Homeಮುಖಪುಟಬಿಜೆಪಿ ನಿಕಟವರ್ತಿ ಸಂಸ್ಥೆಗಳ ಚೀನಾ ಹಣಕಾಸು ನಂಟು!: ವಿದೇಶಾಂಗ ಸಚಿವ, ರಕ್ಷಣಾ ಸಲಹೆಗಾರರ ಸಂಬಂಧಿತ ಸಂಸ್ಥೆಗಳಿಗೆ...

ಬಿಜೆಪಿ ನಿಕಟವರ್ತಿ ಸಂಸ್ಥೆಗಳ ಚೀನಾ ಹಣಕಾಸು ನಂಟು!: ವಿದೇಶಾಂಗ ಸಚಿವ, ರಕ್ಷಣಾ ಸಲಹೆಗಾರರ ಸಂಬಂಧಿತ ಸಂಸ್ಥೆಗಳಿಗೆ ಚೀನಾದ ಹಣ

ಓಆರ್‌ಎಫ್ 2016ಲ್ಲಿ ಚೀನಾದ ಉಪರಾಯಭಾರಿ (ಕಾನ್ಸ್ಯೂಲೇಟ್ ಜನರಲ್)ಯಿಂದ ಒಟ್ಟು 1.25 ಕೋಟಿ ರೂ. ಮೊತ್ತದ ಮೂರು ದೇಣಿಗಳನ್ನು ಮತ್ತು ಮರುವರ್ಷ 50 ಲಕ್ಷ ರೂ.ಗಳ ದೇಣಿಗೆಯನ್ನು ಪಡೆದಿತ್ತು.

- Advertisement -
- Advertisement -

ಚೀನಾದ ಸಂಸ್ಥೆಗಳಿಂದ ಹಣ ಸ್ವೀಕರಿಸುವುದೆಂದರೆ ಉಯ್ಯಾಲೆಯಲ್ಲಿ ಜಾಗ ಹಂಚಿಕೊಳ್ಳುವಷ್ಟೇ ಸಹಜ ಮತ್ತು ಸ್ವೀಕಾರಾರ್ಹ ಎನಿಸಿದ್ದ ಕಾಲವಿತ್ತು. ಹಾಗಿದ್ದರೂ ಬಿಜೆಪಿಯು ಗಾಲ್ವಾನ್ ಪ್ರಮಾದದಿಂದ ಜನರ ಗಮನವನ್ನು ಬೇರೆಡೆಗೆ ಸೆಳೆಯುವ ಧಾವಂತದಲ್ಲಿ ಒಂದು ಆಡುಮಾತನ್ನು ಮರೆತುಬಿಟ್ಟಿದೆ. ಅದೆಂದರೆ ನೀವು ಬೇರೆಯವರ ಕಡೆಗೆ ಬೆರಳು ತೋರಿಸಿದಾಗ ಮೂರು ಬೆರಳುಗಳು ನಿಮ್ಮನ್ನು ತೋರಿಸುತ್ತವೆ. ಈ ಪ್ರಕರಣದಲ್ಲಿ ಕನಿಷ್ಟ ಎರಡು ಬೆರಳುಗಳು ಬಿಜೆಪಿಯ ಆಂತರಿಕ ವ್ಯವಸ್ಥೆಯತ್ತ ತೋರಿಸುತ್ತಿವೆ.

