Homeಮುಖಪುಟಬಿಜೆಪಿ ನಿಕಟವರ್ತಿ ಸಂಸ್ಥೆಗಳ ಚೀನಾ ಹಣಕಾಸು ನಂಟು!: ವಿದೇಶಾಂಗ ಸಚಿವ, ರಕ್ಷಣಾ ಸಲಹೆಗಾರರ ಸಂಬಂಧಿತ ಸಂಸ್ಥೆಗಳಿಗೆ...

ಬಿಜೆಪಿ ನಿಕಟವರ್ತಿ ಸಂಸ್ಥೆಗಳ ಚೀನಾ ಹಣಕಾಸು ನಂಟು!: ವಿದೇಶಾಂಗ ಸಚಿವ, ರಕ್ಷಣಾ ಸಲಹೆಗಾರರ ಸಂಬಂಧಿತ ಸಂಸ್ಥೆಗಳಿಗೆ ಚೀನಾದ ಹಣ

ಓಆರ್‌ಎಫ್ 2016ಲ್ಲಿ ಚೀನಾದ ಉಪರಾಯಭಾರಿ (ಕಾನ್ಸ್ಯೂಲೇಟ್ ಜನರಲ್)ಯಿಂದ ಒಟ್ಟು 1.25 ಕೋಟಿ ರೂ. ಮೊತ್ತದ ಮೂರು ದೇಣಿಗಳನ್ನು ಮತ್ತು ಮರುವರ್ಷ 50 ಲಕ್ಷ ರೂ.ಗಳ ದೇಣಿಗೆಯನ್ನು ಪಡೆದಿತ್ತು.

- Advertisement -
- Advertisement -

ಚೀನಾದ ಸಂಸ್ಥೆಗಳಿಂದ ಹಣ ಸ್ವೀಕರಿಸುವುದೆಂದರೆ ಉಯ್ಯಾಲೆಯಲ್ಲಿ ಜಾಗ ಹಂಚಿಕೊಳ್ಳುವಷ್ಟೇ ಸಹಜ ಮತ್ತು ಸ್ವೀಕಾರಾರ್ಹ ಎನಿಸಿದ್ದ ಕಾಲವಿತ್ತು. ಹಾಗಿದ್ದರೂ ಬಿಜೆಪಿಯು ಗಾಲ್ವಾನ್ ಪ್ರಮಾದದಿಂದ ಜನರ ಗಮನವನ್ನು ಬೇರೆಡೆಗೆ ಸೆಳೆಯುವ ಧಾವಂತದಲ್ಲಿ ಒಂದು ಆಡುಮಾತನ್ನು ಮರೆತುಬಿಟ್ಟಿದೆ. ಅದೆಂದರೆ ನೀವು ಬೇರೆಯವರ ಕಡೆಗೆ ಬೆರಳು ತೋರಿಸಿದಾಗ ಮೂರು ಬೆರಳುಗಳು ನಿಮ್ಮನ್ನು ತೋರಿಸುತ್ತವೆ. ಈ ಪ್ರಕರಣದಲ್ಲಿ ಕನಿಷ್ಟ ಎರಡು ಬೆರಳುಗಳು ಬಿಜೆಪಿಯ ಆಂತರಿಕ ವ್ಯವಸ್ಥೆಯತ್ತ ತೋರಿಸುತ್ತಿವೆ.

ವಿದೇಶಾಂಗ ಮಂತ್ರಿ ಎಸ್. ಜೈಶಂಕರ್ ಅವರ ಮಗನ ವಿದೇಶಾಂಗ ಧೋರಣೆಯ ಚಿಂತನಾ ಚಾವಡಿಯಾದ “ದಿ ಒಬ್ಸರ್ವರ್ ರಿಸರ್ಚ್ ಫೌಂಡೇಶನ್” (ಓಆರ್‌ಎಫ್) 2016ರಲ್ಲಿ ಕೋಲ್ಕತ್ತಾದ ಸೇರಿದಂತೆ ಚೀನಾದ ಉಪರಾಯಭಾರ ಕಚೇರಿಗಳಿಂದ (ಕಾನ್ಸ್ಯೂಲೇಟ್) ಹಣಕಾಸು ಪಡೆದಿದೆ. ಅಲ್ಲದೇ ಓಆರ್‌ಎಫ್‌ಗೆ ರಿಲಯನ್ಸ್ ಇಂಡಸ್ಟ್ರೀಸ್‌ನ ಹಣಕಾಸು ಬೆಂಬಲವೂ ಇದೆ.

