HomeಮುಖಪುಟNEET ಪರೀಕ್ಷೆಯಲ್ಲಿ OBC ಮೀಸಲಾತಿ ನೀಡಿ, ಸಾಮಾಜಿಕ ನ್ಯಾಯ ಪಾಲಿಸಿ: ಪ್ರಿಯಾಂಕಾ ಗಾಂಧಿ

NEET ಪರೀಕ್ಷೆಯಲ್ಲಿ OBC ಮೀಸಲಾತಿ ನೀಡಿ, ಸಾಮಾಜಿಕ ನ್ಯಾಯ ಪಾಲಿಸಿ: ಪ್ರಿಯಾಂಕಾ ಗಾಂಧಿ

ರಾಜ್ಯ ವೈದ್ಯಕೀಯ ಸಂಸ್ಥೆಗಳಲ್ಲಿ ಒಬಿಸಿ ವಿದ್ಯಾರ್ಥಿಗಳಿಗೆ ಮೀಸಲಾತಿ ನಿರಾಕರಿಸುವುದು ಅರ್ಹ ಅಭ್ಯರ್ಥಿಗಳಿಗೆ ವೈದ್ಯಕೀಯ ಶಿಕ್ಷಣದ ಪ್ರವೇಶಕ್ಕೆ ತಡೆ ಎಂದು ಸೋನಿಯಾ ಗಾಂಧಿ ತಮ್ಮ ಪತ್ರದಲ್ಲಿ ಹೇಳಿದ್ದಾರೆ.

- Advertisement -
- Advertisement -

ರಾಷ್ಟ್ರೀಯ ಅರ್ಹತಾ ಮತ್ತು ಪ್ರವೇಶ ಪರೀಕ್ಷೆ (NEET) ಯ ರಾಷ್ಟ್ರೀಯ ಕೋಟಾ ಅಡಿಯಲ್ಲಿ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಲ್ಲಿನ ವೈದ್ಯಕೀಯ ಸಂಸ್ಥೆಗಳಲ್ಲಿ ಇತರ ಹಿಂದುಳಿದ ವರ್ಗದ (ಒಬಿಸಿ) ವಿದ್ಯಾರ್ಥಿಗಳಿಗೆ ಸೀಟು ಕಾಯ್ದಿರಿಸುವಂತೆ ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ ಒತ್ತಾಯಿಸಿದ್ದಾರೆ. ಈ ಬೇಡಿಕೆಯು ನ್ಯಾಯಸಮ್ಮತವಾಗಿದೆ ಮತ್ತು ಸಾಮಾಜಿಕ ನ್ಯಾಯವನ್ನು ಖಚಿತಪಡಿಸುತ್ತದೆ ಎಂದು ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಪ್ರಿಯಾಂಕಾ ಗಾಂಧಿ ಹೇಳಿದ್ದಾರೆ.

ತನ್ನ ತಾಯಿಯ ಬೇಡಿಕೆಯನ್ನು ಪುನರುಚ್ಚರಿಸಿರುವ ಪ್ರಿಯಾಂಕಾ, ಸೋನಿಯಾ ಗಾಂಧಿಯವರು ಈ ವಿಚಾರದಲ್ಲಿ ಬರೆದ ಪತ್ರವನ್ನು ಟ್ವೀಟ್ ಮಾಡಿದ್ದು ಕೇಂದ್ರ ಸರ್ಕಾರ ಇದನ್ನು ಕಾರ್ಯಗತಗೊಳಿಸುತ್ತದೆ ಎಂದು ನಾನು ಭಾವಿಸುತ್ತೇನೆ ಎಂದಿದ್ದಾರೆ.

