Homeಮುಖಪುಟಚೀನಾ ಮುಂದಿಟ್ಟ ಎರಡು ಹೆಜ್ಜೆಯಲ್ಲಿ ಒಂದು ಹೆಜ್ಜೆ ಹಿಂದಿಟ್ಟಿದೆ, ಅದು ಹಿನ್ನೆಡೆಯೋ? ಮುನ್ನೆಡೆಯೋ?; ಜಸ್ಟ್‌ ಆಸ್ಕಿಂಗ್

ಚೀನಾ ಮುಂದಿಟ್ಟ ಎರಡು ಹೆಜ್ಜೆಯಲ್ಲಿ ಒಂದು ಹೆಜ್ಜೆ ಹಿಂದಿಟ್ಟಿದೆ, ಅದು ಹಿನ್ನೆಡೆಯೋ? ಮುನ್ನೆಡೆಯೋ?; ಜಸ್ಟ್‌ ಆಸ್ಕಿಂಗ್

ಮೋದಿಯವರು ಲಡಾಖ್‌‌ಗೆ ಕೇವಲ ಭೇಟಿ ಕೊಟ್ಟ ಮಾತ್ರಕ್ಕೆ ಚೀನಿಯರು ಹೆದರಿ ಹಿಂದೆಸರಿದರು ಎಂಬ ಮೋದಿ ಭಕ್ತರ ಪ್ರಚಾರ ದೇಶ ದ್ರೋಹವಲ್ಲವೇ?

- Advertisement -
- Advertisement -

ಚೀನಾ ಸೈನಿಕರು ಈಗಲೂ ಭಾರತವು ತನ್ನದೆಂದು ಪ್ರತಿಪಾದಿಸುವ ಪ್ರದೇಶದಲ್ಲೇ ಇದ್ದಾರೆ… ಹಾಗಿದ್ದಲ್ಲಿ ಯಾರನ್ನು ಮರುಳು ಮಾಡುವ ಉದ್ದೇಶದಿಂದ ಮೋದಿ ಸರ್ಕಾರ, ಅದರ ಸಾಕುನಾಯಿ ಮಾಧ್ಯಮಗಳು ಮತ್ತು ಭಕ್ತರು ಗಡಿಯಲ್ಲೆಲ್ಲೂ ಕಾಣದ ಮೋದಿಯ ಗುಡುಗು-ಸಿಡಿಲು ಕಂಪನಗಳನ್ನೂ ಸೃಷ್ಟಿಸುತ್ತಿದ್ದಾರೆ?


ನಿನ್ನೆಯಿಂದ ಎಲ್ಲಾ ಮಾಧ್ಯಮಗಳು ಗಾಲ್ವಾನ್ ಪ್ರಾಂತ್ಯದಿಂದ ಚೀನಾ ಸೈನಿಕರು ಹಿಂದೆ ಸರಿಯುತ್ತಿದ್ದಾರೆ ಎಂದು ವರದಿ ಮಾಡುತ್ತಿವೆ. ಭಾರತ ಮತ್ತು ಚೀನಾದ ವಿಶೇಷ ಪ್ರತಿನಿಧಿಗಳಾದ ಅಜಿತ್ ದೋವಲ್ ಹಾಗು ವಾಂಗ್ ಯೀ ಟೆಲಿಫೋನ್ ಮಾತುಕತೆ ನಡೆಸಿದ ನಂತರ ಈ ಬೆಳವಣಿಗೆಯಾಗಿವೆ ಎಂದು ಹೇಳಲಾಗುತ್ತಿದೆ.

ಈ ಸಮಯದಲ್ಲಿ ಎರಡು ಹೆಜ್ಜೆ ಮುಂದಿಟ್ಟಿದ್ದ ಚೀನಾ ಒಂದು ಹೆಜ್ಜೆ ಹಿಂದೆ ಸರಿದರೆ, ಅದು ಹಿನ್ನೆಡೆಯೋ? ಮುನ್ನೆಡೆಯೋ? ಎಂದು ಅವಲೋಕಿಸಬೇಕಾಗಿದೆ.

