Homeಮುಖಪುಟಯುಪಿ ದಾಳಿಯಲ್ಲಿ ಕೊಲ್ಲಲ್ಪಟ್ಟ ಅಧಿಕಾರಿ ಬರೆದ ಪತ್ರ ವೈರಲ್; ನಮಗೆ ಸಿಕ್ಕಿಲ್ಲವೆಂದ ಪೊಲೀಸರು

ಯುಪಿ ದಾಳಿಯಲ್ಲಿ ಕೊಲ್ಲಲ್ಪಟ್ಟ ಅಧಿಕಾರಿ ಬರೆದ ಪತ್ರ ವೈರಲ್; ನಮಗೆ ಸಿಕ್ಕಿಲ್ಲವೆಂದ ಪೊಲೀಸರು

ಉನ್ನತ ಅಧಿಕಾರಿಯೊಬ್ಬರು ಪತ್ರದ ಬಗ್ಗೆ ಸಮಗ್ರ ವಿವರಣೆ ಕೇಳಿದ್ದು, ಅದನ್ನು ಪರಿಶೀಲಿಸಿದಲ್ಲಿ, ಪೊಲೀಸರು ಅಪರಾಧಿಗಳಿಗೆ ಸಹಾಯ ಮಾಡುತ್ತಿರುವುದಕ್ಕೆ ಪ್ರಖರ ಪುರಾವೆಗಳು ಸಿಗಬಹುದು ಎನ್ನಲಾಗಿದೆ

- Advertisement -
- Advertisement -

ಕುಖ್ಯಾತ ದರೋಡೆಕೋರ ವಿಕಾಸ್ ದುಬೆ ಮೇಲೆ ಶುಕ್ರವಾರ ವಿಫಲ ದಾಳಿ ನಡೆಸಿದ ಅಧಿಕಾರಿ ”ಪೊಲೀಸರ ಎಡೆಯಲ್ಲಿ ದುಬೆಯ ಮಾಹಿತಿದಾರ” ಇರುವ ಬಗ್ಗೆ ಬರೆದಿರುವ ಪತ್ರದ ಬಗ್ಗೆ ಉತ್ತರ ಪ್ರದೇಶ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.

ಉನ್ನತ ಅಧಿಕಾರಿಯೊಬ್ಬರು ಪತ್ರದ ಬಗ್ಗೆ ಸಮಗ್ರ ವಿವರಣೆ ಕೇಳಿದ್ದು, ಅದನ್ನು ಪರಿಶೀಲಿಸಿದಲ್ಲಿ, ಪೊಲೀಸರು ಅಪರಾಧಿಗಳಿಗೆ ಸಹಾಯ ಮಾಡುತ್ತಿರುವುದಕ್ಕೆ ಪ್ರಖರ ಪುರಾವೆಗಳು ಸಿಗಬಹುದು ಎನ್ನಲಾಗಿದೆ.

ಪೊಲೀಸರ ಹತ್ಯಾಕಾಂಡದ ನಂತರ ವಿಕಾಸ್ ದುಬೆ ಕಾಣೆಯಾಗಿದ್ದಾನೆ.

ಸಾಮಾಜಿಕ ಮಾಧ್ಯಮದಲ್ಲಿ ವ್ಯಾಪಕವಾಗಿ ಹರಡಿರುವ ಈ ಪತ್ರದ ವಿವಾದ ಹಾಗೂ ಆಕ್ರೋಶದ ಮಧ್ಯೆ,  ಕಾನ್ಪುರದ ಪೊಲೀಸ್ ಮುಖ್ಯಸ್ಥ ಸೋಮವಾರ ರಾತ್ರಿ ಇದು ಪೊಲೀಸ್ ದಾಖಲೆಗಳಲ್ಲಿ ಕಂಡುಬಂದಿಲ್ಲ ಆದರೆ ಅದಕ್ಕಾಗಿ ಶೋಧ ನಡೆಯುತ್ತಿದೆ ಎಂದು ಹೇಳಿದ್ದಾರೆ.

