Homeಮುಖಪುಟಮೋದಿಯ ಈ ಮೂರು ವೈಫಲ್ಯಗಳ ಕುರಿತು ಹಾರ್ವಡ್ ಬ್ಯುಸಿನೆಸ್ ಸ್ಕೂಲ್ ಅಧ್ಯಯನ ಮಾಡುತ್ತದೆ: ರಾಹುಲ್

ಮೋದಿಯ ಈ ಮೂರು ವೈಫಲ್ಯಗಳ ಕುರಿತು ಹಾರ್ವಡ್ ಬ್ಯುಸಿನೆಸ್ ಸ್ಕೂಲ್ ಅಧ್ಯಯನ ಮಾಡುತ್ತದೆ: ರಾಹುಲ್

ಭವಿಷ್ಯದ ದಿನಗಳಲ್ಲಿ ಪ್ರಖ್ಯಾತ ಹಾರ್ವಡ್ ಬ್ಯುಸಿನೆಸ್ ಸ್ಕೂಲ್ ಮೋದಿಯವರ ಮೂರು ಪ್ರಮುಖ ವೈಫಲ್ಯಗಳಾದ ಕೋವಿಡ್ 19, ಜಿಎಸ್‌ಟಿ ಮತ್ತು ನೋಟು ಅಮಾನ್ಯೀಕರಣದ ಬಗ್ಗೆ ಅಧ್ಯಯನ ನಡೆಸುತ್ತದೆ ಎಂದು ರಾಹುಲ್ ವ್ಯಂಗ್ಯವಾಡಿದ್ದಾರೆ.

- Advertisement -
- Advertisement -

ಕೋವಿಡ್ 19, ಜಿಎಸ್‌ಟಿ ಮತ್ತು ನೋಟು ಅಮಾನ್ಯೀಕರಣ.. ಮೋದಿಯ ಈ ಮೂರು ವೈಫಲ್ಯಗಳ ಕುರಿತು ಭವಿಷ್ಯದಲ್ಲಿ ಹಾರ್ವಡ್ ಬ್ಯುಸಿನೆಸ್ ಸ್ಕೂಲ್ ಅಧ್ಯಯನ ಮಾಡುತ್ತದೆ ಎಂದು ಕಾಂಗ್ರೆಸ್ ಮುಖಂಡ ರಾಹುಲ್ ಗಾಂಧಿ ಕೇಂದ್ರ ಸರ್ಕಾರವನ್ನು ಟೀಕಿಸಿದ್ದಾರೆ.

ರಷ್ಯಾವನ್ನು ಹಿಂದಿಕ್ಕಿ ಭಾರತವು ಅತಿ ಹೆಚ್ಚು ಪ್ರಕರಣಗಳನ್ನು ಹೊಂದಿರುವ ಪ್ರಪಂಚದ ಮೂರನೇ ರಾಷ್ಟ್ರವಾದ (6.9 ಲಕ್ಷ) ಬಳಿಕ ಇಂದು ಮುಂಜಾನೆ ಏರುತ್ತಿರುವ ಕೊರೊನಾ ವೈರಸ್ ಪ್ರಕರಣಗಳ ಗ್ರಾಫ್ ಅನ್ನು ರಾಹುಲ್ ಗಾಂಧಿ ಟ್ವೀಟ್‌ ಮಾಡಿದ್ದಾರೆ.

