Homeಮುಖಪುಟಬಿಜೆಪಿ ನಿಕಟವರ್ತಿ ಸಂಸ್ಥೆಗಳ ಚೀನಾ ಹಣಕಾಸು ನಂಟು!: ವಿದೇಶಾಂಗ ಸಚಿವ, ರಕ್ಷಣಾ ಸಲಹೆಗಾರರ ಸಂಬಂಧಿತ ಸಂಸ್ಥೆಗಳಿಗೆ...

ಬಿಜೆಪಿ ನಿಕಟವರ್ತಿ ಸಂಸ್ಥೆಗಳ ಚೀನಾ ಹಣಕಾಸು ನಂಟು!: ವಿದೇಶಾಂಗ ಸಚಿವ, ರಕ್ಷಣಾ ಸಲಹೆಗಾರರ ಸಂಬಂಧಿತ ಸಂಸ್ಥೆಗಳಿಗೆ ಚೀನಾದ ಹಣ

ಓಆರ್‌ಎಫ್ 2016ಲ್ಲಿ ಚೀನಾದ ಉಪರಾಯಭಾರಿ (ಕಾನ್ಸ್ಯೂಲೇಟ್ ಜನರಲ್)ಯಿಂದ ಒಟ್ಟು 1.25 ಕೋಟಿ ರೂ. ಮೊತ್ತದ ಮೂರು ದೇಣಿಗಳನ್ನು ಮತ್ತು ಮರುವರ್ಷ 50 ಲಕ್ಷ ರೂ.ಗಳ ದೇಣಿಗೆಯನ್ನು ಪಡೆದಿತ್ತು.

- Advertisement -
- Advertisement -

ಚೀನಾದ ಸಂಸ್ಥೆಗಳಿಂದ ಹಣ ಸ್ವೀಕರಿಸುವುದೆಂದರೆ ಉಯ್ಯಾಲೆಯಲ್ಲಿ ಜಾಗ ಹಂಚಿಕೊಳ್ಳುವಷ್ಟೇ ಸಹಜ ಮತ್ತು ಸ್ವೀಕಾರಾರ್ಹ ಎನಿಸಿದ್ದ ಕಾಲವಿತ್ತು. ಹಾಗಿದ್ದರೂ ಬಿಜೆಪಿಯು ಗಾಲ್ವಾನ್ ಪ್ರಮಾದದಿಂದ ಜನರ ಗಮನವನ್ನು ಬೇರೆಡೆಗೆ ಸೆಳೆಯುವ ಧಾವಂತದಲ್ಲಿ ಒಂದು ಆಡುಮಾತನ್ನು ಮರೆತುಬಿಟ್ಟಿದೆ. ಅದೆಂದರೆ ನೀವು ಬೇರೆಯವರ ಕಡೆಗೆ ಬೆರಳು ತೋರಿಸಿದಾಗ ಮೂರು ಬೆರಳುಗಳು ನಿಮ್ಮನ್ನು ತೋರಿಸುತ್ತವೆ. ಈ ಪ್ರಕರಣದಲ್ಲಿ ಕನಿಷ್ಟ ಎರಡು ಬೆರಳುಗಳು ಬಿಜೆಪಿಯ ಆಂತರಿಕ ವ್ಯವಸ್ಥೆಯತ್ತ ತೋರಿಸುತ್ತಿವೆ.

ವಿದೇಶಾಂಗ ಮಂತ್ರಿ ಎಸ್. ಜೈಶಂಕರ್ ಅವರ ಮಗನ ವಿದೇಶಾಂಗ ಧೋರಣೆಯ ಚಿಂತನಾ ಚಾವಡಿಯಾದ “ದಿ ಒಬ್ಸರ್ವರ್ ರಿಸರ್ಚ್ ಫೌಂಡೇಶನ್” (ಓಆರ್‌ಎಫ್) 2016ರಲ್ಲಿ ಕೋಲ್ಕತ್ತಾದ ಸೇರಿದಂತೆ ಚೀನಾದ ಉಪರಾಯಭಾರ ಕಚೇರಿಗಳಿಂದ (ಕಾನ್ಸ್ಯೂಲೇಟ್) ಹಣಕಾಸು ಪಡೆದಿದೆ. ಅಲ್ಲದೇ ಓಆರ್‌ಎಫ್‌ಗೆ ರಿಲಯನ್ಸ್ ಇಂಡಸ್ಟ್ರೀಸ್‌ನ ಹಣಕಾಸು ಬೆಂಬಲವೂ ಇದೆ.

