Homeಕರ್ನಾಟಕಫ್ಯಾಕ್ಟ್‌ಚೆಕ್: ಕನ್ನಡ ಖಾಸಗಿ ಚಾನೆಲ್ ಮಾಲಿಕರು ಪ್ರತಿ ಜಿಲ್ಲೆಯಲ್ಲಿ ಕೊರೊನಾ ಆಸ್ಪತ್ರೆ ಕಟ್ಟುತ್ತಿರುವುದು ನಿಜವೇ ?

ಫ್ಯಾಕ್ಟ್‌ಚೆಕ್: ಕನ್ನಡ ಖಾಸಗಿ ಚಾನೆಲ್ ಮಾಲಿಕರು ಪ್ರತಿ ಜಿಲ್ಲೆಯಲ್ಲಿ ಕೊರೊನಾ ಆಸ್ಪತ್ರೆ ಕಟ್ಟುತ್ತಿರುವುದು ನಿಜವೇ ?

ನೋಟಿಸಿನಲ್ಲಿರುವ ಸಂಪರ್ಕ ಸಂಖ್ಯೆಗೆ ಹಲವರು ಕರೆ ಮಾಡಿ ಮೂರು ಮಾಧ್ಯಮಗಳನ್ನೂ ಆಸ್ಪತ್ರೆ ನಿರ್ಮಾಣದ ಬಗ್ಗೆ ವಿಚಾರಿಸುತ್ತಿದ್ದಾರೆ ಎನ್ನಲಾಗಿದೆ.

- Advertisement -
- Advertisement -

ಕನ್ನಡದ ಖಾಸಗಿ ಸುದ್ದಿ ಚಾನೆಲ್‌ಗಳಾದ ಟಿವಿ9, ಪಬ್ಲಿಕ್‌ ಟಿವಿ, ಸುರ್ವಣ ನ್ಯೂಸ್‌ ಚಾನೆಲ್‌ಗಳ ಮಾಲಿಕರು ಕರ್ನಾಟಕದ ಪ್ರತಿ ಜಿಲ್ಲೆಯಲ್ಲಿ 100 ಹಾಸಿಗೆಗಳ ಕೊರೊನಾ ಆಸ್ಪತ್ರೆಗಳನ್ನು ತೆರೆಯಲಿದ್ದಾರೆ ಎಂಬ ಸಂದೇಶವಿರುವ ಚಿತ್ರವೊಂದು ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿದೆ.

ಸಂದೇಶದಲ್ಲಿ, ಕೊರೊನಾ ರೋಗಿಗಳನ್ನು ಅವರೇ ಮನೆ ಬಾಗಿಲಿಗೆ ಬಂದು ಕರೆದೊಯ್ಯುತ್ತಾರೆ ಎಂದು ಮಾಹಿತಿ ಕೂಡಾ ಇದ್ದು ಇದನ್ನು ಸತ್ಯವೆಂದು ನಂಬಿದ ಹಲವಾರು ಜನರು ಅದನ್ನು ತಮ್ಮ ಖಾತೆಗಳಲ್ಲಿ ಹಂಚುತ್ತಿದ್ದಾರೆ. ಆದರೆ ವಾಸ್ತವದಲ್ಲಿ ಕೊರೊನಾ ವಿಚಾರದಲ್ಲಿ ಮಾಧ್ಯಮಗಳ ಕಿರುಚಾಟ ತಾಳಲಾರದ ಯಾವುದೋ ಟ್ರೋಲ್‌ ತಂಡ ಇದನ್ನು ಸಾಮಾಜಿಕ ಜಾಲತಾಣದಲ್ಲಿ ಹರಿಬಿಟ್ಟಿದ್ದಾರೆ ಎಂದು ತಿಳಿದು ಬಂದಿದೆ.