ಆರೆಸ್ಸೆಸ್‌ಗೆ ಹತ್ತಿರವಾಗಿರುವ ಇನ್ನೊಂದು ಚಿಂತನಾ ಚಾವಡಿಯಾಗಿರುವ ವಿವೇಕಾನಂದ ಇಂಟರ್‌ನ್ಯಾಷನಲ್ ಫೌಂಡೇಶನ್ ತನ್ನ ವೆಬ್‌ಸೈಟಿನಲ್ಲಿ, ತಾನು ವಿದೇಶಾಂಗ ಮತ್ತು ಕಾರ್ಯವ್ಯೂಹಾತ್ಮಕ ಧೋರಣೆಯ ವಿಷಯದಲ್ಲಿ ಒಂಬತ್ತು ಚೀನಿ ಸಂಸ್ಥೆಗಳೊಂದಿಗೆ ವೃತ್ತಿಪರ ಸಂಬಂಧ ಹೊಂದಿರುವುದಾಗಿ ಘೋಷಿಸಿದೆ.

ರಾಷ್ಟ್ರೀಯ ಭದ್ರತಾ ಸಲಹೆಗಾರ ಅಜಿತ್ ದೋವಲ್ ಈ (ವಿಐಎಫ್)ನ ಸ್ಥಾಪಕ ನಿರ್ದೇಶಕರಾಗಿದ್ದು, ಅದು ಬಿಜೆಪಿ ಮತ್ತು ಆರೆಸ್ಸೆಸ್ ಜೊತೆ ನಿಕಟ ನಂಟು ಹೊಂದಿದೆ. ಈ ಎರಡೂ ಸಂಸ್ಥೆಗಳು ಈ ಮಾಹಿತಿಗಳನ್ನು ಸಾರ್ವಜನಿಕ ವೇದಿಕೆಯಲ್ಲಿ ಹೇಳಿಕೊಂಡಿವೆ.

ವಿವೇಕಾನಂದ ಇಂಟರ್‌ನ್ಯಾಷನಲ್ ಫೌಂಡೇಶನ್ ನಲ್ಲಿ ಅಜಿತ್ ದೋವಲ್. (ಬಲದಿಂದ ಮೊದಲನೆಯವರು)

ಒಂದು ವೇಳೆ ಬಿಜೆಪಿಯು 2005-06ರಷ್ಟು ಹಿಂದೆ ಪಡೆದ ಹಣವನ್ನು ಆಧರಿಸಿ ಕಾಂಗ್ರೆಸ್ ಪಕ್ಷವು ಚೀನಾ ನಂಟು ಹೊಂದಿದೆ ಎಂದು ಆರೋಪಿಸಿ ನಗಣ್ಯ ವಿಷಯವನ್ನು ಒಂದು ದೊಡ್ಡ ರಾಷ್ಟ್ರೀಯ ಭದ್ರತಾ ವಿಷಯವನ್ನಾಗಿ ಮಾಡಲು ಹೊರಡದಿದ್ದರೆ, ಈ ಎರಡೂ ಸಂಸ್ಥೆಗೆ ದೇಣಿಗೆ ನೀಡಿದ ದಾನಿಗಳ ಗುರುತು ಪರಿಚಯ ಯಾರ ಗಮನವನ್ನೂ ಸೆಳೆಯುತ್ತಿರಲಿಲ್ಲ. ವಿಶ್ವದಾದ್ಯಂತ ಸಂಸ್ಥೆಗಳು ವಿದೇಶಿ ದೇಣಿಗೆ ಪಡೆಯುವುದು ಸಾಮಾನ್ಯವಾಗಿದೆ.

