Homeಕರ್ನಾಟಕಫ್ಯಾಕ್ಟ್‌ಚೆಕ್: ಕನ್ನಡ ಖಾಸಗಿ ಚಾನೆಲ್ ಮಾಲಿಕರು ಪ್ರತಿ ಜಿಲ್ಲೆಯಲ್ಲಿ ಕೊರೊನಾ ಆಸ್ಪತ್ರೆ ಕಟ್ಟುತ್ತಿರುವುದು ನಿಜವೇ ?

ಫ್ಯಾಕ್ಟ್‌ಚೆಕ್: ಕನ್ನಡ ಖಾಸಗಿ ಚಾನೆಲ್ ಮಾಲಿಕರು ಪ್ರತಿ ಜಿಲ್ಲೆಯಲ್ಲಿ ಕೊರೊನಾ ಆಸ್ಪತ್ರೆ ಕಟ್ಟುತ್ತಿರುವುದು ನಿಜವೇ ?

ನೋಟಿಸಿನಲ್ಲಿರುವ ಸಂಪರ್ಕ ಸಂಖ್ಯೆಗೆ ಹಲವರು ಕರೆ ಮಾಡಿ ಮೂರು ಮಾಧ್ಯಮಗಳನ್ನೂ ಆಸ್ಪತ್ರೆ ನಿರ್ಮಾಣದ ಬಗ್ಗೆ ವಿಚಾರಿಸುತ್ತಿದ್ದಾರೆ ಎನ್ನಲಾಗಿದೆ.

- Advertisement -
- Advertisement -

ಕನ್ನಡದ ಖಾಸಗಿ ಸುದ್ದಿ ಚಾನೆಲ್‌ಗಳಾದ ಟಿವಿ9, ಪಬ್ಲಿಕ್‌ ಟಿವಿ, ಸುರ್ವಣ ನ್ಯೂಸ್‌ ಚಾನೆಲ್‌ಗಳ ಮಾಲಿಕರು ಕರ್ನಾಟಕದ ಪ್ರತಿ ಜಿಲ್ಲೆಯಲ್ಲಿ 100 ಹಾಸಿಗೆಗಳ ಕೊರೊನಾ ಆಸ್ಪತ್ರೆಗಳನ್ನು ತೆರೆಯಲಿದ್ದಾರೆ ಎಂಬ ಸಂದೇಶವಿರುವ ಚಿತ್ರವೊಂದು ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿದೆ.

ಸಂದೇಶದಲ್ಲಿ, ಕೊರೊನಾ ರೋಗಿಗಳನ್ನು ಅವರೇ ಮನೆ ಬಾಗಿಲಿಗೆ ಬಂದು ಕರೆದೊಯ್ಯುತ್ತಾರೆ ಎಂದು ಮಾಹಿತಿ ಕೂಡಾ ಇದ್ದು ಇದನ್ನು ಸತ್ಯವೆಂದು ನಂಬಿದ ಹಲವಾರು ಜನರು ಅದನ್ನು ತಮ್ಮ ಖಾತೆಗಳಲ್ಲಿ ಹಂಚುತ್ತಿದ್ದಾರೆ. ಆದರೆ ವಾಸ್ತವದಲ್ಲಿ ಕೊರೊನಾ ವಿಚಾರದಲ್ಲಿ ಮಾಧ್ಯಮಗಳ ಕಿರುಚಾಟ ತಾಳಲಾರದ ಯಾವುದೋ ಟ್ರೋಲ್‌ ತಂಡ ಇದನ್ನು ಸಾಮಾಜಿಕ ಜಾಲತಾಣದಲ್ಲಿ ಹರಿಬಿಟ್ಟಿದ್ದಾರೆ ಎಂದು ತಿಳಿದು ಬಂದಿದೆ.

