Homeಸಾಮಾಜಿಕಕಿಸಾನ್ ಮುಕ್ತಿ ಮಾರ್ಚ್ 'ದೆಹಲಿ ಚಲೋ'

ಕಿಸಾನ್ ಮುಕ್ತಿ ಮಾರ್ಚ್ ‘ದೆಹಲಿ ಚಲೋ’

- Advertisement -
- Advertisement -

ಕಾದಂಬಿನಿ |

ಕಳೆದ ಇಪ್ಪತ್ತು ವರ್ಷಗಳಲ್ಲಿ 3 ಲಕ್ಷ ರೈತರ ಆತ್ಮಹತ್ಯೆಗಳಾಗಿವೆ ಎನ್ನುವುದು ಭಾರತದ ರೈತರ ಸಂಕಟಗಳ ತೀವ್ರತೆಯನ್ನು ತೋರಿಸುತ್ತದೆ. ನರೇಂದ್ರಮೋದಿ ನೇತೃತ್ವದ ಬಿಜೆಪಿ ಪಕ್ಷವು ಅಧಿಕಾರದ ಗದ್ದುಗೆಯೇರಲು ರೈತರಿಗೆ ಅನೇಕ ಭರವಸೆಗಳನ್ನು ನೀಡಿತ್ತು. ಆದರೆ ಅಧಿಕಾರ ಹಿಡಿದ ಕೆಲ ಸಮಯದಲ್ಲಿ, ಕೊಟ್ಟ ಮಾತಿನಂತೆ 14 ವರ್ಷಗಳಿಂದ ನೆನೆಗುದಿಗೆ ಬಿದ್ದಿರುವ ಸ್ವಾಮಿನಾಥನ್ ಆಯೋಗದ ವರದಿ ಜಾರಿಮಾಡಬೇಕು, ರೈತರಲ್ಲಿ ಸುರಕ್ಷಾಭಾವ ಮೂಡುವಂತೆ ತಮ್ಮ ಉತ್ಪಾದನಾ ವೆಚ್ಚದ ಕನಿಷ್ಟ 50% ಹೆಚ್ಚು ದರ ನಿಗದಿಪಡಿಸಬೇಕೆಂಬ ಆಗ್ರಹವನ್ನು ಮುಂದಿಟ್ಟುಕೊಂಡು ರೈತರು ಕೃಷಿಮಂತ್ರಿಗಳನ್ನು ಭೇಟಿಯಾದ ಸಂದರ್ಭದಲ್ಲಿ ಈ ಭರವಸೆಗಳನ್ನೆಲ್ಲ ‘ಚುನಾವಣಾ ಪ್ರಚಾರದ ಜುಮ್ಲಾ’ ಎನ್ನಲಾಯಿತು. ಅಂಕಿಅಂಶಗಳ ಪ್ರಕಾರ ಮೋದಿ ಸರಕಾರದ ಮೊದಲ ಮೂರು ವರ್ಷಗಳಲ್ಲಿಯೇ 36 ಸಾವಿರ ರೈತರ ಆತ್ಮಹತ್ಯೆಗಳಾಗಿವೆ, ಬಿಜೆಪಿ ಸರಕಾರವಿರುವ ಮಹಾರಾಷ್ಟ್ರದಲ್ಲಿಯೇ 12 ಸಾವಿರ ರೈತರ ಆತ್ಮಹತ್ಯೆಗಳಾಗಿವೆ. ಕೆಲ ರಾಜ್ಯಗಳಲ್ಲಿ ಆದ ಆತ್ಮಹತ್ಯೆಗಳು ಅಂಕಿಅಂಶದಲ್ಲಿ ಸೇರಿಯೇ ಇಲ್ಲ. 70% ಆತ್ಮಹತ್ಯೆಗಳು ಬಿಜೆಪಿ ಹಾಗೂ ಎಂಡಿಎ ಸರಕಾರವಿರುವಲ್ಲಿಯೇ ಆಗಿರುವುದು ಚುನಾವಣಾ ಪ್ರಚಾರದ ಸಂದರ್ಭದಲ್ಲಿ ಅವರು ಕೊಟ್ಟ ಆಶ್ವಾಸನೆಗಳನ್ನೇ ಅಣಕಿಸುವಂತಿವೆ.