ವಿಕಾಸ್ ದುಬೆ ಮತ್ತು ಅವರ ಜನರು ಹೊಂಚುಹಾಕಿ ಗುಂಡಿಕ್ಕಿ ಕೊಂದಿದ್ದ ಉಪ ಪೊಲೀಸ್ ವರಿಷ್ಠಾಧಿಕಾರಿ (ಡಿಎಸ್ಪಿ) ದೇವೇಂದ್ರ ಕುಮಾರ್ ಮಿಶ್ರಾ ಅವರು ಮೂರು ತಿಂಗಳ ಹಿಂದೆ ಆಗಿನ ಕಾನ್ಪುರದ ಪೊಲೀಸ್ ಮುಖ್ಯಸ್ಥ ಅನಂತ್ ಡಿಯೋ ತಿವಾರಿ ಅವರಿಗೆ ‘ಈ ಪತ್ರವನ್ನು ಬರೆದಿದ್ದಾರೆ’ ಎಂದು ಹೇಳಲಾಗಿದೆ.

ದರೋಡೆಕೋರರಿಗೆ ಪೊಲೀಸರು ಸಹಾಯ ಮಾಡುವ ಬಗ್ಗೆ ಮತ್ತು ವಿಶೇಷವಾಗಿ ಈಗಾಗಲೇ ಅಮಾನತುಗೊಂಡಿರುವ ಚೌಬೆಪುರ ಪೊಲೀಸ್ ಠಾಣೆಯ ಉಸ್ತುವಾರಿ ಪೊಲೀಸ್ ಅಧಿಕಾರಿ ವಿನಯ್ ತಿವಾರಿ ಬಗ್ಗೆ ಅಧಿಕಾರಿ ಅದರಲ್ಲಿ  ದೂರು ನೀಡಿದ್ದರು ಎಂದು ಹೇಳಲಾಗುತ್ತಿದೆ.

ವಿನಯ್ ತಿವಾರಿ ಅವರು ಅಪರಾಧಿಗೆ ಸಹಾಯ ಮಾಡಿ, ಪೊಲೀಸರ ತನಿಖೆಯಿಂದ ಅವರನ್ನು ರಕ್ಷಿಸಿದ್ದಾರೆ ಎಂದು ಮಿಶ್ರಾ ಆರೋಪಿಸಿದ್ದಾರೆ. ಆ ಪೊಲೀಸ್ ಅಧಿಕಾರಿಯ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕೆಂದು ಪತ್ರದಲ್ಲಿ ಕೋರಲಾಗಿದೆ.

“ಅಂತಹ ಪತ್ರವು ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿದೆ ಎಂದು ನನಗೆ ತಿಳಿದಿದೆ. ಡಿಎಸ್ಪಿ ಕಚೇರಿ ಮತ್ತು ಕಾನ್ಪುರ ಎಸ್ಎಸ್ಪಿ (ಹಿರಿಯ ಪೊಲೀಸ್ ವರಿಷ್ಠಾಧಿಕಾರಿ) ರವಾನೆ ಮತ್ತು ಸ್ವೀಕರಿಸುವ ವಿಭಾಗಗಳಲ್ಲಿ ಪ್ರಾಥಮಿಕ ಶೋಧವನ್ನು ನಡೆಸಲಾಯಿತು. ಇಲ್ಲಿಯವರೆಗೆ ಈ ಪತ್ರದ ಯಾವುದೇ ದಾಖಲೆಗಳು ಸಿಗಲಿಲ್ಲ. ಆದರೆ ನಾವು ಅದರೊಂದಿಗೆ ಇನ್ನೂ ಹೆಚ್ಚಿನ ವಿವರಗಳನ್ನು ಹುಡುಕುತ್ತಿದ್ದೇವೆ. ಹೆಚ್ಚಿನ ವಿವರಗಳನ್ನು ಸಿಕ್ಕರೆ ಅದನ್ನು ಹಂಚಿಕೊಳ್ಳಲು ನಾವು ಹಿಂಜರಿಯುವುದಿಲ್ಲ” ಎಂದು ಕಾನ್ಪುರದ ಪೊಲೀಸ್ ಮುಖ್ಯಸ್ಥ ದಿನೇಶ್ ಕುಮಾರ್ ಪಿ ಹೇಳಿದ್ದಾರೆ.

