Homeಸಾಮಾಜಿಕಕಿಸಾನ್ ಮುಕ್ತಿ ಮಾರ್ಚ್ 'ದೆಹಲಿ ಚಲೋ'

ಕಿಸಾನ್ ಮುಕ್ತಿ ಮಾರ್ಚ್ ‘ದೆಹಲಿ ಚಲೋ’

- Advertisement -
- Advertisement -

ಕಾದಂಬಿನಿ |

ಕಳೆದ ಇಪ್ಪತ್ತು ವರ್ಷಗಳಲ್ಲಿ 3 ಲಕ್ಷ ರೈತರ ಆತ್ಮಹತ್ಯೆಗಳಾಗಿವೆ ಎನ್ನುವುದು ಭಾರತದ ರೈತರ ಸಂಕಟಗಳ ತೀವ್ರತೆಯನ್ನು ತೋರಿಸುತ್ತದೆ. ನರೇಂದ್ರಮೋದಿ ನೇತೃತ್ವದ ಬಿಜೆಪಿ ಪಕ್ಷವು ಅಧಿಕಾರದ ಗದ್ದುಗೆಯೇರಲು ರೈತರಿಗೆ ಅನೇಕ ಭರವಸೆಗಳನ್ನು ನೀಡಿತ್ತು. ಆದರೆ ಅಧಿಕಾರ ಹಿಡಿದ ಕೆಲ ಸಮಯದಲ್ಲಿ, ಕೊಟ್ಟ ಮಾತಿನಂತೆ 14 ವರ್ಷಗಳಿಂದ ನೆನೆಗುದಿಗೆ ಬಿದ್ದಿರುವ ಸ್ವಾಮಿನಾಥನ್ ಆಯೋಗದ ವರದಿ ಜಾರಿಮಾಡಬೇಕು, ರೈತರಲ್ಲಿ ಸುರಕ್ಷಾಭಾವ ಮೂಡುವಂತೆ ತಮ್ಮ ಉತ್ಪಾದನಾ ವೆಚ್ಚದ ಕನಿಷ್ಟ 50% ಹೆಚ್ಚು ದರ ನಿಗದಿಪಡಿಸಬೇಕೆಂಬ ಆಗ್ರಹವನ್ನು ಮುಂದಿಟ್ಟುಕೊಂಡು ರೈತರು ಕೃಷಿಮಂತ್ರಿಗಳನ್ನು ಭೇಟಿಯಾದ ಸಂದರ್ಭದಲ್ಲಿ ಈ ಭರವಸೆಗಳನ್ನೆಲ್ಲ ‘ಚುನಾವಣಾ ಪ್ರಚಾರದ ಜುಮ್ಲಾ’ ಎನ್ನಲಾಯಿತು. ಅಂಕಿಅಂಶಗಳ ಪ್ರಕಾರ ಮೋದಿ ಸರಕಾರದ ಮೊದಲ ಮೂರು ವರ್ಷಗಳಲ್ಲಿಯೇ 36 ಸಾವಿರ ರೈತರ ಆತ್ಮಹತ್ಯೆಗಳಾಗಿವೆ, ಬಿಜೆಪಿ ಸರಕಾರವಿರುವ ಮಹಾರಾಷ್ಟ್ರದಲ್ಲಿಯೇ 12 ಸಾವಿರ ರೈತರ ಆತ್ಮಹತ್ಯೆಗಳಾಗಿವೆ. ಕೆಲ ರಾಜ್ಯಗಳಲ್ಲಿ ಆದ ಆತ್ಮಹತ್ಯೆಗಳು ಅಂಕಿಅಂಶದಲ್ಲಿ ಸೇರಿಯೇ ಇಲ್ಲ. 70% ಆತ್ಮಹತ್ಯೆಗಳು ಬಿಜೆಪಿ ಹಾಗೂ ಎಂಡಿಎ ಸರಕಾರವಿರುವಲ್ಲಿಯೇ ಆಗಿರುವುದು ಚುನಾವಣಾ ಪ್ರಚಾರದ ಸಂದರ್ಭದಲ್ಲಿ ಅವರು ಕೊಟ್ಟ ಆಶ್ವಾಸನೆಗಳನ್ನೇ ಅಣಕಿಸುವಂತಿವೆ.

