Homeಚಳವಳಿಆನ್‌ಲೈನ್ ಶಿಕ್ಷಣ ಬೇಡ: ಹಲವು ಬೇಡಿಕೆಗಳ ಈಡೇರಿಕೆಗಾಗಿ ಪ್ರತಿಭಟನೆಗೆ SFI ಕರೆ

ಆನ್‌ಲೈನ್ ಶಿಕ್ಷಣ ಬೇಡ: ಹಲವು ಬೇಡಿಕೆಗಳ ಈಡೇರಿಕೆಗಾಗಿ ಪ್ರತಿಭಟನೆಗೆ SFI ಕರೆ

ಕೇರಳ ರಾಜ್ಯ ಸರ್ಕಾರದ ಮಾದರಿಯಲ್ಲಿ ಸರ್ಕಾರವು ಪ್ರತಿ ವಿದ್ಯಾರ್ಥಿಗೆ ತಿಂಗಳಿಗೆ 10 ಕೆಜಿ ಉಚಿತ ಆಹಾರ ಧಾನ್ಯಗಳನ್ನು 6 ತಿಂಗಳವರೆಗೆ ನೀಡಬೇಕು ಎಂದು ಹೇಳಿಕೆ ತಿಳಿಸಿದೆ

- Advertisement -
- Advertisement -

ಆನ್‌ಲೈನ್ ಶಿಕ್ಷಣ ನಿಲ್ಲಿಸಬೇಕು, ತಾರತಮ್ಯ ತಡೆಗಟ್ಟಬೇಕು, ಪರೀಕ್ಷೆ ರದ್ದುಪಡಿಸಬೇಕು, ಉದ್ಯೋಗ ಸೃಷ್ಟಿಗೆ ಮುಂದಾಗಬೇಕು, ಬೆಲೆ ಇಳಿಕೆ ಮಾಡಬೇಕು ಸೇರಿದಂತೆ ಹಲವು ಬೇಡಿಕೆಗಳ ಈಡೇರಿಕೆಗಾಗಿ ಜುಲೈ 08ರಂದು ರಾಜ್ಯಾದ್ಯಂತ ವಿದ್ಯಾರ್ಥಿಗಳ ಪ್ರತಿಭಟನೆಗೆ SFI ರಾಜ್ಯ ಸಮಿತಿ ಕರೆ ನೀಡಿದೆ.

ಈ ಕುರಿತು SFI ರಾಜ್ಯ ಕಾರ್ಯದರ್ಶಿ ವಾಸುದೇವರೆಡ್ಡಿ.ಕೆ ಪತ್ರಿಕಾ ಹೇಳಿಕೆ ಬಿಡುಗಡೆ ಮಾಡಿ, ರಾಜ್ಯದ ಎಲ್ಲಾ ವಿದ್ಯಾರ್ಥಿಗಳು ಪ್ರತಿಭಟನೆಯಲ್ಲಿ ಭಾಗವಹಿಸಬೇಕೆಂದು ಮನವಿ ಮಾಡಿದ್ದಾರೆ.

ಕೋವಿಡ್-19 ರಭಸವಾಗಿ ಹರಡುತ್ತಿರುವ ಈ ಸಮಯದಲ್ಲಿ ವಿಶ್ವವಿದ್ಯಾಲಯ, ಹಾಸ್ಟೆಲ್‌ಗಳನ್ನು ಕೋವಿಡ್ ಆಸ್ಪತ್ರೆ, ಕ್ವಾರೆಂಟೈನ್ ಕೇಂದ್ರಗಳಾಗಿ ಬದಲಾಯಿಸಿರುವುದರಿಮದ ವಿದ್ಯಾರ್ಥಿಗಳು ಮತ್ತು ಪ್ರಾಧ್ಯಾಪಕರ ರಕ್ಷಣೆಯ ಹೊಣೆಗಾರಿಕೆ ಅರಿತು ಸರ್ಕಾರ ಎಲ್ಲಾ ಪರೀಕ್ಷೆಗಳನ್ನು ರದ್ದುಪಡಿಸಬೇಕೆಂದು ಎಸ್ಎಫ್ಐ ಆಗ್ರಹಿಸಿದೆ.

