Homeಮುಖಪುಟ8 ಪೊಲೀಸರನ್ನು ಗುಂಡಿಕ್ಕಿ ಕೊಂದ ಕ್ರಿಮಿನಲ್! ಉತ್ತರ ಪ್ರದೇಶದಲ್ಲೊಂದು ಭೀಕರ ಘಟನೆ

8 ಪೊಲೀಸರನ್ನು ಗುಂಡಿಕ್ಕಿ ಕೊಂದ ಕ್ರಿಮಿನಲ್! ಉತ್ತರ ಪ್ರದೇಶದಲ್ಲೊಂದು ಭೀಕರ ಘಟನೆ

ವಿಕಾಸ್ ದುಬೆಯನ್ನು ಹುಡುಕಿಹೋದ ಪೊಲೀಸ್ ತಂಡಗಳ ಸಮರ್ಪಕ ಯೋಜನೆಯ ಕೊರತೆಯ ಬಗ್ಗೆ ಪ್ರಶ್ನೆಗಳು ಎದ್ದಿವೆ. ಈ ಮಧ್ಯೆ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರು ಪೊಲೀಸರ ಸಾವಿಗೆ ಸಂತಾಪ ಸೂಚಿಸಿದ್ದಾರೆ.

- Advertisement -
- Advertisement -

ಉತ್ತರ ಪ್ರದೇಶದ ಕಾನ್ಪುರದ ಬಳಿಯ ಹಳ್ಳಿಯಲ್ಲಿ ಆರೋಪಿಯನ್ನು ಬಂಧಿಸಲು ಹೋದ 8 ಪೊಲೀಸರ ಮೇಲೆ ಆತನ ಸಹಚರರು ಗುಂಡಿಕ್ಕಿ ಕೊಂದಿರುವ ದುರ್ಘಟನೆ ಇಂದು ಮುಂಜಾನೆ ಜರುಗಿದೆ.

ಉತ್ತರ ಪ್ರದೇಶ ರಾಜಧಾನಿ ಲಖನೌದಿಂದ 150 ಕಿ.ಮೀ ದೂರದಲ್ಲಿರುವ ಡಿಕ್ರು ಗ್ರಾಮದಲ್ಲಿ ಉಪ ಪೊಲೀಸ್ ವರಿಷ್ಠಾಧಿಕಾರಿ ದಿವೇಂದ್ರ ಕುಮಾರ್ ಮಿಶ್ರಾ, ಮೂವರು ಸಬ್ ಇನ್ಸ್‌ಪೆಕ್ಟರ್‌ಗಳು ಮತ್ತು ನಾಲ್ವರು ಕಾನ್‌ಸ್ಟೆಬಲ್‌ಗಳನ್ನು ಹತ್ಯೆ ಮಾಡಲಾಗಿದೆ.

ದರೋಡೆ, ಕೊಲೆ, ಅಪಹರಣ, ಸುಲಿಗೆ, ಗಲಭೆ, ಕ್ರಿಮಿನಲ್ ಪಿತೂರಿ ಪ್ರಕರಣಗಳಲ್ಲಿ ಆರೋಪಿಯಾಗಿದ್ದ ವಿಕಾಸ್ ದುಬೆ ಎಂಬಾತನನ್ನ ಹುಡುಕಿಕೊಂಡು ಮೂರು ಪೊಲೀಸ್ ಠಾಣೆಗಳ ತಂಡಗಳು ಹಳ್ಳಿಗೆ ಹೋಗಿದ್ದವು. ಆತನ ಮೇಲೆ ಸುಮಾರು 60 ಕ್ರಿಮಿನಲ್ ಪ್ರಕರಣಗಳಿದ್ದು ಹೊಸ ಕೊಲೆಗೆ ಯೋಜಿಸಿದ್ದ ಎನ್ನಲಾಗಿದೆ. ಆತನ ಸುಳಿವು ಹಿಡಿದು ಹೊರಟ ಪೊಲೀಸರ ಮೇಲೆ ಆತನ ಸಹಚರರು ಎಗ್ಗಾಮಗ್ಗಾ ಗುಂಡಿಕ್ಕಿ ಹತ್ಯೆಗೈದಿದ್ದಾರೆ.

