Homeಮುಖಪುಟಸೆಪ್ಟಂಬರ್‌‌ನಲ್ಲಿ ಸ್ನಾತಕೋತ್ತರ ಹಾಗೂ ಪದವಿ ಪರೀಕ್ಷೆಗಳು: ಯುಜಿಸಿ

ಸೆಪ್ಟಂಬರ್‌‌ನಲ್ಲಿ ಸ್ನಾತಕೋತ್ತರ ಹಾಗೂ ಪದವಿ ಪರೀಕ್ಷೆಗಳು: ಯುಜಿಸಿ

ಹೊಸ ಶೈಕ್ಷಣಿಕ ಕ್ಯಾಲೆಂಡರ್ ಬಿಡುಗಡೆ ಮಾಡಿದ ಯುಜಿಸಿ.

- Advertisement -
- Advertisement -

ದೇಶದಲ್ಲಿ ಕೊರೊನಾ ಪ್ರಕರಣಗಳ ಸಂಖ್ಯೆ ಹೆಚ್ಚಾಗುತ್ತಿರುವ ಕಾರಣ ಪರೀಕ್ಷೆಗಳು ಮತ್ತು ಶೈಕ್ಷಣಿಕ ಕ್ಯಾಲೆಂಡರ್ ಕುರಿತು ತಜ್ಞರ ಸಮಿತಿಯ ವರದಿಯನ್ನು ಪರಿಗಣಿಸಿ ಪದವಿ ಮತ್ತು ಸ್ನಾತಕೋತ್ತರ ಪದವಿ ಪರೀಕ್ಷೆಗಳ ಶೈಕ್ಷಣಿಕ ಕ್ಯಾಲೆಂಡರ್‌ನ ಹೊಸ ಮಾರ್ಗಸೂಚಿಗಳನ್ನು ವಿಶ್ವವಿದ್ಯಾಲಯ ಧನಸಹಾಯ ಆಯೋಗ (UGC) ಬಿಡುಗಡೆ ಮಾಡಿದೆ.

ಈ ಹಿಂದೆ ವಿಶ್ವವಿದ್ಯಾಲಯ ಧನಸಹಾಯ ಆಯೋಗ ಏಪ್ರಿಲ್ 29 ರಂದು ಪರೀಕ್ಷೆಗಳ ಕುರಿತ ಮಾರ್ಗಸೂಚಿಗಳನ್ನು ಹೊರಡಿಸಿ, ಜುಲೈ 2020 ರಲ್ಲಿ ಪರೀಕ್ಷೆಗಳನ್ನು ನಡೆಸುವಂತೆ ವಿಶ್ವವಿದ್ಯಾನಿಲಯಗಳಿಗೆ ಆದೇಶಿಸಿತ್ತು.

ಆಯೋಗವು ಜುಲೈ 6 ರಂದು ನಡೆಸಿದ ಸಭೆಯಲ್ಲಿ, ಭಾರತದ ಕೊರೊನಾ ಪರಿಸ್ಥಿತಿಯ ದೃಷ್ಟಿಯಿಂದ ಹಲವು ಮಾರ್ಗಸೂಚಿಗಳನ್ನು ಹೊರಡಿಸಿದೆ.

ಮಾರ್ಗಸೂಚಿಗಳು :

ವಿದ್ಯಾರ್ಥಿಗಳ ಆರೋಗ್ಯ, ಸುರಕ್ಷತೆ ಮತ್ತು ನ್ಯಾಯಯುತ ಸಮಾನ ಅವಕಾಶದ ತತ್ವಗಳನ್ನು ರಕ್ಷಿಸಿ. ಅದೇ ಸಮಯದಲ್ಲಿ ಸಮಯ, ಶೈಕ್ಷಣಿಕ ವಿಶ್ವಾಸಾರ್ಹತೆ, ವೃತ್ತಿ ಅವಕಾಶಗಳು ಮತ್ತು ಭವಿಷ್ಯದ ಪ್ರಗತಿಯೂ ಬಹಳ ಮುಖ್ಯ ಎಂದು ಹೇಳಿದೆ.