ಆದರೆ ಎರಡು ದೇಶಗಳ ಸರ್ಕಾರಗಳು ಈವರೆಗೆ ಯಾವ ಅಧಿಕೃತ ಹೇಳಿಕೆಗಳನ್ನು ನೀಡಿಲ್ಲ. ಬದಲಿಗೆ ಭಾರತೀಯ ಮಾಧ್ಯಮಗಳು ಸೇನೆಯಲ್ಲಿನ ಅನಾಮಿಕ ಸರ್ಕಾರಿ “ಮೂಲಗಳನ್ನು” ಆಧರಿಸಿ ವರದಿ ಮಾಡಿವೆ. ಎಲ್ಲಾ ಮಾಧ್ಯಮಗಳಲ್ಲೂ ಈ ಸುದ್ದಿ ಏಕಕಾಲದಲ್ಲಿ ಪ್ರಕಟವಾಗಿರುವುದು ನೋಡಿದರೆ ಕೇಂದ್ರ ಸರ್ಕಾರ ಮತ್ತು ಸೇನೆಯು ಈ ಮೂಲಗಳಿಗೆ ಅನಾಮಿಕವಾಗಿ ಹೇಳಿಕೆ ನೀಡಲು ಅಧಿಕೃತ ಅನುಮತಿ ನೀಡಿರುವುದು ಸ್ಪಷ್ಟವಾಗಿದೆ. ಆದರೆ ಅಧಿಕೃತವಾದ ಹೇಳಿಕೆ ಏಕಿಲ್ಲ ಎಂಬ ಪ್ರಶ್ನೆ ಸಹಜವಾಗಿ ಹುಟ್ಟುತ್ತದೆ.

ಆದ್ದರಿಂದಲೇ ಭಾರತೀಯ ಸೇನೆಯ ನಿವೃತ್ತ ಕರ್ನಲ್ ಅಜಯ್ ಶುಕ್ಲಾ ಅವರು ಈ ಸುದ್ದಿಯ ಬಗ್ಗೆ ಕೆಲವು ಗಂಭೀರ ಪ್ರಶ್ನೆಗಳನ್ನು ಎತ್ತಿದ್ದಾರೆ :

ಈ ಸುದ್ದಿಯು ನಿಜವೇ ಆಗಿದ್ದಲ್ಲಿ ನಾನು
ಅ) ಸರ್ಕಾರದ ಅಧಿಕೃತ ಹೇಳಿಕೆಯನ್ನು ನೋಡಬಯಸುತ್ತೇನೆ. ಅನಾಮಿಕ ಮೂಲದ ಸುದ್ದಿಯನ್ನಲ್ಲ.
ಆ) ಚೀನಿಯರು ಹಿಂದಿರುಗುತ್ತಿರುವುದನ್ನು ಧೃಡಪಡಿಸುವ ಉಪಗ್ರಹ ಚಿತ್ರ ಹಾಗು
ಇ ) ಭಾರತೀಯ ಸೈನಿಕರು ಹಿಂದೆ ಸರಿದಿದ್ದು ಎಲ್ಲಿಗೆ ಎಂಬ ಪ್ರಶ್ನೆಗಳಿಗೆ ಉತ್ತರ ಬಯಸುತ್ತೇನೆ ಎಂದು ಕರ್ನಲ್ ಕೇಳಿದ್ದಾರೆ.

ಇದರ ಜೊತೆಗೆ ದೇಶ ಭಕ್ತಿಗೂ ಮೋದಿ ಭಕ್ತಿಗೂ ವ್ಯತ್ಯಾಸ ಗೊತ್ತಿರುವವರಿಗೂ ಹಾಗು ತಮ್ಮ ಬುದ್ಧಿಯನ್ನು ಮತ್ತು ಕಾಮನ್ ಸೆನ್ಸನ್ನು ಇತರರಿಗೆ ಒಪ್ಪಿಸದವರಿಗೂ ಇನ್ನು ಕೆಲವು ಪ್ರಶ್ನೆಗಳು ಮೂಡುವುದು ಸಹಜ.

ಅನಾಮಿಕ ಮೂಲದ ಹೇಳಿಕೆಯ ಪ್ರಕಾರ ಭಾರತ ಸೇನೆಯು ಕೂಡಾ ಗಾಲ್ವಾನ್ ಘರ್ಷಣೆ ನಡೆದ PP 14 ಪ್ರದೇಶದಿಂದ 1.8 ಕಿ.ಮೀ ಯಷ್ಟು ಹಿಂದೆ ಸರಿದಿದೆ.

