Homeಕರ್ನಾಟಕರಸ್ತೆ ಕಾಮಗಾರಿಗೆ ಶಂಕುಸ್ಥಾಪನೆ: ಪ್ರೋಟೊಕಾಲ್ ಪ್ರಶ್ನಿಸಿದ ನಗರಸಭಾ ಸದಸ್ಯನ ಮೇಲೆ ಬಿಜೆಪಿ ಶಾಸಕರ ಬೆಂಬಲಿಗರಿಂದ ಹಲ್ಲೆ

ರಸ್ತೆ ಕಾಮಗಾರಿಗೆ ಶಂಕುಸ್ಥಾಪನೆ: ಪ್ರೋಟೊಕಾಲ್ ಪ್ರಶ್ನಿಸಿದ ನಗರಸಭಾ ಸದಸ್ಯನ ಮೇಲೆ ಬಿಜೆಪಿ ಶಾಸಕರ ಬೆಂಬಲಿಗರಿಂದ ಹಲ್ಲೆ

ಶಾಸಕ ಬಿ.ಸಿ.ನಾಗೇಶ್ ಅವರು ಪ್ರೋಟೋಕಾಲ್ ಉಲ್ಲಂಘಿಸಿ ಕಾಂಕ್ರೀಟ್ ರಸ್ತೆ ಕಾಮಗಾರಿ ಶಂಕು ಸ್ಥಾಪನೆ ನೆರವೇರಿಸಿದ್ದನ್ನು ಪ್ರಶ್ನಿಸಿದ್ದ ನಗರಸಭಾ ಸದಸ್ಯ ಯೋಗೀಶ್.

- Advertisement -
- Advertisement -

ಪ್ರೋಟೊಕಾಲ್ ಉಲ್ಲಂಘಿಸಿ ರಸ್ತೆ ಕಾಮಗಾರಿ ಶಂಕುಸ್ಥಾಪನೆ ಮಾಡಿದ ಶಾಸಕರ ಕ್ರಮವನ್ನು ಪ್ರಶ್ನಿಸಿದ ನಗರಸಭಾ ಸದಸ್ಯರೊಬ್ಬರ ಮೇಲೆ ಬಿಜೆಪಿ ಶಾಸಕರ ಬೆಂಬಲಿಗರು ಹಲ್ಲೆ ನಡೆಸಿರುವ ಘಟನೆ ತುಮಕೂರು ಜಿಲ್ಲೆ ತಿಪಟೂರು ನಗರದಲ್ಲಿ ನಡೆದಿದೆ.

ತಿಪಟೂರು ಶಾಸಕ ಬಿ.ಸಿ.ನಾಗೇಶ್ ಜುಲೈ 3 ರಂದು ಬೆಳಗ್ಗೆ 14 ನೇ ವಾರ್ಡ್ ವಿದ್ಯಾನಗರದಲ್ಲಿ ಕಾಂಕ್ರೀಟ್ ರಸ್ತೆ ನಿರ್ಮಾಣಕ್ಕೆ ಭೂಮಿಪೂಜೆ ನೆರವೇರಿಸುತ್ತಿದ್ದರು. ಆಗ ಸ್ಥಳಕ್ಕೆ ಬಂದ ಅದೇ ವಾರ್ಡಿನ  ನಗರಸಭಾ ಸದಸ್ಯ ಯೋಗೀಶ್ ಅವರು ಶಾಸಕರ ಕ್ರಮವನ್ನು ಪ್ರಶ್ನಿಸತೊಡಗಿದರು. ಮಾತಿಗೆ ಮಾತು ಬೆಳೆದು ಎರಡೂ ಕಡೆ ಕೈಕೈ ಮಿಲಾಯಿಸುವ ಹಂತಕ್ಕೆ ಹೋಯಿತು ಎಂದು ಪ್ರತ್ಯಕ್ಷದರ್ಶಿಗಳು ತಿಳಿಸಿದ್ದಾರೆ.

