Homeಮುಖಪುಟಧೋನಿ ಹೋದಾಗ ಪಾರ್ಟಿ ಹಾಲ್, ಮೋದಿ ಹೋದರೆ ಆಸ್ಪತ್ರೆ: ಗಾಯಾಳು ಸೈನಿಕರ ಭೇಟಿಗೆ ನೆಟ್ಟಿಗರ ತರಾಟೆ!

ಧೋನಿ ಹೋದಾಗ ಪಾರ್ಟಿ ಹಾಲ್, ಮೋದಿ ಹೋದರೆ ಆಸ್ಪತ್ರೆ: ಗಾಯಾಳು ಸೈನಿಕರ ಭೇಟಿಗೆ ನೆಟ್ಟಿಗರ ತರಾಟೆ!

ಟ್ವಿಟ್ಟರ್‌ನಲ್ಲಿಯೂ ಸಹ ಹಲವಾರು ಜನ ಮೋದಿ ಭೇಟಿಯನ್ನು ವಿರೋಧಿಸಿದ್ದಾರೆ. ಕಾನ್ಫರೆನ್ಸ್ ಹಾಲ್‌ ಅನ್ನು ಮೋದಿಯವರು ತಮ್ಮ ಫೋಟೊ ಶೂಟ್‌ಗಾಗಿ ಆಸ್ಪತ್ರೆಯನ್ನಾಗಿ ಬದಲಾಯಿಸಿದ್ದಾರೆ ಎಂದು ಆರೋಪಿಸಿದ್ದಾರೆ.

- Advertisement -
- Advertisement -

ನಿನ್ನೆ ಪ್ರಧಾನಿ ನರೇಂದ್ರ ಮೋದಿಯವರು ಲೇಹ್‌ಗೆ ಭೇಟಿ ನೀಡಿ, ಜೂನ್ 15 ರಂದು ಚೀನಿ ಸೈನಿಕರೊಂದಿಗಿನ ಮುಖಾಮುಖಿಯಲ್ಲಿ ಗಾಯಗೊಂಡ ಭಾರತೀಯ ಗಾಯಾಳು ಸೈನಿಕರನ್ನು ಭೇಟಿಯಾಗಿದ್ದಾರೆ. ಆದರೆ ಅವರ ಈ ಭೇಟಿಗೆ ಸಾಮಾಜಿಕ ಜಾಲತಾಣದಲ್ಲಿ ತೀವ್ರ ವಿರೋಧ ವ್ಯಕ್ತವಾಗಿದೆ.

ಜೂನ್ 19 ರಂದು ನಡೆದ ಸರ್ವಪಕ್ಷ ಸಭೆಯಲ್ಲಿ ಮೋದಿಯವರು ಯಾರೂ ನಮ್ಮ ದೇಶದ ಗಡಿಯೊಳಗೆ ಕಾಲಿಟ್ಟಿಲ್ಲ ಎಂದಿದ್ದರು. ಅಂದ ಮೇಲೆ ಇಷ್ಟೊಂದು ಸೈನಿಕರು ಗಾಯಾಳುಗಳಾಗಲು ಕಾರಣವೇನೆಂದು ನೆಟ್ಟಿಗರು ಪ್ರಶ್ನಿಸಿದ್ದಾರೆ. ಅಲ್ಲದೇ ಮೋದಿಯವರು ಸೈನಿಕರನ್ನು 17 ದಿನಗಳ ನಂತರ ಭೇಟಿ ಮಾಡಿದ್ದಾರೆ. ಇದು ಒಳ್ಳೇಯದು. ಆದರೆ ಆ ಫೋಟೊಗಳನ್ನು ಸಾರ್ವಜನಿಕವಾಗಿ ಪ್ರಕಟಿಸಬೇಕಾದ ಅಗತ್ಯವೇನಿದೆ ಎಂಬ ಪ್ರಶ್ನೆ ಎದ್ದಿದೆ.