ಇದರ ಅರ್ಥವೇನು?

ಈವರೆಗೆ ಮೋದಿ ಸರ್ಕಾರವು ಗಾಲ್ವಾನ್ ಘರ್ಷಣೆ ನಡೆದ ಪ್ರದೇಶವು ( PP 14 ) ವಿವಾದಾತೀತವಾಗಿ ಭಾರತ ಪ್ರದೇಶವಾಗಿದೆಯೆಂದು, ಚೀನಾ ಭಾರತದ ಸರಹದ್ದಿನೊಳಗೆ ಅತಿಕ್ರಮ ಪ್ರವೇಶ ಮಾಡಿದ್ದರಿಂದ ಅಲ್ಲಿ ಘರ್ಷಣೆಯುಂಟಾಯಿತೆಂದು ಹೇಳಿಕೊಂಡು ಬಂದಿದೆ.

ಹಾಗಿದ್ದಲ್ಲಿ PP 14 ಪ್ರದೇಶದಿಂದ 1.8 ಕಿಮಿ ಭಾರತ ಮತ್ತು ಚೀನಾ ಎರಡು ಹಿಂದೆ ಸರಿದಿದೆ ಎಂದರೆ ಭಾರತವು ಕೂಡಾ ವಿವಾದೀತವಾಗಿ ತನ್ನ ಸುಪರ್ದಿನಲ್ಲಿದ್ದ ಪ್ರದೇಶವನ್ನು ಬಿಟ್ಟು ಹಿಂದೆ ಸರಿದಿದೆ ಎಂದಾಗಲಿಲ್ಲವೇ?

ಹಾಗಿದ್ದ ಮೇಲೆ ಮೋದಿಯವರು ಲಡಾಖ್‌‌ಗೆ ಕೇವಲ ಭೇಟಿ ಕೊಟ್ಟ ಮಾತ್ರಕ್ಕೆ ಚೀನಿಯರು ಹೆದರಿ ಹಿಂದೆಸರಿದರು ಎಂಬ ಮೋದಿ ಭಕ್ತರ ಪ್ರಚಾರ ದೇಶ ದ್ರೋಹವಲ್ಲವೇ?

ಗಾಲ್ವಾನ್ ಪ್ರದೇಶಕ್ಕಿಂತ ಇನ್ನು ತೀವ್ರವಾದ ಗಡಿ ವಿವಾದವಿರುವ ಪ್ರದೇಶ ಪಾಂಗಾಂಗ್ ಸರೋವರ ಪ್ರದೇಶ.

ಅಲ್ಲಿ ಸರೋವರದ ಪೂರ್ವಭಾಗದ ಚೀನಾದ ಕಡೆ ಇರುವ ಫಿಂಗರ್ 8 ಎಂಬಲ್ಲಿಯವರೆಗೆ ಭಾರತ ತನ್ನ ಪ್ರದೇಶವೆಂದು ವಾದಿಸಿದರೆ, ಸರೋವರದ ಪಶ್ಚಿಮಕ್ಕೆ ಭಾರತದ ಕಡೆ ಇರುವ ಫಿಂಗರ್ 4 ರ ವರೆಗೆ ತನ್ನ ಪ್ರದೇಶವೆಂದು ಚೀನಾ ವಾದಿಸುತ್ತದೆ.

ಫಿಂಗರ್ 4 ಹಾಗೂ ಫಿಂಗರ್ 8 ರ ನಡುವೆ 8 ಕಿಮಿ ವ್ಯಾಪ್ತಿಯ ಪ್ರದೇಶವಿದ್ದು ಚೀನಾವು ಫಿಂಗರ್ 4 ರಿಂದ ಒಂದು ಕಿಮಿ ದೂರ ಮಾತ್ರ ಹಿಂದೆ ಸರಿದಿದೆ ಎಂದು ಭಾರತೀಯ ‌ಸೇನಾ ಮೂಲವು ತಿಳಿಸುತ್ತದೆ .

ಅಂದರೆ ಚೀನಾ ಸೈನಿಕರು ಈಗಲೂ ಭಾರತವು ತನ್ನದೆಂದು ಪ್ರತಿಪಾದಿಸುವ ಪ್ರದೇಶದಲ್ಲೇ ಇದ್ದಾರೆ…..