ವಿದೇಶಾಂಗ ಮಂತ್ರಿ ಎಸ್. ಜೈಶಂಕರ್ ಅವರ ಮಗನ ವಿದೇಶಾಂಗ ಧೋರಣೆಯ ಚಿಂತನಾ ಚಾವಡಿಯಾದ “ದಿ ಒಬ್ಸರ್ವರ್ ರಿಸರ್ಚ್ ಫೌಂಡೇಶನ್” (ಓಆರ್‌ಎಫ್) 2016ರಲ್ಲಿ ಕೋಲ್ಕತ್ತಾದ ಸೇರಿದಂತೆ ಚೀನಾದ ಉಪರಾಯಭಾರ ಕಚೇರಿಗಳಿಂದ (ಕಾನ್ಸ್ಯೂಲೇಟ್) ಹಣಕಾಸು ಪಡೆದಿದೆ. ಅಲ್ಲದೇ ಓಆರ್‌ಎಫ್‌ಗೆ ರಿಲಯನ್ಸ್ ಇಂಡಸ್ಟ್ರೀಸ್‌ನ ಹಣಕಾಸು ಬೆಂಬಲವೂ ಇದೆ.

ಆರೆಸ್ಸೆಸ್‌ಗೆ ಹತ್ತಿರವಾಗಿರುವ ಇನ್ನೊಂದು ಚಿಂತನಾ ಚಾವಡಿಯಾಗಿರುವ ವಿವೇಕಾನಂದ ಇಂಟರ್‌ನ್ಯಾಷನಲ್ ಫೌಂಡೇಶನ್ ತನ್ನ ವೆಬ್‌ಸೈಟಿನಲ್ಲಿ, ತಾನು ವಿದೇಶಾಂಗ ಮತ್ತು ಕಾರ್ಯವ್ಯೂಹಾತ್ಮಕ ಧೋರಣೆಯ ವಿಷಯದಲ್ಲಿ ಒಂಬತ್ತು ಚೀನಿ ಸಂಸ್ಥೆಗಳೊಂದಿಗೆ ವೃತ್ತಿಪರ ಸಂಬಂಧ ಹೊಂದಿರುವುದಾಗಿ ಘೋಷಿಸಿದೆ.

ರಾಷ್ಟ್ರೀಯ ಭದ್ರತಾ ಸಲಹೆಗಾರ ಅಜಿತ್ ದೋವಲ್ ಈ (ವಿಐಎಫ್)ನ ಸ್ಥಾಪಕ ನಿರ್ದೇಶಕರಾಗಿದ್ದು, ಅದು ಬಿಜೆಪಿ ಮತ್ತು ಆರೆಸ್ಸೆಸ್ ಜೊತೆ ನಿಕಟ ನಂಟು ಹೊಂದಿದೆ. ಈ ಎರಡೂ ಸಂಸ್ಥೆಗಳು ಈ ಮಾಹಿತಿಗಳನ್ನು ಸಾರ್ವಜನಿಕ ವೇದಿಕೆಯಲ್ಲಿ ಹೇಳಿಕೊಂಡಿವೆ.

ವಿವೇಕಾನಂದ ಇಂಟರ್‌ನ್ಯಾಷನಲ್ ಫೌಂಡೇಶನ್ ನಲ್ಲಿ ಅಜಿತ್ ದೋವಲ್. (ಬಲದಿಂದ ಮೊದಲನೆಯವರು)

ಒಂದು ವೇಳೆ ಬಿಜೆಪಿಯು 2005-06ರಷ್ಟು ಹಿಂದೆ ಪಡೆದ ಹಣವನ್ನು ಆಧರಿಸಿ ಕಾಂಗ್ರೆಸ್ ಪಕ್ಷವು ಚೀನಾ ನಂಟು ಹೊಂದಿದೆ ಎಂದು ಆರೋಪಿಸಿ ನಗಣ್ಯ ವಿಷಯವನ್ನು ಒಂದು ದೊಡ್ಡ ರಾಷ್ಟ್ರೀಯ ಭದ್ರತಾ ವಿಷಯವನ್ನಾಗಿ ಮಾಡಲು ಹೊರಡದಿದ್ದರೆ, ಈ ಎರಡೂ ಸಂಸ್ಥೆಗೆ ದೇಣಿಗೆ ನೀಡಿದ ದಾನಿಗಳ ಗುರುತು ಪರಿಚಯ ಯಾರ ಗಮನವನ್ನೂ ಸೆಳೆಯುತ್ತಿರಲಿಲ್ಲ. ವಿಶ್ವದಾದ್ಯಂತ ಸಂಸ್ಥೆಗಳು ವಿದೇಶಿ ದೇಣಿಗೆ ಪಡೆಯುವುದು ಸಾಮಾನ್ಯವಾಗಿದೆ.