1. ವಿಶ್ವವಿದ್ಯಾನಿಲಯಗಳು ಟರ್ಮಿನಲ್ ಸೆಮಿಸ್ಟರ್ ಅಥವಾ ಅಂತಿಮ ವರ್ಷದ ಪರೀಕ್ಷೆಗಳನ್ನು (2019-20) ಆಫ್‌ಲೈನ್ (ಪೆನ್ ಮತ್ತು ಪೇಪರ್) ಅಥವಾ ಆನ್‌ಲೈನ್ ಅಥವಾ ಮಿಶ್ರಿತ (ಆನ್‌ಲೈನ್ + ಆಫ್‌ಲೈನ್) ಮೋಡ್‌ನಲ್ಲಿ, ಕೊರೊನಾ ಸಾಂಕ್ರಾಮಿಕಕ್ಕೆ ಸಂಬಂಧಿಸಿದ ನಿಗದಿತ ಪ್ರೋಟೋಕಾಲ್‌ಗಳು ಮತ್ತು ಮಾರ್ಗಸೂಚಿಗಳನ್ನು ಅನುಸರಿಸಿ 2020 ಸೆಪ್ಟೆಂಬರ್ ಅಂತ್ಯದ ವೇಳೆಗೆ ಪೂರ್ಣಗೊಳಿಸಬೇಕಾಗುತ್ತದೆ.

2. ಒಂದು ವೇಳೆ ಟರ್ಮಿನಲ್ ಸೆಮಿಸ್ಟರ್ ಅಥವಾ ಅಂತಿಮ ವರ್ಷದ ವಿದ್ಯಾರ್ಥಿಗೆ ಯಾವುದೇ ಕಾರಣಕ್ಕೆ ಪರೀಕ್ಷೆಯಲ್ಲಿ ಹಾಜರಾಗಲು ಸಾಧ್ಯವಾಗದಿದ್ದರೆ ವಿಶೇಷ ಅವಕಾಶದ ಮೂಲಕ ಪರೀಕ್ಷೆಯನ್ನು ನೀಡಬಹುದು. ಯಾವುದೇ ಕೋರ್ಸ್ ಗೆ ಸಂಬಂಧಿಸಿದಂತೆ ವಿಶ್ವವಿದ್ಯಾನಿಲಯವು ಕಾರ್ಯಸಾಧ್ಯವಾದಾಗ ಹಾಗೂ ಯಾವಾಗ ಪರೀಕ್ಷೆಗಳನ್ನು ನಡೆಸಲ್ಪಡುತ್ತದೆಯೋ ಆಗ ವಿಶೇಷ ಪರೀಕ್ಷೆಗಳಲ್ಲಿ ವಿದ್ಯಾರ್ಥಿಗಳಿಗೆ ಅವಕಾಶ ಒದಗಿಸುವುದು. ಇದು ಪ್ರಸ್ತುತ ಶೈಕ್ಷಣಿಕ ವರ್ಷ 2019-20ಕ್ಕೆ ಮಾತ್ರ ಅನ್ವಯಿಸುತ್ತದೆ

3. ಟರ್ಮಿನಲ್ ಸೆಮಿಸ್ಟರ್ ಗಳ ಅಥವಾ ಅಂತಿಮ ವರ್ಷದ ವಿದ್ಯಾರ್ಥಿಗಳಿಗೆ ಸಂಬಂಧಿಸಿದಂತೆ ಬ್ಯಾಕ್‌ಲಾಗ್ ಪೇಪರ್‌ಗಳ ಟರ್ಮಿನಲ್ ಸೆಮಿಸ್ಟರ್ ಅಥವಾ ಅಂತಿಮ ವರ್ಷದ ವಿದ್ಯಾರ್ಥಿಗಳು ಬ್ಯಾಕ್‌ಲಾಗ್ ಹೊಂದಿದ್ದರೆ ಕಡ್ಡಾಯವಾಗಿ ಆಫ್‌ಲೈನ್ (ಪೆನ್ ಮತ್ತು ಪೇಪರ್) ಅಥವಾ ಆನ್‌ಲೈನ್ ನಲ್ಲಿ ಪರೀಕ್ಷೆಗಳನ್ನು ನಡೆಸಿ, ನಂತರ  ಕಾರ್ಯಸಾಧ್ಯತೆ ಮತ್ತು ಸೂಕ್ತತೆಗೆ ಅನುಗುಣವಾಗಿ (ಆನ್‌ಲೈನ್ /ಆಫ್‌ಲೈನ್)  ಮೌಲ್ಯಮಾಪನ ಮಾಡಲಾಗುತ್ತದೆ.