ವಿದೇಶಾಂಗ ಸಚಿವರ ಮಗ ಧ್ರುವ ಜೈಶಂಕರ್ ಒಬ್ಸರ್ವರ್ ರಿಸರ್ಚ್ ಫೌಂಡೇಶನ್‌ನಲ್ಲಿ ಕಳೆದ ವರ್ಷ ಯುಎಸ್‌ಎಗೆ ಸಂಬಂಧಿಸಿದ ವಿಷಯಗಳ ನಿರ್ದೇಶಕರಾದರು. ಚೀನಾ ದೇಶಕ್ಕೆ ಭಾರತದ ಮಾಜಿ ರಾಯಭಾರಿಯೂ ಆಗಿರುವ ವಿದೇಶಾಂಗ ಸಚಿವರು ಓಆರ್‌ಎಫ್‌ಗೆ ನಿಯಮಿತವಾಗಿ ಭೇಟಿ ನೀಡಿ, ವಿದೇಶಾಂಗ ನೀತಿಗಳಿಗೆ ಸಂಬಂಧಿಸಿದ ವಿಷಯಗಳ ಮೇಲೆ ಉಪನ್ಯಾಸಗಳನ್ನು ನೀಡುತ್ತಾರೆ.

ಧ್ರುವ ಜೈಶಂಕರ್ ಒಬ್ಸರ್ವರ್ ರಿಸರ್ಚ್ ಫೌಂಡೇಶನ್‌ನಲ್ಲಿ ಮಾತನಾಡುತ್ತಿರುವುದು

ಜೈಶಂಕರ್ ಅವರ ಓಆರ್‌ಎಫ್‌ನ ವೆಬ್‌ಸೈಟಿನಲ್ಲಿ ವಿದೇಶಿ ದಾನಿಗಳ ಪಟ್ಟಿಯನ್ನು ನೀಡಲಾಗಿದ್ದು, ಅವರಿಂದ ಪಡೆದ ಹಣದ ಮೊತ್ತವನ್ನೂ ನಮೂದಿಸಲಾಗಿದೆ. ಅದರಂತೆ, ಓಆರ್‌ಎಫ್ 2016ಲ್ಲಿ ಚೀನಾದ ಉಪರಾಯಭಾರಿ (ಕಾನ್ಸ್ಯೂಲೇಟ್ ಜನರಲ್)ಯಿಂದ ಒಟ್ಟು 1.25 ಕೋಟಿ ರೂ. ಮೊತ್ತದ ಮೂರು ದೇಣಿಗಳನ್ನು ಮತ್ತು ಮರುವರ್ಷ 50 ಲಕ್ಷ ರೂ.ಗಳ ದೇಣಿಗೆಯನ್ನು ಪಡೆದಿತ್ತು.

ಸಂಸ್ಥೆಯು ಕೊಲ್ಕತ್ತಾದ “ಕಾನ್ಸ್ಯೂಲೇಟ್ ಜನರಲ್ ಆಫ್ ರಿಪಬ್ಲಿಕ್ ಆಫ್ ಚೈನಾ”ದಿಂದ ಎಪ್ರಿಲ್ 29, 2016ರಂದು 7.7 ಲಕ್ಷ ರೂ., ಅದೇ ವರ್ಷ ನವಂಬರ್ 4ರಂದು 11.55 ಲಕ್ಷ ರೂ. ಮತ್ತೊಮ್ಮೆ ಡಿಸೆಂಬರ್ 1, 2017ರಂದು 50 ಲಕ್ಷ ರೂ. ದೇಣಿಗೆ ಪಡೆದಿದೆ.