ಆರು ತಿಂಗಳ ಕಾಲ ವಿದ್ಯಾರ್ಥಿಗಳ ಎಲ್ಲ ಶೈಕ್ಷಣಿಕ ಶುಲ್ಕಗಳನ್ನು ಮನ್ನಾ ಮಾಡಬೇಕು. ಸೆಮಿಸ್ಟರ್ ಶುಲ್ಕ, ಅಭಿವೃದ್ಧಿ ಶುಲ್ಕ, ಪರೀಕ್ಷಾ ಶುಲ್ಕ, ಹಾಸ್ಟೆಲ್ ಶುಲ್ಕಗಳನ್ನು ಲಾಕ್‌ಡೌನ್ ಸಮಯದಲ್ಲಿ ಯಾವುದೇ ಶೈಕ್ಷಣಿಕ ಶುಲ್ಕಗಳನ್ನು ವಿದ್ಯಾರ್ಥಿಗಳಿಗೆ ವಿಧಿಸಬಾರದು. ಅಭಿವೃದ್ಧಿ ಶುಲ್ಕ, ಪ್ರವೇಶ ಶುಲ್ಕ ಇತ್ಯಾದಿಗಳ ಹೆಸರಿನಲ್ಲಿ ಯಾವುದೇ ಶೋಷಣೆ ಇರಬಾರದು ಎಂದು ಹೇಳಿಕೆಯಲ್ಲಿ ಒತ್ತಾಯಿಸಲಾಗಿದೆ.

ಮಕ್ಕಳು ಹಸಿವಿನಿಂದ ನರಳುವುದನ್ನು ನಿಲ್ಲಿಸಬೇಕು. ಹನ್ನೆರಡನೇ ತರಗತಿಯವರೆಗೆ ಎಲ್ಲಾ ವಿದ್ಯಾರ್ಥಿಗಳಿಗೆ ಮಧ್ಯಾಹ್ನದ ಊಟವನ್ನು ನೀಡಬೇಕು. ಇಲ್ಲವೇ ಕೇರಳ ರಾಜ್ಯ ಸರ್ಕಾರದ ಮಾದರಿಯಲ್ಲಿ ಸರ್ಕಾರವು ಪ್ರತಿ ವಿದ್ಯಾರ್ಥಿಗೆ ತಿಂಗಳಿಗೆ 10 ಕೆಜಿ ಉಚಿತ ಆಹಾರ ಧಾನ್ಯಗಳನ್ನು 6 ತಿಂಗಳವರೆಗೆ ನೀಡಬೇಕು ಎಂದು ಹೇಳಿಕೆ ತಿಳಿಸಿದೆ.

ಆನ್ ಲೈನ್ ಶಿಕ್ಷಣವನ್ನು ಕಡ್ಡಾಯಗೊಳಿಸುವುದು ಸರಿಯಲ್ಲ. ಇದರಿಂದ ಶೈಕ್ಷಣಿಕ ವಾತಾವರಣ ಸಂಪೂರ್ಣವಾಗಿ ವ್ಯಾಪಾರೀಕರಣ ಆಗುತ್ತದೆ. ಇದರ ಪರಿಣಾಮವಾಗಿ ಸಾರ್ವಜನಿಕ ಶಿಕ್ಷಣ, ಮುಖಾಮುಖಿ ಬೋಧನಾ ವಿಧಾನ, ಕ್ಯಾಂಪಸ್‌ಗಳಲ್ಲಿ ಸಿಗುವ ವಿದ್ಯಾರ್ಥಿಗಳ ಪ್ರಜಾಸತ್ತಾತ್ಮಕ ಶಿಕ್ಷಣದ ಹಕ್ಕುಗಳನ್ನು ದುರ್ಬಲಗೊಳಿಸುವ ಹುನ್ನಾರ ಅಡಗಿದೆ.
ಕೋವಿಡ್ -19 ಸಾಂಕ್ರಾಮಿಕ ಮತ್ತು ಅದರ ಪರಿಣಾಮವಾಗಿ ಉಂಟಾಗುವ ಅಡೆತಡೆಗಳ ಅವಧಿಯಲ್ಲಿ, ಶೈಕ್ಷಣಿಕ ವರ್ಷವನ್ನು ಅಡ್ಡಿಪಡಿಸದಂತೆ ಆನ್ ಲೈನ್ ವಿಧಾನಗಳನ್ನು ಬಳಸಿಕೊಳ್ಳಬಹುದು. ಆದರೆ ಇದು ಶಾಶ್ವತ ಪರ್ಯಾಯವಾಗಲು ಸಾಧ್ಯವಿಲ್ಲ. ಸಂಬಂಧಪಟ್ಟ ಪ್ರದೇಶದ ಎಲ್ಲ ವಿದ್ಯಾರ್ಥಿಗಳಿಂದ ಡಿಜಿಟಲ್ ಸಾಧನಗಳಿಗೆ ಸಾರ್ವತ್ರಿಕ ಪ್ರವೇಶವಿದ್ದಲ್ಲಿ ಮಾತ್ರ ಇದನ್ನು ಬಳಸಿಕೊಳ್ಳಬೇಕು. ಶಿಕ್ಷಣದಲ್ಲಿ ಯಾವುದೇ ಡಿಜಿಟಲ್ ತಾರತಮ್ಯವನ್ನು ಎಸ್‌ಎಫ್‌ಐ ವಿರೋಧಿಸುತ್ತದೆ ಎಂದು ಹೇಳಿಕೆಯಲ್ಲಿ ತಿಳಿಸಲಾಗಿದೆ.