ಗ್ರಾಮ ಪಂಚಾಯಿತಿ ಮಟ್ಟದಿಂದ ಹಿಡಿದು ಎಲ್ಲಿಯೇ ಸರ್ಕಾರಿ ಕಾರ್ಯಕ್ರಮ, ಕಾಮಗಾರಿ ಉದ್ಘಾಟನೆ ಮತ್ತು ಶಂಕುಸ್ಥಾಪನೆ ನೆರವೇರಿಸಿದರೂ ಸ್ಥಳೀಯ ಗ್ರಾಮ ಪಂಚಾಯಿತಿ ಅಧ್ಯಕ್ಷರು, ತಾಲೂಕು ಪಂಚಾಯಿ ಸದಸ್ಯರು, ನಗರಸಭಾ ಸದಸ್ಯರನ್ನು ಪ್ರೋಟೋಕಾಲ್ ಪ್ರಕಾರ ಸಮಾರಂಭಕ್ಕೆ ಆಹ್ವಾನಿಸುವುದು ಸತ್ ಸಂಪ್ರದಾಯ. ಹಿಂದಿನಿಂದಲೂ ಇದು ನಡೆದುಕೊಂಡು ಬಂದಿರುವ ಪದ್ದತಿ.

ಆದರೆ ಶಾಸಕ ಬಿ.ಸಿ.ನಾಗೇಶ್ ಅವರು ಪ್ರೋಟೋಕಾಲ್ ಉಲ್ಲಂಘಿಸಿ ಕಾಂಕ್ರೀಟ್ ರಸ್ತೆ ಕಾಮಗಾರಿಗೆ ಶಂಕು ಸ್ಥಾಪನೆ ನೆರವೇರಿಸಿದರು. ಇದನ್ನು ನಗರಸಭಾ ಸದಸ್ಯ ಯೋಗೀಶ್ ಪ್ರಶ್ನಿಸಿದರು. ಏನಣ್ಣಾ ನಾನು ಈ ವಾರ್ಡಿನ ಸದಸ್ಯ. ನನ್ನನ್ನು ಬಿಟ್ಟು ರಸ್ತೆ ಕಾಮಗಾರಿಗೆ ಶಂಕುಸ್ಥಾಪನೆ ನಡೆಸುತ್ತಿದ್ದೀರ. ಇದು ಸರಿಯಲ್ಲ ಎಂದು ಪ್ರಶ್ನಿಸಿರುವುದು ವಿಡಿಯೋದಲ್ಲಿ ಸೆರೆಯಾಗಿದೆ.

ತಿಪಟೂರು ಶಾಸಕ ಬಿ.ಸಿ ನಾಗೇಶ್ ಬೆಂಬಲಿಗರಿಂದ ನಗರಸಭಾ ಸದಸ್ಯ ಯೋಗೇಶ್ ಮೇಲೆ ಹಲ್ಲೆ

ತಿಪಟೂರು ಬಿಜೆಪಿ ಶಾಸಕ ಬಿ.ಸಿ ನಾಗೇಶ್ ಬೆಂಬಲಿಗರಿಂದ ಕಾಂಗ್ರೆಸ್ ನಗರಸಭಾ ಸದಸ್ಯ ಯೋಗೇಶ್ ಮೇಲೆ ಹಲ್ಲೆ. ತಿಪಟೂರಿನ ವಿದ್ಯಾನಗರದ ಕಾಂಕ್ರಿಟ್ ರಸ್ತೆ ಕಾಮಗಾರಿ ರಸ್ತೆ ಉದ್ಘಾಟನೆ ವೇಳೆ ಪ್ರೊಟೋಕಾಲ್ ಪ್ರಕಾರ ನಗರಸಭಾ ಸದಸ್ಯರನ್ನು ಏಕೆ ಆಹ್ವಾನಿಸಿಲ್ಲ ಎಂಬ ವಿಚಾರಕ್ಕೆ ವಾಗ್ದಾದ. ಮಾತಿಗೆ ಮಾತು ಬೆಳೆದು ಶಾಸಕರ ಬೆಂಬಲಿಗರಿಂದ ನಗರಸಭಾ ಸದಸ್ಯರ ಮೇಲೆ ಹಲ್ಲೆ