ವಿವೇಕಾನಂದ ಇಂಟರ್ನ್ಯಾಷನಲ್ ಫೌಂಡೇಶನ್ ತಾನು ಸಂಬಂಧ ಹೊಂದಿರುವ ಚೀನಾದ ಸಂಸ್ಥೆಗಳ ಪಟ್ಟಿ ನೀಡಿದೆ. ಅವುಗಳೆಂದರೆ, ಬೀಜಿಂಗ್‌ನ ಚೈನಾ ಇನ್ಸ್ಟಿಟ್ಯೂಟ್ ಆಫ್ ಇಂಟರ್ನ್ಯಾಷನಲ್ ಸ್ಟ್ರಾಟಜಿಕ್ ಸ್ಟಡೀಸ್; ಬೀಜಿಂಗ್‌ನ ಚೈನಾ ಇನ್ಸ್ಟಿಟ್ಯೂಟ್ ಆಫ್ ಇಂಟರ್ನ್ಯಾಷನಲ್  ಸ್ಟಡೀಸ್; ಬೀಜಿಂಗ್‌ನ ಸೆಂಟರ್ ಫಾರ್ ಸೌತ್ ಏಷ್ಯನ್ ಸ್ಟಡೀಸ್; ಬೀಜಿಂಗ್‌ನ ಪೆಕಿಂಗ್ ಯುನಿವರ್ಸಿಟಿ; ಕುನ್‌ಮಿಂಗ್‌ನ ಯುನಾನ್ ಯುನಿವರ್ಸಿಟಿ ಆಫ್ ಫೈನಾನ್ಸ್ ಎಂಡ್ ಇಕನಾಮಿಕ್ಸ್‌ನ ರಿಸರ್ಚ್ ಇನ್ಸ್ಟಿಟ್ಯೂಟ್ ಫಾರ್ ಇಂಡಿಯನ್ ಓಶನ್ ಸ್ಟಡೀಸ್; ಬೀಜಿಂಗ್‌ನ ಚೈನೀಸ್ ಅಕಾಡೆಮಿ ಆಫ್ ಸೋಷಿಯಲ್ ಸಾಯನ್ಸಸ್‌ನ ನ್ಯಾಷನಲ್ ಇನ್‌ಸ್ಟಿಟ್ಯೂಟ್ ಆಫ್ ಇಂಟರ್ನ್ಯಾಷನಲ್ ಸ್ಟ್ರಾಟಜಿ; ಚೆಂಗ್ಡೂವಿನ ಸೆಂಟರ್ ಫಾರ್ ಸೌತ್ ಏಷ್ಯಾ ಎಂಡ್ ವೆಸ್ಟ್ ಚೈನಾ ಕೊಅಪರೇಷನ್ ಎಂಡ್ ಡೆವಲಪ್‌ಮೆಂಟ್ ಯುನಿವರ್ಸಿಟಿ; ಚೆಂಗ್ಡೂವಿನ ಸಿಚುವಾನ್ ಯುನಿವರ್ಸಿಟಿಯ ಇನ್ಸ್ಟಿಟ್ಯೂಟ್ ಆಫ್ ಸೌತ್ ಏಷ್ಯನ್ ಸ್ಟಡೀಸ್; ಬೀಜಿಂಗ್‌ನ ಸಿಲ್ಕ್ ರೋಡ್ ಥಿಂಕ್ ಟ್ಯಾಂಕ್ ನೆಟ್‌ವರ್ಕ್ ಡೆವಲಪ್‌ಮೆಂಟ್ ರಿಸರ್ಚ್ ಕೌನ್ಸಿಲ್; ಮತ್ತು ಶೆನ್‌ಝೆನ್‌ನ ಸೆಂಟರ್ ಫಾರ್ ಇಂಡಿಯನ್ ಸ್ಟಡೀಸ್.