ಕೊಲೆ ಪ್ರಕರಣದಲ್ಲಿ ವಿಕಾಸ್ ದುಬೆಯನ್ನು ಬಂಧಿಸುವ ಉದ್ದೇಶದಿಂದ ಮೂರು ಪೊಲೀಸ್ ಠಾಣೆಗಳಿಂದ 50 ಪೊಲೀಸರ ತಂಡವನ್ನು ಮಿಶ್ರಾ ಮುನ್ನಡೆಸಿದರು. ದುಬೆ ವಿರುದ್ಧ ಕೊಲೆ, ಅಪಹರಣ, ಸುಲಿಗೆ ಮತ್ತು ಗಲಭೆ ಸೇರಿದಂತೆ 60 ಪ್ರಕರಣಗಳು ದಾಖಲಾಗಿದೆ.

ಪೊಲೀಸರು ನಡೆಸುವ ದಾಳಿಯ ಬಗ್ಗೆ ದುಬೆಗೆ ಮಾಹಿತಿ ನೀಡಲಾಗಿತ್ತು. ಹಾಗಾಗಿ ಪೊಲೀಸರ ಮೇಲೆ ಹಲ್ಲೆ ನಡೆಸಲು ಸಶಸ್ತ್ರ ಗ್ಯಾಂಗ್‌ನೊಂದಿಗೆ ಅವರು ಸಿದ್ಧರಾಗಿದ್ದರು. ಈ ಅಪರಾಧಿಯೊಂದಿಗಿನ ಸಂಪರ್ಕದ ಅನುಮಾನದ ಮೇಲೆ ನಾಲ್ವರು ಪೊಲೀಸರನ್ನು ಅಮಾನತು ಮಾಡಲಾಗಿದೆ.

ಪೊಲೀಸರ ಮಾರಣಹೋಮ ನಡೆದು ನಾಲ್ಕು ದಿನಗಳು ಕಳೆದರೂ ವಿಕಾಸ್ ದುಬೆಯನ್ನು ಉತ್ತರ ಪ್ರದೇಶದ ಪೊಲೀಸರು ಇನ್ನೂ ಬಂಧಿಸಿಲ್ಲ. ಸೋಮವಾರ ಅವರ ಮಾಹಿತಿ ನೀಡಿದವರ ಬಹುಮಾನವನ್ನು 2.5 ಲಕ್ಷ ರೂ.ಗೆ ಏರಿಸಲಾಯಿತು. ಇಲ್ಲಿಯವರೆಗೆ ದುಬೆ ಇಲ್ಲಿದ್ದಾರೆ ಎಂಬ ಬಗ್ಗೆ ಯಾವುದೇ ಮಾಹಿತಿ ಇಲ್ಲ.

ನಿನ್ನೆ ಸಂಜೆ ಕಾನ್ಪುರ ಪೊಲೀಸ್ ಪತ್ರಿಕಾ ಪ್ರಕಟಣೆಯಲ್ಲಿ ಇನ್ನೂ ಮೂರು ಬಂಧನಗಳಾಗಿರುವುದು ದೃಢಪಟ್ಟಿದೆ. ಅವರಲ್ಲಿ ಒಬ್ಬರು ದುಬೆಯ ನೆರೆಹೊರೆಯವರಾಗಿದ್ದು, ಇನ್ನೊಬ್ಬರು ದುಬೆಯ ಸಹಾಯಕ ಮತ್ತು ಮೂರನೇ ವ್ಯಕ್ತಿ ಮಹಿಳೆ ಎಂದು ತಿಳಿದುಬಂದಿದೆ.

ಅಮಾನತುಗೊಂಡ ಪೊಲೀಸರು ಅದೇ ಪೊಲೀಸ್ ಠಾಣೆ ಚೌಬೆಪುರದವರಾಗಿದ್ದು, ದುಬೆಯ ಜೊತೆಗೆ ನಿಯಮಿತ ಸಂಪರ್ಕ ಹೊಂದಿದ್ದಾರೆ ಎಂಬ ಆರೋಪವಿದೆ. ಕಳೆದ ನಾಲ್ಕು ದಿನಗಳಲ್ಲಿ 100 ಕ್ಕೂ ಹೆಚ್ಚು ಪೊಲೀಸರ ಕರೆ ದಾಖಲೆಗಳನ್ನು ಸ್ಕ್ಯಾನ್ ಮಾಡಲಾಗಿದೆ.