ನೀಟ್‌ ಪರೀಕ್ಷೆಯ ಅಖಿಲ ಭಾರತ ಕೋಟಾ ಅಡಿಯಲ್ಲಿ ಪದವಿಪೂರ್ವ ವೈದ್ಯಕೀಯ ಮತ್ತು ದಂತ ವೈದ್ಯಕೀಯ ವಿದ್ಯಾರ್ಥಿಗಳಿಗೆ ದೇಶದ ಏಕೈಕ ಪ್ರವೇಶ ಪರೀಕ್ಷೆಯಡಿ ರಾಜ್ಯ ವೈದ್ಯಕೀಯ ಕಾಲೇಜುಗಳಲ್ಲಿ ಇತರ ಹಿಂದುಳಿದ ವರ್ಗದ ವಿದ್ಯಾರ್ಥಿಗಳಿಗೆ ಮೀಸಲಾತಿ ನೀಡುವಂತೆ ಕೋರಿ ಶುಕ್ರವಾರ ಸೋನಿಯಾ ಗಾಂಧಿ ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದಿದ್ದಾರೆ. ಮೀಸಲಾತಿ ನಿರಾಕರಿಸಿದ್ದರಿಂದ ಒಬಿಸಿ ವಿದ್ಯಾರ್ಥಿಗಳು 2017 ರಿಂದ 11,000 ಸ್ಥಾನಗಳನ್ನು ಕಳೆದುಕೊಂಡಿದ್ದಾರೆ ಎಂದು ಅವರು ಹೇಳಿದ್ದಾರೆ.


ಇದನ್ನೂ ಓದಿ: ಒಬಿಸಿ ಅಭ್ಯರ್ಥಿಗಳಿಗೆ ನೀಟ್ ಮೀಸಲಾತಿಯಲ್ಲಿ ಅನ್ಯಾಯ: ಕೇಂದ್ರ ಸರ್ಕಾರದ ವಿರುದ್ಧ ಆಕ್ರೋಶ


“ಅಖಿಲ ಭಾರತ ಕೋಟಾ ಅಡಿಯಲ್ಲಿ ಒಬಿಸಿ ಅಭ್ಯರ್ಥಿಗಳಿಗೆ ಮೀಸಲಾತಿ ನಿರಾಕರಿಸಿ ರಾಷ್ಟ್ರೀಯ ಅರ್ಹತೆ ಮತ್ತು ಪ್ರವೇಶ ಪರೀಕ್ಷೆ (NEET) ಮೂಲಕ ರಾಜ್ಯ / ಕೇಂದ್ರಾಡಳಿತ ಪ್ರದೇಶಗಳಲ್ಲಿ ವೈದ್ಯಕೀಯ ಶಿಕ್ಷಣ ಸಂಸ್ಥೆಗಳಲ್ಲಿ ಭರ್ತಿ ಮಾಡಲಾಗುತ್ತಿದೆ. ಇದನ್ನು ನಾನು ನಿಮ್ಮ ಗಮನಕ್ಕೆ ತರಲು ಬಯಸುತ್ತೇನೆ” ಎಂದು ಪ್ರಿಯಾಂಕ ಗಾಂಧಿ ಬರೆದಿದ್ದಾರೆ.

15% (ಪರಿಶಿಷ್ಟ ಜಾತಿ), 7.5% (ಪರಿಶಿಷ್ಟ ಪಂಗಡ) ಮತ್ತು 10% ಸ್ಥಾನಗಳನ್ನು ಆರ್ಥಿಕವಾಗಿ ದುರ್ಬಲ ವಿಭಾಗದ ಅಭ್ಯರ್ಥಿಗಳಿಗೆ ಕಾಯ್ದಿರಿಸಲಾಗಿದೆ. ಆದರೆ ಒಬಿಸಿ ಅಭ್ಯರ್ಥಿಗಳಿಗೆ ಮೀಸಲಾತಿಯನ್ನು ಕೇಂದ್ರ ಸರ್ಕಾರ ನಿರಾಕರಿಸಿದೆ ಎಂದು ಅವರು ದೂರಿದ್ದಾರೆ.

ರಾಜ್ಯ ವೈದ್ಯಕೀಯ ಸಂಸ್ಥೆಗಳಲ್ಲಿ ಒಬಿಸಿ ವಿದ್ಯಾರ್ಥಿಗಳಿಗೆ ಮೀಸಲಾತಿ ನಿರಾಕರಿಸುವುದು ಅರ್ಹ ಅಭ್ಯರ್ಥಿಗಳಿಗೆ ವೈದ್ಯಕೀಯ ಶಿಕ್ಷಣದ ಪ್ರವೇಶಕ್ಕೆ ತಡೆ ಎಂದು ಸೋನಿಯಾ ಗಾಂಧಿ ತಮ್ಮ ಪತ್ರದಲ್ಲಿ ಹೇಳಿದ್ದಾರೆ.

