Homeಮುಖಪುಟಯುಪಿ ದಾಳಿಯಲ್ಲಿ ಕೊಲ್ಲಲ್ಪಟ್ಟ ಅಧಿಕಾರಿ ಬರೆದ ಪತ್ರ ವೈರಲ್; ನಮಗೆ ಸಿಕ್ಕಿಲ್ಲವೆಂದ ಪೊಲೀಸರು

ಯುಪಿ ದಾಳಿಯಲ್ಲಿ ಕೊಲ್ಲಲ್ಪಟ್ಟ ಅಧಿಕಾರಿ ಬರೆದ ಪತ್ರ ವೈರಲ್; ನಮಗೆ ಸಿಕ್ಕಿಲ್ಲವೆಂದ ಪೊಲೀಸರು

ಉನ್ನತ ಅಧಿಕಾರಿಯೊಬ್ಬರು ಪತ್ರದ ಬಗ್ಗೆ ಸಮಗ್ರ ವಿವರಣೆ ಕೇಳಿದ್ದು, ಅದನ್ನು ಪರಿಶೀಲಿಸಿದಲ್ಲಿ, ಪೊಲೀಸರು ಅಪರಾಧಿಗಳಿಗೆ ಸಹಾಯ ಮಾಡುತ್ತಿರುವುದಕ್ಕೆ ಪ್ರಖರ ಪುರಾವೆಗಳು ಸಿಗಬಹುದು ಎನ್ನಲಾಗಿದೆ

- Advertisement -
- Advertisement -

ಕುಖ್ಯಾತ ದರೋಡೆಕೋರ ವಿಕಾಸ್ ದುಬೆ ಮೇಲೆ ಶುಕ್ರವಾರ ವಿಫಲ ದಾಳಿ ನಡೆಸಿದ ಅಧಿಕಾರಿ ”ಪೊಲೀಸರ ಎಡೆಯಲ್ಲಿ ದುಬೆಯ ಮಾಹಿತಿದಾರ” ಇರುವ ಬಗ್ಗೆ ಬರೆದಿರುವ ಪತ್ರದ ಬಗ್ಗೆ ಉತ್ತರ ಪ್ರದೇಶ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.

ಉನ್ನತ ಅಧಿಕಾರಿಯೊಬ್ಬರು ಪತ್ರದ ಬಗ್ಗೆ ಸಮಗ್ರ ವಿವರಣೆ ಕೇಳಿದ್ದು, ಅದನ್ನು ಪರಿಶೀಲಿಸಿದಲ್ಲಿ, ಪೊಲೀಸರು ಅಪರಾಧಿಗಳಿಗೆ ಸಹಾಯ ಮಾಡುತ್ತಿರುವುದಕ್ಕೆ ಪ್ರಖರ ಪುರಾವೆಗಳು ಸಿಗಬಹುದು ಎನ್ನಲಾಗಿದೆ.

ಪೊಲೀಸರ ಹತ್ಯಾಕಾಂಡದ ನಂತರ ವಿಕಾಸ್ ದುಬೆ ಕಾಣೆಯಾಗಿದ್ದಾನೆ.

ಸಾಮಾಜಿಕ ಮಾಧ್ಯಮದಲ್ಲಿ ವ್ಯಾಪಕವಾಗಿ ಹರಡಿರುವ ಈ ಪತ್ರದ ವಿವಾದ ಹಾಗೂ ಆಕ್ರೋಶದ ಮಧ್ಯೆ,  ಕಾನ್ಪುರದ ಪೊಲೀಸ್ ಮುಖ್ಯಸ್ಥ ಸೋಮವಾರ ರಾತ್ರಿ ಇದು ಪೊಲೀಸ್ ದಾಖಲೆಗಳಲ್ಲಿ ಕಂಡುಬಂದಿಲ್ಲ ಆದರೆ ಅದಕ್ಕಾಗಿ ಶೋಧ ನಡೆಯುತ್ತಿದೆ ಎಂದು ಹೇಳಿದ್ದಾರೆ.