ಇದು ಸಾಲದೆಂಬಂತೆ ತೀರ ಇತ್ತೀಚೆಗೆ ಫಸಲ್ ಬಿಮಾ ಯೋಜನೆಯ ಹಗರಣ ಹಾಗೂ ಕೃಷಿ ಮಂತ್ರಾಲಯವೇ ನೋಟು ಅಮಾನ್ಯೀಕರಣವು ಕೃಷಿ ಕ್ಷೇತ್ರದ ಸೊಂಟ ಮುರಿದಿದೆ ಎನ್ನುವುದನ್ನು ಒಪ್ಪಿಕೊಂಡಿದೆ ಎನ್ನುವ ಸುದ್ದಿಗಳು ಜೋರಾಗಿ ಸದ್ದುಮಾಡಿದವು. ಒಟ್ಟಾರೆಯಾಗಿ ಕೊಟ್ಟ ಮಾತು ತಪ್ಪಿದ ಮೋದಿ ಸರಕಾರದ ನಡೆಯ ವಿರುದ್ಧ ಸಂಘರ್ಷಗಳು ನಡೆಯುತ್ತಲೇ ಇವೆ.

ಕಳೆದ ವರ್ಷ ರೈತರ 200 ಕಿಲೋಮೀಟರುಗಳ ಸುದೀರ್ಘ ನಾಸಿಕ್- ಮುಂಬಯಿ ಲಾಂಗ್ ಮಾರ್ಚ್ ನಡೆಯಿತು. ರಾಜಸ್ಥಾನ್, ಹಿಮಾಚಲ್ ಪ್ರದೇಶ, ಹರಿಯಾಣಾ ಹೀಗೆ ದೇಶದ ಅನೇಕ ರಾಜ್ಯಗಳಲ್ಲಿ ಕೇಂದ್ರ ಸರಕಾರದ ರೈತವಿರೋಧಿ ನೀತಿಯ ವಿರುದ್ಧ ರ್ಯಾಲಿಗಳು ನಡೆದವು. ಮಧ್ಯ ಪ್ರದೇಶದಲ್ಲಿ ಸರಕಾರವು ಆರು ರೈತರನ್ನು ಗುಂಡಿಟ್ಟು ಹತ್ಯೆ ಮಾಡಿದ ‘ಮಂಡ್ಸೋರ್ ಕಾಂಡ’ದ ನಂತರ ಸುಮಾರು 200 ಕ್ಕಿಂತ ಹೆಚ್ಚು ರೈತ ಸಂಘಟನೆಗಳು ಒಂದಾಗಿ ಅಖಿಲಭಾರತ ಕಿಸಾನ್ ಸಂಘರ್ಷ ಸಮನ್ವಯ ಸಮಿತಿಯನ್ನು ರಚಿಸಲಾಗಿತ್ತು. ಇದೇ ಸಮಿತಿಯು ಕಳೆದ ವರ್ಷದ ನಾಸಿಕ್- ಮುಂಬಯಿ ಕಿಸಾನ್ ಲಾಂಗ್ ಮಾರ್ಚ್ ಅನ್ನೇ ಪ್ರೇರಣೆಯಾಗಿಟ್ಟುಕೊಂಡು ಇದೇ ನವೆಂಬರ್ 29-30 ರಂದು ‘ಸಿಂಗೂರು- ರಾಜಭವನ್ ಕಿಸಾನ್ ಮುಕ್ತಿ ಮಾರ್ಚ್’ ಆಯೋಜಿಸಿದೆ.