4. ಉಳಿದಂತೆ ಮಧ್ಯಂತರ ಸೆಮಿಸ್ಟರ್ / ವರ್ಷದ ಪರೀಕ್ಷೆಗಳಿಗೆ ಸಂಬಂಧಿಸಿದ ಮಾರ್ಗಸೂಚಿಗಳು ಬದಲಾಗಿಲ್ಲ. 2020 ರ ಏಪ್ರಿಲ್ 29 ರ ಅಧಿಸೂಚನೆಯಂತೆ ಹಾಗೇ ಉಳಿಯುತ್ತವೆ.

5. ಏಪ್ರಿಲ್ 29, 2020 ರಂದು ಹೊರಡಿಸಲಾದ  ಮಾರ್ಗಸೂಚಿಗಳಲ್ಲಿರುವಂತೆ, ಪ್ರವೇಶ ಮತ್ತು ಶೈಕ್ಷಣಿಕ ಕ್ಯಾಲೆಂಡರ್‌ಗೆ ಸಂಬಂಧಿಸಿದ ಸಂಬಂಧಿತ ವಿವರಗಳು ಅಗತ್ಯವಿದ್ದರೆ, ವಿಶ್ವವಿದ್ಯಾನಿಲಯಗಳು ಮತ್ತು ಕಾಲೇಜುಗಳಲ್ಲಿ ಉಲ್ಲೇಖಿಸಲಾದ ಸ್ಥಳಗಳಲ್ಲಿ ಪ್ರತ್ಯೇಕವಾಗಿ ನೀಡಲಾಗುತ್ತದೆ.

6.ಕೊರೊನಾ ದೃಷ್ಟಿಯಿಂದ ಪರೀಕ್ಷೆಯ ನಡವಳಿಕೆಗೆ ಸಂಬಂಧಿಸಿದಂತೆ ಮೇಲಿನ ಮಾರ್ಗಸೂಚಿಗಳ ಹೊರತಾಗಿಯೂ ಶೈಕ್ಷಣಿಕ ಚಟುವಟಿಕೆಗಳನ್ನು ಕೈಗೊಳ್ಳಲು ಎಲ್ಲಾ ರೀತಿಯಲ್ಲೂ  ಪ್ರೋಟೋಕಾಲ್ಗಳು / ಮಾರ್ಗಸೂಚಿಗಳು / ನಿರ್ದೇಶನಗಳು / ಕೇಂದ್ರ / ರಾಜ್ಯ ಸರ್ಕಾರಗಳು ನೀಡುವ ಸಲಹೆಗಳನ್ನು ಅನುಸರಿಸಬೇಕು. ಹಾಗೆಯೇ ಮುಂದಿನ ಶೈಕ್ಷಣಿಕ ವರ್ಷ ಪ್ರಾರಂಭ, ಮುಂತಾದ ವಿಷಯಗಳನ್ನು ವಿಶ್ವವಿದ್ಯಾಲಯ ಅಥವಾ ಸಂಸ್ಥೆ ಕಾಲಕಾಲಕ್ಕೆ ಖಚಿತಪಡಿಸಿಕೊಳ್ಳಬೇಕು.


ಇದನ್ನೂ ಓದಿ: ಶೈಕ್ಷಣಿಕ ವರ್ಷಾರಂಭದ ಕುರಿತು ಸಮಿತಿ ವರದಿ ಸಲ್ಲಿಕೆ: ಸೆಪ್ಟಂಬರ್‌‌ನಿಂದ ಆರಂಭ ಸಾಧ್ಯತೆ


 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬಿಡದಿ ಟೌನ್‌ಶಿಪ್: 80% ರೈತರ ಒಪ್ಪಿಗೆ ಇದೆ ಎಂಬ ವಾದ ಸಾಬೀತುಪಡಿಸಿ – ಸರ್ಕಾರಕ್ಕೆ ಸಂಯುಕ್ತ ಹೋರಾಟ ಸವಾಲು