ವಿಕಾಸ್ ದುಬೆ ಮತ್ತು ಅವರ ಜನರು ಹೊಂಚುಹಾಕಿ ಗುಂಡಿಕ್ಕಿ ಕೊಂದಿದ್ದ ಉಪ ಪೊಲೀಸ್ ವರಿಷ್ಠಾಧಿಕಾರಿ (ಡಿಎಸ್ಪಿ) ದೇವೇಂದ್ರ ಕುಮಾರ್ ಮಿಶ್ರಾ ಅವರು ಮೂರು ತಿಂಗಳ ಹಿಂದೆ ಆಗಿನ ಕಾನ್ಪುರದ ಪೊಲೀಸ್ ಮುಖ್ಯಸ್ಥ ಅನಂತ್ ಡಿಯೋ ತಿವಾರಿ ಅವರಿಗೆ ‘ಈ ಪತ್ರವನ್ನು ಬರೆದಿದ್ದಾರೆ’ ಎಂದು ಹೇಳಲಾಗಿದೆ.

ದರೋಡೆಕೋರರಿಗೆ ಪೊಲೀಸರು ಸಹಾಯ ಮಾಡುವ ಬಗ್ಗೆ ಮತ್ತು ವಿಶೇಷವಾಗಿ ಈಗಾಗಲೇ ಅಮಾನತುಗೊಂಡಿರುವ ಚೌಬೆಪುರ ಪೊಲೀಸ್ ಠಾಣೆಯ ಉಸ್ತುವಾರಿ ಪೊಲೀಸ್ ಅಧಿಕಾರಿ ವಿನಯ್ ತಿವಾರಿ ಬಗ್ಗೆ ಅಧಿಕಾರಿ ಅದರಲ್ಲಿ  ದೂರು ನೀಡಿದ್ದರು ಎಂದು ಹೇಳಲಾಗುತ್ತಿದೆ.

ವಿನಯ್ ತಿವಾರಿ ಅವರು ಅಪರಾಧಿಗೆ ಸಹಾಯ ಮಾಡಿ, ಪೊಲೀಸರ ತನಿಖೆಯಿಂದ ಅವರನ್ನು ರಕ್ಷಿಸಿದ್ದಾರೆ ಎಂದು ಮಿಶ್ರಾ ಆರೋಪಿಸಿದ್ದಾರೆ. ಆ ಪೊಲೀಸ್ ಅಧಿಕಾರಿಯ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕೆಂದು ಪತ್ರದಲ್ಲಿ ಕೋರಲಾಗಿದೆ.

“ಅಂತಹ ಪತ್ರವು ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿದೆ ಎಂದು ನನಗೆ ತಿಳಿದಿದೆ. ಡಿಎಸ್ಪಿ ಕಚೇರಿ ಮತ್ತು ಕಾನ್ಪುರ ಎಸ್ಎಸ್ಪಿ (ಹಿರಿಯ ಪೊಲೀಸ್ ವರಿಷ್ಠಾಧಿಕಾರಿ) ರವಾನೆ ಮತ್ತು ಸ್ವೀಕರಿಸುವ ವಿಭಾಗಗಳಲ್ಲಿ ಪ್ರಾಥಮಿಕ ಶೋಧವನ್ನು ನಡೆಸಲಾಯಿತು. ಇಲ್ಲಿಯವರೆಗೆ ಈ ಪತ್ರದ ಯಾವುದೇ ದಾಖಲೆಗಳು ಸಿಗಲಿಲ್ಲ. ಆದರೆ ನಾವು ಅದರೊಂದಿಗೆ ಇನ್ನೂ ಹೆಚ್ಚಿನ ವಿವರಗಳನ್ನು ಹುಡುಕುತ್ತಿದ್ದೇವೆ. ಹೆಚ್ಚಿನ ವಿವರಗಳನ್ನು ಸಿಕ್ಕರೆ ಅದನ್ನು ಹಂಚಿಕೊಳ್ಳಲು ನಾವು ಹಿಂಜರಿಯುವುದಿಲ್ಲ” ಎಂದು ಕಾನ್ಪುರದ ಪೊಲೀಸ್ ಮುಖ್ಯಸ್ಥ ದಿನೇಶ್ ಕುಮಾರ್ ಪಿ ಹೇಳಿದ್ದಾರೆ.