Posted by Naanu Gauri on Thursday, July 2, 2020

ವಿದ್ಯಾನಗರದ ರಸ್ತೆ ನಿರ್ಮಾಣ ಕಾಮಗಾರಿ ಶಂಕುಸ್ಥಾಪನೆಗೆ ನಗರಸಭೆಯ ಅಧಿಕಾರಿಗಳನ್ನು ಶಾಸಕರು ಕರೆದಿಲ್ಲ. ಸ್ಥಳೀಯ ಸದಸ್ಯರನ್ನು ಆಹ್ವಾನಿಸಿಲ್ಲ. ಕೇವಲ ಬಿಜೆಪಿ ಸದಸ್ಯರೊಂದಿಗೆ ಆಗಮಿಸಿ ಕಾಮಗಾರಿಯ ಭೂಮಿಪೂಜೆ ನೆರವೇರಿಸಿರುವುದು ಕಾಂಗ್ರೆಸ್ ನಗರಸಭಾ ಸದಸ್ಯ ಯೋಗೀಶ್ ಅವರ ಅಸಮಾಧಾನಕ್ಕೆ ಕಾರಣವಾಗಿದೆ ಎನ್ನಲಾಗಿದೆ.

ಯೋಗೀಶ್ ಶಾಸಕರನ್ನು ಪ್ರಶ್ನಿಸುತ್ತಿರುವ 1.35 ನಿಮಿಷದ ವಿಡಿಯೋವೊಂದನ್ನು ಬಿಡುಗಡೆ ಮಾಡಲಾಗಿದ್ದು ಅದರಲ್ಲಿ ಶಾಸಕರು ಮತ್ತು ಯೋಗೀಶ್ ನಡುವೆ ವಾಗ್ವಾದ ನಡೆಯುತ್ತದೆ. ಶಾಶಕರು ತಾನು ವಿಶೇಷ ಯೋಜನೆಯಡಿ ಅನುದಾನ ತಂದಿದ್ದೇನೆ. ನಿಮ್ಮನ್ನು ಆಹ್ವಾನಿಸುವ ಅಗತ್ಯವಿಲ್ಲ ಎಂದು ಹೇಳುತ್ತಾರೆ. ಆಗ ಯೋಗೀಶ್ ಕೂಡ ಇದು ಸರ್ಕಾರದ ಹಣ. ಪ್ರೋಟೋಕಾಲ್ ಉಲ್ಲಂಘಿಸಿದ್ದೀರಿ. ಎಂದು ಶಾಸಕರನ್ನು ಪ್ರಶ್ನಿಸುತ್ತಾರೆ. ಆಗ ಶಾಶಕರ ಇಬ್ಬರು ಬೆಂಬಲಿಗರು ನಗರಸಭಾ ಸದಸ್ಯ ಯೋಗೀಶ್ ಮೇಲೆ ಜೋರು ಮಾತುಗಳಲ್ಲಿ ಎರುಗುತ್ತಾರೆ. ಆನಂತರ ಗಲಾಟೆ ನಡೆಯುವುದು ಕೇಳುತ್ತದೆ.