ಆರೆಸ್ಸೆಸ್‌ಗೆ ಹತ್ತಿರವಾಗಿರುವ ಇನ್ನೊಂದು ಚಿಂತನಾ ಚಾವಡಿಯಾಗಿರುವ ವಿವೇಕಾನಂದ ಇಂಟರ್‌ನ್ಯಾಷನಲ್ ಫೌಂಡೇಶನ್ ತನ್ನ ವೆಬ್‌ಸೈಟಿನಲ್ಲಿ, ತಾನು ವಿದೇಶಾಂಗ ಮತ್ತು ಕಾರ್ಯವ್ಯೂಹಾತ್ಮಕ ಧೋರಣೆಯ ವಿಷಯದಲ್ಲಿ ಒಂಬತ್ತು ಚೀನಿ ಸಂಸ್ಥೆಗಳೊಂದಿಗೆ ವೃತ್ತಿಪರ ಸಂಬಂಧ ಹೊಂದಿರುವುದಾಗಿ ಘೋಷಿಸಿದೆ.

ರಾಷ್ಟ್ರೀಯ ಭದ್ರತಾ ಸಲಹೆಗಾರ ಅಜಿತ್ ದೋವಲ್ ಈ (ವಿಐಎಫ್)ನ ಸ್ಥಾಪಕ ನಿರ್ದೇಶಕರಾಗಿದ್ದು, ಅದು ಬಿಜೆಪಿ ಮತ್ತು ಆರೆಸ್ಸೆಸ್ ಜೊತೆ ನಿಕಟ ನಂಟು ಹೊಂದಿದೆ. ಈ ಎರಡೂ ಸಂಸ್ಥೆಗಳು ಈ ಮಾಹಿತಿಗಳನ್ನು ಸಾರ್ವಜನಿಕ ವೇದಿಕೆಯಲ್ಲಿ ಹೇಳಿಕೊಂಡಿವೆ.

ವಿವೇಕಾನಂದ ಇಂಟರ್‌ನ್ಯಾಷನಲ್ ಫೌಂಡೇಶನ್ ನಲ್ಲಿ ಅಜಿತ್ ದೋವಲ್. (ಬಲದಿಂದ ಮೊದಲನೆಯವರು)

ಒಂದು ವೇಳೆ ಬಿಜೆಪಿಯು 2005-06ರಷ್ಟು ಹಿಂದೆ ಪಡೆದ ಹಣವನ್ನು ಆಧರಿಸಿ ಕಾಂಗ್ರೆಸ್ ಪಕ್ಷವು ಚೀನಾ ನಂಟು ಹೊಂದಿದೆ ಎಂದು ಆರೋಪಿಸಿ ನಗಣ್ಯ ವಿಷಯವನ್ನು ಒಂದು ದೊಡ್ಡ ರಾಷ್ಟ್ರೀಯ ಭದ್ರತಾ ವಿಷಯವನ್ನಾಗಿ ಮಾಡಲು ಹೊರಡದಿದ್ದರೆ, ಈ ಎರಡೂ ಸಂಸ್ಥೆಗೆ ದೇಣಿಗೆ ನೀಡಿದ ದಾನಿಗಳ ಗುರುತು ಪರಿಚಯ ಯಾರ ಗಮನವನ್ನೂ ಸೆಳೆಯುತ್ತಿರಲಿಲ್ಲ. ವಿಶ್ವದಾದ್ಯಂತ ಸಂಸ್ಥೆಗಳು ವಿದೇಶಿ ದೇಣಿಗೆ ಪಡೆಯುವುದು ಸಾಮಾನ್ಯವಾಗಿದೆ.

