Homeಕರ್ನಾಟಕರಸ್ತೆ ಕಾಮಗಾರಿಗೆ ಶಂಕುಸ್ಥಾಪನೆ: ಪ್ರೋಟೊಕಾಲ್ ಪ್ರಶ್ನಿಸಿದ ನಗರಸಭಾ ಸದಸ್ಯನ ಮೇಲೆ ಬಿಜೆಪಿ ಶಾಸಕರ ಬೆಂಬಲಿಗರಿಂದ ಹಲ್ಲೆ

ರಸ್ತೆ ಕಾಮಗಾರಿಗೆ ಶಂಕುಸ್ಥಾಪನೆ: ಪ್ರೋಟೊಕಾಲ್ ಪ್ರಶ್ನಿಸಿದ ನಗರಸಭಾ ಸದಸ್ಯನ ಮೇಲೆ ಬಿಜೆಪಿ ಶಾಸಕರ ಬೆಂಬಲಿಗರಿಂದ ಹಲ್ಲೆ

ಶಾಸಕ ಬಿ.ಸಿ.ನಾಗೇಶ್ ಅವರು ಪ್ರೋಟೋಕಾಲ್ ಉಲ್ಲಂಘಿಸಿ ಕಾಂಕ್ರೀಟ್ ರಸ್ತೆ ಕಾಮಗಾರಿ ಶಂಕು ಸ್ಥಾಪನೆ ನೆರವೇರಿಸಿದ್ದನ್ನು ಪ್ರಶ್ನಿಸಿದ್ದ ನಗರಸಭಾ ಸದಸ್ಯ ಯೋಗೀಶ್.

- Advertisement -
- Advertisement -

ಪ್ರೋಟೊಕಾಲ್ ಉಲ್ಲಂಘಿಸಿ ರಸ್ತೆ ಕಾಮಗಾರಿ ಶಂಕುಸ್ಥಾಪನೆ ಮಾಡಿದ ಶಾಸಕರ ಕ್ರಮವನ್ನು ಪ್ರಶ್ನಿಸಿದ ನಗರಸಭಾ ಸದಸ್ಯರೊಬ್ಬರ ಮೇಲೆ ಬಿಜೆಪಿ ಶಾಸಕರ ಬೆಂಬಲಿಗರು ಹಲ್ಲೆ ನಡೆಸಿರುವ ಘಟನೆ ತುಮಕೂರು ಜಿಲ್ಲೆ ತಿಪಟೂರು ನಗರದಲ್ಲಿ ನಡೆದಿದೆ.

ತಿಪಟೂರು ಶಾಸಕ ಬಿ.ಸಿ.ನಾಗೇಶ್ ಜುಲೈ 3 ರಂದು ಬೆಳಗ್ಗೆ 14 ನೇ ವಾರ್ಡ್ ವಿದ್ಯಾನಗರದಲ್ಲಿ ಕಾಂಕ್ರೀಟ್ ರಸ್ತೆ ನಿರ್ಮಾಣಕ್ಕೆ ಭೂಮಿಪೂಜೆ ನೆರವೇರಿಸುತ್ತಿದ್ದರು. ಆಗ ಸ್ಥಳಕ್ಕೆ ಬಂದ ಅದೇ ವಾರ್ಡಿನ  ನಗರಸಭಾ ಸದಸ್ಯ ಯೋಗೀಶ್ ಅವರು ಶಾಸಕರ ಕ್ರಮವನ್ನು ಪ್ರಶ್ನಿಸತೊಡಗಿದರು. ಮಾತಿಗೆ ಮಾತು ಬೆಳೆದು ಎರಡೂ ಕಡೆ ಕೈಕೈ ಮಿಲಾಯಿಸುವ ಹಂತಕ್ಕೆ ಹೋಯಿತು ಎಂದು ಪ್ರತ್ಯಕ್ಷದರ್ಶಿಗಳು ತಿಳಿಸಿದ್ದಾರೆ.

