Homeಮುಖಪುಟಶಂಕಿತ ಭಯೋತ್ಪಾದಕ ದೇವೀಂದರ್‌ ಸಿಂಗ್ ವಿರುದ್ದ ಚಾರ್ಜ್‌ಶೀಟ್ ಸಲ್ಲಿಸಿದ ಎನ್‌‌ಐಎ

ಶಂಕಿತ ಭಯೋತ್ಪಾದಕ ದೇವೀಂದರ್‌ ಸಿಂಗ್ ವಿರುದ್ದ ಚಾರ್ಜ್‌ಶೀಟ್ ಸಲ್ಲಿಸಿದ ಎನ್‌‌ಐಎ

ಭಯೋತ್ಪಾದಕರನ್ನು ಜಮ್ಮುವಿಗೆ ಕರೆದೊಯ್ಯುತ್ತಿದ್ದಾಗ ದಕ್ಷಿಣ ಕಾಶ್ಮೀರದ ಕುಲ್‌ಗಾಮ್‌ನ ವಾನ್ಪೋ ಎಂಬ ಚೆಕ್ ಪಾಯಿಂಟ್‌‌ನಲ್ಲಿ ದೇವೀಂದರ್‌‌ನನ್ನು ಬಂಧಿಸಲಾಗಿತ್ತು.

- Advertisement -
- Advertisement -

ದೇಶದೊಳಗೆ ಉಗ್ರಗಾಮಿಗಳು ಪ್ರವೇಶಿಸಲು ಸಹಕಾರ ನೀಡಿದ ಆರೋಪದ ಮೇಲೆ ಬಂಧನಕ್ಕೊಳಗಾಗಿ ಜಾಮೀನಿನ ಮೇಲೆ ಬಿಡುಗಡೆಗೊಂಡಿದ್ದ ಜಮ್ಮು ಕಾಶ್ಮೀರದ ಉಪ ಪೊಲೀಸ್ ವರಿಷ್ಠಾಧಿಕಾರಿ ದೇವಿಂದರ್ ಸಿಂಗ್ ಅವರ ವಿರುದ್ಧ ರಾಷ್ಟ್ರೀಯ ತನಿಖಾ ಸಂಸ್ಥೆ (ಎನ್ಐಎ) ಇಂದು ಚಾರ್ಜ್‌ಶೀಟ್ ಸಲ್ಲಿಸಿದೆ.

ನಿಯಮದಂತೆ ಯಾವುದೇ ಪ್ರಕರಣ ನಡೆದು 90 ದಿನಗಳ ಒಳಗಾಗಿ ಆರೋಪಿಯ ವಿರುದ್ಧ ಪೊಲೀಸರು ಅಥವಾ ತನಿಖಾ ಸಂಸ್ಥೆ ಚಾರ್ಜ್‌ಶೀಟ್ ಸಲ್ಲಿಸಬೇಕು. ಆದರೆ, 46 ಜನ ಭಾರತೀಯ ಸೈನಿಕರು ಜೀವ ಕಳೆದುಕೊಂಡಿದ್ದ ಪುಲ್ವಾಮಾ ದಾಳಿಯ ಹಿಂದಿನ ಆರೋಪ ಹೊತ್ತಿದ್ದ ಪೊಲಿಸ್ ಅಧಿಕಾರಿ ದೇವಿಂದರ್ ಸಿಂಗ್ ವಿರುದ್ಧ ರಾಷ್ಟ್ರೀಯ ತನಿಖಾ ಸಂಸ್ಥೆ ಈವರೆಗೆ ಪುಲ್ವಾಮಾ ದಾಳಿಯಲ್ಲಿ ಸಲ್ಲಿಸಿರಲಿಲ್ಲ.

ಇದರಿಂದಾಗಿ ಕಳೆದ ತಿಂಗಳು ದೆಹಲಿ ನ್ಯಾಯಾಲಯ ಆತನಿಗೆ ಜಾಮೀನು ನೀಡಿ ಬಿಡುಗಡೆ ಮಾಡಿತ್ತು.

