Homeಮುಖಪುಟಯುಪಿ ದಾಳಿಯಲ್ಲಿ ಕೊಲ್ಲಲ್ಪಟ್ಟ ಅಧಿಕಾರಿ ಬರೆದ ಪತ್ರ ವೈರಲ್; ನಮಗೆ ಸಿಕ್ಕಿಲ್ಲವೆಂದ ಪೊಲೀಸರು

ಯುಪಿ ದಾಳಿಯಲ್ಲಿ ಕೊಲ್ಲಲ್ಪಟ್ಟ ಅಧಿಕಾರಿ ಬರೆದ ಪತ್ರ ವೈರಲ್; ನಮಗೆ ಸಿಕ್ಕಿಲ್ಲವೆಂದ ಪೊಲೀಸರು

ಉನ್ನತ ಅಧಿಕಾರಿಯೊಬ್ಬರು ಪತ್ರದ ಬಗ್ಗೆ ಸಮಗ್ರ ವಿವರಣೆ ಕೇಳಿದ್ದು, ಅದನ್ನು ಪರಿಶೀಲಿಸಿದಲ್ಲಿ, ಪೊಲೀಸರು ಅಪರಾಧಿಗಳಿಗೆ ಸಹಾಯ ಮಾಡುತ್ತಿರುವುದಕ್ಕೆ ಪ್ರಖರ ಪುರಾವೆಗಳು ಸಿಗಬಹುದು ಎನ್ನಲಾಗಿದೆ

- Advertisement -
- Advertisement -

ಕುಖ್ಯಾತ ದರೋಡೆಕೋರ ವಿಕಾಸ್ ದುಬೆ ಮೇಲೆ ಶುಕ್ರವಾರ ವಿಫಲ ದಾಳಿ ನಡೆಸಿದ ಅಧಿಕಾರಿ ”ಪೊಲೀಸರ ಎಡೆಯಲ್ಲಿ ದುಬೆಯ ಮಾಹಿತಿದಾರ” ಇರುವ ಬಗ್ಗೆ ಬರೆದಿರುವ ಪತ್ರದ ಬಗ್ಗೆ ಉತ್ತರ ಪ್ರದೇಶ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.

ಉನ್ನತ ಅಧಿಕಾರಿಯೊಬ್ಬರು ಪತ್ರದ ಬಗ್ಗೆ ಸಮಗ್ರ ವಿವರಣೆ ಕೇಳಿದ್ದು, ಅದನ್ನು ಪರಿಶೀಲಿಸಿದಲ್ಲಿ, ಪೊಲೀಸರು ಅಪರಾಧಿಗಳಿಗೆ ಸಹಾಯ ಮಾಡುತ್ತಿರುವುದಕ್ಕೆ ಪ್ರಖರ ಪುರಾವೆಗಳು ಸಿಗಬಹುದು ಎನ್ನಲಾಗಿದೆ.

ಪೊಲೀಸರ ಹತ್ಯಾಕಾಂಡದ ನಂತರ ವಿಕಾಸ್ ದುಬೆ ಕಾಣೆಯಾಗಿದ್ದಾನೆ.

ಸಾಮಾಜಿಕ ಮಾಧ್ಯಮದಲ್ಲಿ ವ್ಯಾಪಕವಾಗಿ ಹರಡಿರುವ ಈ ಪತ್ರದ ವಿವಾದ ಹಾಗೂ ಆಕ್ರೋಶದ ಮಧ್ಯೆ,  ಕಾನ್ಪುರದ ಪೊಲೀಸ್ ಮುಖ್ಯಸ್ಥ ಸೋಮವಾರ ರಾತ್ರಿ ಇದು ಪೊಲೀಸ್ ದಾಖಲೆಗಳಲ್ಲಿ ಕಂಡುಬಂದಿಲ್ಲ ಆದರೆ ಅದಕ್ಕಾಗಿ ಶೋಧ ನಡೆಯುತ್ತಿದೆ ಎಂದು ಹೇಳಿದ್ದಾರೆ.

