Homeಕರೋನಾ ತಲ್ಲಣದೆಹಲಿಯ 17 ಜನರಿರುವ ಕುಟುಂಬ ಒಂದೇ ಮನೆಯಲ್ಲಿದ್ದು ಕೊರೊನಾವನ್ನು ಗೆದ್ದಿತು...!

ದೆಹಲಿಯ 17 ಜನರಿರುವ ಕುಟುಂಬ ಒಂದೇ ಮನೆಯಲ್ಲಿದ್ದು ಕೊರೊನಾವನ್ನು ಗೆದ್ದಿತು…!

ನಾವು ತುಂಬಾ ಜಾಗರೂಕರಾಗಿರುವುದರಿಂದ, ಕೊರೊನಾ ವೈರಸ್ ನಮಗೆ ಬರುವುದಿಲ್ಲ ಎಂದು ನಾವು ವಿಶ್ವಾಸದಿಂದ ಇದ್ದೆವು, ಆದರೆ ಒಂದೊಂದಾಗಿ, ಎಲ್ಲರಿಗೂ ಜ್ವರ ಪ್ರಾರಂಭವಾಯಿತು ಎಂದು ಮೀನಾ ದೇವಿ ಹೇಳುತ್ತಾರೆ.

- Advertisement -
- Advertisement -

ದೆಹಲಿಯ 17 ಜನರಿರುವ ಅವಿಭಜಿತ ಕುಟುಂಬವೊಂದು ಒಂದೇ ಮನೆಯಲ್ಲಿದ್ದು ಕೊರೊನಾ ಸೋಂಕಿನ ವಿರುದ್ದ ಗೆದ್ದಿದ್ದಾರೆ.

ಕುಟುಂಬದ 3  ತಿಂಗಳ ಮಗುವಿನಿಂದ ಹಿಡಿದು 90  ವರ್ಷದ ವರೆಗಿನ ಒಟ್ಟು 17 ಮಂದಿ ಸದಸ್ಯರಲ್ಲಿ ಹೆಚ್ಚನವರು ಕೊರೊನಾ ಪಾಸಿಟಿವ್ ಆಗಿದ್ದರೂ, ಯಾವುದೇ ಜೀವ ಹಾನಿಯಾಗದೇ ಕೊರೊನಾ ವಿರುದ್ದ ಗೆದ್ದಿದ್ದಾರೆ.

ಕುಟುಂಬದ ಜನರಲ್ಲಿ ಒಬ್ಬರು ಕೊರೊನಾ ಪಾಸಿಟಿವ್ ಆದಾಗ ಯಾರನ್ನಾದರೂ ಕಳೆದು ಕೊಳ್ಳುತ್ತೇವೆ ಎಂದು ನಮಗೆ ಖಚಿತವಾಗಿತ್ತು ಎಂದು ಕುಟುಂಬದ ಸದಸ್ಯರಾದ ಮುಕುಲ್ ಗಾರ್ಗ್ ಹೇಳುತ್ತಾರೆ.

ಮಾರ್ಚ್‌ನಲ್ಲಿ ಲಾಕ್‌ಡೌನ್ ಆದಾಗ ಕುಟುಂಬದ ಸದಸ್ಯರು ಎಚ್ಚರಿಕೆಯನ್ನು ಪಾಲಿಸಿದ್ದರೂ ಕುಟುಂಬದ 11 ಸದಸ್ಯರಲ್ಲಿ ಕೊರೊನಾ ಸೋಂಕು ಇರುವುದು ದೃಡಪಟ್ಟಿತು. ಅವರಲ್ಲಿ ಮುಕುಲ್ ಗಾರ್ಗ್‌ ಅವರ 90 ವರ್ಷದ ಹಾಸಿಗೆ ಹಿಡಿದ ಅಜ್ಜ; 87 ವರ್ಷದ ಅಜ್ಜಿ; ಮಧುಮೇಹ ಮತ್ತು ಅಧಿಕ ರಕ್ತದೊತ್ತಡ ಹೊಂದಿರುವ 62 ವರ್ಷದ ತಂದೆ ಹಾಗೂ 60 ವರ್ಷದ ಚಿಕ್ಕಪ್ಪ ಸೇರಿದ್ದರು.