ಗ್ರಾಮ ಪಂಚಾಯಿತಿ ಮಟ್ಟದಿಂದ ಹಿಡಿದು ಎಲ್ಲಿಯೇ ಸರ್ಕಾರಿ ಕಾರ್ಯಕ್ರಮ, ಕಾಮಗಾರಿ ಉದ್ಘಾಟನೆ ಮತ್ತು ಶಂಕುಸ್ಥಾಪನೆ ನೆರವೇರಿಸಿದರೂ ಸ್ಥಳೀಯ ಗ್ರಾಮ ಪಂಚಾಯಿತಿ ಅಧ್ಯಕ್ಷರು, ತಾಲೂಕು ಪಂಚಾಯಿ ಸದಸ್ಯರು, ನಗರಸಭಾ ಸದಸ್ಯರನ್ನು ಪ್ರೋಟೋಕಾಲ್ ಪ್ರಕಾರ ಸಮಾರಂಭಕ್ಕೆ ಆಹ್ವಾನಿಸುವುದು ಸತ್ ಸಂಪ್ರದಾಯ. ಹಿಂದಿನಿಂದಲೂ ಇದು ನಡೆದುಕೊಂಡು ಬಂದಿರುವ ಪದ್ದತಿ.

ಆದರೆ ಶಾಸಕ ಬಿ.ಸಿ.ನಾಗೇಶ್ ಅವರು ಪ್ರೋಟೋಕಾಲ್ ಉಲ್ಲಂಘಿಸಿ ಕಾಂಕ್ರೀಟ್ ರಸ್ತೆ ಕಾಮಗಾರಿಗೆ ಶಂಕು ಸ್ಥಾಪನೆ ನೆರವೇರಿಸಿದರು. ಇದನ್ನು ನಗರಸಭಾ ಸದಸ್ಯ ಯೋಗೀಶ್ ಪ್ರಶ್ನಿಸಿದರು. ಏನಣ್ಣಾ ನಾನು ಈ ವಾರ್ಡಿನ ಸದಸ್ಯ. ನನ್ನನ್ನು ಬಿಟ್ಟು ರಸ್ತೆ ಕಾಮಗಾರಿಗೆ ಶಂಕುಸ್ಥಾಪನೆ ನಡೆಸುತ್ತಿದ್ದೀರ. ಇದು ಸರಿಯಲ್ಲ ಎಂದು ಪ್ರಶ್ನಿಸಿರುವುದು ವಿಡಿಯೋದಲ್ಲಿ ಸೆರೆಯಾಗಿದೆ.

ತಿಪಟೂರು ಶಾಸಕ ಬಿ.ಸಿ ನಾಗೇಶ್ ಬೆಂಬಲಿಗರಿಂದ ನಗರಸಭಾ ಸದಸ್ಯ ಯೋಗೇಶ್ ಮೇಲೆ ಹಲ್ಲೆ

ತಿಪಟೂರು ಬಿಜೆಪಿ ಶಾಸಕ ಬಿ.ಸಿ ನಾಗೇಶ್ ಬೆಂಬಲಿಗರಿಂದ ಕಾಂಗ್ರೆಸ್ ನಗರಸಭಾ ಸದಸ್ಯ ಯೋಗೇಶ್ ಮೇಲೆ ಹಲ್ಲೆ. ತಿಪಟೂರಿನ ವಿದ್ಯಾನಗರದ ಕಾಂಕ್ರಿಟ್ ರಸ್ತೆ ಕಾಮಗಾರಿ ರಸ್ತೆ ಉದ್ಘಾಟನೆ ವೇಳೆ ಪ್ರೊಟೋಕಾಲ್ ಪ್ರಕಾರ ನಗರಸಭಾ ಸದಸ್ಯರನ್ನು ಏಕೆ ಆಹ್ವಾನಿಸಿಲ್ಲ ಎಂಬ ವಿಚಾರಕ್ಕೆ ವಾಗ್ದಾದ. ಮಾತಿಗೆ ಮಾತು ಬೆಳೆದು ಶಾಸಕರ ಬೆಂಬಲಿಗರಿಂದ ನಗರಸಭಾ ಸದಸ್ಯರ ಮೇಲೆ ಹಲ್ಲೆ