ದೇಶದಲ್ಲಿ ಕೊರೊನಾ ವೈರಸ್‌ ಹರಡುವಿಕೆ ಆರಂಭವಾದಾಗಿನಿಂದ ಕೊರೊನಾವನ್ನು ನಿಭಾಯಿಸುವಲ್ಲಿ ವಿಫಲವಾದ ಸರ್ಕಾರದ ವಿರುದ್ದ ಪ್ರಶ್ನೆ ಕೇಳುವುದನ್ನು ಬಿಟ್ಟು,  ’ಕೊರೊನಾ ವಿರುದ್ದ ರಣಕಲಿ’, ’ಮೋದಿ ಮಂತ್ರ’, ’ಮೋದಿ ರಣತಂತ್ರ’, ’ಮೋದಿ ಅಬ್ಬರಕ್ಕೆ ಕೊರೊನಾ ಸೈಲೆಂಟ್‌’ ಎಂದೆಲ್ಲಾ ಕವರ್ ಸ್ಟೋರಿಗಳನ್ನು ಮಾಡಿದರ ವಿರುದ್ದ ಈ ಟ್ರೋಲ್ ಮಾಡಲಾಗಿದೆ ಎಂದು ನೆಟ್ಟಿಗರು ಹೇಳಿದ್ದಾರೆ.

ಸಾರ್ವಜನಿಕರಿಗೆ ಸೂಚನೆ ಎಂಬ ಶಿರ್ಷಿಕೆ ಇರುವ ನೋಟಿಸಿನಲ್ಲಿ, “ಟಿವಿ9, ಪಬ್ಲಿಕ್‌ ಟಿವಿ, ಸುವರ್ಣ ನ್ಯೂಸ್‌ ಚಾನೆಲ್‌ಗಳ ಮಾಲಿಕರು ಕರ್ನಾಟಕದ ಪ್ರತಿ ಜಿಲ್ಲಾ ಮಟ್ಟದಲ್ಲಿಯೂ 100 ಹಾಸಿಗೆಗಳ ಕೊರೊನಾ ಆಸ್ಪತ್ರೆಗಳನ್ನು ತೆರೆಯುತ್ತಿದ್ದು, ಕೊರೊನಾ ರೋಗಿಗಳನ್ನು ಅವರೇ ಮನೆ ಬಾಗಿಲಿಗೆ ಬಂದು ಕರೆದೊಯ್ಯುತ್ತಾರೆ” ಎಂದು ಮಾಹಿತಿಯಿರುವ ಪತ್ರಿಕಾ ಪ್ರಕಟಣೆಯ ರೀತಿ ಬರೆಯಲಾಗಿದೆ. ಸಧ್ಯಕ್ಕೆ ಇದು ವೈರಲಾಗಿದ್ದು ಕೆಲವರಿಗೆ ಅದರ ವ್ಯಂಗ್ಯ ಅರ್ಥವಾದರೆ ಹಲವರು ಅದನ್ನು ನಿಜವೆಂದೇ ನಂಬಿದ್ದಾರೆ.ಅದರಲ್ಲಿರುವ ಸಂಪರ್ಕ ಸಂಖ್ಯೆಗೆ ಹಲವರು ಕರೆ ಮಾಡಿ ಮೂರು ಮಾಧ್ಯಮಗಳನ್ನೂ ಆಸ್ಪತ್ರೆ ನಿರ್ಮಾಣದ ಬಗ್ಗೆ ವಿಚಾರಿಸಲಾರಂಭಿಸಿದ್ದಾರೆ. ಇದು ಸದ್ಯ ಮಾಧ್ಯಮಗಳಿಗೆ ತಲೆ ನೋವಾಗಿ ಪರಿಣಮಿಸಿದೆ ಎನ್ನಲಾಗಿದೆ.

ಆದರೆ, ಕರ್ನಾಕಟದ ಯಾವ ಮಾಧ್ಯಮವೂ ಕೊರೊನಾ ಆಸ್ಪತ್ರೆಗಳನ್ನು ತೆರೆಯುತ್ತಿಲ್ಲ ಎಂಬುದಷ್ಟೇ ವಾಸ್ತವದ ಸಂಗತಿ.


ಓದಿ: ಲಾಭದ ಗುಲಾಮಗಿರಿಗೆ ಬಿದ್ದಿರುವ ಮಾಧ್ಯಮ!; ಬಹುಜನ ಭಾರತ


 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜ್ಯಸಭಾ ಚುನಾವಣೆ: ಕರ್ನಾಟದಿಂದ ಆಯ್ಕೆಯಾದ ಪ್ರತಿನಿಧಿಗಳಿಂದ ರಾಜ್ಯಕ್ಕೆ ಲಾಭವಾಗಿದೆಯೇ?

