HomeUncategorizedಥೂತ್ತೇರಿ : ಅಂಬರೀಶ್ ಮೃತ್ಯುಂಜಯ ಹೋಮ ಮಾಡಿಸಬೇಕಿತ್ತು

ಥೂತ್ತೇರಿ : ಅಂಬರೀಶ್ ಮೃತ್ಯುಂಜಯ ಹೋಮ ಮಾಡಿಸಬೇಕಿತ್ತು

- Advertisement -
- Advertisement -

ಯಾಹೂ |

ಸಿನಿಮಾ ರಂಗದಲ್ಲಿ ಮತ್ತು ರಾಜಕಾರಣದಲ್ಲಿ ಹಾಗೂ ಖಾಸಗೀ ಬದುಕಿನಲ್ಲಿ ವೈರಿಗಳೇ ಇಲ್ಲದಂತೆ ಬದುಕಿದ ಅಂಬರೀಶ್‍ಗೆ ಗ್ರಹಗತಿಗಳು ಮುನಿಸಿಕೊಂಡಿದ್ದವು ಎಂದು ಟಿ.ವಿ.ಯೊಳಗೆ ಸೇರಿಕೊಂಡಿರುವ ಪುರೋಹಿತ ಪಿಂಡಗಳು ವಾದಿಸತೊಡಗಿವೆಯಂತಲ್ಲಾ. ಈ ಪಿಂಡಗಳ ವಿಶೇಷವೆಂದರೆ, ತ್ರಿಕಾಲಜ್ಞಾನಿಗಳಂತಾಡುವ ಇವು ಯಾವುದೇ ಘಟನೆ ನಡೆಯುವ ಮುನ್ನ ಬಾಯಿ ಬಿಡುವುದಿಲ್ಲ. ವಿಷ್ಣು ತೀರಿಕೊಂಡ ನಂತರವೇ ಅವರಿಗೆ ನಾಗವಲ್ಲಿ ಕಾಟ ಅಮರಿಕೊಂಡಿತ್ತು ಎಂದು ವದರಿದವು. ಸಕ್ಕರೆ ಕಾಯಿಲೆ ದೆಸೆಯಿಂದ ಹೃದಯಾಘಾತಕ್ಕೆ ತುತ್ತಾದ ವಿಷ್ಣುಗೆ ನಾಗವಲ್ಲಿ ಕಾಟವಿತ್ತು, ಯಾಗ ಮಾಡಿಸಿದ್ದರೆ ಸರಿಹೋಗುತ್ತಿತ್ತು ಎನ್ನುವ ಈ ಪಿಂಡಗಳು ಈಗ ಅಂಬರೀಶ್ ಸಾವಿಗೂ ಪುರೋಹಿತಶಾಹಿ ತಂತ್ರವನ್ನೇ ಬಳಸತೊಡಗಿರುವುದು ಕಂಡು ದಿಗಿಲಾಗಿ ಜ್ಯೋತಿಷ್ಯ ಬ್ರಹ್ಮ ಪ್ರಕಾಶ ಮಣ್ಣುರಾಯರಿಗೆ ಫೋನ್ ಮಾಡಲಾಗಿ ರಿಂಗಾಯ್ತು,
ರಿಂಗ್‍ಟೋನ್: “ಹೋನ್ಹೀ ತೋ ಹೋನ್ಹೀ ಹೀ ಹೈ, ಅನ್ಹೋಹ್ಹೀ ನಹೀಂ ಭವತ್ಯೇವ ಭವತವ್ಯಂ….. ಹಲೋ ಯಾರು.”
“ಗುರುಗಳೇ ನಾನು ಪತ್ರಕರ್ತ”
“ಯಾವ ಪತ್ರಿಕೆ.”
“ನ್ಯಾಯಪಥ.”
“ನ್ಯಾಯಪಥ ಅಂದರೆ ಸತ್ಯದ ದಾರಿ.”
“ಹೌದು ಸ್ವಾಮಿ, ನಿಮ್ಮ ಫೋನಿನ ರಿಂಗ್‍ಟೋನ್ ಅರ್ಥ ಆಗಲಿಲ್ಲ.”
“ನಡೆಯಬೇಕಾದದ್ದು ನಡೆದೇ ನಡೆಯುತ್ತದೆ, ನಡೆಯಬೇಕಾದ ರೀತಿಯಲ್ಲೇ ನಡೆಯುತ್ತದೆ ಅಂತ ಅರ್ಥ.”