ಬಿಡದಿ ಟೌನ್‌ಶಿಪ್ ಯೋಜನೆಗೆ ಭೂಮಿ ನೀಡಲು ಉದ್ದೇಶಿತ ಪ್ರದೇಶದ ಶೇಕಡಾ 80 ರಷ್ಟು ರೈತರು ಒಪ್ಪಿದ್ದಾರೆ ಎಂಬ ಸರ್ಕಾರದ ವಾದಕ್ಕೆ ಯಾವುದೇ ವಾಸ್ತವಿಕ ಆಧಾರವಿಲ್ಲ. ಸರ್ಕಾರಕ್ಕೆ ಧೈರ್ಯವಿದ್ದರೆ ತನ್ನ ಈ ಹೇಳಿಕೆಯನ್ನು ಜನರ...

ವಿದ್ಯಾರ್ಥಿಗಳ ಮೇಲಿನ ಪೊಲೀಸ್ ದೌರ್ಜನ್ಯ: ವಿಚಾರಣೆ ತಿರಸ್ಕರಿಸಿದ ಸುಪ್ರೀಂ; “ವಿಡಿಯೋ ನೋಡಲು ನಮಗೆ ಆಸಕ್ತಿಯೂ ಇಲ್ಲ, ಸಮಯವೂ ಇಲ್ಲ” ಎಂದ ನ್ಯಾಯಮೂರ್ತಿ ಸೂರ್ಯಕಾಂತ್

ನವದೆಹಲಿ: ಪ್ರಶ್ನೆಪತ್ರಿಕೆ ಸೋರಿಕೆ ಮತ್ತು ಪರೀಕ್ಷಾ ಅಕ್ರಮಗಳನ್ನು ಖಂಡಿಸಿ ಶಾಂತಿಯುತವಾಗಿ ಹೋರಾಡುತ್ತಿದ್ದ ಯುವ ಸಮೂಹದ ಮೇಲೆ ದೆಹಲಿ ಪೊಲೀಸರು ನಡೆಸಿದ ಭೀಕರ ದೌರ್ಜನ್ಯದ ವಿರುದ್ಧ ನ್ಯಾಯದ ನಿರೀಕ್ಷೆಯಲ್ಲಿದ್ದ ವಿದ್ಯಾರ್ಥಿಗಳಿಗೆ ದೇಶದ ಅತ್ಯುನ್ನತ ನ್ಯಾಯಾಲಯದಿಂದ...

ರಾಹುಲ್ ಗಾಂಧಿ ವಿದ್ಯಾರ್ಥಿಗಳನ್ನು ‘ರಾಜಕೀಯ ದಾಳ’ವಾಗಿ ಬಳಸುತ್ತಿದ್ದಾರೆ ಎಂದ ಧರ್ಮೇಂದ್ರ ಪ್ರಧಾನ್ ವಿರುದ್ಧ ವ್ಯಾಪಕ ಆಕ್ರೋಶ

ನವದೆಹಲಿ: ದೇಶಾದ್ಯಂತ ನೀಟ್ (NEET) ಪರೀಕ್ಷೆಯ ಅಕ್ರಮಗಳು, ಪ್ರಶ್ನೆಪತ್ರಿಕೆ ಸೋರಿಕೆ ಹಾಗೂ ಶಿಕ್ಷಣ ಇಲಾಖೆಯ ಸರಣಿ ವೈಫಲ್ಯಗಳನ್ನು ಖಂಡಿಸಿ ವಿದ್ಯಾರ್ಥಿಗಳು ಮತ್ತು ವಿರೋಧ ಪಕ್ಷಗಳು ತೀವ್ರ ಪ್ರತಿಭಟನೆ ನಡೆಸುತ್ತಿದ್ದು, ಶಿಕ್ಷಣ ಸಚಿವ ಧರ್ಮೇಂದ್ರ...

