Homeಮುಖಪುಟಮರ್ಯಾದೆ ಹತ್ಯೆ ಬಗ್ಗೆ ಸಿನಿಮಾ: ರಾಮ್ ಗೋಪಾಲ್ ವರ್ಮಾ ವಿರುದ್ಧ ಕೇಸ್

ಮರ್ಯಾದೆ ಹತ್ಯೆ ಬಗ್ಗೆ ಸಿನಿಮಾ: ರಾಮ್ ಗೋಪಾಲ್ ವರ್ಮಾ ವಿರುದ್ಧ ಕೇಸ್

- Advertisement -
- Advertisement -

2018ರಲ್ಲಿ ಮರ್ಯಾದೆ ಹತ್ಯೆ ಪ್ರಕರಣದಲ್ಲಿ ಮೃತಪಟ್ಟ ಪ್ರಣಯ್ ತಂದೆ ಸಲ್ಲಿಸಿದ್ದ ಅರ್ಜಿಯ ಕುರಿತು ನ್ಯಾಯಾಲಯದ ನಿರ್ದೇಶನದಂತೆ ಚಲನಚಿತ್ರ ನಿರ್ದೇಶಕ ರಾಮ್‌ ಗೋಪಾಲ್ ವರ್ಮಾ ವಿರುದ್ಧ ತೆಲಂಗಾಣದಲ್ಲಿ ಪ್ರಕರಣ ದಾಖಲಿಸಲಾಗಿದೆ.

ರಾಮ್ ಗೋಪಾಲ್ ವರ್ಮಾರವರು ‘ಮರ್ಡರ್’ ಎಂಬ ಸಿನಿಮಾವನ್ನು ನಿರ್ದೇಶಿಸಿವುದಾಗಿ ಘೋಷಿಸಿದ್ದಾರೆ. ಇದು 2017, 2018ರಲ್ಲಿ ನಡೆದ ಮಾರ್ಯಾದೆ ಹತ್ಯೆ ಪ್ರಕರಣಗಳನ್ನು ಆಧರಿಸಿದೆ ಎಂದು ಅವರು ತಿಳಿಸಿದ್ದರು.

ಈ ವಿಷಯ ನ್ಯಾಯಾಲಯದಲ್ಲಿ ಬಾಕಿ ಇರುವಾಗ ಈ ವಿಷಯದ ಬಗ್ಗೆ ಚಿತ್ರ ನಿರ್ಮಿಸುವುದು ಸರಿಯಲ್ಲ ಎಂದು ಸಂತ್ರಸ್ತ ಪ್ರಣಯ್‌ ಅವರ ತಂದೆ ಬಾಲಸ್ವಾಮಿ ನ್ಯಾಯಾಲಯವನ್ನು ಸಂಪರ್ಕಿಸಿದರು ಎಂದು ಪೊಲೀಸರು ತಿಳಿಸಿದ್ದಾರೆ.

ಪ್ರಣಯ್ ಮತ್ತು ಅವರ ಸಂಬಂಧಿಕರ ಫೋಟೋಗಳನ್ನು ಅವರ ಒಪ್ಪಿಗೆಯಿಲ್ಲದೆ ಬಳಸಲಾಗುತ್ತಿದೆ ಎಂದು ಅವರು ದೂರಿದ್ದಾರೆ.

ಐಪಿಸಿ ಸೆಕ್ಷನ್ 153 ಎ (ಧರ್ಮ, ಜನಾಂಗ, ಹುಟ್ಟಿದ ಸ್ಥಳ, ವಾಸಸ್ಥಳ, ಭಾಷೆ ಇತ್ಯಾದಿಗಳ ಆಧಾರದ ಮೇಲೆ ವಿವಿಧ ಗುಂಪುಗಳ ನಡುವೆ ದ್ವೇಷವನ್ನು ಉತ್ತೇಜಿಸುವುದು ಮತ್ತು ಸಾಮರಸ್ಯವನ್ನು ಹಾಳುಗೆಡವಲು ಪೂರ್ವಾಗ್ರಹಪೀಡಿತ ಕೃತ್ಯಗಳನ್ನು ಮಾಡುವುದು) ಮತ್ತು ಎಸ್‌ಸಿ / ಎಸ್‌ಟಿ ದೌರ್ಜನ್ಯ ತಿದ್ದುಪಡಿ ಕಾಯ್ದೆ, 2015 ಮತ್ತು ಇತರ ವಿಭಾಗಗಳ ಅಡಿಯಲ್ಲಿ ಈ ಪ್ರಕರಣವನ್ನು ಇಂದು ತೆಲಂಗಾಣದ ಮಿರಿಯಲಗುಡದಲ್ಲಿ ದಾಖಲಿಸಲಾಗಿದೆ ಎಂದು ಅವರು ಹೇಳಿದರು.