ಶಾಸಕರೊಂದಿಗೆ ಬೆಂಬಲಿಗರಾದ ಗಂಗರಾಜು, ಪ್ರಶಾಂತ, ರಾಮಮೋಹನ್ ಮಾತ್ರ ಇರುವುದು ಯೋಗೀಶ ಅವರ ಬೇಸರಕ್ಕೆ ಕಾರಣವಾಗಿದೆ. ಈ ಸಂಬಂಧ ನಾನುಗೌರಿ.ಕಾಂ ಜೊತೆ ಮಾತನಾಡಿದ ನಗರಸಭಾ ಸದಸ್ಯ ಯೋಗೀಶ್ ಶಾಸಕರ ಕ್ರಮವನ್ನು ಪ್ರಶ್ನಿಸಿದರು. ಕಾಂಕ್ರೀಟ್ ರಸ್ತೆ ನಿರ್ಮಾಣ ಕಾಮಗಾರಿ ಶಂಕುಸ್ಥಾಪನೆ ಕಾಮಗಾರಿ ಸರ್ಕಾರಿ ಕಾರ್ಯಕ್ರಮ. ಅಧಿಕಾರಿಗಳನ್ನು ಆಹ್ವಾನಿಸಿಲ್ಲ. ಸ್ಥಳೀಯ ವಾರ್ಡ್ ನ ಸದಸ್ಯನಾದ ನನ್ನನ್ನು ಆಹ್ವಾನಿಸಿಲ್ಲ. ಇದನ್ನು ಕೇಳಲು ಹೋದರೆ ಶಾಸಕರ ಬೆಂಬಲಿಗರು ನನ್ನ ಮೇಲೆ ಹಲ್ಲೆ ಮಾಡಿದ್ದಾರೆ. ದೃಶ್ಯಗಳನ್ನು ಸೆರೆ ಹಿಡಿಯುತ್ತಿದ್ದ ಮೊಬೈಲ್ ಅನ್ನು ಒಡೆದು ಹಾಕಿದ್ದಾರೆ ಎಂದು ದೂರಿದರು.

ಶಾಸಕ ಬಿ.ಸಿ.ನಾಗೇಶ್ ಸರಳ, ಸಜ್ಜನ ಎಂದು ಹೇಳುತ್ತಾರೆ. ಉತ್ತಮ ಕೆಲಸ ಮಾಡಿದ್ದಾರೆ ಎಂಬ ಮಾತು ಇದೆ. ಆದರೆ ಶಾಸಕರಿಗಿಂತ ಚೆನ್ನಾಗಿ ಕೆಲಸ ಮಾಡುವವರನ್ನು ಕಂಡರೆ ಸಹಿಸುವುದಿಲ್ಲ. ಉತ್ತಮ ಕೆಲಸ ಮಾಡುವವರನ್ನು ಉದ್ದೇಶಪೂರ್ವಕವಾಗಿಯೇ ಶಾಸಕರು ದೂರ ಇಡುತ್ತಾ ಹೋಗುತ್ತಾರೆ. ಮೇಲ್ನೋಟಕ್ಕೆ ಒಳ್ಳೆಯವರಂತೆ ಕಂಡು ಬಂದರೂ ಕೊಬ್ಬರಿ ಬೆಲೆ ನಿಗದಿ ನಡೆಯುವುದೆಲ್ಲ ಅವರ ಮೂಗಿನ ಅಡಿಯೇ ಎಂದು ಸ್ಥಳೀಯರು ಆರೋಪಿಸಿದ್ದಾರೆ.


ಓದಿ: ಪಿಎಂ ಕೇರ್ಸ್‌ಗೆ 60,000 ಕೋಟಿ ಹರಿದುಬಂದಿದೆ, ಆದರೂ ಮೋದಿ ಲೆಕ್ಕ ಕೊಡುತ್ತಿಲ್ಲ: ಸಿದ್ದರಾಮಯ್ಯ


 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...

ಏಕರೂಪ ನಾಗರಿಕ ಸಂಹಿತೆಯನ್ನು ಸಂಸತ್ತಿನ ಬದಲು ರಾಜ್ಯಗಳ ಮೂಲಕವೇ ಜಾರಿಗೆ ಅಮಿತ್ ಶಾ ಮುಂದಾಗಿದ್ದೇಕೆ?

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೆಪ್ಟೆಂಬರ್ 13ರಂದು ಮುಂಬೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ, 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ಮತ್ತು ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ...

ದಿಶಾ ಸಾಲಿಯಾನ್ ಸಾವಿನ ಪ್ರಕರಣ : ಸಿಬಿಐ ಎಫ್ಐಆರ್‌ನಲ್ಲಿ ಆದಿತ್ಯ ಠಾಕ್ರೆ, ರಿಯಾ ಚಕ್ರವರ್ತಿ ಸೇರಿದಂತೆ ಹಲವರ ಹೆಸರು

ಬಾಂಬೆ ಹೈಕೋರ್ಟ್ ಆದೇಶದ ಮೇರೆಗೆ, ಕೇಂದ್ರೀಯ ತನಿಖಾ ದಳವು (ಸಿಬಿಐ) ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಅವರ ನಿಗೂಢ ಸಾವಿಗೆ ಸಂಬಂಧಿಸಿದಂತೆ ಸೋಮವಾರ(ಸೆ.14) ಎಫ್‌ಐಆರ್ ದಾಖಲಿಸಿದೆ. ಶಿವಸೇನೆ...