“ನಾವು ತುಂಬಾ ಜಾಗರೂಕರಾಗಿರುವುದರಿಂದ, ಕೊರೊನಾ ವೈರಸ್ ನಮಗೆ ಬರುವುದಿಲ್ಲ ಎಂದು ವಿಶ್ವಾಸದಿಂದ ಇದ್ದೆವು, ಆದರೆ ಒಂದೊಂದಾಗಿ, ಎಲ್ಲರಿಗೂ ಜ್ವರ ಪ್ರಾರಂಭವಾಯಿತು.” ಎಂದು ಮುಕುಲ್ ಅವರ ತಾಯಿ ಮೀನಾ ದೇವಿ ಹೇಳುತ್ತಾರೆ.

ಜ್ವರವೂ ಹೊರಟು ಹೋಗುತ್ತದೆ ಎಂದು ಭಾವಸಿ ಅವರು ಪರೀಕ್ಷೆಗೆ ಹಿಂಜರಿದಿದ್ದರು, ಅಲ್ಲದೆ ಇದೆ ವೇಳೆ ಕೊರೊನಾ ಪಾಸಿಟಿವ್ ಎಂದ ತಿಳಿದು ಬಂದರೆ ಸಮಾಜದಿಂದ ಬಹಿಷ್ಕಾರಕ್ಕೆ ಒಳಗಾಗುತ್ತಾರೆ ಎಂದು ಅವರೆಲ್ಲರೂ ಹೆದರಿದ್ದರಿಂದ ಮನೆಯ ಒಳಗಡೆಯೆ ಸಾಂಸ್ಥಿಕ ಸಂಪರ್ಕತಡೆಯನ್ನು ಮಾಡಿದ್ದರು. ಕುಟುಂಬದ ಪ್ರತಿಯೊಬ್ಬರೂ ತಮ್ಮ ಕೋಣೆಗಳಲ್ಲಿ ತಮ್ಮ ಮಹಡಿಗಳಲ್ಲೇ ಪ್ರತ್ಯೇಕವಾಗಿರಲು ಪ್ರಾರಂಭಿಸಿದ್ದರು.

ಆದರೆ ಮುಕುಲ್ ಚಿಕ್ಕಮ್ಮ ಅನಿತಾ ಅವರಿಗೆ ಐದು ದಿನಗಳ ಜ್ವರದ ನಂತರ ಉಸಿರಾಡಲು ತೊಂದರೆಯಾಗಿದ್ದರಿಂದ ಅವರು ಕೊರೊನಾ ವೈರಸ್ ಪರೀಕ್ಷೆ ನಡೆಸಿದ್ದರು. ಫಲಿತಾಂಶವು ಕೊರೊನಾ ಪಾಸಿಟಿವ್ ಆಗಿತ್ತು. ನಂತರ ಅನಿತಾ ಸ್ಥಿತಿ ಹದಗೆಟ್ಟಾಗ ಅವರನ್ನು ಖಾಸಗಿ ಆಸ್ಪತ್ರೆಗೆ ದಾಖಲಿಸಲಾಯಿತು.

ಆದರೆ ವಿಶೇಷವೇನೆಂದರೆ ಕುಟುಂಬದ 90 ವರ್ಷದ ಶ್ಯಾಮ್ಲಾಲ್ ಅವರು ಕೊರೊನಾ ಪಾಸಿಟಿವ್ ಆಗಿದ್ದರೂ ಅವರಲ್ಲಿ ಯಾವುದೇ ರೋಗಲಕ್ಷಣಗಳು ಇರಲಿಲ್ಲ. ಅವರ 87 ವರ್ಷದ ಬೀನಾಗೆ ಜ್ವರ, ಕೆಮ್ಮು ಮತ್ತು ತಲೆನೋವು ಒಂದು ತಿಂಗಳು ಮುಂದುವರೆಯಿತು, ಆದರೆ ಅವರನ್ನು ಆಸ್ಪತ್ರೆಗೆ ದಾಖಸಿಸುವ ಹಾಗೆ ಪರಿಸ್ಥಿತಿ ಹದಗೆಡಲಿಲ್ಲ. 6 ವರ್ಷದೊಳಗಿನ ನಾಲ್ಕು ಮಕ್ಕಳಿಗೆ ಕೊರೊನಾ ಸೋಂಕಿರಲಿಲ್ಲ.

