Homeಕರ್ನಾಟಕರಸ್ತೆ ಕಾಮಗಾರಿಗೆ ಶಂಕುಸ್ಥಾಪನೆ: ಪ್ರೋಟೊಕಾಲ್ ಪ್ರಶ್ನಿಸಿದ ನಗರಸಭಾ ಸದಸ್ಯನ ಮೇಲೆ ಬಿಜೆಪಿ ಶಾಸಕರ ಬೆಂಬಲಿಗರಿಂದ ಹಲ್ಲೆ

ರಸ್ತೆ ಕಾಮಗಾರಿಗೆ ಶಂಕುಸ್ಥಾಪನೆ: ಪ್ರೋಟೊಕಾಲ್ ಪ್ರಶ್ನಿಸಿದ ನಗರಸಭಾ ಸದಸ್ಯನ ಮೇಲೆ ಬಿಜೆಪಿ ಶಾಸಕರ ಬೆಂಬಲಿಗರಿಂದ ಹಲ್ಲೆ

ಶಾಸಕ ಬಿ.ಸಿ.ನಾಗೇಶ್ ಅವರು ಪ್ರೋಟೋಕಾಲ್ ಉಲ್ಲಂಘಿಸಿ ಕಾಂಕ್ರೀಟ್ ರಸ್ತೆ ಕಾಮಗಾರಿ ಶಂಕು ಸ್ಥಾಪನೆ ನೆರವೇರಿಸಿದ್ದನ್ನು ಪ್ರಶ್ನಿಸಿದ್ದ ನಗರಸಭಾ ಸದಸ್ಯ ಯೋಗೀಶ್.

- Advertisement -
- Advertisement -

ಪ್ರೋಟೊಕಾಲ್ ಉಲ್ಲಂಘಿಸಿ ರಸ್ತೆ ಕಾಮಗಾರಿ ಶಂಕುಸ್ಥಾಪನೆ ಮಾಡಿದ ಶಾಸಕರ ಕ್ರಮವನ್ನು ಪ್ರಶ್ನಿಸಿದ ನಗರಸಭಾ ಸದಸ್ಯರೊಬ್ಬರ ಮೇಲೆ ಬಿಜೆಪಿ ಶಾಸಕರ ಬೆಂಬಲಿಗರು ಹಲ್ಲೆ ನಡೆಸಿರುವ ಘಟನೆ ತುಮಕೂರು ಜಿಲ್ಲೆ ತಿಪಟೂರು ನಗರದಲ್ಲಿ ನಡೆದಿದೆ.

ತಿಪಟೂರು ಶಾಸಕ ಬಿ.ಸಿ.ನಾಗೇಶ್ ಜುಲೈ 3 ರಂದು ಬೆಳಗ್ಗೆ 14 ನೇ ವಾರ್ಡ್ ವಿದ್ಯಾನಗರದಲ್ಲಿ ಕಾಂಕ್ರೀಟ್ ರಸ್ತೆ ನಿರ್ಮಾಣಕ್ಕೆ ಭೂಮಿಪೂಜೆ ನೆರವೇರಿಸುತ್ತಿದ್ದರು. ಆಗ ಸ್ಥಳಕ್ಕೆ ಬಂದ ಅದೇ ವಾರ್ಡಿನ  ನಗರಸಭಾ ಸದಸ್ಯ ಯೋಗೀಶ್ ಅವರು ಶಾಸಕರ ಕ್ರಮವನ್ನು ಪ್ರಶ್ನಿಸತೊಡಗಿದರು. ಮಾತಿಗೆ ಮಾತು ಬೆಳೆದು ಎರಡೂ ಕಡೆ ಕೈಕೈ ಮಿಲಾಯಿಸುವ ಹಂತಕ್ಕೆ ಹೋಯಿತು ಎಂದು ಪ್ರತ್ಯಕ್ಷದರ್ಶಿಗಳು ತಿಳಿಸಿದ್ದಾರೆ.

ಗ್ರಾಮ ಪಂಚಾಯಿತಿ ಮಟ್ಟದಿಂದ ಹಿಡಿದು ಎಲ್ಲಿಯೇ ಸರ್ಕಾರಿ ಕಾರ್ಯಕ್ರಮ, ಕಾಮಗಾರಿ ಉದ್ಘಾಟನೆ ಮತ್ತು ಶಂಕುಸ್ಥಾಪನೆ ನೆರವೇರಿಸಿದರೂ ಸ್ಥಳೀಯ ಗ್ರಾಮ ಪಂಚಾಯಿತಿ ಅಧ್ಯಕ್ಷರು, ತಾಲೂಕು ಪಂಚಾಯಿ ಸದಸ್ಯರು, ನಗರಸಭಾ ಸದಸ್ಯರನ್ನು ಪ್ರೋಟೋಕಾಲ್ ಪ್ರಕಾರ ಸಮಾರಂಭಕ್ಕೆ ಆಹ್ವಾನಿಸುವುದು ಸತ್ ಸಂಪ್ರದಾಯ. ಹಿಂದಿನಿಂದಲೂ ಇದು ನಡೆದುಕೊಂಡು ಬಂದಿರುವ ಪದ್ದತಿ.