Posted by Naanu Gauri on Thursday, July 2, 2020

ವಿದ್ಯಾನಗರದ ರಸ್ತೆ ನಿರ್ಮಾಣ ಕಾಮಗಾರಿ ಶಂಕುಸ್ಥಾಪನೆಗೆ ನಗರಸಭೆಯ ಅಧಿಕಾರಿಗಳನ್ನು ಶಾಸಕರು ಕರೆದಿಲ್ಲ. ಸ್ಥಳೀಯ ಸದಸ್ಯರನ್ನು ಆಹ್ವಾನಿಸಿಲ್ಲ. ಕೇವಲ ಬಿಜೆಪಿ ಸದಸ್ಯರೊಂದಿಗೆ ಆಗಮಿಸಿ ಕಾಮಗಾರಿಯ ಭೂಮಿಪೂಜೆ ನೆರವೇರಿಸಿರುವುದು ಕಾಂಗ್ರೆಸ್ ನಗರಸಭಾ ಸದಸ್ಯ ಯೋಗೀಶ್ ಅವರ ಅಸಮಾಧಾನಕ್ಕೆ ಕಾರಣವಾಗಿದೆ ಎನ್ನಲಾಗಿದೆ.

ಯೋಗೀಶ್ ಶಾಸಕರನ್ನು ಪ್ರಶ್ನಿಸುತ್ತಿರುವ 1.35 ನಿಮಿಷದ ವಿಡಿಯೋವೊಂದನ್ನು ಬಿಡುಗಡೆ ಮಾಡಲಾಗಿದ್ದು ಅದರಲ್ಲಿ ಶಾಸಕರು ಮತ್ತು ಯೋಗೀಶ್ ನಡುವೆ ವಾಗ್ವಾದ ನಡೆಯುತ್ತದೆ. ಶಾಶಕರು ತಾನು ವಿಶೇಷ ಯೋಜನೆಯಡಿ ಅನುದಾನ ತಂದಿದ್ದೇನೆ. ನಿಮ್ಮನ್ನು ಆಹ್ವಾನಿಸುವ ಅಗತ್ಯವಿಲ್ಲ ಎಂದು ಹೇಳುತ್ತಾರೆ. ಆಗ ಯೋಗೀಶ್ ಕೂಡ ಇದು ಸರ್ಕಾರದ ಹಣ. ಪ್ರೋಟೋಕಾಲ್ ಉಲ್ಲಂಘಿಸಿದ್ದೀರಿ. ಎಂದು ಶಾಸಕರನ್ನು ಪ್ರಶ್ನಿಸುತ್ತಾರೆ. ಆಗ ಶಾಶಕರ ಇಬ್ಬರು ಬೆಂಬಲಿಗರು ನಗರಸಭಾ ಸದಸ್ಯ ಯೋಗೀಶ್ ಮೇಲೆ ಜೋರು ಮಾತುಗಳಲ್ಲಿ ಎರುಗುತ್ತಾರೆ. ಆನಂತರ ಗಲಾಟೆ ನಡೆಯುವುದು ಕೇಳುತ್ತದೆ.