ದೇಶದಲ್ಲಿ ನರೇಂದ್ರ ಮೋದಿಯವರು ಲಾಕ್‌ಡೌನ್‌ ಹೇರಿದಾಗ ಕೊರೊನಾ ಪ್ರಕರಣಗಳಲ್ಲಿ ಭಾರತವು 48ನೇ ಸ್ಥಾನದಲ್ಲಿತ್ತು. ಅಂದು ನರೇಂದ್ರ ಮೋದಿಯವರು ಮಹಾಭಾರತ ಯುದ್ಧವು 18 ದಿನದಲ್ಲಿ ವಿಜಯಿಯಾಗಿತ್ತು. ನಾವು 21 ದಿನಗಳಲ್ಲಿ ಕೊರೊನಾ ವಿರುದ್ಧ ಜಯ ಸಾಧಿಸೋಣ ಎಂದು ಕರೆ ನೀಡಿದ್ದರು. ಅಲ್ಲದೇ ಚಪ್ಪಾಳೆ ಬಡಿಯಿರಿ, ತಟ್ಟೆ ಲೋಟ ಬಡಿಯಿರಿ, ದೀಪ ಹಚ್ಚಿ ಎಂದು ಕರೆ ನೀಡಿದ್ದರು. ಇಂದು ಲಾಕ್ ಡೌನ್ ಘೋಷಿಸಿ 103ನೇ ದಿನವಾಗಿದ್ದು ಕೊರೊನಾ ಪ್ರಕರಣಗಳಲ್ಲಿ ಭಾರತ 6.9 ಲಕ್ಷ ಪ್ರಕರಣಗಳೊಂದಿಗೆ 3 ನೇ ಸ್ಥಾನಕ್ಕೆ ಬಂದು ನಿಂತಿದೆ. ಕೊರೊನಾ ನಿರ್ವಹಣೆಯಲ್ಲಿ ಮೋದಿ ಸರ್ಕಾರ ಸಂಪೂರ್ಣ ವಿಫಲವಾಗಿದೆ ಎಂದು ರಾಹುಲ್ ಗಾಂಧಿ ತಮ್ಮ ವಿಡಿಯೋ ಮೂಲಕ ಟೀಕಿಸಿದ್ದಾರೆ.

ಹಾಗಾಗಿ ಭವಿಷ್ಯದ ದಿನಗಳಲ್ಲಿ ಪ್ರಖ್ಯಾತ ಹಾರ್ವಡ್ ಬ್ಯುಸಿನೆಸ್ ಸ್ಕೂಲ್ ಮೋದಿಯವರ ಮೂರು ಪ್ರಮುಖ ವೈಫಲ್ಯಗಳಾದ ಕೋವಿಡ್ 19, ಜಿಎಸ್‌ಟಿ ಮತ್ತು ನೋಟು ಅಮಾನ್ಯೀಕರಣದ ಬಗ್ಗೆ ಅಧ್ಯಯನ ನಡೆಸುತ್ತದೆ ಎಂದು ರಾಹುಲ್ ವ್ಯಂಗ್ಯವಾಡಿದ್ದಾರೆ.

ಜೂನ್‌ನಲ್ಲಿ ಅಮೆರಿಕದ ಮಾಜಿ ರಾಜತಾಂತ್ರಿಕ ನಿಕೋಲಸ್ ಬರ್ನ್ಸ್ ಅವರೊಂದಿಗಿನ ಸಂಭಾಷಣೆಯ ಸಂದರ್ಭದಲ್ಲಿ, ಕೇಂದ್ರ ಸರ್ಕಾರವು ಏಕಪಕ್ಷೀಯವಾಗಿ ನಿರ್ಧಾರಗಳನ್ನು ತೆಗೆದುಕೊಳ್ಳುತ್ತಿದೆ ಎಂದು ರಾಹುಲ್ ಗಾಂಧಿ ಆರೋಪಿಸಿದ್ದರು. “ನಮ್ಮಲ್ಲಿ ಏಕಪಕ್ಷೀಯವಾಗಿ ನಿರ್ಧಾರಗಳನ್ನು ತೆಗೆದುಕೊಳ್ಳುವ ಸರ್ಕಾರವಿದೆ. ಇದು ಕಠಿಣ ಲಾಕ್‌ಡೌನ್ ವಿಧಿಸಲು ನಿರ್ಧರಿಸಿತು ಮತ್ತು ಇದರ ಫಲಿತಾಂಶವು ಎಲ್ಲರಿಗೂ ಕಾಣುತ್ತದೆ. ನೀವು ಸಾವಿರಾರು ವಲಸೆ ಕಾರ್ಮಿಕರನ್ನು ತಮ್ಮ ಊರಿಗೆ ಸಾವಿರಾರು ಕಿಲೋಮೀಟರ್ ನಡೆದುಕೊಂಡು ಹೋಗಿದ್ದೀರಿ. ಈ ರೀತಿಯ ನಾಯಕತ್ವವು ತುಂಬಾ ವಿಚ್ಛಿದ್ರಕಾರಕವಾಗಿದೆ” ಎಂದು ಅವರು ಟೀಕಿಸಿದ್ದರು.