ಪೊಲೀಸರು ಡಿಕ್ರು ಹಳ್ಳಿ ಸಮೀಪಿಸುತ್ತಿದ್ದಂತೆ ಭಾರೀ ಬುಲ್ಡೋಡರ್‌ಗಳನ್ನು ರಸ್ತೆಗಡ್ಡವಾಗಿ ನಿಲ್ಲಿಸಲಾಗಿತ್ತು. ಪೊಲೀಸರು ಬರುವ ಮುನ್ಸೂಚನೆ ಅರಿತಿದ್ದ ಆರೋಪಿಗಳು ಹಲವು ರಸ್ತೆಗಳನ್ನು ಬಂದ್ ಮಾಡಿದ್ದರು. ಅವುಗಳನ್ನು ತೆರವುಗೊಳಿಸಿ ಕೊನೆಗೆ ಪೊಲೀಸರು ಗ್ರಾಮ ಪ್ರವೇಶಿಸಿದ ಕೂಡಲೇ ಹಲವು ಕಟ್ಟಡಗಳ ಮೇಲ್ಛಾವಣಿಗಳಲ್ಲಿ ಅಡಗಿದ್ದ ಆರೋಪಿಗಳು ಮನಬಂದಂತೆ ಗುಂಡು ಹಾರಿಸಿದ್ದಾರೆ ಎನ್ನಲಾಗಿದೆ.

ಬಹುಜನ ಸಮಾಜ ಪಕ್ಷದ (ಬಿಎಸ್‌ಪಿ) ಮುಖಂಡ ಪಿಂಟೂ ಸೆಂಗಾರ್‌ನನ್ನು ಇದೇ ಆರೋಪಿಗಳು ಜೂನ್ 18 ರಂದು ಕೊಂದಿದ್ದರು. ಈ ಪ್ರಕರಣದ ಮೂವರು ಪ್ರಮುಖ ಆರೋಪಿಗಳನ್ನು ಮಧ್ಯಪ್ರದೇಶದ ಚಿಂದ್ವಾರದಿಂದ ಕಾನ್ಪುರ ಪೊಲೀಸರು ಗುರುವಾರ ಬಂಧಿಸಿದ್ದರು. ಆನಂತರ ಉಳಿದ ಆರೋಪಿಗಳು ಬಿಕ್ರುನಲ್ಲಿ ಹಲವು ಬಾಡಿಗೆ ಶೂಟರ್‌ಗಳೊಂದಿಗೆ ಅಡಗಿಕೊಂಡಿದ್ದರು ಎನ್ನಲಾಗಿದೆ.

ಶಿವರಾಜ್‌ಪುರದ ಸ್ಟೇಷನ್ ಆಫೀಸರ್ ಆಗಿದ್ದ ಉಪ ಪೊಲೀಸ್ ವರಿಷ್ಠಾಧಿಕಾರಿ ದೇವೇಂದ್ರ ಮಿಶ್ರಾ, ಸಬ್ ಇನ್ಸ್‌ಪೆಕ್ಟರ್ ಮಹೇಶ್ ಯಾದವ್ ಮತ್ತು ಕಾನ್‌ಸ್ಟೆಬಲ್‌ಗಳಾದ ಸುಲ್ತಾನ್ ಸಿಂಗ್, ರಾಹುಲ್, ಜಿತೇಂದ್ರ ಮತ್ತು ಬಾಬ್ಲೂ ಗುಂಡಿನ ದಾಳಿಯಲ್ಲಿ ಮೃತಪಟ್ಟಿದ್ದಾರೆ. ಗುಂಡಿನ ದಾಳಿಯಲ್ಲಿ ಇತರ ಐವರು ಪೊಲೀಸರು ಗಾಯಗೊಂಡಿದ್ದಾರೆ.

“ಪೊಲೀಸರ ಕಡೆಯಿಂದಲೂ ಪ್ರತಿ ಗುಂಡಿನ ದಾಳಿ ನಡೆಯಿತು ಆದರೆ ಅಪರಾಧಿಗಳು ಕಟ್ಟಡಗಳ ಮೇಲಿದ್ದರಿಂದ ತಪ್ಪಿಸಿಕೊಂಡರು. ಪೊಲೀಸರ ಮೇಲಿನ ಏಕಾಏಕಿ ದಾಳಿಗೆ ನಮ್ಮ ಎಂಟು ಮಂದಿ ಸಾವನ್ನಪ್ಪಿದ್ದಾರೆ” ಎಂದು ಪೊಲೀಸ್ ಮಹಾನಿರ್ದೇಶಕ (ಡಿಜಿಪಿ) ಎಚ್‌ಸಿ ಅವಸ್ಥಿ ಹೇಳಿದ್ದಾರೆ.

