Homeಕರ್ನಾಟಕಶುಲ್ಕ ಪಾವತಿಸದಿದ್ದರೆ ದಾಖಲಾತಿ ರದ್ದು ಬೆದರಿಕೆ: ಸರ್ಕಾರದ ಆದೇಶಕ್ಕೆ ಕ್ಯಾರೇ ಎನ್ನದ ಖಾಸಗಿ ಶಾಲೆಗಳು

ಶುಲ್ಕ ಪಾವತಿಸದಿದ್ದರೆ ದಾಖಲಾತಿ ರದ್ದು ಬೆದರಿಕೆ: ಸರ್ಕಾರದ ಆದೇಶಕ್ಕೆ ಕ್ಯಾರೇ ಎನ್ನದ ಖಾಸಗಿ ಶಾಲೆಗಳು

ಏಪ್ರಿಲ್ 28 ರ ಸುತ್ತೋಲೆಯಯಲ್ಲಿ, ಕೊರೊನಾ ಸಾಂಕ್ರಾಮಿಕ ರೋಗದಿಂದ ಉಂಟಾಗುವ ಆರ್ಥಿಕ ಸಂಕಷ್ಟಗಳನ್ನು ಉಲ್ಲೇಖಿಸಿ ಪ್ರತಿವರ್ಷ ಹೆಚ್ಚಿಸುವ 15% ಶುಲ್ಕವನ್ನು ಹೆಚ್ಚಿಸದಂತೆ ಶಾಲೆಗಳನ್ನು ಕೇಳಿದೆ.

- Advertisement -
- Advertisement -

ಈ ವರ್ಷ ಶಾಲಾ ಶುಲ್ಕವನ್ನು ಹೆಚ್ಚಿಸಬೇಡಿ ಎಂದು ರಾಜ್ಯ ಸರ್ಕಾರ ಶಾಲೆಗಳನ್ನು ಕೇಳಿದ್ದರೂ, ಬೆಂಗಳೂರಿನ ಹೊರಮಾವುವಿನ ವಿಬ್ಗಯರ್ ಶಾಲೆ ಶುಲ್ಕವನ್ನು ಹೆಚ್ಚಿಸಿದೆ ಎಂದು ವಿದ್ಯಾರ್ಥಿಗಳ ಪಾಲಕರು ಆರೋಪಿಸಿದ್ದಾರೆ. ಇದಲ್ಲದೆ, ನಿರ್ದಿಷ್ಟ ಅವಧಿಯೊಳಗೆ ಶಾಲಾ ಶುಲ್ಕ ಪಾವತಿಸಲು ವಿಫಲವಾದರೆ ತಮ್ಮ ಮಕ್ಕಳ ದಾಖಲಾತಿಯನ್ನು ರದ್ದುಗೊಳಿಸಲಾಗುವುದು ಎಂದು ಬೆದರಿಸಿ ಪೋಷಕರಿಗೆ ನೊಟೀಸ್ ಕಳುಹಿಸಲಾಗಿದೆ.

ರಾಜ್ಯಸರ್ಕಾರದ ಆದೇಶದ ಉಲ್ಲಂಘಿಸಿ ಶಾಲೆಯು ಶುಲ್ಕ ಸಂಗ್ರಹಿಸುತ್ತಿದೆ ಎಂದು ಪೋಷಕರು ಆರೋಪಿಸಿದ್ದಾರೆ.

ವಿಬ್ಗಯರ್ ಶಾಲೆಯ ಪ್ರಾಂಶುಪಾಲರು ಜುಲೈ 1 ರಂದು ಕಳುಹಿಸಿದ ನೋಟಿಸ್ ಅನ್ನು (ಸುತ್ತೋಲೆ ಸಂಖ್ಯೆ VH43-CIRNO2489) ಪೋಷಕರು ಹಂಚಿಕೊಂಡಿದ್ದಾರೆ, ಇದರಲ್ಲಿ “ಈ ಶೈಕ್ಷಣಿಕ ವರ್ಷಕ್ಕೆ ಕೆಲವು ಪೋಷಕರು ಯಾವುದೇ ಶುಲ್ಕವನ್ನು ಪಾವತಿಸಿಲ್ಲ. ಇದರಿಂದ ನಮ್ಮ ಶಾಲೆಯಲ್ಲಿ ನಿಮ್ಮ ಮಗು ಮುಂದುವರಿಯುವುದಕ್ಕೆ ನಿಮಗೆ ಆಸಕ್ತಿ ಹೊಂದಿಲ್ಲ ಎಂದು ಊಹಿಸಲಾಗುವುದು. ಇದರ ಪರಿಣಾಮವಾಗಿ, 2020-21ರ ಶೈಕ್ಷಣಿಕ ವರ್ಷಕ್ಕೆ  2020 ರ ಜುಲೈ 13 ರಿಂದ ದಾಖಲಾತಿ ರದ್ದು ಪ್ರಕ್ರಿಯೆಯನ್ನು ಪ್ರಾರಂಭಿಸುತ್ತೇವೆ. ನೀವು ಇನ್ನೂ ನಮ್ಮ ಶಾಲೆಯಲ್ಲಿ ಮುಂದುವರಿಯಲು ಬಯಸಿದರೆ, ಬಾಕಿ ಹಣವನ್ನು ತಕ್ಷಣ ಪಾವತಿಸಲು ನಾವು ವಿನಂತಿಸುತ್ತೇವೆ.” ಎಂದು ಬರೆಯಲಾಗಿದೆ.