“ಹಾಗಿದ್ದರೆ ಜ್ಯೋತಿಷ್ಯದ ಅಗತ್ಯವೇನು.”
“ನೀವು ಆಸ್ತಿಕರೋ ನಾಸ್ತಿಕರೋ.”
“ಸದ್ಯಕ್ಕೆ ನಾಸ್ತಿಕ.”
“ಹಾಗಾದರೆ ನಿಮ್ಮೊಟ್ಟಿಗೆ ಮಾತನಾಡಿ ಪ್ರಯೋಜನ ಇಲ್ಲ.”
“ಹಾಗನ್ನಬೇಡಿ ಗುರುವೆ, ನಮ್ಮ ಅಂಬರೀಶಣ್ಣನ ಸಾವಿನ ಬಗ್ಗೆ ತಿಳಕೊಬೇಕು.”
“ನೋಡಿ, ಅಂಬರೀಶ್ ನಮ್ಮನ್ನು ಭೇಟಿಮಾಡಿ ನಾವು ಹೇಳಿದಂತೆ ಕೇಳಿದ್ದರೆ ಬದುಕುತ್ತಿದ್ದರು.”
“ಅದು ಹ್ಯೆಂಗೆ ಗುರುಗಳೇ.”
“ಒಂದು ಮೃತ್ಯುಂಜಯ ಹೋಮ ಮಾಡಿಸಿದ್ದರೆ ಬದುಕುತ್ತಿದ್ದರು.”
“ಮೃತ್ಯುಂಜಯ ಹೋಮ ಅಂದರೆ ಸಾವನ್ನ ಜಯಿಸುವ ಹೋಮ ಅಲ್ಲವೆ ಗುರು.”
“ಹೌದು.”
“ಈ ಮೃತ್ಯುಂಜಯ ಹೋಮ ಮಾಡಿಸಿದ್ರೆ ಎಷ್ಟು ದಿನ ಬದುಕಬಹುದು.”
“ನೋಡಿ, ನಮಗಿರುವ ಆಯಸ್ಸು ಬ್ರಹ್ಮನದಲ್ಲ ನಾವು ನಮ್ಮ ಆಯಸ್ಸನ್ನ ವೃದ್ಧಿಸಿಕೊಳ್ಳಬೇಕು. ಮರಣದಲ್ಲಿ ನೂರ ಒಂದು ಪ್ರಕಾರಗಳುಂಟು. ನೂರನ್ನ ಜಯಿಸಬಹುದು. ಒಂದನ್ನ ಮಾತ್ರ ಜಯಿಸಲಾಗುವುದಿಲ್ಲ.”
“ಅದ್ಯಾವುದು ಗುರುಗಳೇ.”
“ನಿಜವಾದ ಮರಣ!”
“ಈಗ ಅಂಬರೀಶ್‍ಗೆ ಸಂಭವಿಸಿದ್ದು ನಿಜವಾದ ಮರಣ ಅಲ್ಲವ.”
“ಇಲ್ಲ ಅವರದ್ದು ಭಾವೋದ್ವೇಗದ ಮರಣ. ಅದಕ್ಕಾಗಿ ನಾಗಾರಾಧನೆಯ ಮೃತ್ಯುಂಜಯ ಹೋಮ ಮಾಡಿಸಿದ್ದರೆ ಬದುಕುತ್ತಿದ್ದರು.”
“ಅದನ್ನ ಅವರಿಗೆ ಹೇಳಬೇಕಾಗಿತ್ತು.”
“ಅವರು ಬಂದು ಕೇಳಬಹುದಿತ್ತು, ನಾವು ಅವರ ಬಳಿಗೆ ಹೋಗುವುದಿಲ್ಲ.”
“ಅವರ ಜೀವ ಮುಖ್ಯ ಅಲ್ಲವೆ?”
“ಅದೌದು. ನಾವು ಸಂಸ್ಕಾರವಂತ ಜ್ಯೋತಿಷಿಗಳು. ಅವರಾಗಿ ಬಂದರೆ ಹೇಳ್ತೇವೆ.”
“ಅವುರಾಗಿ ಬಂದ್ರೆ ಹೇಳೋ ಅಂತವರು, ಈಗ ಟಿವಿಯೊಳಗಡೆ ಬಂದು ಯಾಕೇಳ್ತಿದೀರಿ”
“ನಾವು ಬಂದದ್ದಲ್ಲ ಟಿವಿಯವರು ಕರೆದದ್ದು.”