ವಿಕಾಸ್ ದುಬೆ ಮತ್ತು ಅವರ ಜನರು ಹೊಂಚುಹಾಕಿ ಗುಂಡಿಕ್ಕಿ ಕೊಂದಿದ್ದ ಉಪ ಪೊಲೀಸ್ ವರಿಷ್ಠಾಧಿಕಾರಿ (ಡಿಎಸ್ಪಿ) ದೇವೇಂದ್ರ ಕುಮಾರ್ ಮಿಶ್ರಾ ಅವರು ಮೂರು ತಿಂಗಳ ಹಿಂದೆ ಆಗಿನ ಕಾನ್ಪುರದ ಪೊಲೀಸ್ ಮುಖ್ಯಸ್ಥ ಅನಂತ್ ಡಿಯೋ ತಿವಾರಿ ಅವರಿಗೆ ‘ಈ ಪತ್ರವನ್ನು ಬರೆದಿದ್ದಾರೆ’ ಎಂದು ಹೇಳಲಾಗಿದೆ.

ದರೋಡೆಕೋರರಿಗೆ ಪೊಲೀಸರು ಸಹಾಯ ಮಾಡುವ ಬಗ್ಗೆ ಮತ್ತು ವಿಶೇಷವಾಗಿ ಈಗಾಗಲೇ ಅಮಾನತುಗೊಂಡಿರುವ ಚೌಬೆಪುರ ಪೊಲೀಸ್ ಠಾಣೆಯ ಉಸ್ತುವಾರಿ ಪೊಲೀಸ್ ಅಧಿಕಾರಿ ವಿನಯ್ ತಿವಾರಿ ಬಗ್ಗೆ ಅಧಿಕಾರಿ ಅದರಲ್ಲಿ  ದೂರು ನೀಡಿದ್ದರು ಎಂದು ಹೇಳಲಾಗುತ್ತಿದೆ.

ವಿನಯ್ ತಿವಾರಿ ಅವರು ಅಪರಾಧಿಗೆ ಸಹಾಯ ಮಾಡಿ, ಪೊಲೀಸರ ತನಿಖೆಯಿಂದ ಅವರನ್ನು ರಕ್ಷಿಸಿದ್ದಾರೆ ಎಂದು ಮಿಶ್ರಾ ಆರೋಪಿಸಿದ್ದಾರೆ. ಆ ಪೊಲೀಸ್ ಅಧಿಕಾರಿಯ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕೆಂದು ಪತ್ರದಲ್ಲಿ ಕೋರಲಾಗಿದೆ.

“ಅಂತಹ ಪತ್ರವು ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿದೆ ಎಂದು ನನಗೆ ತಿಳಿದಿದೆ. ಡಿಎಸ್ಪಿ ಕಚೇರಿ ಮತ್ತು ಕಾನ್ಪುರ ಎಸ್ಎಸ್ಪಿ (ಹಿರಿಯ ಪೊಲೀಸ್ ವರಿಷ್ಠಾಧಿಕಾರಿ) ರವಾನೆ ಮತ್ತು ಸ್ವೀಕರಿಸುವ ವಿಭಾಗಗಳಲ್ಲಿ ಪ್ರಾಥಮಿಕ ಶೋಧವನ್ನು ನಡೆಸಲಾಯಿತು. ಇಲ್ಲಿಯವರೆಗೆ ಈ ಪತ್ರದ ಯಾವುದೇ ದಾಖಲೆಗಳು ಸಿಗಲಿಲ್ಲ. ಆದರೆ ನಾವು ಅದರೊಂದಿಗೆ ಇನ್ನೂ ಹೆಚ್ಚಿನ ವಿವರಗಳನ್ನು ಹುಡುಕುತ್ತಿದ್ದೇವೆ. ಹೆಚ್ಚಿನ ವಿವರಗಳನ್ನು ಸಿಕ್ಕರೆ ಅದನ್ನು ಹಂಚಿಕೊಳ್ಳಲು ನಾವು ಹಿಂಜರಿಯುವುದಿಲ್ಲ” ಎಂದು ಕಾನ್ಪುರದ ಪೊಲೀಸ್ ಮುಖ್ಯಸ್ಥ ದಿನೇಶ್ ಕುಮಾರ್ ಪಿ ಹೇಳಿದ್ದಾರೆ.

ಕೊಲೆ ಪ್ರಕರಣದಲ್ಲಿ ವಿಕಾಸ್ ದುಬೆಯನ್ನು ಬಂಧಿಸುವ ಉದ್ದೇಶದಿಂದ ಮೂರು ಪೊಲೀಸ್ ಠಾಣೆಗಳಿಂದ 50 ಪೊಲೀಸರ ತಂಡವನ್ನು ಮಿಶ್ರಾ ಮುನ್ನಡೆಸಿದರು. ದುಬೆ ವಿರುದ್ಧ ಕೊಲೆ, ಅಪಹರಣ, ಸುಲಿಗೆ ಮತ್ತು ಗಲಭೆ ಸೇರಿದಂತೆ 60 ಪ್ರಕರಣಗಳು ದಾಖಲಾಗಿದೆ.

