Homeಕರೋನಾ ತಲ್ಲಣದೆಹಲಿಯ 17 ಜನರಿರುವ ಕುಟುಂಬ ಒಂದೇ ಮನೆಯಲ್ಲಿದ್ದು ಕೊರೊನಾವನ್ನು ಗೆದ್ದಿತು...!

ದೆಹಲಿಯ 17 ಜನರಿರುವ ಕುಟುಂಬ ಒಂದೇ ಮನೆಯಲ್ಲಿದ್ದು ಕೊರೊನಾವನ್ನು ಗೆದ್ದಿತು…!

ನಾವು ತುಂಬಾ ಜಾಗರೂಕರಾಗಿರುವುದರಿಂದ, ಕೊರೊನಾ ವೈರಸ್ ನಮಗೆ ಬರುವುದಿಲ್ಲ ಎಂದು ನಾವು ವಿಶ್ವಾಸದಿಂದ ಇದ್ದೆವು, ಆದರೆ ಒಂದೊಂದಾಗಿ, ಎಲ್ಲರಿಗೂ ಜ್ವರ ಪ್ರಾರಂಭವಾಯಿತು ಎಂದು ಮೀನಾ ದೇವಿ ಹೇಳುತ್ತಾರೆ.

- Advertisement -
- Advertisement -

ದೆಹಲಿಯ 17 ಜನರಿರುವ ಅವಿಭಜಿತ ಕುಟುಂಬವೊಂದು ಒಂದೇ ಮನೆಯಲ್ಲಿದ್ದು ಕೊರೊನಾ ಸೋಂಕಿನ ವಿರುದ್ದ ಗೆದ್ದಿದ್ದಾರೆ.

ಕುಟುಂಬದ 3  ತಿಂಗಳ ಮಗುವಿನಿಂದ ಹಿಡಿದು 90  ವರ್ಷದ ವರೆಗಿನ ಒಟ್ಟು 17 ಮಂದಿ ಸದಸ್ಯರಲ್ಲಿ ಹೆಚ್ಚನವರು ಕೊರೊನಾ ಪಾಸಿಟಿವ್ ಆಗಿದ್ದರೂ, ಯಾವುದೇ ಜೀವ ಹಾನಿಯಾಗದೇ ಕೊರೊನಾ ವಿರುದ್ದ ಗೆದ್ದಿದ್ದಾರೆ.

ಕುಟುಂಬದ ಜನರಲ್ಲಿ ಒಬ್ಬರು ಕೊರೊನಾ ಪಾಸಿಟಿವ್ ಆದಾಗ ಯಾರನ್ನಾದರೂ ಕಳೆದು ಕೊಳ್ಳುತ್ತೇವೆ ಎಂದು ನಮಗೆ ಖಚಿತವಾಗಿತ್ತು ಎಂದು ಕುಟುಂಬದ ಸದಸ್ಯರಾದ ಮುಕುಲ್ ಗಾರ್ಗ್ ಹೇಳುತ್ತಾರೆ.

ಮಾರ್ಚ್‌ನಲ್ಲಿ ಲಾಕ್‌ಡೌನ್ ಆದಾಗ ಕುಟುಂಬದ ಸದಸ್ಯರು ಎಚ್ಚರಿಕೆಯನ್ನು ಪಾಲಿಸಿದ್ದರೂ ಕುಟುಂಬದ 11 ಸದಸ್ಯರಲ್ಲಿ ಕೊರೊನಾ ಸೋಂಕು ಇರುವುದು ದೃಡಪಟ್ಟಿತು. ಅವರಲ್ಲಿ ಮುಕುಲ್ ಗಾರ್ಗ್‌ ಅವರ 90 ವರ್ಷದ ಹಾಸಿಗೆ ಹಿಡಿದ ಅಜ್ಜ; 87 ವರ್ಷದ ಅಜ್ಜಿ; ಮಧುಮೇಹ ಮತ್ತು ಅಧಿಕ ರಕ್ತದೊತ್ತಡ ಹೊಂದಿರುವ 62 ವರ್ಷದ ತಂದೆ ಹಾಗೂ 60 ವರ್ಷದ ಚಿಕ್ಕಪ್ಪ ಸೇರಿದ್ದರು.

