Homeಮುಖಪುಟವಿಸ್ತರಣಾವಾದಿಗಳ ಕಾಲ ಮುಗಿದಿದೆ, ಇದು ಪ್ರಗತಿಯ ಯುಗ: ನರೇಂದ್ರ ಮೋದಿ

ವಿಸ್ತರಣಾವಾದಿಗಳ ಕಾಲ ಮುಗಿದಿದೆ, ಇದು ಪ್ರಗತಿಯ ಯುಗ: ನರೇಂದ್ರ ಮೋದಿ

ಭಾರತ-ಚೀನಾ ಗಡಿ ಸಂಘರ್ಷದಲ್ಲಿ ಭಾರತದ 20 ಸೈನಿಕರು ಸಾವಿಗೀಡಾದ ನಂತರ ಎರಡೂ ದೇಶಗಳ ನಡುವೆ ಉದ್ವಿಗ್ನ ವಾತಾವರಣ ನಿರ್ಮಾಣವಾಗಿದೆ.

- Advertisement -
- Advertisement -

ಜಗತ್ತಿನಲ್ಲಿ ವಿಸ್ತರಣಾವಾದಿಗಳ ಕಾಲ ಮುಗಿದಿದೆ. ಹೀಗಾಗಿ ವಿಸ್ತರಣಾವಾದಿಗಳು ತಮ್ಮ ಮಾರ್ಗವನ್ನು ಸರಿಪಡಿಸಿಕೊಳ್ಳಬೇಕು ಇಲ್ಲವೇ ಸರ್ವನಾಶವಾಗುತ್ತಾರೆ ಎಂದು ಪ್ರಧಾನಿ ನರೇಂದ್ರ ಮೋದಿ ಚೀನಾ ಜೊತೆಗೆ ಗಡಿ ಹಂಚಿಕೊಂಡಿರುವ ಲಡಾಖಿನ ಎತ್ತರದ ಬೆಟ್ಟ ಪ್ರದೇಶದಲ್ಲಿ ಹೇಳಿದ್ದಾರೆ.

ಇತ್ತಿಚೆಗೆ ಭಾರತ-ಚೀನಾ ಗಡಿ ಸಂಘರ್ಷದಲ್ಲಿ ಭಾರತದ 20 ಸೈನಿಕರು ಸಾವಿಗೀಡಾದ ನಂತರ ಎರಡೂ ದೇಶಗಳ ನಡುವೆ ಉದ್ವಿಗ್ನ ವಾತಾವರಣ ನಿರ್ಮಾಣವಾಗಿದೆ. ಗಡಿಯಲ್ಲಿ ಯುದ್ಧದ ಭೀತಿ ಉಂಟಾಗಿದ್ದು, ಇಂದು ಮೊದಲ ಬಾರಿಗೆ ಪ್ರಧಾನಿ ನರೇಂದ್ರ ಮೋದಿ ಲಡಾಖ್ ಗೆ ಭೇಟಿ ನೀಡಿದ್ದಾರೆ.

ಈ ವೇಳೆ ಸೈನಿಕರನ್ನು ಉದ್ದೇಶಿಸಿ 26 ನಿಮಿಷಗಳ ಭಾಷಣ ಮಾಡಿರುವ ನರೇಂದ್ರ ಮೋದಿ, “ವಿಸ್ತರಣೆಯ ಯುಗ ಮುಗಿದಿದೆ. ಇದು ಪ್ರಗತಿಯ ಯುಗ. ಪ್ರಗತಿ ಸಾಧಿಸಿದರೆ ಮಾತ್ರ ಎಲ್ಲಾ ದೇಗಳಿಗೂ ಭವಿಷ್ಯ. ವಿಸ್ತರಣೆಯ ಯುಗದಲ್ಲಿ ಮಾನವೀಯತೆ ಸಾಕಷ್ಟು ಸಂಷಕ್ಟಗಳನ್ನು ಅನುಭವಿಸಿತ್ತು. ಆದರೆ, ಈಗ ಆ ಪರಿಸ್ಥಿತಿ ಇಲ್ಲ. ಏಕೆಂದರೆ ವಿಸ್ತರಣಾವಾದಿಗಳು ನಾಶವಾಗಿರುವುದಕ್ಕೆ ಇತಿಹಾಸದಲ್ಲಿ ಸಾಕಷ್ಟು ಪುರಾವೆಗಳಿವೆ” ಎಂದು ತಿಳಿಸಿದ್ದಾರೆ.

