Homeಅಂತರಾಷ್ಟ್ರೀಯಸಂವಿಧಾನಕ್ಕೆ ತಿದ್ದುಪಡಿ: 2036 ರವರೆಗೂ ರಷ್ಯಾದಲ್ಲಿ ಪುಟಿನ್ ಅಧ್ಯಕ್ಷ?

ಸಂವಿಧಾನಕ್ಕೆ ತಿದ್ದುಪಡಿ: 2036 ರವರೆಗೂ ರಷ್ಯಾದಲ್ಲಿ ಪುಟಿನ್ ಅಧ್ಯಕ್ಷ?

ಬೃಹತ್ ಪ್ರಚಾರ ಅಭಿಯಾನ ಮತ್ತು ಸಂಘಟಿತ ಸವಾಲನ್ನು ಎದುರಿಸಲು ಪ್ರತಿಪಕ್ಷಗಳು ವಿಫಲವಾದ ಕಾರಣ ಪುಟಿನ್ ಅವರು ಬಯಸಿದ ಫಲಿತಾಂಶವನ್ನು ಪಡೆದರು ಎನ್ನಲಾಗಿದೆ.

- Advertisement -
- Advertisement -

ರಷ್ಯಾ ಅಧ್ಯಕ್ಷ ವ್ಲಾಡಿಮಿರ್ ಪುಟಿನ್ ಅವರು 2036 ರವರೆಗೆ ಅಧಿಕಾರ ಹೊಂದಲು ಅನುವು ಮಾಡಿಕೊಡುವ ಸಂವಿಧಾನದ ಬದಲಾವಣೆಗಳನ್ನು ರಷ್ಯಾದ ಹೆಚ್ಚಿನ ಮತದಾರರು ಅಂಗೀಕರಿಸಿದ್ದಾರೆ ಎಂಬ ವರದಿಗಳು ಬಂದಿವೆ. ಬುಧವಾರ ಮುಕ್ತಾಯಗೊಂಡ ವಾರಾಂತ್ಯದ ಜನಾಭಿಪ್ರಾಯ ಸಂಗ್ರಹದಲ್ಲಿ ಅಕ್ರಮಗಳು ನಡೆದಿದ್ದು, ಮತದಾರರ ಮೇಲೆ ಒತ್ತಡ ಹೇರಲಾಗಿದೆ ಎಂಬ ಟೀಕೆಗಳು ಸಹ ಕೇಳಿಬಂದಿವೆ.

ರಾಷ್ಟ್ರದ ಬಹುತೇಕ ಚುನಾವಣೆ ಮುಗಿದಿದ್ದು, 20% ಪ್ರಾಂತದ ಮತಗಳನ್ನು ಎಣಿಸಲಾಗಿದೆ. 72% ಜನರು ಸಾಂವಿಧಾನಿಕ ತಿದ್ದುಪಡಿ ಪರ ಮತ ಚಲಾಯಿಸಿದ್ದಾರೆ ಎಂದು ಚುನಾವಣಾ ಅಧಿಕಾರಿಗಳು ತಿಳಿಸಿದ್ದಾರೆ.

ರಷ್ಯಾದಲ್ಲಿ ಮೊದಲ ಬಾರಿಗೆ, ಮತ ಚಲಾಯಿಸುವಲ್ಲಿ ಜನಸಂದಣಿ ತಡೆಗಟ್ಟಲು ಮತದಾನಕ್ಕೆ ಒಂದು ವಾರದವರೆಗೂ ಅವಕಾಶ ನೀಡಲಾಗಿತ್ತು.

ಬೃಹತ್ ಪ್ರಚಾರ ಅಭಿಯಾನ ಮತ್ತು ಸಂಘಟಿತ ಸವಾಲನ್ನು ಎದುರಿಸಲು ಪ್ರತಿಪಕ್ಷಗಳು ವಿಫಲವಾದ ಕಾರಣ ಪುಟಿನ್ ಅವರು ಬಯಸಿದ ಫಲಿತಾಂಶವನ್ನು ಪಡೆದರು ಎನ್ನಲಾಗಿದೆ.