“ನಾವು ತುಂಬಾ ಜಾಗರೂಕರಾಗಿರುವುದರಿಂದ, ಕೊರೊನಾ ವೈರಸ್ ನಮಗೆ ಬರುವುದಿಲ್ಲ ಎಂದು ವಿಶ್ವಾಸದಿಂದ ಇದ್ದೆವು, ಆದರೆ ಒಂದೊಂದಾಗಿ, ಎಲ್ಲರಿಗೂ ಜ್ವರ ಪ್ರಾರಂಭವಾಯಿತು.” ಎಂದು ಮುಕುಲ್ ಅವರ ತಾಯಿ ಮೀನಾ ದೇವಿ ಹೇಳುತ್ತಾರೆ.

ಜ್ವರವೂ ಹೊರಟು ಹೋಗುತ್ತದೆ ಎಂದು ಭಾವಸಿ ಅವರು ಪರೀಕ್ಷೆಗೆ ಹಿಂಜರಿದಿದ್ದರು, ಅಲ್ಲದೆ ಇದೆ ವೇಳೆ ಕೊರೊನಾ ಪಾಸಿಟಿವ್ ಎಂದ ತಿಳಿದು ಬಂದರೆ ಸಮಾಜದಿಂದ ಬಹಿಷ್ಕಾರಕ್ಕೆ ಒಳಗಾಗುತ್ತಾರೆ ಎಂದು ಅವರೆಲ್ಲರೂ ಹೆದರಿದ್ದರಿಂದ ಮನೆಯ ಒಳಗಡೆಯೆ ಸಾಂಸ್ಥಿಕ ಸಂಪರ್ಕತಡೆಯನ್ನು ಮಾಡಿದ್ದರು. ಕುಟುಂಬದ ಪ್ರತಿಯೊಬ್ಬರೂ ತಮ್ಮ ಕೋಣೆಗಳಲ್ಲಿ ತಮ್ಮ ಮಹಡಿಗಳಲ್ಲೇ ಪ್ರತ್ಯೇಕವಾಗಿರಲು ಪ್ರಾರಂಭಿಸಿದ್ದರು.

ಆದರೆ ಮುಕುಲ್ ಚಿಕ್ಕಮ್ಮ ಅನಿತಾ ಅವರಿಗೆ ಐದು ದಿನಗಳ ಜ್ವರದ ನಂತರ ಉಸಿರಾಡಲು ತೊಂದರೆಯಾಗಿದ್ದರಿಂದ ಅವರು ಕೊರೊನಾ ವೈರಸ್ ಪರೀಕ್ಷೆ ನಡೆಸಿದ್ದರು. ಫಲಿತಾಂಶವು ಕೊರೊನಾ ಪಾಸಿಟಿವ್ ಆಗಿತ್ತು. ನಂತರ ಅನಿತಾ ಸ್ಥಿತಿ ಹದಗೆಟ್ಟಾಗ ಅವರನ್ನು ಖಾಸಗಿ ಆಸ್ಪತ್ರೆಗೆ ದಾಖಲಿಸಲಾಯಿತು.

ಆದರೆ ವಿಶೇಷವೇನೆಂದರೆ ಕುಟುಂಬದ 90 ವರ್ಷದ ಶ್ಯಾಮ್ಲಾಲ್ ಅವರು ಕೊರೊನಾ ಪಾಸಿಟಿವ್ ಆಗಿದ್ದರೂ ಅವರಲ್ಲಿ ಯಾವುದೇ ರೋಗಲಕ್ಷಣಗಳು ಇರಲಿಲ್ಲ. ಅವರ 87 ವರ್ಷದ ಬೀನಾಗೆ ಜ್ವರ, ಕೆಮ್ಮು ಮತ್ತು ತಲೆನೋವು ಒಂದು ತಿಂಗಳು ಮುಂದುವರೆಯಿತು, ಆದರೆ ಅವರನ್ನು ಆಸ್ಪತ್ರೆಗೆ ದಾಖಸಿಸುವ ಹಾಗೆ ಪರಿಸ್ಥಿತಿ ಹದಗೆಡಲಿಲ್ಲ. 6 ವರ್ಷದೊಳಗಿನ ನಾಲ್ಕು ಮಕ್ಕಳಿಗೆ ಕೊರೊನಾ ಸೋಂಕಿರಲಿಲ್ಲ.