ವಿದೇಶಾಂಗ ಸಚಿವರ ಮಗ ಧ್ರುವ ಜೈಶಂಕರ್ ಒಬ್ಸರ್ವರ್ ರಿಸರ್ಚ್ ಫೌಂಡೇಶನ್‌ನಲ್ಲಿ ಕಳೆದ ವರ್ಷ ಯುಎಸ್‌ಎಗೆ ಸಂಬಂಧಿಸಿದ ವಿಷಯಗಳ ನಿರ್ದೇಶಕರಾದರು. ಚೀನಾ ದೇಶಕ್ಕೆ ಭಾರತದ ಮಾಜಿ ರಾಯಭಾರಿಯೂ ಆಗಿರುವ ವಿದೇಶಾಂಗ ಸಚಿವರು ಓಆರ್‌ಎಫ್‌ಗೆ ನಿಯಮಿತವಾಗಿ ಭೇಟಿ ನೀಡಿ, ವಿದೇಶಾಂಗ ನೀತಿಗಳಿಗೆ ಸಂಬಂಧಿಸಿದ ವಿಷಯಗಳ ಮೇಲೆ ಉಪನ್ಯಾಸಗಳನ್ನು ನೀಡುತ್ತಾರೆ.

ಧ್ರುವ ಜೈಶಂಕರ್ ಒಬ್ಸರ್ವರ್ ರಿಸರ್ಚ್ ಫೌಂಡೇಶನ್‌ನಲ್ಲಿ ಮಾತನಾಡುತ್ತಿರುವುದು

ಜೈಶಂಕರ್ ಅವರ ಓಆರ್‌ಎಫ್‌ನ ವೆಬ್‌ಸೈಟಿನಲ್ಲಿ ವಿದೇಶಿ ದಾನಿಗಳ ಪಟ್ಟಿಯನ್ನು ನೀಡಲಾಗಿದ್ದು, ಅವರಿಂದ ಪಡೆದ ಹಣದ ಮೊತ್ತವನ್ನೂ ನಮೂದಿಸಲಾಗಿದೆ. ಅದರಂತೆ, ಓಆರ್‌ಎಫ್ 2016ಲ್ಲಿ ಚೀನಾದ ಉಪರಾಯಭಾರಿ (ಕಾನ್ಸ್ಯೂಲೇಟ್ ಜನರಲ್)ಯಿಂದ ಒಟ್ಟು 1.25 ಕೋಟಿ ರೂ. ಮೊತ್ತದ ಮೂರು ದೇಣಿಗಳನ್ನು ಮತ್ತು ಮರುವರ್ಷ 50 ಲಕ್ಷ ರೂ.ಗಳ ದೇಣಿಗೆಯನ್ನು ಪಡೆದಿತ್ತು.

ಸಂಸ್ಥೆಯು ಕೊಲ್ಕತ್ತಾದ “ಕಾನ್ಸ್ಯೂಲೇಟ್ ಜನರಲ್ ಆಫ್ ರಿಪಬ್ಲಿಕ್ ಆಫ್ ಚೈನಾ”ದಿಂದ ಎಪ್ರಿಲ್ 29, 2016ರಂದು 7.7 ಲಕ್ಷ ರೂ., ಅದೇ ವರ್ಷ ನವಂಬರ್ 4ರಂದು 11.55 ಲಕ್ಷ ರೂ. ಮತ್ತೊಮ್ಮೆ ಡಿಸೆಂಬರ್ 1, 2017ರಂದು 50 ಲಕ್ಷ ರೂ. ದೇಣಿಗೆ ಪಡೆದಿದೆ.