ಇದನ್ನೂ ಓದಿ: ವಿಕಾಸ್ ದುಬೆಗೆ ‘ದಾಳಿಯ ಮಾಹಿತಿ ಸೋರಿಕೆ’: 3 ಕಾನ್ಪುರ ಪೊಲೀಸರ ಮೇಲೆ ಶಂಕೆ – ಅಮಾನತು


 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ವಾಣಿಜ್ಯ ಎಲ್‌ಪಿಜಿ ದರ 195.50 ರೂ. ಏರಿಕೆ : ಜನ ಸಾಮಾನ್ಯರಿಗೆ ಗಾಯದ ಮೇಲೆ ಬರೆ

ಪಶ್ಚಿಮ ಏಷ್ಯಾ ಸಂಘರ್ಷದಿಂದಾಗಿ ಜಾಗತಿಕ ತೈಲ ಬೆಲೆಗಳು ಏರುತ್ತಿರುವ ನಡುವೆ, ವಾಣಿಜ್ಯ ಎಲ್‌ಪಿಜಿ ದರವನ್ನು ಬುಧವಾರ (ಏ.1) 195.50 ರೂ. ಹೆಚ್ಚಿಸಲಾಗಿದೆ. ಸರ್ಕಾರಿ ಸ್ವಾಮ್ಯದ ತೈಲ ಕಂಪನಿಗಳ ಪ್ರಕಾರ, ಬೆಲೆ ಏರಿಕೆ ಬಳಿಕ...

ಕುಸಿಯುವುದರಲ್ಲಿ ರೂಪಾಯಿ ಮತ್ತು ಬಿಜೆಪಿ ವರ್ಚಸ್ಸಿನ ನಡುವೆ ತೀವ್ರ ಪೈಪೋಟಿಯಿದೆ : ಅಖಿಲೇಶ್ ಯಾದವ್ ವ್ಯಂಗ್ಯ

ಕುಸಿಯುವುದರಲ್ಲಿ ರೂಪಾಯಿ ಮತ್ತು ಬಿಜೆಪಿ ವರ್ಚಸ್ಸಿನ ನಡುವೆ ತೀವ್ರ ಪೈಪೋಟಿ ನಡೆಯುತ್ತಿದೆ ಎಂದು ಸಮಾಜವಾದಿ ಪಕ್ಷದ ಮುಖ್ಯಸ್ಥ ಅಖಿಲೇಶ್ ಯಾದವ್ ವ್ಯಂಗ್ಯವಾಡಿದ್ದಾರೆ. ಬಿಜೆಪಿ ನಾಯಕರು ಹಾಗೂ ಅವರ ಸಹವರ್ತಿಗಳ ಭ್ರಷ್ಟಾಚಾರ ಮತ್ತು ದುರ್ನಡತೆಯ ಪ್ರಕರಣಗಳು...

ಅಂತರ್ಧರ್ಮೀಯ ‘ಲಿವ್-ಇನ್’ ಸಂಬಂಧ ಅಪರಾಧವಲ್ಲ: ಅಲಹಾಬಾದ್ ಹೈಕೋರ್ಟ್

ಅಂತರ್ಧರ್ಮೀಯ ಲಿವ್-ಇನ್ ಸಂಬಂಧವನ್ನು ನಿಷೇಧಿಸಲಾಗಿಲ್ಲ ಅಥವಾ ಯಾವುದೇ ಕಾನೂನಿನ ಅಡಿಯಲ್ಲಿ ಅಪರಾಧವಲ್ಲಎಂದು ತೀರ್ಪು ನೀಡಿರುವ ಅಲಹಾಬಾದ್ ಹೈಕೋರ್ಟ್, ಮಹಿಳೆಯ ಕುಟುಂಬದಿಂದ ಬೆದರಿಕೆ ಎದುರಿಸುತ್ತಿರುವ ದಂಪತಿಗಳಿಗೆ ರಕ್ಷಣೆ ನೀಡಿದೆ. ಸೋನ್‌ಭದ್ರಾದ ಕಾಜಲ್ ಪ್ರಜಾಪತಿ ಮತ್ತು ಅವರ...