ಎಕೆ 47 ಕಾರ್ಬೈನ್‌ಗಳ ಖಾಲಿ ಚಿಪ್ಪುಗಳನ್ನು ಮೇಲ್ಛಾವಣಿಯಿಂದ ಪೊಲೀಸರು ವಶಪಡಿಸಿಕೊಂಡಿದ್ದಾರೆ, ಲಕ್ನೋದಿಂದ ವಿಧಿವಿಜ್ಞಾನ ತಂಡ ಆಗಮಿಸಿ ಸಾಕ್ಷ್ಯ ಸಂಗ್ರಹಿಸುತ್ತಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಬಿಕ್ರುನಿಂದ 3 ಕಿ.ಮೀ ದೂರದಲ್ಲಿರುವ ನಿವಾಡಾ ಗ್ರಾಮದಲ್ಲಿ ವಿಕಾಸ್ ದುಬೆ ಅವನ ಇಬ್ಬರು ಸಹಚರರು ಎನ್‌ಕೌಂಟರ್‌ನಲ್ಲಿ ಸಾವನಪ್ಪಿದ್ದಾರೆ. ಪೊಲೀಸರು ಆತನ ಸಹೋದರ ದಿನೇಶ್ ತಿವಾರಿಯನ್ನು ವಿಚಾರಣೆಗೆ ಒಳಪಡಿಸಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

60 ಕ್ರಿಮಿನಲ್ ಪ್ರಕರಣಗಳಲ್ಲಿ ಆರೋಪಿಯಾಗಿರುವ ವಿಕಾಸ್ ದುಬೆ 2001 ರಲ್ಲಿ ಶಿವ್ಲಿ ಪೊಲೀಸ್ ಠಾಣೆಯೊಳಗೆ ರಾಜ್ಯ ಸಚಿವ ಮತ್ತು ಬಿಜೆಪಿ ನಾಯಕ ಸಂತೋಷ್ ಶುಕ್ಲಾ ಅವರ ಹತ್ಯೆಯಲ್ಲಿ ಭಾಗಿಯಾಗಿದ್ದ ಆರೋಪ ಎದುರಿಸುತ್ತಿದ್ದಾನೆ. ನಂತರ ಪ್ರಕರಣದಲ್ಲಿ ಅವನನ್ನು ಖುಲಾಸೆಗೊಳಿಸಲಾಯಿತು.

ಹೆಚ್ಚುವರಿ ಪೊಲೀಸ್ ಮಹಾನಿರ್ದೇಶಕ (ಕಾನೂನು ಮತ್ತು ಸುವ್ಯವಸ್ಥೆ) ಪ್ರಶಾಂತ್ ಕುಮಾರ್ ಅವರು ಡಿಕ್ರು ಹಳ್ಳಿಗೆ ತೆರಳುತ್ತಿದ್ದಾರೆ ಮತ್ತು ಕಾನ್ಪುರದ ಪೊಲೀಸ್ ಅಧೀಕ್ಷಕ (ಎಸ್‌ಎಸ್‌ಪಿ) ದಿನೇಶ್ ಕುಮಾರ್ ಪಿ ಮತ್ತು ಇನ್ಸ್‌ಪೆಕ್ಟರ್ ಜನರಲ್ ಮೋಹಿತ್ ಅಗರ್‌ವಾಲ್ ಅವರು ಈಗಾಗಲೇ ಸ್ಥಳದಲ್ಲಿದ್ದಾರೆ.

ಆರು ಜಿಲ್ಲೆಗಳನ್ನು ಒಳಗೊಂಡ ಕಾನ್ಪುರ ವಿಭಾಗದ ಎಲ್ಲಾ ಗಡಿಗಳಿಗೆ ಪೊಲೀಸ್ ಕಣ್ಗಾವಲು ವಿಧಿಸಲಾಗಿದೆ.

ವಿಕಾಸ್ ದುಬೆಯನ್ನು ಹುಡುಕಿಹೋದ ಪೊಲೀಸ್ ತಂಡಗಳ ಸಮರ್ಪಕ ಯೋಜನೆಯ ಕೊರತೆಯ ಬಗ್ಗೆ ಪ್ರಶ್ನೆಗಳು ಎದ್ದಿವೆ. ಈ ಮಧ್ಯೆ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರು ಪೊಲೀಸರ ಸಾವಿಗೆ ಸಂತಾಪ ಸೂಚಿಸಿದ್ದಾರೆ ಮತ್ತು ಘಟನೆಯ ಬಗ್ಗೆ ವರದಿ ಕೇಳಿದ್ದಾರೆ.