ವಿವೇಕಾನಂದ ಇಂಟರ್ನ್ಯಾಷನಲ್ ಫೌಂಡೇಶನ್ ತಾನು ಸಂಬಂಧ ಹೊಂದಿರುವ ಚೀನಾದ ಸಂಸ್ಥೆಗಳ ಪಟ್ಟಿ ನೀಡಿದೆ. ಅವುಗಳೆಂದರೆ, ಬೀಜಿಂಗ್‌ನ ಚೈನಾ ಇನ್ಸ್ಟಿಟ್ಯೂಟ್ ಆಫ್ ಇಂಟರ್ನ್ಯಾಷನಲ್ ಸ್ಟ್ರಾಟಜಿಕ್ ಸ್ಟಡೀಸ್; ಬೀಜಿಂಗ್‌ನ ಚೈನಾ ಇನ್ಸ್ಟಿಟ್ಯೂಟ್ ಆಫ್ ಇಂಟರ್ನ್ಯಾಷನಲ್  ಸ್ಟಡೀಸ್; ಬೀಜಿಂಗ್‌ನ ಸೆಂಟರ್ ಫಾರ್ ಸೌತ್ ಏಷ್ಯನ್ ಸ್ಟಡೀಸ್; ಬೀಜಿಂಗ್‌ನ ಪೆಕಿಂಗ್ ಯುನಿವರ್ಸಿಟಿ; ಕುನ್‌ಮಿಂಗ್‌ನ ಯುನಾನ್ ಯುನಿವರ್ಸಿಟಿ ಆಫ್ ಫೈನಾನ್ಸ್ ಎಂಡ್ ಇಕನಾಮಿಕ್ಸ್‌ನ ರಿಸರ್ಚ್ ಇನ್ಸ್ಟಿಟ್ಯೂಟ್ ಫಾರ್ ಇಂಡಿಯನ್ ಓಶನ್ ಸ್ಟಡೀಸ್; ಬೀಜಿಂಗ್‌ನ ಚೈನೀಸ್ ಅಕಾಡೆಮಿ ಆಫ್ ಸೋಷಿಯಲ್ ಸಾಯನ್ಸಸ್‌ನ ನ್ಯಾಷನಲ್ ಇನ್‌ಸ್ಟಿಟ್ಯೂಟ್ ಆಫ್ ಇಂಟರ್ನ್ಯಾಷನಲ್ ಸ್ಟ್ರಾಟಜಿ; ಚೆಂಗ್ಡೂವಿನ ಸೆಂಟರ್ ಫಾರ್ ಸೌತ್ ಏಷ್ಯಾ ಎಂಡ್ ವೆಸ್ಟ್ ಚೈನಾ ಕೊಅಪರೇಷನ್ ಎಂಡ್ ಡೆವಲಪ್‌ಮೆಂಟ್ ಯುನಿವರ್ಸಿಟಿ; ಚೆಂಗ್ಡೂವಿನ ಸಿಚುವಾನ್ ಯುನಿವರ್ಸಿಟಿಯ ಇನ್ಸ್ಟಿಟ್ಯೂಟ್ ಆಫ್ ಸೌತ್ ಏಷ್ಯನ್ ಸ್ಟಡೀಸ್; ಬೀಜಿಂಗ್‌ನ ಸಿಲ್ಕ್ ರೋಡ್ ಥಿಂಕ್ ಟ್ಯಾಂಕ್ ನೆಟ್‌ವರ್ಕ್ ಡೆವಲಪ್‌ಮೆಂಟ್ ರಿಸರ್ಚ್ ಕೌನ್ಸಿಲ್; ಮತ್ತು ಶೆನ್‌ಝೆನ್‌ನ ಸೆಂಟರ್ ಫಾರ್ ಇಂಡಿಯನ್ ಸ್ಟಡೀಸ್.