ಸಿಜೆಪಿ ಪ್ರತಿಭಟನಾಕಾರರ ಮೇಲೆ ಪೆಲೆಟ್ ಗನ್ ಬಳಕೆ, ವಿದ್ಯುತ್ ಲಾಠಿ ಪ್ರಹಾರ: ಆರೋಪ ನಿರಾಕರಿಸಿದ ಪೊಲೀಸರು

ಸೋಮವಾರ (ಜುಲೈ 20) ಕಾಕ್ರೋಚ್ ಜನತಾ ಪಕ್ಷ (ಸಿಜೆಪಿ) ಕರೆ ನೀಡಿದ್ದ ಸಂಸತ್ ಚಲೋ ಮೆರವಣಿ ಸಂದರ್ಭದಲ್ಲಿ ನಡೆದ ಪೊಲೀಸರ ದೌರ್ಜನ್ಯದಲ್ಲಿ ಗಾಯಗೊಂಡ 80 ಪ್ರತಿಭಟನಾಕಾರರಲ್ಲಿ ಕನಿಷ್ಠ ಒಬ್ಬರಿಗೆ ಪೆಲೆಟ್ ಗನ್ ಗಾಯಗಳಾಗಿವೆ...

ಪ್ರತಿಭಟನಾನಿರತ ಮಹಿಳೆಯ ಕೆನ್ನೆಗೆ ಹೊಡೆದ ದೆಹಲಿ ಪೊಲೀಸ್ ಅಧಿಕಾರಿ ಸಂದೀಪ್ ಲಂಬಾ: ವಿಡಿಯೋ ವೈರಲ್ ನಂತರ ವ್ಯಾಪಕ ಟೀಕೆ

ದೆಹಲಿ: ಶಾಂತಿಯುತವಾಗಿ ತಮ್ಮ ಹಕ್ಕುಗಳಿಗಾಗಿ ಹೋರಾಡುತ್ತಿದ್ದ ಪ್ರತಿಭಟನಾಕಾರರ ಮೇಲೆ ದೆಹಲಿ ಪೊಲೀಸರು ನಡೆಸಿದ ಕ್ರೂರ ದಮನ ಕಾರ್ಯಾಚರಣೆಯ ಭೀಕರ ಮುಖವಾಡವೊಂದು ಮತ್ತೆ ಜಗಜ್ಜಾಹೀರಾಗಿದೆ. ಸೋಮವಾರ ಸಂಸತ್ತಿನ ಮೆರವಣಿಗೆಯಲ್ಲಿ ಭಾಗವಹಿಸಿದ್ದ ಪ್ರತಿಭಟನಾಕಾರರನ್ನು ಹತ್ತಿಕ್ಕುವ ನೆಪದಲ್ಲಿ,...

‘ಪೊಲೀಸರನ್ನು ನಿಯಂತ್ರಿಸದಿದ್ದರೆ ಜರ್ಮನಿಯ ನಾಜಿಗಳಂತೆ ಆಗಬಹುದು’: ದಲಿತ ವ್ಯಕ್ತಿಯ ಮೇಲಿನ ದೌರ್ಜನ್ಯ ಪ್ರಕರಣದಲ್ಲಿ ಪಾಟ್ನಾ ಹೈಕೋರ್ಟ್ ಕಳವಳ

ದಲಿತ ವ್ಯಕ್ತಿಯೊಬ್ಬರ ಜಾತಿ ತಿಳಿದ ನಂತರ ಅವರ ಮೇಲೆ ಕ್ರೂರವಾಗಿ ಹಲ್ಲೆ ನಡೆಸಿದ ಆರೋಪ ಎದುರಿಸುತ್ತಿರುವ ಬಿಹಾರದ ಮಾಜಿ ಪೊಲೀಸ್ ಅಧಿಕಾರಿಯ ವಿರುದ್ಧ ತಕ್ಷಣವೇ ಎಫ್‌ಐಆರ್ (FIR) ದಾಖಲಿಸುವಂತೆ ಪಾಟ್ನಾ ಹೈಕೋರ್ಟ್ ನಿರ್ದೇಶಿಸಿದೆ....

“ಎಷ್ಟೊಂದು ದುರಹಂಕಾರ!”: ಜೆ.ಪಿ.ನಡ್ಡಾ ಹೇಳಿಕೆಗೆ ಕಪಿಲ್ ಸಿಬಲ್ ತೀವ್ರ ಆಕ್ಷೇಪ; ಪ್ರತಿಭಟನಾನಿರತ ಸಿಜೆಪಿ ಬೆಂಬಲಿಸಿ ವೀಡಿಯೋ ಸಂದೇಶ

