Homeಕರೋನಾ ತಲ್ಲಣದೆಹಲಿಯ 17 ಜನರಿರುವ ಕುಟುಂಬ ಒಂದೇ ಮನೆಯಲ್ಲಿದ್ದು ಕೊರೊನಾವನ್ನು ಗೆದ್ದಿತು...!

ದೆಹಲಿಯ 17 ಜನರಿರುವ ಕುಟುಂಬ ಒಂದೇ ಮನೆಯಲ್ಲಿದ್ದು ಕೊರೊನಾವನ್ನು ಗೆದ್ದಿತು…!

ನಾವು ತುಂಬಾ ಜಾಗರೂಕರಾಗಿರುವುದರಿಂದ, ಕೊರೊನಾ ವೈರಸ್ ನಮಗೆ ಬರುವುದಿಲ್ಲ ಎಂದು ನಾವು ವಿಶ್ವಾಸದಿಂದ ಇದ್ದೆವು, ಆದರೆ ಒಂದೊಂದಾಗಿ, ಎಲ್ಲರಿಗೂ ಜ್ವರ ಪ್ರಾರಂಭವಾಯಿತು ಎಂದು ಮೀನಾ ದೇವಿ ಹೇಳುತ್ತಾರೆ.

- Advertisement -
- Advertisement -

ದೆಹಲಿಯ 17 ಜನರಿರುವ ಅವಿಭಜಿತ ಕುಟುಂಬವೊಂದು ಒಂದೇ ಮನೆಯಲ್ಲಿದ್ದು ಕೊರೊನಾ ಸೋಂಕಿನ ವಿರುದ್ದ ಗೆದ್ದಿದ್ದಾರೆ.

ಕುಟುಂಬದ 3  ತಿಂಗಳ ಮಗುವಿನಿಂದ ಹಿಡಿದು 90  ವರ್ಷದ ವರೆಗಿನ ಒಟ್ಟು 17 ಮಂದಿ ಸದಸ್ಯರಲ್ಲಿ ಹೆಚ್ಚನವರು ಕೊರೊನಾ ಪಾಸಿಟಿವ್ ಆಗಿದ್ದರೂ, ಯಾವುದೇ ಜೀವ ಹಾನಿಯಾಗದೇ ಕೊರೊನಾ ವಿರುದ್ದ ಗೆದ್ದಿದ್ದಾರೆ.

ಕುಟುಂಬದ ಜನರಲ್ಲಿ ಒಬ್ಬರು ಕೊರೊನಾ ಪಾಸಿಟಿವ್ ಆದಾಗ ಯಾರನ್ನಾದರೂ ಕಳೆದು ಕೊಳ್ಳುತ್ತೇವೆ ಎಂದು ನಮಗೆ ಖಚಿತವಾಗಿತ್ತು ಎಂದು ಕುಟುಂಬದ ಸದಸ್ಯರಾದ ಮುಕುಲ್ ಗಾರ್ಗ್ ಹೇಳುತ್ತಾರೆ.

ಮಾರ್ಚ್‌ನಲ್ಲಿ ಲಾಕ್‌ಡೌನ್ ಆದಾಗ ಕುಟುಂಬದ ಸದಸ್ಯರು ಎಚ್ಚರಿಕೆಯನ್ನು ಪಾಲಿಸಿದ್ದರೂ ಕುಟುಂಬದ 11 ಸದಸ್ಯರಲ್ಲಿ ಕೊರೊನಾ ಸೋಂಕು ಇರುವುದು ದೃಡಪಟ್ಟಿತು. ಅವರಲ್ಲಿ ಮುಕುಲ್ ಗಾರ್ಗ್‌ ಅವರ 90 ವರ್ಷದ ಹಾಸಿಗೆ ಹಿಡಿದ ಅಜ್ಜ; 87 ವರ್ಷದ ಅಜ್ಜಿ; ಮಧುಮೇಹ ಮತ್ತು ಅಧಿಕ ರಕ್ತದೊತ್ತಡ ಹೊಂದಿರುವ 62 ವರ್ಷದ ತಂದೆ ಹಾಗೂ 60 ವರ್ಷದ ಚಿಕ್ಕಪ್ಪ ಸೇರಿದ್ದರು.