ರಾಜ್ಯಸಭೆಗೆ ಪ್ರತಿಬಾರಿ ಚುನಾವಣೆ ನಡೆಯುವಾಗಲೂ ಈ ಚರ್ಚೆಗಳು ಸಾಮಾನ್ಯ. ಕನ್ನಡೇತರರು ಇಲ್ಲಿಂದ ಆಯ್ಕೆಯಾಗಿ ಇಲ್ಲಿಯ ಸಮಸ್ಯೆಗಳ ಬಗ್ಗೆ ಮಾತನಾಡುವುದಿಲ್ಲ ಎಂಬ ವಾಸ್ತವದ ಜೊತೆಜೊತೆಗೆ, ರಾಜ್ಯಸಭೆಗೆ ಆಯ್ಕೆಯಾಗುವ ಕನ್ನಡವರಾದರೂ ಮಾತನಾಡುತ್ತಾರಾ? ಎಂದರೆ ಅದಕ್ಕೂ ನಮ್ಮಲ್ಲಿ...

ಬಂಗಾಳದಲ್ಲಿ ಬಿಜೆಪಿ ಬೆಂಬಲಿಗರ ಕ್ರೌರ್ಯ: ಅಭಿಷೇಕ್ ಬಳಿಕ ಕಲ್ಯಾಣ್‌ ಬ್ಯಾನರ್ಜಿ ಮೇಲೆ ಮಾರಣಾಂತಿಕ ದಾಳಿ

ಪಶ್ಚಿಮ ಬಂಗಾಳದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಸಂಸದ ಕಲ್ಯಾಣ್ ಬ್ಯಾನರ್ಜಿ ಅವರು ಭಾನುವಾರ (ಮೇ 31), ಹೂಗ್ಲಿ ಜಿಲ್ಲೆಯಲ್ಲಿ ನಡೆದಿದ್ದ ಚುನಾವಣೋತ್ತರ ಹಿಂಸಾಚಾರದಲ್ಲಿ ಕಾರ್ಯಕರ್ತರ ಬಂಧನದ ವಿರುದ್ಧ ಮನವಿ ಪತ್ರ ಸಲ್ಲಿಸಲು ಭೇಟಿ...

ಬಸ್ತಾರ್‌: ಬುಡಕಟ್ಟು ಕ್ರಿಶ್ಚಿಯನ್ ಕುಟುಂಬಗಳಿಗೆ ಬೆದರಿಕೆ, ಥಳಿತ, ಹಿಂದೂ ಧರ್ಮ ಸ್ವೀಕರಿಸಲು ಬಲವಂತ: ಘನತೆಯ ಬದುಕಿಗಾಗಿ ಆದಿವಾಸಿಗಳ ಹೋರಾಟ

ಛತ್ತೀಸ್‌ಗಢದ ದಟ್ಟ ಅರಣ್ಯಗಳು ಮತ್ತು ಕಡಿದಾದ ಬೆಟ್ಟಗಳಿಂದ ಆವೃತವಾಗಿರುವ ಬಸ್ತಾರ್ ಕಣಿವೆಯು ತನ್ನ ವಿಶಿಷ್ಟ ಬುಡಕಟ್ಟು ಸಂಸ್ಕೃತಿ ಮತ್ತು ಪ್ರಾಕೃತಿಕ ಸಂಪತ್ತಿಗೆ ಹೆಸರುವಾಸಿ. ಆದರೆ ಇತ್ತೀಚಿನ ವರ್ಷಗಳಲ್ಲಿ, ಈ ಪ್ರಶಾಂತ ಭೂಭಾಗವು ತೀವ್ರಗಾಮಿ...