ವಿದೇಶಾಂಗ ಸಚಿವರ ಮಗ ಧ್ರುವ ಜೈಶಂಕರ್ ಒಬ್ಸರ್ವರ್ ರಿಸರ್ಚ್ ಫೌಂಡೇಶನ್‌ನಲ್ಲಿ ಕಳೆದ ವರ್ಷ ಯುಎಸ್‌ಎಗೆ ಸಂಬಂಧಿಸಿದ ವಿಷಯಗಳ ನಿರ್ದೇಶಕರಾದರು. ಚೀನಾ ದೇಶಕ್ಕೆ ಭಾರತದ ಮಾಜಿ ರಾಯಭಾರಿಯೂ ಆಗಿರುವ ವಿದೇಶಾಂಗ ಸಚಿವರು ಓಆರ್‌ಎಫ್‌ಗೆ ನಿಯಮಿತವಾಗಿ ಭೇಟಿ ನೀಡಿ, ವಿದೇಶಾಂಗ ನೀತಿಗಳಿಗೆ ಸಂಬಂಧಿಸಿದ ವಿಷಯಗಳ ಮೇಲೆ ಉಪನ್ಯಾಸಗಳನ್ನು ನೀಡುತ್ತಾರೆ.

ಧ್ರುವ ಜೈಶಂಕರ್ ಒಬ್ಸರ್ವರ್ ರಿಸರ್ಚ್ ಫೌಂಡೇಶನ್‌ನಲ್ಲಿ ಮಾತನಾಡುತ್ತಿರುವುದು

ಜೈಶಂಕರ್ ಅವರ ಓಆರ್‌ಎಫ್‌ನ ವೆಬ್‌ಸೈಟಿನಲ್ಲಿ ವಿದೇಶಿ ದಾನಿಗಳ ಪಟ್ಟಿಯನ್ನು ನೀಡಲಾಗಿದ್ದು, ಅವರಿಂದ ಪಡೆದ ಹಣದ ಮೊತ್ತವನ್ನೂ ನಮೂದಿಸಲಾಗಿದೆ. ಅದರಂತೆ, ಓಆರ್‌ಎಫ್ 2016ಲ್ಲಿ ಚೀನಾದ ಉಪರಾಯಭಾರಿ (ಕಾನ್ಸ್ಯೂಲೇಟ್ ಜನರಲ್)ಯಿಂದ ಒಟ್ಟು 1.25 ಕೋಟಿ ರೂ. ಮೊತ್ತದ ಮೂರು ದೇಣಿಗಳನ್ನು ಮತ್ತು ಮರುವರ್ಷ 50 ಲಕ್ಷ ರೂ.ಗಳ ದೇಣಿಗೆಯನ್ನು ಪಡೆದಿತ್ತು.

ಸಂಸ್ಥೆಯು ಕೊಲ್ಕತ್ತಾದ “ಕಾನ್ಸ್ಯೂಲೇಟ್ ಜನರಲ್ ಆಫ್ ರಿಪಬ್ಲಿಕ್ ಆಫ್ ಚೈನಾ”ದಿಂದ ಎಪ್ರಿಲ್ 29, 2016ರಂದು 7.7 ಲಕ್ಷ ರೂ., ಅದೇ ವರ್ಷ ನವಂಬರ್ 4ರಂದು 11.55 ಲಕ್ಷ ರೂ. ಮತ್ತೊಮ್ಮೆ ಡಿಸೆಂಬರ್ 1, 2017ರಂದು 50 ಲಕ್ಷ ರೂ. ದೇಣಿಗೆ ಪಡೆದಿದೆ.