ಪ್ರಸ್ತುತ ಆರೋಪಗಳ ಬಗ್ಗೆ ಶಾಲೆಯ ಪ್ರತಿನಿಧಿಯೊಬ್ಬರು ಈ ಕುರಿತು ಪ್ರತಿಕ್ರಿಯಿಸಲು ನಿರಾಕರಿಸಿದ್ದಾರೆ. ಶುಲ್ಕಕ್ಕೆ ಸಂಬಂಧಿಸಿದ ಸಮಸ್ಯೆಗಳನ್ನು ಶಾಲಾ ಆಡಳಿತ ಮಂಡಳಿಯು ಪೋಷಕರೊಂದಿಗೆ ನೇರವಾಗಿ ನಿಭಾಯಿಸುತ್ತದೆ ಎಂದು ಅವರು ಹೇಳಿದರು.

ಸಾಂಕ್ರಾಮಿಕ ರೋಗದಿಂದ ಉಂಟಾಗುವ ಆರ್ಥಿಕ ತೊಂದರೆಯಿಂದಾಗಿ ಪ್ರಸ್ತುತ ವರ್ಷದ ಶುಲ್ಕವನ್ನು ಪಾವತಿಸಲು ಸಾಧ್ಯವಾಗದ ಪೋಷಕರಿಗೆ ಶಾಲೆಯು ಯಾವ ರಿಯಾಯಿತಿಗಳನ್ನು ನೀಡಿದೆ ಎಂಬುದು ಸಹ ಸ್ಪಷ್ಟವಾಗಿಲ್ಲ.

ಈ ಬಗ್ಗೆ ಸಾರ್ವಜನಿಕ ಶಿಕ್ಷಣ ಇಲಾಖೆ ಹೊರಡಿಸಿದ ಏಪ್ರಿಲ್ 28 ರ ಸುತ್ತೋಲೆಯಯಲ್ಲಿ, ಕೊರೊನಾ ಸಾಂಕ್ರಾಮಿಕ ರೋಗದಿಂದ ಉಂಟಾಗುವ ಆರ್ಥಿಕ ಸಂಕಷ್ಟಗಳನ್ನು ಉಲ್ಲೇಖಿಸಿ ಪ್ರತಿವರ್ಷ ಹೆಚ್ಚಿಸುವ 15% ಶುಲ್ಕವನ್ನು ಹೆಚ್ಚಿಸದಂತೆ ಶಾಲೆಗಳನ್ನು ಕೇಳಿದೆ. ಇಲಾಖೆಯು ತರುವಾಯ ಇದೇ ವಿಷಯದ ಬಗ್ಗೆ ಸಹಾಯವಾಣಿ ಮತ್ತು ದೂರು ವಿಭಾಗಗಳನ್ನು ಪ್ರಾರಂಭಿಸಿತ್ತು. ವರದಿಗಳ ಪ್ರಕಾರ, ಮೇ ಅಂತ್ಯದ ವೇಳೆಗೆ ಸುಮಾರು 1,000 ದೂರುಗಳು ದಾಖಲಾಗಿವೆ.

ಮೇ 19 ರಂದು ಇಲಾಖೆ ಹೊರಡಿಸಿದ ಮತ್ತೊಂದು ಟಿಪ್ಪಣಿಯಲ್ಲಿ ಶಾಲೆಗಳು ಸಾಧ್ಯವಿರುವ ಪೋಷಕರಿಂದ ಮಾತ್ರ ಶುಲ್ಕವನ್ನು ಸಂಗ್ರಹಿಸಬಹುದು ಮತ್ತು ಕಳೆದ ವರ್ಷ ವಿಧಿಸಲಾಗಿದ್ದ ಶುಲ್ಕವನ್ನು ಹೆಚ್ಚಿಸಲು ಸಾಧ್ಯವಿಲ್ಲ ಮತ್ತು ಆರ್ಥಿಕವಾಗಿ ತೊಂದರೆಗೀಡಾದ ಪೋಷಕರಿಗೆ ಅವರು ರಿಯಾಯಿತಿ ವ್ಯವಸ್ಥೆಗಳನ್ನು ಮಾಡಬೇಕು ಎಂದು ಹೇಳಿದೆ.

“ಸರ್ಕಾರದಿಂದ ಸ್ಪಷ್ಟವಾದ ಸೂಚನೆಗಳ ಹೊರತಾಗಿಯೂ, ಶಾಲೆಯು ಶುಲ್ಕವನ್ನು ಹೆಚ್ಚಿಸಿದೆ. ಮುಂದಿನ ತರಗತಿಯ ಶುಲ್ಕವು ಹಿಂದಿನ ವರ್ಷಕ್ಕಿಂತ ಹೆಚ್ಚಾಗಿರುತ್ತದೆ ಎಂದು ಹೇಳುತ್ತದೆ. ಕಳೆದ ವರ್ಷಕ್ಕಿಂತ 68,000 ರೂ. ಹೆಚ್ಚು ಪಾವತಿಸಲು ನಾನು ಸಿದ್ಧನಾಗಿದ್ದೇನೆ” ಎಂದು ಪೋಷಕರೊಬ್ಬರು ಹೇಳಿದ್ದಾರೆ.


ಓದಿ: ಶಾಲೆಗಳು ಸಮಾಜ ಒಡೆಯುತ್ತಿವೆ: ಶಿಕ್ಷಣ ವ್ಯವಸ್ಥೆಯನ್ನು ತಲೆಕೆಳಗು ಮಾಡಬೇಕಿದೆ


 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...