ಆದರೆ ಶಾಸಕ ಬಿ.ಸಿ.ನಾಗೇಶ್ ಅವರು ಪ್ರೋಟೋಕಾಲ್ ಉಲ್ಲಂಘಿಸಿ ಕಾಂಕ್ರೀಟ್ ರಸ್ತೆ ಕಾಮಗಾರಿಗೆ ಶಂಕು ಸ್ಥಾಪನೆ ನೆರವೇರಿಸಿದರು. ಇದನ್ನು ನಗರಸಭಾ ಸದಸ್ಯ ಯೋಗೀಶ್ ಪ್ರಶ್ನಿಸಿದರು. ಏನಣ್ಣಾ ನಾನು ಈ ವಾರ್ಡಿನ ಸದಸ್ಯ. ನನ್ನನ್ನು ಬಿಟ್ಟು ರಸ್ತೆ ಕಾಮಗಾರಿಗೆ ಶಂಕುಸ್ಥಾಪನೆ ನಡೆಸುತ್ತಿದ್ದೀರ. ಇದು ಸರಿಯಲ್ಲ ಎಂದು ಪ್ರಶ್ನಿಸಿರುವುದು ವಿಡಿಯೋದಲ್ಲಿ ಸೆರೆಯಾಗಿದೆ.

ತಿಪಟೂರು ಶಾಸಕ ಬಿ.ಸಿ ನಾಗೇಶ್ ಬೆಂಬಲಿಗರಿಂದ ನಗರಸಭಾ ಸದಸ್ಯ ಯೋಗೇಶ್ ಮೇಲೆ ಹಲ್ಲೆ

ತಿಪಟೂರು ಬಿಜೆಪಿ ಶಾಸಕ ಬಿ.ಸಿ ನಾಗೇಶ್ ಬೆಂಬಲಿಗರಿಂದ ಕಾಂಗ್ರೆಸ್ ನಗರಸಭಾ ಸದಸ್ಯ ಯೋಗೇಶ್ ಮೇಲೆ ಹಲ್ಲೆ. ತಿಪಟೂರಿನ ವಿದ್ಯಾನಗರದ ಕಾಂಕ್ರಿಟ್ ರಸ್ತೆ ಕಾಮಗಾರಿ ರಸ್ತೆ ಉದ್ಘಾಟನೆ ವೇಳೆ ಪ್ರೊಟೋಕಾಲ್ ಪ್ರಕಾರ ನಗರಸಭಾ ಸದಸ್ಯರನ್ನು ಏಕೆ ಆಹ್ವಾನಿಸಿಲ್ಲ ಎಂಬ ವಿಚಾರಕ್ಕೆ ವಾಗ್ದಾದ. ಮಾತಿಗೆ ಮಾತು ಬೆಳೆದು ಶಾಸಕರ ಬೆಂಬಲಿಗರಿಂದ ನಗರಸಭಾ ಸದಸ್ಯರ ಮೇಲೆ ಹಲ್ಲೆ

Posted by Naanu Gauri on Thursday, July 2, 2020

ವಿದ್ಯಾನಗರದ ರಸ್ತೆ ನಿರ್ಮಾಣ ಕಾಮಗಾರಿ ಶಂಕುಸ್ಥಾಪನೆಗೆ ನಗರಸಭೆಯ ಅಧಿಕಾರಿಗಳನ್ನು ಶಾಸಕರು ಕರೆದಿಲ್ಲ. ಸ್ಥಳೀಯ ಸದಸ್ಯರನ್ನು ಆಹ್ವಾನಿಸಿಲ್ಲ. ಕೇವಲ ಬಿಜೆಪಿ ಸದಸ್ಯರೊಂದಿಗೆ ಆಗಮಿಸಿ ಕಾಮಗಾರಿಯ ಭೂಮಿಪೂಜೆ ನೆರವೇರಿಸಿರುವುದು ಕಾಂಗ್ರೆಸ್ ನಗರಸಭಾ ಸದಸ್ಯ ಯೋಗೀಶ್ ಅವರ ಅಸಮಾಧಾನಕ್ಕೆ ಕಾರಣವಾಗಿದೆ ಎನ್ನಲಾಗಿದೆ.