ಕೊಲೆ ಪ್ರಕರಣದಲ್ಲಿ ವಿಕಾಸ್ ದುಬೆಯನ್ನು ಬಂಧಿಸುವ ಉದ್ದೇಶದಿಂದ ಮೂರು ಪೊಲೀಸ್ ಠಾಣೆಗಳಿಂದ 50 ಪೊಲೀಸರ ತಂಡವನ್ನು ಮಿಶ್ರಾ ಮುನ್ನಡೆಸಿದರು. ದುಬೆ ವಿರುದ್ಧ ಕೊಲೆ, ಅಪಹರಣ, ಸುಲಿಗೆ ಮತ್ತು ಗಲಭೆ ಸೇರಿದಂತೆ 60 ಪ್ರಕರಣಗಳು ದಾಖಲಾಗಿದೆ.

ಪೊಲೀಸರು ನಡೆಸುವ ದಾಳಿಯ ಬಗ್ಗೆ ದುಬೆಗೆ ಮಾಹಿತಿ ನೀಡಲಾಗಿತ್ತು. ಹಾಗಾಗಿ ಪೊಲೀಸರ ಮೇಲೆ ಹಲ್ಲೆ ನಡೆಸಲು ಸಶಸ್ತ್ರ ಗ್ಯಾಂಗ್‌ನೊಂದಿಗೆ ಅವರು ಸಿದ್ಧರಾಗಿದ್ದರು. ಈ ಅಪರಾಧಿಯೊಂದಿಗಿನ ಸಂಪರ್ಕದ ಅನುಮಾನದ ಮೇಲೆ ನಾಲ್ವರು ಪೊಲೀಸರನ್ನು ಅಮಾನತು ಮಾಡಲಾಗಿದೆ.

ಪೊಲೀಸರ ಮಾರಣಹೋಮ ನಡೆದು ನಾಲ್ಕು ದಿನಗಳು ಕಳೆದರೂ ವಿಕಾಸ್ ದುಬೆಯನ್ನು ಉತ್ತರ ಪ್ರದೇಶದ ಪೊಲೀಸರು ಇನ್ನೂ ಬಂಧಿಸಿಲ್ಲ. ಸೋಮವಾರ ಅವರ ಮಾಹಿತಿ ನೀಡಿದವರ ಬಹುಮಾನವನ್ನು 2.5 ಲಕ್ಷ ರೂ.ಗೆ ಏರಿಸಲಾಯಿತು. ಇಲ್ಲಿಯವರೆಗೆ ದುಬೆ ಇಲ್ಲಿದ್ದಾರೆ ಎಂಬ ಬಗ್ಗೆ ಯಾವುದೇ ಮಾಹಿತಿ ಇಲ್ಲ.

ನಿನ್ನೆ ಸಂಜೆ ಕಾನ್ಪುರ ಪೊಲೀಸ್ ಪತ್ರಿಕಾ ಪ್ರಕಟಣೆಯಲ್ಲಿ ಇನ್ನೂ ಮೂರು ಬಂಧನಗಳಾಗಿರುವುದು ದೃಢಪಟ್ಟಿದೆ. ಅವರಲ್ಲಿ ಒಬ್ಬರು ದುಬೆಯ ನೆರೆಹೊರೆಯವರಾಗಿದ್ದು, ಇನ್ನೊಬ್ಬರು ದುಬೆಯ ಸಹಾಯಕ ಮತ್ತು ಮೂರನೇ ವ್ಯಕ್ತಿ ಮಹಿಳೆ ಎಂದು ತಿಳಿದುಬಂದಿದೆ.

ಅಮಾನತುಗೊಂಡ ಪೊಲೀಸರು ಅದೇ ಪೊಲೀಸ್ ಠಾಣೆ ಚೌಬೆಪುರದವರಾಗಿದ್ದು, ದುಬೆಯ ಜೊತೆಗೆ ನಿಯಮಿತ ಸಂಪರ್ಕ ಹೊಂದಿದ್ದಾರೆ ಎಂಬ ಆರೋಪವಿದೆ. ಕಳೆದ ನಾಲ್ಕು ದಿನಗಳಲ್ಲಿ 100 ಕ್ಕೂ ಹೆಚ್ಚು ಪೊಲೀಸರ ಕರೆ ದಾಖಲೆಗಳನ್ನು ಸ್ಕ್ಯಾನ್ ಮಾಡಲಾಗಿದೆ.