ಚೇತರಿಸುತ್ತಿದ್ದ ಸೈನಿಕರ ವಾರ್ಡಿಗೆ ಹೋಗಿ, ಅವರ ಬಳಿ ನಿಂತು, ಅವರ ಫೊಟೋ ತೆಗೆದು ಇಡೀ ಜಗತ್ತಿಗೆ ತೋರಿಸುತ್ತಿದ್ದೀರಲ್ಲಾ, ಗಡಿ ರಕ್ಷಣೆ ಮಾಡುತ್ತಾ ಚೀನೀ ಸೈನಿಕರ ವಿರುದ್ಧ ಹೋರಾಡಿದ ಈ ಸೈನಿಕರ ಮುಖಚರ್ಯೆಯನ್ನು ವಿರೋಧಿ ದೇಶದ ಸೈನಿಕರು ನೋಡುತ್ತಾರೆ. ಭದ್ರತೆಯ ದೃಷ್ಟಿಯಿಂದ ಇದು ತೀರಾ ಅಪಾಯಕಾರಿ ಎನ್ನುವ ಕನಿಷ್ಟ ಪ್ರಜ್ಞೆಯೂ ಈ ದೇಶದ ಪ್ರಧಾನಿಯವರಿಗಿಲ್ವಾ? ಎಂದು ಕನ್ನಡದ ಯುವ ಬರಹಗಾರ ಅಲ್ಮೆಡಾ ಗ್ಲಾಡ್‌ಸನ್‌ ಪ್ರಶ್ನಿಸಿದ್ದಾರೆ.

ಇನ್ನು ಕೆಲವರು ಮೋದಿಯವರು ರಾಜಕೀಯ ಪ್ರಚಾರಕ್ಕಾಗಿ ಸೈನಿಕರನ್ನು ಬಳಸಿಕೊಳ್ಳುತ್ತಿದ್ದಾರೆ ಎಂದು ಆರೋಪಿಸಿದ್ದಾರೆ. ಸೈನಿಕರನ್ನು ಮೋದಿ ಭೇಟಿ ಮಾಡಿದ್ದು ಆಸ್ಪತ್ರೆಯಲ್ಲಲ್ಲ, ಅದು ಪಾರ್ಟಿ ಹಾಲ್. ಹಾಗಾಗಿ ಮೋದಿ ನಡೆಸಿದ್ದು ಇವೆಂಟ್ ಮ್ಯಾನೆಜ್ಮೆಂಟ್ ಎಂಬ ಟೀಕೆ ಕೇಳಿಬಂದಿದೆ.

ಭಾರತ ಕ್ರಿಕೆಟ್ ತಂಡದ ಮಾಜಿ ನಾಯಕ ಎಂ.ಎಸ್ ಧೋನಿಯವರು ಲೇಹ್ ಗೆ ಭೇಟಿ ನೀಡಿದಾಗ ಅದೇ ಹಾಲ್‌ನಲ್ಲಿ ಸೈನಿಕರು ಅವರಿಗೆ ಔತಣ ನೀಡಿದ್ದರು. ಈಗ ಅದೇ ಹಾಲ್‌ನಲ್ಲಿ ಸೈನಿಕರನ್ನು ಕೂರಿಸಲಾಗಿದೆ ಎಂದು ಎರಡೂ ಫೋಟೊಗಳನ್ನು ಪೋಸ್ಟ್‌ ಮಾಡಿ ನಾಗೇಗೌಡ ಕೀಲಾರ ಶಿವಲಿಂಗಯ್ಯನವರು ಆರೋಪಿಸಿದ್ದಾರೆ.

#ಜಗವೇ_ನಾಟಕರಂಗ_ಅದರಲ್ಲಿ_ಮೋದಿಯವರು_ಒಬ್ಬ_ಮಹಾನ್_ಪಾತ್ರಧಾರಿ ದೋನಿ ಹೋದಾಗ ಪಾರ್ಟಿ ಹಾಲ್, ಮೋದಿ ಹೋದರೆ ಆಸ್ಪತ್ರೆ.

