Homeಕರ್ನಾಟಕಆಂಬುಲೆನ್ಸ್ ವಿಳಂಬ, ಸೋಂಕಿತ ಸಾವು: ಕೈಮುಗಿದ ಕ್ಷಮೆ ಕೇಳಿದ BBMP ಕಮಿಷನರ್

ಆಂಬುಲೆನ್ಸ್ ವಿಳಂಬ, ಸೋಂಕಿತ ಸಾವು: ಕೈಮುಗಿದ ಕ್ಷಮೆ ಕೇಳಿದ BBMP ಕಮಿಷನರ್

- Advertisement -
- Advertisement -

ಬೆಂಗಳೂರಿನ ಗವಿಪುರಂ ಕೊರೊನಾ ರೋಗಿಯೊಬ್ಬರು ತಮ್ಮ ಮನೆ ಮುಂದೆ ಆಂಬುಲೆನ್ಸ್‌ಗಾಗಿ ಸುಮಾರು ಎರಡು ಗಂಟೆಗಳ ಕಾಲ ಕಾದು, ಕೊನೆಗೆ ಅಲ್ಲೆ ಪ್ರಾಣ ಬಿಟ್ಟ ದುರ್ಘಟನೆಗೆ BBMP ಕಮಿಷನರ್ ಬಿ.ಎಚ್ ಅನಿಲ್ ಕುಮಾರ್ ಕೈಮುಗಿದ ಕ್ಷಮೆ ಕೇಳಿದ್ದಾರೆ.

55 ವರ್ಷದ ವ್ಯಕ್ತಿಯ ಶವವನ್ನು ಅವರ ಮನೆಯ ಹೊರಗಿನ ಬೀದಿಯಲ್ಲಿ ಮಲಗಿಸಿದ್ದು, ಅವರ ಸಂಬಂಧಿಕರು ಮೃತದೇಹದ ಪಕ್ಕದಲ್ಲಿ ನಿಂತಿರುವ ವಿಡಿಯೋವೊಂದು ಎಲ್ಲೆಡೆ ವೈರಲ್ ಆಗಿತ್ತು.

ಘಟನೆಯ ಹಿನ್ನೆಲೆ

ಹನುಮಂತನಗರ ಬಳಿಯ ಗವಿಪುರಂ ವ್ಯಕ್ತಿಯೊಬ್ಬರು ಉಸಿರಾಟದ ಸಮಸ್ಯೆಗಳಿಂದ ಬಳಲುತ್ತಿದ್ದು, ಮನೆಯಲ್ಲಿಯೇ ಚಿಕಿತ್ಸೆ ಪಡೆಯುತ್ತಿದ್ದರು. ಅವರನ್ನು ಕೋವಿಡ್ ಪರೀಕ್ಷೆಗೆ ಒಳಪಡಿಸಿದ್ದು ಪಾಸಿಟಿವ್ ವರದಿ ಬರುತ್ತಿದ್ದಂತಯೇ ಅವರ ಪತ್ನಿ ಆಸ್ಪತ್ರೆಗೆ ಮಾಹಿತಿ ನೀಡಿ ಆಂಬುಲೆನ್ಸ್‌ಗಾಗಿ ಮನವಿ ಮಾಡಿದ್ದರು.

ಆದರೆ ಆಂಬ್ಯುಲೆನ್ಸ್ ಬರುವುದು ತಡವಾಗಿದೆ. ಅವರ ಕುಟುಂಬ ಸದಸ್ಯರು ಅವರನ್ನು ಆಟೋರಿಕ್ಷಾ ಮೂಲಕ ಆಸ್ಪತ್ರೆಗೆ ಕರೆದೊಯ್ಯಲು ನಿರ್ಧರಿಸಿದರು. ಆದರೆ ಅವರು ಮನೆಯಿಂದ ಹೊರಬಂದ ಕೂಡಲೇ ಬೀದಿಯಲ್ಲಿ ಕುಸಿದುಬಿದ್ದಿದ್ದಾರೆ. ಅವರನ್ನು ಮಲಗಿಸಿ ಅವರ ಸಂಬಂಧಿಗಳು ಕಾಯುತ್ತಿರುವಾಗ ಪ್ರಾಣಬಿಟ್ಟಿದ್ದಾರೆ ಎನ್ನಲಾಗಿದೆ. ಎರಡು ಗಂಟೆಗಳ ವಿಳಂಬದ ನಂತರ ಆಂಬ್ಯುಲೆನ್ಸ್ ಅಲ್ಲಿಗೆ ತಲುಪಿತು ಎನ್ನಲಾಗಿದೆ.

ವಿಷಯ ತಿಳಿದ ನಂತರ ಬೆಂಗಳೂರು BBMP ಕಮಿಷನರ್ ಬಿ.ಎಚ್ ಅನಿಲ್ ಕುಮಾರ್ ಅವರ ಮನಗೆ ತೆರಳಿ ಕೈ ಮುಗಿದ ಬೇಷರತ್ ಕ್ಷಮೆ ಕೇಳಿದ್ದಾರೆ. ಘಟನೆಯ ತನಿಖೆಗೆ ಆದೇಶಿಸಲಾಗುವುದು. ಆರೋಗ್ಯ ಸೇವೆಗಳ ಮೇಲೆ ಭಾರಿ ಒತ್ತಡವಿದ್ದರೂ ಭವಿಷ್ಯದಲ್ಲಿ ಇಂತಹ ಘಟನೆಗಳು ಪುನರಾವರ್ತನೆಯಾಗದಂತೆ ನೋಡಿಕೊಳ್ಳುತ್ತೇವೆ ಎಂದು ಅವರು ಹೇಳಿದ್ದಾರೆ. ಈ ಕುರಿತು ಟ್ವೀಟ್ ಕೂಡ ಮಾಡಿದ್ದಾರೆ.