ತಳಸಮುದಾಯದ ವಿದ್ಯಾರ್ಥಿಗಳಿಗೆ ಶೀಘ್ರವಾಗಿ ಫೆಲೋಶಿಪ್ ವಿತರಿಸಬೇಕು. ಶಿಕ್ಷಣ ಸಂಸ್ಥೆಗಳು/ವಿದ್ಯಾಲಯಗಳಲ್ಲಿ ಕೆಲಸ ಮಾಡುವ ಅತಿಥಿ ಶಿಕ್ಷಕರು, ಉಪನ್ಯಾಸಕರು ಎಲ್ಲಾ ಕಾರ್ಮಿಕರ ಬಾಕಿ ಇರುವ ವೇತನಗಳನ್ನು ಶೀಘ್ರವಾಗಿ ಪಾವತಿಸಬೇಕು ಎಂದು ಹೇಳಿಕೆಯಲ್ಲಿ ಒತ್ತಾಯಿಸಲಾಗಿದೆ.

ಕೋವಿಡ್-19 ಪರೀಕ್ಷೆಗಳನ್ನು ಉಚಿತವಾಗಿ ಮಾಡಬೇಕು, ಪೆಟ್ರೋಲ್ ಡೀಸೆಲ್ ಬೆಲೆ ಏರಿಕೆ ನಿಲ್ಲಿಸಬೇಕು, ಉದ್ಯೋಗ ಸೃಷ್ಟಿಸಲು, ಆರ್ಥಿಕ ವ್ಯವಸ್ಥೆಯನ್ನು ಸುಧಾರಿಸಬೇಕು ಎಂದು ಆಗ್ರಹಿಸಿ ಈ ಪ್ರತಿಭಟನೆ ನಡೆಯುತ್ತಿದೆ ಎಂದು ವಾಸುದೇವರೆಡ್ಡಿ ತಿಳಿಸಿದ್ದಾರೆ.


ಇದನ್ನೂ ಓದಿ: 16 ತಿಂಗಳಿಂದ ಬಾರದ ಶಿಷ್ಯವೇತನ: ದಾವಣಗೆರೆ ವೈದ್ಯಕೀಯ ವಿದ್ಯಾರ್ಥಿಗಳ ಪ್ರತಿಭಟನೆ 7ನೇ ದಿನಕ್ಕೆ 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...

ಏಕರೂಪ ನಾಗರಿಕ ಸಂಹಿತೆಯನ್ನು ಸಂಸತ್ತಿನ ಬದಲು ರಾಜ್ಯಗಳ ಮೂಲಕವೇ ಜಾರಿಗೆ ಅಮಿತ್ ಶಾ ಮುಂದಾಗಿದ್ದೇಕೆ?

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೆಪ್ಟೆಂಬರ್ 13ರಂದು ಮುಂಬೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ, 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ಮತ್ತು ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ...