ಚುನಾವಣಾ ಅಧಿಕಾರಿಗಳ ಪ್ರಕಾರ, ಮಾಸ್ಕೋ ಮತ್ತು ಪಶ್ಚಿಮ ರಷ್ಯಾದ ಇತರ ಭಾಗಗಳಲ್ಲಿ ಮತದಾನ ಮುಕ್ತಾಯಗೊಳ್ಳುವ ಹೊತ್ತಿಗೆ ಮತದಾನವು 65% ರಷ್ಟಿತ್ತು. ಕೆಲವು ಪ್ರದೇಶಗಳಲ್ಲಿ, ಸುಮಾರು 90% ಅರ್ಹ ಮತದಾರರು ಮತ ಚಲಾಯಿಸಿದ್ದಾರೆ.

ರಷ್ಯಾದ ಪೂರ್ವ ದಿಕ್ಕಿನ ಚುಕ್ಚಿ ಪರ್ಯಾಯ ದ್ವೀಪದಲ್ಲಿ, ಮಾಸ್ಕೋಕ್ಕಿಂತ ಒಂಬತ್ತು ಗಂಟೆಗಳ ಮುಂಚಿತವಾಗಿ ಪ್ರಾಥಮಿಕ ಫಲಿತಾಂಶಗಳನ್ನು ಘೋಷಿಸಿ, 80% ಮತದಾರರು ತಿದ್ದುಪಡಿಗಳನ್ನು ಬೆಂಬಲಿಸಿದ್ದಾರೆ ಎಂದಿದ್ದಾರೆ. ಪೂರ್ವದ ಇತರ ಭಾಗಗಳಲ್ಲಿ, 70% ರಷ್ಟು ಮತದಾರರು ಬದಲಾವಣೆಗಳನ್ನು ಬೆಂಬಲಿಸಿದ್ದಾರೆ ಎಂದು ಅವರು ಹೇಳಿದರು.

ಕ್ರೆಮ್ಲಿನ್ ವಿಮರ್ಶಕರು ಮತ್ತು ಸ್ವತಂತ್ರ ಚುನಾವಣಾ ವೀಕ್ಷಕರು ಮತದಾನದ ಅಂಕಿಅಂಶಗಳನ್ನು ಪ್ರಶ್ನಿಸಿದ್ದಾರೆ.

2024ಕ್ಕೆ ಪುಟಿನ್‌ರವರ ಅಧಿಕಾರವಧಿ ಮುಗಿಯಲಿದೆ. ಆದರೆ ಅದರ ನಂತರವೂ ಸಹ 12 ವರ್ಷಗಳ ಕಾಲ ಅಧ್ಯಕ್ಷರಾಗಿ ಮುಂದುವರೆಯುವಂತೆ ಅವರು ತಂದ ಸಂವಿಧಾನ ತಿದ್ದುಪಡಿಗಳಿಗೆ ರಷ್ಯಾ ಸಂಸತ್ತು ಭಾರೀ ಬಹುಮತದೊಂದಿಗೆ ಅಂಗೀಕರಿಸಿತ್ತು.


ಓದಿ: ಜನ ಮನೆಯಿಂದ ಹೊರಬರದಿರಲು ರಷ್ಯಾ 800 ಸಿಂಹಗಳನ್ನು ಬೀದಿಗೆ ಬಿಟ್ಟಿತೆ?