ಮುಕುಲ್ ಅವರ ತಾಯಿ ಮೀನಾಗೆ ಕೇವಲ ಜ್ವರ, ಕೆಮ್ಮು, ತಲೆನೋವು ಮತ್ತು ದೇಹದ ಭಾಗಗಳ ನೋವುಗಳು ಒಳಗೊಂಡತ್ತು, ಅದು ಸುಮಾರು ಎರಡು ವಾರಗಳ ಕಾಲ ಇತ್ತು ಎಂದು ತಿಳಿದುಬಂದಿದೆ.

ಮುಕುಲ್ ಅವರ ಚಿಕ್ಕಮ್ಮ ಅನಿತಾ ಅವರು ಆಸ್ಪತ್ರೆಯಲ್ಲಿ 10 ದಿನಗಳಿದ್ದು ಮನೆಗೆ ಮರಳಿದರು. ಅಲ್ಲಿ ಅವರು ಆಮ್ಲಜನಕ ಚಿಕಿತ್ಸೆಯನ್ನು ಪಡೆದಿದ್ದರು.

ಕುಟುಂಬವು ಮೊದಲಿಗೆ ಹೇಗೆ ಸೋಂಕಿಗೆ ಒಳಗಾಯಿತು ಎಂಬುದು ಇನ್ನೂ ನಿಗೂಡವಾಗಿದೆ. ದಿನಸಿ ವಸ್ತುಗಳನ್ನು ಖರೀದಿಸುವಾಗ ಮುಕುಲ್ ಅವರ ಚಿಕ್ಕಪ್ಪ ವೈರಸ್‌ಗೆ ತುತ್ತಾಗಿರಬಹುದು ಎಂದು ಅವರು ಊಹಿಸಿದ್ದಾರೆ. ಅವರು ಅನಾರೋಗ್ಯಕ್ಕೆ ಒಳಗಾದ ಸಮಯದಲ್ಲಿ, ಆ ಪ್ರದೇಶದಲ್ಲಿ ಬೇರೆ ಯಾವುದೇ ಪ್ರಕರಣಗಳು ಇರಲಿಲ್ಲ ಎನ್ನಲಾಗಿದೆ.

ಜೂನ್ ಆರಂಭದಲ್ಲಿ, ಮನೆಯ ಎಲ್ಲರೂ ಕೊರೊನಾ ನೆಗೆಟಿವ್ ಪರೀಕ್ಷಿಸಿದ ನಂತರ ಹಿಂದಿನಂತೆ ಮತ್ತೇ ಒಟ್ಟಿಗೆ ಕೂತು ಊಟ ಮಾಡುವಂತಾಯಿತು ಎಂದು ಕುಟುಂಬದ ಸದಸ್ಯರು ಸಂತೋಷ ವ್ಯಕ್ತಪಡಿಸಿದ್ದಾರೆ.