ರಾಮ್‌ ಗೋಪಾಲ್ ವರ್ಮಾ ಜೊತೆಗೆ, ಈ ಪ್ರಕರಣದಲ್ಲಿ ಉದ್ದೇಶಿತ ಚಿತ್ರದ ನಿರ್ಮಾಪಕರೂ ಸೇರಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

ಈ ಕುರಿತು ಕನ್ನಡದ ಚಿಂತಕ, ಬರಹಗಾರ ಬಿ.ಶ್ರೀಪಾದ್ ಭಟ್ ತಮ್ಮ ಅನಿಸಿಕೆಗಳನ್ನು ಫೇಸ್‌ಬುಕ್‌ನಲ್ಲಿ ಹಂಚಿಕೊಂಡಿದ್ದಾರೆ. “ತಮಿಳುನಾಡಿನಲ್ಲಿ 2017ರಲ್ಲಿ ನಡೆದ ದಲಿತ ಯುವಕ ಶಂಕರ್‌ನ ಮರ್ಯಾದೆಗೇಡು ಹತ್ಯೆಯಲ್ಲಿ ಮರಣದಂಡನೆಗೆ ಗುರಿಯಾಗಿದ್ದ ಹುಡುಗಿಯ ತಂದೆ ಚಿನ್ನಸ್ವಾಮಿಯನ್ನು ಮದ್ರಾಸ್ ಹೈಕೋರ್ಟ್ ತಪ್ಪಿತಸ್ಥನಲ್ಲ ಎಂದು ಬಿಡುಗಡೆಗೊಳಿಸಿದೆ. ಹಾಡು ಹಗಲೆ ನೂರಾರು ಜನರ ಎದುರು ನಡೆದ ಕೊಲೆಯ ಸೂತ್ರಧಾರ ಹುಡುಗಿಯ ತಂದೆಯ ವಿರುದ್ಧ ಸೂಕ್ತ ಸಾಕ್ಷಾದಾರಗಳಿಲ್ಲ ಬಿಡುಗಡೆಯಾಗಿರುವುದು ದುರಂತ.

ಇನ್ನೊಂದೆಡೆ 2018ರಲ್ಲಿ ತೆಲಂಗಾಣದಲ್ಲಿ ನಡೆದ ದಲಿತ ಯುವಕ ಪ್ರಣಯ್‌ನ ಮರ್ಯಾದೆಗೇಡು ಹತ್ಯೆ ಪ್ರಕರಣವನ್ನು ಆಧರಿಸಿ ರಾಮ್ ಗೋಪಾಲ್ ವರ್ಮ ‘ಮರ್ಡರ್’ ಎಂಬ ಸಿನಿಮಾ ನಿರ್ದೇಶಿಸಿದ್ದಾನೆ. ಈತನೇ ಹೇಳಿಕೊಂಡಿರುವಂತೆ ಇದು ಹುಡುಗಿ ಅಮೃತಾಳ ಹಟಮಾರಿತನ ಮತ್ತು ಆಕೆಯ ತಂದೆ ಮಾರುತಿ ರಾವ್‌ನ ಅತಿಯಾದ ಪಿತೃಪ್ರೇಮದಿಂದ ಪ್ರಣಯ್‌ನ ಹತ್ಯೆಯಾಗಿದೆಯಂತೆ. ಅಂದರೆ ದಲಿತ ಎನ್ನುವ ಕಾರಣಕ್ಕೆ ನಡೆದ ಕೊಲೆಯನ್ನು ಕೌಟುಂಬಿಕ ಕಲಹ ಎಂದು ತೋರಿಸಲು ಮುಂದಾಗಿರುವ ರಾಮಗೋಪಾಲ್ ವರ್ಮ ತಾನೊಬ್ಬ ಜೀವವಿರೋಧಿ ನಿರ್ದೇಶಕ ಎಂದು ಸಾಬೀತು ಪಡಿಸಿದ್ದಾನೆ.