ಇದು ಸಾಲದೆಂಬಂತೆ ತೀರ ಇತ್ತೀಚೆಗೆ ಫಸಲ್ ಬಿಮಾ ಯೋಜನೆಯ ಹಗರಣ ಹಾಗೂ ಕೃಷಿ ಮಂತ್ರಾಲಯವೇ ನೋಟು ಅಮಾನ್ಯೀಕರಣವು ಕೃಷಿ ಕ್ಷೇತ್ರದ ಸೊಂಟ ಮುರಿದಿದೆ ಎನ್ನುವುದನ್ನು ಒಪ್ಪಿಕೊಂಡಿದೆ ಎನ್ನುವ ಸುದ್ದಿಗಳು ಜೋರಾಗಿ ಸದ್ದುಮಾಡಿದವು. ಒಟ್ಟಾರೆಯಾಗಿ ಕೊಟ್ಟ ಮಾತು ತಪ್ಪಿದ ಮೋದಿ ಸರಕಾರದ ನಡೆಯ ವಿರುದ್ಧ ಸಂಘರ್ಷಗಳು ನಡೆಯುತ್ತಲೇ ಇವೆ.

ಕಳೆದ ವರ್ಷ ರೈತರ 200 ಕಿಲೋಮೀಟರುಗಳ ಸುದೀರ್ಘ ನಾಸಿಕ್- ಮುಂಬಯಿ ಲಾಂಗ್ ಮಾರ್ಚ್ ನಡೆಯಿತು. ರಾಜಸ್ಥಾನ್, ಹಿಮಾಚಲ್ ಪ್ರದೇಶ, ಹರಿಯಾಣಾ ಹೀಗೆ ದೇಶದ ಅನೇಕ ರಾಜ್ಯಗಳಲ್ಲಿ ಕೇಂದ್ರ ಸರಕಾರದ ರೈತವಿರೋಧಿ ನೀತಿಯ ವಿರುದ್ಧ ರ್ಯಾಲಿಗಳು ನಡೆದವು. ಮಧ್ಯ ಪ್ರದೇಶದಲ್ಲಿ ಸರಕಾರವು ಆರು ರೈತರನ್ನು ಗುಂಡಿಟ್ಟು ಹತ್ಯೆ ಮಾಡಿದ ‘ಮಂಡ್ಸೋರ್ ಕಾಂಡ’ದ ನಂತರ ಸುಮಾರು 200 ಕ್ಕಿಂತ ಹೆಚ್ಚು ರೈತ ಸಂಘಟನೆಗಳು ಒಂದಾಗಿ ಅಖಿಲಭಾರತ ಕಿಸಾನ್ ಸಂಘರ್ಷ ಸಮನ್ವಯ ಸಮಿತಿಯನ್ನು ರಚಿಸಲಾಗಿತ್ತು. ಇದೇ ಸಮಿತಿಯು ಕಳೆದ ವರ್ಷದ ನಾಸಿಕ್- ಮುಂಬಯಿ ಕಿಸಾನ್ ಲಾಂಗ್ ಮಾರ್ಚ್ ಅನ್ನೇ ಪ್ರೇರಣೆಯಾಗಿಟ್ಟುಕೊಂಡು ಇದೇ ನವೆಂಬರ್ 29-30 ರಂದು ‘ಸಿಂಗೂರು- ರಾಜಭವನ್ ಕಿಸಾನ್ ಮುಕ್ತಿ ಮಾರ್ಚ್’ ಆಯೋಜಿಸಿದೆ.