“ನಾವು ತುಂಬಾ ಜಾಗರೂಕರಾಗಿರುವುದರಿಂದ, ಕೊರೊನಾ ವೈರಸ್ ನಮಗೆ ಬರುವುದಿಲ್ಲ ಎಂದು ವಿಶ್ವಾಸದಿಂದ ಇದ್ದೆವು, ಆದರೆ ಒಂದೊಂದಾಗಿ, ಎಲ್ಲರಿಗೂ ಜ್ವರ ಪ್ರಾರಂಭವಾಯಿತು.” ಎಂದು ಮುಕುಲ್ ಅವರ ತಾಯಿ ಮೀನಾ ದೇವಿ ಹೇಳುತ್ತಾರೆ.

ಜ್ವರವೂ ಹೊರಟು ಹೋಗುತ್ತದೆ ಎಂದು ಭಾವಸಿ ಅವರು ಪರೀಕ್ಷೆಗೆ ಹಿಂಜರಿದಿದ್ದರು, ಅಲ್ಲದೆ ಇದೆ ವೇಳೆ ಕೊರೊನಾ ಪಾಸಿಟಿವ್ ಎಂದ ತಿಳಿದು ಬಂದರೆ ಸಮಾಜದಿಂದ ಬಹಿಷ್ಕಾರಕ್ಕೆ ಒಳಗಾಗುತ್ತಾರೆ ಎಂದು ಅವರೆಲ್ಲರೂ ಹೆದರಿದ್ದರಿಂದ ಮನೆಯ ಒಳಗಡೆಯೆ ಸಾಂಸ್ಥಿಕ ಸಂಪರ್ಕತಡೆಯನ್ನು ಮಾಡಿದ್ದರು. ಕುಟುಂಬದ ಪ್ರತಿಯೊಬ್ಬರೂ ತಮ್ಮ ಕೋಣೆಗಳಲ್ಲಿ ತಮ್ಮ ಮಹಡಿಗಳಲ್ಲೇ ಪ್ರತ್ಯೇಕವಾಗಿರಲು ಪ್ರಾರಂಭಿಸಿದ್ದರು.

ಆದರೆ ಮುಕುಲ್ ಚಿಕ್ಕಮ್ಮ ಅನಿತಾ ಅವರಿಗೆ ಐದು ದಿನಗಳ ಜ್ವರದ ನಂತರ ಉಸಿರಾಡಲು ತೊಂದರೆಯಾಗಿದ್ದರಿಂದ ಅವರು ಕೊರೊನಾ ವೈರಸ್ ಪರೀಕ್ಷೆ ನಡೆಸಿದ್ದರು. ಫಲಿತಾಂಶವು ಕೊರೊನಾ ಪಾಸಿಟಿವ್ ಆಗಿತ್ತು. ನಂತರ ಅನಿತಾ ಸ್ಥಿತಿ ಹದಗೆಟ್ಟಾಗ ಅವರನ್ನು ಖಾಸಗಿ ಆಸ್ಪತ್ರೆಗೆ ದಾಖಲಿಸಲಾಯಿತು.