ಸ್ವಾಮಿನಾಥನ್ ವರದಿಯ ಜಾರಿ ಹಾಗೂ ರೈತರ ಸಾಲ ಹಾಗೂ ಬೆಳೆಗಳ ಬೆಲೆ ನಿಗದಿಗಾಗಿ 21 ದಿನಗಳ ವಿಶೇಷ ಜಂಟಿ ಸಂಸತ್ ಅದಿವೇಶನದ ಆಗ್ರಹವನ್ನು ಮುಂದಿಟ್ಟುಕೊಂಡು ಆಯೋಜಿಸಿರುವ ಈ ಕಿಸಾನ್ ಮುಕ್ತಿಮಾರ್ಚ್ ಗೆ ವಿವಿಧ ರಾಜ್ಯಗಳಿಂದ ಅಂದಾಜು ಎರಡು ಲಕ್ಷ ರೈತರು ಹಾಗೂ ರೈತರಿಗಾಗಿ ಫೋಟೋಗ್ರಾಫರುಗಳು, ರೈತರಿಗಾಗಿ ವಕೀಲರು, ರೈತರಿಗಾಗಿ ವಿದ್ಯಾರ್ಥಿಗಳು, ರೈತರಿಗಾಗಿ ಟೆಕ್ಕಿಗಳು ಎಂಬ ಸರಣಿಯಲ್ಲಿ ರೈತರೊಂದಿಗೆ ಬೆಸೆದ ಗುಂಪುಗಳು, ಜನಸಾಮಾನ್ಯರು ಹೀಗೆ ಸುಮಾರು ‘ದೆಹಲಿ ಚಲೋ, ರಾಜಭವನ್ ಚಲೋ’ ಘೋಷಣೆಗಳೊಂದಿಗೆ ದೆಹಲಿಯ ನಾಲ್ಕು ದಿಕ್ಕುಗಳಿಂದ ರಾಮಲೀಲಾ ಮೈದಾನಕ್ಕೆ ಆಗಮಿಸಲಿದ್ದಾರೆ. ಇದೇ ಸಂದರ್ಭದಲ್ಲಿ ಅಖಿಲಭಾರತ ಕಿಸಾನ್ ಸಭಾದ ಜನರಲ್ ಸೆಕ್ರೆಟರಿ ಹನ್ನಾನ್ ಮೊಲ್ಲಾ ಅವರು ‘ಅಧಿಕಾರಕ್ಕೆ ಬರಬೇಕೆನ್ನುವ ರಾಜಕೀಯ ಪಕ್ಷಗಳು ರೈತರ ಸಂಕಟಗಳಿಗೆ ಜೊತೆಯಾಗುವ ವಿಚಾರದಲ್ಲಿ ತಮ್ಮ ನಿಲುವನ್ನು ಸ್ಪಷ್ಟಪಡಿಸಲಿ’ ಎಂದಿದ್ದಾರೆ. ಈಗಾಗಲೇ ಈ ‘ಕಿಸಾನ್ ಮುಕ್ತಿ ಮಾರ್ಚ್’ ಯಶಸ್ವಿಯಾಗಿ ಆರಂಭಗೊಂಡಿದೆ. ಆದರೆ ರೈತರ ಸಂಕಟಗಳಿಗೆ ಮುಕ್ತಿ ಕೊಡುವ ವಿಚಾರಕ್ಕೆ ನರೇಂದ್ರ ಮೋದಿ ಸರಕಾರ ಹೇಗೆ ಸ್ಪಂದಿಸುತ್ತದೆ ಕಾದು ನೋಡಬೇಕಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬಿಡದಿ ಟೌನ್‌ಶಿಪ್: ಸರ್ಕಾರಕ್ಕೆ ನಾಲ್ಕು ಪ್ರಮುಖ ಹಕ್ಕೊತ್ತಾಯ, ಸರ್ಕಾರದಿಂದ ಸಕಾರಾತ್ಮಕ ಸ್ಪಂದನೆ.

