Homeಕರ್ನಾಟಕಆಂಬುಲೆನ್ಸ್ ವಿಳಂಬ, ಸೋಂಕಿತ ಸಾವು: ಕೈಮುಗಿದ ಕ್ಷಮೆ ಕೇಳಿದ BBMP ಕಮಿಷನರ್

ಆಂಬುಲೆನ್ಸ್ ವಿಳಂಬ, ಸೋಂಕಿತ ಸಾವು: ಕೈಮುಗಿದ ಕ್ಷಮೆ ಕೇಳಿದ BBMP ಕಮಿಷನರ್

- Advertisement -
- Advertisement -

ಬೆಂಗಳೂರಿನ ಗವಿಪುರಂ ಕೊರೊನಾ ರೋಗಿಯೊಬ್ಬರು ತಮ್ಮ ಮನೆ ಮುಂದೆ ಆಂಬುಲೆನ್ಸ್‌ಗಾಗಿ ಸುಮಾರು ಎರಡು ಗಂಟೆಗಳ ಕಾಲ ಕಾದು, ಕೊನೆಗೆ ಅಲ್ಲೆ ಪ್ರಾಣ ಬಿಟ್ಟ ದುರ್ಘಟನೆಗೆ BBMP ಕಮಿಷನರ್ ಬಿ.ಎಚ್ ಅನಿಲ್ ಕುಮಾರ್ ಕೈಮುಗಿದ ಕ್ಷಮೆ ಕೇಳಿದ್ದಾರೆ.

55 ವರ್ಷದ ವ್ಯಕ್ತಿಯ ಶವವನ್ನು ಅವರ ಮನೆಯ ಹೊರಗಿನ ಬೀದಿಯಲ್ಲಿ ಮಲಗಿಸಿದ್ದು, ಅವರ ಸಂಬಂಧಿಕರು ಮೃತದೇಹದ ಪಕ್ಕದಲ್ಲಿ ನಿಂತಿರುವ ವಿಡಿಯೋವೊಂದು ಎಲ್ಲೆಡೆ ವೈರಲ್ ಆಗಿತ್ತು.

ಘಟನೆಯ ಹಿನ್ನೆಲೆ

ಹನುಮಂತನಗರ ಬಳಿಯ ಗವಿಪುರಂ ವ್ಯಕ್ತಿಯೊಬ್ಬರು ಉಸಿರಾಟದ ಸಮಸ್ಯೆಗಳಿಂದ ಬಳಲುತ್ತಿದ್ದು, ಮನೆಯಲ್ಲಿಯೇ ಚಿಕಿತ್ಸೆ ಪಡೆಯುತ್ತಿದ್ದರು. ಅವರನ್ನು ಕೋವಿಡ್ ಪರೀಕ್ಷೆಗೆ ಒಳಪಡಿಸಿದ್ದು ಪಾಸಿಟಿವ್ ವರದಿ ಬರುತ್ತಿದ್ದಂತಯೇ ಅವರ ಪತ್ನಿ ಆಸ್ಪತ್ರೆಗೆ ಮಾಹಿತಿ ನೀಡಿ ಆಂಬುಲೆನ್ಸ್‌ಗಾಗಿ ಮನವಿ ಮಾಡಿದ್ದರು.

ಆದರೆ ಆಂಬ್ಯುಲೆನ್ಸ್ ಬರುವುದು ತಡವಾಗಿದೆ. ಅವರ ಕುಟುಂಬ ಸದಸ್ಯರು ಅವರನ್ನು ಆಟೋರಿಕ್ಷಾ ಮೂಲಕ ಆಸ್ಪತ್ರೆಗೆ ಕರೆದೊಯ್ಯಲು ನಿರ್ಧರಿಸಿದರು. ಆದರೆ ಅವರು ಮನೆಯಿಂದ ಹೊರಬಂದ ಕೂಡಲೇ ಬೀದಿಯಲ್ಲಿ ಕುಸಿದುಬಿದ್ದಿದ್ದಾರೆ. ಅವರನ್ನು ಮಲಗಿಸಿ ಅವರ ಸಂಬಂಧಿಗಳು ಕಾಯುತ್ತಿರುವಾಗ ಪ್ರಾಣಬಿಟ್ಟಿದ್ದಾರೆ ಎನ್ನಲಾಗಿದೆ. ಎರಡು ಗಂಟೆಗಳ ವಿಳಂಬದ ನಂತರ ಆಂಬ್ಯುಲೆನ್ಸ್ ಅಲ್ಲಿಗೆ ತಲುಪಿತು ಎನ್ನಲಾಗಿದೆ.