ಭಾರತದಲ್ಲಿ ಹೂಡಿಕೆಯ ಸಾಧ್ಯತೆಗಳ ಕುರಿತು ಒಆರ್‌ಎಫ್‌ ಏರ್ಪಡಿಸಿದ್ದ ಕಾರ್ಯಕ್ರಮದಲ್ಲಿ ಚೀನಾದ ಪ್ರತಿನಿಧಿಗಳು ಭಾಗವಹಿಸಿರುವುದು

ರಕ್ಷಣಾ ವಲಯದ ಮೂಲಗಳ ಪ್ರಕಾರ ಈ ಎರಡು ಚಿಂತನಾ ಚಾವಡಿಗಳ ಸದಸ್ಯರಿಗೆ ಆಡಳಿತದ ನಾರ್ಥ್ ಬ್ಲಾಕ್ ಮತ್ತು ಸೌತ್ ಬ್ಲಾಕ್ (ಹಣಕಾಸು ಮತ್ತು ವಿದೇಶಾಂಗ ಸಚಿವಾಲಯಗಳು)ಗಳಿಗೆ ಸಾಕಷ್ಟು ಮುಕ್ತವಾದ ಪ್ರವೇಶವಿದೆ.

ಎರಡೂ ಸಂಸ್ಥೆಗಳನ್ನು ಇ- ಮೈಲ್ ಮತ್ತು ಟ್ವಿಟ್ಟರ್ ಮೂಲಕ ಸಂಪರ್ಕಿಸಿದಾಗ ಯಾವುದೇ ವಿವರಣೆ ಬಂದಿಲ್ಲವಾದರೂ, ಈ ವರದಿಯು ಈ ದೇಣಿಗೆಗಳು ಕಾನೂನುಬದ್ಧವಲ್ಲ ಎಂದು ಸೂಚಿಸುತ್ತಿಲ್ಲ.

ಆದರೆ, ತನ್ನ ವಿದೇಶಾಂಗ ಸಚಿವರು ಮತ್ತು ಸರಕಾರದ ಭದ್ರತಾ ಸಲಹೆಗಾರರು ಭಾಗಿಯಾಗಿರುವ ಮತ್ತು ತನಗೆ ನಿಕಟವಾಗಿರುವ ಸಂಸ್ಥೆಗಳು ಚೀನಾದ ಸರಕಾರ ಮತ್ತು ಸಂಸ್ಥೆಗಳಿಂದ ದೇಣಿಗೆ ಪಡೆದಿರುವಾಗ, ಒಂದೂವರೆ ದಶಕದ ಹಿಂದೆ ಕಾಂಗ್ರೆಸ್ ಪಡೆದುಕೊಂಡ ದೇಣಿಗೆಯನ್ನು  ಹಿಡಿದುಕೊಂಡು ರಾಷ್ಟ್ರೀಯ ಭದ್ರತಾ ಪ್ರಶ್ನೆಯನ್ನು ಎತ್ತಿರುವ ಬಿಜೆಪಿ ನಡೆಯು ತನ್ನ ಬಟ್ಟಲಿನಲ್ಲಿ ಹೆಗ್ಗಣ ಇಟ್ಟುಕೊಂಡು, ಕಾಂಗ್ರೆಸ್ ಬಟ್ಟಲಿನಲ್ಲಿ ನೊಣವನ್ನು ತೋರಿಸಿದಂತಾಗಿದೆ.

ಕೃಪೆ: ಟೆಲಿಗ್ರಾಫ್‌ಇಂಡಿಯಾ

ಅನುವಾದ: ನಿಖಲ್ ಕೋಲ್ಪೆ


ಭಾರತದಲ್ಲಿ ನಿತ್ಯ ಐದು ಕಸ್ಟಡಿ ಸಾವು; ಬಹುತೇಕರು ಮುಸ್ಲಿಮರು, ದಲಿತರು ಮತ್ತು ಅಂಚಿಗೆ ತಳ್ಳಲ್ಪಟ್ಟವರು!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕರಾವಳಿ ಸಮಸ್ಯೆಗೆ ಶಾಶ್ವತ ಪರಿಹಾರದ ಭರವಸೆ: ಸಚಿವ ಕೆ.ಎಸ್.ಬಸವಂತಪ್ಪ

