Homeಕರೋನಾ ತಲ್ಲಣಕೊರೊನಾ ಪರೀಕ್ಷೆಗೆ ಅಧಿಕ ಶುಲ್ಕ ವಿಧಿಸಿದ ಆಸ್ಪತ್ರೆಗೆ ನೋಟಿಸ್

ಕೊರೊನಾ ಪರೀಕ್ಷೆಗೆ ಅಧಿಕ ಶುಲ್ಕ ವಿಧಿಸಿದ ಆಸ್ಪತ್ರೆಗೆ ನೋಟಿಸ್

ಐಸಿಎಂಆರ್‌ನ ಮಾರ್ಗಸೂಚಿಗಳು ಮತ್ತು ಸರ್ಕಾರಗಳ ಆದೇಶವನ್ನು ಉಲ್ಲಂಘಿಸಿ ಕೊರೊನಾ ಪರೀಕ್ಷೆಗೆ ಅಧಿಕವಾಗಿ ಶುಲ್ಕ ವಿಧಿಸಿದ ಆರೋಪ.

- Advertisement -
- Advertisement -

ಐಸಿಎಂಆರ್‌ನ ಮಾರ್ಗಸೂಚಿಗಳು ಮತ್ತು ಸರ್ಕಾರಗಳ ಆದೇಶವನ್ನು ಉಲ್ಲಂಘಿಸಿ ಕೊರೊನಾ ಪರೀಕ್ಷೆಗೆ ಅಧಿಕ ಶುಲ್ಕ ವಿಧಿಸಿದ ಆರೋಪದ ಮೇಲೆ ಕರ್ನಾಟಕದ ರಾಷ್ಟ್ರೀಯ ಆರೋಗ್ಯ ಮಿಷನ್, ಶೇಷಾದ್ರಿಪುರಂನ ಅಪೊಲೊ ಆಸ್ಪತ್ರೆಗಳಿಗೆ ನೋಟಿಸ್ ನೀಡಿದೆ.

ಕೋವಿಡ್ ಪರೀಕ್ಷೆಗೆ ಆಸ್ಪತ್ರೆಯು 4,500 ರೂ. ಮತ್ತು “ಮಾದರಿ ನಿರ್ವಹಣೆ” ಗಾಗಿ 1,500 ರೂ. ಒಟ್ಟು 6,000 ರೂ.ಗಳು ವಿಧಿಸಿದ್ದು, ಇದು ಭಾರತೀಯ ವೈದ್ಯಕೀಯ ಸಂಶೋಧನಾ ಮಂಡಳಿ (ಐಸಿಎಂಆರ್) ಮಾರ್ಗಸೂಚಿಗಳನ್ನು ಉಲ್ಲಂಘಿಸುತ್ತದೆ.

ಅಖಿಲ ಭಾರತ ಡ್ರಗ್ ಆಕ್ಷನ್ ನೆಟ್‌ವರ್ಕ್‌ನ ಸಹ-ಕನ್ವೀನರ್ ಮಾಲಿನಿ ಐಸೋಲಾ ಅವರು ಜೂನ್ 25 ರ ಬಿಲ್ಲನ್ನು ಸೋಮವಾರ ಮುಂಜಾನೆ ಟ್ವೀಟ್ ಮಾಡಿದ್ದರು. ಇದರಲ್ಲಿ ಆಸ್ಪತ್ರೆಯೂ ಅಧಿಕ ಶುಲ್ಕ ವಿಧಿಸಿರುವುದು ತೋರಿಸುತ್ತದೆ.

ಈ ಬಗ್ಗೆ ಮಾಧ್ಯಮಗಳು ರಶೀತಿಯ ಪ್ರತಿಯನ್ನು ರಾಜ್ಯ ಆರೋಗ್ಯ ಆಯುಕ್ತ ಪಂಕಜ್ ಕುಮಾರ್ ಪಾಂಡೆಗೆ ಕಳುಹಿಸಿದ್ದು ಅವರು ಕ್ರಮ ಕೈಗೊಳ್ಳುವುದಾಗಿ ಭರವಸೆ ನೀಡಿದ್ದಾರೆ.