ದೇಶದಲ್ಲಿ ಕೊರೊನಾ ವೈರಸ್‌ ಹರಡುವಿಕೆ ಆರಂಭವಾದಾಗಿನಿಂದ ಕೊರೊನಾವನ್ನು ನಿಭಾಯಿಸುವಲ್ಲಿ ವಿಫಲವಾದ ಸರ್ಕಾರದ ವಿರುದ್ದ ಪ್ರಶ್ನೆ ಕೇಳುವುದನ್ನು ಬಿಟ್ಟು,  ’ಕೊರೊನಾ ವಿರುದ್ದ ರಣಕಲಿ’, ’ಮೋದಿ ಮಂತ್ರ’, ’ಮೋದಿ ರಣತಂತ್ರ’, ’ಮೋದಿ ಅಬ್ಬರಕ್ಕೆ ಕೊರೊನಾ ಸೈಲೆಂಟ್‌’ ಎಂದೆಲ್ಲಾ ಕವರ್ ಸ್ಟೋರಿಗಳನ್ನು ಮಾಡಿದರ ವಿರುದ್ದ ಈ ಟ್ರೋಲ್ ಮಾಡಲಾಗಿದೆ ಎಂದು ನೆಟ್ಟಿಗರು ಹೇಳಿದ್ದಾರೆ.

ಸಾರ್ವಜನಿಕರಿಗೆ ಸೂಚನೆ ಎಂಬ ಶಿರ್ಷಿಕೆ ಇರುವ ನೋಟಿಸಿನಲ್ಲಿ, “ಟಿವಿ9, ಪಬ್ಲಿಕ್‌ ಟಿವಿ, ಸುವರ್ಣ ನ್ಯೂಸ್‌ ಚಾನೆಲ್‌ಗಳ ಮಾಲಿಕರು ಕರ್ನಾಟಕದ ಪ್ರತಿ ಜಿಲ್ಲಾ ಮಟ್ಟದಲ್ಲಿಯೂ 100 ಹಾಸಿಗೆಗಳ ಕೊರೊನಾ ಆಸ್ಪತ್ರೆಗಳನ್ನು ತೆರೆಯುತ್ತಿದ್ದು, ಕೊರೊನಾ ರೋಗಿಗಳನ್ನು ಅವರೇ ಮನೆ ಬಾಗಿಲಿಗೆ ಬಂದು ಕರೆದೊಯ್ಯುತ್ತಾರೆ” ಎಂದು ಮಾಹಿತಿಯಿರುವ ಪತ್ರಿಕಾ ಪ್ರಕಟಣೆಯ ರೀತಿ ಬರೆಯಲಾಗಿದೆ. ಸಧ್ಯಕ್ಕೆ ಇದು ವೈರಲಾಗಿದ್ದು ಕೆಲವರಿಗೆ ಅದರ ವ್ಯಂಗ್ಯ ಅರ್ಥವಾದರೆ ಹಲವರು ಅದನ್ನು ನಿಜವೆಂದೇ ನಂಬಿದ್ದಾರೆ.ಅದರಲ್ಲಿರುವ ಸಂಪರ್ಕ ಸಂಖ್ಯೆಗೆ ಹಲವರು ಕರೆ ಮಾಡಿ ಮೂರು ಮಾಧ್ಯಮಗಳನ್ನೂ ಆಸ್ಪತ್ರೆ ನಿರ್ಮಾಣದ ಬಗ್ಗೆ ವಿಚಾರಿಸಲಾರಂಭಿಸಿದ್ದಾರೆ. ಇದು ಸದ್ಯ ಮಾಧ್ಯಮಗಳಿಗೆ ತಲೆ ನೋವಾಗಿ ಪರಿಣಮಿಸಿದೆ ಎನ್ನಲಾಗಿದೆ.

ಆದರೆ, ಕರ್ನಾಕಟದ ಯಾವ ಮಾಧ್ಯಮವೂ ಕೊರೊನಾ ಆಸ್ಪತ್ರೆಗಳನ್ನು ತೆರೆಯುತ್ತಿಲ್ಲ ಎಂಬುದಷ್ಟೇ ವಾಸ್ತವದ ಸಂಗತಿ.


ಓದಿ: ಲಾಭದ ಗುಲಾಮಗಿರಿಗೆ ಬಿದ್ದಿರುವ ಮಾಧ್ಯಮ!; ಬಹುಜನ ಭಾರತ


 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...

ಏಕರೂಪ ನಾಗರಿಕ ಸಂಹಿತೆಯನ್ನು ಸಂಸತ್ತಿನ ಬದಲು ರಾಜ್ಯಗಳ ಮೂಲಕವೇ ಜಾರಿಗೆ ಅಮಿತ್ ಶಾ ಮುಂದಾಗಿದ್ದೇಕೆ?

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೆಪ್ಟೆಂಬರ್ 13ರಂದು ಮುಂಬೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ, 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ಮತ್ತು ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ...