ಹಾಗಿದ್ದಲ್ಲಿ ಯಾರನ್ನು ಮರುಳು ಮಾಡುವ ಉದ್ದೇಶದಿಂದ ಮೋದಿ ಸರ್ಕಾರ, ಅದರ ಸಾಕುನಾಯಿ ಮಾಧ್ಯಮಗಳು ಮತ್ತು ಭಕ್ತರು ಗಡಿಯಲ್ಲೆಲ್ಲೂ ಕಾಣದ ಮೋದಿಯ ಗುಡುಗು-ಸಿಡಿಲು ಕಂಪನಗಳನ್ನೂ ಸೃಷ್ಟಿಸುತ್ತಿದ್ದಾರೆ?

ಒಂದು ದೀರ್ಘಕಾಲೀನ ಶಾಂತಿ ಮಾತುಕತೆಯ ಭಾಗವಾಗಿ ಈ ಬಗೆಯ ತಾತ್ಕಾಲಿಕ ಹಿಂದೆ ಸರಿಕೆಯಲ್ಲಿ ತಪ್ಪಿಲ್ಲ.

ಅದರಲ್ಲೂ ಭಾರತ ಮತ್ತು ಚೀನಾ ನಡುವೆ ಗಡಿ ಭಾಗಗಳು ನಿಖರವಾಗಿ ಗುರುತುಪಡಿಸಿಲ್ಲವಾದ್ದರಿಂದ ಇಂಥಾ ರಾಜತಾಂತ್ರಿಕ-ಸೈನಿಕ ಕ್ರಮಗಳಿಗೆ ಸರ್ಕಾರ ಮುಂದಾಗಬೇಕಾಗುತ್ತದೆ.

ಆದರೆ ಸತ್ಯಕ್ಕೆ ತದ್ವಿರುದ್ಧವಾದ ಹೇಳಿಕೆಯನ್ನು ಕೊಟ್ಟು ಜನರಲ್ಲಿ ರಾಜಕೀಯ ದುರುದ್ದೇಶಗಳಿಗೆ ಹುಸಿ ಗೆಲುವಿನ ಉನ್ಮಾದವನ್ನು ಸೃಷ್ಟಿಸುವುದು ತಪ್ಪು. ಅಷ್ಟೇ…

ಎಲ್ಲಕ್ಕಿಂತ ಹೆಚ್ಚಾಗಿ ಈ ಗಾಲ್ವಾನ್ ಮತ್ತು ಹಿಂದಿನ ದೋಕ್ಲಾಮ್ ಘರ್ಷಣೆಗಳಿಂದ ಮೋದಿ ಸರ್ಕಾರ ಸಾಕಷ್ಟು ಪಾಠಗಳನ್ನು ಕಲಿಯಬೇಕಿದೆ.

ಈ ಭೂಭಾಗದಲ್ಲಿ ಅಮೇರಿಕ ಸಾಮ್ರಾಟನ ಸಾಮಂತನಾಗಿ ಕೆಲಸ ಮಾಡುವುದು ಅಮೇರಿಕಾದ ಹಿತಾಸಕ್ತಿಗಳಿಗೆ ಪೂರಕವೇ ಹೊರತು ಭಾರತದ ಹಿತಾಸಕ್ತಿಗೆ ಮಾರಕವೆಂಬುದನ್ನು ಈಗಲಾದರೂ ಅರ್ಥಮಾಡಿಕೊಳ್ಳುವ ಅಗತ್ಯವಿದೆ.

ಅಲ್ಲವೇ?; ಜಸ್ಟ್ ಆಸ್ಕಿಂಗ್


ಓದಿ: ಅರುಣಾಚಲದ ಮೇಲೆ ಚೀನಾ ಕಣ್ಣು?; ಬಹುಜನ ಭಾರತ


 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...

ಏಕರೂಪ ನಾಗರಿಕ ಸಂಹಿತೆಯನ್ನು ಸಂಸತ್ತಿನ ಬದಲು ರಾಜ್ಯಗಳ ಮೂಲಕವೇ ಜಾರಿಗೆ ಅಮಿತ್ ಶಾ ಮುಂದಾಗಿದ್ದೇಕೆ?

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೆಪ್ಟೆಂಬರ್ 13ರಂದು ಮುಂಬೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ, 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ಮತ್ತು ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ...