ಪೊಲೀಸರು ನಡೆಸುವ ದಾಳಿಯ ಬಗ್ಗೆ ದುಬೆಗೆ ಮಾಹಿತಿ ನೀಡಲಾಗಿತ್ತು. ಹಾಗಾಗಿ ಪೊಲೀಸರ ಮೇಲೆ ಹಲ್ಲೆ ನಡೆಸಲು ಸಶಸ್ತ್ರ ಗ್ಯಾಂಗ್‌ನೊಂದಿಗೆ ಅವರು ಸಿದ್ಧರಾಗಿದ್ದರು. ಈ ಅಪರಾಧಿಯೊಂದಿಗಿನ ಸಂಪರ್ಕದ ಅನುಮಾನದ ಮೇಲೆ ನಾಲ್ವರು ಪೊಲೀಸರನ್ನು ಅಮಾನತು ಮಾಡಲಾಗಿದೆ.

ಪೊಲೀಸರ ಮಾರಣಹೋಮ ನಡೆದು ನಾಲ್ಕು ದಿನಗಳು ಕಳೆದರೂ ವಿಕಾಸ್ ದುಬೆಯನ್ನು ಉತ್ತರ ಪ್ರದೇಶದ ಪೊಲೀಸರು ಇನ್ನೂ ಬಂಧಿಸಿಲ್ಲ. ಸೋಮವಾರ ಅವರ ಮಾಹಿತಿ ನೀಡಿದವರ ಬಹುಮಾನವನ್ನು 2.5 ಲಕ್ಷ ರೂ.ಗೆ ಏರಿಸಲಾಯಿತು. ಇಲ್ಲಿಯವರೆಗೆ ದುಬೆ ಇಲ್ಲಿದ್ದಾರೆ ಎಂಬ ಬಗ್ಗೆ ಯಾವುದೇ ಮಾಹಿತಿ ಇಲ್ಲ.

ನಿನ್ನೆ ಸಂಜೆ ಕಾನ್ಪುರ ಪೊಲೀಸ್ ಪತ್ರಿಕಾ ಪ್ರಕಟಣೆಯಲ್ಲಿ ಇನ್ನೂ ಮೂರು ಬಂಧನಗಳಾಗಿರುವುದು ದೃಢಪಟ್ಟಿದೆ. ಅವರಲ್ಲಿ ಒಬ್ಬರು ದುಬೆಯ ನೆರೆಹೊರೆಯವರಾಗಿದ್ದು, ಇನ್ನೊಬ್ಬರು ದುಬೆಯ ಸಹಾಯಕ ಮತ್ತು ಮೂರನೇ ವ್ಯಕ್ತಿ ಮಹಿಳೆ ಎಂದು ತಿಳಿದುಬಂದಿದೆ.

ಅಮಾನತುಗೊಂಡ ಪೊಲೀಸರು ಅದೇ ಪೊಲೀಸ್ ಠಾಣೆ ಚೌಬೆಪುರದವರಾಗಿದ್ದು, ದುಬೆಯ ಜೊತೆಗೆ ನಿಯಮಿತ ಸಂಪರ್ಕ ಹೊಂದಿದ್ದಾರೆ ಎಂಬ ಆರೋಪವಿದೆ. ಕಳೆದ ನಾಲ್ಕು ದಿನಗಳಲ್ಲಿ 100 ಕ್ಕೂ ಹೆಚ್ಚು ಪೊಲೀಸರ ಕರೆ ದಾಖಲೆಗಳನ್ನು ಸ್ಕ್ಯಾನ್ ಮಾಡಲಾಗಿದೆ.


ಇದನ್ನೂ ಓದಿ: ವಿಕಾಸ್ ದುಬೆಗೆ ‘ದಾಳಿಯ ಮಾಹಿತಿ ಸೋರಿಕೆ’: 3 ಕಾನ್ಪುರ ಪೊಲೀಸರ ಮೇಲೆ ಶಂಕೆ – ಅಮಾನತು


 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...