“ಸಮಾನತೆ ಮತ್ತು ಸಾಮಾಜಿಕ ನ್ಯಾಯದ ಹಿತದೃಷ್ಟಿಯಿಂದ, ರಾಜ್ಯ / ಕೇಂದ್ರಾಡಳಿತ ಪ್ರದೇಶಗಳ ವೈದ್ಯಕೀಯ ಶಿಕ್ಷಣ ಸಂಸ್ಥೆಗಳಲ್ಲಿಯೂ ಸಹ, ಅಖಿಲ ಭಾರತ ವೈದ್ಯಕೀಯ ಮತ್ತು ದಂತ ವೈದ್ಯಕೀಯ ಸ್ಥಾನಗಳಲ್ಲಿ ಒಬಿಸಿ ಅಭ್ಯರ್ಥಿಗಳಿಗೆ ಮೀಸಲಾತಿ ವಿಸ್ತರಿಸಬೇಕೆಂದು ನಾನು ಬಲವಾಗಿ ಒತ್ತಾಯಿಸುತ್ತೇನೆ” ಎಂದು ಅವರು ತಿಳಿಸಿದ್ದಾರೆ.

ಈ ಕುರಿತ ತಮಿಳುನಾಡಿನ ರಾಜಕೀಯ ಪಕ್ಷಗಳ ಮೊಕದ್ದಮೆಗೆ ಉತ್ತರಿಸಿದ ಕೇಂದ್ರವು ಅಖಿಲ ಭಾರತ ಕೋಟಾ ಅಡಿಯಲ್ಲಿ ಒಬಿಸಿ ವಿದ್ಯಾರ್ಥಿಗಳಿಗೆ ಎಲ್ಲಾ ಸರ್ಕಾರಿ ಸಂಸ್ಥೆಗಳಲ್ಲಿ ಮೀಸಲಾತಿ ನೀಡುವುದರಲ್ಲಿ ಸುಪ್ರೀಂ ಕೋರ್ಟ್ ಮಧ್ಯಪ್ರವೇಶಿಸದ ಹೊರತು ನಮಗೆ ಸಾಧ್ಯವಿಲ್ಲ ಎಂದು ಕಳೆದ ತಿಂಗಳು ಮದ್ರಾಸ್ ಹೈಕೋರ್ಟ್‌ಗೆ ತಿಳಿಸಿದೆ.

ಕೊರೊನಾ ವೈರಸ್ ಸಾಂಕ್ರಾಮಿಕ ಮತ್ತು ರಾಷ್ಟ್ರವ್ಯಾಪಿ ಲಾಕ್‌ಡೌನ್ ಕಾರಣ ಮೇ ತಿಂಗಳಲ್ಲಿ ನಡೆಯಬೇಕಿದ್ದ NEET ಪರೀಕ್ಷೆಯನ್ನು ಮುಂದೂಡಿದ್ದು, ಸೆಪ್ಟೆಂಬರ್‌ನಲ್ಲಿ ನಡೆಸಲು ತೀರ್ಮಾನಿಸಲಾಗಿದೆ.


ಧೋನಿ ಹೋದಾಗ ಪಾರ್ಟಿ ಹಾಲ್, ಮೋದಿ ಹೋದರೆ ಆಸ್ಪತ್ರೆ: ಗಾಯಾಳು ಸೈನಿಕರ ಭೇಟಿಗೆ ನೆಟ್ಟಿಗರ ತರಾಟೆ!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...

ಏಕರೂಪ ನಾಗರಿಕ ಸಂಹಿತೆಯನ್ನು ಸಂಸತ್ತಿನ ಬದಲು ರಾಜ್ಯಗಳ ಮೂಲಕವೇ ಜಾರಿಗೆ ಅಮಿತ್ ಶಾ ಮುಂದಾಗಿದ್ದೇಕೆ?

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೆಪ್ಟೆಂಬರ್ 13ರಂದು ಮುಂಬೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ, 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ಮತ್ತು ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ...