 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

SIR ಕರ್ತವ್ಯದ ವೇಳೆ ಶಿಕ್ಷಕಿಗೆ ಹಾರ್ಟ್ ಅಟ್ಯಾಕ್: ಚಿಕಿತ್ಸೆ ಫಲಿಸದೇ ಸಾವು

ಕೇಂದ್ರ ಚುನಾವಣಾ ಆಯೋಗವು ರಾಜ್ಯದಲ್ಲಿ ನಡೆಸುತ್ತಿರುವ ಮತದಾರರ ಪಟ್ಟಿಯ 'ವಿಶೇಷ ಸಮಗ್ರ ಪರಿಷ್ಕರಣೆ' (SIR) ಕೆಲಸದ ಹೆಸರಿನಲ್ಲಿ ಶಿಕ್ಷಕರ ಮೇಲೆ ಹೇರುತ್ತಿರುವ ಅತಿಯಾದ ಮಾನಸಿಕ ಹಾಗೂ ದೈಹಿಕ ಒತ್ತಡಕ್ಕೆ ಮತ್ತೊಬ್ಬ ಶಿಕ್ಷಕಿ ಬಲಿಯಾಗಿದ್ದಾರೆ. ಬೆಂಗಳೂರಿನ...

ಎದೆ ಸೀಳಿದರೆ ಮೂರು ಅಕ್ಷರ ಬರಲ್ಲ, ಮುಲ್ಲಾನಿಗೂ ನೀಟ್‌ಗೂ ಏನು ಸಂಬಂಧ: ಸಿ.ಟಿ ರವಿ ವಿವಾದಾತ್ಮಕ ಹೇಳಿಕೆ

ದೇಶಾದ್ಯಂತ ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ ಹಾಗೂ ಪರೀಕ್ಷಾ ಅಕ್ರಮಗಳ ವಿರುದ್ಧ ವಿದ್ಯಾರ್ಥಿ ಮತ್ತು ಯುವಜನ ಸಂಘಟನೆಗಳು ಬೃಹತ್ ಪ್ರತಿಭಟನೆ ನಡೆಸುತ್ತಿವೆ. ಈ ನಡುವೆ ವಿದ್ಯಾರ್ಥಿಗಳ ಹೋರಾಟವನ್ನು ಕುಹಕವಾಡಿರುವ ವಿಧಾನ ಪರಿಷತ್ ಬಿಜೆಪಿ...

ಪ್ರತಿಭಟನೆಯನ್ನು ಹತ್ತಿಕ್ಕಲು ಅಕ್ಕಾಡಕ್ಕಿಳಿದಿವೆ ಹಿಂದುತ್ವವಾದಿ ಸೋಷಿಯಲ್ ಮೀಡಿಯಾ ಇನ್ಫ್ಲುಯೆನ್ಸರ್ಸ್‌ ಮತ್ತು ಉಗ್ರ ಗೂಂಡಾ ಪಡೆ

ದೆಹಲಿಯ ಜಂತರ್ ಮಂತರ್‌ನಲ್ಲಿ ಜೂನ್ 20ರಂದು ಶುರುವಾಗಿದ್ದ ಈ ಆಂದೋಲನ ಇದೀಗ ದೇಶಾದ್ಯಂತ ತೀವ್ರ ಸ್ವರೂಪ ಪಡೆದುಕೊಂಡಿದೆ. ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ ಸಿಜೆಪಿ ಪಟ್ಟು ಹಿಡಿದಿದ್ದು, ಇಂದು...

ಜಿರಳೆಗಳನ್ನು ಸಾಯಿಸಿ ಎಂದು ವಿವಾದಾತ್ಮಕ ಪೋಸ್ಟ್‌ ಹಾಕಿದ ಪ್ರಜ್ಞಾ ಸಿಂಗ್ ಠಾಕೂರ್

ಮಾಜಿ ಬಿಜೆಪಿ ಸಂಸದೆ ಪ್ರಜ್ಞಾ ಸಿಂಗ್ ಠಾಕೂರ್ ಅವರು ದೇಶದಿಂದ ಜಿರಳೆಗಳನ್ನು ಶಾಶ್ವತವಾಗಿ ನಿರ್ಮೂಲನೆ ಮಾಡಲು ವ್ಯವಸ್ಥೆ ಮಾಡುವಂತೆ ದೇಶದ ನಾಯಕರಿಗೆ ಮನವಿ ಮಾಡಿದ್ದಾರೆ. X (ಟ್ವಿಟರ್) ನಲ್ಲಿ ಮಾಡಿದ ಪೋಸ್ಟ್‌ನಲ್ಲಿ, 2008 ರ...

