Homeಮುಖಪುಟವಿಸ್ತರಣಾವಾದಿಗಳ ಕಾಲ ಮುಗಿದಿದೆ, ಇದು ಪ್ರಗತಿಯ ಯುಗ: ನರೇಂದ್ರ ಮೋದಿ

ವಿಸ್ತರಣಾವಾದಿಗಳ ಕಾಲ ಮುಗಿದಿದೆ, ಇದು ಪ್ರಗತಿಯ ಯುಗ: ನರೇಂದ್ರ ಮೋದಿ

ಭಾರತ-ಚೀನಾ ಗಡಿ ಸಂಘರ್ಷದಲ್ಲಿ ಭಾರತದ 20 ಸೈನಿಕರು ಸಾವಿಗೀಡಾದ ನಂತರ ಎರಡೂ ದೇಶಗಳ ನಡುವೆ ಉದ್ವಿಗ್ನ ವಾತಾವರಣ ನಿರ್ಮಾಣವಾಗಿದೆ.

- Advertisement -
- Advertisement -

ಜಗತ್ತಿನಲ್ಲಿ ವಿಸ್ತರಣಾವಾದಿಗಳ ಕಾಲ ಮುಗಿದಿದೆ. ಹೀಗಾಗಿ ವಿಸ್ತರಣಾವಾದಿಗಳು ತಮ್ಮ ಮಾರ್ಗವನ್ನು ಸರಿಪಡಿಸಿಕೊಳ್ಳಬೇಕು ಇಲ್ಲವೇ ಸರ್ವನಾಶವಾಗುತ್ತಾರೆ ಎಂದು ಪ್ರಧಾನಿ ನರೇಂದ್ರ ಮೋದಿ ಚೀನಾ ಜೊತೆಗೆ ಗಡಿ ಹಂಚಿಕೊಂಡಿರುವ ಲಡಾಖಿನ ಎತ್ತರದ ಬೆಟ್ಟ ಪ್ರದೇಶದಲ್ಲಿ ಹೇಳಿದ್ದಾರೆ.

ಇತ್ತಿಚೆಗೆ ಭಾರತ-ಚೀನಾ ಗಡಿ ಸಂಘರ್ಷದಲ್ಲಿ ಭಾರತದ 20 ಸೈನಿಕರು ಸಾವಿಗೀಡಾದ ನಂತರ ಎರಡೂ ದೇಶಗಳ ನಡುವೆ ಉದ್ವಿಗ್ನ ವಾತಾವರಣ ನಿರ್ಮಾಣವಾಗಿದೆ. ಗಡಿಯಲ್ಲಿ ಯುದ್ಧದ ಭೀತಿ ಉಂಟಾಗಿದ್ದು, ಇಂದು ಮೊದಲ ಬಾರಿಗೆ ಪ್ರಧಾನಿ ನರೇಂದ್ರ ಮೋದಿ ಲಡಾಖ್ ಗೆ ಭೇಟಿ ನೀಡಿದ್ದಾರೆ.

ಈ ವೇಳೆ ಸೈನಿಕರನ್ನು ಉದ್ದೇಶಿಸಿ 26 ನಿಮಿಷಗಳ ಭಾಷಣ ಮಾಡಿರುವ ನರೇಂದ್ರ ಮೋದಿ, “ವಿಸ್ತರಣೆಯ ಯುಗ ಮುಗಿದಿದೆ. ಇದು ಪ್ರಗತಿಯ ಯುಗ. ಪ್ರಗತಿ ಸಾಧಿಸಿದರೆ ಮಾತ್ರ ಎಲ್ಲಾ ದೇಗಳಿಗೂ ಭವಿಷ್ಯ. ವಿಸ್ತರಣೆಯ ಯುಗದಲ್ಲಿ ಮಾನವೀಯತೆ ಸಾಕಷ್ಟು ಸಂಷಕ್ಟಗಳನ್ನು ಅನುಭವಿಸಿತ್ತು. ಆದರೆ, ಈಗ ಆ ಪರಿಸ್ಥಿತಿ ಇಲ್ಲ. ಏಕೆಂದರೆ ವಿಸ್ತರಣಾವಾದಿಗಳು ನಾಶವಾಗಿರುವುದಕ್ಕೆ ಇತಿಹಾಸದಲ್ಲಿ ಸಾಕಷ್ಟು ಪುರಾವೆಗಳಿವೆ” ಎಂದು ತಿಳಿಸಿದ್ದಾರೆ.