ಓದಿ: ದೆಹಲಿಯಲ್ಲಿ 1 ಲಕ್ಷ ದಾಟಿದ ಕೊರೊನಾ ಪ್ರಕರಣಗಳು: ಭಯಪಡಬೇಡಿ ಎಂದ ಕೇಜ್ರಿವಾಲ್


 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

14 ವರ್ಷದೊಳಗಿನ ಮಕ್ಕಳ ಧಾರ್ಮಿಕ ಶಿಕ್ಷಣ ನಿಯಂತ್ರಣಕ್ಕೆ ಅರ್ಜಿ: ಕೇಂದ್ರ ಶಿಕ್ಷಣ ಕಾರ್ಯದರ್ಶಿಗೆ ಸುಪ್ರೀಂ ಕೋರ್ಟ್ ನೋಟಿಸ್

14 ವರ್ಷಕ್ಕಿಂತ ಕಡಿಮೆ ವಯಸ್ಸಿನ ಮಕ್ಕಳಿಗೆ ಧಾರ್ಮಿಕ ಶಿಕ್ಷಣ ನೀಡುತ್ತಿರುವ ಸಂಸ್ಥೆಗಳ ನೋಂದಣಿ, ಮೇಲ್ವಿಚಾರಣೆ ಮತ್ತು ನಿಯಂತ್ರಣಕ್ಕೆ ಸಂಬಂಧಿಸಿದಂತೆ ಸಲ್ಲಿಸಲಾದ ಅರ್ಜಿಯನ್ನು ಪರಿಗಣಿಸುವಲ್ಲಿ ವಿಳಂಬವಾಗಿದೆ ಎಂಬ ಆರೋಪದ ಹಿನ್ನೆಲೆಯಲ್ಲಿ ಕೇಂದ್ರ ಶಿಕ್ಷಣ ಕಾರ್ಯದರ್ಶಿ...

ಸರ್ಕಾರದ 100 ದಿನ: ಪ್ರಚಾರದ ಸ್ವರೂಪವನ್ನೇ ಬದಲಿಸಿದ ಸರ್ಕಾರಿ ಜಾಹೀರಾತು

ಸಾಂಪ್ರದಾಯಿಕ ಪತ್ರಿಕಾ ಜಾಹೀರಾತುಗಳು, ಬ್ಯಾನರ್‌ಗಳು ಹಾಗೂ ಸರ್ಕಾರಿ ಕಾರ್ಯಕ್ರಮಗಳ ನಡುವೆ ಪ್ರಸಾರವಾಗುತ್ತಿದ್ದ ಜಾಹೀರಾತುಗಳ ಕಾಲವೀಗ ಬದಲಾಗಿದೆ. ಪ್ರಜೆಗಳ ಮನಸ್ಸನ್ನು ತಲುಪಲು ಅಧಿಕಾರದಲ್ಲಿರುವವರು ಆಯ್ದುಕೊಳ್ಳುವ ಮಾರ್ಗಗಳು ದಿನದಿಂದ ದಿನಕ್ಕೆ ರೂಪಾಂತರಗೊಳ್ಳುತ್ತಿವೆ. ಇದಕ್ಕೆ ಜ್ವಲಂತ ನಿದರ್ಶನ...

‘ಉಮರ್ ಖಾಲಿದ್ ಒಬ್ಬ ದೇಶಭಕ್ತ..’; ಸಾಕ್ಷ್ಯಚಿತ್ರ ಪ್ರದರ್ಶನ ವಿರೋಧಿಸಿದ ಎಬಿವಿಪಿ ವಿರುದ್ಧ ಹರಿಪ್ರಸಾದ್ ವಾಗ್ದಾಳಿ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯುನಿವರ್ಸಿಟಿಯಲ್ಲಿ (ಎನ್‌ಎಲ್‌ಎಸ್‌ಐಯು) ಹೋರಾಟಗಾರ ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನವನ್ನು ವಿರೋಧಿಸಿದ್ದಕ್ಕಾಗಿ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಬಿಕೆ ಹರಿಪ್ರಸಾದ್ ಅವರು ಮಂಗಳವಾರ...