ಯೋಗೀಶ್ ಶಾಸಕರನ್ನು ಪ್ರಶ್ನಿಸುತ್ತಿರುವ 1.35 ನಿಮಿಷದ ವಿಡಿಯೋವೊಂದನ್ನು ಬಿಡುಗಡೆ ಮಾಡಲಾಗಿದ್ದು ಅದರಲ್ಲಿ ಶಾಸಕರು ಮತ್ತು ಯೋಗೀಶ್ ನಡುವೆ ವಾಗ್ವಾದ ನಡೆಯುತ್ತದೆ. ಶಾಶಕರು ತಾನು ವಿಶೇಷ ಯೋಜನೆಯಡಿ ಅನುದಾನ ತಂದಿದ್ದೇನೆ. ನಿಮ್ಮನ್ನು ಆಹ್ವಾನಿಸುವ ಅಗತ್ಯವಿಲ್ಲ ಎಂದು ಹೇಳುತ್ತಾರೆ. ಆಗ ಯೋಗೀಶ್ ಕೂಡ ಇದು ಸರ್ಕಾರದ ಹಣ. ಪ್ರೋಟೋಕಾಲ್ ಉಲ್ಲಂಘಿಸಿದ್ದೀರಿ. ಎಂದು ಶಾಸಕರನ್ನು ಪ್ರಶ್ನಿಸುತ್ತಾರೆ. ಆಗ ಶಾಶಕರ ಇಬ್ಬರು ಬೆಂಬಲಿಗರು ನಗರಸಭಾ ಸದಸ್ಯ ಯೋಗೀಶ್ ಮೇಲೆ ಜೋರು ಮಾತುಗಳಲ್ಲಿ ಎರುಗುತ್ತಾರೆ. ಆನಂತರ ಗಲಾಟೆ ನಡೆಯುವುದು ಕೇಳುತ್ತದೆ.

ಶಾಸಕರೊಂದಿಗೆ ಬೆಂಬಲಿಗರಾದ ಗಂಗರಾಜು, ಪ್ರಶಾಂತ, ರಾಮಮೋಹನ್ ಮಾತ್ರ ಇರುವುದು ಯೋಗೀಶ ಅವರ ಬೇಸರಕ್ಕೆ ಕಾರಣವಾಗಿದೆ. ಈ ಸಂಬಂಧ ನಾನುಗೌರಿ.ಕಾಂ ಜೊತೆ ಮಾತನಾಡಿದ ನಗರಸಭಾ ಸದಸ್ಯ ಯೋಗೀಶ್ ಶಾಸಕರ ಕ್ರಮವನ್ನು ಪ್ರಶ್ನಿಸಿದರು. ಕಾಂಕ್ರೀಟ್ ರಸ್ತೆ ನಿರ್ಮಾಣ ಕಾಮಗಾರಿ ಶಂಕುಸ್ಥಾಪನೆ ಕಾಮಗಾರಿ ಸರ್ಕಾರಿ ಕಾರ್ಯಕ್ರಮ. ಅಧಿಕಾರಿಗಳನ್ನು ಆಹ್ವಾನಿಸಿಲ್ಲ. ಸ್ಥಳೀಯ ವಾರ್ಡ್ ನ ಸದಸ್ಯನಾದ ನನ್ನನ್ನು ಆಹ್ವಾನಿಸಿಲ್ಲ. ಇದನ್ನು ಕೇಳಲು ಹೋದರೆ ಶಾಸಕರ ಬೆಂಬಲಿಗರು ನನ್ನ ಮೇಲೆ ಹಲ್ಲೆ ಮಾಡಿದ್ದಾರೆ. ದೃಶ್ಯಗಳನ್ನು ಸೆರೆ ಹಿಡಿಯುತ್ತಿದ್ದ ಮೊಬೈಲ್ ಅನ್ನು ಒಡೆದು ಹಾಕಿದ್ದಾರೆ ಎಂದು ದೂರಿದರು.

ಶಾಸಕ ಬಿ.ಸಿ.ನಾಗೇಶ್ ಸರಳ, ಸಜ್ಜನ ಎಂದು ಹೇಳುತ್ತಾರೆ. ಉತ್ತಮ ಕೆಲಸ ಮಾಡಿದ್ದಾರೆ ಎಂಬ ಮಾತು ಇದೆ. ಆದರೆ ಶಾಸಕರಿಗಿಂತ ಚೆನ್ನಾಗಿ ಕೆಲಸ ಮಾಡುವವರನ್ನು ಕಂಡರೆ ಸಹಿಸುವುದಿಲ್ಲ. ಉತ್ತಮ ಕೆಲಸ ಮಾಡುವವರನ್ನು ಉದ್ದೇಶಪೂರ್ವಕವಾಗಿಯೇ ಶಾಸಕರು ದೂರ ಇಡುತ್ತಾ ಹೋಗುತ್ತಾರೆ. ಮೇಲ್ನೋಟಕ್ಕೆ ಒಳ್ಳೆಯವರಂತೆ ಕಂಡು ಬಂದರೂ ಕೊಬ್ಬರಿ ಬೆಲೆ ನಿಗದಿ ನಡೆಯುವುದೆಲ್ಲ ಅವರ ಮೂಗಿನ ಅಡಿಯೇ ಎಂದು ಸ್ಥಳೀಯರು ಆರೋಪಿಸಿದ್ದಾರೆ.


ಓದಿ: ಪಿಎಂ ಕೇರ್ಸ್‌ಗೆ 60,000 ಕೋಟಿ ಹರಿದುಬಂದಿದೆ, ಆದರೂ ಮೋದಿ ಲೆಕ್ಕ ಕೊಡುತ್ತಿಲ್ಲ: ಸಿದ್ದರಾಮಯ್ಯ


 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...