ಅಪರಾಧಿಗಳ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವಂತೆ ಯುಪಿ ಪೊಲೀಸ್ ಮುಖ್ಯಸ್ಥರಿಗೆ ನಿರ್ದೇಶಿಸಲಾಗಿದೆ ಎಂದು ಮುಖ್ಯಮಂತ್ರಿ ಕಚೇರಿಯ ಹೇಳಿಕೆ ತಿಳಿಸಿದೆ.


ಭಾರತದಲ್ಲಿ ನಿತ್ಯ ಐದು ಕಸ್ಟಡಿ ಸಾವು; ಬಹುತೇಕರು ಮುಸ್ಲಿಮರು, ದಲಿತರು ಮತ್ತು ಅಂಚಿಗೆ ತಳ್ಳಲ್ಪಟ್ಟವರು!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜ್ಯಸಭಾ ಚುನಾವಣೆ: ಕರ್ನಾಟದಿಂದ ಆಯ್ಕೆಯಾದ ಪ್ರತಿನಿಧಿಗಳಿಂದ ರಾಜ್ಯಕ್ಕೆ ಲಾಭವಾಗಿದೆಯೇ?

ರಾಜ್ಯಸಭೆಗೆ ಪ್ರತಿಬಾರಿ ಚುನಾವಣೆ ನಡೆಯುವಾಗಲೂ ಈ ಚರ್ಚೆಗಳು ಸಾಮಾನ್ಯ. ಕನ್ನಡೇತರರು ಇಲ್ಲಿಂದ ಆಯ್ಕೆಯಾಗಿ ಇಲ್ಲಿಯ ಸಮಸ್ಯೆಗಳ ಬಗ್ಗೆ ಮಾತನಾಡುವುದಿಲ್ಲ ಎಂಬ ವಾಸ್ತವದ ಜೊತೆಜೊತೆಗೆ, ರಾಜ್ಯಸಭೆಗೆ ಆಯ್ಕೆಯಾಗುವ ಕನ್ನಡವರಾದರೂ ಮಾತನಾಡುತ್ತಾರಾ? ಎಂದರೆ ಅದಕ್ಕೂ ನಮ್ಮಲ್ಲಿ...

ಬಂಗಾಳದಲ್ಲಿ ಬಿಜೆಪಿ ಬೆಂಬಲಿಗರ ಕ್ರೌರ್ಯ: ಅಭಿಷೇಕ್ ಬಳಿಕ ಕಲ್ಯಾಣ್‌ ಬ್ಯಾನರ್ಜಿ ಮೇಲೆ ಮಾರಣಾಂತಿಕ ದಾಳಿ

ಪಶ್ಚಿಮ ಬಂಗಾಳದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಸಂಸದ ಕಲ್ಯಾಣ್ ಬ್ಯಾನರ್ಜಿ ಅವರು ಭಾನುವಾರ (ಮೇ 31), ಹೂಗ್ಲಿ ಜಿಲ್ಲೆಯಲ್ಲಿ ನಡೆದಿದ್ದ ಚುನಾವಣೋತ್ತರ ಹಿಂಸಾಚಾರದಲ್ಲಿ ಕಾರ್ಯಕರ್ತರ ಬಂಧನದ ವಿರುದ್ಧ ಮನವಿ ಪತ್ರ ಸಲ್ಲಿಸಲು ಭೇಟಿ...

ಬಸ್ತಾರ್‌: ಬುಡಕಟ್ಟು ಕ್ರಿಶ್ಚಿಯನ್ ಕುಟುಂಬಗಳಿಗೆ ಬೆದರಿಕೆ, ಥಳಿತ, ಹಿಂದೂ ಧರ್ಮ ಸ್ವೀಕರಿಸಲು ಬಲವಂತ: ಘನತೆಯ ಬದುಕಿಗಾಗಿ ಆದಿವಾಸಿಗಳ ಹೋರಾಟ

ಛತ್ತೀಸ್‌ಗಢದ ದಟ್ಟ ಅರಣ್ಯಗಳು ಮತ್ತು ಕಡಿದಾದ ಬೆಟ್ಟಗಳಿಂದ ಆವೃತವಾಗಿರುವ ಬಸ್ತಾರ್ ಕಣಿವೆಯು ತನ್ನ ವಿಶಿಷ್ಟ ಬುಡಕಟ್ಟು ಸಂಸ್ಕೃತಿ ಮತ್ತು ಪ್ರಾಕೃತಿಕ ಸಂಪತ್ತಿಗೆ ಹೆಸರುವಾಸಿ. ಆದರೆ ಇತ್ತೀಚಿನ ವರ್ಷಗಳಲ್ಲಿ, ಈ ಪ್ರಶಾಂತ ಭೂಭಾಗವು ತೀವ್ರಗಾಮಿ...