ಇದನ್ನೂ ಓದಿ: ವಿಕಾಸ್ ದುಬೆಗೆ ‘ದಾಳಿಯ ಮಾಹಿತಿ ಸೋರಿಕೆ’: 3 ಕಾನ್ಪುರ ಪೊಲೀಸರ ಮೇಲೆ ಶಂಕೆ – ಅಮಾನತು


 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜ್ಯಸಭಾ ಚುನಾವಣೆ: ಕರ್ನಾಟದಿಂದ ಆಯ್ಕೆಯಾದ ಪ್ರತಿನಿಧಿಗಳಿಂದ ರಾಜ್ಯಕ್ಕೆ ಲಾಭವಾಗಿದೆಯೇ?

ರಾಜ್ಯಸಭೆಗೆ ಪ್ರತಿಬಾರಿ ಚುನಾವಣೆ ನಡೆಯುವಾಗಲೂ ಈ ಚರ್ಚೆಗಳು ಸಾಮಾನ್ಯ. ಕನ್ನಡೇತರರು ಇಲ್ಲಿಂದ ಆಯ್ಕೆಯಾಗಿ ಇಲ್ಲಿಯ ಸಮಸ್ಯೆಗಳ ಬಗ್ಗೆ ಮಾತನಾಡುವುದಿಲ್ಲ ಎಂಬ ವಾಸ್ತವದ ಜೊತೆಜೊತೆಗೆ, ರಾಜ್ಯಸಭೆಗೆ ಆಯ್ಕೆಯಾಗುವ ಕನ್ನಡವರಾದರೂ ಮಾತನಾಡುತ್ತಾರಾ? ಎಂದರೆ ಅದಕ್ಕೂ ನಮ್ಮಲ್ಲಿ...

ಬಂಗಾಳದಲ್ಲಿ ಬಿಜೆಪಿ ಬೆಂಬಲಿಗರ ಕ್ರೌರ್ಯ: ಅಭಿಷೇಕ್ ಬಳಿಕ ಕಲ್ಯಾಣ್‌ ಬ್ಯಾನರ್ಜಿ ಮೇಲೆ ಮಾರಣಾಂತಿಕ ದಾಳಿ

ಪಶ್ಚಿಮ ಬಂಗಾಳದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಸಂಸದ ಕಲ್ಯಾಣ್ ಬ್ಯಾನರ್ಜಿ ಅವರು ಭಾನುವಾರ (ಮೇ 31), ಹೂಗ್ಲಿ ಜಿಲ್ಲೆಯಲ್ಲಿ ನಡೆದಿದ್ದ ಚುನಾವಣೋತ್ತರ ಹಿಂಸಾಚಾರದಲ್ಲಿ ಕಾರ್ಯಕರ್ತರ ಬಂಧನದ ವಿರುದ್ಧ ಮನವಿ ಪತ್ರ ಸಲ್ಲಿಸಲು ಭೇಟಿ...

ಬಸ್ತಾರ್‌: ಬುಡಕಟ್ಟು ಕ್ರಿಶ್ಚಿಯನ್ ಕುಟುಂಬಗಳಿಗೆ ಬೆದರಿಕೆ, ಥಳಿತ, ಹಿಂದೂ ಧರ್ಮ ಸ್ವೀಕರಿಸಲು ಬಲವಂತ: ಘನತೆಯ ಬದುಕಿಗಾಗಿ ಆದಿವಾಸಿಗಳ ಹೋರಾಟ

ಛತ್ತೀಸ್‌ಗಢದ ದಟ್ಟ ಅರಣ್ಯಗಳು ಮತ್ತು ಕಡಿದಾದ ಬೆಟ್ಟಗಳಿಂದ ಆವೃತವಾಗಿರುವ ಬಸ್ತಾರ್ ಕಣಿವೆಯು ತನ್ನ ವಿಶಿಷ್ಟ ಬುಡಕಟ್ಟು ಸಂಸ್ಕೃತಿ ಮತ್ತು ಪ್ರಾಕೃತಿಕ ಸಂಪತ್ತಿಗೆ ಹೆಸರುವಾಸಿ. ಆದರೆ ಇತ್ತೀಚಿನ ವರ್ಷಗಳಲ್ಲಿ, ಈ ಪ್ರಶಾಂತ ಭೂಭಾಗವು ತೀವ್ರಗಾಮಿ...