ದಿಶಾ ಸಾಲಿಯಾನ್ ಸಾವಿನ ಪ್ರಕರಣ : ಸಿಬಿಐ ಎಫ್ಐಆರ್‌ನಲ್ಲಿ ಆದಿತ್ಯ ಠಾಕ್ರೆ, ರಿಯಾ ಚಕ್ರವರ್ತಿ ಸೇರಿದಂತೆ ಹಲವರ ಹೆಸರು

ಬಾಂಬೆ ಹೈಕೋರ್ಟ್ ಆದೇಶದ ಮೇರೆಗೆ, ಕೇಂದ್ರೀಯ ತನಿಖಾ ದಳವು (ಸಿಬಿಐ) ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಅವರ ನಿಗೂಢ ಸಾವಿಗೆ ಸಂಬಂಧಿಸಿದಂತೆ ಸೋಮವಾರ(ಸೆ.14) ಎಫ್‌ಐಆರ್ ದಾಖಲಿಸಿದೆ. ಶಿವಸೇನೆ...

ಟಿ. ನರಸೀಪುರ ಇನ್ಸ್‌ಪೆಕ್ಟರ್‌ ಧನಂಜಯ್‌ ಹೇಳಿದ್ದರಲ್ಲಿ ತಪ್ಪೇನಿದೆ? ಸಾರ್ವಜನಿಕರಿಂದ ಬೆಂಬಲ

ಮಸೀದಿಗಳ ಮುಂಭಾಗ ಯಾವುದೇ ಪ್ರಚೋದನಕಾರಿ ಕೃತ್ಯಗಳಿಗೆ ಆಸ್ಪದ ನೀಡದೆ, ರಾತ್ರಿ 10:30ರ ಒಳಗಾಗಿ ಡಿಜೆ ಸದ್ದಿಲ್ಲದೆ ನಿಯಮಾನುಸಾರ ಮೆರವಣಿಗೆ ಮುಗಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಂಡ ಇನ್ಸ್‌ಪೆಕ್ಟರ್ ಧನಂಜಯ್ ಅವರ ಪರವಾಗಿ ಈಗ ಸಾಮಾಜಿಕ...

ಅತ್ಯಾಚಾರ ಪ್ರಕರಣದಲ್ಲಿ 10 ವರ್ಷ ಜೈಲು ಶಿಕ್ಷೆ: ‘ತೆಹಲ್ಕಾ’ ಸಂಸ್ಥಾಪಕ ತರುಣ್ ತೇಜ್‌ಪಾಲ್ ನ್ಯಾಯಾಲಯಕ್ಕೆ ಶರಣು, ಜೈಲಿಗೆ ರವಾನೆ 

ಪಣಜಿ: 2013ರ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್‌ನ ಗೋವಾ ಪೀಠದಿಂದ ದೋಷಿ ಎಂದು ತೀರ್ಪುಗೊಂಡು 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆಗೆ ಗುರಿಯಾಗಿರುವ ‘ತೆಹಲ್ಕಾ’ ಸಂಸ್ಥಾಪಕ ಹಾಗೂ ಮಾಜಿ ಪ್ರಧಾನ ಸಂಪಾದಕ...

ಹೈದರಾಬಾದ್‌ನಲ್ಲಿ ಗಣೇಶ ವಿಗ್ರಹ ಖರೀದಿ ವಿಚಾರಕ್ಕೆ ಘರ್ಷಣೆ: 34 ವರ್ಷದ ವ್ಯಕ್ತಿ ಸಾವು: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹ

ಹೈದರಾಬಾದ್: ಗಣೇಶ ಚತುರ್ಥಿ ಆಚರಣೆಗೆ ಮುನ್ನ ಗಣೇಶ ವಿಗ್ರಹ ಖರೀದಿಸುವ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ವಾಗ್ವಾದವು ಹಿಂಸಾತ್ಮಕ ಘರ್ಷಣೆಗೆ ತಿರುಗಿ 34 ವರ್ಷದ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಹೈದರಾಬಾದ್‌ನ ಜೋಡಿಮೆಟ್ಲಾ ಪ್ರದೇಶದಲ್ಲಿ ನಡೆದಿದೆ....