ವಿವೇಕಾನಂದ ಇಂಟರ್ನ್ಯಾಷನಲ್ ಫೌಂಡೇಶನ್ ತಾನು ಸಂಬಂಧ ಹೊಂದಿರುವ ಚೀನಾದ ಸಂಸ್ಥೆಗಳ ಪಟ್ಟಿ ನೀಡಿದೆ. ಅವುಗಳೆಂದರೆ, ಬೀಜಿಂಗ್‌ನ ಚೈನಾ ಇನ್ಸ್ಟಿಟ್ಯೂಟ್ ಆಫ್ ಇಂಟರ್ನ್ಯಾಷನಲ್ ಸ್ಟ್ರಾಟಜಿಕ್ ಸ್ಟಡೀಸ್; ಬೀಜಿಂಗ್‌ನ ಚೈನಾ ಇನ್ಸ್ಟಿಟ್ಯೂಟ್ ಆಫ್ ಇಂಟರ್ನ್ಯಾಷನಲ್  ಸ್ಟಡೀಸ್; ಬೀಜಿಂಗ್‌ನ ಸೆಂಟರ್ ಫಾರ್ ಸೌತ್ ಏಷ್ಯನ್ ಸ್ಟಡೀಸ್; ಬೀಜಿಂಗ್‌ನ ಪೆಕಿಂಗ್ ಯುನಿವರ್ಸಿಟಿ; ಕುನ್‌ಮಿಂಗ್‌ನ ಯುನಾನ್ ಯುನಿವರ್ಸಿಟಿ ಆಫ್ ಫೈನಾನ್ಸ್ ಎಂಡ್ ಇಕನಾಮಿಕ್ಸ್‌ನ ರಿಸರ್ಚ್ ಇನ್ಸ್ಟಿಟ್ಯೂಟ್ ಫಾರ್ ಇಂಡಿಯನ್ ಓಶನ್ ಸ್ಟಡೀಸ್; ಬೀಜಿಂಗ್‌ನ ಚೈನೀಸ್ ಅಕಾಡೆಮಿ ಆಫ್ ಸೋಷಿಯಲ್ ಸಾಯನ್ಸಸ್‌ನ ನ್ಯಾಷನಲ್ ಇನ್‌ಸ್ಟಿಟ್ಯೂಟ್ ಆಫ್ ಇಂಟರ್ನ್ಯಾಷನಲ್ ಸ್ಟ್ರಾಟಜಿ; ಚೆಂಗ್ಡೂವಿನ ಸೆಂಟರ್ ಫಾರ್ ಸೌತ್ ಏಷ್ಯಾ ಎಂಡ್ ವೆಸ್ಟ್ ಚೈನಾ ಕೊಅಪರೇಷನ್ ಎಂಡ್ ಡೆವಲಪ್‌ಮೆಂಟ್ ಯುನಿವರ್ಸಿಟಿ; ಚೆಂಗ್ಡೂವಿನ ಸಿಚುವಾನ್ ಯುನಿವರ್ಸಿಟಿಯ ಇನ್ಸ್ಟಿಟ್ಯೂಟ್ ಆಫ್ ಸೌತ್ ಏಷ್ಯನ್ ಸ್ಟಡೀಸ್; ಬೀಜಿಂಗ್‌ನ ಸಿಲ್ಕ್ ರೋಡ್ ಥಿಂಕ್ ಟ್ಯಾಂಕ್ ನೆಟ್‌ವರ್ಕ್ ಡೆವಲಪ್‌ಮೆಂಟ್ ರಿಸರ್ಚ್ ಕೌನ್ಸಿಲ್; ಮತ್ತು ಶೆನ್‌ಝೆನ್‌ನ ಸೆಂಟರ್ ಫಾರ್ ಇಂಡಿಯನ್ ಸ್ಟಡೀಸ್.