ಸಂಜೆಯ ಹೊತ್ತಿಗೆ, ಕರ್ನಾಟಕದ ರಾಷ್ಟ್ರೀಯ ಆರೋಗ್ಯ ಮಿಷನ್‌ನ ನಿರ್ದೇಶಕರು ಮಾರ್ಗಸೂಚಿಗಳನ್ನು ಉಲ್ಲಂಘಿಸಿದ್ದಕ್ಕಾಗಿ ಆಸ್ಪತ್ರೆಗೆ ನೋಟಿಸ್ ಕಳುಹಿಸಿದ್ದಾರೆ ಹಾಗೂ ನೋಟಿಸ್ ತಲುಪಿದ ಎರಡು ದಿನಗಳಲ್ಲಿ ವಿವರಣೆಯನ್ನು ಕೋರಿದ್ದಾರೆ.

“ಯಾವುದೇ ಉತ್ತರವನ್ನು ನೀಡದಿದ್ದರೆ, ನಿಯಮಗಳ ಪ್ರಕಾರ ಕ್ರಮವನ್ನು ಕೈಗೊಳ್ಳಬೇಕಾಗುತ್ತದೆ” ಎಂದು ನೋಟಿಸ್ ಎಚ್ಚರಿಸಿದೆ.

ಈ ಬಗ್ಗೆ ಅಪೊಲೊ ಆಸ್ಪತ್ರೆಗಳ ಘಟಕದ ಮುಖ್ಯಸ್ಥ ಶೇಷಾದ್ರಿಪುರಂ ಉದಯ್ ದಾವ್ಡಾ ಮಾತನಾಡಿ “ನಾವು ನಮ್ಮ ಮಾದರಿಗಳನ್ನು ಕ್ಯಾನ್ಸೈಟ್ ಪ್ರಯೋಗಾಲಯಕ್ಕೆ ಹೊರಗುತ್ತಿಗೆ ನೀಡುತ್ತೇವೆ, ಅವರು ನಮಗೆ 4,500 ರೂ. ಶುಲ್ಕ ವಿಧಿಸುತ್ತಾರೆ. ಅವರು ಮಾದರಿಗಳನ್ನು ಸಾಗಿಸುವ ಹಾಗೂ ಪಿಪಿಇ ವೆಚ್ಚವನ್ನು ಸರಿದೂಗಿಸುವ ಸೌಲಭ್ಯವನ್ನು ನೀಡುತ್ತಿಲ್ಲ. ಅದನ್ನು ನಾವು ರೋಗಿಗಳಿಗೆ ನಿರ್ವಹಣಾ ಶುಲ್ಕವೆಂದು ಹಾಕುತ್ತೇವೆ” ಎಂದು ಹೇಳಿದ್ದಾರೆ.

ಈ ಶುಲ್ಕ ವಿಧಿಸದಂತೆ ಆರೋಗ್ಯ ಇಲಾಖೆ ಕೇಳಿಕೊಂಡಿದೆ ಆದ್ದರಿಂದ ಆಸ್ಪತ್ರೆಯು ಈಗ ನಿರ್ವಹಣಾ ಶುಲ್ಕವನ್ನು ಭರಿಸಲಿದೆ ಎಂದು ಅವರು ಹೇಳಿದರು.

“ಕೋವಿಡ್ ಪರೀಕ್ಷೆಗೆ ಒಳಗಾದ ಎಲ್ಲಾ ರೋಗಿಗಳ ಮಾಹಿತಿಯನ್ನು ಪಡೆದು, ರೋಗಿಗಳಿಗೆ ಮರುಪಾವತಿ ಮಾಡಲು ನಾನು ಕೇಳಿಕೊಂಡಿದ್ದೇನೆ. ರೋಗಿಯ ಕುಟುಂಬದೊಂದಿಗೆ ನಾನು ಮಾತನಾಡಿದ್ದೇನೆ. ಇನ್ನುಮುಂದೆ, ನಾವು ನಿರ್ವಹಣಾ ಶುಲ್ಕವನ್ನು ಭರಿಸುತ್ತೇವೆ” ಎಂದು ಅವರು ಹೇಳಿದರು.

“ನಾವು ಈಗಾಗಲೇ ಮರುಪಾವತಿ ಪ್ರಕ್ರಿಯೆಯನ್ನು ಪ್ರಾರಂಭಿಸಿದ್ದೇವೆ ಮತ್ತು ಸರ್ಕಾರದ ಮಾರ್ಗಸೂಚಿಗಳ ಪ್ರಕಾರ ದರಗಳನ್ನು ಪರಿಷ್ಕರಿಸಲಾಗಿದೆ.” ಎಂದು ಆಸ್ಪತ್ರೆ ಹೇಳಿದ್ದಾಗಿ ಡೆಕ್ಕನ್ ಹೆರಾಲ್ಡ್ ವರದಿ ಮಾಡಿದೆ.