ಶಾಸಕರೊಂದಿಗೆ ಬೆಂಬಲಿಗರಾದ ಗಂಗರಾಜು, ಪ್ರಶಾಂತ, ರಾಮಮೋಹನ್ ಮಾತ್ರ ಇರುವುದು ಯೋಗೀಶ ಅವರ ಬೇಸರಕ್ಕೆ ಕಾರಣವಾಗಿದೆ. ಈ ಸಂಬಂಧ ನಾನುಗೌರಿ.ಕಾಂ ಜೊತೆ ಮಾತನಾಡಿದ ನಗರಸಭಾ ಸದಸ್ಯ ಯೋಗೀಶ್ ಶಾಸಕರ ಕ್ರಮವನ್ನು ಪ್ರಶ್ನಿಸಿದರು. ಕಾಂಕ್ರೀಟ್ ರಸ್ತೆ ನಿರ್ಮಾಣ ಕಾಮಗಾರಿ ಶಂಕುಸ್ಥಾಪನೆ ಕಾಮಗಾರಿ ಸರ್ಕಾರಿ ಕಾರ್ಯಕ್ರಮ. ಅಧಿಕಾರಿಗಳನ್ನು ಆಹ್ವಾನಿಸಿಲ್ಲ. ಸ್ಥಳೀಯ ವಾರ್ಡ್ ನ ಸದಸ್ಯನಾದ ನನ್ನನ್ನು ಆಹ್ವಾನಿಸಿಲ್ಲ. ಇದನ್ನು ಕೇಳಲು ಹೋದರೆ ಶಾಸಕರ ಬೆಂಬಲಿಗರು ನನ್ನ ಮೇಲೆ ಹಲ್ಲೆ ಮಾಡಿದ್ದಾರೆ. ದೃಶ್ಯಗಳನ್ನು ಸೆರೆ ಹಿಡಿಯುತ್ತಿದ್ದ ಮೊಬೈಲ್ ಅನ್ನು ಒಡೆದು ಹಾಕಿದ್ದಾರೆ ಎಂದು ದೂರಿದರು.

ಶಾಸಕ ಬಿ.ಸಿ.ನಾಗೇಶ್ ಸರಳ, ಸಜ್ಜನ ಎಂದು ಹೇಳುತ್ತಾರೆ. ಉತ್ತಮ ಕೆಲಸ ಮಾಡಿದ್ದಾರೆ ಎಂಬ ಮಾತು ಇದೆ. ಆದರೆ ಶಾಸಕರಿಗಿಂತ ಚೆನ್ನಾಗಿ ಕೆಲಸ ಮಾಡುವವರನ್ನು ಕಂಡರೆ ಸಹಿಸುವುದಿಲ್ಲ. ಉತ್ತಮ ಕೆಲಸ ಮಾಡುವವರನ್ನು ಉದ್ದೇಶಪೂರ್ವಕವಾಗಿಯೇ ಶಾಸಕರು ದೂರ ಇಡುತ್ತಾ ಹೋಗುತ್ತಾರೆ. ಮೇಲ್ನೋಟಕ್ಕೆ ಒಳ್ಳೆಯವರಂತೆ ಕಂಡು ಬಂದರೂ ಕೊಬ್ಬರಿ ಬೆಲೆ ನಿಗದಿ ನಡೆಯುವುದೆಲ್ಲ ಅವರ ಮೂಗಿನ ಅಡಿಯೇ ಎಂದು ಸ್ಥಳೀಯರು ಆರೋಪಿಸಿದ್ದಾರೆ.


ಓದಿ: ಪಿಎಂ ಕೇರ್ಸ್‌ಗೆ 60,000 ಕೋಟಿ ಹರಿದುಬಂದಿದೆ, ಆದರೂ ಮೋದಿ ಲೆಕ್ಕ ಕೊಡುತ್ತಿಲ್ಲ: ಸಿದ್ದರಾಮಯ್ಯ


 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜ್ಯಸಭಾ ಚುನಾವಣೆ: ಕರ್ನಾಟದಿಂದ ಆಯ್ಕೆಯಾದ ಪ್ರತಿನಿಧಿಗಳಿಂದ ರಾಜ್ಯಕ್ಕೆ ಲಾಭವಾಗಿದೆಯೇ?