ಭಾರತದಲ್ಲಿ ಹೂಡಿಕೆಯ ಸಾಧ್ಯತೆಗಳ ಕುರಿತು ಒಆರ್‌ಎಫ್‌ ಏರ್ಪಡಿಸಿದ್ದ ಕಾರ್ಯಕ್ರಮದಲ್ಲಿ ಚೀನಾದ ಪ್ರತಿನಿಧಿಗಳು ಭಾಗವಹಿಸಿರುವುದು

ರಕ್ಷಣಾ ವಲಯದ ಮೂಲಗಳ ಪ್ರಕಾರ ಈ ಎರಡು ಚಿಂತನಾ ಚಾವಡಿಗಳ ಸದಸ್ಯರಿಗೆ ಆಡಳಿತದ ನಾರ್ಥ್ ಬ್ಲಾಕ್ ಮತ್ತು ಸೌತ್ ಬ್ಲಾಕ್ (ಹಣಕಾಸು ಮತ್ತು ವಿದೇಶಾಂಗ ಸಚಿವಾಲಯಗಳು)ಗಳಿಗೆ ಸಾಕಷ್ಟು ಮುಕ್ತವಾದ ಪ್ರವೇಶವಿದೆ.

ಎರಡೂ ಸಂಸ್ಥೆಗಳನ್ನು ಇ- ಮೈಲ್ ಮತ್ತು ಟ್ವಿಟ್ಟರ್ ಮೂಲಕ ಸಂಪರ್ಕಿಸಿದಾಗ ಯಾವುದೇ ವಿವರಣೆ ಬಂದಿಲ್ಲವಾದರೂ, ಈ ವರದಿಯು ಈ ದೇಣಿಗೆಗಳು ಕಾನೂನುಬದ್ಧವಲ್ಲ ಎಂದು ಸೂಚಿಸುತ್ತಿಲ್ಲ.

ಆದರೆ, ತನ್ನ ವಿದೇಶಾಂಗ ಸಚಿವರು ಮತ್ತು ಸರಕಾರದ ಭದ್ರತಾ ಸಲಹೆಗಾರರು ಭಾಗಿಯಾಗಿರುವ ಮತ್ತು ತನಗೆ ನಿಕಟವಾಗಿರುವ ಸಂಸ್ಥೆಗಳು ಚೀನಾದ ಸರಕಾರ ಮತ್ತು ಸಂಸ್ಥೆಗಳಿಂದ ದೇಣಿಗೆ ಪಡೆದಿರುವಾಗ, ಒಂದೂವರೆ ದಶಕದ ಹಿಂದೆ ಕಾಂಗ್ರೆಸ್ ಪಡೆದುಕೊಂಡ ದೇಣಿಗೆಯನ್ನು  ಹಿಡಿದುಕೊಂಡು ರಾಷ್ಟ್ರೀಯ ಭದ್ರತಾ ಪ್ರಶ್ನೆಯನ್ನು ಎತ್ತಿರುವ ಬಿಜೆಪಿ ನಡೆಯು ತನ್ನ ಬಟ್ಟಲಿನಲ್ಲಿ ಹೆಗ್ಗಣ ಇಟ್ಟುಕೊಂಡು, ಕಾಂಗ್ರೆಸ್ ಬಟ್ಟಲಿನಲ್ಲಿ ನೊಣವನ್ನು ತೋರಿಸಿದಂತಾಗಿದೆ.