ಪ್ರಸ್ತುತ, ಸರ್ಕಾರವು ಖಾಸಗಿ ಪ್ರಯೋಗಾಲಯಗಳಿಗೆ ಕಳುಹಿಸಿದ ಮಾದರಿಗಳಿಗೆ ಬೆಲೆ 2,250 ರೂ. ಆಗಿದ್ದು, ಇದು ಸ್ಕ್ರೀನಿಂಗ್ ಪರೀಕ್ಷೆಯ ವೆಚ್ಚ ಮತ್ತು ದೃಡೀಕರಣ ಪರೀಕ್ಷೆಯನ್ನು ಒಳಗೊಂಡಿದೆ.


ಓದಿ: ದೆಹಲಿಯ 17 ಜನರಿರುವ ಕುಟುಂಬ ಒಂದೇ ಮನೆಯಲ್ಲಿದ್ದು ಕೊರೊನಾವನ್ನು ಗೆದ್ದಿತು…!


 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜ್ಯಸಭಾ ಚುನಾವಣೆ: ಕರ್ನಾಟದಿಂದ ಆಯ್ಕೆಯಾದ ಪ್ರತಿನಿಧಿಗಳಿಂದ ರಾಜ್ಯಕ್ಕೆ ಲಾಭವಾಗಿದೆಯೇ?

ರಾಜ್ಯಸಭೆಗೆ ಪ್ರತಿಬಾರಿ ಚುನಾವಣೆ ನಡೆಯುವಾಗಲೂ ಈ ಚರ್ಚೆಗಳು ಸಾಮಾನ್ಯ. ಕನ್ನಡೇತರರು ಇಲ್ಲಿಂದ ಆಯ್ಕೆಯಾಗಿ ಇಲ್ಲಿಯ ಸಮಸ್ಯೆಗಳ ಬಗ್ಗೆ ಮಾತನಾಡುವುದಿಲ್ಲ ಎಂಬ ವಾಸ್ತವದ ಜೊತೆಜೊತೆಗೆ, ರಾಜ್ಯಸಭೆಗೆ ಆಯ್ಕೆಯಾಗುವ ಕನ್ನಡವರಾದರೂ ಮಾತನಾಡುತ್ತಾರಾ? ಎಂದರೆ ಅದಕ್ಕೂ ನಮ್ಮಲ್ಲಿ...

ಬಂಗಾಳದಲ್ಲಿ ಬಿಜೆಪಿ ಬೆಂಬಲಿಗರ ಕ್ರೌರ್ಯ: ಅಭಿಷೇಕ್ ಬಳಿಕ ಕಲ್ಯಾಣ್‌ ಬ್ಯಾನರ್ಜಿ ಮೇಲೆ ಮಾರಣಾಂತಿಕ ದಾಳಿ

ಪಶ್ಚಿಮ ಬಂಗಾಳದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಸಂಸದ ಕಲ್ಯಾಣ್ ಬ್ಯಾನರ್ಜಿ ಅವರು ಭಾನುವಾರ (ಮೇ 31), ಹೂಗ್ಲಿ ಜಿಲ್ಲೆಯಲ್ಲಿ ನಡೆದಿದ್ದ ಚುನಾವಣೋತ್ತರ ಹಿಂಸಾಚಾರದಲ್ಲಿ ಕಾರ್ಯಕರ್ತರ ಬಂಧನದ ವಿರುದ್ಧ ಮನವಿ ಪತ್ರ ಸಲ್ಲಿಸಲು ಭೇಟಿ...

ಬಸ್ತಾರ್‌: ಬುಡಕಟ್ಟು ಕ್ರಿಶ್ಚಿಯನ್ ಕುಟುಂಬಗಳಿಗೆ ಬೆದರಿಕೆ, ಥಳಿತ, ಹಿಂದೂ ಧರ್ಮ ಸ್ವೀಕರಿಸಲು ಬಲವಂತ: ಘನತೆಯ ಬದುಕಿಗಾಗಿ ಆದಿವಾಸಿಗಳ ಹೋರಾಟ

ಛತ್ತೀಸ್‌ಗಢದ ದಟ್ಟ ಅರಣ್ಯಗಳು ಮತ್ತು ಕಡಿದಾದ ಬೆಟ್ಟಗಳಿಂದ ಆವೃತವಾಗಿರುವ ಬಸ್ತಾರ್ ಕಣಿವೆಯು ತನ್ನ ವಿಶಿಷ್ಟ ಬುಡಕಟ್ಟು ಸಂಸ್ಕೃತಿ ಮತ್ತು ಪ್ರಾಕೃತಿಕ ಸಂಪತ್ತಿಗೆ ಹೆಸರುವಾಸಿ. ಆದರೆ ಇತ್ತೀಚಿನ ವರ್ಷಗಳಲ್ಲಿ, ಈ ಪ್ರಶಾಂತ ಭೂಭಾಗವು ತೀವ್ರಗಾಮಿ...