“ಬಂದು-ಬಳಗದೋರು ಕರೆದ್ರೆ ಹೊಗಬೇಕಾಗತ್ತೆ ಬಿಡಿ. ತಮ್ಮ ಪ್ರಕಾರ ಅಂಬರೀಶ್ ಜಾತಕ ಹೇಗಿತ್ತು ಗುರುಗಳೇ.”
“ಅಂಬರೀಶ್ ಜಾತಕದಲ್ಲಿ ಗುರುವಿನ ಬಲವಿತ್ತು. ಶನಿ ದೂರವಿದ್ದ. ಈಗ ಅವರ ಬಳಿ ಶನಿ ಸಂಚಾರ ಆರಂಭವಾಗಿತ್ತು. ಮೃತ್ಯುಂಜಯ ಹೋಮದಿಂದ ಶನಿಯನ್ನ ದೂರ ಮಾಡಬಹುದಿತ್ತು.”
“ಬ್ರಹ್ಮರ್ಷಿಗಳೇ ನಾಗನ ಆರಾಧನೆ ಯಾಕೆ ಮಾಡ್ತರೆ ಗೊತ್ತೆ.”
“ನಾಗದೋಷ ಪರಿಹಾರಕ್ಕೆ.”
“ಅದಲ್ಲ, ಹಾವುಗಳ ಪೈಕಿ ನಾಗರಹಾವಿಗೆ ವಿಷ ಇದೆ. ಅದು ಕಡುದ್ರೆ ಮನುಷ್ಯ ಸತ್ತೋಗ್ತನೆ. ಪೂಜೆ ಮಾಡಿದ್ರೆ ಅದು ಕಡಿಯಲ್ಲ ಅನ್ನೋ ಕಾರಣಕ್ಕೆ. ಅಂದ್ರೆ ಭಯ ಭಕ್ತಿ ಮೂಡಿಸುತ್ತೆ ಅಲ್ಲವಾ.”
“ಅದೌದು. ಭಯ ನಿವಾರಣೆ ನಮ್ಮ ಕೆಲಸ.”
“ನಿಮ್ಮ ಮೃತ್ಯುಂಜಯ ಹೋಮದಿಂದ ಅರ್ಭುದ ರೋಗ ನಿವಾರಿಸಬಹುದಾ?”
“ಹೌದು.”
“ಹಾಗಾದ್ರೆ ಅನಂತಕುಮಾರ್ ಅದರಲ್ಲೇ ಹೋದರಲ್ಲ. ಅವರ ಸಂಬಂಧಿಯಾದ ನೀನು ಆಗ ಕತ್ತೆ ಕಾಯ್ತಾಯಿದ್ದ?”
“ಯಾಕೆ ಹಾಗೆ ಕೆಟ್ಟ ಮಾತನ್ನಾಡುವುದು ನೀವು.”
“ಸಾರಿ, ಗೋವು ಕಾಯ್ತಾಯಿದ್ರ.”
“ನೋಡಿ ಇವರೆ, ನಿಮ್ಮಂತ ಅಸಂಸ್ಕೃತ ಅಹಂಕಾರಿಗಳನ್ನ ನಾವು ಸಹಿಸಿಕೊಂಡು ಉತ್ತರ ಕೊಡಬೇಕಾಗ್ತದೆ, ಅಂಬರೀಶರು ಭಾವೋದ್ವೇಗದ ವ್ಯಕ್ತಿ. ಆನೆ ನಡೆದದ್ದೇ ದಾರಿ ಅಂತ ಹೇಳುವ ಹಾಗೆ ಅವರು ಯಾರ ಮಾತನ್ನ ಕೇಳಲಿಲ್ಲ. ಕೇಳಿದ್ದರೆ ನಮ್ಮಲ್ಲಿ ಪರಿಹಾರವಿತ್ತು.”
“ಏನು ಪರಿಹಾರ ಹೇಳಿ.”
“ನೋಡಿ ಮನುಷ್ಯನ ಬಾಹ್ಯ ವರ್ತನೆಗೆ ಆಂತರ್ಯದ ಸಮಸ್ಯೆಗಳು ಕಾರಣ. ನಮ್ಮ ದೇಹದಲ್ಲಿ 72 ಸಾವಿರ ನಾಡಿಗಳಿವೆ. ಅವುಗಳ ಸಮತೋಲನ ಮುಖ್ಯ. ಅವುಗಳ ಏರುಪೇರಿನಿಂದ ಮನುಷ್ಯ ಕೀಳರಿಮೆಗೆ ತುತ್ತಾಗುವುದುಂಟು. ಆಗ ನಾವು ಆತ್ಮವಿಶ್ವಾಸ ಮೂಡಿಸುತ್ತೇವೆ.”
“ಯಾವ ತರ.”