ಗಾಝಾದಲ್ಲಿ ರಕ್ತಸಿಕ್ತ ಈದ್: ಇಸ್ರೇಲ್ ಭೀಕರ ದಾಳಿಗೆ 26 ಪ್ಯಾಲೆಸ್ಟೀನಿಯನ್ನರು ಬಲಿ, ವಿಶ್ವಸಂಸ್ಥೆ ತೀವ್ರ ಆತಂಕ

ಗಾಝಾ: ಇಸ್ಲಾಂ ಧರ್ಮದ ಅತ್ಯಂತ ಪವಿತ್ರ ದಿನಗಳಲ್ಲಿ ಒಂದಾದ ‘ಈದ್ ಅಲ್-ಅಧಾ’ ಹಬ್ಬದ ಸಂದರ್ಭದಲ್ಲೂ ಗಾಝಾ ಪಟ್ಟಿಯಲ್ಲಿ ರಕ್ತಪಾತ ಮುಂದುವರಿದಿದ್ದು, ಹಬ್ಬದ ಮುನ್ನಾದಿನದಿಂದ ಆರಂಭಿಸಿ ಇಸ್ರೇಲ್ ಪಡೆಗಳು ನಡೆಸಿದ ಸರಣಿ ದಾಳಿಗಳಲ್ಲಿ ಕನಿಷ್ಠ...

ಜನರಿಗೆ ಇಂಧನ ಉಳಿಸುವ ಪಾಠ, ಪ್ರಧಾನಿಗೆ ರೋಡ್‌ಶೋಗಳ ಆಟ

ಮೇ 10 ರಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಸಾರ್ವಜನಿಕರಲ್ಲಿ ಮಿತವ್ಯಯದ ಅಪೀಲು ಮಾಡಿದ್ದು, ಇಂಧನ ಬಳಕೆಯನ್ನು ಕನಿಷ್ಠ ಮಟ್ಟಕ್ಕೆ ಇಳಿಸುವಂತೆ ಕೋರಿದ್ದರು. ಜನರು ಖಾಸಗಿ ವಾಹನಗಳ ಬಳಕೆಯನ್ನು ಬಿಟ್ಟು ಸಾರ್ವಜನಿಕ ಸಾರಿಗೆಯನ್ನು...

ಏಷ್ಯನ್ ಗೇಮ್ಸ್‌ ಟ್ರಯಲ್ಸ್‌ನಲ್ಲಿ ಸ್ಪರ್ಧಿಸಲು ವಿನೇಶ್ ಫೋಗಟ್‌ಗೆ ಅನುಮತಿಸಿದ ಭಾರತೀಯ ಕುಸ್ತಿ ಒಕ್ಕೂಟ

ಮಾಜಿ ವಿಶ್ವ ಚಾಂಪಿಯನ್‌ಶಿಪ್ ಪದಕ ವಿಜೇತೆ ವಿನೇಶ್ ಫೋಗಟ್ ಅವರು (ಮೇ 30) ಏಷ್ಯನ್ ಗೇಮ್ಸ್ ಆಯ್ಕೆ ಟ್ರಯಲ್ಸ್‌ನಲ್ಲಿ ಮಹಿಳೆಯರ 53 ಕೆಜಿ ವಿಭಾಗದಲ್ಲಿ ಸ್ಪರ್ಧಿಸಲು ಅವಕಾಶ ಪಡೆದಿದ್ದಾರೆ. ಭಾರತೀಯ ಕುಸ್ತಿ ಒಕ್ಕೂಟ...

Uttarakhand | ಬಜರಂಗದಳದ ಕಾರ್ಯಕರ್ತರು ಈಗ ದ್ವೇಷ ಬಿತ್ತುವ ವೃತ್ತಿಪರ ಇನ್‌ಫ್ಲ್ಯುಯೆನ್ಸರ್ಸ್!