ಬಿಡದಿ ಸ್ಮಾರ್ಟ್ ಸಿಟಿ ಅಥವಾ ಟೌನ್‌ಶಿಪ್ ಯೋಜನೆಯ ಭೂಸ್ವಾಧೀನ ಪ್ರಕ್ರಿಯೆಯನ್ನು ವಿರೋಧಿಸಿ ಬಿಡದಿ ರೈತರು ಹಾಗೂ ಸಂಯುಕ್ತ ಹೋರಾಟದ ನೇತೃತ್ವದಲ್ಲಿ ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ ಬೃಹತ್ ಪ್ರತಿಭಟನೆ ಮತ್ತು ವಿಧಾನಸೌಧ ಚಲೋ ಹೋರಾಟ...

ತಮಿಳುನಾಡು| ಮರ್ಯಾದೆಗೇಡು ಹತ್ಯೆ ಶಂಕೆ; 25 ವರ್ಷದ ದಲಿತ ಯುವಕನ ಭೀಕರ ಕೊಲೆ

ತಮಿಳುನಾಡಿನ ಚೆಂಗಲ್ಪಟ್ಟು ಜಿಲ್ಲೆಯಲ್ಲಿ 23 ವರ್ಷದ ದಲಿತ ಯುವಕನೊಬ್ಬನನ್ನು ಕೊಚ್ಚಿ ಕೊಲೆ ಮಾಡಲಾಗಿದ್ದು, ಮರ್ಯಾದೆಗೇಡು ಕೊಲೆಯ ಶಂಕೆ ವ್ಯಕ್ತವಾಗಿದೆ. ಆಗಸ್ಟ್ 16 ರಂದು ರಾತ್ರಿ ಚೆಂಗಲ್ಪಟ್ಟುವಿನ ಕೇಳಂಬಾಕ್ಕಂ ನಿವಾಸಿ ಪ್ರವೀಣ್ ಅವರ ಮೇಲೆ ದಾಳಿಕೋರರಾದ...

44 ಲಕ್ಷ ಮತದಾರರಿಗೆ ನೋಟಿಸ್: BLA ಗಳಿಗೆ ಪಟ್ಟಿ ನೀಡಿ, ಪಾರದರ್ಶಕತೆ ಕಾಯ್ದುಕೊಳ್ಳಲು ‘ಜಾಗೃತ ಕರ್ನಾಟಕ’ ಒತ್ತಾಯ

ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಡಿ ಪ್ರಕಟಗೊಳ್ಳುತ್ತಿರುವ ಕರಡು ಮತದಾರರ ಪಟ್ಟಿಯಿಂದ ಯಾವುದೇ ಅರ್ಹ ಮತದಾರರ ಹೆಸರು ಕೈಬಿಟ್ಟು ಹೋಗದಂತೆ ಎಚ್ಚರವಹಿಸಬೇಕು ಹಾಗೂ ನೋಟಿಸ್ ಪ್ರಕ್ರಿಯೆಗೆ ಕಾಲಾವಕಾಶ ವಿಸ್ತರಿಸಬೇಕು ಎಂದು ಆಗ್ರಹಿಸಿ ‘ಜಾಗೃತ...

ಕೇರಳ ಬಿಜೆಪಿಗೆ ಹಿರಿಯ ನಟ ಎಸ್. ದೇವನ್ ಗುಡ್‌ಬೈ: ‘ದಳಪತಿ’ ವಿಜಯ್ ಟಿವಿಕೆ ಪಕ್ಷ ಸೇರಲು ಒಲವು!

ಮಲಯಾಳಂ ನಟ ಹಾಗೂ ರಾಜಕಾರಣಿ ಎಸ್. ದೇವನ್ ಅವರು ತಮಿಳುನಾಡಿನ ವಿಜಯ್ ನೇತೃತ್ವದ 'ತಮಿಳಗ ವೆಟ್ರಿ ಕಳಗಂ' (ಟಿವಿಕೆ) ಪಕ್ಷವನ್ನು ಸೇರಲು ನಿರ್ಧರಿಸಿರುವುದಾಗಿ ತಿಳಿಸಿದ್ದಾರೆ. ಇತ್ತೀಚೆಗಷ್ಟೇ ಭಾರತೀಯ ಜನತಾ ಪಾರ್ಟಿಯ (ಬಿಜೆಪಿ) ಕೇರಳ...