Posted by ನಾಗೇಗೌಡ ಕೀಲಾರ ಶಿವಲಿಂಗಯ್ಯ on Friday, July 3, 2020

ಇದು ಆಸ್ಪತ್ರೆಯೇ? ಇದು ಕಾನ್ಫರೆನ್ಸ್ ಹಾಲ್‌ನಂತಿದೆ. ವೈಟ್‌ಬೋರ್ಡ್, ಪ್ರೊಜೆಕ್ಟರ್ ಎಲ್ಲಾ ಇವೆ! ಗಾಯಗೊಂಡ ಸೈನಿಕರಿಗೆ ಪಾಠ ಮಾಡುತ್ತಾರೆಯೆ? ಯಾವುದೇ ಆಸ್ಪತ್ರೆಯ ಬೆಡ್‌ಗಳ ಪಕ್ಕ ಔಷಧಿ ಇಡುವ ಚಿಕ್ಕ ಟೇಬಲ್ ಇರುತ್ತದೆ. ಇಲ್ಲಿ ಎಲ್ಲಿದೆ? ಬೆಡ್‌ಶೀಟ್ ಇಲ್ಲ, ಯಾರೂ ಮಲಗಿರದಂತೆ ಒಂದು ಸುಕ್ಕು ಕೂಡಾ ಇಲ್ಲದಂತೆ ನೀಟಾಗಿದೆ. “ಗಾಯ ಗೊಂಡ” ಸೈನಿಕರು ಮಲಗಿರದೆ ಒಂದೇ ಪೋಸಿನಲ್ಲಿ ಯೋಗ ಮಾಡುವ ಗೊಂಬೆಗಳಂತೆ ಕುಳಿತಿದ್ದಾರೆ. ಇದು ಮೋದಿಯವರ ಮಾರ್ಕೆಂಟಿಗ್ ತಂತ್ರವೇ ಎಂದು ಹಲವಾರು ಜನ ಪ್ರಶ್ನಿಸಿದ್ದಾರೆ.

ಟ್ವಿಟ್ಟರ್‌ನಲ್ಲಿಯೂ ಸಹ ಹಲವಾರು ಜನ ಮೋದಿ ಭೇಟಿಯನ್ನು ವಿರೋಧಿಸಿದ್ದಾರೆ. ಕಾನ್ಫರೆನ್ಸ್ ಹಾಲ್‌ ಅನ್ನು ಮೋದಿಯವರು ತಮ್ಮ ಫೋಟೊ ಶೂಟ್‌ಗಾಗಿ ಆಸ್ಪತ್ರೆಯನ್ನಾಗಿ ಬದಲಾಯಿಸಿದ್ದಾರೆ ಎಂದು ಆರೋಪಿಸಿದ್ದಾರೆ.

ಈ ಹಿಂದೆಯು ಹಲವಾರು ಪ್ರಧಾನಿಗಳು ಗಡಿಗೆ ಭೇಟಿ ಕೊಟ್ಟು ನಮ್ಮ ಸೈನಿಕರನ್ನು ಮಾತನಾಡಿಸಿ ಧೈರ್ಯ ತುಂಬಿದ್ದರು. ಆದರೆ ಅವರ್ಯಾರು ಈ ರೀತಿ ಫೋಟೊ ತೆಗೆಸಿಕೊಂಡು ಸಾರ್ವಜನಿಕವಾಗಿ ಪ್ರದರ್ಶನ ಮಾಡಿರಲಿಲ್ಲ ಎಂದು ಹಲವಾರು ನೆಟ್ಟಿಗರು ಟೀಕಿಸಿದ್ದರೆ.


ಇದನ್ನೂ ಓದಿ: ಫ್ಯಾಕ್ ಚೆಕ್: ಈ ಮಗು CRPF ಸೈನಿಕರ ಮೇಲೆ ಕಲ್ಲೆಸೆಯಲು ಪ್ರಯತ್ನಿಸಿತೆ?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

LEAVE A REPLY

Please enter your comment!
Please enter your name here

- Advertisment -

ಕರ್ನಾಟಕ ಸಚಿವ ಸಂಪುಟ ವಿಸ್ತರಣೆ: ನೂತನ ಸಚಿವರ ಪಟ್ಟಿಗೆ ವರಿಷ್ಠರ ಅನುಮೋದನೆ: ಇಂದು ಸಂಜೆ 4:05 ಕ್ಕೆ ಪ್ರಮಾಣ ವಚನ