ನೋಟು ಅಮಾನ್ಯೀಕರಣ ಘೋಷಿಸುವಾಗ, ಜಿಎಸ್‌ಟಿ ಜಾರಿಗೆ ತರುವಾಗ ಮತ್ತು ಲಾಕ್‌ಡೌನ್ ವಿಧಿಸುವಾಗ ಮೋದಿಯವರು ತಜ್ಞರ, ವಿರೋಧ ಪಕ್ಷಗಳ ಸಲಹೆ ಕೇಳಿಲ್ಲ. ಏಕಾಏಕಿ ಹೇರಿದ ಪರಿಣಾಮ ದೇಶದ ಕೋಟ್ಯಂತರ ಜನರು ತೊಂದರೆಗೀಡಾಗಿದ್ದಾರೆ. ಅಲ್ಲದೇ ಕೋವಿಡ್ ವಿರುದ್ಧ ಹೋರಾಡುವ ಯಾವುದೇ ಸಮರ್ಪಕ ಯೋಜನೆಯನ್ನು ನರೇಂದ್ರ ಮೋದಿಯವರು ಹೊಂದಿಲ್ಲವೆಂಬುದು ರಾಹುಲ್ ಗಾಂಧಿಯವರ ಆರೋಪವಾಗಿದೆ.

ಭಾರತವೂ ಕೊರೊನಾ ಪೀಡಿತ ಮೂರನೇ ಕೆಟ್ಟ ರಾಷ್ಟ್ರವಾಗಿದೆ. ಮಾರ್ಚ್‌ನಲ್ಲಿ ಪ್ರಧಾನಿ ನರೇಂದ್ರ ಮೋದಿಯವರು ಕೊರೊನಾ ವಿರುದ್ಧದ ಯುದ್ಧ ಕೇವಲ 21 ದಿನಗಳು ಮಾತ್ರ ಎಂದು ವಿಶ್ವಾಸದಿಂದ ಹೇಳಿದ್ದರು ಎಂದು ಯುವ ಚಿಂತಕ ಧೃವ್ ರಾಠೀ ಟ್ವೀಟ್ ಮಾಡಿದ್ದಾರೆ.


ಇದನ್ನೂ ಒದಿ: ಶ್ರೀರಾಮುಲುರವರೆ, ನಿಮ್ಮ ಅಣ್ತಮ್ಮಂದಿರು ಜೈಲು ಸೇರಿದ್ದು ನೆನಪಿರಲಿ: ಸಿದ್ದರಾಮಯ್ಯ 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಅತ್ಯಾಚಾರ ಪ್ರಕರಣದಲ್ಲಿ ಎಸ್‌ಪಿ ನಾಯಕ ಮೊಯಿದ್ ಖಾನ್ ಖುಲಾಸೆ: ಬಂಧನದ ಎರಡು ವರ್ಷಗಳ ನಂತರ ಬುಲ್ಡೋಜರ್ ನಿಂದ ಮನೆ ಕೆಡವಿದ್ದ ಯೋಗಿ ಸರ್ಕಾರ

