Homeಮುಖಪುಟಮೋದಿಯ ಈ ಮೂರು ವೈಫಲ್ಯಗಳ ಕುರಿತು ಹಾರ್ವಡ್ ಬ್ಯುಸಿನೆಸ್ ಸ್ಕೂಲ್ ಅಧ್ಯಯನ ಮಾಡುತ್ತದೆ: ರಾಹುಲ್

ಮೋದಿಯ ಈ ಮೂರು ವೈಫಲ್ಯಗಳ ಕುರಿತು ಹಾರ್ವಡ್ ಬ್ಯುಸಿನೆಸ್ ಸ್ಕೂಲ್ ಅಧ್ಯಯನ ಮಾಡುತ್ತದೆ: ರಾಹುಲ್

ಭವಿಷ್ಯದ ದಿನಗಳಲ್ಲಿ ಪ್ರಖ್ಯಾತ ಹಾರ್ವಡ್ ಬ್ಯುಸಿನೆಸ್ ಸ್ಕೂಲ್ ಮೋದಿಯವರ ಮೂರು ಪ್ರಮುಖ ವೈಫಲ್ಯಗಳಾದ ಕೋವಿಡ್ 19, ಜಿಎಸ್‌ಟಿ ಮತ್ತು ನೋಟು ಅಮಾನ್ಯೀಕರಣದ ಬಗ್ಗೆ ಅಧ್ಯಯನ ನಡೆಸುತ್ತದೆ ಎಂದು ರಾಹುಲ್ ವ್ಯಂಗ್ಯವಾಡಿದ್ದಾರೆ.

- Advertisement -
- Advertisement -

ಕೋವಿಡ್ 19, ಜಿಎಸ್‌ಟಿ ಮತ್ತು ನೋಟು ಅಮಾನ್ಯೀಕರಣ.. ಮೋದಿಯ ಈ ಮೂರು ವೈಫಲ್ಯಗಳ ಕುರಿತು ಭವಿಷ್ಯದಲ್ಲಿ ಹಾರ್ವಡ್ ಬ್ಯುಸಿನೆಸ್ ಸ್ಕೂಲ್ ಅಧ್ಯಯನ ಮಾಡುತ್ತದೆ ಎಂದು ಕಾಂಗ್ರೆಸ್ ಮುಖಂಡ ರಾಹುಲ್ ಗಾಂಧಿ ಕೇಂದ್ರ ಸರ್ಕಾರವನ್ನು ಟೀಕಿಸಿದ್ದಾರೆ.

ರಷ್ಯಾವನ್ನು ಹಿಂದಿಕ್ಕಿ ಭಾರತವು ಅತಿ ಹೆಚ್ಚು ಪ್ರಕರಣಗಳನ್ನು ಹೊಂದಿರುವ ಪ್ರಪಂಚದ ಮೂರನೇ ರಾಷ್ಟ್ರವಾದ (6.9 ಲಕ್ಷ) ಬಳಿಕ ಇಂದು ಮುಂಜಾನೆ ಏರುತ್ತಿರುವ ಕೊರೊನಾ ವೈರಸ್ ಪ್ರಕರಣಗಳ ಗ್ರಾಫ್ ಅನ್ನು ರಾಹುಲ್ ಗಾಂಧಿ ಟ್ವೀಟ್‌ ಮಾಡಿದ್ದಾರೆ.

ದೇಶದಲ್ಲಿ ನರೇಂದ್ರ ಮೋದಿಯವರು ಲಾಕ್‌ಡೌನ್‌ ಹೇರಿದಾಗ ಕೊರೊನಾ ಪ್ರಕರಣಗಳಲ್ಲಿ ಭಾರತವು 48ನೇ ಸ್ಥಾನದಲ್ಲಿತ್ತು. ಅಂದು ನರೇಂದ್ರ ಮೋದಿಯವರು ಮಹಾಭಾರತ ಯುದ್ಧವು 18 ದಿನದಲ್ಲಿ ವಿಜಯಿಯಾಗಿತ್ತು. ನಾವು 21 ದಿನಗಳಲ್ಲಿ ಕೊರೊನಾ ವಿರುದ್ಧ ಜಯ ಸಾಧಿಸೋಣ ಎಂದು ಕರೆ ನೀಡಿದ್ದರು. ಅಲ್ಲದೇ ಚಪ್ಪಾಳೆ ಬಡಿಯಿರಿ, ತಟ್ಟೆ ಲೋಟ ಬಡಿಯಿರಿ, ದೀಪ ಹಚ್ಚಿ ಎಂದು ಕರೆ ನೀಡಿದ್ದರು. ಇಂದು ಲಾಕ್ ಡೌನ್ ಘೋಷಿಸಿ 103ನೇ ದಿನವಾಗಿದ್ದು ಕೊರೊನಾ ಪ್ರಕರಣಗಳಲ್ಲಿ ಭಾರತ 6.9 ಲಕ್ಷ ಪ್ರಕರಣಗಳೊಂದಿಗೆ 3 ನೇ ಸ್ಥಾನಕ್ಕೆ ಬಂದು ನಿಂತಿದೆ. ಕೊರೊನಾ ನಿರ್ವಹಣೆಯಲ್ಲಿ ಮೋದಿ ಸರ್ಕಾರ ಸಂಪೂರ್ಣ ವಿಫಲವಾಗಿದೆ ಎಂದು ರಾಹುಲ್ ಗಾಂಧಿ ತಮ್ಮ ವಿಡಿಯೋ ಮೂಲಕ ಟೀಕಿಸಿದ್ದಾರೆ.