ಮಹಿಳಾ ಬೈಕರ್‌ಗೆ ಬೇಕಂತಲೇ ಢಿಕ್ಕಿ ಹೊಡೆದು ಪರಾರಿಯಾದ ಕಾರು ಸವಾರ! ಬೆಚ್ಚಿಬೀಳಿಸುವ ವಿಡಿಯೋ ವೈರಲ್

ಹರ್ಯಾಣದ ಗುರುಗ್ರಾಮದ ಗಾಲ್ಫ್ ಕೋರ್ಸ್ ರಸ್ತೆಯಲ್ಲಿ ಅತಿವೇಗವಾಗಿ ಬಂದ ಕಾರೊಂದು ಮಹಿಳಾ ಬೈಕ್ ಸವಾರಿಗೆ ಉದ್ದೇಶಪೂರ್ವಕವಾಗಿ ಢಿಕ್ಕಿ ಹೊಡೆದು ಪರಾರಿಯಾಗಿರುವ ಭೀಕರ ಘಟನೆ ನಡೆದಿದೆ. ಹಿಟ್ ಆ್ಯಂಡ್ ರನ್ ಶಂಕೆ ವ್ಯಕ್ತವಾಗಿರುವ ಈ...

ಪ. ಬಂಗಾಳ | 252 ಮದ್ರಸಾಗಳನ್ನು ಮುಚ್ಚಲು ಆದೇಶಿಸಿದ ಬಿಜೆಪಿ ಸರ್ಕಾರ; 100 ಸಂಸ್ಥೆಗಳಿಗೆ ಕಾರಣ ಕೇಳಿ ನೋಟಿಸ್

ರಾಜ್ಯದಾದ್ಯಂತ ಮದ್ರಸಾಗಳ ಸಮೀಕ್ಷೆಯನ್ನು ಪ್ರಾರಂಭಿಸಿದ ಮೂರು ತಿಂಗಳ ನಂತರ, ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಅನುಮೋದನೆಯ ಕೊರತೆ ಅಥವಾ ಇತರ ಅಕ್ರಮಗಳನ್ನು ಉಲ್ಲೇಖಿಸಿ 252 ಸಂಸ್ಥೆಗಳನ್ನು ಮುಚ್ಚಲು ಆದೇಶಿಸಿದೆ ಮತ್ತು ಇತರ...

ಟಿ. ನರಸೀಪುರ ಪ್ರತಿಭಟನೆ ವೇಳೆ ವಾಕ್ಸಮರ: ಪ್ರತಾಪ್ ಸಿಂಹ ಹಾಗೂ ಎಲ್. ನಾಗೇಂದ್ರ ನಡುವೆ ಬಹಿರಂಗ ನೂಕಾಟ-ತಳ್ಳಾಟ!

ಟಿ. ನರಸೀಪುರದಲ್ಲಿ ಗಣೇಶೋತ್ಸವ ಮೆರವಣಿಗೆಗೆ ಸಂಬಂಧಿಸಿದ ವಿವಾದದ ಹಿನ್ನೆಲೆಯಲ್ಲಿ ಬಿಜೆಪಿ ಹಮ್ಮಿಕೊಂಡಿದ್ದ ಪ್ರತಿಭಟನೆ ವೇಳೆ ಮೈಸೂರು ಬಿಜೆಪಿಯಲ್ಲಿನ ಆಂತರಿಕ ಭಿನ್ನಮತ ಬಹಿರಂಗಗೊಂಡಿದೆ. ಪೊಲೀಸ್ ಇನ್ಸ್‌ಪೆಕ್ಟರ್ ಧನಂಜಯ್ ವಿರುದ್ಧ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ಮಾಜಿ...

ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನ ಮುಂದೂಡಿದ NLSIU ವಿದ್ಯಾರ್ಥಿ ಸಂಘ; ಯಾವುದೇ ಒತ್ತಡಕ್ಕೆ ಮಣಿದಿಲ್ಲವೆಂದು ಸ್ಪಷ್ಟನೆ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯ (NLSIU) ಲಾ ಅಂಡ್ ಸೊಸೈಟಿ ಕಮಿಟಿಯು (LawSoc) ಉಮರ್ ಖಾಲಿದ್ ಅವರ ಜೈಲುವಾಸದ ಕುರಿತು ಲಲಿತ್ ವಾಚಾನಿ ನಿರ್ಮಿಸಿರುವ 'ಪ್ರಿಸನರ್ ನಂ. 626710...