ಕೃಪೆ: ಟೆಲಿಗ್ರಾಫ್‌ಇಂಡಿಯಾ

ಅನುವಾದ: ನಿಖಲ್ ಕೋಲ್ಪೆ


ಭಾರತದಲ್ಲಿ ನಿತ್ಯ ಐದು ಕಸ್ಟಡಿ ಸಾವು; ಬಹುತೇಕರು ಮುಸ್ಲಿಮರು, ದಲಿತರು ಮತ್ತು ಅಂಚಿಗೆ ತಳ್ಳಲ್ಪಟ್ಟವರು!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೇವಲ ಪ್ರತಿಭಟಿಸಿದ್ದಕ್ಕೆ ವಿದ್ಯಾರ್ಥಿಗಳು ಜೈಲುಪಾಲು; ಗಂಗೆಯ ದೋಣಿಯಲ್ಲಿ ಬಿರಿಯಾನಿ ತಿಂದವರಿಗೂ ಸಿಗುತ್ತಿಲ್ಲ ಜಾಮೀನು : ನ್ಯಾಯಮೂರ್ತಿ ಉಜ್ಜಲ್ ಭುಯಾನ್ ಕಳವಳ

ಭಾರತದಲ್ಲಿ ಭಿನ್ನಾಭಿಪ್ರಾಯಗಳನ್ನು ಗೌರವಿಸುವ ಮತ್ತು ಅವುಗಳಿಗೆ ಅವಕಾಶ ನೀಡುವ ಸಾರ್ವಜನಿಕ ಸ್ಥಳಗಳು ಎಷ್ಟು ಕಡಿಮೆಯಾಗುತ್ತಿವೆ ಎಂದರೆ, ತಮ್ಮ ಹಕ್ಕುಗಳಿಗಾಗಿ ಪ್ರತಿಭಟಿಸುವ ವಿದ್ಯಾರ್ಥಿಗಳನ್ನು ಬಂಧಿಸಿ ಅವರಿಗೆ ಜಾಮೀನು ನಿರಾಕರಿಸಲಾಗುತ್ತಿದೆ ಎಂದು ಸುಪ್ರೀಂ ಕೋರ್ಟ್‌ನ ನ್ಯಾಯಮೂರ್ತಿ...

ಪ.ಬಂಗಾಳ: ನೂತನ ‘ಗೂಂಡಾ ಕಾಯ್ದೆ’ ಅಡಿ NEET ಪ್ರತಿಭಟನೆಯಲ್ಲಿ ಭಾಗಿಯಾದ 10 ಮುಸ್ಲಿಂ ಯುವಕರು ಸೇರಿದಂತೆ 11 ಜನರ ಬಂಧನ 

ಕೋಲ್ಕತ್ತಾ: ಕೇಂದ್ರದ ನರೇಂದ್ರ ಮೋದಿ ಸರ್ಕಾರದ ಶಿಕ್ಷಣ ಕ್ಷೇತ್ರದ ವೈಫಲ್ಯಗಳು ಹಾಗೂ ನೀಟ್-ಯುಜಿ (NEET-UG) ಪ್ರಶ್ನೆ ಪತ್ರಿಕೆ ಸೋರಿಕೆ ಹಗರಣವನ್ನು ಖಂಡಿಸಿ ಶುಕ್ರವಾರ ಕೋಲ್ಕತ್ತಾದಲ್ಲಿ ನಡೆದ ಬೃಹತ್ ವಿದ್ಯಾರ್ಥಿ ಪ್ರತಿಭಟನೆಯು ತೀವ್ರ ರಾಜಕೀಯ...

ಪೊಲೀಸರ ಅನುಮತಿ ಪಡೆದಿದ್ದರೂ ನೀಟ್ ಪ್ರತಿಭಟನೆಗೆ ವಾಟ್ಸಾಪ್ ಗ್ರೂಪ್ ರಚಿಸಿದ್ದಕ್ಕಾಗಿ ಅಸ್ಸಾಂನಲ್ಲಿ ಮೂವರು ಮುಸ್ಲಿಂ ವಿದ್ಯಾರ್ಥಿಗಳ ಬಂಧನ

ಅಸ್ಸಾಂನಲ್ಲಿ ಬಿಜೆಪಿ ಸರ್ಕಾರದ ಕೋಮುವಾದಿ ಧೋರಣೆ ಮತ್ತು ಪ್ರಜಾಸತ್ತಾತ್ಮಕ ಹಕ್ಕುಗಳ ದಮನದ ದಾರುಣ ಚಿತ್ರಣವೊಂದು ಮತ್ತೆ ಮುನ್ನೆಲೆಗೆ ಬಂದಿದೆ. ದೇಶಾದ್ಯಂತ ಸದ್ದು ಮಾಡಿದ್ದ 'ನೀಟ್' (NEET) ಅಕ್ರಮಗಳ ವಿರುದ್ಧ ಧ್ವನಿ ಎತ್ತಲು ಮತ್ತು...