ದಿಶಾ ಸಾಲಿಯಾನ್ ಸಾವಿನ ಪ್ರಕರಣ : ಸಿಬಿಐ ಎಫ್ಐಆರ್‌ನಲ್ಲಿ ಆದಿತ್ಯ ಠಾಕ್ರೆ, ರಿಯಾ ಚಕ್ರವರ್ತಿ ಸೇರಿದಂತೆ ಹಲವರ ಹೆಸರು

ಬಾಂಬೆ ಹೈಕೋರ್ಟ್ ಆದೇಶದ ಮೇರೆಗೆ, ಕೇಂದ್ರೀಯ ತನಿಖಾ ದಳವು (ಸಿಬಿಐ) ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಅವರ ನಿಗೂಢ ಸಾವಿಗೆ ಸಂಬಂಧಿಸಿದಂತೆ ಸೋಮವಾರ(ಸೆ.14) ಎಫ್‌ಐಆರ್ ದಾಖಲಿಸಿದೆ. ಶಿವಸೇನೆ...

ಟಿ. ನರಸೀಪುರ ಇನ್ಸ್‌ಪೆಕ್ಟರ್‌ ಧನಂಜಯ್‌ ಹೇಳಿದ್ದರಲ್ಲಿ ತಪ್ಪೇನಿದೆ? ಸಾರ್ವಜನಿಕರಿಂದ ಬೆಂಬಲ

ಮಸೀದಿಗಳ ಮುಂಭಾಗ ಯಾವುದೇ ಪ್ರಚೋದನಕಾರಿ ಕೃತ್ಯಗಳಿಗೆ ಆಸ್ಪದ ನೀಡದೆ, ರಾತ್ರಿ 10:30ರ ಒಳಗಾಗಿ ಡಿಜೆ ಸದ್ದಿಲ್ಲದೆ ನಿಯಮಾನುಸಾರ ಮೆರವಣಿಗೆ ಮುಗಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಂಡ ಇನ್ಸ್‌ಪೆಕ್ಟರ್ ಧನಂಜಯ್ ಅವರ ಪರವಾಗಿ ಈಗ ಸಾಮಾಜಿಕ...

ಅತ್ಯಾಚಾರ ಪ್ರಕರಣದಲ್ಲಿ 10 ವರ್ಷ ಜೈಲು ಶಿಕ್ಷೆ: ‘ತೆಹಲ್ಕಾ’ ಸಂಸ್ಥಾಪಕ ತರುಣ್ ತೇಜ್‌ಪಾಲ್ ನ್ಯಾಯಾಲಯಕ್ಕೆ ಶರಣು, ಜೈಲಿಗೆ ರವಾನೆ 

ಪಣಜಿ: 2013ರ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್‌ನ ಗೋವಾ ಪೀಠದಿಂದ ದೋಷಿ ಎಂದು ತೀರ್ಪುಗೊಂಡು 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆಗೆ ಗುರಿಯಾಗಿರುವ ‘ತೆಹಲ್ಕಾ’ ಸಂಸ್ಥಾಪಕ ಹಾಗೂ ಮಾಜಿ ಪ್ರಧಾನ ಸಂಪಾದಕ...

ಹೈದರಾಬಾದ್‌ನಲ್ಲಿ ಗಣೇಶ ವಿಗ್ರಹ ಖರೀದಿ ವಿಚಾರಕ್ಕೆ ಘರ್ಷಣೆ: 34 ವರ್ಷದ ವ್ಯಕ್ತಿ ಸಾವು: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹ

ಹೈದರಾಬಾದ್: ಗಣೇಶ ಚತುರ್ಥಿ ಆಚರಣೆಗೆ ಮುನ್ನ ಗಣೇಶ ವಿಗ್ರಹ ಖರೀದಿಸುವ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ವಾಗ್ವಾದವು ಹಿಂಸಾತ್ಮಕ ಘರ್ಷಣೆಗೆ ತಿರುಗಿ 34 ವರ್ಷದ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಹೈದರಾಬಾದ್‌ನ ಜೋಡಿಮೆಟ್ಲಾ ಪ್ರದೇಶದಲ್ಲಿ ನಡೆದಿದೆ....