ರಾಜ್ಯದ ಕರಾವಳಿ ಭಾಗದಲ್ಲಿ ಮೀನುಗಾರಿಕೆ ಕ್ಷೇತ್ರದ ಅಭಿವೃದ್ಧಿ ಕುಂಠಿತವಾಗುತ್ತಿರುವ ಕುರಿತು ಕಳವಳ ವ್ಯಕ್ತವಾಗುತ್ತಿರುವ ಬೆನ್ನಲ್ಲೇ, ಸ್ಥಳೀಯ ಸಮಸ್ಯೆಗಳಿಗೆ ಸ್ಪಂದಿಸಲು ಸರ್ಕಾರ ಮುಂದಾಗಿದೆ. ಕರಾವಳಿ ವ್ಯಾಪ್ತಿಯ ಬಂದರುಗಳು, ಮೀನು ಮಾರುಕಟ್ಟೆಗಳು, ಬ್ರೇಕ್‌ವಾಟರ್‌ಗಳು ಹಾಗೂ ಜೆಟ್ಟಿಗಳಿಗೆ...

SIR ಪ್ರಕ್ರಿಯೆಯಲ್ಲಿ ಯಾರ ಹೆಸರು ಬಿಟ್ಟುಹೋಗಬಾರದು: PRC ನೀಡಲು ವಿಳಂಬ ಬೇಡ ಡಾ. ಜಿ. ಪರಮೇಶ್ವರ್

ಉದ್ಯೋಗ ಅಥವಾ ವಿವಿಧ ಕಾರಣಗಳಿಂದಾಗಿ ತಮ್ಮ ಸ್ವಂತ ಊರು ತೊರೆದು ಬೇರೆಡೆಗೆ ಸ್ಥಳಾಂತರಗೊಂಡು ನೆಲೆಸಿರುವ ರಾಜ್ಯದ ಯಾವುದೇ ನಾಗರಿಕರು ಯಾವುದೇ ಕಾರಣಕ್ಕೂ ಮತದಾರರ ಪಟ್ಟಿಯಿಂದ ಹೊರಗುಳಿಯಬಾರದು ಎಂದು ಉಪಮುಖ್ಯಮಂತ್ರಿ ಹಾಗೂ ಕಂದಾಯ ಸಚಿವರಾದ...

ಬಿಹಾರ ಪ್ರವಾಹದ ನಡುವೆ ಮೋದಿ ಹುಟ್ಟುಹಬ್ಬದ ಪ್ರಯುಕ್ತ ದೀಪೋತ್ಸವ; ‘ಆಶೀರ್ವಾದ್ ಕಾ ದಿಯಾ’ ಕಾರ್ಯಕ್ರಮಕ್ಕೆ ತೇಜಸ್ವಿ ಯಾದವ್ ಆಕ್ಷೇಪ

ಬಿಹಾರದಲ್ಲಿ ಪ್ರವಾಹ ಪರಿಸ್ಥಿತಿ ಮುಂದುವರಿದಿರುವ ನಡುವೆಯೇ ಪ್ರಧಾನಿ ನರೇಂದ್ರ ಮೋದಿ ಅವರ ಹುಟ್ಟುಹಬ್ಬದ ಅಂಗವಾಗಿ ಸೆಪ್ಟೆಂಬರ್ 17ರಂದು ‘ಆಶೀರ್ವಾದ್ ಕಾ ದಿಯಾ’ ಕಾರ್ಯಕ್ರಮ ಆಯೋಜಿಸಿರುವುದು ರಾಜಕೀಯ ಚರ್ಚೆಗೆ ಕಾರಣವಾಗಿದೆ. ರಾಜ್ಯದ 15 ಜಿಲ್ಲೆಗಳಲ್ಲಿ...