ಬಹುನಿರೀಕ್ಷಿತ ಕರ್ನಾಟಕ ರಾಜ್ಯ ಸಚಿವ ಸಂಪುಟ ವಿಸ್ತರಣೆಗೆ ಕೊನೆಗೂ ಮುಹೂರ್ತ ನಿಗದಿಯಾಗಿದ್ದು, ಕಾಂಗ್ರೆಸ್ ಹೈಕಮಾಂಡ್ ನೂತನ ಸಚಿವರ ಪಟ್ಟಿಗೆ ಅಧಿಕೃತ ಅನುಮೋದನೆ ನೀಡಿದೆ. ಇದರೊಂದಿಗೆ ಕಳೆದ ಕೆಲವು ದಿನಗಳಿಂದ ರಾಜ್ಯ ರಾಜಕಾರಣದಲ್ಲಿ ತೀವ್ರ...

ಮಹಿಳಾ ಕುಸ್ತಿಪಟುಗಳಿಗೆ ಲೈಂಗಿಕ ಕಿರುಕುಳ ಪ್ರಕರಣ : WFI ಮಾಜಿ ಅಧ್ಯಕ್ಷ ಬ್ರಿಜ್ ಭೂಷಣ್‌ ಸಿಂಗ್‌ ಖುಲಾಸೆ

ದೆಹಲಿ ನ್ಯಾಯಾಲಯವು ಸೋಮವಾರ (ಆ.3) ಭಾರತೀಯ ಕುಸ್ತಿ ಫೆಡರೇಶನ್ (WFI) ಮಾಜಿ ಅಧ್ಯಕ್ಷ ಮತ್ತು ಬಿಜೆಪಿ ನಾಯಕ ಬ್ರಿಜ್ ಭೂಷಣ್ ಸಿಂಗ್ ಅವರನ್ನು ಮಹಿಳಾ ಕುಸ್ತಿಪಟುಗಳಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪದ ಪ್ರಕರಣದಿಂದ...

ಪ್ರಶ್ನೆ ಪತ್ರಿಕೆ ಸೋರಿಕೆ : ಫಾಸ್ಟ್‌ ಟ್ರ್ಯಾಕ್ ಕೋರ್ಟ್ ನ್ಯಾಯಾಧೀಶೆ ಒಂದೇ ವಾರದಲ್ಲಿ ವರ್ಗಾವಣೆ

ಪ್ರಶ್ನೆ ಪತ್ರಿಕೆ ಸೋರಿಕೆ ಪ್ರಕರಣಗಳ ವಿಚಾರಣೆಗಾಗಿ ಸ್ಥಾಪಿಸಲಾದ ತ್ವರಿತಗತಿ (ಫಾಸ್ಟ್‌ ಟ್ರ್ಯಾಕ್) ನ್ಯಾಯಾಲಯದ ನೇತೃತ್ವ ವಹಿಸಲು ನೇಮಕಗೊಂಡ ಕೇವಲ ಒಂದು ವಾರದ ನಂತರ, ದೆಹಲಿ ಹೈಕೋರ್ಟ್ ಶನಿವಾರ (ಆಗಸ್ಟ್ 1) ವಿಶೇಷ ನ್ಯಾಯಾಧೀಶರಾದ...