ಮತ್ತೆ ಜೈಲಿನಿಂದ ಹೊರಬಂದ ಅತ್ಯಾಚಾರಿ ರಾಮ್ ರಹೀಮ್! 6 ವರ್ಷದಲ್ಲಿ 17ನೇ ಬಾರಿ ಪೆರೋಲ್

ನವದೆಹಲಿ/ರೋಹ್ಟಕ್: ಇಬ್ಬರು ಮಹಿಳಾ ಶಿಷ್ಯರ ಮೇಲಿನ ಅತ್ಯಾಚಾರ ಪ್ರಕರಣದಲ್ಲಿ 20 ವರ್ಷಗಳ ಕಠಿಣ ಜೈಲು ಶಿಕ್ಷೆ ಅನುಭವಿಸುತ್ತಿರುವ ಡೇರಾ ಸಚ್ಚಾ ಸೌದಾ ಮುಖ್ಯಸ್ಥ ಗುರ್ಮೀತ್ ರಾಮ್ ರಹೀಮ್ ಸಿಂಗ್‌ಗೆ ಹರಿಯಾಣ ಸರ್ಕಾರ ಪುನಃ...

ಎಸ್‌ಐಆರ್‌ ಕರಡು ತಿರಸ್ಕರಿಸಿದ ನಾಗರಿಕ ಸಂಘಟನೆಗಳು; ಕೇಂದ್ರ ಚುನಾವಣಾ ಆಯೋಗದ ವಿರುದ್ಧ ಎಫ್‌ಐಆರ್ ಬಿಡುಗಡೆ

ಆಗಸ್ಟ್ 24 ರಂದು ರಾಜ್ಯ ಚುನಾವಣಾ ಆಯೋಗ ಬಿಡುಗಡೆ ಮಾಡಿರುವ ಮತದಾರರ ಎಸ್‌ಐಆರ್‌ ಕರಡು ಪಟ್ಟಿಯನ್ನು ಕರ್ನಾಟಕದ ನಾಗರಿಕ ಸಂಘಟನೆಗಳು ತಿರಸ್ಕರಿಸಿದ್ದು, ಲಕ್ಷಾಂತರ ಮತದಾರರಿಗೆ ನೋಟಿಸ್‌ ಕೊಡಲು ಸಿದ್ಧತೆ ನಡೆಸಿರುವ ಕೇಂದ್ರ ಚುನಾವಣಾ...

‘ಕೇಂದ್ರ ಸರ್ಕಾರ ಜಾತಿ ಗಣತಿಗೆ ರೂಪಿಸಿರುವ ಪ್ರಶ್ನಾವಳಿ ವಿಧಾನ ದಾರಿತಪ್ಪಿಸುವಂತಿವೆ’: ಹೊಸ ಪ್ರಶ್ನಾವಳಿ ರಚಿಸಲು ಪ್ರಧಾನಿ ಮೋದಿಗೆ ಖರ್ಗೆ-ರಾಹುಲ್ ಪತ್ರ

ರಾಷ್ಟ್ರೀಯ ಜನಗಣತಿಯಲ್ಲಿ ಜಾತಿ ದತ್ತಾಂಶ ಸಂಗ್ರಹಣೆಗೆ ಸಂಬಂಧಿಸಿದಂತೆ ಕೇಂದ್ರ ಸರ್ಕಾರವು ರೂಪಿಸಿರುವ ಪ್ರಶ್ನಾವಳಿಯ ವಿಧಾನವು ಅತ್ಯಂತ ದಾರಿತಪ್ಪಿಸುವಂತಿದೆ ಎಂದು ಗಂಭೀರ ಆಕ್ಷೇಪ ವ್ಯಕ್ತಪಡಿಸಿರುವ ಕಾಂಗ್ರೆಸ್ ಅಧ್ಯಕ್ಷ ಹಾಗೂ ರಾಜ್ಯಸಭಾ ವಿರೋಧ ಪಕ್ಷದ ನಾಯಕ...