ಭಾರತದಲ್ಲಿ ಹೂಡಿಕೆಯ ಸಾಧ್ಯತೆಗಳ ಕುರಿತು ಒಆರ್‌ಎಫ್‌ ಏರ್ಪಡಿಸಿದ್ದ ಕಾರ್ಯಕ್ರಮದಲ್ಲಿ ಚೀನಾದ ಪ್ರತಿನಿಧಿಗಳು ಭಾಗವಹಿಸಿರುವುದು

ರಕ್ಷಣಾ ವಲಯದ ಮೂಲಗಳ ಪ್ರಕಾರ ಈ ಎರಡು ಚಿಂತನಾ ಚಾವಡಿಗಳ ಸದಸ್ಯರಿಗೆ ಆಡಳಿತದ ನಾರ್ಥ್ ಬ್ಲಾಕ್ ಮತ್ತು ಸೌತ್ ಬ್ಲಾಕ್ (ಹಣಕಾಸು ಮತ್ತು ವಿದೇಶಾಂಗ ಸಚಿವಾಲಯಗಳು)ಗಳಿಗೆ ಸಾಕಷ್ಟು ಮುಕ್ತವಾದ ಪ್ರವೇಶವಿದೆ.

ಎರಡೂ ಸಂಸ್ಥೆಗಳನ್ನು ಇ- ಮೈಲ್ ಮತ್ತು ಟ್ವಿಟ್ಟರ್ ಮೂಲಕ ಸಂಪರ್ಕಿಸಿದಾಗ ಯಾವುದೇ ವಿವರಣೆ ಬಂದಿಲ್ಲವಾದರೂ, ಈ ವರದಿಯು ಈ ದೇಣಿಗೆಗಳು ಕಾನೂನುಬದ್ಧವಲ್ಲ ಎಂದು ಸೂಚಿಸುತ್ತಿಲ್ಲ.

ಆದರೆ, ತನ್ನ ವಿದೇಶಾಂಗ ಸಚಿವರು ಮತ್ತು ಸರಕಾರದ ಭದ್ರತಾ ಸಲಹೆಗಾರರು ಭಾಗಿಯಾಗಿರುವ ಮತ್ತು ತನಗೆ ನಿಕಟವಾಗಿರುವ ಸಂಸ್ಥೆಗಳು ಚೀನಾದ ಸರಕಾರ ಮತ್ತು ಸಂಸ್ಥೆಗಳಿಂದ ದೇಣಿಗೆ ಪಡೆದಿರುವಾಗ, ಒಂದೂವರೆ ದಶಕದ ಹಿಂದೆ ಕಾಂಗ್ರೆಸ್ ಪಡೆದುಕೊಂಡ ದೇಣಿಗೆಯನ್ನು  ಹಿಡಿದುಕೊಂಡು ರಾಷ್ಟ್ರೀಯ ಭದ್ರತಾ ಪ್ರಶ್ನೆಯನ್ನು ಎತ್ತಿರುವ ಬಿಜೆಪಿ ನಡೆಯು ತನ್ನ ಬಟ್ಟಲಿನಲ್ಲಿ ಹೆಗ್ಗಣ ಇಟ್ಟುಕೊಂಡು, ಕಾಂಗ್ರೆಸ್ ಬಟ್ಟಲಿನಲ್ಲಿ ನೊಣವನ್ನು ತೋರಿಸಿದಂತಾಗಿದೆ.

ಕೃಪೆ: ಟೆಲಿಗ್ರಾಫ್‌ಇಂಡಿಯಾ

ಅನುವಾದ: ನಿಖಲ್ ಕೋಲ್ಪೆ


ಭಾರತದಲ್ಲಿ ನಿತ್ಯ ಐದು ಕಸ್ಟಡಿ ಸಾವು; ಬಹುತೇಕರು ಮುಸ್ಲಿಮರು, ದಲಿತರು ಮತ್ತು ಅಂಚಿಗೆ ತಳ್ಳಲ್ಪಟ್ಟವರು!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ದೆಹಲಿ ಗಲಭೆ ಪ್ರಕರಣದಿಂದ ಒಂಬತ್ತು ಜನರನ್ನು ಖುಲಾಸೆಗೊಳಿಸಿದ ನ್ಯಾಯಾಲಯ