ಶ್ರೀಲಂಕಾ | 2019ರ ಈಸ್ಟರ್ ಬಾಂಬ್ ಸ್ಫೋಟ ಪ್ರಕರಣ: ಇಬ್ಬರು ಮಾಜಿ ಅಧಿಕಾರಿಗಳಿಗೆ ಮರಣದಂಡನೆ ವಿಧಿಸಿದ ಕೋರ್ಟ್

ಬರೋಬ್ಬರಿ 260ಕ್ಕೂ ಹೆಚ್ಚು ಜನರ ಸಾವಿಗೆ ಕಾರಣವಾಗಿದ್ದ 2019ರ ಶ್ರೀಲಂಕಾದ 'ಈಸ್ಟರ್ ಸಂಡೇ' ಬಾಂಬ್ ಸ್ಫೋಟ ಪ್ರಕರಣದಲ್ಲಿ ಕ್ರಿಮಿನಲ್ ನಿರ್ಲಕ್ಷ್ಯ ಆರೋಪ ಸಾಬೀತಾದ ಹಿನ್ನೆಲೆ, ಪೊಲೀಸ್ ಮಾಜಿ ಮುಖ್ಯಸ್ಥ ಮತ್ತು ರಕ್ಷಣಾ ಸಚಿವಾಲಯದ...

ಅಮೆರಿಕ ಓದಿಗೆ ಎಲ್ಲಿಂದ ಬಂತು ಹಣ? CJP ಸ್ಥಾಪಕ ಅಭಿಜೀತ್ ದೀಪ್ಕೆ ತಂದೆಯ ಆಸ್ತಿ ತನಿಖೆಗೆ RTI ಕಾರ್ಯಕರ್ತ ಆಗ್ರಹ

ಕಾಕ್ರೋಚ್ ಜನತಾ ಪಾರ್ಟಿ (CJP) ಸ್ಥಾಪಕ ಅಭಿಜೀತ್ ದೀಪ್ಕೆ ಅವರ ತಂದೆ, ಮಹಾರಾಷ್ಟ್ರ ಸರ್ಕಾರದ ನಿವೃತ್ತ ಉದ್ಯೋಗಿ ಭಗವಾನ್‌ರಾವ್ ದೀಪ್ಕೆ ಅವರ ಆದಾಯ ಮತ್ತು ಅಕ್ರಮ ಆಸ್ತಿ ಗಳಿಕೆ ಕುರಿತು ಸಮಗ್ರ ತನಿಖೆ...

ಕಾವೇರಿ ವಿಚಾರದಲ್ಲಿ ರಾಜಕೀಯ ಪಕ್ಕಕ್ಕಿಟ್ಟು ರಾಜ್ಯದ ಹಿತ ಕಾಯೋಣ: ಸರ್ವಪಕ್ಷ ಸಭೆಯಲ್ಲಿ ಸಿಎಂ ಡಿ.ಕೆ. ಶಿವಕುಮಾರ್ ಕರೆ

ಕಾವೇರಿ ನದಿ ನೀರು ಹಂಚಿಕೆ ವಿಚಾರವಾಗಿ ಪರಿಸ್ಥಿತಿ ಸುಧಾರಿಸುವ ಲಕ್ಷಣಗಳು ಕಂಡುಬರುತ್ತಿದ್ದು, ನದಿ ನೀರಿನ ಹಂಚಿಕೆಯಲ್ಲಿ ಸೌಹಾರ್ದಯುತವಾಗಿ ಸಮಸ್ಯೆ ನಿವಾರಿಸುವುದೇ ಸರ್ಕಾರದ ಮೊದಲ ಆದ್ಯತೆಯಾಗಿದೆ ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ತಿಳಿಸಿದ್ದಾರೆ. ಕಾವೇರಿ...

ಉತ್ತರ ಪ್ರದೇಶ : 33 ವರ್ಷಗಳ ಬಳಿಕ ದೇಶದ್ರೋಹ ಪ್ರಕರಣದಿಂದ ಮುಸ್ಲಿಂ ವ್ಯಕ್ತಿ ಖುಲಾಸೆ

ಪ್ರಾಸಿಕ್ಯೂಷನ್ ಆರೋಪಗಳನ್ನು ಸಾಂದರ್ಭಿಕ ಪುರಾವೆಗಳೊಂದಿಗೆ ಸಾಬೀತುಪಡಿಸಲು ವಿಫಲವಾಗಿದೆ ಮತ್ತು ಆರೋಪಿಯನ್ನು ಕೃತ್ಯಕ್ಕೆ ಲಿಂಕ್ ಮಾಡುವ ಪ್ರಮುಖ ಪುರಾವೆಗಳು ಕಾಣೆಯಾಗಿವೆ ಎಂದು ಅಭಿಪ್ರಾಯಪಟ್ಟ ಲಕ್ನೋದ ವಿಶೇಷ ರಾಷ್ಟ್ರೀಯ ತನಿಖಾ ದಳ (ಎನ್ಐಎ) ನ್ಯಾಯಾಲಯ, ದೇಶದ್ರೋಹ...