ಗಾಝಾದಲ್ಲಿ ರಕ್ತಸಿಕ್ತ ಈದ್: ಇಸ್ರೇಲ್ ಭೀಕರ ದಾಳಿಗೆ 26 ಪ್ಯಾಲೆಸ್ಟೀನಿಯನ್ನರು ಬಲಿ, ವಿಶ್ವಸಂಸ್ಥೆ ತೀವ್ರ ಆತಂಕ

ಗಾಝಾ: ಇಸ್ಲಾಂ ಧರ್ಮದ ಅತ್ಯಂತ ಪವಿತ್ರ ದಿನಗಳಲ್ಲಿ ಒಂದಾದ ‘ಈದ್ ಅಲ್-ಅಧಾ’ ಹಬ್ಬದ ಸಂದರ್ಭದಲ್ಲೂ ಗಾಝಾ ಪಟ್ಟಿಯಲ್ಲಿ ರಕ್ತಪಾತ ಮುಂದುವರಿದಿದ್ದು, ಹಬ್ಬದ ಮುನ್ನಾದಿನದಿಂದ ಆರಂಭಿಸಿ ಇಸ್ರೇಲ್ ಪಡೆಗಳು ನಡೆಸಿದ ಸರಣಿ ದಾಳಿಗಳಲ್ಲಿ ಕನಿಷ್ಠ...

ಜನರಿಗೆ ಇಂಧನ ಉಳಿಸುವ ಪಾಠ, ಪ್ರಧಾನಿಗೆ ರೋಡ್‌ಶೋಗಳ ಆಟ

ಮೇ 10 ರಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಸಾರ್ವಜನಿಕರಲ್ಲಿ ಮಿತವ್ಯಯದ ಅಪೀಲು ಮಾಡಿದ್ದು, ಇಂಧನ ಬಳಕೆಯನ್ನು ಕನಿಷ್ಠ ಮಟ್ಟಕ್ಕೆ ಇಳಿಸುವಂತೆ ಕೋರಿದ್ದರು. ಜನರು ಖಾಸಗಿ ವಾಹನಗಳ ಬಳಕೆಯನ್ನು ಬಿಟ್ಟು ಸಾರ್ವಜನಿಕ ಸಾರಿಗೆಯನ್ನು...

ಏಷ್ಯನ್ ಗೇಮ್ಸ್‌ ಟ್ರಯಲ್ಸ್‌ನಲ್ಲಿ ಸ್ಪರ್ಧಿಸಲು ವಿನೇಶ್ ಫೋಗಟ್‌ಗೆ ಅನುಮತಿಸಿದ ಭಾರತೀಯ ಕುಸ್ತಿ ಒಕ್ಕೂಟ

ಮಾಜಿ ವಿಶ್ವ ಚಾಂಪಿಯನ್‌ಶಿಪ್ ಪದಕ ವಿಜೇತೆ ವಿನೇಶ್ ಫೋಗಟ್ ಅವರು (ಮೇ 30) ಏಷ್ಯನ್ ಗೇಮ್ಸ್ ಆಯ್ಕೆ ಟ್ರಯಲ್ಸ್‌ನಲ್ಲಿ ಮಹಿಳೆಯರ 53 ಕೆಜಿ ವಿಭಾಗದಲ್ಲಿ ಸ್ಪರ್ಧಿಸಲು ಅವಕಾಶ ಪಡೆದಿದ್ದಾರೆ. ಭಾರತೀಯ ಕುಸ್ತಿ ಒಕ್ಕೂಟ...

Uttarakhand | ಬಜರಂಗದಳದ ಕಾರ್ಯಕರ್ತರು ಈಗ ದ್ವೇಷ ಬಿತ್ತುವ ವೃತ್ತಿಪರ ಇನ್‌ಫ್ಲ್ಯುಯೆನ್ಸರ್ಸ್!

ಈ ವರ್ಷದ ಆರಂಭದಲ್ಲಿ ಉತ್ತರಾಖಂಡದ ಕೋಟದ್ವಾರದಲ್ಲಿ ಹಿಂದುತ್ವ ಗುಂಪೊಂದು ವೃದ್ಧ ಮುಸ್ಲಿಂ ವ್ಯಕ್ತಿಯೊಬ್ಬರ ಅಂಗಡಿಗೆ ನುಗ್ಗಿ, ಅಂಗಡಿಯ ಹೆಸರಾದ ‘ಬಾಬಾ’ ಎಂಬುವುದನ್ನು ಬದಲಾಯಿಸುವಂತೆ ಒತ್ತಾಯಿಸಿತ್ತು. ‘ಬಾಬಾ’ ಎಂಬುವುದು ‘ಹಿಂದೂ’ ಹೆಸರಾಗಿದೆ ಎಂದು ಆ...