2020 ರ ದೆಹಲಿ ಗಲಭೆಗೆ ಸಂಬಂಧಿಸಿದ ಪ್ರಕರಣದಲ್ಲಿ ಒಂಬತ್ತು ಜನರನ್ನು ನ್ಯಾಯಾಲಯವು ಖುಲಾಸೆಗೊಳಿಸಿದೆ. ಸಾಕ್ಷ್ಯಗಳು ನಿರ್ದಿಷ್ಟತೆಯ ಕೊರತೆ ಮತ್ತು ಸಾಮಾನ್ಯ ಸ್ವರೂಪದ್ದಾಗಿರುವುದರಿಂದ ಪ್ರಕರಣದಲ್ಲಿ ಅವುಗಳನ್ನು ನಂಬಲಾಗುವುದಿಲ್ಲ ಎಂ ನ್ಯಾಯಾಲಯ ಹೇಳಿದೆ. ಹೆಚ್ಚುವರಿ ಸೆಷನ್ಸ್ ನ್ಯಾಯಾಧೀಶ...

ಚುನಾವಣಾ ಕಾರ್ಯಕ್ಕೆ ಅರಣ್ಯ ಸಿಬ್ಬಂದಿ : ಅಸ್ಸಾಂ ಸರ್ಕಾರದ ಆದೇಶಕ್ಕೆ ಎನ್‌ಜಿಟಿ ತಡೆ

ವಿಧಾನಸಭೆ ಚುನಾವಣೆಗೆ ಅಸ್ಸಾಂ ಅರಣ್ಯ ಸಂರಕ್ಷಣಾ ಪಡೆಯ 1,600 ಸಿಬ್ಬಂದಿಯನ್ನು ನಿಯೋಜಿಸಲು ಕೋರಿದ್ದ ಅಸ್ಸಾಂ ಸರ್ಕಾರದ ಆದೇಶವನ್ನು ರಾಷ್ಟ್ರೀಯ ಹಸಿರು ನ್ಯಾಯಮಂಡಳಿಯ (ಎನ್‌ಜಿಟಿ) ಪೂರ್ವ ವಲಯ ಪೀಠ ಗುರುವಾರ (ಮಾ.2) ತಡೆಹಿಡಿದಿದೆ. ಈ ಆದೇಶವನ್ನು...

‘ಕರೂರು ದುರಂತದಲ್ಲಿ ಪಿತೂರಿ ಇದೆ’ ಈ ಘಟನೆಯಲ್ಲಿ ನನಗೂ ನ್ಯಾಯ ಬೇಕು: ಟಿವಿಕೆ ಮುಖ್ಯಸ್ಥ ನಟ, ರಾಜಕಾರಣಿ ವಿಜಯ್ ಆರೋಪ  

ಕರೂರಿನಲ್ಲಿ ನಡೆದ ದುರಂತ ಕಾಲ್ತುಳಿತ ಮತ್ತು ಅವರ ಕೊನೆಯ ಚಿತ್ರ ಜನನಾಯಗನ್ ಬಿ ಡುಗಡೆಯ ಹಿಂದೆ ಜಂಟಿ ಕುತಂತ್ರ ಮತ್ತು ಪಿತೂರಿ ಇದೆ ಎಂದು ಟಿವಿಕೆ ಮುಖ್ಯಸ್ಥ ವಿಜಯ್ ಗುರುವಾರ ಆರೋಪಿಸಿದ್ದಾರೆ ಮತ್ತು...

ತೆಲಂಗಾಣ| ಗೋಮಾಂಸ ಮಾರಾಟ ಆರೋಪ; ಮುಸ್ಲಿಂ ಸಮುದಾಯದ ತಂದೆ-ಮಗನ ಮೇಲೆ ಹಲ್ಲೆ

ಹನುಮಾನ್ ಜಯಂತಿ ಸಂದರ್ಭದಲ್ಲಿ ಗೋಮಾಂಸ ಮಾರಾಟ ಮಾಡಿದ ಆರೋಪದ ಮೇಲೆ ಹಿಂದುತ್ವವಾದಿ ಗುಂಪೊಂದು 60 ವರ್ಷದ ಮುಸ್ಲಿಂ ವ್ಯಕ್ತಿ ಮತ್ತು ಆತನ ಹದಿಹರೆಯದ ಮಗನ ಮೇಲೆ ಹಲ್ಲೆ ನಡೆಸಿರುವ ಘಟನೆ ತೆಲಂಗಾಣದ ಜಗ್ತಿಯಾಲ್...