ದಿಶಾ ಸಾಲಿಯಾನ್ ಸಾವಿನ ಪ್ರಕರಣ : ಸಿಬಿಐ ಎಫ್ಐಆರ್‌ನಲ್ಲಿ ಆದಿತ್ಯ ಠಾಕ್ರೆ, ರಿಯಾ ಚಕ್ರವರ್ತಿ ಸೇರಿದಂತೆ ಹಲವರ ಹೆಸರು

ಬಾಂಬೆ ಹೈಕೋರ್ಟ್ ಆದೇಶದ ಮೇರೆಗೆ, ಕೇಂದ್ರೀಯ ತನಿಖಾ ದಳವು (ಸಿಬಿಐ) ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಅವರ ನಿಗೂಢ ಸಾವಿಗೆ ಸಂಬಂಧಿಸಿದಂತೆ ಸೋಮವಾರ(ಸೆ.14) ಎಫ್‌ಐಆರ್ ದಾಖಲಿಸಿದೆ. ಶಿವಸೇನೆ...

ಟಿ. ನರಸೀಪುರ ಇನ್ಸ್‌ಪೆಕ್ಟರ್‌ ಧನಂಜಯ್‌ ಹೇಳಿದ್ದರಲ್ಲಿ ತಪ್ಪೇನಿದೆ? ಸಾರ್ವಜನಿಕರಿಂದ ಬೆಂಬಲ

ಮಸೀದಿಗಳ ಮುಂಭಾಗ ಯಾವುದೇ ಪ್ರಚೋದನಕಾರಿ ಕೃತ್ಯಗಳಿಗೆ ಆಸ್ಪದ ನೀಡದೆ, ರಾತ್ರಿ 10:30ರ ಒಳಗಾಗಿ ಡಿಜೆ ಸದ್ದಿಲ್ಲದೆ ನಿಯಮಾನುಸಾರ ಮೆರವಣಿಗೆ ಮುಗಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಂಡ ಇನ್ಸ್‌ಪೆಕ್ಟರ್ ಧನಂಜಯ್ ಅವರ ಪರವಾಗಿ ಈಗ ಸಾಮಾಜಿಕ...

ಅತ್ಯಾಚಾರ ಪ್ರಕರಣದಲ್ಲಿ 10 ವರ್ಷ ಜೈಲು ಶಿಕ್ಷೆ: ‘ತೆಹಲ್ಕಾ’ ಸಂಸ್ಥಾಪಕ ತರುಣ್ ತೇಜ್‌ಪಾಲ್ ನ್ಯಾಯಾಲಯಕ್ಕೆ ಶರಣು, ಜೈಲಿಗೆ ರವಾನೆ 

ಪಣಜಿ: 2013ರ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್‌ನ ಗೋವಾ ಪೀಠದಿಂದ ದೋಷಿ ಎಂದು ತೀರ್ಪುಗೊಂಡು 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆಗೆ ಗುರಿಯಾಗಿರುವ ‘ತೆಹಲ್ಕಾ’ ಸಂಸ್ಥಾಪಕ ಹಾಗೂ ಮಾಜಿ ಪ್ರಧಾನ ಸಂಪಾದಕ...

ಹೈದರಾಬಾದ್‌ನಲ್ಲಿ ಗಣೇಶ ವಿಗ್ರಹ ಖರೀದಿ ವಿಚಾರಕ್ಕೆ ಘರ್ಷಣೆ: 34 ವರ್ಷದ ವ್ಯಕ್ತಿ ಸಾವು: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹ

ಹೈದರಾಬಾದ್: ಗಣೇಶ ಚತುರ್ಥಿ ಆಚರಣೆಗೆ ಮುನ್ನ ಗಣೇಶ ವಿಗ್ರಹ ಖರೀದಿಸುವ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ವಾಗ್ವಾದವು ಹಿಂಸಾತ್ಮಕ ಘರ್ಷಣೆಗೆ ತಿರುಗಿ 34 ವರ್ಷದ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಹೈದರಾಬಾದ್‌ನ ಜೋಡಿಮೆಟ್ಲಾ ಪ್ರದೇಶದಲ್ಲಿ ನಡೆದಿದೆ....