ಉಮರ್ ಖಾಲಿದ್ ಅವರನ್ನು ‘ದೇಶಪ್ರೇಮಿ’ ಎಂದ ಬಿ.ಕೆ. ಹರಿಪ್ರಸಾದ್; ವಿಧಾನಸೌಧ ಪೊಲೀಸ್ ಠಾಣೆಯಲ್ಲಿ ದೂರು ದಾಖಲು

ಬೆಂಗಳೂರಿನ ರಾಷ್ಟ್ರೀಯ ಕಾನೂನು ಶಾಲೆ (ಎನ್‌ಎಲ್‌ಎಸ್‌ಐಯು) ಯೂನಿವರ್ಸಿಟಿಯಲ್ಲಿ ಜೈಲಿನಲ್ಲಿರುವ ಹೋರಾಟಗಾರ ಉಮರ್ ಖಾಲಿದ್ ಕುರಿತಾದ ಸಾಕ್ಷ್ಯಚಿತ್ರಕ್ಕೆ ಸಂಬಂಧಿಸಿದಂತೆ ನಡೆಯುತ್ತಿರುವ ವಿವಾದದ ನಡುವೆ, ಅವರನ್ನು "ರಾಷ್ಟ್ರಪ್ರೇಮಿ" ಎಂದು ಕರೆದಿರುವ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ...

ಇಂದಿರಾ ಗಾಂಧಿಯಂತೆ ನೇರವಾಗಿ ನಿಲ್ಲಿ, ಟ್ರಂಪ್ ಮುಂದೆ ಮಂಡಿಯೂರುತ್ತಿದ್ದೀರಿ: ‘UPI ಟ್ಯಾಕ್ಸ್’ ಬಗ್ಗೆ ಮೋದಿ ವಿರುದ್ಧ ರಾಹುಲ್ ವಾಗ್ದಾಳಿ!

ಯುಪಿಐ (UPI) ವಹಿವಾಟುಗಳಿಗೆ ಸಂಬಂಧಿಸಿದಂತೆ ಜಾರಿಯಾಗುತ್ತಿರುವ ಹೊಸ 'ಮರ್ಚೆಂಟ್ ಡಿಸ್ಕೌಂಟ್ ರೇಟ್' (MDR) ವ್ಯವಸ್ಥೆ ಇದೀಗ ತೀವ್ರ ರಾಜಕೀಯ ಸಂಘರ್ಷಕ್ಕೆ ಕಾರಣವಾಗಿದೆ. ಇದನ್ನು "ಬ್ಯಾಂಕ್‌ಗಳು ವಿಧಿಸುವ ಸೇವಾ ಶುಲ್ಕ" ಎಂದು ಸರ್ಕಾರ ಸಮರ್ಥಿಸಿಕೊಳ್ಳುತ್ತಿದ್ದರೂ,...

ಲಿಯೋನೆಲ್ ಮೆಸ್ಸಿ ಕೇರಳ ಭೇಟಿ ಪ್ರಕರಣ: ಕೊಚ್ಚಿಯ ‘ರಿಪೋರ್ಟರ್ ಟಿವಿ’ ಕಚೇರಿಯಲ್ಲಿ ಪೊಲೀಸರಿಂದ ಶೋಧ

ಮಲಯಾಳಂ ಸುದ್ದಿ ವಾಹಿನಿ 'ರಿಪೋರ್ಟರ್ ಟಿವಿ'ಯ ಕೊಚ್ಚಿ ಪ್ರಧಾನ ಕಚೇರಿಯಲ್ಲಿ ಬುಧವಾರ (ಸೆ.16) ಮುಂಜಾನೆ ಪೊಲೀಸ್ ತಂಡವೊಂದು ಶೋಧ ಕಾರ್ಯ ನಡೆಸಿದ್ದು, ಇದರಿಂದಾಗಿ ತನ್ನ ಸುದ್ದಿ ಪ್ರಸಾರ ಕಾರ್ಯಾಚರಣೆಗೆ ಅಡಚಣೆಯಾಗಿದೆ ಎಂದು ವಾಹಿನಿ...

‘ಏಕರೂಪತೆ ಸಮಾನತೆಯಲ್ಲ’: 2029ಕ್ಕೂ ಮುನ್ನ 21 ರಾಜ್ಯಗಳಲ್ಲಿ ಯುಸಿಸಿ ಜಾರಿ ಘೋಷಿಸಿದ ಅಮಿತ್ ಶಾಗೆ ಪ್ರತಿಪಕ್ಷಗಳ ತೀವ್ರ ತಿರುಗೇಟು

ನವದೆಹಲಿ/ಮುಂಬೈ: 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ನೇತೃತ್ವದ ಎನ್‌ಡಿಎ ಸರ್ಕಾರಗಳಿರುವ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆ (ಯುಸಿಸಿ) ಜಾರಿಗೆ ತರಲಾಗುವುದು ಎಂಬ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ...