‘ಊರು ಕೊಳ್ಳೆ ಹೊಡೆದ ಮೇಲೆ ದಿಡ್ಡಿ ಬಾಗಿಲು ಹಾಕಿದರು’ ಎಂಬಂತೆ NTA ಯಿಂದ ₹7.5 ಕೋಟಿಯ ಬೃಹತ್ ಸೆಕ್ಯೂರಿಟಿ ಟೆಂಡರ್

ನೀಟ್ ಪ್ರಶ್ನೆಪತ್ರಿಕೆ ಸೋರಿಕೆಯಾಗಿ, ಅಮಾಯಕ ವಿದ್ಯಾರ್ಥಿಗಳ ಜೀವ-ಭವಿಷ್ಯ ಹಾಳಾದ ಮೇಲೆ, ಊರು ಕೊಳ್ಳೆ ಹೊಡೆದ ಮೇಲೆ ದಿಡ್ಡಿ ಬಾಗಿಲು ಹಾಕಿದರು ಎಂಬಂತೆ ಈಗ ಎನ್‌ಟಿಎ (NTA) ₹7.5 ಕೋಟಿ ವೆಚ್ಚದ ಭದ್ರತಾ ಟೆಂಡರ್...

SIR: ನಮೂನೆಯೂ ಇಲ್ಲ, ನೋಟಿಸ್‌ ಇಲ್ಲ ಸ್ವಂತ ಮನೆಯಲ್ಲಿದ್ದವರ ಹೆಸರನ್ನೇ ಅಳಿಸಿಹಾಕಿದ ಚುನಾವಣಾ ಆಯೋಗ

ರಾಜ್ಯದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ಒಂದಾದ ಮೇಲೊಂದರಂತೆ ಆತಂಕಕಾರಿ ಪ್ರಕರಣಗಳು ಬೆಳಕಿಗೆ ಬರುತ್ತಿವೆ. ಮನೆಮನೆಗೆ ತೆರಳಿ ಎನ್ಯುಮರೇಷನ್ ನಮೂನೆ ವಿತರಿಸುವ ಮೊದಲ ಹಂತದ ಪ್ರಕ್ರಿಯೆ...

ಲೈಂಗಿಕ ಕಿರುಕುಳ ಪ್ರಕರಣದಲ್ಲಿ ಅಮಾನತುಗೊಂಡಿದ್ದ ಯುಪಿ ಪೊಲೀಸ್ ಕಾನ್‌ಸ್ಟೇಬಲ್; ಮರುನೇಮಕದ ಬೆನ್ನಲ್ಲೇ ಬಾಲಕಿಯ ಅತ್ಯಾಚಾರ, ಕೊಲೆ!

ಹತ್ತು ವರ್ಷದ ಬಾಲಕಿಯ ಮೇಲೆ ಅತ್ಯಾಚಾರಕ್ಕೆ ಯತ್ನಿಸಿ, ಆಕೆಯ ಸಾವಿಗೆ ಕಾರಣನಾದ ಆರೋಪದ ಮೇಲೆ ಬಂಧಿತನಾದ ಉತ್ತರ ಪ್ರದೇಶದ ಪೊಲೀಸ್ ಕಾನ್‌ಸ್ಟೇಬಲ್ ಅಭಿಷೇಕ್ ಯಾದವ್‌ನನ್ನು ವೈದ್ಯಕೀಯ ತಪಾಸಣೆಗಾಗಿ ಗೋರಖ್‌ಪುರದ ಜಿಲ್ಲಾಸ್ಪತ್ರೆಗೆ ಕರೆತಂದಾಗ, ಅಲ್ಲಿನ...