ಮಹಿಳಾ ಬೈಕರ್‌ಗೆ ಬೇಕಂತಲೇ ಢಿಕ್ಕಿ ಹೊಡೆದು ಪರಾರಿಯಾದ ಕಾರು ಸವಾರ! ಬೆಚ್ಚಿಬೀಳಿಸುವ ವಿಡಿಯೋ ವೈರಲ್

ಹರ್ಯಾಣದ ಗುರುಗ್ರಾಮದ ಗಾಲ್ಫ್ ಕೋರ್ಸ್ ರಸ್ತೆಯಲ್ಲಿ ಅತಿವೇಗವಾಗಿ ಬಂದ ಕಾರೊಂದು ಮಹಿಳಾ ಬೈಕ್ ಸವಾರಿಗೆ ಉದ್ದೇಶಪೂರ್ವಕವಾಗಿ ಢಿಕ್ಕಿ ಹೊಡೆದು ಪರಾರಿಯಾಗಿರುವ ಭೀಕರ ಘಟನೆ ನಡೆದಿದೆ. ಹಿಟ್ ಆ್ಯಂಡ್ ರನ್ ಶಂಕೆ ವ್ಯಕ್ತವಾಗಿರುವ ಈ...

ಪ. ಬಂಗಾಳ | 252 ಮದ್ರಸಾಗಳನ್ನು ಮುಚ್ಚಲು ಆದೇಶಿಸಿದ ಬಿಜೆಪಿ ಸರ್ಕಾರ; 100 ಸಂಸ್ಥೆಗಳಿಗೆ ಕಾರಣ ಕೇಳಿ ನೋಟಿಸ್

ರಾಜ್ಯದಾದ್ಯಂತ ಮದ್ರಸಾಗಳ ಸಮೀಕ್ಷೆಯನ್ನು ಪ್ರಾರಂಭಿಸಿದ ಮೂರು ತಿಂಗಳ ನಂತರ, ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಅನುಮೋದನೆಯ ಕೊರತೆ ಅಥವಾ ಇತರ ಅಕ್ರಮಗಳನ್ನು ಉಲ್ಲೇಖಿಸಿ 252 ಸಂಸ್ಥೆಗಳನ್ನು ಮುಚ್ಚಲು ಆದೇಶಿಸಿದೆ ಮತ್ತು ಇತರ...

ಟಿ. ನರಸೀಪುರ ಪ್ರತಿಭಟನೆ ವೇಳೆ ವಾಕ್ಸಮರ: ಪ್ರತಾಪ್ ಸಿಂಹ ಹಾಗೂ ಎಲ್. ನಾಗೇಂದ್ರ ನಡುವೆ ಬಹಿರಂಗ ನೂಕಾಟ-ತಳ್ಳಾಟ!

ಟಿ. ನರಸೀಪುರದಲ್ಲಿ ಗಣೇಶೋತ್ಸವ ಮೆರವಣಿಗೆಗೆ ಸಂಬಂಧಿಸಿದ ವಿವಾದದ ಹಿನ್ನೆಲೆಯಲ್ಲಿ ಬಿಜೆಪಿ ಹಮ್ಮಿಕೊಂಡಿದ್ದ ಪ್ರತಿಭಟನೆ ವೇಳೆ ಮೈಸೂರು ಬಿಜೆಪಿಯಲ್ಲಿನ ಆಂತರಿಕ ಭಿನ್ನಮತ ಬಹಿರಂಗಗೊಂಡಿದೆ. ಪೊಲೀಸ್ ಇನ್ಸ್‌ಪೆಕ್ಟರ್ ಧನಂಜಯ್ ವಿರುದ್ಧ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ಮಾಜಿ...

ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನ ಮುಂದೂಡಿದ NLSIU ವಿದ್ಯಾರ್ಥಿ ಸಂಘ; ಯಾವುದೇ ಒತ್ತಡಕ್ಕೆ ಮಣಿದಿಲ್ಲವೆಂದು ಸ್ಪಷ್ಟನೆ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯ (NLSIU) ಲಾ ಅಂಡ್ ಸೊಸೈಟಿ ಕಮಿಟಿಯು (LawSoc) ಉಮರ್ ಖಾಲಿದ್ ಅವರ ಜೈಲುವಾಸದ ಕುರಿತು ಲಲಿತ್ ವಾಚಾನಿ ನಿರ್ಮಿಸಿರುವ 'ಪ್ರಿಸನರ್ ನಂ. 626710...