ವಿಷಯ ತಿಳಿದ ನಂತರ ಬೆಂಗಳೂರು BBMP ಕಮಿಷನರ್ ಬಿ.ಎಚ್ ಅನಿಲ್ ಕುಮಾರ್ ಅವರ ಮನಗೆ ತೆರಳಿ ಕೈ ಮುಗಿದ ಬೇಷರತ್ ಕ್ಷಮೆ ಕೇಳಿದ್ದಾರೆ. ಘಟನೆಯ ತನಿಖೆಗೆ ಆದೇಶಿಸಲಾಗುವುದು. ಆರೋಗ್ಯ ಸೇವೆಗಳ ಮೇಲೆ ಭಾರಿ ಒತ್ತಡವಿದ್ದರೂ ಭವಿಷ್ಯದಲ್ಲಿ ಇಂತಹ ಘಟನೆಗಳು ಪುನರಾವರ್ತನೆಯಾಗದಂತೆ ನೋಡಿಕೊಳ್ಳುತ್ತೇವೆ ಎಂದು ಅವರು ಹೇಳಿದ್ದಾರೆ. ಈ ಕುರಿತು ಟ್ವೀಟ್ ಕೂಡ ಮಾಡಿದ್ದಾರೆ.

ತಪ್ಪನ್ನು ಒಪ್ಪಿಕೊಂಡು ಕ್ಷಮೆ ಕೇಳಿದ ಅನಿಲ್ ಕುಮಾರ್‌ರವರ ಕಾರ್ಯಕ್ಕೆ ಸಾಮಾಜಿಕ ಮಾಧ್ಯಮಗಳಲ್ಲಿ ಮೆಚ್ಚುಗೆ ವ್ಯಕ್ತವಾಗಿದೆ. ಬಹಳಷ್ಟು ನೆಟ್ಟಿಗರು ಸರ್ಕಾರವೊಂದಕ್ಕೆ ಇರಬೇಕಾದ ಪ್ರಾಮಾಣಿಕತೆ ಇದು ಎಂದು ಬರೆದಿದ್ದಾರೆ.

ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಟ್ವೀಟ್ ಮಾಡಿ “ಸಕಾಲದಲ್ಲಿ‌ ಅಂಬ್ಯುಲೆನ್ಸ್ ಬರದೆ ಸಾವನಪ್ಪಿದ್ದ ಕೊರೊನಾ ಸೋಂಕಿತರ ಮನೆಗೆ ತೆರಳಿ‌ ಕುಟುಂಬದ ಕ್ಷಮೆ ಕೇಳಿದ ಬಿಬಿಎಂಪಿ ಕಮಿಷನರ್ ಅನಿಲ್ ಕುಮಾರ್, ನಮ್ಮೆಲ್ಲ‌ ಅಧಿಕಾರಿಗಳಿಗೆ ಮಾದರಿಯಾಗಿದ್ದಾರೆ, ಅವರಿಗೆ ಅಭಿನಂದನೆಗಳು. ಜನತೆ ಅಧಿಕಾರಿಗಳಿಂದ ನಿರೀಕ್ಷಿಸುವುದು ಇಂತಹ ಸೂಕ್ಷ್ಮ ಅಂತಕರಣದ ಮಾನವೀಯ ನಡವಳಿಕೆಯನ್ನು” ಎಂದಿದ್ದಾರೆ.

ಘಟನೆಯ ಬಗ್ಗೆ ಪ್ರತಿಕ್ರಿಯಿಸಿದ ಬೆಂಗಳೂರು ಕೊರೊನಾ ನಿರ್ವಹಣೆ ಉಸ್ತುವಾರಿ, ಸಚಿವ ಆರ್.ಅಶೋಕ್, ಈ ದುರ್ಘಟನೆಗೆ ಕಾರಣರಾದವರ ​​ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ಹೇಳಿದ್ದಾರೆ.

ಬೆಂಗಳೂರಿನಲ್ಲಿ ಕೊರೊನಾ ಸಕಾರಾತ್ಮಕ ಪ್ರಕರಣಗಳ ಸಂಖ್ಯೆ ಒಂದು ವಾರದಲ್ಲಿ ಹಲವು ಪಟ್ಟು ಹೆಚ್ಚಾಗಿದೆ. ಬಹಳಷ್ಟು ಜನರು ಬೆಂಗಳೂರು ತೊರೆದು ತಮ್ಮ ಊರುಗಳಿಗೆ ಮರಳಿದ್ದಾರೆ ಎಂದು ವರದಿಯಾಗಿದೆ.