ಶಂಕರ್‌ನ ಹತ್ಯೆಯಲ್ಲಿ ಹೈಕೋರ್ಟ್ ತೀರ್ಪು ಬರುವುದಕ್ಕೂ ಒಂದು ದಿನ ಮುಂಚೆ ವರ್ಮಾನ ಸಿನಿಮಾದ ಪೋಸ್ಟರ್ ಬಿಡುಗಡೆಯಾಯಿತು. ಇದು ಕಾಕತಾಳೀಯದಂತಿಲ್ಲ. ಇದುವರೆಗೂ ವರ್ಮಾನ ವರ್ತನೆ ವಿಲಕ್ಷಣ ಎನ್ನುವಂತಿತ್ತು ಆದರೆ ಈಗ ವಿಕೃತಿ ಎಂದು ನಿಜವಾಗಿದೆ.

ದುರಂತವೆಂದರೆ ಜನರ ಸಹಾನಭೂತಿಯೂ ಮರ್ಯಾದೆಗೇಡು ಹತ್ಯೆಯ ಸೂತ್ರಧಾರಾದ ಚಿನ್ನಸ್ವಾಮಿ ಮತ್ತು ಮಾರುತಿ ರಾವ್ ಎಂಬ ತಂದೆಯರ ಪರವಾಗಿರುವುದು. ಇದಕ್ಕೆ ನ್ಯಾಯಾಧೀಶರೂ ಹೊರತಲ್ಲವೇನೊ. ಇದು ಕೇವಲ ದುರಂತ ಮಾತ್ರವಲ್ಲ, ಪ್ರಜ್ಞಾವಂತರ ಸೋಲು ಸಹ. ಹಾಗೆಯೇ ಇದರ ಲಾಭ ಪಡೆಯಲು ಮುಂದಾದ ವರ್ಮಾನಂತಹ ಮಾನಗೇಡಿಗಳು ಈ ಮೂಲಕ ಈ ಜಾತಿ ಕ್ರೌರ್ಯಕ್ಕೆ ತಂದುಕೊಡುವ ಮಾನ್ಯತೆ ಇದೆಯಲ್ಲಾ ಅದು ಮತ್ತಷ್ಟು ಭೀಕರವಾದದ್ದು”. ಎಂದು ಶ್ರೀಪಾದ್ ಭಟ್ ಬೇಸರ ವ್ಯಕ್ತಪಡಿಸಿದ್ದಾರೆ.


ಇದನ್ನೂ ಓದಿ: ಅಂತರ್ಜಾತಿ ವಿವಾಹದಿಂದ ಹತ್ಯೆಯಾದ ಪ್ರಣಯ್ ಹೆಂಡತಿ ಅಮೃತಗೆ ತಂದೆಯಿಂದ ಮತ್ತೆ ಬೆದರಿಕೆ: ದೂರು ದಾಖಲು

ಪ್ರಣಯ್‌ ಕೊಲೆಗಾರ, ಅಮೃತಾಳ ತಂದೆ ಮಾರುತಿರಾವ್‌ ಆತ್ಮಹತ್ಯೆ ಮಾಡಿಕೊಂಡಿದ್ದೇಕೆ?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

  1. ಪ್ರಜ್ನಾವಂತ ನ್ಯೈಜ ವ್ಯಕ್ತಿಗಳೀಗೆ ಮಾತ್ರ ಈ ದೇಶದಲ್ಲಿ ಸವಾಲು ಎದುರಾಗುತ್ತದೆ.