‘ವೇತನ ಸಹಿತ ಪಿತೃತ್ವ ರಜೆಯನ್ನು ಕಾನೂನುಬದ್ಧಗೊಳಿಸಬೇಕು’; ರಾಜ್ಯಸಭೆಯಲ್ಲಿ ಎಎಪಿ ಸಂಸದ ರಾಘವ್ ಚಡ್ಡಾ ಒತ್ತಾಯ

ಭಾರತದಲ್ಲಿ ವೇತನ ಸಹಿತ ಪಿತೃತ್ವ ರಜೆಯನ್ನು ಕಾನೂನುಬದ್ಧ ಹಕ್ಕನ್ನಾಗಿ ಮಾಡಲು, ಹಂಚಿಕೆಯ ಆರೈಕೆ ಜವಾಬ್ದಾರಿಗಳನ್ನು ಒತ್ತಿಹೇಳಲು ಕಾನೂನನ್ನು ಜಾರಿಗೆ ತರಬೇಕೆಂದು ಎಎಪಿ ಸಂಸದ ರಾಘವ್ ಚಡ್ಡಾ ಒತ್ತಾಯಿಸಿದ್ದಾರೆ. ರಾಜ್ಯಸಭೆಯಲ್ಲಿ ಮಾತನಾಡಿದ ಅವರು, ತಂದೆ ಉದ್ಯೋಗ...

ಬಿಜೆಪಿ ಇತರ ರಾಜ್ಯಗಳ ಅಕ್ರಮ ಮತದಾರರನ್ನು ಸೇರಿಸುತ್ತಿದೆ : ಮಮತಾ ಬ್ಯಾನರ್ಜಿ ಆರೋಪ

ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಮಂಗಳವಾರ (ಮಾ.31) ಬಿಜೆಪಿ ಬಿಹಾರ, ರಾಜಸ್ಥಾನ, ಹರಿಯಾಣ ಮತ್ತು ಉತ್ತರ ಪ್ರದೇಶದ ಅಕ್ರಮ ಮತದಾರರನ್ನು ರಾಜ್ಯದ ಮತದಾರರ ಪಟ್ಟಿಯಲ್ಲಿ ಸೇರಿಸಲು ಪ್ರಯತ್ನಿಸುತ್ತಿದೆ ಎಂದು ಆರೋಪಿಸಿದರು. ಪಶ್ಚಿಮ...

ಬಿಹಾರ: ವಿವಾಹಿತ ಮಹಿಳೆ ಮೇಲೆ ಸಾಮೂಹಿಕ ಅತ್ಯಾಚಾರಕ್ಕೆ ಯತ್ನ; ಹಲ್ಲೆ ಮಾಡಿ ವಿಡಿಯೋ ಹರಿಬಿಟ್ಟ ದುಷ್ಟರು: ಇಬ್ಬರ ಬಂಧನ 

ಬಿಹಾರದ ನಳಂದ ಜಿಲ್ಲೆಯಲ್ಲಿ ನಾಚಿಕೆಗೇಡಿನ ಮತ್ತು ಆತಂಕಕಾರಿ ಘಟನೆಯೊಂದು ಬೆಳಕಿಗೆ ಬಂದಿದೆ. ನೂರ್ಸರಾಯ್ ಪೊಲೀಸ್ ಠಾಣೆ ವ್ಯಾಪ್ತಿಯ ಹಳ್ಳಿಯೊಂದರಲ್ಲಿ ಮೂವರು ಪುರುಷರು ವಿವಾಹಿತ ಮಹಿಳೆಯ ಮೇಲೆ ಸಾರ್ವಜನಿಕವಾಗಿ ಸಾಮೂಹಿಕ ಅತ್ಯಾಚಾರಕ್ಕೆ ಯತ್ನಿಸಿದ್ದಾರೆ. ದೌರ್ಜನ್ಯ ವಿರೋಧಿಸಿ...

‘ಹಿಂದುತ್ವ ಉಗ್ರವಾದವನ್ನು ಏಕೆ ನಿರ್ಲಕ್ಷಿಸಬೇಕು..?’; ಸಂಸತ್ತಿನಲ್ಲಿ ಪ್ರಶ್ನಿಸಿದ ರುಹುಲ್ಲಾ ಮೆಹದಿ

"ದೇಶದಲ್ಲಿ ಹೆಚ್ಚುತ್ತಿರುವ ಬಲಪಂಥೀಯ ಉಗ್ರವಾದವನ್ನು ನಿರ್ಲಕ್ಷಿಸಿ ಎಡಪಂಥೀಯ ಬೆದರಿಕೆಗಳ ಮೇಲೆ ಮಾತ್ರ ಗಮನಹರಿಸಲಾಗುತ್ತಿದೆ" ಎಂದು ಲೋಕಸಭೆಯಲ್ಲಿ ಜಮ್ಮು-ಕಾಶ್ಮೀರದ ಶ್ರೀನಗರ ಸಂಸದ ಆಗಾ ಸೈಯದ್ ರುಹುಲ್ಲಾ ಮೆಹದಿ ನರೇಂದ್ರ ಮೋದಿ ನೇತೃತ್ವದ ಸರ್ಕಾರದ ಮೇಲೆ...