ಗಾಝಾದಲ್ಲಿ ರಕ್ತಸಿಕ್ತ ಈದ್: ಇಸ್ರೇಲ್ ಭೀಕರ ದಾಳಿಗೆ 26 ಪ್ಯಾಲೆಸ್ಟೀನಿಯನ್ನರು ಬಲಿ, ವಿಶ್ವಸಂಸ್ಥೆ ತೀವ್ರ ಆತಂಕ

ಗಾಝಾ: ಇಸ್ಲಾಂ ಧರ್ಮದ ಅತ್ಯಂತ ಪವಿತ್ರ ದಿನಗಳಲ್ಲಿ ಒಂದಾದ ‘ಈದ್ ಅಲ್-ಅಧಾ’ ಹಬ್ಬದ ಸಂದರ್ಭದಲ್ಲೂ ಗಾಝಾ ಪಟ್ಟಿಯಲ್ಲಿ ರಕ್ತಪಾತ ಮುಂದುವರಿದಿದ್ದು, ಹಬ್ಬದ ಮುನ್ನಾದಿನದಿಂದ ಆರಂಭಿಸಿ ಇಸ್ರೇಲ್ ಪಡೆಗಳು ನಡೆಸಿದ ಸರಣಿ ದಾಳಿಗಳಲ್ಲಿ ಕನಿಷ್ಠ...

ಜನರಿಗೆ ಇಂಧನ ಉಳಿಸುವ ಪಾಠ, ಪ್ರಧಾನಿಗೆ ರೋಡ್‌ಶೋಗಳ ಆಟ

ಮೇ 10 ರಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಸಾರ್ವಜನಿಕರಲ್ಲಿ ಮಿತವ್ಯಯದ ಅಪೀಲು ಮಾಡಿದ್ದು, ಇಂಧನ ಬಳಕೆಯನ್ನು ಕನಿಷ್ಠ ಮಟ್ಟಕ್ಕೆ ಇಳಿಸುವಂತೆ ಕೋರಿದ್ದರು. ಜನರು ಖಾಸಗಿ ವಾಹನಗಳ ಬಳಕೆಯನ್ನು ಬಿಟ್ಟು ಸಾರ್ವಜನಿಕ ಸಾರಿಗೆಯನ್ನು...

ಏಷ್ಯನ್ ಗೇಮ್ಸ್‌ ಟ್ರಯಲ್ಸ್‌ನಲ್ಲಿ ಸ್ಪರ್ಧಿಸಲು ವಿನೇಶ್ ಫೋಗಟ್‌ಗೆ ಅನುಮತಿಸಿದ ಭಾರತೀಯ ಕುಸ್ತಿ ಒಕ್ಕೂಟ

ಮಾಜಿ ವಿಶ್ವ ಚಾಂಪಿಯನ್‌ಶಿಪ್ ಪದಕ ವಿಜೇತೆ ವಿನೇಶ್ ಫೋಗಟ್ ಅವರು (ಮೇ 30) ಏಷ್ಯನ್ ಗೇಮ್ಸ್ ಆಯ್ಕೆ ಟ್ರಯಲ್ಸ್‌ನಲ್ಲಿ ಮಹಿಳೆಯರ 53 ಕೆಜಿ ವಿಭಾಗದಲ್ಲಿ ಸ್ಪರ್ಧಿಸಲು ಅವಕಾಶ ಪಡೆದಿದ್ದಾರೆ. ಭಾರತೀಯ ಕುಸ್ತಿ ಒಕ್ಕೂಟ...

Uttarakhand | ಬಜರಂಗದಳದ ಕಾರ್ಯಕರ್ತರು ಈಗ ದ್ವೇಷ ಬಿತ್ತುವ ವೃತ್ತಿಪರ ಇನ್‌ಫ್ಲ್ಯುಯೆನ್ಸರ್ಸ್!