ಸ್ವಾಮಿನಾಥನ್ ವರದಿಯ ಜಾರಿ ಹಾಗೂ ರೈತರ ಸಾಲ ಹಾಗೂ ಬೆಳೆಗಳ ಬೆಲೆ ನಿಗದಿಗಾಗಿ 21 ದಿನಗಳ ವಿಶೇಷ ಜಂಟಿ ಸಂಸತ್ ಅದಿವೇಶನದ ಆಗ್ರಹವನ್ನು ಮುಂದಿಟ್ಟುಕೊಂಡು ಆಯೋಜಿಸಿರುವ ಈ ಕಿಸಾನ್ ಮುಕ್ತಿಮಾರ್ಚ್ ಗೆ ವಿವಿಧ ರಾಜ್ಯಗಳಿಂದ ಅಂದಾಜು ಎರಡು ಲಕ್ಷ ರೈತರು ಹಾಗೂ ರೈತರಿಗಾಗಿ ಫೋಟೋಗ್ರಾಫರುಗಳು, ರೈತರಿಗಾಗಿ ವಕೀಲರು, ರೈತರಿಗಾಗಿ ವಿದ್ಯಾರ್ಥಿಗಳು, ರೈತರಿಗಾಗಿ ಟೆಕ್ಕಿಗಳು ಎಂಬ ಸರಣಿಯಲ್ಲಿ ರೈತರೊಂದಿಗೆ ಬೆಸೆದ ಗುಂಪುಗಳು, ಜನಸಾಮಾನ್ಯರು ಹೀಗೆ ಸುಮಾರು ‘ದೆಹಲಿ ಚಲೋ, ರಾಜಭವನ್ ಚಲೋ’ ಘೋಷಣೆಗಳೊಂದಿಗೆ ದೆಹಲಿಯ ನಾಲ್ಕು ದಿಕ್ಕುಗಳಿಂದ ರಾಮಲೀಲಾ ಮೈದಾನಕ್ಕೆ ಆಗಮಿಸಲಿದ್ದಾರೆ. ಇದೇ ಸಂದರ್ಭದಲ್ಲಿ ಅಖಿಲಭಾರತ ಕಿಸಾನ್ ಸಭಾದ ಜನರಲ್ ಸೆಕ್ರೆಟರಿ ಹನ್ನಾನ್ ಮೊಲ್ಲಾ ಅವರು ‘ಅಧಿಕಾರಕ್ಕೆ ಬರಬೇಕೆನ್ನುವ ರಾಜಕೀಯ ಪಕ್ಷಗಳು ರೈತರ ಸಂಕಟಗಳಿಗೆ ಜೊತೆಯಾಗುವ ವಿಚಾರದಲ್ಲಿ ತಮ್ಮ ನಿಲುವನ್ನು ಸ್ಪಷ್ಟಪಡಿಸಲಿ’ ಎಂದಿದ್ದಾರೆ. ಈಗಾಗಲೇ ಈ ‘ಕಿಸಾನ್ ಮುಕ್ತಿ ಮಾರ್ಚ್’ ಯಶಸ್ವಿಯಾಗಿ ಆರಂಭಗೊಂಡಿದೆ. ಆದರೆ ರೈತರ ಸಂಕಟಗಳಿಗೆ ಮುಕ್ತಿ ಕೊಡುವ ವಿಚಾರಕ್ಕೆ ನರೇಂದ್ರ ಮೋದಿ ಸರಕಾರ ಹೇಗೆ ಸ್ಪಂದಿಸುತ್ತದೆ ಕಾದು ನೋಡಬೇಕಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಒಳಮೀಸಲಾತಿ ಜಾರಿ ಸರ್ಕಾರದ ಹೊಸ ಸೂತ್ರ