2024 ರಲ್ಲಿ ಅಪ್ರಾಪ್ತ ಬಾಲಕಿಯ ಮೇಲೆ ನಡೆದ ಸಾಮೂಹಿಕ ಅತ್ಯಾಚಾರ ಪ್ರಕರಣದಲ್ಲಿ ಸಮಾಜವಾದಿ ಪಕ್ಷದ ನಾಯಕ ಮೊಯಿದ್ ಖಾನ್ ಅವರನ್ನು ಉತ್ತರ ಪ್ರದೇಶದ ಅಯೋಧ್ಯೆಯ ಪೋಕ್ಸೋ ನ್ಯಾಯಾಲಯವು ಖುಲಾಸೆಗೊಳಿಸಿದೆ.  ಅಪ್ರಾಪ್ತ ಬಾಲಕಿಯ ಮೇಲೆ ನಡೆದ...

ಸಿಎಂ ಸಿದ್ದರಾಮಯ್ಯ, ಡಿಕೆಶಿ ವಿರುದ್ಧ ‘ಸ್ಕ್ಯಾಮ್ ಲಾರ್ಡ್’ ಪೋಸ್ಟ್: ಕರ್ನಾಟಕ ಬಿಜೆಪಿ ಎಕ್ಸ್ ಹ್ಯಾಂಡಲ್ ವಿರುದ್ಧ ಪ್ರಕರಣ ದಾಖಲು

ಕರ್ನಾಟಕ ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಮತ್ತು ಇತರ ಸಚಿವರನ್ನು ಗುರಿಯಾಗಿಸಿಕೊಂಡು "ಮಾನಹಾನಿಕರ" ಪೋಸ್ಟ್ ಪೋಸ್ಟ್ ಮಾಡಿದ್ದಕ್ಕಾಗಿ ಮತ್ತು ರಾಜ್ಯವನ್ನು "ಲೂಟಿ" ಮಾಡುವಲ್ಲಿ ಅವರು ಭಾಗಿಯಾಗಿದ್ದಾರೆ ಎಂದು ಆರೋಪಿಸಿ ಬಿಜೆಪಿಯ 'ಎಕ್ಸ್'...

‘ನೀವು ಮುಂದೆ ಬರಲು ಸಿದ್ಧರಿದ್ದೀರಾ, ಅಥವಾ ಟ್ವೀಟ್ ಮಾಡುತ್ತಲೇ ಇರುತ್ತೀರಾ?’; ಮೋಹನ್ ದಾಸ್ ಪೈಗೆ ರಾಮಲಿಂಗಾರೆಡ್ಡಿ ಓಪನ್ ಚಾಲೆಂಜ್..!

ಬೆಂಗಳೂರಿನಲ್ಲಿ ಬಿಎಂಟಿಸಿ (BMTC) ಬಸ್‌ಗಳ ಕೊರತೆಯನ್ನು ಎತ್ತಿ, ಖಾಸಗಿ ಕಂಪನಿಗಳಿಗೆ ನಗರ ಬಸ್ ಸೇವೆಗೆ ಅವಕಾಶ ನೀಡಬೇಕು ಎಂದು ಸಲಹೆ ನೀಡಿದ್ದ, ಮೋಹನ್ ದಾಸ್ ಪೈ ಹೇಳಿಕೆಗೆ ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ...

ಪ್ಯಾಲೆಸ್ತೀನ್ ಸಿನಿಮಾಗಳ ಪ್ರದರ್ಶನಕ್ಕೆ ಅನುಮತಿ ನಿರಾಕರಣೆ; ರಾಜ್ಯ ಸರ್ಕಾರ ಗಟ್ಟಿ ದನಿಯಲ್ಲಿ ಪ್ರತಿಭಟಿಸಬೇಕು : ನಟ ಪ್ರಕಾಶ್ ರಾಜ್

ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವದಲ್ಲಿ ಪ್ಯಾಲೆಸ್ತೀನಿಯನ್ ಸಿನಿಮಾಗಳ ಪ್ರದರ್ಶನಕ್ಕೆ ಅನುಮತಿ ನಿರಾಕರಿಸಿರುವ ಕೇಂದ್ರ ಸರ್ಕಾರದ ಕ್ರಮವನ್ನು ರಾಜ್ಯ ಸರ್ಕಾರ ಗಟ್ಟಿ ದನಿಯಲ್ಲಿ ಪ್ರತಿರೋಧಿಸಬೇಕು, ಪ್ರತಿಭಟಿಸಬೇಕು ಎಂದು ನಟ ಪ್ರಕಾಶ್ ರಾಜ್ ಒತ್ತಾಯಿಸಿದರು. ಗುರುವಾರ (ಜ.29) ಸಂಜೆ...

ಗೌರಿ ಲಂಕೇಶರ ನೆರಳು ನನ್ನ ಮೇಲೆ ಬಿದ್ದಿರುವ ಕಾರಣಕ್ಕೆ ‘ಲ್ಯಾಂಡ್‍ ಲಾರ್ಡ್‌’ನಂತಹ ಸಿನಿಮಾ ಮಾಡಲು ಕೈ ಹಾಕಿದ್ದೇನೆ: ನಟ ದುನಿಯಾ ವಿಜಯ್

ಗೌರಿ ಲಂಕೇಶ್ ಹಾಗೂ ಇತರ ಹೋರಾಟಗಾರರ ನೆರಳು ನನ್ನ ಮೇಲೆ ಬಿದ್ದಿರುವ ಕಾರಣಕ್ಕೆ ನಾನು 'ಲ್ಯಾಂಡ್‍ಲಾರ್ಡ್' ನಂತಹ ಸಿನೆಮಾ ಮಾಡುವುದಕ್ಕೆ ಕೈ ಹಾಕಿದ್ದೇನೆ ಎಂದು ನಟ ದುನಿಯಾ ವಿಜಯ್ ಹೇಳಿದರು. ಗುರುವಾರ (ಜ.29) ಬೆಂಗಳೂರಿನ...

ಜಾತಿ ತಾರತಮ್ಯ ತಡೆಗಟ್ಟುವ ಯುಜಿಸಿಯ ಹೊಸ ನಿಯಮಕ್ಕೆ ಸುಪ್ರೀಂ ಕೋರ್ಟ್ ತಡೆ

ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಜಾತಿ ಆಧಾರಿತ ತಾರತಮ್ಯವನ್ನು ತಡೆಗಟ್ಟಲು ಕೇಂದ್ರ ಸರ್ಕಾರ ಜಾರಿಗೆ ತಂದಿರುವ ವಿಶ್ವವಿದ್ಯಾಲಯ ಅನುದಾನ ಆಯೋಗದ (ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಸಮಾನತೆಯ ಪ್ರಚಾರ) ನಿಯಮಗಳು, 2026ಕ್ಕೆ ಸುಪ್ರೀಂ ಕೋರ್ಟ್ ಗುರುವಾರ...

ರಾಜಸ್ಥಾನ| ಸಾರ್ವಜನಿಕ ಕಾರ್ಯಕ್ರಮದಲ್ಲಿ ವೃದ್ಧ ಮಹಿಳೆಯನ್ನು ಕಾಲಿನಿಂದ ಒದ್ದ ವ್ಯಕ್ತಿ

ರಾಜಸ್ಥಾನದ ಬಾರ್ಮರ್ ಜಿಲ್ಲೆಯಲ್ಲಿ ನಡೆಯುತ್ತಿದ್ದ ಸಾರ್ವಜನಿಕ ಕಾರ್ಯಕ್ರಮವೊಂದರಲ್ಲಿ ವೃದ್ಧ ಮಹಿಳೆಯನ್ನು ಒದೆಯುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆದ ನಂತರ ವ್ಯಕ್ತಿಯನ್ನು ಬಂಧಿಸಲಾಗಿದೆ. ಆತನ ಕೃತ್ಯದ ವಿರುದ್ಧ ವ್ಯಾಪಕ ಆಕ್ರೋಶಕ್ಕೆ ವ್ಯಕ್ತವಾಗಿದೆ. ಜತೋನ್ ಕಾ...