ರಾಜ್ಯಸಭೆಗೆ ಪ್ರತಿಬಾರಿ ಚುನಾವಣೆ ನಡೆಯುವಾಗಲೂ ಈ ಚರ್ಚೆಗಳು ಸಾಮಾನ್ಯ. ಕನ್ನಡೇತರರು ಇಲ್ಲಿಂದ ಆಯ್ಕೆಯಾಗಿ ಇಲ್ಲಿಯ ಸಮಸ್ಯೆಗಳ ಬಗ್ಗೆ ಮಾತನಾಡುವುದಿಲ್ಲ ಎಂಬ ವಾಸ್ತವದ ಜೊತೆಜೊತೆಗೆ, ರಾಜ್ಯಸಭೆಗೆ ಆಯ್ಕೆಯಾಗುವ ಕನ್ನಡವರಾದರೂ ಮಾತನಾಡುತ್ತಾರಾ? ಎಂದರೆ ಅದಕ್ಕೂ ನಮ್ಮಲ್ಲಿ...

ಬಂಗಾಳದಲ್ಲಿ ಬಿಜೆಪಿ ಬೆಂಬಲಿಗರ ಕ್ರೌರ್ಯ: ಅಭಿಷೇಕ್ ಬಳಿಕ ಕಲ್ಯಾಣ್‌ ಬ್ಯಾನರ್ಜಿ ಮೇಲೆ ಮಾರಣಾಂತಿಕ ದಾಳಿ

ಪಶ್ಚಿಮ ಬಂಗಾಳದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಸಂಸದ ಕಲ್ಯಾಣ್ ಬ್ಯಾನರ್ಜಿ ಅವರು ಭಾನುವಾರ (ಮೇ 31), ಹೂಗ್ಲಿ ಜಿಲ್ಲೆಯಲ್ಲಿ ನಡೆದಿದ್ದ ಚುನಾವಣೋತ್ತರ ಹಿಂಸಾಚಾರದಲ್ಲಿ ಕಾರ್ಯಕರ್ತರ ಬಂಧನದ ವಿರುದ್ಧ ಮನವಿ ಪತ್ರ ಸಲ್ಲಿಸಲು ಭೇಟಿ...

ಬಸ್ತಾರ್‌: ಬುಡಕಟ್ಟು ಕ್ರಿಶ್ಚಿಯನ್ ಕುಟುಂಬಗಳಿಗೆ ಬೆದರಿಕೆ, ಥಳಿತ, ಹಿಂದೂ ಧರ್ಮ ಸ್ವೀಕರಿಸಲು ಬಲವಂತ: ಘನತೆಯ ಬದುಕಿಗಾಗಿ ಆದಿವಾಸಿಗಳ ಹೋರಾಟ

ಛತ್ತೀಸ್‌ಗಢದ ದಟ್ಟ ಅರಣ್ಯಗಳು ಮತ್ತು ಕಡಿದಾದ ಬೆಟ್ಟಗಳಿಂದ ಆವೃತವಾಗಿರುವ ಬಸ್ತಾರ್ ಕಣಿವೆಯು ತನ್ನ ವಿಶಿಷ್ಟ ಬುಡಕಟ್ಟು ಸಂಸ್ಕೃತಿ ಮತ್ತು ಪ್ರಾಕೃತಿಕ ಸಂಪತ್ತಿಗೆ ಹೆಸರುವಾಸಿ. ಆದರೆ ಇತ್ತೀಚಿನ ವರ್ಷಗಳಲ್ಲಿ, ಈ ಪ್ರಶಾಂತ ಭೂಭಾಗವು ತೀವ್ರಗಾಮಿ...

ಗಾಝಾದಲ್ಲಿ ರಕ್ತಸಿಕ್ತ ಈದ್: ಇಸ್ರೇಲ್ ಭೀಕರ ದಾಳಿಗೆ 26 ಪ್ಯಾಲೆಸ್ಟೀನಿಯನ್ನರು ಬಲಿ, ವಿಶ್ವಸಂಸ್ಥೆ ತೀವ್ರ ಆತಂಕ