LEAVE A REPLY

Please enter your comment!
Please enter your name here

- Advertisment -

ಕೇರಳ | ಆದಿವಾಸಿ ಯುವಕ ಮಧು ಗುಂಪು ಹತ್ಯೆ ಪ್ರಕರಣ : 12 ಮಂದಿ ಅಪರಾಧಿಗಳಿಗೆ ಜೀವಾವಧಿ ಶಿಕ್ಷೆ ವಿಧಿಸಿದ ಹೈಕೋರ್ಟ್

ಇಡೀ ದೇಶವನ್ನೇ ಬೆಚ್ಚಿ ಬೀಳಿಸಿದ್ದ ಕೇರಳದ ಆದಿವಾಸಿ ಯುವಕ ಮಧು ಗುಂಪು ಹಲ್ಲೆ ಮತ್ತು ಹತ್ಯೆ ಪ್ರಕರಣದ 12 ಜನ ಅಪರಾಧಿಗಳಿಗೆ ಹೈಕೋರ್ಟ್ ಸೋಮವಾರ (ಮೇ.25) ಜೀವಾವಧಿ ಶಿಕ್ಷೆ ಮತ್ತು ತಲಾ 2...

“ನನ್ನ ಅನುಮತಿ ಇಲ್ಲದೆ ನನ್ನ ಮಗುವನ್ನು ಸುಡಲಾಗಿದೆ”: ಕೊಲೆಯಾದ ಕೊಯಮತ್ತೂರು ಬಾಲಕಿಯ ತಾಯಿ ಅಳಲು

ಕೊಯಮತ್ತೂರು ಬಳಿ ಲೈಂಗಿಕ ದೌರ್ಜನ್ಯಕ್ಕೊಳಗಾಗಿ ಕೊಲೆಯಾದ 10 ವರ್ಷದ ಬಾಲಕಿಯ ತಾಯಿ, ತನ್ನ ಮಗಳ ಮೃತದೇಹದ ಅಂತ್ಯಸಂಸ್ಕಾರಕ್ಕೆ ತಾನು ಅನುಮತಿ ನೀಡಿರಲಿಲ್ಲ ಎಂದು ಹೇಳಿದ್ದಾರೆ. ಮಗುವಿನ ಮರಣೋತ್ತರ ಪರೀಕ್ಷೆಯ ನಂತರ, ತನ್ನ ಪತಿ...

ಅಷ್ಟೊಂದು ‘ಸೆಂಟಿಮೆಂಟ್’ ಬೇಡ: ‘ಕಾಕ್ರೋಚ್ ಅಭಿಯಾನ’ದ ವಿರುದ್ಧದ ಅರ್ಜಿಗೆ ಸಿಜೆಐ ಪ್ರತಿಕ್ರಿಯೆ

"ವ್ಯವಸ್ಥೆಯ ಮೇಲೆ ದಾಳಿ ಮಾಡುವವರ" ಕುರಿತು ತಾವು ನೀಡಿದ್ದ ಹೇಳಿಕೆಗೆ ವ್ಯಂಗ್ಯದ ರೂಪದಲ್ಲಿ ಸಾಮಾಜಿಕ ಜಾಲತಾಣಗಳಲ್ಲಿ ಸೃಷ್ಟಿಯಾಗಿರುವ ‘ಕಾಕ್ರೋಚ್ ಜನತಾ ಪಾರ್ಟಿ’  ವಿವಾದವನ್ನು ಅಷ್ಟೊಂದು "ಭಾವನಾತ್ಮಕವಾಗಿ ತೆಗೆದುಕೊಳ್ಳಬೇಡಿ" ಎಂದು ಭಾರತದ ಮುಖ್ಯ ನ್ಯಾಯಮೂರ್ತಿ ...