ತಪ್ಪನ್ನು ಒಪ್ಪಿಕೊಂಡು ಕ್ಷಮೆ ಕೇಳಿದ ಅನಿಲ್ ಕುಮಾರ್‌ರವರ ಕಾರ್ಯಕ್ಕೆ ಸಾಮಾಜಿಕ ಮಾಧ್ಯಮಗಳಲ್ಲಿ ಮೆಚ್ಚುಗೆ ವ್ಯಕ್ತವಾಗಿದೆ. ಬಹಳಷ್ಟು ನೆಟ್ಟಿಗರು ಸರ್ಕಾರವೊಂದಕ್ಕೆ ಇರಬೇಕಾದ ಪ್ರಾಮಾಣಿಕತೆ ಇದು ಎಂದು ಬರೆದಿದ್ದಾರೆ.

ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಟ್ವೀಟ್ ಮಾಡಿ “ಸಕಾಲದಲ್ಲಿ‌ ಅಂಬ್ಯುಲೆನ್ಸ್ ಬರದೆ ಸಾವನಪ್ಪಿದ್ದ ಕೊರೊನಾ ಸೋಂಕಿತರ ಮನೆಗೆ ತೆರಳಿ‌ ಕುಟುಂಬದ ಕ್ಷಮೆ ಕೇಳಿದ ಬಿಬಿಎಂಪಿ ಕಮಿಷನರ್ ಅನಿಲ್ ಕುಮಾರ್, ನಮ್ಮೆಲ್ಲ‌ ಅಧಿಕಾರಿಗಳಿಗೆ ಮಾದರಿಯಾಗಿದ್ದಾರೆ, ಅವರಿಗೆ ಅಭಿನಂದನೆಗಳು. ಜನತೆ ಅಧಿಕಾರಿಗಳಿಂದ ನಿರೀಕ್ಷಿಸುವುದು ಇಂತಹ ಸೂಕ್ಷ್ಮ ಅಂತಕರಣದ ಮಾನವೀಯ ನಡವಳಿಕೆಯನ್ನು” ಎಂದಿದ್ದಾರೆ.

ಘಟನೆಯ ಬಗ್ಗೆ ಪ್ರತಿಕ್ರಿಯಿಸಿದ ಬೆಂಗಳೂರು ಕೊರೊನಾ ನಿರ್ವಹಣೆ ಉಸ್ತುವಾರಿ, ಸಚಿವ ಆರ್.ಅಶೋಕ್, ಈ ದುರ್ಘಟನೆಗೆ ಕಾರಣರಾದವರ ​​ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ಹೇಳಿದ್ದಾರೆ.

ಬೆಂಗಳೂರಿನಲ್ಲಿ ಕೊರೊನಾ ಸಕಾರಾತ್ಮಕ ಪ್ರಕರಣಗಳ ಸಂಖ್ಯೆ ಒಂದು ವಾರದಲ್ಲಿ ಹಲವು ಪಟ್ಟು ಹೆಚ್ಚಾಗಿದೆ. ಬಹಳಷ್ಟು ಜನರು ಬೆಂಗಳೂರು ತೊರೆದು ತಮ್ಮ ಊರುಗಳಿಗೆ ಮರಳಿದ್ದಾರೆ ಎಂದು ವರದಿಯಾಗಿದೆ.

ಕರ್ನಾಟಕವು ಶನಿವಾರ ಒಂದೇ ದಿನ 1,839 ಹೊಸ COVID-19 ಪ್ರಕರಣಗಳನ್ನು ವರದಿ ಮಾಡಿದೆ. ಅವುಗಳಲ್ಲಿ 1,172 ಪ್ರಕರಣಗಳು ಬೆಂಗಳೂರಿನಲ್ಲೇ ದಾಖಲಾಗಿವೆ. ರಾಜ್ಯದಲ್ಲಿ ಒಟ್ಟು ಸೋಂಕುಗಳ ಸಂಖ್ಯೆ 21,549 ಮತ್ತು ಸಾವುಗಳು 335 ಕ್ಕೆ ತಲುಪಿದೆ ಎಂದು ಆರೋಗ್ಯ ಇಲಾಖೆ ತಿಳಿಸಿದೆ.


ಇದನ್ನೂ ಓದಿ: ಆಂಬುಲೆನ್ಸ್‌ಗಾಗಿ 2 ಗಂಟೆ ಕಾಯುವಿಕೆ: ಮನೆ ಮುಂದೆ ಪ್ರಾಣಬಿಟ್ಟ ಬೆಂಗಳೂರಿನ ಕೊರೊನಾ ಸೋಂಕಿತ!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...