ಭಾರತೀಯ ಸೈನಿಕರ ಧೈರ್ಯವನ್ನು ಸಾಟಿಯಿಲ್ಲದವರು ಎಂದು ಬಣ್ಣಿಸಿದ ಪ್ರಧಾನಿ ಮೋದಿ, “ಈ ಕಷ್ಟದ ಸಂದರ್ಭಗಳಲ್ಲಿ, ಸೈನಿಕರು ತಾಯ್ನಾಡಿನ ಗುರಾಣಿ. ನಿಮ್ಮ ಧೈರ್ಯ ಎಂಬುದು ನೀವೆಲ್ಲರೂ ನಿಂತಿರುವ ಎತ್ತರಕ್ಕಿಂತ ಹೆಚ್ಚಾಗಿದೆ. ನಿಮ್ಮ ತೋಳುಗಳು ನಿಮ್ಮನ್ನು ಸುತ್ತುವರೆದಿರುವ ಪರ್ವತಗಳಷ್ಟೇ ಪ್ರಬಲವಾಗಿವೆ. ನಿಮ್ಮ ಆತ್ಮವಿಶ್ವಾಸ, ನಿರ್ಣಯ ಮತ್ತು ನಂಬಿಕೆ ಇಲ್ಲಿನ ಶಿಖರಗಳಂತೆ ಸ್ಥಿರವಾಗಿದೆ” ಎಂದು ಬಣ್ಣಿಸಿದ್ದಾರೆ.

“ಭಾರತೀಯ ಸಶಸ್ತ್ರ ಪಡೆ ವಿಶ್ವದ ಎಲ್ಲರಿಗಿಂತಲೂ ಪ್ರಬಲವಾಗಿದೆ ಮತ್ತು ಉತ್ತಮವಾಗಿದೆ ಎಂದು ನೀವು ಮತ್ತೆ ಮತ್ತೆ ಸಾಬೀತುಪಡಿಸಿದ್ದೀರಿ. ಲೇಹ್ ನಿಂದ ಲಡಾಖ್ ವರೆಗೆ, ಕಾರ್ಗಿಲ್ ನಿಂದ ಸಿಯಾಚಿನ್ ವರೆಗೆ, ಎಲ್ಲಾ ಪ್ರದೇಶಗಳು ನಮ್ಮ ಸೈನ್ಯದ ಧೈರ್ಯಕ್ಕೆ ಸಾಕ್ಷಿಯಾಗಿವೆ. ನಿಮ್ಮ ಧೈರ್ಯದ ಕಥೆಗಳು ದೇಶದ ಪ್ರತಿ ಮನೆ ಮನೆಯಲ್ಲಿ ಪ್ರತಿಧ್ವನಿಸುತ್ತವೆ” ಎಂದು ಹೇಳಿದ್ದಾರೆ.

ಪ್ರಧಾನಿಯೊಂದಿಗೆ ದೇಶದ ರಕ್ಷಣಾ ಮುಖ್ಯಸ್ಥ ಜನರಲ್ ಬಿಪಿನ್ ರಾವತ್ ಮತ್ತು ಸೇನಾ ಮುಖ್ಯಸ್ಥ ಜನರಲ್ ಎಂಎಂ ನರವಾನೆ ಕೂಡಾ ಉಪಸ್ಥಿತರಿದ್ದರು.


ಓದಿ: ಕಾಶ್ಮೀರಿ ವಿದ್ಯಾರ್ಥಿಗಳ ದೇಶದ್ರೋಹ ಪ್ರಕರಣ; ಚಾರ್ಜ್‌ಶೀಟ್ ವಿಳಂಬ ಮಾಡಿದ ಅಧಿಕಾರಿಯ ಅಮಾನತು


 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

  1. ವಿಸ್ತರಣಾ ವಾದಿಗಳ ಕಾಲ ಮುಗಿದಿದೆ ಏರು ಇದ್ದರೂ ಇನ್ನೂ ಪ್ರಗತಿಯ ಈಗ ಅಂತ ಭಾಷಣ ಮಾಡಿದ್ದೀರಾ ಮೋದಿಯವರೇ ಹಾಗಾದರೆ ನಿಮ್ಮ ಆರೆಸ್ಸೆಸ್ಸಿನ ಕನಸಾದ ಅಖಂಡ ಭಾರತದ ಕಲ್ಪನೆಯೂ ಏನಾಗಬಹುದು ಅದರಲ್ಲಿ ನೇಪಾಳ ಭೂತಾನ್ ಬರ್ಮಾ ಪಾಕಿಸ್ತಾನ ಬಾಂಗ್ಲಾದೇಶ ಟಿಬೆಟ್ ಶ್ರೀಲಂಕಾ ಎಲ್ಲವೂ ಒಳಗೊಂಡಿದೆ ಅಲ್ಲ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...