ದಿಶಾ ಸಾಲಿಯಾನ್ ಸಾವಿನ ಪ್ರಕರಣ : ಸಿಬಿಐ ಎಫ್ಐಆರ್‌ನಲ್ಲಿ ಆದಿತ್ಯ ಠಾಕ್ರೆ, ರಿಯಾ ಚಕ್ರವರ್ತಿ ಸೇರಿದಂತೆ ಹಲವರ ಹೆಸರು

ಬಾಂಬೆ ಹೈಕೋರ್ಟ್ ಆದೇಶದ ಮೇರೆಗೆ, ಕೇಂದ್ರೀಯ ತನಿಖಾ ದಳವು (ಸಿಬಿಐ) ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಅವರ ನಿಗೂಢ ಸಾವಿಗೆ ಸಂಬಂಧಿಸಿದಂತೆ ಸೋಮವಾರ(ಸೆ.14) ಎಫ್‌ಐಆರ್ ದಾಖಲಿಸಿದೆ. ಶಿವಸೇನೆ...

ಟಿ. ನರಸೀಪುರ ಇನ್ಸ್‌ಪೆಕ್ಟರ್‌ ಧನಂಜಯ್‌ ಹೇಳಿದ್ದರಲ್ಲಿ ತಪ್ಪೇನಿದೆ? ಸಾರ್ವಜನಿಕರಿಂದ ಬೆಂಬಲ

ಮಸೀದಿಗಳ ಮುಂಭಾಗ ಯಾವುದೇ ಪ್ರಚೋದನಕಾರಿ ಕೃತ್ಯಗಳಿಗೆ ಆಸ್ಪದ ನೀಡದೆ, ರಾತ್ರಿ 10:30ರ ಒಳಗಾಗಿ ಡಿಜೆ ಸದ್ದಿಲ್ಲದೆ ನಿಯಮಾನುಸಾರ ಮೆರವಣಿಗೆ ಮುಗಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಂಡ ಇನ್ಸ್‌ಪೆಕ್ಟರ್ ಧನಂಜಯ್ ಅವರ ಪರವಾಗಿ ಈಗ ಸಾಮಾಜಿಕ...

ಅತ್ಯಾಚಾರ ಪ್ರಕರಣದಲ್ಲಿ 10 ವರ್ಷ ಜೈಲು ಶಿಕ್ಷೆ: ‘ತೆಹಲ್ಕಾ’ ಸಂಸ್ಥಾಪಕ ತರುಣ್ ತೇಜ್‌ಪಾಲ್ ನ್ಯಾಯಾಲಯಕ್ಕೆ ಶರಣು, ಜೈಲಿಗೆ ರವಾನೆ 

ಪಣಜಿ: 2013ರ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್‌ನ ಗೋವಾ ಪೀಠದಿಂದ ದೋಷಿ ಎಂದು ತೀರ್ಪುಗೊಂಡು 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆಗೆ ಗುರಿಯಾಗಿರುವ ‘ತೆಹಲ್ಕಾ’ ಸಂಸ್ಥಾಪಕ ಹಾಗೂ ಮಾಜಿ ಪ್ರಧಾನ ಸಂಪಾದಕ...

ಹೈದರಾಬಾದ್‌ನಲ್ಲಿ ಗಣೇಶ ವಿಗ್ರಹ ಖರೀದಿ ವಿಚಾರಕ್ಕೆ ಘರ್ಷಣೆ: 34 ವರ್ಷದ ವ್ಯಕ್ತಿ ಸಾವು: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹ

ಹೈದರಾಬಾದ್: ಗಣೇಶ ಚತುರ್ಥಿ ಆಚರಣೆಗೆ ಮುನ್ನ ಗಣೇಶ ವಿಗ್ರಹ ಖರೀದಿಸುವ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ವಾಗ್ವಾದವು ಹಿಂಸಾತ್ಮಕ ಘರ್ಷಣೆಗೆ ತಿರುಗಿ 34 ವರ್ಷದ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಹೈದರಾಬಾದ್‌ನ ಜೋಡಿಮೆಟ್ಲಾ ಪ್ರದೇಶದಲ್ಲಿ ನಡೆದಿದೆ....