ಕರ್ನಾಟಕದಲ್ಲಿ ಒಳಮೀಸಲಾತಿಯ ’ಸದ್ದು-ಗುದ್ದು’ ಅವಿಭಜಿತ ಆಂಧ್ರಪ್ರದೇಶಕ್ಕಿಂತಲೂ ಹೆಚ್ಚಾಗಿದೆ. ಇದಕ್ಕೆ ಕಾರಣ ಪರಿಶಿಷ್ಟ ಜಾತಿಗಳೊಳಗಿನ ಮೇಲಾಟವೂ ಹೌದು, ಸರ್ಕಾರದ ಬೇಜವಾಬ್ದಾರಿ ನಡೆಗಳೂ ಹೌದು. ಆದರೆ ದಿನಾಂಕ: 24.04.2026ರಂದು ನಡೆದ ಸಚಿವ ಸಂಪುಟ ಸಭೆಯು ಒಳಮೀಸಲಾತಿ...

ಕೊರೋನಾ ಲಸಿಕೆ ಒಳಹೊರಗುಗಳ ಪರಾಮರ್ಶೆಯ ನೋಟ

ಮನುಷ್ಯನ ನೆನಪಿನ ಶಕ್ತಿ ಕಡಿಮೆ ಎಂದು ರಾಜಕಾರಣಿಗಳು, ಅಧಿಕಾರಿಗಳು ಸದಾ ಗುನುಗುತ್ತಿರುತ್ತಾರೆ. ಅದು ಜೀವ ಮತ್ತು ಜೀವನ ಕಳೆದುಕೊಂಡ ವಿಚಾರವನ್ನು ಕೂಡ ಬಹಳ ಬೇಗ ಮರೆವಿನ ತೊಟ್ಟಿಗೆ ತಳ್ಳಿ ಬಿಡುತ್ತದೆ.ಆದರೂ, ಮನುಷ್ಯ ಭೂಮಿಯ...

‘ಮಾವಿನ ಮರ’ ಕಂಡ ಕನಸು

ಪುಸ್ತಕ ಪರಿಚಯ ಸವಾಲಿನ ವಿಷಯ. ಅದರಲ್ಲೂ ಕವಿತೆಗಳ ಕುರಿತು ಮಾತನಾಡುವುದು ಇನ್ನೂ ಸವಾಲು. ಪ್ರತಿಯೊಂದು ಕವಿತೆಯೂ ತನ್ನ ಓದುಗರೊಂದಿಗೆ ಸಂವಾದಿಸುವ ಬಗೆ ವಿಭಿನ್ನವಾಗಿರುತ್ತದೆ. ಅದನ್ನು ಏಕರೂಪೀ ಪರಿಭಾಷೆಯಲ್ಲಿ ಮಂಡಿಸುವುದು ಸರಿಯಲ್ಲ. ’ಮಿಥಿಲೆಯ ಮಾವಿನ...

NEET ರದ್ದು : ಖಿನ್ನತೆ, ಆತಂಕಕ್ಕೆ ಒಳಗಾದ ವಿದ್ಯಾರ್ಥಿಗಳು; ನಾಲ್ಕು ದಿನದಲ್ಲಿ ನಾಲ್ವರು ಸಾವಿಗೆ ಶರಣು

ಈ ವರ್ಷದ (2026) ನೀಟ್-ಯುಜಿ (NEET-UG) ಪರೀಕ್ಷೆ ರದ್ದಾದ ಬಳಿಕ ದೇಶದಾದ್ಯಂತ ಕನಿಷ್ಠ ನಾಲ್ವರು ವಿದ್ಯಾರ್ಥಿಗಳು ತೀವ್ರ ಮಾನಸಿಕ ಒತ್ತಡ ಹಾಗೂ ಹತಾಶೆಯಿಂದ ಸಾವಿಗೆ ಶರಣಾಗಿದ್ದಾರೆ. ರಾಜಸ್ಥಾನದ ಝುಂಜುನು ಜಿಲ್ಲೆಯ 23 ವರ್ಷದ ಪ್ರದೀಪ್...