ಪತ್ರಕರ್ತ ಅಭಿಷೇಕ್ ವಿರುದ್ಧ ಯಾವುದೇ ಬಲವಂತದ ಕ್ರಮ ಜರುಗಿಸದಂತೆ ಸುಪ್ರೀಂ ಕೋರ್ಟ್ ಆದೇಶ

ರಾಮ ಮಂದಿರ ದೇಣಿಗೆ ಅಕ್ರಮದ ಕುರಿತು ವರದಿ ಮಾಡಿದ್ದ ಪತ್ರಕರ್ತ ಅಭಿಷೇಕ್ ಉಪಾಧ್ಯಾಯ ಅವರ ವಿರುದ್ಧ ಉತ್ತರ ಪ್ರದೇಶ ಪೊಲೀಸರು ದಾಖಲಿಸಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ಸುಪ್ರೀಂ ಕೋರ್ಟ್ ಮಹತ್ವದ ಮಧ್ಯಂತರ ಆದೇಶ ನೀಡಿದ್ದು,...

2027ರ ಜನಗಣತಿಯಲ್ಲಿ ಪೋಷಕರ ಧರ್ಮ, ಜನ್ಮಸ್ಥಳದ ವಿವರ ಏಕೆ? ಕೇಂದ್ರದ ವಿರುದ್ಧ ಸಿಪಿಐ(ಎಂ) ಆಕ್ರೋಶ

2027ರ ಜನಗಣತಿ ಪ್ರಶ್ನಾವಳಿಯಲ್ಲಿ ಪೋಷಕರ ಧರ್ಮ ಹಾಗೂ ಜನ್ಮಸ್ಥಳದ ಕುರಿತಾದ ವಿವರಗಳನ್ನು ಸಂಗ್ರಹಿಸಲು ಉದ್ದೇಶಿಸಿರುವುದರ ವಿರುದ್ಧ ಸಿಪಿಐ(ಎಂ) ತೀವ್ರ ಆತಂಕ ವ್ಯಕ್ತಪಡಿಸಿದ್ದು, ಈ ಕ್ರಮವು ರಾಷ್ಟ್ರೀಯ ಪೌರತ್ವ ನೋಂದಣಿ (ಎನ್‌ಆರ್‌ಸಿ) ಜಾರಿಗೆ ತರುವ...

ಟಿಎಂಸಿ ಬಂಡಾಯ ಸಂಸದರಿಗೆ ಸುಪ್ರೀಂ ಕೋರ್ಟ್ ಶಾಕ್: 20 ಎಂಪಿಗಳಿಗೆ ನೋಟಿಸ್ ಜಾರಿ

ತೃಣಮೂಲ ಕಾಂಗ್ರೆಸ್ (ಟಿಎಂಸಿ) ತೊರೆದು, ಎನ್‌ಸಿಪಿಐ (NCPI) ಎಂಬ ಅಷ್ಟಾಗಿ ಜನಪ್ರಿಯವಲ್ಲದ ಪಕ್ಷದೊಂದಿಗೆ ವಿಲೀನಗೊಂಡು ಎನ್‌ಡಿಎ ಒಕ್ಕೂಟವನ್ನು ಸೇರಿಕೊಂಡಿರುವ 20 ಬಂಡಾಯ ಸಂಸದರಿಗೆ ಸುಪ್ರೀಂ ಕೋರ್ಟ್ ಮಂಗಳವಾರ ನೋಟಿಸ್ ಜಾರಿ ಮಾಡಿದೆ. ಟಿಎಂಸಿ ಪ್ರಧಾನ...