ಆದರೆ ವಿಶೇಷವೇನೆಂದರೆ ಕುಟುಂಬದ 90 ವರ್ಷದ ಶ್ಯಾಮ್ಲಾಲ್ ಅವರು ಕೊರೊನಾ ಪಾಸಿಟಿವ್ ಆಗಿದ್ದರೂ ಅವರಲ್ಲಿ ಯಾವುದೇ ರೋಗಲಕ್ಷಣಗಳು ಇರಲಿಲ್ಲ. ಅವರ 87 ವರ್ಷದ ಬೀನಾಗೆ ಜ್ವರ, ಕೆಮ್ಮು ಮತ್ತು ತಲೆನೋವು ಒಂದು ತಿಂಗಳು ಮುಂದುವರೆಯಿತು, ಆದರೆ ಅವರನ್ನು ಆಸ್ಪತ್ರೆಗೆ ದಾಖಸಿಸುವ ಹಾಗೆ ಪರಿಸ್ಥಿತಿ ಹದಗೆಡಲಿಲ್ಲ. 6 ವರ್ಷದೊಳಗಿನ ನಾಲ್ಕು ಮಕ್ಕಳಿಗೆ ಕೊರೊನಾ ಸೋಂಕಿರಲಿಲ್ಲ.

ಮುಕುಲ್ ಅವರ ತಾಯಿ ಮೀನಾಗೆ ಕೇವಲ ಜ್ವರ, ಕೆಮ್ಮು, ತಲೆನೋವು ಮತ್ತು ದೇಹದ ಭಾಗಗಳ ನೋವುಗಳು ಒಳಗೊಂಡತ್ತು, ಅದು ಸುಮಾರು ಎರಡು ವಾರಗಳ ಕಾಲ ಇತ್ತು ಎಂದು ತಿಳಿದುಬಂದಿದೆ.

ಮುಕುಲ್ ಅವರ ಚಿಕ್ಕಮ್ಮ ಅನಿತಾ ಅವರು ಆಸ್ಪತ್ರೆಯಲ್ಲಿ 10 ದಿನಗಳಿದ್ದು ಮನೆಗೆ ಮರಳಿದರು. ಅಲ್ಲಿ ಅವರು ಆಮ್ಲಜನಕ ಚಿಕಿತ್ಸೆಯನ್ನು ಪಡೆದಿದ್ದರು.

ಕುಟುಂಬವು ಮೊದಲಿಗೆ ಹೇಗೆ ಸೋಂಕಿಗೆ ಒಳಗಾಯಿತು ಎಂಬುದು ಇನ್ನೂ ನಿಗೂಡವಾಗಿದೆ. ದಿನಸಿ ವಸ್ತುಗಳನ್ನು ಖರೀದಿಸುವಾಗ ಮುಕುಲ್ ಅವರ ಚಿಕ್ಕಪ್ಪ ವೈರಸ್‌ಗೆ ತುತ್ತಾಗಿರಬಹುದು ಎಂದು ಅವರು ಊಹಿಸಿದ್ದಾರೆ. ಅವರು ಅನಾರೋಗ್ಯಕ್ಕೆ ಒಳಗಾದ ಸಮಯದಲ್ಲಿ, ಆ ಪ್ರದೇಶದಲ್ಲಿ ಬೇರೆ ಯಾವುದೇ ಪ್ರಕರಣಗಳು ಇರಲಿಲ್ಲ ಎನ್ನಲಾಗಿದೆ.

ಜೂನ್ ಆರಂಭದಲ್ಲಿ, ಮನೆಯ ಎಲ್ಲರೂ ಕೊರೊನಾ ನೆಗೆಟಿವ್ ಪರೀಕ್ಷಿಸಿದ ನಂತರ ಹಿಂದಿನಂತೆ ಮತ್ತೇ ಒಟ್ಟಿಗೆ ಕೂತು ಊಟ ಮಾಡುವಂತಾಯಿತು ಎಂದು ಕುಟುಂಬದ ಸದಸ್ಯರು ಸಂತೋಷ ವ್ಯಕ್ತಪಡಿಸಿದ್ದಾರೆ.


ಓದಿ: ದೆಹಲಿಯಲ್ಲಿ 1 ಲಕ್ಷ ದಾಟಿದ ಕೊರೊನಾ ಪ್ರಕರಣಗಳು: ಭಯಪಡಬೇಡಿ ಎಂದ ಕೇಜ್ರಿವಾಲ್


 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...