ಜಂತರ್ ಮಂತರ್ ಹಲ್ಲೆ ಪ್ರಕರಣ: ಎಸ್‌ಸಿ/ಎಸ್‌ಟಿ, ಪೋಕ್ಸೊ ಕಾಯ್ದೆಯಡಿ ಬಂಧಿಸಲಾಗಿದ್ದ ಆರೋಪಿ ಸ್ವತಂತ್ರ ಭಾರದ್ವಾಜ್‌ಗೆ ಮಧ್ಯಂತರ ಜಾಮೀನು

ನವದೆಹಲಿ: ಜಂತರ್ ಮಂತರ್‌ನಲ್ಲಿ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ನಡೆಸಿದ ಆರೋಪ ಎದುರಿಸುತ್ತಿರುವ ಸ್ವತಂತ್ರ ಭಾರದ್ವಾಜ್‌ಗೆ ದೆಹಲಿಯ ಪಟಿಯಾಲ ಹೌಸ್ ನ್ಯಾಯಾಲಯ ಮೂರು ವಾರಗಳ ಮಧ್ಯಂತರ ಜಾಮೀನು ಮಂಜೂರು ಮಾಡಿದೆ....

ವಿಡಿಯೋದಲ್ಲಿ ‘ಅಸ್ಸಲಾಮು ಅಲೈಕುಮ್’ – ‘ಇನ್ಶಾ ಅಲ್ಲಾ’ ಎಂದಿದ್ದಕ್ಕೆ ಐಪಿಎಸ್ ಅಧಿಕಾರಿ ವರ್ಗಾವಣೆ

'ಅಸ್ಸಲಾಮು ಅಲೈಕುಮ್' ಮತ್ತು 'ಇನ್ಶಾ ಅಲ್ಲಾ' ಎಂದಿದ್ದಕ್ಕೆ ಬಲಪಂಥೀಯ ಸಂಘಟನೆಯೊಂದು ಪಶ್ಚಿಮ ಬಂಗಾಳದ ಗೃಹ ಕಾರ್ಯದರ್ಶಿಗೆ ದೂರು ನೀಡಿದ ಬೆನ್ನಲ್ಲೇ, ಭಾರತೀಯ ಪೊಲೀಸ್ ಸೇವೆ (ಐಪಿಎಸ್) ಅಧಿಕಾರಿ ಬುಷ್ರಾ ಬಾನೋ ಅವರನ್ನು ವರ್ಗಾವಣೆ...

ಪಾನ್ ಮಸಾಲಾ ಜಾಹೀರಾತು ವಿವಾದ: ಶಾರುಖ್, ಅಜಯ್ , ಶ್ರಾಫ್‌ ಅರ್ಜಿ ವಜಾಗೊಳಿಸಿದ ದೆಹಲಿ ಹೈಕೋರ್ಟ್‌

ವಿಮಲ್ ಇಲಾಯಚಿ ಹೆಸರಿನಲ್ಲಿ ನಿಷೇಧಿತ ಪಾನ್ ಮಸಾಲಾ ಉತ್ಪನ್ನದ ಪರೋಕ್ಷ ಪ್ರಚಾರ ನಡೆಸಿದ ಆರೋಪಕ್ಕೆ ಸಂಬಂಧಿಸಿದಂತೆ ಬಾಲಿವುಡ್ ನಟರಾದ ಶಾರುಖ್ ಖಾನ್, ಅಜಯ್ ದೇವಗನ್ ಹಾಗೂ ಟೈಗರ್ ಶ್ರಾಫ್ ಅವರಿಗೆ ಮಹಾರಾಷ್ಟ್ರ ಆಹಾರ...

“ಏಕರೂಪತೆಯು ಸಮಾನತೆಯಲ್ಲ”: 21 ಎನ್‌ಡಿಎ ಆಡಳಿತದ ರಾಜ್ಯಗಳಲ್ಲಿ ಯುಸಿಸಿ ಜಾರಿ ಕುರಿತ ಅಮಿತ್ ಶಾ ಘೋಷಣೆಗೆ ವಿಪಕ್ಷಗಳ ಕಿಡಿ

2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ನೇತೃತ್ವದ ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆಯನ್ನು (ಯುಸಿಸಿ) ಜಾರಿಗೊಳಿಸಲಾಗುವುದು ಎಂದು ಅಮಿತ್ ಶಾ ಘೋಷಿಸಿದ ಬೆನ್ನಲ್ಲೇ, ವಿಪಕ್ಷಗಳು ಬಿಜೆಪಿ ತನ್ನ...