ಸೋನಮ್ ವಾಂಗ್ಚುಕ್ ಮತ್ತು ಸರ್ಕಾರದ ಡೀಲ್‌ನಲ್ಲಿ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ಅಂಶವೇ ಇಲ್ಲ

ಕೇಂದ್ರದ ಮೋದಿ ಸರ್ಕಾರ ತನ್ನ ಮೂರು ಪ್ರಮುಖ ಬೇಡಿಕೆಗಳನ್ನು ಈಡೇರಿಸಲು ಒಪ್ಪಿಕೊಂಡ ನಂತರ, ಪರಿಸರ ಹೋರಾಟಗಾರ ಸೋನಮ್ ವಾಂಗ್ಚುಕ್ ಜುಲೈ 23ರ ಗುರುವಾರ ತಮ್ಮ 26 ದಿನಗಳ ಸುದೀರ್ಘ ಉಪವಾಸ ಸತ್ಯಾಗ್ರಹವನ್ನು ಕೊನೆಗೊಳಿಸಿದ್ದಾರೆ....

“50 ಗ್ರಾಂ ಡ್ರಗ್ಸ್ ಇಟ್ಟು ಕೇಸ್ ಹಾಕ್ತೀನಿ!”: ಪ್ರತಿಭಟನಾ ನಿರತ ವಿದ್ಯಾರ್ಥಿಗಳಿಗೆ ಮಾದಕದ್ರವ್ಯ ಪ್ರಕರಣದ ಬೆದರಿಕೆಯೊಡ್ಡಿದ ಮುಂಬೈ ಪೊಲೀಸ್!

ಮುಂಬೈ: ದೇಶಾದ್ಯಂತ ವಿದ್ಯಾರ್ಥಿ ಸಮುದಾಯದ ಆಕ್ರೋಶ ತೀವ್ರಗೊಳ್ಳುತ್ತಿರುವ ಬೆನ್ನಲ್ಲೇ, ತಮ್ಮ ಹಕ್ಕುಗಳಿಗಾಗಿ ಧ್ವನಿ ಎತ್ತುತ್ತಿರುವ ಯುವಜನರನ್ನು ಹತೋಟಿಗೆ ತರಲು ಪೊಲೀಸರು ಯಾವ ಮಟ್ಟದ ದಮನಕಾರಿ ಮಾರ್ಗಗಳನ್ನು ತುಳಿಯುತ್ತಿದ್ದಾರೆ ಎಂಬುದಕ್ಕೆ ಮುಂಬೈನಲ್ಲಿ ನಡೆದ ಘಟನೆಯೊಂದು...

ಬಿಡದಿ ಟೌನ್‌ಶಿಪ್: 80% ರೈತರ ಒಪ್ಪಿಗೆ ಇದೆ ಎಂಬ ವಾದ ಸಾಬೀತುಪಡಿಸಿ – ಸರ್ಕಾರಕ್ಕೆ ಸಂಯುಕ್ತ ಹೋರಾಟ ಸವಾಲು

ಬಿಡದಿ ಟೌನ್‌ಶಿಪ್ ಯೋಜನೆಗೆ ಭೂಮಿ ನೀಡಲು ಉದ್ದೇಶಿತ ಪ್ರದೇಶದ ಶೇಕಡಾ 80 ರಷ್ಟು ರೈತರು ಒಪ್ಪಿದ್ದಾರೆ ಎಂಬ ಸರ್ಕಾರದ ವಾದಕ್ಕೆ ಯಾವುದೇ ವಾಸ್ತವಿಕ ಆಧಾರವಿಲ್ಲ. ಸರ್ಕಾರಕ್ಕೆ ಧೈರ್ಯವಿದ್ದರೆ ತನ್ನ ಈ ಹೇಳಿಕೆಯನ್ನು ಜನರ...