ಗಾಝಾ: ಇಸ್ಲಾಂ ಧರ್ಮದ ಅತ್ಯಂತ ಪವಿತ್ರ ದಿನಗಳಲ್ಲಿ ಒಂದಾದ ‘ಈದ್ ಅಲ್-ಅಧಾ’ ಹಬ್ಬದ ಸಂದರ್ಭದಲ್ಲೂ ಗಾಝಾ ಪಟ್ಟಿಯಲ್ಲಿ ರಕ್ತಪಾತ ಮುಂದುವರಿದಿದ್ದು, ಹಬ್ಬದ ಮುನ್ನಾದಿನದಿಂದ ಆರಂಭಿಸಿ ಇಸ್ರೇಲ್ ಪಡೆಗಳು ನಡೆಸಿದ ಸರಣಿ ದಾಳಿಗಳಲ್ಲಿ ಕನಿಷ್ಠ...

ಜನರಿಗೆ ಇಂಧನ ಉಳಿಸುವ ಪಾಠ, ಪ್ರಧಾನಿಗೆ ರೋಡ್‌ಶೋಗಳ ಆಟ

ಮೇ 10 ರಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಸಾರ್ವಜನಿಕರಲ್ಲಿ ಮಿತವ್ಯಯದ ಅಪೀಲು ಮಾಡಿದ್ದು, ಇಂಧನ ಬಳಕೆಯನ್ನು ಕನಿಷ್ಠ ಮಟ್ಟಕ್ಕೆ ಇಳಿಸುವಂತೆ ಕೋರಿದ್ದರು. ಜನರು ಖಾಸಗಿ ವಾಹನಗಳ ಬಳಕೆಯನ್ನು ಬಿಟ್ಟು ಸಾರ್ವಜನಿಕ ಸಾರಿಗೆಯನ್ನು...

ಏಷ್ಯನ್ ಗೇಮ್ಸ್‌ ಟ್ರಯಲ್ಸ್‌ನಲ್ಲಿ ಸ್ಪರ್ಧಿಸಲು ವಿನೇಶ್ ಫೋಗಟ್‌ಗೆ ಅನುಮತಿಸಿದ ಭಾರತೀಯ ಕುಸ್ತಿ ಒಕ್ಕೂಟ

ಮಾಜಿ ವಿಶ್ವ ಚಾಂಪಿಯನ್‌ಶಿಪ್ ಪದಕ ವಿಜೇತೆ ವಿನೇಶ್ ಫೋಗಟ್ ಅವರು (ಮೇ 30) ಏಷ್ಯನ್ ಗೇಮ್ಸ್ ಆಯ್ಕೆ ಟ್ರಯಲ್ಸ್‌ನಲ್ಲಿ ಮಹಿಳೆಯರ 53 ಕೆಜಿ ವಿಭಾಗದಲ್ಲಿ ಸ್ಪರ್ಧಿಸಲು ಅವಕಾಶ ಪಡೆದಿದ್ದಾರೆ. ಭಾರತೀಯ ಕುಸ್ತಿ ಒಕ್ಕೂಟ...

Uttarakhand | ಬಜರಂಗದಳದ ಕಾರ್ಯಕರ್ತರು ಈಗ ದ್ವೇಷ ಬಿತ್ತುವ ವೃತ್ತಿಪರ ಇನ್‌ಫ್ಲ್ಯುಯೆನ್ಸರ್ಸ್!

ಈ ವರ್ಷದ ಆರಂಭದಲ್ಲಿ ಉತ್ತರಾಖಂಡದ ಕೋಟದ್ವಾರದಲ್ಲಿ ಹಿಂದುತ್ವ ಗುಂಪೊಂದು ವೃದ್ಧ ಮುಸ್ಲಿಂ ವ್ಯಕ್ತಿಯೊಬ್ಬರ ಅಂಗಡಿಗೆ ನುಗ್ಗಿ, ಅಂಗಡಿಯ ಹೆಸರಾದ ‘ಬಾಬಾ’ ಎಂಬುವುದನ್ನು ಬದಲಾಯಿಸುವಂತೆ ಒತ್ತಾಯಿಸಿತ್ತು. ‘ಬಾಬಾ’ ಎಂಬುವುದು ‘ಹಿಂದೂ’ ಹೆಸರಾಗಿದೆ ಎಂದು ಆ...