ಪ್ಯಾಲೆಸ್ಟೀನಿಯನ್ ಕೈದಿಗಳ ಮೇಲೆ ಲೈಂಗಿಕ ದೌರ್ಜನ್ಯ ವರದಿ: ನ್ಯೂಯಾರ್ಕ್ ಟೈಮ್ ವಿರುದ್ಧ ಮೊಕದ್ದಮೆ ದಾಖಲಿಸಿದ ಇಸ್ರೇಲ್ ಕ್ರಮಕ್ಕೆ ಆರ್‌ಎಸ್‌ಎಫ್ ಖಂಡನೆ

ಪ್ಯಾಲೆಸ್ಟೀನಿಯನ್ ಕೈದಿಗಳನ್ನು ಗುರಿಯಾಗಿಸಿಕೊಂಡು ವ್ಯಾಪಕವಾದ ಲೈಂಗಿಕ ದೌರ್ಜನ್ಯವನ್ನು ಬಹಿರಂಗಪಡಿಸಿದ ನಿಕೋಲಸ್ ಕ್ರಿಸ್ಟೋಫ್ ಅವರ  ಅಭಿಪ್ರಾಯ ಅಂಕಣವನ್ನು ಪ್ರಕಟಿಸಿದ ನ್ಯೂಯಾರ್ಕ್ ಟೈಮ್ಸ್ ವಿರುದ್ಧ ಮಾನನಷ್ಟ ಮೊಕದ್ದಮೆ ಹೂಡಿರುವ ಇಸ್ರೇಲಿ ಸರ್ಕಾರದ ನಿರ್ಧಾರವನ್ನು ರಿಪೋರ್ಟರ್ಸ್ ವಿದೌಟ್...

“ಮುಸ್ಲಿಮರಿಗೆ ಯಾವುದೇ ಕೆಲಸ ಮಾಡಲ್ಲ” ಎಂದು ವಿವಾದಾತ್ಮಕ ಶಪಥ ಮಾಡಿದ ಪಶ್ಚಿಮ ಬಂಗಾಳದ ಬಿಜೆಪಿ ಶಾಸಕ ರಿತೇಶ್ ತಿವಾರಿ

ಪಶ್ಚಿಮ ಬಂಗಾಳದಲ್ಲಿ ಸುವೇಂದು ಅಧಿಕಾರಿ ನೇತೃತ್ವದಲ್ಲಿ ಬಿಜೆಪಿ ತನ್ನ ಮೊದಲ ಸರ್ಕಾರವನ್ನು ರಚಿಸಿದ ಕೆಲವೇ ದಿನಗಳಲ್ಲಿ, ಪಕ್ಷದ ಶಾಸಕ ರಿತೇಶ್ ತಿವಾರಿ ಅವರು ಮಾಡಿರುವ ಭಾಷಣವೊಂದು ಸಾಮಾಜಿಕ ಮಾಧ್ಯಮಗಳಲ್ಲಿ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. "ಪಶ್ಚಿಮ...

’ಎಸ್‌ಐಆರ್’ ವಿರುದ್ಧ ಜನಪರ ಸಂಘಟನೆಗಳಿಂದ ಜನಾಂದೋಲನ ಬಂಗಾಳದ ಜನರ ಜೊತೆಗೆ ನಿಂತ ಕರ್ನಾಟಕ

ಮತದಾರರ ಪಟ್ಟಿ ತೀವ್ರ ಪರಿಷ್ಕರಣೆ (ಎಸ್‌ಐಆರ್) ಮೂಲಕ ವಿರೋಧ ಪಕ್ಷಗಳ ಮತದಾರರು ಮತ್ತು ಅಲ್ಪಸಂಖ್ಯಾತ ಸಮುದಾಯದ ಲಕ್ಷಾಂತರ ಮತದಾರರನ್ನು ಪಟ್ಟಿಯಿಂದ ಕೈಬಿಡುವ ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರದ ಕುತಂತ್ರ ಈಗಾಗಲೇ ಬಿಹಾರದಲ್ಲಿ ಜಗಜ್ಜಾಹೀರಾಗಿದೆ....