ಕರ್ನಾಟಕವು ಶನಿವಾರ ಒಂದೇ ದಿನ 1,839 ಹೊಸ COVID-19 ಪ್ರಕರಣಗಳನ್ನು ವರದಿ ಮಾಡಿದೆ. ಅವುಗಳಲ್ಲಿ 1,172 ಪ್ರಕರಣಗಳು ಬೆಂಗಳೂರಿನಲ್ಲೇ ದಾಖಲಾಗಿವೆ. ರಾಜ್ಯದಲ್ಲಿ ಒಟ್ಟು ಸೋಂಕುಗಳ ಸಂಖ್ಯೆ 21,549 ಮತ್ತು ಸಾವುಗಳು 335 ಕ್ಕೆ ತಲುಪಿದೆ ಎಂದು ಆರೋಗ್ಯ ಇಲಾಖೆ ತಿಳಿಸಿದೆ.


ಇದನ್ನೂ ಓದಿ: ಆಂಬುಲೆನ್ಸ್‌ಗಾಗಿ 2 ಗಂಟೆ ಕಾಯುವಿಕೆ: ಮನೆ ಮುಂದೆ ಪ್ರಾಣಬಿಟ್ಟ ಬೆಂಗಳೂರಿನ ಕೊರೊನಾ ಸೋಂಕಿತ!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಶೂಟ್ ಮಾಡಿಕೊಂಡು ಪ್ರಾಣ ಬಿಟ್ಟ ಕಾನ್ಫಿಡೆಂಟ್ ಗ್ರೂಪ್ ಸಂಸ್ಥಾಪಕ ಸಿ.ಜೆ. ರಾಯ್: ಐಟಿ ದಾಳಿ ಒತ್ತಡದಿಂದ ಆತ್ಮಹತ್ಯೆ ಶಂಕೆ

ಬೆಂಗಳೂರು: ಖ್ಯಾತ ರಿಯಲ್ ಎಸ್ಟೇಟ್ ಉದ್ಯಮಿ, ಕಾನ್ಫಿಡೆಂಟ್ ಗ್ರೂಪ್ (Confident Group) ಅಧ್ಯಕ್ಷ ಡಾ. ಸಿ.ಜೆ. ರಾಯ್ ಅವರು ಶುಕ್ರವಾರ ಬೆಂಗಳೂರಿನ ತಮ್ಮ ಕಚೇರಿಯಲ್ಲಿ ಗನ್ ನಿಂದ ಶೂಟ್ ಮಾಡಿಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ.  ಕೇರಳ...

ಕಾಂಗ್ರೆಸ್ ಆಳ್ವಿಕೆಯಲ್ಲಿ ನುಸುಳಲುಕೋರರು ಬಹುಸಂಖ್ಯಾತರಾದರು; ನುಸುಳುಕೋರರಿಂದ ಅಸ್ಸಾಂ ರಕ್ಷಿಸಲು ಬಿಜೆಪಿಗೆ ಮತ ಹಾಕಿ: ಅಮಿತ್ ಶಾ

ಧೇಮಾಜಿ (ಅಸ್ಸಾಂ): ಕಾಂಗ್ರೆಸ್ ಆಳ್ವಿಕೆಯಲ್ಲಿ ಅಸ್ಸಾಂನ ಜನಸಂಖ್ಯಾಶಾಸ್ತ್ರ ಬದಲಾಗಿದೆ ಎಂದು ಹೇಳಿರುವ ಕೇಂದ್ರ ಗೃಹ ಸಚಿವ ಅಮಿತ್ ಶಾ , ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಬಿಜೆಪಿ ನೇತೃತ್ವದ ಸರ್ಕಾರ ಈ ಪ್ರವೃತ್ತಿಯನ್ನು...

ಕೊಲ್ಕತ್ತಾ ಅಗ್ನಿ ಅವಘಡ| ಈವರೆಗೆ ವಾವ್ ಮೊಮೋ ಕಂಪನಿ ಗೋದಾಮು ಸೇರಿದಂತೆ ಇತರೆಡೆ 21 ಜನರು ಸಾವನ್ನಪ್ಪಿರುವ ಮಾಹಿತಿ ಲಭ್ಯ  

ಜನವರಿ 26 ರ ಮುಂಜಾನೆ ಕೋಲ್ಕತ್ತಾದ ಆನಂದಪುರ ಪ್ರದೇಶದಲ್ಲಿ ಸಂಭವಿಸಿದ ಭೀಕರ ಬೆಂಕಿ ಅಪಘಾತದಲ್ಲಿ ಸಾವನ್ನಪ್ಪಿದವರ ಸಂಖ್ಯೆ ಗುರುವಾರ 21 ಕ್ಕೆ ಏರಿದ್ದು, 28 ಜನರು ಇನ್ನೂ ನಾಪತ್ತೆಯಾಗಿದ್ದಾರೆ.  ಬೆಂಕಿಯ ಅವಘಡದಲ್ಲಿ ಎರಡು ಗೋದಾಮುಗಳು...