KPSC ಅಧ್ಯಕ್ಷರ ಪುತ್ರಿಯ ನಕಲಿ ಪ್ರಮಾಣಪತ್ರ ಹಗರಣ: ಅಕ್ರಮಕ್ಕೆ ಸಾಥ್ ನೀಡಿದ್ದ ಅಧಿಕಾರಿಯ ಜಾಮೀನು ಅರ್ಜಿ ವಜಾ

ಕೆಪಿಎಸ್‌ಸಿ (KPSC) ಅಧ್ಯಕ್ಷರ ಪುತ್ರಿಗೆ ಅಕ್ರಮವಾಗಿ ನಕಲಿ ಆದಾಯ ಪ್ರಮಾಣಪತ್ರ ನೀಡಿದ ಆರೋಪ ಎದುರಿಸುತ್ತಿರುವ ಕಂದಾಯ ಅಧಿಕಾರಿಯ ನಿರೀಕ್ಷಣಾ ಜಾಮೀನು ಅರ್ಜಿಯನ್ನು ಬೆಂಗಳೂರಿನ ನಗರ ಸಿವಿಲ್ ಮತ್ತು ಸೆಷನ್ಸ್ ನ್ಯಾಯಾಲಯ ಮಂಗಳವಾರ ವಜಾಗೊಳಿಸಿದೆ....

ಬಂಗಾಳದಲ್ಲಿ ಬಿಜೆಪಿ ಸರ್ಕಾರದ ನಿರ್ಬಂಧ; ನೆಲಕಚ್ಚಿದ ದನದ ಮಾಂಸ ವ್ಯಾಪಾರ

ಪಶು ಹತ್ಯೆಯ ಕುರಿತು ಮುಖ್ಯಮಂತ್ರಿ ಸುವೇಂಧು ಅಧಿಕಾರಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಸೂಚನೆ ಹೊರಡಿಸಿದ ನಂತರ, ಮಾಂಸದ ವ್ಯಾಪಾರಿ ಮುಷ್ತಾಕ್ ಕಳೆದ ಮೂರು ತಿಂಗಳಿನಿಂದ ಒಂದು ಪೈಸೆಯನ್ನೂ ಗಳಿಸಿಲ್ಲ. "ಚುನಾವಣೆಯ ಕಾರಣದಿಂದ...

ತೀವ್ರಗೊಂಡ ಸೌದಿ-ಹೌತಿ ಸಂಘರ್ಷ : ಮಕ್ಕಾ ಗುರಿಯಾಗಿಸಿದ್ದ ಡ್ರೋನ್ ಹೊಡೆದುರುಳಿಸಿದ್ದೇವೆ ಎಂದ ಸೌದಿ; ತಳ್ಳಿಹಾಕಿದ ಹೌತಿ

ಯೆಮನ್‌ನ ರೆಬೆಲ್ ಗ್ರೂಪ್ ಹೌತಿ ಮತ್ತು ಸೌದಿ ಬೆಂಬಲಿತ ಪಡೆಗಳ ಸಂಘರ್ಷ ತೀವ್ರಗೊಂಡಿದ್ದು, ಇತಿಹಾಸದಲ್ಲೇ ಮೊದಲ ಬಾರಿಗೆ ಮುಸ್ಲಿಮರ ಪವಿತ್ರ ನಗರ ಮಕ್ಕಾದಲ್ಲಿ ಸೌದಿ ಅರೇಬಿಯಾದ ನಾಗರಿಕ ರಕ್ಷಣಾ (ಸಿವಿಲ್ ಡಿಫೆನ್ಸ್) ಇಲಾಖೆಯು...