ಮಹಿಳಾ ಬೈಕರ್‌ಗೆ ಬೇಕಂತಲೇ ಢಿಕ್ಕಿ ಹೊಡೆದು ಪರಾರಿಯಾದ ಕಾರು ಸವಾರ! ಬೆಚ್ಚಿಬೀಳಿಸುವ ವಿಡಿಯೋ ವೈರಲ್

ಹರ್ಯಾಣದ ಗುರುಗ್ರಾಮದ ಗಾಲ್ಫ್ ಕೋರ್ಸ್ ರಸ್ತೆಯಲ್ಲಿ ಅತಿವೇಗವಾಗಿ ಬಂದ ಕಾರೊಂದು ಮಹಿಳಾ ಬೈಕ್ ಸವಾರಿಗೆ ಉದ್ದೇಶಪೂರ್ವಕವಾಗಿ ಢಿಕ್ಕಿ ಹೊಡೆದು ಪರಾರಿಯಾಗಿರುವ ಭೀಕರ ಘಟನೆ ನಡೆದಿದೆ. ಹಿಟ್ ಆ್ಯಂಡ್ ರನ್ ಶಂಕೆ ವ್ಯಕ್ತವಾಗಿರುವ ಈ...

ಪ. ಬಂಗಾಳ | 252 ಮದ್ರಸಾಗಳನ್ನು ಮುಚ್ಚಲು ಆದೇಶಿಸಿದ ಬಿಜೆಪಿ ಸರ್ಕಾರ; 100 ಸಂಸ್ಥೆಗಳಿಗೆ ಕಾರಣ ಕೇಳಿ ನೋಟಿಸ್

ರಾಜ್ಯದಾದ್ಯಂತ ಮದ್ರಸಾಗಳ ಸಮೀಕ್ಷೆಯನ್ನು ಪ್ರಾರಂಭಿಸಿದ ಮೂರು ತಿಂಗಳ ನಂತರ, ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಅನುಮೋದನೆಯ ಕೊರತೆ ಅಥವಾ ಇತರ ಅಕ್ರಮಗಳನ್ನು ಉಲ್ಲೇಖಿಸಿ 252 ಸಂಸ್ಥೆಗಳನ್ನು ಮುಚ್ಚಲು ಆದೇಶಿಸಿದೆ ಮತ್ತು ಇತರ...

ಟಿ. ನರಸೀಪುರ ಪ್ರತಿಭಟನೆ ವೇಳೆ ವಾಕ್ಸಮರ: ಪ್ರತಾಪ್ ಸಿಂಹ ಹಾಗೂ ಎಲ್. ನಾಗೇಂದ್ರ ನಡುವೆ ಬಹಿರಂಗ ನೂಕಾಟ-ತಳ್ಳಾಟ!

ಟಿ. ನರಸೀಪುರದಲ್ಲಿ ಗಣೇಶೋತ್ಸವ ಮೆರವಣಿಗೆಗೆ ಸಂಬಂಧಿಸಿದ ವಿವಾದದ ಹಿನ್ನೆಲೆಯಲ್ಲಿ ಬಿಜೆಪಿ ಹಮ್ಮಿಕೊಂಡಿದ್ದ ಪ್ರತಿಭಟನೆ ವೇಳೆ ಮೈಸೂರು ಬಿಜೆಪಿಯಲ್ಲಿನ ಆಂತರಿಕ ಭಿನ್ನಮತ ಬಹಿರಂಗಗೊಂಡಿದೆ. ಪೊಲೀಸ್ ಇನ್ಸ್‌ಪೆಕ್ಟರ್ ಧನಂಜಯ್ ವಿರುದ್ಧ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ಮಾಜಿ...

ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನ ಮುಂದೂಡಿದ NLSIU ವಿದ್ಯಾರ್ಥಿ ಸಂಘ; ಯಾವುದೇ ಒತ್ತಡಕ್ಕೆ ಮಣಿದಿಲ್ಲವೆಂದು ಸ್ಪಷ್ಟನೆ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯ (NLSIU) ಲಾ ಅಂಡ್ ಸೊಸೈಟಿ ಕಮಿಟಿಯು (LawSoc) ಉಮರ್ ಖಾಲಿದ್ ಅವರ ಜೈಲುವಾಸದ ಕುರಿತು ಲಲಿತ್ ವಾಚಾನಿ ನಿರ್ಮಿಸಿರುವ 'ಪ್ರಿಸನರ್ ನಂ. 626710...