ಮುಟ್ಟಿನ ಆರೋಗ್ಯ ಮೂಲಭೂತ ಹಕ್ಕು, ಬದುಕುವ ಹಕ್ಕಿನ ಭಾಗ : ಸುಪ್ರೀಂ ಕೋರ್ಟ್

ಮುಟ್ಟಿನ ಆರೋಗ್ಯ ಸಂವಿಧಾನದ 21ನೇ ವಿಧಿಯಡಿ ಖಾತ್ರಿಪಡಿಸಿದ ಮೂಲಭೂತ ಹಕ್ಕು, ಬದುಕುವ ಹಕ್ಕಿನ ಭಾಗ ಎಂದು ಸುಪ್ರೀಂ ಕೋರ್ಟ್ ಶುಕ್ರವಾರ (ಜ.30) ಮಹತ್ವದ ತೀರ್ಪು ನೀಡಿದೆ. ಎಲ್ಲಾ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳ ಸರ್ಕಾರಿ,...

ಅತ್ಯಾಚಾರ ಪ್ರಕರಣದಲ್ಲಿ ಎಸ್‌ಪಿ ನಾಯಕ ಮೊಯಿದ್ ಖಾನ್ ಖುಲಾಸೆ: ಬಂಧನದ ಎರಡು ವರ್ಷಗಳ ನಂತರ ಬುಲ್ಡೋಜರ್ ನಿಂದ ಮನೆ ಕೆಡವಿದ್ದ ಯೋಗಿ ಸರ್ಕಾರ

2024 ರಲ್ಲಿ ಅಪ್ರಾಪ್ತ ಬಾಲಕಿಯ ಮೇಲೆ ನಡೆದ ಸಾಮೂಹಿಕ ಅತ್ಯಾಚಾರ ಪ್ರಕರಣದಲ್ಲಿ ಸಮಾಜವಾದಿ ಪಕ್ಷದ ನಾಯಕ ಮೊಯಿದ್ ಖಾನ್ ಅವರನ್ನು ಉತ್ತರ ಪ್ರದೇಶದ ಅಯೋಧ್ಯೆಯ ಪೋಕ್ಸೋ ನ್ಯಾಯಾಲಯವು ಖುಲಾಸೆಗೊಳಿಸಿದೆ.  ಅಪ್ರಾಪ್ತ ಬಾಲಕಿಯ ಮೇಲೆ ನಡೆದ...

ಸಿಎಂ ಸಿದ್ದರಾಮಯ್ಯ, ಡಿಕೆಶಿ ವಿರುದ್ಧ ‘ಸ್ಕ್ಯಾಮ್ ಲಾರ್ಡ್’ ಪೋಸ್ಟ್: ಕರ್ನಾಟಕ ಬಿಜೆಪಿ ಎಕ್ಸ್ ಹ್ಯಾಂಡಲ್ ವಿರುದ್ಧ ಪ್ರಕರಣ ದಾಖಲು

ಕರ್ನಾಟಕ ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಮತ್ತು ಇತರ ಸಚಿವರನ್ನು ಗುರಿಯಾಗಿಸಿಕೊಂಡು "ಮಾನಹಾನಿಕರ" ಪೋಸ್ಟ್ ಪೋಸ್ಟ್ ಮಾಡಿದ್ದಕ್ಕಾಗಿ ಮತ್ತು ರಾಜ್ಯವನ್ನು "ಲೂಟಿ" ಮಾಡುವಲ್ಲಿ ಅವರು ಭಾಗಿಯಾಗಿದ್ದಾರೆ ಎಂದು ಆರೋಪಿಸಿ ಬಿಜೆಪಿಯ 'ಎಕ್ಸ್'...

‘ನೀವು ಮುಂದೆ ಬರಲು ಸಿದ್ಧರಿದ್ದೀರಾ, ಅಥವಾ ಟ್ವೀಟ್ ಮಾಡುತ್ತಲೇ ಇರುತ್ತೀರಾ?’; ಮೋಹನ್ ದಾಸ್ ಪೈಗೆ ರಾಮಲಿಂಗಾರೆಡ್ಡಿ ಓಪನ್ ಚಾಲೆಂಜ್..!