‘ವಿದ್ಯಾರ್ಥಿಗಳ ಮೇಲಿನ ವಿಕೃತ ದಾಳಿಗೆ ನಿಮ್ಮ ಸಮ್ಮತಿ ಇತ್ತೇ?’: ಪತ್ರದ ಮೂಲಕ ಅಮಿತ್ ಶಾಗೆ ರಾಹುಲ್ ಗಾಂಧಿ ಪ್ರಶ್ನೆ

ನವದೆಹಲಿ: ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ ಕಾರಣವಾದ ದೇಶವ್ಯಾಪಿ ವಿದ್ಯಾರ್ಥಿ ಆಂದೋಲನದ ವೇಳೆ ದೆಹಲಿ ಪೊಲೀಸರು ನಡೆಸಿದ ಭೀಕರ ದೌರ್ಜನ್ಯ ಮತ್ತು ಮಿತಿಮೀರಿದ ಬಲಪ್ರಯೋಗದ ವಿರುದ್ಧ ಲೋಕಸಭೆಯ ವಿರೋಧ...

‘ಮಗ ಬೇಗನೆ ಮನೆಗೆ ಬರಲಿ..’; ಭಾವುಕರಾದ ಅಭಿಜೀತ್ ದಿಪ್ಕೆ ಅವರ ಪೋಷಕರು

ಸಿಜೆಪಿ ಸಂಸ್ಥಾಪಕ ಅಭಿಜೀತ್ ದಿಪ್ಕೆ ನೇತೃತ್ವದಲ್ಲಿ ನಡೆದ ಅಸಾಧಾರಣ ಹೋರಾಟವು ಕೇಂದ್ರ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜಿನಾಮೆಯಲ್ಲಿ ಅಂತಿಮವಾಗಿದೆ. ಈ ಕುರಿತು ಮಾಧ್ಯಮಗಳಿಗೆ ಪ್ರತಿಕ್ರಿಯಿಸಿರುವ ಅವರ ಪೋಷಕರು ಭಾವುಕರಾಗಿದ್ದಾರೆ. "ಮಗ ಬೇಗನೆ ಮನೆಗೆ...

ಧರ್ಮೇಂದ್ರ ಪ್ರಧಾನ್ ರಾಜೀನಾಮೆ: ಕಾಕ್ರೋಚ್‌ಗಳಿಗೆ ಅಭಿನಂದಿಸಿದ ಸೋನಮ್ ವಾಂಗ್‌ಚುಕ್ – ಪ್ರಕಾಶ್‌ ರಾಜ್

ದೇಶದ ಯುವಜನರ ಹಲವು ದಿನಗಳ ಹೋರಾಟದ ಬಳಿಕ ಮೋದಿ ನೇತೃತ್ವದ ಕೇಂದ್ರ ಸರ್ಕಾರ ವಿದ್ಯಾರ್ಥಿಗಳ ಮುಂದೆ ಮಂಡಿಯೂರಿದೆ; ಸಚಿವ ಸ್ಥಾನಕ್ಕೆ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ನೀಡಿದ್ದಾರೆ. ಈ ಗೆಲುವಿಗೆ ಕಾಕ್ರೋಚ್ ಜನತಾ ಪಕ್ಷದ...

