಲ್ಲಾಸ್ಪತ್ರೆಗೆ ಕರೆತಂದಾಗ, ಅಲ್ಲಿನ...

BJP ವಿರುದ್ಧದ ಆಕ್ರೋಶವೇ Gen-Z ಹೋರಾಟದ ಮೂಲ: ವಿಪಕ್ಷಗಳಿಗೆ ಇದು ದೊಡ್ಡ ಪಾಠ

ಜಂತರ್ ಮಂತರ್‌ನಲ್ಲಿ ನಡೆದ ವಿದ್ಯಾರ್ಥಿಗಳ ಹೋರಾಟವನ್ನು ನಿಮ್ಮ ರಾಜಕೀಯ ದೃಷ್ಟಿಕೋನಕ್ಕೆ ತಕ್ಕಂತೆ ನೀವು ಕ್ರಾಂತಿ ಎಂದಾದರೂ ನೋಡಬಹುದು, ಅಥವಾ ಕ್ಷಣಿಕವಾಗಿ ಎದ್ದ ಬಿರುಗಾಳಿ ಎಂದಾದರೂ ಭಾವಿಸಬಹುದು. ಆದರೆ ಇಲ್ಲಿ ನಿಜವಾಗಿಯೂ ಆಗಿದ್ದೇನು ಮತ್ತು...

ಇನ್‌ಸ್ಟಾಗ್ರಾಮ್‌ನಲ್ಲಿ ಕ್ಷಮಿಸಿದರೆ ಸಾಲದು, ವಿದ್ಯಾರ್ಥಿಗಳ ಮೇಲಿನ ಕೇಸ್ ವಾಪಸ್ ಪಡೆಯಿರಿ: ಪ್ರಧಾನಿಗೆ ದೀಪ್ಕೆ ನೇರ ಪ್ರಶ್ನೆ

ಪ್ರಧಾನಿ ನರೇಂದ್ರ ಮೋದಿ ಅವರು ಇನ್‌ಸ್ಟಾಗ್ರಾಮ್ ವಿಡಿಯೋವೊಂದರಲ್ಲಿ ತಮ್ಮ ವಿರುದ್ಧ ನಿಂದನಾತ್ಮಕ ಪದ ಬಳಸಿದ್ದ ‘ಕಾಕ್ರೋಚ್ ಜನತಾ ಪಾರ್ಟಿ’ (CJP) ಪ್ರತಿಭಟನಾ ನಿರತ ವಿದ್ಯಾರ್ಥಿಗಳನ್ನು ಕ್ಷಮಿಸಿದ್ದೇನೆ ಎಂದು ಹೇಳಿರುವುದಕ್ಕೆ ಸಿಜೆಪಿ ಸಂಸ್ಥಾಪಕ ಅಭಿಜೀತ್...

ಪ್ರತಿಭಟನೆ ಭೀತಿ : ಸಿಜೆಐ ಸೂರ್ಯಕಾಂತ್ ಭಾಗವಹಿಸಬೇಕಿದ್ದ ಘಟಿಕೋತ್ಸವ ದಿಢೀರ್ ಮುಂದೂಡಿದ TISS

ಮುಂಬೈನ ಟಾಟಾ ಇನ್‌ಸ್ಟಿಟ್ಯೂಟ್ ಆಫ್ ಸೋಷಿಯಲ್ ಸೈನ್ಸಸ್ (ಟಿಐಎಸ್‌ಎಸ್‌) ಸಂಸ್ಥೆಯು ಆಗಸ್ಟ್ 2ರಂದು ನಡೆಸಲು ನಿಗದಿಪಡಿಸಿದ್ದ ತನ್ನ 86ನೇ ವಾರ್ಷಿಕ ಘಟಿಕೋತ್ಸವವನ್ನು ದಿಢೀರ್ ಮುಂದೂಡಿದೆ. ಕ್ಯಾಂಪಸ್ ಭದ್ರತೆಯ ಬಗೆಗಿನ ಕಳವಳಗಳು ಮತ್ತು ವಿದ್ಯಾರ್ಥಿಗಳ...