ಬೆಂಗಳೂರಿನಲ್ಲಿ ಬಿಎಂಟಿಸಿ (BMTC) ಬಸ್‌ಗಳ ಕೊರತೆಯನ್ನು ಎತ್ತಿ, ಖಾಸಗಿ ಕಂಪನಿಗಳಿಗೆ ನಗರ ಬಸ್ ಸೇವೆಗೆ ಅವಕಾಶ ನೀಡಬೇಕು ಎಂದು ಸಲಹೆ ನೀಡಿದ್ದ, ಮೋಹನ್ ದಾಸ್ ಪೈ ಹೇಳಿಕೆಗೆ ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ...

ಪ್ಯಾಲೆಸ್ತೀನ್ ಸಿನಿಮಾಗಳ ಪ್ರದರ್ಶನಕ್ಕೆ ಅನುಮತಿ ನಿರಾಕರಣೆ; ರಾಜ್ಯ ಸರ್ಕಾರ ಗಟ್ಟಿ ದನಿಯಲ್ಲಿ ಪ್ರತಿಭಟಿಸಬೇಕು : ನಟ ಪ್ರಕಾಶ್ ರಾಜ್

ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವದಲ್ಲಿ ಪ್ಯಾಲೆಸ್ತೀನಿಯನ್ ಸಿನಿಮಾಗಳ ಪ್ರದರ್ಶನಕ್ಕೆ ಅನುಮತಿ ನಿರಾಕರಿಸಿರುವ ಕೇಂದ್ರ ಸರ್ಕಾರದ ಕ್ರಮವನ್ನು ರಾಜ್ಯ ಸರ್ಕಾರ ಗಟ್ಟಿ ದನಿಯಲ್ಲಿ ಪ್ರತಿರೋಧಿಸಬೇಕು, ಪ್ರತಿಭಟಿಸಬೇಕು ಎಂದು ನಟ ಪ್ರಕಾಶ್ ರಾಜ್ ಒತ್ತಾಯಿಸಿದರು. ಗುರುವಾರ (ಜ.29) ಸಂಜೆ...

ಗೌರಿ ಲಂಕೇಶರ ನೆರಳು ನನ್ನ ಮೇಲೆ ಬಿದ್ದಿರುವ ಕಾರಣಕ್ಕೆ ‘ಲ್ಯಾಂಡ್‍ ಲಾರ್ಡ್‌’ನಂತಹ ಸಿನಿಮಾ ಮಾಡಲು ಕೈ ಹಾಕಿದ್ದೇನೆ: ನಟ ದುನಿಯಾ ವಿಜಯ್

ಗೌರಿ ಲಂಕೇಶ್ ಹಾಗೂ ಇತರ ಹೋರಾಟಗಾರರ ನೆರಳು ನನ್ನ ಮೇಲೆ ಬಿದ್ದಿರುವ ಕಾರಣಕ್ಕೆ ನಾನು 'ಲ್ಯಾಂಡ್‍ಲಾರ್ಡ್' ನಂತಹ ಸಿನೆಮಾ ಮಾಡುವುದಕ್ಕೆ ಕೈ ಹಾಕಿದ್ದೇನೆ ಎಂದು ನಟ ದುನಿಯಾ ವಿಜಯ್ ಹೇಳಿದರು. ಗುರುವಾರ (ಜ.29) ಬೆಂಗಳೂರಿನ...

ಜಾತಿ ತಾರತಮ್ಯ ತಡೆಗಟ್ಟುವ ಯುಜಿಸಿಯ ಹೊಸ ನಿಯಮಕ್ಕೆ ಸುಪ್ರೀಂ ಕೋರ್ಟ್ ತಡೆ

ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಜಾತಿ ಆಧಾರಿತ ತಾರತಮ್ಯವನ್ನು ತಡೆಗಟ್ಟಲು ಕೇಂದ್ರ ಸರ್ಕಾರ ಜಾರಿಗೆ ತಂದಿರುವ ವಿಶ್ವವಿದ್ಯಾಲಯ ಅನುದಾನ ಆಯೋಗದ (ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಸಮಾನತೆಯ ಪ್ರಚಾರ) ನಿಯಮಗಳು, 2026ಕ್ಕೆ ಸುಪ್ರೀಂ ಕೋರ್ಟ್ ಗುರುವಾರ...