“ನಮ್ಮ ಹೆಂಡತಿಗೆ ಒಂದಿಷ್ಟು ಉಬ್ಬು ಹಲ್ಲುಗಳಿದ್ದವು.”
“ಹಲ್ಲಿಗೇ ಮುತ್ತು ಕೊಡೋತರ.”
“ಹಾಗಂದುಕೊಳ್ಳಬಹುದು. ಆಗ ನಾನು ಆಕೆಗೆ ಆತ್ಮವಿಶ್ವಾಸ ತುಂಬಿದೆ. ನಿನ್ನ ಹಲ್ಲುಗಳ ಬಗ್ಗೆ ಕೀಳರಿಮೆ ಬೇಡ. ಮನೆಯ ಮೆಟ್ಟಿಲು ಕಲ್ಲುಗಳು, ಮನೆಯ ಹೊರಗಿರುತ್ತವೆ, ಒಳಗಲ್ಲ ಅಂತ ಹಾಸ್ಯ ಮಾಡಿ ಹೇಳಿದೆ. ಆಕೆಗೆ ಕೀಳರಿಮೆ ಹೋಯ್ತು. ನಮ್ಮ ಬದುಕು ಸರಾಗವಾಯ್ತು. ಹೀಗೆ ನಾವು ಮನುಷ್ಯನ ಆಂತರ್ಯದಲ್ಲಿನ ಕೀಳರಿಮೆ ಹೋಗಲಾಡಿಸಿಬಿಡ್ತೇವೆ.”
“ಇದಕ್ಕೂ ಅಂಬರೀಶ್ ವಿಷಯಕ್ಕೂ ಏನು ಸಂಬಂಧ.”
“ಸಂಬಂಧವುಂಟು, ಅಂಬರೀಶ್ರಲ್ಲಿದ್ದ ಭಾವೋದ್ವೇಗ ಕಡಿಮೆ ಮಾಡಿ, ಇನ್ನೂ ಬದುಕುವಂತೆ ಮಾಡ್ತಾಯಿದ್ದೆ.”
“ಮಿಸ್ಟರ್ ಬ್ರಹ್ಮ, ನಿಮ್ಮ ಜೋತಿಷ್ಯ ಪ್ರಧಾನವಾಗಿ ಹೊಟ್ಟೆ ಪಾಡಿಂದು, ಈ ದೇಶದ ಮುಗ್ಧ ಮನಸ್ಸುಗಳ ತಲೆಗೆ ಪುರಾಣ ತುಂಬಿ ದೇಶನೆ ಬಾಳೆಎಲೆ ಮಾಡಿಕೊಂಡು ಉಂಡ್ರಿ ಅಂತ ನಮ್ಮ ತೇಜಸ್ವಿ ಹೇಳತಿದ್ರು. ಏನಾದ್ರು ಮಾಡಿಕೊಂಡು ಹಾಳಾಗೋಗಿ. ಆದ್ರೆ ಅಂಬರೀಶ್ ವಿಷಯದಲ್ಲಿ ಪುರಾಣ ಶುರುಮಾಡಿದ್ರೆ ಸರಿಯಾಗಿ ಮಾಡಬೇಕಾಯ್ತದೆ.”
“ಯಂತ ಮಾಡ್ತಿರಿ.”
“ನಿನ್ನ ರಿಂಗ್‍ಟೋನಿದೆಯಲ್ಲ ಆ ತರ ನಡೆಯಬೇಕಾದ್ದು ನಡದೇ ನಡೆಯುತ್ತೆ. ನಡೆಯಬೇಕಾದ ರೀತಿಯಲ್ಲೇ ನಡೆಯುತ್ತೆ.”
“ನನ್ನನ್ನ ಬೆದರಿಸುತ್ತೀಯ, ಶಾಪ ಕೊಡ್ತೇನೆ.”
“ನಿನ್ನ ಶಾಪ ನನ್ನ ಕೂದಲಿಗೆ ಸಮ.”
“ಛೇ ಕೆಟ್ಟವನೆ.”
ಥೂತ್ತೇರಿ….!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪ್ಯಾಲೆಸ್ತೀನ್ ಸಿನಿಮಾಗಳ ಪ್ರದರ್ಶನಕ್ಕೆ ಅನುಮತಿ ನಿರಾಕರಣೆ; ರಾಜ್ಯ ಸರ್ಕಾರ ಗಟ್ಟಿ ದನಿಯಲ್ಲಿ ಪ್ರತಿಭಟಿಸಬೇಕು : ನಟ ಪ್ರಕಾಶ್ ರಾಜ್

ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವದಲ್ಲಿ ಪ್ಯಾಲೆಸ್ತೀನಿಯನ್ ಸಿನಿಮಾಗಳ ಪ್ರದರ್ಶನಕ್ಕೆ ಅನುಮತಿ ನಿರಾಕರಿಸಿರುವ ಕೇಂದ್ರ ಸರ್ಕಾರದ ಕ್ರಮವನ್ನು ರಾಜ್ಯ ಸರ್ಕಾರ ಗಟ್ಟಿ ದನಿಯಲ್ಲಿ ಪ್ರತಿರೋಧಿಸಬೇಕು, ಪ್ರತಿಭಟಿಸಬೇಕು ಎಂದು ನಟ ಪ್ರಕಾಶ್ ರಾಜ್ ಒತ್ತಾಯಿಸಿದರು. ಗುರುವಾರ (ಜ.29) ಸಂಜೆ...

ಗೌರಿ ಲಂಕೇಶರ ನೆರಳು ನನ್ನ ಮೇಲೆ ಬಿದ್ದಿರುವ ಕಾರಣಕ್ಕೆ ‘ಲ್ಯಾಂಡ್‍ ಲಾರ್ಡ್‌’ನಂತಹ ಸಿನಿಮಾ ಮಾಡಲು ಕೈ ಹಾಕಿದ್ದೇನೆ: ನಟ ದುನಿಯಾ ವಿಜಯ್

ಗೌರಿ ಲಂಕೇಶ್ ಹಾಗೂ ಇತರ ಹೋರಾಟಗಾರರ ನೆರಳು ನನ್ನ ಮೇಲೆ ಬಿದ್ದಿರುವ ಕಾರಣಕ್ಕೆ ನಾನು 'ಲ್ಯಾಂಡ್‍ಲಾರ್ಡ್' ನಂತಹ ಸಿನೆಮಾ ಮಾಡುವುದಕ್ಕೆ ಕೈ ಹಾಕಿದ್ದೇನೆ ಎಂದು ನಟ ದುನಿಯಾ ವಿಜಯ್ ಹೇಳಿದರು. ಗುರುವಾರ (ಜ.29) ಬೆಂಗಳೂರಿನ...

ಜಾತಿ ತಾರತಮ್ಯ ತಡೆಗಟ್ಟುವ ಯುಜಿಸಿಯ ಹೊಸ ನಿಯಮಕ್ಕೆ ಸುಪ್ರೀಂ ಕೋರ್ಟ್ ತಡೆ

ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಜಾತಿ ಆಧಾರಿತ ತಾರತಮ್ಯವನ್ನು ತಡೆಗಟ್ಟಲು ಕೇಂದ್ರ ಸರ್ಕಾರ ಜಾರಿಗೆ ತಂದಿರುವ ವಿಶ್ವವಿದ್ಯಾಲಯ ಅನುದಾನ ಆಯೋಗದ (ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಸಮಾನತೆಯ ಪ್ರಚಾರ) ನಿಯಮಗಳು, 2026ಕ್ಕೆ ಸುಪ್ರೀಂ ಕೋರ್ಟ್ ಗುರುವಾರ...