ಹಾಗಾಗಿ ಭವಿಷ್ಯದ ದಿನಗಳಲ್ಲಿ ಪ್ರಖ್ಯಾತ ಹಾರ್ವಡ್ ಬ್ಯುಸಿನೆಸ್ ಸ್ಕೂಲ್ ಮೋದಿಯವರ ಮೂರು ಪ್ರಮುಖ ವೈಫಲ್ಯಗಳಾದ ಕೋವಿಡ್ 19, ಜಿಎಸ್‌ಟಿ ಮತ್ತು ನೋಟು ಅಮಾನ್ಯೀಕರಣದ ಬಗ್ಗೆ ಅಧ್ಯಯನ ನಡೆಸುತ್ತದೆ ಎಂದು ರಾಹುಲ್ ವ್ಯಂಗ್ಯವಾಡಿದ್ದಾರೆ.

ಜೂನ್‌ನಲ್ಲಿ ಅಮೆರಿಕದ ಮಾಜಿ ರಾಜತಾಂತ್ರಿಕ ನಿಕೋಲಸ್ ಬರ್ನ್ಸ್ ಅವರೊಂದಿಗಿನ ಸಂಭಾಷಣೆಯ ಸಂದರ್ಭದಲ್ಲಿ, ಕೇಂದ್ರ ಸರ್ಕಾರವು ಏಕಪಕ್ಷೀಯವಾಗಿ ನಿರ್ಧಾರಗಳನ್ನು ತೆಗೆದುಕೊಳ್ಳುತ್ತಿದೆ ಎಂದು ರಾಹುಲ್ ಗಾಂಧಿ ಆರೋಪಿಸಿದ್ದರು. “ನಮ್ಮಲ್ಲಿ ಏಕಪಕ್ಷೀಯವಾಗಿ ನಿರ್ಧಾರಗಳನ್ನು ತೆಗೆದುಕೊಳ್ಳುವ ಸರ್ಕಾರವಿದೆ. ಇದು ಕಠಿಣ ಲಾಕ್‌ಡೌನ್ ವಿಧಿಸಲು ನಿರ್ಧರಿಸಿತು ಮತ್ತು ಇದರ ಫಲಿತಾಂಶವು ಎಲ್ಲರಿಗೂ ಕಾಣುತ್ತದೆ. ನೀವು ಸಾವಿರಾರು ವಲಸೆ ಕಾರ್ಮಿಕರನ್ನು ತಮ್ಮ ಊರಿಗೆ ಸಾವಿರಾರು ಕಿಲೋಮೀಟರ್ ನಡೆದುಕೊಂಡು ಹೋಗಿದ್ದೀರಿ. ಈ ರೀತಿಯ ನಾಯಕತ್ವವು ತುಂಬಾ ವಿಚ್ಛಿದ್ರಕಾರಕವಾಗಿದೆ” ಎಂದು ಅವರು ಟೀಕಿಸಿದ್ದರು.

ನೋಟು ಅಮಾನ್ಯೀಕರಣ ಘೋಷಿಸುವಾಗ, ಜಿಎಸ್‌ಟಿ ಜಾರಿಗೆ ತರುವಾಗ ಮತ್ತು ಲಾಕ್‌ಡೌನ್ ವಿಧಿಸುವಾಗ ಮೋದಿಯವರು ತಜ್ಞರ, ವಿರೋಧ ಪಕ್ಷಗಳ ಸಲಹೆ ಕೇಳಿಲ್ಲ. ಏಕಾಏಕಿ ಹೇರಿದ ಪರಿಣಾಮ ದೇಶದ ಕೋಟ್ಯಂತರ ಜನರು ತೊಂದರೆಗೀಡಾಗಿದ್ದಾರೆ. ಅಲ್ಲದೇ ಕೋವಿಡ್ ವಿರುದ್ಧ ಹೋರಾಡುವ ಯಾವುದೇ ಸಮರ್ಪಕ ಯೋಜನೆಯನ್ನು ನರೇಂದ್ರ ಮೋದಿಯವರು ಹೊಂದಿಲ್ಲವೆಂಬುದು ರಾಹುಲ್ ಗಾಂಧಿಯವರ ಆರೋಪವಾಗಿದೆ.

ಭಾರತವೂ ಕೊರೊನಾ ಪೀಡಿತ ಮೂರನೇ ಕೆಟ್ಟ ರಾಷ್ಟ್ರವಾಗಿದೆ. ಮಾರ್ಚ್‌ನಲ್ಲಿ ಪ್ರಧಾನಿ ನರೇಂದ್ರ ಮೋದಿಯವರು ಕೊರೊನಾ ವಿರುದ್ಧದ ಯುದ್ಧ ಕೇವಲ 21 ದಿನಗಳು ಮಾತ್ರ ಎಂದು ವಿಶ್ವಾಸದಿಂದ ಹೇಳಿದ್ದರು ಎಂದು ಯುವ ಚಿಂತಕ ಧೃವ್ ರಾಠೀ ಟ್ವೀಟ್ ಮಾಡಿದ್ದಾರೆ.


ಇದನ್ನೂ ಒದಿ: ಶ್ರೀರಾಮುಲುರವರೆ, ನಿಮ್ಮ ಅಣ್ತಮ್ಮಂದಿರು ಜೈಲು ಸೇರಿದ್ದು ನೆನಪಿರಲಿ: ಸಿದ್ದರಾಮಯ್ಯ 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...