ನಾಳೆ ದಿ. ಎಚ್.ಎಸ್ ದೊರೆಸ್ವಾಮಿ ಅವರಿಗೆ ‘ಕರ್ನಾಟಕದ ಗೌರವಾರ್ಪಣೆ’

ಸ್ವಾತಂತ್ರ್ಯ ಸೇನಾನಿ ದಿ. ಎಚ್.ಎಸ್ ದೊರೆಸ್ವಾಮಿ ಅವರಿಗೆ 'ಕರ್ನಾಟಕದ ಗೌರವಾರ್ಪಣೆ' ಕಾರ್ಯಕ್ರಮವನ್ನು ನಾಳೆ, ಅಂದರೆ 2026 ಮೇ 26 ರಂದು ಬೆಳಿಗ್ಗೆ 10.30ಕ್ಕೆ ಬೆಂಗಳೂರಿನ ಜ್ಞಾನಜ್ಯೋತಿ ಸಭಾಂಗಣದಲ್ಲಿ ಆಯೋಜಿಸಲಾಗಿದೆ. ಎಚ್.ಎಸ್‌ ದೊರೆಸ್ವಾಮಿ ಸ್ಮಾರಕ ಪ್ರತಿಷ್ಠಾನ,...

FACT CHECK : ಕಾಕ್ರೋಚ್ ಜನತಾ ಪಾರ್ಟಿಯ ಹೆಚ್ಚಿನ ಫಾಲೋವರ್ಸ್ ಪಾಕಿಸ್ತಾನದವರಾ?

ಇತ್ತೀಚೆಗೆ ಹುಟ್ಟಿಕೊಂಡ ಕಾಕ್ರೋಚ್ ಜನತಾ ಪಕ್ಷದ (ಸಿಜೆಪಿ) ಇನ್‌ಸ್ಟಾಗ್ರಾಮ್ ಪೇಜ್ ಕಾಂಗ್ರೆಸ್‌ನ 13 ಮಿಲಿಯನ್ ಮತ್ತು ಬಿಜೆಪಿಯ 9 ಮಿಲಿಯನ್ ಫಾಲೋವರ್ಸ್‌ಗಳ ಗಡಿಯನ್ನು ದಾಟಿದ್ದು, ಬರೋಬ್ಬರಿ 23 ಮಿಲಿಯನ್ (ಮೇ 24ರಂತೆ) ಫಾಲೋವರ್ಸ್‌...

ಬಾಂಗ್ಲಾ ಗಡಿಯಾಚೆಗೆ ತಳ್ಳಿದವರ ವಾಪಸಾತಿ: ಭಾರತೀಯರನ್ನೇ ಗಡಿಪಾರು ಮಾಡುತ್ತಿರುವ ಕೇಂದ್ರ?

ದಾಖಲೆರಹಿತ ವಲಸಿಗರೆಂದು ಆರೋಪಿಸಿ ಅಧಿಕಾರಿಗಳು ಬಾಂಗ್ಲಾದೇಶದ ಗಡಿಯಾಚೆಗೆ 'ತಳ್ಳಿದ್ದ' ಪಶ್ಚಿಮ ಬಂಗಾಳದ ನಿವಾಸಿಗಳನ್ನು ವಾಪಸ್ ಕರೆ ತರುವುದಾಗಿ ಕೇಂದ್ರ ಸರ್ಕಾರ ಶುಕ್ರವಾರ (ಮೇ 22,2026) ಸುಪ್ರೀಂ ಕೋರ್ಟ್‌ಗೆ ವಾಗ್ದಾನ ಮಾಡಿದೆ ಎಂದು ವರದಿಯಾಗಿದೆ....

SIR ಜಾರಿಯಾದ್ರೆ ಗ್ಯಾರಂಟಿಯನ್ನು ಕಳೆದುಕೊಳ್ತೀರಿ!

"ಬಡವರ ಮತಗಳನ್ನು ಪಟ್ಟಿಯಿಂದ ತೆಗೆಯಲು ಎಸ್‌ಐಆರ್ (SIR) ಮೂಲಕ ದೊಡ್ಡ ಸಂಚು ರೂಪಿಸಲಾಗಿದೆ. ನಾವೆಲ್ಲರೂ ಬಹಳ ಎಚ್ಚರಿಕೆಯಿಂದ ಇರಬೇಕು, ಇಲ್ಲದಿದ್ದರೆ ಮತ ಹಕ್ಕಿನ ಜೊತೆಗೆ ಶಕ್ತಿ, ಗೃಹಲಕ್ಷ್ಮಿಯಂತಹ ಗ್ಯಾರೆಂಟಿ ಯೋಜನೆಯನ್ನು ಕಳೆದುಕೊಳ್ಳಬೇಕಾಗುತ್ತದೆ" ಎಂದು...