ಟಿ. ನರಸೀಪುರ ಇನ್ಸ್‌ಪೆಕ್ಟರ್‌ ಧನಂಜಯ್‌ ಹೇಳಿದ್ದರಲ್ಲಿ ತಪ್ಪೇನಿದೆ? ಸಾರ್ವಜನಿಕರಿಂದ ಬೆಂಬಲ

ಮಸೀದಿಗಳ ಮುಂಭಾಗ ಯಾವುದೇ ಪ್ರಚೋದನಕಾರಿ ಕೃತ್ಯಗಳಿಗೆ ಆಸ್ಪದ ನೀಡದೆ, ರಾತ್ರಿ 10:30ರ ಒಳಗಾಗಿ ಡಿಜೆ ಸದ್ದಿಲ್ಲದೆ ನಿಯಮಾನುಸಾರ ಮೆರವಣಿಗೆ ಮುಗಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಂಡ ಇನ್ಸ್‌ಪೆಕ್ಟರ್ ಧನಂಜಯ್ ಅವರ ಪರವಾಗಿ ಈಗ ಸಾಮಾಜಿಕ...

ಅತ್ಯಾಚಾರ ಪ್ರಕರಣದಲ್ಲಿ 10 ವರ್ಷ ಜೈಲು ಶಿಕ್ಷೆ: ‘ತೆಹಲ್ಕಾ’ ಸಂಸ್ಥಾಪಕ ತರುಣ್ ತೇಜ್‌ಪಾಲ್ ನ್ಯಾಯಾಲಯಕ್ಕೆ ಶರಣು, ಜೈಲಿಗೆ ರವಾನೆ 

ಪಣಜಿ: 2013ರ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್‌ನ ಗೋವಾ ಪೀಠದಿಂದ ದೋಷಿ ಎಂದು ತೀರ್ಪುಗೊಂಡು 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆಗೆ ಗುರಿಯಾಗಿರುವ ‘ತೆಹಲ್ಕಾ’ ಸಂಸ್ಥಾಪಕ ಹಾಗೂ ಮಾಜಿ ಪ್ರಧಾನ ಸಂಪಾದಕ...

ಹೈದರಾಬಾದ್‌ನಲ್ಲಿ ಗಣೇಶ ವಿಗ್ರಹ ಖರೀದಿ ವಿಚಾರಕ್ಕೆ ಘರ್ಷಣೆ: 34 ವರ್ಷದ ವ್ಯಕ್ತಿ ಸಾವು: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹ

ಹೈದರಾಬಾದ್: ಗಣೇಶ ಚತುರ್ಥಿ ಆಚರಣೆಗೆ ಮುನ್ನ ಗಣೇಶ ವಿಗ್ರಹ ಖರೀದಿಸುವ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ವಾಗ್ವಾದವು ಹಿಂಸಾತ್ಮಕ ಘರ್ಷಣೆಗೆ ತಿರುಗಿ 34 ವರ್ಷದ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಹೈದರಾಬಾದ್‌ನ ಜೋಡಿಮೆಟ್ಲಾ ಪ್ರದೇಶದಲ್ಲಿ ನಡೆದಿದೆ....