​ನಿಗಿ ನಿಗಿ ಕೆಂಡದಂತಾಗಿರುವ ಬಿಡದಿ, ಡಿಕೆಶಿಗೆ ಬಿಸಿ ತುಪ್ಪದಂತಾದ ರೈತರು

​ಬದಲಾದ ರಾಜಕೀಯ ಸಂದರ್ಭದಲ್ಲಿ ಕರ್ನಾಟಕದ ಮುಂದಿನ ಮುಖ್ಯಮಂತ್ರಿ ಎಂದೇ ಬಿಂಬಿತವಾಗಿರುವ ಡಿ.ಕೆ. ಶಿವಕುಮಾರ್ ಪ್ರತಿಷ್ಠೆಯಾಗಿ ತೆಗೆದುಕೊಂಡಿರುವ ಬಿಡದಿಯ ಟೌನ್‌ಶಿಪ್ ಯೋಜನೆಯ ವಿರುದ್ಧ ನಡೆಯುತ್ತಿರುವ ರೈತರ ಹೋರಾಟ ದಿನದಿಂದ ದಿನಕ್ಕೆ ಉಗ್ರ ರೂಪ ಪಡೆಯುತ್ತಿದೆ. ​ಭೂಸ್ವಾಧೀನದ...

ಪ್ರಜಾಪ್ರಭುತ್ವವನ್ನು ಹತ್ತಿಕ್ಕಲು ‘SIR’ ಅನ್ನೇ ಅಸ್ತ್ರವನ್ನಾಗಿಸಿಕೊಂಡ ನರೇಂದ್ರ ಮೋದಿ!

ಪಶ್ಚಿಮ ಬಂಗಾಳದ ವಿಧಾನಸಭಾ ಚುನಾವಣೆಯ ಫಲಿತಾಂಶ ಪ್ರಕಟವಾದ ತಕ್ಷಣ (ಮೇ 4 ರಂದು), ಕಾಳೀಘಾಟ್‌ನಲ್ಲಿರುವ ತಮ್ಮ ನಿವಾಸದಲ್ಲಿ ಸುದ್ದಿಗೋಷ್ಠಿ ನಡೆಸಿದ ಮಾಜಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅತ್ಯಂತ ಆಕ್ರೋಶದಿಂದ ಮಾತನಾಡಿದ್ದರು. ಅಷ್ಟೇ ಅಲ್ಲದೆ,...

ಕೇರಳದಲ್ಲಿ ಶಾಲಾ ಬಾಲಕಿಯರಿಗೆ ಮೂರು ದಿನ ಮುಟ್ಟಿನ ರಜೆ, ಅಸಂಘಟಿತ ವಲಯದ ಮಹಿಳೆಯರಿಗೆ ಆರು ತಿಂಗಳ ಹೆರಿಗೆ ರಜೆ ಘೋಷಣೆ 

ತಿರುವನಂತಪುರಂ: ಕೇರಳದ ವಿ.ಡಿ. ಸತೀಶನ್ ನೇತೃತ್ವದ ಕಾಂಗ್ರೆಸ್ ಸರ್ಕಾರವು ಮಹಿಳೆಯರಿಗೆ ಹಲವಾರು ಕಲ್ಯಾಣ ಕ್ರಮಗಳನ್ನು ಘೋಷಿಸಿದೆ, ಇದರಲ್ಲಿ ಶಾಲಾ ವಿದ್ಯಾರ್ಥಿಗಳಿಗೆ ಮೂರು ದಿನಗಳ ಮಾಸಿಕ ಮುಟ್ಟಿನ ರಜೆ, ಕೆಲಸದ ಸ್ಥಳಗಳಲ್ಲಿ ಮಹಿಳೆಯರಿಗೆ ಸಮಾನ...