ಅಜಿತ್ ಪವಾರ್ ವಿಮಾನ ದುರಂತ: ಅಪಘಾತ ಸ್ಥಳದಲ್ಲಿ ಬ್ಲಾಕ್ ಬಾಕ್ಸ್ ಪತ್ತೆ..!

ನವದೆಹಲಿ: ಮಹಾರಾಷ್ಟ್ರ ಉಪಮುಖ್ಯಮಂತ್ರಿ ಅಜಿತ್ ಪವಾರ್ ಮತ್ತು ಇತರ ನಾಲ್ವರು ಸಾವನ್ನಪ್ಪಿದ ಬಾರಾಮತಿ ವಿಮಾನ ನಿಲ್ದಾಣದಲ್ಲಿ ಬುಧವಾರ ಸಂಭವಿಸಿದ ವಿಮಾನ ಅಪಘಾತದ ತನಿಖೆಯ ಕುರಿತು ನಾಗರಿಕ ವಿಮಾನಯಾನ ಸಚಿವಾಲಯ (MoCA) ಗುರುವಾರ ಹೇಳಿಕೆ...

ಮೀಸಲಾತಿಗಾಗಿ ಪ್ರಬಲ ಜಾತಿಯ ವ್ಯಕ್ತಿ ಬೌದ್ಧ ಧರ್ಮಕ್ಕೆ ಮತಾಂತರ : ಹೊಸ ಬಗೆಯ ವಂಚನೆ ಎಂದ ಸುಪ್ರೀಂ ಕೋರ್ಟ್

ಇಬ್ಬರು ಪ್ರಬಲ ಜಾತಿ ಅಭ್ಯರ್ಥಿಗಳು ಬೌದ್ಧ ಧರ್ಮಕ್ಕೆ ಮತಾಂತರಗೊಂಡಿರುವ ಬಗ್ಗೆ ಮಂಗಳವಾರ (ಜ.27) ಸುಪ್ರೀಂ ಕೋರ್ಟ್ ಗಂಭೀರ ಅನುಮಾನ ವ್ಯಕ್ತಪಡಿಸಿದ್ದು, ಈ ನಡೆಯು ಸ್ನಾತಕೋತ್ತರ ವೈದ್ಯಕೀಯ ಕೋರ್ಸ್‌ಗಳಿಗೆ ಅಲ್ಪಸಂಖ್ಯಾತ ಕೋಟಾದ ಅಡಿಯಲ್ಲಿ ಪ್ರವೇಶ...

ವಿಮಾನ ಪತನ : ಸಂಸದ ಸೇರಿ 15 ಜನರು ಸಾವು

ಬುಧವಾರ (ಜ.28) ಸರ್ಕಾರಿ ಸ್ವಾಮ್ಯದ ವಿಮಾನಯಾನ ಸಂಸ್ಥೆ ಸಟೇನಾ ನಿರ್ವಹಿಸುತ್ತಿದ್ದ ಸಣ್ಣ ಪ್ರಯಾಣಿಕ ವಿಮಾನವು ಈಶಾನ್ಯ ಕೊಲಂಬಿಯಾದ ಪರ್ವತ ಪ್ರದೇಶದಲ್ಲಿ ಪತನಗೊಂಡು ಎಲ್ಲಾ 15 ಪ್ರಯಾಣಿಕರು ಜನರು ಸಾವಿಗೀಡಾಗಿದ್ದಾರೆ. ದುರಂತದ ಕಾರಣ ಇನ್ನೂ ಸ್ಪಷ್ಟವಾಗಿಲ್ಲ....