ಧರ್ಮೇಂದ್ರ ಪ್ರಧಾನ್ ರಾಜೀನಾಮೆಗೆ ಜಿರಳೆಗಳ ಹರ್ಷೋದ್ಗಾರ: ದೆಹಲಿ ಪೊಲೀಸರಿಂದ ಸಾರ್ವಜನಿಕ ಕ್ಷಮೆಯಾಚನೆಗೆ ಆಗ್ರಹ

ದೇಶಾದ್ಯಂತ ನಡೆಯುತ್ತಿರುವ ಸಿಜೆಪಿ ಪ್ರತಿಭಟನೆಗಳ ನಡುವೆ ನೀಟ್ ಪತ್ರಿಕೆ ಸೋರಿಕೆಗೆ ಸಂಬಂಧಿಸಿದಂತೆ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರು ರಾಜೀನಾಮೆ ನೀಡಿದ್ದು, ದೆಹಲಿಯ ಜಂತರ್‌ ಮಂತರ್‌ನಲ್ಲಿ ಪ್ರತಿಭಟನೆ ನಡೆಸುತ್ತಿರುವ ಕಾಕ್ರೋಚ್‌ ಜನತಾ...

ಕಾಕ್ರೋಚ್‌ಗಳಿಗೆ ಮಣಿದ ಮೋದಿ ಸರ್ಕಾರ; ಸಚಿವ ಸ್ಥಾನಕ್ಕೆ ಧರ್ಮೇಂದ್ರ ಪ್ರಧಾನ್‌ ರಾಜೀನಾಮೆ

ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ನೇತೃತ್ವದಲ್ಲಿ ದೇಶಾದ್ಯಂತ ನಡೆಯುತ್ತಿರುವ ಪ್ರತಿಭಟನೆಗಳ ಮಧ್ಯೆ, ನೀಟ್ ಅಕ್ರಮಗಳಿಗೆ ಸಂಬಂಧಿಸಿದಂತೆ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರು ಇಂದು (ಜುಲೈ 25) ಪ್ರಧಾನ ಮಂತ್ರಿಗಳಿಗೆ ತಮ್ಮ...

ಅಭಿಜೀತ್ ದಿಪ್ಕೆಗೆ ಟೈಫಾಯ್ಡ್; ಪ್ರತಿಭಟನೆ ಮುಂದುವರಿಯಲಿದೆ ಎಂದ ಸಿಜೆಪಿ ಸಂಸ್ಥಾಪಕ

ತನಗೆ ಟೈಫಾಯ್ಡ್ ಇರುವುದು ಪತ್ತೆಯಾಗಿದೆ ಎಂದು ಕಾಕ್ರೋಚ್‌ ಜನತಾ ಪಕ್ಷದ (ಸಿಜೆಪಿ) ಸಂಸ್ಥಾಪಕ ಅಭಿಜೀತ್ ದಿಪ್ಕೆ ಅವರು ಇಂದು ಹೇಳಿದ್ದಾರೆ. "ನನ್ನ ಅನಾರೋಗ್ಯವು ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ...

ಮುಸ್ಲಿಮರ ಬಗ್ಗೆ ನಿಂದನಾತ್ಮಕ, ಪ್ರಚೋದನಕಾರಿ ಹೇಳಿಕೆ : ಸಿ.ಟಿ ರವಿ ವಿರುದ್ಧ FIR

ಮುಸ್ಲಿಮರ ವಿರುದ್ಧ ನಿಂದನಾತ್ಮಕ ಹಾಗೂ ಪ್ರಚೋದನಕಾರಿ ಹೇಳಿಕೆ ನೀಡಿದ ವಿಧಾನಪರಿಷತ್ ಸದಸ್ಯ ಸಿ.ಟಿ ರವಿ ವಿರುದ್ಧ ಚಿಕ್ಕಮಗಳೂರು ನಗರ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದೆ. ನಗರದ ಜಾಮಿಯಾ ಮಸೀದಿಯ ಅಧ್ಯಕ್ಷ ಮುದಸ್ಸಿರ್ ಪಾಷಾ ಅವರು...