ಉತ್ತರ ಪ್ರದೇಶ| ಫಿರೋಜಾಬಾದ್ ಖಾಕಿ ದೌರ್ಜನ್ಯ; ಪೊಲೀಸರ ಭೂಟು ಕಾಲಿನ ಒದೆತಕ್ಕೆ ಗರ್ಭಿಣಿ ಸಾವು

ಉತ್ತರ ಪ್ರದೇಶದ ಫಿರೋಜಾಬಾದ್‌ನ ಶಿಕೋಹಾಬಾದ್ ಪ್ರದೇಶದಲ್ಲಿ ಕಳ್ಳತನ ಪ್ರಕರಣದ ಶಂಕಿತ ಆರೋಪಿಯೊಬ್ಬನನ್ನು ಬಂಧಿಸಲು ಬಂದಿದ್ದ ಪೊಲೀಸರು ಆತನ ಗರ್ಭಿಣಿ ಹೆಂಡತಿಗೆ ಒದ್ದಿದ್ದರಿಂದ ಆಕೆ ಮೃತಪಟ್ಟಿದ್ದು, ಈ ಘಟನೆಗೆ ಸಂಬಂಧಿಸಿದಂತೆ ಇಬ್ಬರು ಸಬ್‌ಇನ್ಸ್‌ಪೆಕ್ಟರ್‌ಗಳು ಸೇರಿದಂತೆ...

ಕೋಲ್ಕತ್ತಾ | 48 ದಿನಗಳಿಂದ ಮುಸ್ಲಿಂ ಕಾಲೋನಿಗೆ ನೀರು ಬಂದ್ : ಬಿಜೆಪಿ ಸರ್ಕಾರದಿಂದ ದ್ವೇಷ ಸಾಧನೆ ಆರೋಪ

ಉತ್ತರ ಕೋಲ್ಕತ್ತಾದ ಕಾಶಿಪುರದ ಜ್ಯೋತಿನಗರ ಕಾಲೋನಿ ನಿವಾಸಿಗಳು ಕಳೆದ 48 ದಿನಗಳಿಂದ ಕುಡಿಯುವ ನೀರಿಗಾಗಿ ಹಾಹಾಕಾರಪಡುತ್ತಿದ್ದಾರೆ. ಇಲ್ಲಿನ ನೂರಾರು ಕುಟುಂಬಗಳಿಗೆ ನೀರಿನ ಮೂಲವಾಗಿರುವ ಐದು ಸಾರ್ವಜನಿಕ ನಲ್ಲಿಗಳು ಸಂಪೂರ್ಣವಾಗಿ ಒಣಗಿ ಹೋಗಿವೆ. ಇದರಿಂದಾಗಿ...

ಗುರುಗ್ರಾಮ| ಮಹಿಳಾ ಬೈಕರ್‌ಗೆ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಕಾರು ಚಾಲಕನ ಬಂಧನ

ಗುರುಗ್ರಾಮದಲ್ಲಿ ಮಹಿಳಾ ಸ್ಪೋರ್ಟ್ಸ್ ಬೈಕ್ ಸವಾರೆಗೆ ಕಾರಿನಿಂದ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ, ಚಾಲಕ ಕಲ್ಯಾಣ್ ಬೈನ್ಸ್ಲಾನನ್ನು ರಾಜಸ್ಥಾನದ ರಾಜ್‌ಗಢದಲ್ಲಿ ಮಂಗಳವಾರ ಬಂಧಿಸಲಾಗಿದೆ ಎಂದು ಗುರುಗ್ರಾಮ ಕಮಿಷನರ್ ಸಿಬಾಶ್ ಕಬೀರಾಜ್ ತಿಳಿಸಿದ್ದಾರೆ. ಈ...