ಮಹಿಳಾ ಬೈಕರ್‌ಗೆ ಬೇಕಂತಲೇ ಢಿಕ್ಕಿ ಹೊಡೆದು ಪರಾರಿಯಾದ ಕಾರು ಸವಾರ! ಬೆಚ್ಚಿಬೀಳಿಸುವ ವಿಡಿಯೋ ವೈರಲ್

ಹರ್ಯಾಣದ ಗುರುಗ್ರಾಮದ ಗಾಲ್ಫ್ ಕೋರ್ಸ್ ರಸ್ತೆಯಲ್ಲಿ ಅತಿವೇಗವಾಗಿ ಬಂದ ಕಾರೊಂದು ಮಹಿಳಾ ಬೈಕ್ ಸವಾರಿಗೆ ಉದ್ದೇಶಪೂರ್ವಕವಾಗಿ ಢಿಕ್ಕಿ ಹೊಡೆದು ಪರಾರಿಯಾಗಿರುವ ಭೀಕರ ಘಟನೆ ನಡೆದಿದೆ. ಹಿಟ್ ಆ್ಯಂಡ್ ರನ್ ಶಂಕೆ ವ್ಯಕ್ತವಾಗಿರುವ ಈ...

ಪ. ಬಂಗಾಳ | 252 ಮದ್ರಸಾಗಳನ್ನು ಮುಚ್ಚಲು ಆದೇಶಿಸಿದ ಬಿಜೆಪಿ ಸರ್ಕಾರ; 100 ಸಂಸ್ಥೆಗಳಿಗೆ ಕಾರಣ ಕೇಳಿ ನೋಟಿಸ್

ರಾಜ್ಯದಾದ್ಯಂತ ಮದ್ರಸಾಗಳ ಸಮೀಕ್ಷೆಯನ್ನು ಪ್ರಾರಂಭಿಸಿದ ಮೂರು ತಿಂಗಳ ನಂತರ, ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಅನುಮೋದನೆಯ ಕೊರತೆ ಅಥವಾ ಇತರ ಅಕ್ರಮಗಳನ್ನು ಉಲ್ಲೇಖಿಸಿ 252 ಸಂಸ್ಥೆಗಳನ್ನು ಮುಚ್ಚಲು ಆದೇಶಿಸಿದೆ ಮತ್ತು ಇತರ...

ಟಿ. ನರಸೀಪುರ ಪ್ರತಿಭಟನೆ ವೇಳೆ ವಾಕ್ಸಮರ: ಪ್ರತಾಪ್ ಸಿಂಹ ಹಾಗೂ ಎಲ್. ನಾಗೇಂದ್ರ ನಡುವೆ ಬಹಿರಂಗ ನೂಕಾಟ-ತಳ್ಳಾಟ!

ಟಿ. ನರಸೀಪುರದಲ್ಲಿ ಗಣೇಶೋತ್ಸವ ಮೆರವಣಿಗೆಗೆ ಸಂಬಂಧಿಸಿದ ವಿವಾದದ ಹಿನ್ನೆಲೆಯಲ್ಲಿ ಬಿಜೆಪಿ ಹಮ್ಮಿಕೊಂಡಿದ್ದ ಪ್ರತಿಭಟನೆ ವೇಳೆ ಮೈಸೂರು ಬಿಜೆಪಿಯಲ್ಲಿನ ಆಂತರಿಕ ಭಿನ್ನಮತ ಬಹಿರಂಗಗೊಂಡಿದೆ. ಪೊಲೀಸ್ ಇನ್ಸ್‌ಪೆಕ್ಟರ್ ಧನಂಜಯ್ ವಿರುದ್ಧ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ಮಾಜಿ...

ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನ ಮುಂದೂಡಿದ NLSIU ವಿದ್ಯಾರ್ಥಿ ಸಂಘ; ಯಾವುದೇ ಒತ್ತಡಕ್ಕೆ ಮಣಿದಿಲ್ಲವೆಂದು ಸ್ಪಷ್ಟನೆ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯ (NLSIU) ಲಾ ಅಂಡ್ ಸೊಸೈಟಿ ಕಮಿಟಿಯು (LawSoc) ಉಮರ್ ಖಾಲಿದ್ ಅವರ ಜೈಲುವಾಸದ ಕುರಿತು ಲಲಿತ್ ವಾಚಾನಿ ನಿರ್ಮಿಸಿರುವ 'ಪ್ರಿಸನರ್ ನಂ. 626710...