ಮುಕುಲ್ ಅವರ ತಾಯಿ ಮೀನಾಗೆ ಕೇವಲ ಜ್ವರ, ಕೆಮ್ಮು, ತಲೆನೋವು ಮತ್ತು ದೇಹದ ಭಾಗಗಳ ನೋವುಗಳು ಒಳಗೊಂಡತ್ತು, ಅದು ಸುಮಾರು ಎರಡು ವಾರಗಳ ಕಾಲ ಇತ್ತು ಎಂದು ತಿಳಿದುಬಂದಿದೆ.

ಮುಕುಲ್ ಅವರ ಚಿಕ್ಕಮ್ಮ ಅನಿತಾ ಅವರು ಆಸ್ಪತ್ರೆಯಲ್ಲಿ 10 ದಿನಗಳಿದ್ದು ಮನೆಗೆ ಮರಳಿದರು. ಅಲ್ಲಿ ಅವರು ಆಮ್ಲಜನಕ ಚಿಕಿತ್ಸೆಯನ್ನು ಪಡೆದಿದ್ದರು.

ಕುಟುಂಬವು ಮೊದಲಿಗೆ ಹೇಗೆ ಸೋಂಕಿಗೆ ಒಳಗಾಯಿತು ಎಂಬುದು ಇನ್ನೂ ನಿಗೂಡವಾಗಿದೆ. ದಿನಸಿ ವಸ್ತುಗಳನ್ನು ಖರೀದಿಸುವಾಗ ಮುಕುಲ್ ಅವರ ಚಿಕ್ಕಪ್ಪ ವೈರಸ್‌ಗೆ ತುತ್ತಾಗಿರಬಹುದು ಎಂದು ಅವರು ಊಹಿಸಿದ್ದಾರೆ. ಅವರು ಅನಾರೋಗ್ಯಕ್ಕೆ ಒಳಗಾದ ಸಮಯದಲ್ಲಿ, ಆ ಪ್ರದೇಶದಲ್ಲಿ ಬೇರೆ ಯಾವುದೇ ಪ್ರಕರಣಗಳು ಇರಲಿಲ್ಲ ಎನ್ನಲಾಗಿದೆ.

ಜೂನ್ ಆರಂಭದಲ್ಲಿ, ಮನೆಯ ಎಲ್ಲರೂ ಕೊರೊನಾ ನೆಗೆಟಿವ್ ಪರೀಕ್ಷಿಸಿದ ನಂತರ ಹಿಂದಿನಂತೆ ಮತ್ತೇ ಒಟ್ಟಿಗೆ ಕೂತು ಊಟ ಮಾಡುವಂತಾಯಿತು ಎಂದು ಕುಟುಂಬದ ಸದಸ್ಯರು ಸಂತೋಷ ವ್ಯಕ್ತಪಡಿಸಿದ್ದಾರೆ.


ಓದಿ: ದೆಹಲಿಯಲ್ಲಿ 1 ಲಕ್ಷ ದಾಟಿದ ಕೊರೊನಾ ಪ್ರಕರಣಗಳು: ಭಯಪಡಬೇಡಿ ಎಂದ ಕೇಜ್ರಿವಾಲ್


 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪ್ರತಿಭಟನೆ ಭೀತಿ : ಸಿಜೆಐ ಸೂರ್ಯಕಾಂತ್ ಭಾಗವಹಿಸಬೇಕಿದ್ದ ಘಟಿಕೋತ್ಸವ ದಿಢೀರ್ ಮುಂದೂಡಿದ TISS

ಮುಂಬೈನ ಟಾಟಾ ಇನ್‌ಸ್ಟಿಟ್ಯೂಟ್ ಆಫ್ ಸೋಷಿಯಲ್ ಸೈನ್ಸಸ್ (ಟಿಐಎಸ್‌ಎಸ್‌) ಸಂಸ್ಥೆಯು ಆಗಸ್ಟ್ 2ರಂದು ನಡೆಸಲು ನಿಗದಿಪಡಿಸಿದ್ದ ತನ್ನ 86ನೇ ವಾರ್ಷಿಕ ಘಟಿಕೋತ್ಸವವನ್ನು ದಿಢೀರ್ ಮುಂದೂಡಿದೆ. ಕ್ಯಾಂಪಸ್ ಭದ್ರತೆಯ ಬಗೆಗಿನ ಕಳವಳಗಳು ಮತ್ತು ವಿದ್ಯಾರ್ಥಿಗಳ...