ವಿರೋಧದ ನಡುವೆಯೂ ಟ್ರಾನ್ಸ್‌ಜೆಂಡರ್ ತಿದ್ದುಪಡಿ ಮಸೂದೆಗೆ ರಾಷ್ಟ್ರಪತಿ ಅಂಕಿತ

ತೀವ್ರ ವಿರೋಧಗಳ ನಡುವೆಯೂ ಟ್ರಾನ್ಸ್‌ಜೆಂಡರ್‌ ವ್ಯಕ್ತಿಗಳ (ಹಕ್ಕುಗಳ ರಕ್ಷಣೆ) ತಿದ್ದುಪಡಿ ಮಸೂದೆಗೆ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಅಂಕಿತ ಹಾಕಿದ್ದಾರೆ ಎಂದು ಕೇಂದ್ರ ಕಾನೂನು ಸಚಿವಾಲಯ ಸೋಮವಾರ (ಮಾ. 30) ಗೆಜೆಟ್ ಅಧಿಸೂಚನೆಯಲ್ಲಿ...

ಮಶಾದ್ ವಿಮಾನ ನಿಲ್ದಾಣದ ಮೇಲೆ ಅಮೆರಿಕ ದಾಳಿ: ದೆಹಲಿಗೆ ತೆರಳುತ್ತಿದ್ದ ನೆರವು ವಿಮಾನಕ್ಕೆ ಡಿಕ್ಕಿ: ಇದು ‘ಯುದ್ಧ ಅಪರಾಧ’ ಎಂದ ಇರಾನ್ 

ಇರಾನ್‌ನ ಮಶಾದ್ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಅಮೆರಿಕದ ವಾಯುದಾಳಿಯ ಸಂದರ್ಭದಲ್ಲಿ ನವದೆಹಲಿಗೆ ಹಾರಲು ನಿಗದಿಯಾಗಿದ್ದ ಮಹಾನ್ ಏರ್ ವಿಮಾನವು ಡಿಕ್ಕಿ ಹೊಡೆದಿದೆ ಎಂದು ವರದಿಯಾಗಿದೆ.  ಈ ವಿಮಾನವು ಔಷಧಿಗಳು ಸೇರಿದಂತೆ ಮಾನವೀಯ ನೆರವು ಸಾಗಣೆಗೆ...

ಪ್ಯಾಲೆಸ್ತೀನಿಯರಿಗೆ ಮರಣದಂಡನೆ ವಿಧಿಸುವ ಕಾನೂನು ಅಂಗೀಕಾರ : ಇಸ್ರೇಲ್ ಕ್ರಮಕ್ಕೆ ಜಾಗತಿಕ ಖಂಡನೆ

ಮಾರಣಾಂತಿಕ ದಾಳಿಗಳ ಅಪರಾಧ ಸಾಬೀತಾದ ಪ್ಯಾಲೆಸ್ತೀನಿಯರಿಗೆ ಮರಣದಂಡನೆಯನ್ನು ಕಡ್ಡಾಯ ಶಿಕ್ಷೆಯನ್ನಾಗಿ ನಿಗದಿಪಡಿಸಿದ ಇಸ್ರೇಲ್‌ನ ಹೊಸ ಕಾನೂನನ್ನು ಮಾನವ ಹಕ್ಕುಗಳ ಸಂಘಟನೆಗಳು, ವಿವಿಧ ರಾಷ್ಟ್ರಗಳ ನಾಯಕರು ಸೇರಿದಂತೆ ಜಾಗತಿಕ ಸಮುಯದಾಯ ತೀವ್ರವಾಗಿ ವಿರೋಧಿಸಿದೆ. ಈ...