ಮಹಿಳಾ ಬೈಕರ್‌ಗೆ ಬೇಕಂತಲೇ ಢಿಕ್ಕಿ ಹೊಡೆದು ಪರಾರಿಯಾದ ಕಾರು ಸವಾರ! ಬೆಚ್ಚಿಬೀಳಿಸುವ ವಿಡಿಯೋ ವೈರಲ್

ಹರ್ಯಾಣದ ಗುರುಗ್ರಾಮದ ಗಾಲ್ಫ್ ಕೋರ್ಸ್ ರಸ್ತೆಯಲ್ಲಿ ಅತಿವೇಗವಾಗಿ ಬಂದ ಕಾರೊಂದು ಮಹಿಳಾ ಬೈಕ್ ಸವಾರಿಗೆ ಉದ್ದೇಶಪೂರ್ವಕವಾಗಿ ಢಿಕ್ಕಿ ಹೊಡೆದು ಪರಾರಿಯಾಗಿರುವ ಭೀಕರ ಘಟನೆ ನಡೆದಿದೆ. ಹಿಟ್ ಆ್ಯಂಡ್ ರನ್ ಶಂಕೆ ವ್ಯಕ್ತವಾಗಿರುವ ಈ...

ಪ. ಬಂಗಾಳ | 252 ಮದ್ರಸಾಗಳನ್ನು ಮುಚ್ಚಲು ಆದೇಶಿಸಿದ ಬಿಜೆಪಿ ಸರ್ಕಾರ; 100 ಸಂಸ್ಥೆಗಳಿಗೆ ಕಾರಣ ಕೇಳಿ ನೋಟಿಸ್

ರಾಜ್ಯದಾದ್ಯಂತ ಮದ್ರಸಾಗಳ ಸಮೀಕ್ಷೆಯನ್ನು ಪ್ರಾರಂಭಿಸಿದ ಮೂರು ತಿಂಗಳ ನಂತರ, ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಅನುಮೋದನೆಯ ಕೊರತೆ ಅಥವಾ ಇತರ ಅಕ್ರಮಗಳನ್ನು ಉಲ್ಲೇಖಿಸಿ 252 ಸಂಸ್ಥೆಗಳನ್ನು ಮುಚ್ಚಲು ಆದೇಶಿಸಿದೆ ಮತ್ತು ಇತರ...

ಟಿ. ನರಸೀಪುರ ಪ್ರತಿಭಟನೆ ವೇಳೆ ವಾಕ್ಸಮರ: ಪ್ರತಾಪ್ ಸಿಂಹ ಹಾಗೂ ಎಲ್. ನಾಗೇಂದ್ರ ನಡುವೆ ಬಹಿರಂಗ ನೂಕಾಟ-ತಳ್ಳಾಟ!

ಟಿ. ನರಸೀಪುರದಲ್ಲಿ ಗಣೇಶೋತ್ಸವ ಮೆರವಣಿಗೆಗೆ ಸಂಬಂಧಿಸಿದ ವಿವಾದದ ಹಿನ್ನೆಲೆಯಲ್ಲಿ ಬಿಜೆಪಿ ಹಮ್ಮಿಕೊಂಡಿದ್ದ ಪ್ರತಿಭಟನೆ ವೇಳೆ ಮೈಸೂರು ಬಿಜೆಪಿಯಲ್ಲಿನ ಆಂತರಿಕ ಭಿನ್ನಮತ ಬಹಿರಂಗಗೊಂಡಿದೆ. ಪೊಲೀಸ್ ಇನ್ಸ್‌ಪೆಕ್ಟರ್ ಧನಂಜಯ್ ವಿರುದ್ಧ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ಮಾಜಿ...

ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನ ಮುಂದೂಡಿದ NLSIU ವಿದ್ಯಾರ್ಥಿ ಸಂಘ; ಯಾವುದೇ ಒತ್ತಡಕ್ಕೆ ಮಣಿದಿಲ್ಲವೆಂದು ಸ್ಪಷ್ಟನೆ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯ (NLSIU) ಲಾ ಅಂಡ್ ಸೊಸೈಟಿ ಕಮಿಟಿಯು (LawSoc) ಉಮರ್ ಖಾಲಿದ್ ಅವರ ಜೈಲುವಾಸದ ಕುರಿತು ಲಲಿತ್ ವಾಚಾನಿ ನಿರ್ಮಿಸಿರುವ 'ಪ್ರಿಸನರ್ ನಂ. 626710...