ಭಾರತೀಯ ಸೈನಿಕರ ಧೈರ್ಯವನ್ನು ಸಾಟಿಯಿಲ್ಲದವರು ಎಂದು ಬಣ್ಣಿಸಿದ ಪ್ರಧಾನಿ ಮೋದಿ, “ಈ ಕಷ್ಟದ ಸಂದರ್ಭಗಳಲ್ಲಿ, ಸೈನಿಕರು ತಾಯ್ನಾಡಿನ ಗುರಾಣಿ. ನಿಮ್ಮ ಧೈರ್ಯ ಎಂಬುದು ನೀವೆಲ್ಲರೂ ನಿಂತಿರುವ ಎತ್ತರಕ್ಕಿಂತ ಹೆಚ್ಚಾಗಿದೆ. ನಿಮ್ಮ ತೋಳುಗಳು ನಿಮ್ಮನ್ನು ಸುತ್ತುವರೆದಿರುವ ಪರ್ವತಗಳಷ್ಟೇ ಪ್ರಬಲವಾಗಿವೆ. ನಿಮ್ಮ ಆತ್ಮವಿಶ್ವಾಸ, ನಿರ್ಣಯ ಮತ್ತು ನಂಬಿಕೆ ಇಲ್ಲಿನ ಶಿಖರಗಳಂತೆ ಸ್ಥಿರವಾಗಿದೆ” ಎಂದು ಬಣ್ಣಿಸಿದ್ದಾರೆ.

“ಭಾರತೀಯ ಸಶಸ್ತ್ರ ಪಡೆ ವಿಶ್ವದ ಎಲ್ಲರಿಗಿಂತಲೂ ಪ್ರಬಲವಾಗಿದೆ ಮತ್ತು ಉತ್ತಮವಾಗಿದೆ ಎಂದು ನೀವು ಮತ್ತೆ ಮತ್ತೆ ಸಾಬೀತುಪಡಿಸಿದ್ದೀರಿ. ಲೇಹ್ ನಿಂದ ಲಡಾಖ್ ವರೆಗೆ, ಕಾರ್ಗಿಲ್ ನಿಂದ ಸಿಯಾಚಿನ್ ವರೆಗೆ, ಎಲ್ಲಾ ಪ್ರದೇಶಗಳು ನಮ್ಮ ಸೈನ್ಯದ ಧೈರ್ಯಕ್ಕೆ ಸಾಕ್ಷಿಯಾಗಿವೆ. ನಿಮ್ಮ ಧೈರ್ಯದ ಕಥೆಗಳು ದೇಶದ ಪ್ರತಿ ಮನೆ ಮನೆಯಲ್ಲಿ ಪ್ರತಿಧ್ವನಿಸುತ್ತವೆ” ಎಂದು ಹೇಳಿದ್ದಾರೆ.

ಪ್ರಧಾನಿಯೊಂದಿಗೆ ದೇಶದ ರಕ್ಷಣಾ ಮುಖ್ಯಸ್ಥ ಜನರಲ್ ಬಿಪಿನ್ ರಾವತ್ ಮತ್ತು ಸೇನಾ ಮುಖ್ಯಸ್ಥ ಜನರಲ್ ಎಂಎಂ ನರವಾನೆ ಕೂಡಾ ಉಪಸ್ಥಿತರಿದ್ದರು.


ಓದಿ: ಕಾಶ್ಮೀರಿ ವಿದ್ಯಾರ್ಥಿಗಳ ದೇಶದ್ರೋಹ ಪ್ರಕರಣ; ಚಾರ್ಜ್‌ಶೀಟ್ ವಿಳಂಬ ಮಾಡಿದ ಅಧಿಕಾರಿಯ ಅಮಾನತು


 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

  1. ವಿಸ್ತರಣಾ ವಾದಿಗಳ ಕಾಲ ಮುಗಿದಿದೆ ಏರು ಇದ್ದರೂ ಇನ್ನೂ ಪ್ರಗತಿಯ ಈಗ ಅಂತ ಭಾಷಣ ಮಾಡಿದ್ದೀರಾ ಮೋದಿಯವರೇ ಹಾಗಾದರೆ ನಿಮ್ಮ ಆರೆಸ್ಸೆಸ್ಸಿನ ಕನಸಾದ ಅಖಂಡ ಭಾರತದ ಕಲ್ಪನೆಯೂ ಏನಾಗಬಹುದು ಅದರಲ್ಲಿ ನೇಪಾಳ ಭೂತಾನ್ ಬರ್ಮಾ ಪಾಕಿಸ್ತಾನ ಬಾಂಗ್ಲಾದೇಶ ಟಿಬೆಟ್ ಶ್ರೀಲಂಕಾ ಎಲ್ಲವೂ ಒಳಗೊಂಡಿದೆ ಅಲ್ಲ

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...