ರಾಜಸ್ಥಾನ| ಸಾರ್ವಜನಿಕ ಕಾರ್ಯಕ್ರಮದಲ್ಲಿ ವೃದ್ಧ ಮಹಿಳೆಯನ್ನು ಕಾಲಿನಿಂದ ಒದ್ದ ವ್ಯಕ್ತಿ

ರಾಜಸ್ಥಾನದ ಬಾರ್ಮರ್ ಜಿಲ್ಲೆಯಲ್ಲಿ ನಡೆಯುತ್ತಿದ್ದ ಸಾರ್ವಜನಿಕ ಕಾರ್ಯಕ್ರಮವೊಂದರಲ್ಲಿ ವೃದ್ಧ ಮಹಿಳೆಯನ್ನು ಒದೆಯುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆದ ನಂತರ ವ್ಯಕ್ತಿಯನ್ನು ಬಂಧಿಸಲಾಗಿದೆ. ಆತನ ಕೃತ್ಯದ ವಿರುದ್ಧ ವ್ಯಾಪಕ ಆಕ್ರೋಶಕ್ಕೆ ವ್ಯಕ್ತವಾಗಿದೆ. ಜತೋನ್ ಕಾ...

ಅಜಿತ್ ಪವಾರ್ ವಿಮಾನ ದುರಂತ: ಅಪಘಾತ ಸ್ಥಳದಲ್ಲಿ ಬ್ಲಾಕ್ ಬಾಕ್ಸ್ ಪತ್ತೆ..!

ನವದೆಹಲಿ: ಮಹಾರಾಷ್ಟ್ರ ಉಪಮುಖ್ಯಮಂತ್ರಿ ಅಜಿತ್ ಪವಾರ್ ಮತ್ತು ಇತರ ನಾಲ್ವರು ಸಾವನ್ನಪ್ಪಿದ ಬಾರಾಮತಿ ವಿಮಾನ ನಿಲ್ದಾಣದಲ್ಲಿ ಬುಧವಾರ ಸಂಭವಿಸಿದ ವಿಮಾನ ಅಪಘಾತದ ತನಿಖೆಯ ಕುರಿತು ನಾಗರಿಕ ವಿಮಾನಯಾನ ಸಚಿವಾಲಯ (MoCA) ಗುರುವಾರ ಹೇಳಿಕೆ...

ಮೀಸಲಾತಿಗಾಗಿ ಪ್ರಬಲ ಜಾತಿಯ ವ್ಯಕ್ತಿ ಬೌದ್ಧ ಧರ್ಮಕ್ಕೆ ಮತಾಂತರ : ಹೊಸ ಬಗೆಯ ವಂಚನೆ ಎಂದ ಸುಪ್ರೀಂ ಕೋರ್ಟ್

ಇಬ್ಬರು ಪ್ರಬಲ ಜಾತಿ ಅಭ್ಯರ್ಥಿಗಳು ಬೌದ್ಧ ಧರ್ಮಕ್ಕೆ ಮತಾಂತರಗೊಂಡಿರುವ ಬಗ್ಗೆ ಮಂಗಳವಾರ (ಜ.27) ಸುಪ್ರೀಂ ಕೋರ್ಟ್ ಗಂಭೀರ ಅನುಮಾನ ವ್ಯಕ್ತಪಡಿಸಿದ್ದು, ಈ ನಡೆಯು ಸ್ನಾತಕೋತ್ತರ ವೈದ್ಯಕೀಯ ಕೋರ್ಸ್‌ಗಳಿಗೆ ಅಲ್ಪಸಂಖ್ಯಾತ ಕೋಟಾದ ಅಡಿಯಲ್ಲಿ ಪ್ರವೇಶ...