ನಿರುದ್ಯೋಗಿ ಯುವಕರನ್ನು ಜಿರಳೆಗಳು ಎಂದ ಸಿಜೆಐ: ಇದೆಂತಾ ಮಾತು ನ್ಯಾಯಮೂರ್ತಿಗಳೇ!

‘ಕೆಲವು ನಿರುದ್ಯೋಗಿ ಯುವಕರು ಜಿರಳೆಗಳಂತೆ ಸಮಾಜವನ್ನು ಕಾಡುತ್ತಾರೆ. ಉದ್ಯೋಗ, ಸ್ಥಾನಮಾನ ಸಿಗದೆ ಇದ್ದಾಗ ಅವರು ಎಲ್ಲರ ಮೇಲೆ ದಾಳಿ ಆರಂಭಿಸುತ್ತಾರೆ’ ಇದು ಯಾವುದೋ ರಾಜಕೀಯ ರ‍್ಯಾಲಿಯ ಭಾಷಣವಲ್ಲ ಅಥವಾ ಟಿವಿ ಚಾನೆಲ್‌ಗಳ ಜಗಳವಲ್ಲ,...

ಮುಸ್ಲಿಮರು ಕೇವಲ ವೋಟು ಹಾಕಿಕೊಂಡೇ ಇರಬೇಕಾ..ಹಕ್ಕುಗಳನ್ನು ಕೇಳಬಾರದಾ?: ಕಾಂಗ್ರೆಸ್‌ಗೆ ಮುಸ್ಲಿಂ ಸಮಾವೇಶ ಪ್ರಶ್ನೆ

"ಮುಸ್ಲಿಮರು ಕೇವಲ ವೋಟು ಹಾಕಿಕೊಂಡೇ ಇರಬೇಕಾ? ಯಾವ ಹಕ್ಕನ್ನೂ ಕೇಳಬಾರದು ಎಂದು ನೀವು (ಕಾಂಗ್ರೆಸ್‌ನವರು) ಬಯಸುತ್ತಿದ್ದೀರಾ?" ಎಂದು ಕರ್ನಾಟಕ ಮುಸ್ಲಿಂ ಸಮಾವೇಶ ಖಾರವಾಗಿ ಪ್ರಶ್ನಿಸಿತು. ಬೆಂಗಳೂರಿನ ಪುರಭವನದಲ್ಲಿ ಇಂದು (ಮೇ 16, ಶನಿವಾರ) ನಡೆದ...

“ಸನಾತನ ಬೇರುಗಳಲ್ಲಿರುವ ಅಸಮಾನತೆಗೆ ದ್ರಾವಿಡ ನೆಲದ ಪ್ರತಿರೋಧ”: ಉದಯನಿಧಿ ಹೇಳಿಕೆ ವಿವಾದವಾಗಿದ್ದೇಗೆ..?

ಸನಾತನ ಸಂಸ್ಥೆಗಳನ್ನು ಮತ್ತು ಸನಾತನ ಧರ್ಮವನ್ನು ನಿರ್ಮೂಲನೆ ಮಾಡುವ ಬಗ್ಗೆ ಉದಯನಿಧಿ ಸ್ಟಾಲಿನ್ ಅವರ ಹೇಳಿಕೆಗಳು ಸದ್ಯ ದೇಶಾದ್ಯಂತ ಸಂಚಲನ ಮೂಡಿಸಿವೆ.  ತಮಿಳುನಾಡು ವಿಧಾನಸಭೆಯಲ್ಲಿ ನೂತನ ಮುಖ್ಯಮಂತ್ರಿಯಾಗಿ ಸಿ. ಜೋಸೆಫ್ ವಿಜಯ್ ಅವರು ಅಧಿಕಾರ...