ಗಾಝಾದಲ್ಲಿ ರಕ್ತಸಿಕ್ತ ಈದ್: ಇಸ್ರೇಲ್ ಭೀಕರ ದಾಳಿಗೆ 26 ಪ್ಯಾಲೆಸ್ಟೀನಿಯನ್ನರು ಬಲಿ, ವಿಶ್ವಸಂಸ್ಥೆ ತೀವ್ರ ಆತಂಕ

ಗಾಝಾ: ಇಸ್ಲಾಂ ಧರ್ಮದ ಅತ್ಯಂತ ಪವಿತ್ರ ದಿನಗಳಲ್ಲಿ ಒಂದಾದ ‘ಈದ್ ಅಲ್-ಅಧಾ’ ಹಬ್ಬದ ಸಂದರ್ಭದಲ್ಲೂ ಗಾಝಾ ಪಟ್ಟಿಯಲ್ಲಿ ರಕ್ತಪಾತ ಮುಂದುವರಿದಿದ್ದು, ಹಬ್ಬದ ಮುನ್ನಾದಿನದಿಂದ ಆರಂಭಿಸಿ ಇಸ್ರೇಲ್ ಪಡೆಗಳು ನಡೆಸಿದ ಸರಣಿ ದಾಳಿಗಳಲ್ಲಿ ಕನಿಷ್ಠ...

ಜನರಿಗೆ ಇಂಧನ ಉಳಿಸುವ ಪಾಠ, ಪ್ರಧಾನಿಗೆ ರೋಡ್‌ಶೋಗಳ ಆಟ

ಮೇ 10 ರಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಸಾರ್ವಜನಿಕರಲ್ಲಿ ಮಿತವ್ಯಯದ ಅಪೀಲು ಮಾಡಿದ್ದು, ಇಂಧನ ಬಳಕೆಯನ್ನು ಕನಿಷ್ಠ ಮಟ್ಟಕ್ಕೆ ಇಳಿಸುವಂತೆ ಕೋರಿದ್ದರು. ಜನರು ಖಾಸಗಿ ವಾಹನಗಳ ಬಳಕೆಯನ್ನು ಬಿಟ್ಟು ಸಾರ್ವಜನಿಕ ಸಾರಿಗೆಯನ್ನು...

ಏಷ್ಯನ್ ಗೇಮ್ಸ್‌ ಟ್ರಯಲ್ಸ್‌ನಲ್ಲಿ ಸ್ಪರ್ಧಿಸಲು ವಿನೇಶ್ ಫೋಗಟ್‌ಗೆ ಅನುಮತಿಸಿದ ಭಾರತೀಯ ಕುಸ್ತಿ ಒಕ್ಕೂಟ

ಮಾಜಿ ವಿಶ್ವ ಚಾಂಪಿಯನ್‌ಶಿಪ್ ಪದಕ ವಿಜೇತೆ ವಿನೇಶ್ ಫೋಗಟ್ ಅವರು (ಮೇ 30) ಏಷ್ಯನ್ ಗೇಮ್ಸ್ ಆಯ್ಕೆ ಟ್ರಯಲ್ಸ್‌ನಲ್ಲಿ ಮಹಿಳೆಯರ 53 ಕೆಜಿ ವಿಭಾಗದಲ್ಲಿ ಸ್ಪರ್ಧಿಸಲು ಅವಕಾಶ ಪಡೆದಿದ್ದಾರೆ. ಭಾರತೀಯ ಕುಸ್ತಿ ಒಕ್ಕೂಟ...

Uttarakhand | ಬಜರಂಗದಳದ ಕಾರ್ಯಕರ್ತರು ಈಗ ದ್ವೇಷ ಬಿತ್ತುವ ವೃತ್ತಿಪರ ಇನ್‌ಫ್ಲ್ಯುಯೆನ್ಸರ್ಸ್!