ವಿಮಾನ ಪತನ : ಸಂಸದ ಸೇರಿ 15 ಜನರು ಸಾವು

ಬುಧವಾರ (ಜ.28) ಸರ್ಕಾರಿ ಸ್ವಾಮ್ಯದ ವಿಮಾನಯಾನ ಸಂಸ್ಥೆ ಸಟೇನಾ ನಿರ್ವಹಿಸುತ್ತಿದ್ದ ಸಣ್ಣ ಪ್ರಯಾಣಿಕ ವಿಮಾನವು ಈಶಾನ್ಯ ಕೊಲಂಬಿಯಾದ ಪರ್ವತ ಪ್ರದೇಶದಲ್ಲಿ ಪತನಗೊಂಡು ಎಲ್ಲಾ 15 ಪ್ರಯಾಣಿಕರು ಜನರು ಸಾವಿಗೀಡಾಗಿದ್ದಾರೆ. ದುರಂತದ ಕಾರಣ ಇನ್ನೂ ಸ್ಪಷ್ಟವಾಗಿಲ್ಲ....

‘ವಿಳಂಬವಾದರೂ ಸ್ವಾಗತಾರ್ಹ ಹೆಜ್ಜೆ..’; ಕೇಂದ್ರದ ಯುಜಿಸಿ ನಿಯಮಗಳನ್ನು ಪ್ರಶಂಸಿದ ಸಿಎಂ ಸ್ಟಾಲಿನ್

ಯುಜಿಸಿ (ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಈಕ್ವಿಟಿ ಪ್ರಚಾರ) ನಿಯಮಗಳು, 2026 "ಆಳವಾಗಿ ಬೇರೂರಿರುವ ತಾರತಮ್ಯ ಮತ್ತು ಸಾಂಸ್ಥಿಕ ನಿರಾಸಕ್ತಿಯಿಂದ ಬಳಲುತ್ತಿರುವ ಉನ್ನತ ಶಿಕ್ಷಣ ವ್ಯವಸ್ಥೆಯನ್ನು ಸುಧಾರಿಸುವಲ್ಲಿ ವಿಳಂಬವಾದರೂ ಸ್ವಾಗತಾರ್ಹ ಹೆಜ್ಜೆಯಾಗಿದೆ" ಎಂದು ತಮಿಳುನಾಡು...

ಹಿರಿಯ ಕಾರ್ಮಿಕ ಮುಖಂಡ ಅನಂತ ಸುಬ್ಬರಾವ್ ನಿಧನ

ಕಳೆದ ನಾಲ್ಕು ದಶಕಗಳಿಂದ ಸಾರಿಗೆ ಕ್ಷೇತ್ರದ ಕಾರ್ಮಿಕರ ಪರವಾಗಿ ಧ್ವನಿ ಎತ್ತುತ್ತಿದ್ದ, ಕಾರ್ಮಿಕರ ಹಿತರಕ್ಷಣೆಗಾಗಿ ನಿರಂತರ ಹೋರಾಟ ನಡೆಸುತ್ತಿದ್ದ ಹಿರಿಯ ಕಾರ್ಮಿಕ ಮುಖಂಡ ಎಚ್‌.ವಿ ಅನಂತ ಸುಬ್ಬರಾವ್ ಅವರು ಜನವರಿ 28ರಂದು, ನಿಧನರಾಗಿದ್ದಾರೆ....

ಮುಡಾ ಪ್ರಕರಣ: ಸಿದ್ದರಾಮಯ್ಯಗೆ ಬಿಗ್ ರಿಲೀಫ್, ಲೋಕಾಯುಕ್ತ ಬಿ ರಿಪೋರ್ಟ್ ಪುರಸ್ಕರಿಸಿದ ಕೋರ್ಟ್

ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ (ಮುಡಾ) ಪ್ರಕರಣಕ್ಕೆ ಸಂಬಂಧಿಸಿದಂತೆ ಲೋಕಾಯುಕ್ತ ಪೊಲೀಸರು ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಅವರ ಕುಟುಂಬದ ವಿರುದ್ಧ ಪುರಾವೆಗಳಿಲ್ಲ ಎಂದು ಹೇಳಿ ‘ಕ್ಲೀನ್ ಚೀಟ್’ ನೀಡಿ ‘ಬಿ’ ರಿಪೋರ್ಟ್ ಅನ್ನು ಸಲ್ಲಿಸಿತ್ತು....