‘ಕೇವಲ ಮುಸ್ಲಿಮರೇ ಶಾಸಕರಾಗಿದ್ದಾರೆ’..ಚುನಾವಣೆ ಗೆಲ್ಲಲು ಧರ್ಮ ಮುಂದಿಟ್ಟ ಗುರುವಾಯೂರು ಬಿಜೆಪಿ ಅಭ್ಯರ್ಥಿ

ಕೇರಳದ ಗುರುವಾಯೂರು ವಿಧಾನಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಬಿ. ಗೋಪಾಲಕೃಷ್ಣನ್ ಚುನಾವಣೆ ಗೆಲ್ಲಲು ಧರ್ಮವನ್ನೇ ಮುಖ್ಯ ಅಸ್ತ್ರವನ್ನಾಗಿ ಬಳಸಿಕೊಂಡಿದ್ದು, ಕಳೆದ 50 ವರ್ಷಗಳಲ್ಲಿ ಕೇವಲ ಮುಸ್ಲಿಮರೇ ಶಾಸಕರಾಗಿದ್ದಾರೆ ಎಂಬುವುದನ್ನು ಪುನರುಚ್ಚರಿಸಿದ್ದಾರೆ. ಚುನಾವಣಾ ಪ್ರಚಾರದ ಭಾಗವಾಗಿ...

ಹೊಸ ಹಿಂದೂ ದೇವಾಲಯಕ್ಕೆ ಭೂಮಿ ಮಂಜೂರು ಮಾಡಿದ ಸಿಂಗಾಪುರ ಆಡಳಿತ

ಸಿಂಗಪುರದಲ್ಲಿ ಹೆಚ್ಚುತ್ತಿರುವ ಹಿಂದೂ ಸಮುದಾಯದ ಅಗತ್ಯಗಳನ್ನು ಪೂರೈಸಲು ಸಿಂಗಾಪುರ ಸರ್ಕಾರವು ನಗರ-ರಾಜ್ಯದ ಯಿಶುನ್ ಅವೆನ್ಯೂ 3 ರಲ್ಲಿ ಹೊಸ ಹಿಂದೂ ದೇವಾಲಯವನ್ನು ನಿರ್ಮಿಸಲು ಭೂಮಿ ಮಂಜೂರು ಮಾಡಿದೆ. ಏಪ್ರಿಲ್ 1 ರ ಬುಧವಾರದ ಮಾಧ್ಯಮ...

ಕೇರಳ ಚುನಾವಣೆಗೆ ಮುನ್ನ ಕಾಂಗ್ರೆಸ್ ನೇತೃತ್ವದ ಯುಡಿಎಫ್ ಗೆ ಬೆಂಬಲ ಘೋಷಿಸಿದ ‘ಅಂಬೇಡ್ಕರ್‌ವಾದಿ ಪ್ರಜಾಸತ್ತಾತ್ಮಕ ರಂಗ’

ಎಡ ಸರ್ಕಾರ ಕೈಗೊಂಡ ಅಭಿವೃದ್ಧಿ ಉಪಕ್ರಮಗಳು ಆದಿವಾಸಿ, ದಲಿತ ಮತ್ತು ಇತರ ಅಂಚಿನಲ್ಲಿರುವ ಸಮುದಾಯಗಳನ್ನು ಬದಿಗಿಟ್ಟಿವೆ ಎಂದು ಆರೋಪಿಸಿ, ಅಂಬೇಡ್ಕರ್‌ವಾದಿ ಪ್ರಜಾಸತ್ತಾತ್ಮಕ ರಂಗ (ಎಡಿಎಫ್) ಬುಧವಾರ ಕಾಂಗ್ರೆಸ್ ನೇತೃತ್ವದ ಯುನೈಟೆಡ್ ಪ್ರಜಾಸತ್ತಾತ್ಮಕ ರಂಗ...