ಆದರೆ, ಕೊನೆಗೂ ದೇಶದ್ರೋಹಿ ಚಟುವಟಿಕೆಯಲ್ಲಿ ತೊಡಗಿದ್ದ ಆರೋಪಿ ಪೊಲೀಸ್ ಅಧಿಕಾರಿ ದೇವಿಂದರ್ ಸಿಂಗ್ ವಿರುದ್ಧ ಜಮ್ಮು ನ್ಯಾಯಾಲಯದಲ್ಲಿ ಚಾರ್ಜ್‌ಶೀಟ್ ದಾಖಲಿಸಲಾಗಿದೆ ಎಂದು ಎನ್ಐಎ ಅಧಿಕಾರಿಗಳು ಸಿಎನ್ಎನ್ ನ್ಯೂಸ್ 18 ಗೆ ಖಚಿತಪಡಿಸಿದ್ದಾರೆ.

ಚಾರ್ಜ್‌ಶೀಟ್‌ನಲ್ಲಿ ಹಿಜ್ಬುಲ್ ಭಯೋತ್ಪಾದಕರಾದ ನವೀದ್ ಮುಷ್ತಾಕ್ ಅಲಿಯಾಸ್ ಬಾಬು, ಅವರ ಸಹೋದರ ಇರ್ಫಾನ್ ಮುಷ್ತಾಕ್, ರಫಿ ಅಹ್ಮದ್ ರಾಥರ್, ಕ್ರಾಸ್ ಲೊಕ್ ಟ್ರೇಡ್ ಅಸೋಸಿಯೇಶನ್‌‌ ಇದರ ಮಾಜಿ ಅಧ್ಯಕ್ಷ ತನ್ವೀರ್ ಅಹ್ಮದ್ ಮತ್ತು ವಕೀಲ ಇರ್ಫಾನ್ ಶಫಿ ಮಿರ್ ಅವರ ಮೇಲೆಯೂ ಕಾನೂನುಬಾಹಿರ ಚಟುವಟಿಕೆ ತಡೆ ಕಾಯ್ದೆಯ (ಯುಎಪಿಎ) ವಿವಿಧ ವಿಭಾಗಗಳ ಅಡಿಯಲ್ಲಿ ಆರೋಪ ಹೊರಿಸಲಾಗಿದೆ ಎನ್ನಲಾಗುತ್ತಿದೆ.

ರಾಷ್ಟ್ರೀಯ ತನಿಖಾ ದಳ ಸಾವಿರ ಪುಟಗಳ ವಿವರವಾದ ಚಾರ್ಜ್‌ಶೀಟ್ ಸಲ್ಲಿಸಿದ್ದು, ಈ ಮಹತ್ವದ ಚಾರ್ಜ್‌ಶೀಟ್‌ನಲ್ಲಿ ಪಾಕಿಸ್ತಾನ ಹೈಕಮಿಷನ್ನ ಸಹಾಯಕ ಶಫಕಾತ್ ಪಾತ್ರವನ್ನು ಸವಿವರವಾಗಿ ಉಲ್ಲೇಖಿಸಲಾಗಿದೆ ಎಂದು ಮೂಲಗಳು ತಿಳಿಸಿವೆ.

ಜನವರಿ 11, 2020 ರಂದು, ನವೀದ್ ಮುಷ್ತಾಕ್ ಮತ್ತು ರಫಿ ಅಹ್ಮದ್ ರಾಥರ್ ಅವರನ್ನು ಜಮ್ಮುವಿಗೆ ಕರೆದೊಯ್ಯುತ್ತಿದ್ದಾಗ ದಕ್ಷಿಣ ಕಾಶ್ಮೀರದ ಕುಲ್‌ಗಾಮ್‌ನ ವಾನ್ಪೋ ಎಂಬ ಚೆಕ್ ಪಾಯಿಂಟ್‌‌ನಲ್ಲಿ ದೇವೀಂದರ್‌‌ನನ್ನು ಬಂಧಿಸಲಾಗಿತ್ತು.

ಬಂಧನಕ್ಕೊಳಗಾದ ದಿನದಿಂದ ದೇವಿಂದರ್ ಸಿಂಗ್ ಅಮಾನತು ಗೊಂಡಿದ್ದರು. ಈ ಪ್ರಕರಣದ ತನಿಖೆಯನ್ನು ರಾಷ್ಟ್ರೀಯ ತನಿಖಾ ಸಂಸ್ಥೆಗೆ ವಹಿಸಲಾಗಿತ್ತು. ಅಲ್ಲದೆ, ಆತನ ವಿರುದ್ದ, “ ಪಾಕಿಸ್ತಾನ ಹೈಕಮಿಷನ್ ಅಧಿಕಾರಿಗಳೊಂದಿಗೆ ನಿರಂತರ ಸಂಪರ್ಕದಲ್ಲಿದ್ದರು ಮತ್ತು ಕಾಶ್ಮೀರ ಕಣಿವೆಯಿಂದ ಜಮ್ಮುವಿಗೆ ಹೋಗಲು ಭಯೋತ್ಪಾದಕರಿಗೆ ಸಹಕರಿಸಿದ್ದರು” ಎಂದು ಆರೋಪಿಸಲಾಗಿತ್ತು.