ವೈಯಕ್ತಿಕ ಸ್ವಾತಂತ್ರ್ಯ Vs ಕಠಿಣ ಕಾಯ್ದೆ: ಯುಎಪಿಎ ಜಾಮೀನು ಭಿನ್ನಾಭಿಪ್ರಾಯಕ್ಕೆ ಸಿಗುವುದೇ ಸುಪ್ರೀಂ ಪರಿಹಾರ?

ಯುಎಪಿಎ ಅಡಿಯಲ್ಲಿ ದೀರ್ಘಕಾಲದ ಜೈಲುವಾಸದ ಹಿನ್ನೆಲೆ, ಜಾಮೀನು ನೀಡುವ ಕುರಿತು ಸುಪ್ರೀಂ ಕೋರ್ಟ್‌ನ ಎರಡು ನ್ಯಾಯಪೀಠಗಳ ನಡುವೆ ಭಿನ್ನಾಭಿಪ್ರಾಯ ಮೂಡಿದ ಕಾರಣ, ವಿಚಾರವನ್ನು ಸುಪ್ರೀಂ ಕೋರ್ಟ್‌ ವಿಸ್ತೃತ ಪೀಠಕ್ಕೆ ಶಿಫಾರಸು ಮಾಡಲಾಗಿದೆ ಎಂದು...

ತಾಯ್ತನ ಕ್ರೀಡೆಗೆ ಅಡ್ಡಿಯಾಗಬಾರದು: ಕುಸ್ತಿ ಒಕ್ಕೂಟಕ್ಕೆ ದೆಹಲಿ ಹೈಕೋರ್ಟ್ ಚಾಟಿ, ವಿನೇಶ್ ಫೋಗಟ್‌ಗೆ ಬಿಗ್ ರಿಲೀಫ್!

ಖ್ಯಾತ ಮಹಿಳಾ ಕುಸ್ತಿ ಪಟು ವಿನೇಶ್ ಫೋಗಟ್ ಅವರನ್ನು ದೇಶೀಯ ಕ್ರೀಡಾಕೂಟಗಳಲ್ಲಿ ಭಾಗವಹಿಸದಂತೆ "ಅನರ್ಹ" ಎಂದು ಘೋಷಿಸಿದ್ದ ಭಾರತೀಯ ಕುಸ್ತಿ ಒಕ್ಕೂಟದ (WFI) ನಿರ್ಧಾರವನ್ನು ದೆಹಲಿ ಹೈಕೋರ್ಟ್ ಶುಕ್ರವಾರ ತೀವ್ರವಾಗಿ ತರಾಟೆಗೆ ತೆಗೆದುಕೊಂಡಿದೆ....

ಗುಜರಾತ್: ಜಾನುವಾರು ಹತ್ಯೆ ಆರೋಪದಲ್ಲಿ ಬಂಧಿಸಿದ 70 ವರ್ಷದ ಮುಸ್ಲಿಂ ವ್ಯಕ್ತಿ ಸಾವು: ‘ತಂದೆಯನ್ನು ಕೊಂದರು’ ಎಂದು ಆರೋಪಿಸಿದ ಮಗ

ಗುಜರಾತ್‌ನ ಅಹಮದಾಬಾದ್ ನಗರದಲ್ಲಿ ಪೊಲೀಸ್ ಕಸ್ಟಡಿಯಲ್ಲಿದ್ದ 70 ವರ್ಷದ ಜಹೀರ್ ಶೇಖ್ ಎಂಬ ಮುಸ್ಲಿಂ ವೃದ್ಧರೊಬ್ಬರು ಅನುಮಾನಾಸ್ಪದವಾಗಿ ಸಾವನ್ನಪ್ಪಿದ್ದಾರೆ. ಈ ಘಟನೆಯು ಗುಜರಾತ್‌ನಲ್ಲಿ ತೀವ್ರ ಸಂಚಲನ ಸೃಷ್ಟಿಸಿದ್ದು, ಕಸ್ಟಡಿ ನಿಂದನೆ, ಪೊಲೀಸರ ದೌರ್ಜನ್ಯ...