ಐಎಎಸ್‌ ಅಧಿಕಾರಿ ರೋಹಿಣಿ ಸಿಂಧೂರಿ ವಿರುದ್ಧ ತನಿಖೆಗೆ ಪೂರ್ವಾನುಮತಿ ನೀಡಲು ಹೈಕೋರ್ಟ್ ನಿರ್ದೇಶನ

ಪರಿಸರ ಸ್ನೇಹಿ ಬಟ್ಟೆ ಚೀಲಗಳ ಖರೀದಿಯಲ್ಲಿ ನಡೆದಿದೆ ಎನ್ನಲಾದ ಅಕ್ರಮಗಳಿಗೆ ಸಂಬಂಧಿಸಿದಂತೆ, ಐಎಎಸ್ ಅಧಿಕಾರಿ ರೋಹಿಣಿ ಸಿಂಧೂರಿ ವಿರುದ್ಧ ಎಫ್‌ಐಆರ್ ದಾಖಲಿಸಲು ಅನುಮತಿಸುವಂತೆ ಹೈಕೋರ್ಟ್ ರಾಜ್ಯ ಸರ್ಕಾರಕ್ಕೆ ನಿರ್ದೇಶನ ನೀಡಿದೆ ಎಂದು ವರದಿಯಾಗಿದೆ....

ನ್ಯಾಯಾಂಗ ಅಧಿಕಾರಿಗಳನ್ನು ರಕ್ಷಿಸುವಲ್ಲಿ ಚುನಾವಣಾ ಆಯೋಗ ವಿಫಲವಾಗಿದೆ: ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳದ ಮಾಲ್ಡಾ ಜಿಲ್ಲೆಯಲ್ಲಿ ಎಸ್‌ಐಆರ್ ಕಾರ್ಯದಲ್ಲಿ ತೊಡಗಿರುವ ನ್ಯಾಯಾಂಗ ಅಧಿಕಾರಿಗಳನ್ನು 'ರಕ್ಷಿಸುವಲ್ಲಿ ಚುನಾವಣಾ ಆಯೋಗ ವಿಫಲವಾಗಿದೆ' ಎಂದು ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ದೂಷಿಸಿದ್ದಾರೆ. ಮತದಾರರ ಪಟ್ಟಿಯಿಂದ ಹೆಸರುಗಳನ್ನು ಅಳಿಸಿಹಾಕಿದ್ದಕ್ಕಾಗಿ ಬುಧವಾರ ಪ್ರತಿಭಟನಾಕಾರರು ಹಲವಾರು...

ಎಎಪಿಯ ರಾಜ್ಯಸಭಾ ಉಪನಾಯಕ ಸ್ಥಾನದಿಂದ ರಾಘವ್ ಚಡ್ಡಾಗೆ ಕೋಕ್, ಅಶೋಕ್ ಮಿತ್ತಲ್ ಗೆ ಅಧಿಕಾರ: ವರದಿ

ಮಹತ್ವದ ಬೆಳವಣಿಗೆಯೊಂದರಲ್ಲಿ, ಆಮ್ ಆದ್ಮಿ ಪಕ್ಷ (ಎಎಪಿ) ರಾಜ್ಯಸಭೆಯಲ್ಲಿ ರಾಘವ್ ಚಡ್ಡಾ ಅವರನ್ನು ಉಪನಾಯಕ ಹುದ್ದೆಯಿಂದ ಬದಲಾಯಿಸಲು ಮುಂದಾಗಿದ್ದು, ಇದು ಪಕ್ಷದೊಳಗಿನ ಆಂತರಿಕ ಬಿರುಕು ಉಂಟಾಗಿರುವ ಲಕ್ಷಣಗಳನ್ನು ಸೂಚಿಸುತ್ತದೆ. ಮೇಲ್ಮನೆಯಲ್ಲಿ ಪಕ್ಷದ ಹೊಸ...