​ನಿಗಿ ನಿಗಿ ಕೆಂಡದಂತಾಗಿರುವ ಬಿಡದಿ, ಡಿಕೆಶಿಗೆ ಬಿಸಿ ತುಪ್ಪದಂತಾದ ರೈತರು

​ಬದಲಾದ ರಾಜಕೀಯ ಸಂದರ್ಭದಲ್ಲಿ ಕರ್ನಾಟಕದ ಮುಂದಿನ ಮುಖ್ಯಮಂತ್ರಿ ಎಂದೇ ಬಿಂಬಿತವಾಗಿರುವ ಡಿ.ಕೆ. ಶಿವಕುಮಾರ್ ಪ್ರತಿಷ್ಠೆಯಾಗಿ ತೆಗೆದುಕೊಂಡಿರುವ ಬಿಡದಿಯ ಟೌನ್‌ಶಿಪ್ ಯೋಜನೆಯ ವಿರುದ್ಧ ನಡೆಯುತ್ತಿರುವ ರೈತರ ಹೋರಾಟ ದಿನದಿಂದ ದಿನಕ್ಕೆ ಉಗ್ರ ರೂಪ ಪಡೆಯುತ್ತಿದೆ. ​ಭೂಸ್ವಾಧೀನದ...

ಪ್ರಜಾಪ್ರಭುತ್ವವನ್ನು ಹತ್ತಿಕ್ಕಲು ‘SIR’ ಅನ್ನೇ ಅಸ್ತ್ರವನ್ನಾಗಿಸಿಕೊಂಡ ನರೇಂದ್ರ ಮೋದಿ!

ಪಶ್ಚಿಮ ಬಂಗಾಳದ ವಿಧಾನಸಭಾ ಚುನಾವಣೆಯ ಫಲಿತಾಂಶ ಪ್ರಕಟವಾದ ತಕ್ಷಣ (ಮೇ 4 ರಂದು), ಕಾಳೀಘಾಟ್‌ನಲ್ಲಿರುವ ತಮ್ಮ ನಿವಾಸದಲ್ಲಿ ಸುದ್ದಿಗೋಷ್ಠಿ ನಡೆಸಿದ ಮಾಜಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅತ್ಯಂತ ಆಕ್ರೋಶದಿಂದ ಮಾತನಾಡಿದ್ದರು. ಅಷ್ಟೇ ಅಲ್ಲದೆ,...

ಕೇರಳದಲ್ಲಿ ಶಾಲಾ ಬಾಲಕಿಯರಿಗೆ ಮೂರು ದಿನ ಮುಟ್ಟಿನ ರಜೆ, ಅಸಂಘಟಿತ ವಲಯದ ಮಹಿಳೆಯರಿಗೆ ಆರು ತಿಂಗಳ ಹೆರಿಗೆ ರಜೆ ಘೋಷಣೆ 

ತಿರುವನಂತಪುರಂ: ಕೇರಳದ ವಿ.ಡಿ. ಸತೀಶನ್ ನೇತೃತ್ವದ ಕಾಂಗ್ರೆಸ್ ಸರ್ಕಾರವು ಮಹಿಳೆಯರಿಗೆ ಹಲವಾರು ಕಲ್ಯಾಣ ಕ್ರಮಗಳನ್ನು ಘೋಷಿಸಿದೆ, ಇದರಲ್ಲಿ ಶಾಲಾ ವಿದ್ಯಾರ್ಥಿಗಳಿಗೆ ಮೂರು ದಿನಗಳ ಮಾಸಿಕ ಮುಟ್ಟಿನ ರಜೆ, ಕೆಲಸದ ಸ್ಥಳಗಳಲ್ಲಿ ಮಹಿಳೆಯರಿಗೆ ಸಮಾನ...