ಪ್ರಧಾನಿಗಳೇ ನಿಮ್ಮ ರೀಲ್‌ಗಳನ್ನು ಅಂಧಭಕ್ತರು ಮೆಚ್ಚಬಹುದು, ಆದರೆ ಇತಿಹಾಸ ನಿಮ್ಮನ್ನು ಕ್ಷಮಿಸುವುದಿಲ್ಲ: ಬಿ.ಕೆ. ಹರಿಪ್ರಸಾದ್

ಪ್ರಧಾನಿ ನರೇಂದ್ರ ಮೋದಿ ಬಿಡುಗಡೆ ಮಾಡಿರುವ ಇತ್ತೀಚಿನ ವಿಡಿಯೋ (ರೀಲ್) ಕುರಿತು ಕಾಂಗ್ರೆಸ್ ಹಿರಿಯ ನಾಯಕ ಮತ್ತು ಕೆಪಿಸಿಸಿ ಅಧ್ಯಕ್ಷರಾದ ಬಿ.ಕೆ. ಹರಿಪ್ರಸಾದ್ ತೀವ್ರ ವಾಗ್ದಾಳಿ ನಡೆಸಿದ್ದಾರೆ. ತಾನು ಮಾಡಿದರೆ ರಾಜತಂತ್ರ, ಬೇರೆಯವರು...

ಪ್ರಧಾನಿ ಮೋದಿ ವಿರುದ್ಧ ನಿಂದನೆ: ನನಗೆ ಕೇವಲ 15 ವರ್ಷ ‘ಅನ್ಯರ ಪ್ರಭಾವಕ್ಕೆ ಒಳಗಾಗಿದ್ದೆ’ ಎಂದು ಕ್ಷಮೆ ಕೇಳಿದ ವಿದ್ಯಾರ್ಥಿನಿ ವಿಡಿಯೋ ವೈರಲ್

ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ವಿರುದ್ಧ ಆಕ್ಷೇಪಾರ್ಹ ಹೇಳಿಕೆ ನೀಡಿ ಭಾರಿ ಆಕ್ರೋಶಕ್ಕೆ ಗುರಿಯಾಗಿದ್ದ ಸಿಜೆಪಿ (CJP) ಪ್ರತಿಭಟನಾಕಾರ ಯುವತಿಯೊಬ್ಬಳು ಸೋಶಿಯಲ್ ಮೀಡಿಯಾದಲ್ಲಿ ಕ್ಷಮೆಯಾಚಿಸಿದ್ದಾಳೆ ಎನ್ನಲಾದ ವೀಡಿಯೊವೊಂದು ಹರಿದಾಡುತ್ತಿದೆ. ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್...

ಸ್ಪೇನ್‌ಗೆ ನುಗ್ಗಿದ ಸಾವಿರಾರು ಮೊರಾಕನ್ನರು : ಬೃಹತ್ ವಲಸೆಯ ಹಿಂದೆ ಇಸ್ರೇಲ್ ಕುತಂತ್ರ?

ಮೊರಾಕೊದಿಂದ ಸ್ಪೇನ್‌ನ ಸಿಯುಟಾ ನಗರಕ್ಕೆ ಸಾವಿರಾರು ವಲಸಿಗರು ನುಗ್ಗಿದ ಬಿಕ್ಕಟ್ಟಿನ ಹಿಂದೆ ಇಸ್ರೇಲ್ ಕೈವಾಡವಿದೆ ಎಂಬ ಆರೋಪಗಳು ಕೇಳಿ ಬಂದಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ಇಸ್ರೇಲ್‌ನ ಕುತಂತ್ರ ಬುದ್ದಿಯ ಬಗ್ಗೆ ಭಾರೀ ಚರ್ಚೆಗಳು ನಡೆಯುತ್ತಿವೆ. ಇದೇ...

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...