ಈ ವರ್ಷದ ಆರಂಭದಲ್ಲಿ ಉತ್ತರಾಖಂಡದ ಕೋಟದ್ವಾರದಲ್ಲಿ ಹಿಂದುತ್ವ ಗುಂಪೊಂದು ವೃದ್ಧ ಮುಸ್ಲಿಂ ವ್ಯಕ್ತಿಯೊಬ್ಬರ ಅಂಗಡಿಗೆ ನುಗ್ಗಿ, ಅಂಗಡಿಯ ಹೆಸರಾದ ‘ಬಾಬಾ’ ಎಂಬುವುದನ್ನು ಬದಲಾಯಿಸುವಂತೆ ಒತ್ತಾಯಿಸಿತ್ತು. ‘ಬಾಬಾ’ ಎಂಬುವುದು ‘ಹಿಂದೂ’ ಹೆಸರಾಗಿದೆ ಎಂದು ಆ...

​ನಿಗಿ ನಿಗಿ ಕೆಂಡದಂತಾಗಿರುವ ಬಿಡದಿ, ಡಿಕೆಶಿಗೆ ಬಿಸಿ ತುಪ್ಪದಂತಾದ ರೈತರು

​ಬದಲಾದ ರಾಜಕೀಯ ಸಂದರ್ಭದಲ್ಲಿ ಕರ್ನಾಟಕದ ಮುಂದಿನ ಮುಖ್ಯಮಂತ್ರಿ ಎಂದೇ ಬಿಂಬಿತವಾಗಿರುವ ಡಿ.ಕೆ. ಶಿವಕುಮಾರ್ ಪ್ರತಿಷ್ಠೆಯಾಗಿ ತೆಗೆದುಕೊಂಡಿರುವ ಬಿಡದಿಯ ಟೌನ್‌ಶಿಪ್ ಯೋಜನೆಯ ವಿರುದ್ಧ ನಡೆಯುತ್ತಿರುವ ರೈತರ ಹೋರಾಟ ದಿನದಿಂದ ದಿನಕ್ಕೆ ಉಗ್ರ ರೂಪ ಪಡೆಯುತ್ತಿದೆ. ​ಭೂಸ್ವಾಧೀನದ...

ಪ್ರಜಾಪ್ರಭುತ್ವವನ್ನು ಹತ್ತಿಕ್ಕಲು ‘SIR’ ಅನ್ನೇ ಅಸ್ತ್ರವನ್ನಾಗಿಸಿಕೊಂಡ ನರೇಂದ್ರ ಮೋದಿ!

ಪಶ್ಚಿಮ ಬಂಗಾಳದ ವಿಧಾನಸಭಾ ಚುನಾವಣೆಯ ಫಲಿತಾಂಶ ಪ್ರಕಟವಾದ ತಕ್ಷಣ (ಮೇ 4 ರಂದು), ಕಾಳೀಘಾಟ್‌ನಲ್ಲಿರುವ ತಮ್ಮ ನಿವಾಸದಲ್ಲಿ ಸುದ್ದಿಗೋಷ್ಠಿ ನಡೆಸಿದ ಮಾಜಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅತ್ಯಂತ ಆಕ್ರೋಶದಿಂದ ಮಾತನಾಡಿದ್ದರು. ಅಷ್ಟೇ ಅಲ್ಲದೆ,...

ಕೇರಳದಲ್ಲಿ ಶಾಲಾ ಬಾಲಕಿಯರಿಗೆ ಮೂರು ದಿನ ಮುಟ್ಟಿನ ರಜೆ, ಅಸಂಘಟಿತ ವಲಯದ ಮಹಿಳೆಯರಿಗೆ ಆರು ತಿಂಗಳ ಹೆರಿಗೆ ರಜೆ ಘೋಷಣೆ 

ತಿರುವನಂತಪುರಂ: ಕೇರಳದ ವಿ.ಡಿ. ಸತೀಶನ್ ನೇತೃತ್ವದ ಕಾಂಗ್ರೆಸ್ ಸರ್ಕಾರವು ಮಹಿಳೆಯರಿಗೆ ಹಲವಾರು ಕಲ್ಯಾಣ ಕ್ರಮಗಳನ್ನು ಘೋಷಿಸಿದೆ, ಇದರಲ್ಲಿ ಶಾಲಾ ವಿದ್ಯಾರ್ಥಿಗಳಿಗೆ ಮೂರು ದಿನಗಳ ಮಾಸಿಕ ಮುಟ್ಟಿನ ರಜೆ, ಕೆಲಸದ ಸ್ಥಳಗಳಲ್ಲಿ ಮಹಿಳೆಯರಿಗೆ ಸಮಾನ...