ಈ ವರ್ಷದ ಆರಂಭದಲ್ಲಿ ಉತ್ತರಾಖಂಡದ ಕೋಟದ್ವಾರದಲ್ಲಿ ಹಿಂದುತ್ವ ಗುಂಪೊಂದು ವೃದ್ಧ ಮುಸ್ಲಿಂ ವ್ಯಕ್ತಿಯೊಬ್ಬರ ಅಂಗಡಿಗೆ ನುಗ್ಗಿ, ಅಂಗಡಿಯ ಹೆಸರಾದ ‘ಬಾಬಾ’ ಎಂಬುವುದನ್ನು ಬದಲಾಯಿಸುವಂತೆ ಒತ್ತಾಯಿಸಿತ್ತು. ‘ಬಾಬಾ’ ಎಂಬುವುದು ‘ಹಿಂದೂ’ ಹೆಸರಾಗಿದೆ ಎಂದು ಆ...

​ನಿಗಿ ನಿಗಿ ಕೆಂಡದಂತಾಗಿರುವ ಬಿಡದಿ, ಡಿಕೆಶಿಗೆ ಬಿಸಿ ತುಪ್ಪದಂತಾದ ರೈತರು

​ಬದಲಾದ ರಾಜಕೀಯ ಸಂದರ್ಭದಲ್ಲಿ ಕರ್ನಾಟಕದ ಮುಂದಿನ ಮುಖ್ಯಮಂತ್ರಿ ಎಂದೇ ಬಿಂಬಿತವಾಗಿರುವ ಡಿ.ಕೆ. ಶಿವಕುಮಾರ್ ಪ್ರತಿಷ್ಠೆಯಾಗಿ ತೆಗೆದುಕೊಂಡಿರುವ ಬಿಡದಿಯ ಟೌನ್‌ಶಿಪ್ ಯೋಜನೆಯ ವಿರುದ್ಧ ನಡೆಯುತ್ತಿರುವ ರೈತರ ಹೋರಾಟ ದಿನದಿಂದ ದಿನಕ್ಕೆ ಉಗ್ರ ರೂಪ ಪಡೆಯುತ್ತಿದೆ. ​ಭೂಸ್ವಾಧೀನದ...

ಪ್ರಜಾಪ್ರಭುತ್ವವನ್ನು ಹತ್ತಿಕ್ಕಲು ‘SIR’ ಅನ್ನೇ ಅಸ್ತ್ರವನ್ನಾಗಿಸಿಕೊಂಡ ನರೇಂದ್ರ ಮೋದಿ!

ಪಶ್ಚಿಮ ಬಂಗಾಳದ ವಿಧಾನಸಭಾ ಚುನಾವಣೆಯ ಫಲಿತಾಂಶ ಪ್ರಕಟವಾದ ತಕ್ಷಣ (ಮೇ 4 ರಂದು), ಕಾಳೀಘಾಟ್‌ನಲ್ಲಿರುವ ತಮ್ಮ ನಿವಾಸದಲ್ಲಿ ಸುದ್ದಿಗೋಷ್ಠಿ ನಡೆಸಿದ ಮಾಜಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅತ್ಯಂತ ಆಕ್ರೋಶದಿಂದ ಮಾತನಾಡಿದ್ದರು. ಅಷ್ಟೇ ಅಲ್ಲದೆ,...

ಕೇರಳದಲ್ಲಿ ಶಾಲಾ ಬಾಲಕಿಯರಿಗೆ ಮೂರು ದಿನ ಮುಟ್ಟಿನ ರಜೆ, ಅಸಂಘಟಿತ ವಲಯದ ಮಹಿಳೆಯರಿಗೆ ಆರು ತಿಂಗಳ ಹೆರಿಗೆ ರಜೆ ಘೋಷಣೆ 

ತಿರುವನಂತಪುರಂ: ಕೇರಳದ ವಿ.ಡಿ. ಸತೀಶನ್ ನೇತೃತ್ವದ ಕಾಂಗ್ರೆಸ್ ಸರ್ಕಾರವು ಮಹಿಳೆಯರಿಗೆ ಹಲವಾರು ಕಲ್ಯಾಣ ಕ್ರಮಗಳನ್ನು ಘೋಷಿಸಿದೆ, ಇದರಲ್ಲಿ ಶಾಲಾ ವಿದ್ಯಾರ್ಥಿಗಳಿಗೆ ಮೂರು ದಿನಗಳ ಮಾಸಿಕ ಮುಟ್ಟಿನ ರಜೆ, ಕೆಲಸದ ಸ್ಥಳಗಳಲ್ಲಿ ಮಹಿಳೆಯರಿಗೆ ಸಮಾನ...