ಪರೀಕ್ಷಾ ಅಕ್ರಮಗಳನ್ನು ಖಂಡಿಸಿ ಕ್ರಾಂತಿಕಾರಿ ಜಿರಳೆ ಜನತಾ ಪಕ್ಷ (ಸಿಜೆಪಿ) ನಡೆಸುತ್ತಿರುವ ವಿದ್ಯಾರ್ಥಿ ಪ್ರತಿಭಟನೆಯ ವಿಚಾರದಲ್ಲಿ ಕೇಂದ್ರ ಸರ್ಕಾರದ ನಡೆಗೆ ದೇಶಾದ್ಯಂತ ತೀವ್ರ ಆಕ್ರೋಶ ವ್ಯಕ್ತವಾಗುತ್ತಿದೆ. ಈ ನಡುವೆ ಕೇಂದ್ರ ಸಚಿವ ಜೆ.ಪಿ....

ವಿದ್ಯಾರ್ಥಿಗಳ ಮೇಲೆ ಪೊಲೀಸ್ ದೌರ್ಜನ್ಯ: ಮೋದಿ-ಅಮಿತ್ ಶಾ ರಾಜೀನಾಮೆಗೆ ರಾಹುಲ್ ಗಾಂಧಿ ಆಗ್ರಹ

ನೀಟ್‌ ಪ್ರಶ್ನೆ ಪತ್ರಿಕೆ ಸೋರಿಕೆ ಹೊಣೆ ಹೊತ್ತು ಕೇಂದ್ರ ಶಿಕ್ಷಣ ಸಚಿವ ರಾಜೀನಾಮೆ ನೀಡಬೇಕು ಎಂದು ಆಗ್ರಹಿಸಿ 'ಸಂಸತ್ ಚಲೋ' ಹಮ್ಮಿಕೊಂಡಿದ್ದ ವಿದ್ಯಾರ್ಥಿಗಳ ಮೇಲೆ ನಡೆದ ಪೊಲೀಸ್ ದೌರ್ಜನ್ಯವನ್ನು ಕಾಂಗ್ರೆಸ್ ನಾಯಕ ರಾಹುಲ್...

ಕೇಂದ್ರ ಸಚಿವ ಜೆ.ಪಿ.ನಡ್ಡಾ ಅವರನ್ನು ಭೇಟಿಯಾದ ಸಿಜೆಪಿ ನಿಯೋಗ; ಮನವಿ ಪತ್ರ ಸಲ್ಲಿಕೆ

ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್‌ ರಾಜೀನಾಮೆಗೆ ಆಗ್ರಹಿಸಿ ನವದೆಹಲಿಯಲ್ಲಿ ಪ್ರತಿಭಟನೆ ತೀವ್ರಗೊಂಡಿರುವ ಬೆನ್ನಲ್ಲೇ ಇಂದು ಕೇಂದ್ರ ಸಚಿವ ಜೆಪಿ ನಡ್ಡಾ ಅವರನ್ನು ಸಿಜೆಪಿ ಸದಸ್ಯರಾದ ಸೌರವ್ ದಾಸ್ ಮತ್ತು ಅಶುತೋಷ್ ರಂಕಾ...

‘ಸಂಸತ್ ಚಲೋ’: ‘ಸೋನಮ್ ವಾಂಗ್ಚುಕ್ ಪತ್ನಿ ಮೇಲೆ ದೆಹಲಿ ಪೊಲೀಸರಿಂದ ಹಲ್ಲೆ’: ವಿದ್ಯಾರ್ಥಿಗಳ ಮೇಲೂ ಲಾಠಿ ಚಾರ್ಜ್  

ನವದೆಹಲಿ: ರಾಷ್ಟ್ರ ರಾಜಧಾನಿಯಲ್ಲಿ ಆಯೋಜಿಸಲಾಗಿದ್ದ ‘ಸಂಸದ್ ಚಲೋ’ ಮೆರವಣಿಗೆಯ ವೇಳೆ ಶಿಕ್ಷಣ ತಜ್ಞ ಹಾಗೂ ಲಡಾಖ್ ಹೋರಾಟಗಾರ ಸೋನಮ್ ವಾಂಗ್ಚುಕ್ ಅವರ ಪತ್ನಿ ಗೀತಾಂಜಲಿ ಜೆ. ಆಂಗ್ಮೋ ಸೇರಿದಂತೆ ಹಲವಾರು ಪ್ರತಿಭಟನಾಕಾರರ ಮೇಲೆ...