ವಿದ್ಯಾರ್ಥಿಗಳ ಮೇಲಿನ ಪೊಲೀಸ್ ದೌರ್ಜನ್ಯ: ವಿಚಾರಣೆ ತಿರಸ್ಕರಿಸಿದ ಸುಪ್ರೀಂ; “ವಿಡಿಯೋ ನೋಡಲು ನಮಗೆ ಆಸಕ್ತಿಯೂ ಇಲ್ಲ, ಸಮಯವೂ ಇಲ್ಲ” ಎಂದ ನ್ಯಾಯಮೂರ್ತಿ ಸೂರ್ಯಕಾಂತ್

ನವದೆಹಲಿ: ಪ್ರಶ್ನೆಪತ್ರಿಕೆ ಸೋರಿಕೆ ಮತ್ತು ಪರೀಕ್ಷಾ ಅಕ್ರಮಗಳನ್ನು ಖಂಡಿಸಿ ಶಾಂತಿಯುತವಾಗಿ ಹೋರಾಡುತ್ತಿದ್ದ ಯುವ ಸಮೂಹದ ಮೇಲೆ ದೆಹಲಿ ಪೊಲೀಸರು ನಡೆಸಿದ ಭೀಕರ ದೌರ್ಜನ್ಯದ ವಿರುದ್ಧ ನ್ಯಾಯದ ನಿರೀಕ್ಷೆಯಲ್ಲಿದ್ದ ವಿದ್ಯಾರ್ಥಿಗಳಿಗೆ ದೇಶದ ಅತ್ಯುನ್ನತ ನ್ಯಾಯಾಲಯದಿಂದ...

ರಾಹುಲ್ ಗಾಂಧಿ ವಿದ್ಯಾರ್ಥಿಗಳನ್ನು ‘ರಾಜಕೀಯ ದಾಳ’ವಾಗಿ ಬಳಸುತ್ತಿದ್ದಾರೆ ಎಂದ ಧರ್ಮೇಂದ್ರ ಪ್ರಧಾನ್ ವಿರುದ್ಧ ವ್ಯಾಪಕ ಆಕ್ರೋಶ

ನವದೆಹಲಿ: ದೇಶಾದ್ಯಂತ ನೀಟ್ (NEET) ಪರೀಕ್ಷೆಯ ಅಕ್ರಮಗಳು, ಪ್ರಶ್ನೆಪತ್ರಿಕೆ ಸೋರಿಕೆ ಹಾಗೂ ಶಿಕ್ಷಣ ಇಲಾಖೆಯ ಸರಣಿ ವೈಫಲ್ಯಗಳನ್ನು ಖಂಡಿಸಿ ವಿದ್ಯಾರ್ಥಿಗಳು ಮತ್ತು ವಿರೋಧ ಪಕ್ಷಗಳು ತೀವ್ರ ಪ್ರತಿಭಟನೆ ನಡೆಸುತ್ತಿದ್ದು, ಶಿಕ್ಷಣ ಸಚಿವ ಧರ್ಮೇಂದ್ರ...

ಸಿಜೆಪಿ ಪ್ರತಿಭಟನಾಕಾರರ ಮೇಲೆ ಪೆಲೆಟ್ ಗನ್ ಬಳಕೆ, ವಿದ್ಯುತ್ ಲಾಠಿ ಪ್ರಹಾರ: ಆರೋಪ ನಿರಾಕರಿಸಿದ ಪೊಲೀಸರು

ಸೋಮವಾರ (ಜುಲೈ 20) ಕಾಕ್ರೋಚ್ ಜನತಾ ಪಕ್ಷ (ಸಿಜೆಪಿ) ಕರೆ ನೀಡಿದ್ದ ಸಂಸತ್ ಚಲೋ ಮೆರವಣಿ ಸಂದರ್ಭದಲ್ಲಿ ನಡೆದ ಪೊಲೀಸರ ದೌರ್ಜನ್ಯದಲ್ಲಿ ಗಾಯಗೊಂಡ 80 ಪ್ರತಿಭಟನಾಕಾರರಲ್ಲಿ ಕನಿಷ್ಠ ಒಬ್ಬರಿಗೆ ಪೆಲೆಟ್ ಗನ್ ಗಾಯಗಳಾಗಿವೆ...