ಪೊಲೀಸ್ ಅಧಿಕಾರಿ ದೇವಿಂದರ್ ಸಿಂಗ್ ಅವರಿಗೆ ಹಿಜ್ಬುಲ್ ಮುಜಾಹಿದ್ದೀನ್ ಜೊತೆ ಸಂಪರ್ಕಿಸುವಲ್ಲಿ ಮಿರ್ ಪ್ರಮುಖ ಪಾತ್ರ ವಹಿಸಿದ್ದಾನೆ ಎಂದು ಎನ್ಐಎ ನಡೆಸಿದ ತನಿಖೆಯಿಂದ ತಿಳಿದುಬಂದಿದೆ. ಅಲ್ಲದೆ, ತನ್ವೀರ್ ಅಹ್ಮದ್ ಭಾರತೀಯ ಕರೆನ್ಸಿಗಳನ್ನು ನವೀದ್ ಮುಷ್ತಾಕ್‌‌ಗೆ ರವಾನಿಸಿದ್ದಾರೆ ಎಂಬ ಆರೋಪವಿದೆ.


ಓದಿ: ಚಾರ್ಜ್‌ಶೀಟ್ ಸಲ್ಲಿಸಲು ವಿಫಲರಾದ ಪೊಲೀಸರು: ಭಯೋತ್ಪಾದನೆ ಪ್ರಕರಣದಲ್ಲಿ ದೇವಿಂದರ್‌ಗೆ ಜಾಮೀನು!


 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪ್ರಧಾನಿ ಮೋದಿ ವಿರುದ್ಧ ನಿಂದನೆ: ನನಗೆ ಕೇವಲ 15 ವರ್ಷ ‘ಅನ್ಯರ ಪ್ರಭಾವಕ್ಕೆ ಒಳಗಾಗಿದ್ದೆ’ ಎಂದು ಕ್ಷಮೆ ಕೇಳಿದ ವಿದ್ಯಾರ್ಥಿನಿ ವಿಡಿಯೋ ವೈರಲ್

ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ವಿರುದ್ಧ ಆಕ್ಷೇಪಾರ್ಹ ಹೇಳಿಕೆ ನೀಡಿ ಭಾರಿ ಆಕ್ರೋಶಕ್ಕೆ ಗುರಿಯಾಗಿದ್ದ ಸಿಜೆಪಿ (CJP) ಪ್ರತಿಭಟನಾಕಾರ ಯುವತಿಯೊಬ್ಬಳು ಸೋಶಿಯಲ್ ಮೀಡಿಯಾದಲ್ಲಿ ಕ್ಷಮೆಯಾಚಿಸಿದ್ದಾಳೆ ಎನ್ನಲಾದ ವೀಡಿಯೊವೊಂದು ಹರಿದಾಡುತ್ತಿದೆ. ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್...

ಸ್ಪೇನ್‌ಗೆ ನುಗ್ಗಿದ ಸಾವಿರಾರು ಮೊರಾಕನ್ನರು : ಬೃಹತ್ ವಲಸೆಯ ಹಿಂದೆ ಇಸ್ರೇಲ್ ಕುತಂತ್ರ?

ಮೊರಾಕೊದಿಂದ ಸ್ಪೇನ್‌ನ ಸಿಯುಟಾ ನಗರಕ್ಕೆ ಸಾವಿರಾರು ವಲಸಿಗರು ನುಗ್ಗಿದ ಬಿಕ್ಕಟ್ಟಿನ ಹಿಂದೆ ಇಸ್ರೇಲ್ ಕೈವಾಡವಿದೆ ಎಂಬ ಆರೋಪಗಳು ಕೇಳಿ ಬಂದಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ಇಸ್ರೇಲ್‌ನ ಕುತಂತ್ರ ಬುದ್ದಿಯ ಬಗ್ಗೆ ಭಾರೀ ಚರ್ಚೆಗಳು ನಡೆಯುತ್ತಿವೆ. ಇದೇ...

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....