ಈ ವರ್ಷದ ಆರಂಭದಲ್ಲಿ ಉತ್ತರಾಖಂಡದ ಕೋಟದ್ವಾರದಲ್ಲಿ ಹಿಂದುತ್ವ ಗುಂಪೊಂದು ವೃದ್ಧ ಮುಸ್ಲಿಂ ವ್ಯಕ್ತಿಯೊಬ್ಬರ ಅಂಗಡಿಗೆ ನುಗ್ಗಿ, ಅಂಗಡಿಯ ಹೆಸರಾದ ‘ಬಾಬಾ’ ಎಂಬುವುದನ್ನು ಬದಲಾಯಿಸುವಂತೆ ಒತ್ತಾಯಿಸಿತ್ತು. ‘ಬಾಬಾ’ ಎಂಬುವುದು ‘ಹಿಂದೂ’ ಹೆಸರಾಗಿದೆ ಎಂದು ಆ...

​ನಿಗಿ ನಿಗಿ ಕೆಂಡದಂತಾಗಿರುವ ಬಿಡದಿ, ಡಿಕೆಶಿಗೆ ಬಿಸಿ ತುಪ್ಪದಂತಾದ ರೈತರು

​ಬದಲಾದ ರಾಜಕೀಯ ಸಂದರ್ಭದಲ್ಲಿ ಕರ್ನಾಟಕದ ಮುಂದಿನ ಮುಖ್ಯಮಂತ್ರಿ ಎಂದೇ ಬಿಂಬಿತವಾಗಿರುವ ಡಿ.ಕೆ. ಶಿವಕುಮಾರ್ ಪ್ರತಿಷ್ಠೆಯಾಗಿ ತೆಗೆದುಕೊಂಡಿರುವ ಬಿಡದಿಯ ಟೌನ್‌ಶಿಪ್ ಯೋಜನೆಯ ವಿರುದ್ಧ ನಡೆಯುತ್ತಿರುವ ರೈತರ ಹೋರಾಟ ದಿನದಿಂದ ದಿನಕ್ಕೆ ಉಗ್ರ ರೂಪ ಪಡೆಯುತ್ತಿದೆ. ​ಭೂಸ್ವಾಧೀನದ...

ಪ್ರಜಾಪ್ರಭುತ್ವವನ್ನು ಹತ್ತಿಕ್ಕಲು ‘SIR’ ಅನ್ನೇ ಅಸ್ತ್ರವನ್ನಾಗಿಸಿಕೊಂಡ ನರೇಂದ್ರ ಮೋದಿ!

ಪಶ್ಚಿಮ ಬಂಗಾಳದ ವಿಧಾನಸಭಾ ಚುನಾವಣೆಯ ಫಲಿತಾಂಶ ಪ್ರಕಟವಾದ ತಕ್ಷಣ (ಮೇ 4 ರಂದು), ಕಾಳೀಘಾಟ್‌ನಲ್ಲಿರುವ ತಮ್ಮ ನಿವಾಸದಲ್ಲಿ ಸುದ್ದಿಗೋಷ್ಠಿ ನಡೆಸಿದ ಮಾಜಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅತ್ಯಂತ ಆಕ್ರೋಶದಿಂದ ಮಾತನಾಡಿದ್ದರು. ಅಷ್ಟೇ ಅಲ್ಲದೆ,...

ಕೇರಳದಲ್ಲಿ ಶಾಲಾ ಬಾಲಕಿಯರಿಗೆ ಮೂರು ದಿನ ಮುಟ್ಟಿನ ರಜೆ, ಅಸಂಘಟಿತ ವಲಯದ ಮಹಿಳೆಯರಿಗೆ ಆರು ತಿಂಗಳ ಹೆರಿಗೆ ರಜೆ ಘೋಷಣೆ 

ತಿರುವನಂತಪುರಂ: ಕೇರಳದ ವಿ.ಡಿ. ಸತೀಶನ್ ನೇತೃತ್ವದ ಕಾಂಗ್ರೆಸ್ ಸರ್ಕಾರವು ಮಹಿಳೆಯರಿಗೆ ಹಲವಾರು ಕಲ್ಯಾಣ ಕ್ರಮಗಳನ್ನು ಘೋಷಿಸಿದೆ, ಇದರಲ್ಲಿ ಶಾಲಾ ವಿದ್ಯಾರ್ಥಿಗಳಿಗೆ ಮೂರು ದಿನಗಳ ಮಾಸಿಕ ಮುಟ್ಟಿನ ರಜೆ, ಕೆಲಸದ ಸ್ಥಳಗಳಲ್ಲಿ ಮಹಿಳೆಯರಿಗೆ ಸಮಾನ...