Homeಕರೋನಾ ತಲ್ಲಣರಾಹುಲ್ ಗಾಂಧಿ ವೈದ್ಯರಲ್ಲ: ತಿರುಗೇಟು ನೀಡಿದ ವೆಂಟಿಲೇಟರ್ ಸಂಸ್ಥೆ

ರಾಹುಲ್ ಗಾಂಧಿ ವೈದ್ಯರಲ್ಲ: ತಿರುಗೇಟು ನೀಡಿದ ವೆಂಟಿಲೇಟರ್ ಸಂಸ್ಥೆ

ಕೇಂದ್ರ ಸರ್ಕಾರ ಗುಣಮಟ್ಟವಿಲ್ಲದ ಉತ್ಪನ್ನಗಳನ್ನು ಖರೀದಿಸುತ್ತಿದೆ ಎಂದು ರಾಹುಲ್ ಗಾಂಧಿ ಆರೋಪಿಸಿದ್ದರು.

- Advertisement -
- Advertisement -

ವೆಂಟಿಲೇಟರ್ ತಯಾರಕ ಸಂಸ್ಥೆ ಆಗ್ವಾ ಹೆಲ್ತ್‌ಕೇರ್ ರಾಹುಲ್ ಗಾಂಧಿ ಅವರಿಗೆ ತಿರುಗೇಟು ನೀಡಿದ್ದು, ರಾಹುಲ್ ಗಾಂಧಿ ವೈದ್ಯರಲ್ಲ ಎಂದು ಹೇಳಿದೆ.

ಕೊರೊನಾ ನಿಭಾಯಿಸಲು ಖರೀದಿಸಿದ ಕೆಲವು ವೆಂಟಿಲೇಟರ್‌ಗಳನ್ನು ಪ್ರಧಾನಿ ನರೇಂದ್ರ ಮೋದಿಯವರ “ಆತ್ಮನಿರ್ಭರ ಭಾರತ” ಯೋಜನೆಯ ಅನುಗುಣವಾಗಿ ಸ್ಥಳೀಯ ಉತ್ಪಾದಕ ಆಗ್ವಾ ಅವರಿಂದ ಪಿಎಂಸಿ ಕೇರ್ಸ್ ನಿಧಿಯ ಮೂಲಕ ಖರೀದಿಸಲಾಗಿದೆ.

ಸಾಂಕ್ರಾಮಿಕ ರೋಗವನ್ನು ಸರಿಯಾಗಿ ನಿಭಾಯಿಸದಿರುವ ಬಗ್ಗೆ ಸರ್ಕಾರದ ಮೇಲೆ ತನ್ನ ದಾಳಿಯನ್ನು ಮುಂದುವರೆಸುತ್ತಿರುವ ರಾಹುಲ್ ಗಾಂಧಿ, ಗುಣಮಟ್ಟವಿಲ್ಲದ ಉತ್ಪನ್ನಗಳನ್ನು ಖರೀದಿಸುತ್ತಿದೆ ಎಂದು ಆರೋಪಿಸಿದ್ದರು.

ಈ ವಿಷಯದ ಬಗ್ಗೆ ಜುಲೈ 5 ರಂದು ಟ್ವೀಟ್ ಮಾಡಿದ ರಾಹುಲ್ ಗಾಂಧಿ “ಪಿಎಂಕೇರ್ಸ್ ಅಪಾರದರ್ಶಕತೆ: 1. ಭಾರತೀಯ ಜೀವಗಳನ್ನು ಅಪಾಯಕ್ಕೆ ತಳ್ಳುವುದು. 2. ಸಾರ್ವಜನಿಕ ಹಣವನ್ನು ಗುಣಮಟ್ಟವಿಲ್ಲದ ಉತ್ಪನ್ನಗಳನ್ನು ಖರೀದಿಸಲು ಬಳಸಲಾಗುತ್ತಿದೆ.” ಎಂದು ಬರೆದಿದ್ದರು.

ಆಗ್ವಾ ಹೆಲ್ತ್‌ಕೇರ್‌ನ ಸಹ ಸಂಸ್ಥಾಪಕ ಪ್ರೊಫೆಸರ್ ದಿವಾಕರ್ ವೈಶ್, “ರಾಹುಲ್ ಗಾಂಧಿ ವೈದ್ಯರಲ್ಲ, ಅವರು ಬುದ್ಧಿವಂತ ವ್ಯಕ್ತಿ. ಇಂತಹ ಆರೋಪಗಳನ್ನು ಮಾಡುವ ಮೊದಲು ಅವರು ಶ್ರದ್ಧೆಯಿಂದ ಕೆಲಸ ಮಾಡಬೇಕಾಗಿತ್ತು. ಅವರು ವೈದ್ಯರನ್ನು ಸಂಪರ್ಕಿಸಿರಬೇಕು. ವಿವರವಾದ ಮಾಹಿತಿಯನ್ನು ನೀಡಲು ನಾನು ಸಿದ್ಧನಿದ್ದೇನೆ.” ಎಂದು ಹೇಳಿದ್ದಾರೆ.

ರಾಹುಲ್ ಗಾಂಧಿಯವರು ಹಫ್‌ಪೋಸ್ಟ್‌ನ ವರದಿಯೊಂದನ್ನು ಟ್ಯಾಗ್ ಮಾಡಿ, “PMCARES ನಿಂದ ಖರೀದಿಸಲಾದ ವೆಂಟಿಲೇಟರ್  ಕಳಪೆ ಕಾರ್ಯಕ್ಷಮತೆಯವು ಎಂದು ಮಾಜಿ ಉದ್ಯೋಗಿಗಳು ಹೇಳುತ್ತಾರೆ” ಎಂದು ಹೇಳಿದ್ದರು.

ಕೊರೊನಾ ವೈರಸ್ ಚಿಕಿತ್ಸೆಗಾಗಿ ವಿನ್ಯಾಸಗೊಳಿಸಲಾದ ಈ ವೆಂಟಿಲೇಟರ್‌ಗಳು ಉನ್ನತ-ಮಟ್ಟದ ವೆಂಟಿಲೇಟರ್‌ಗಳಿಗೆ ಪರ್ಯಾಯವಲ್ಲ ಎಂದು ವೈದ್ಯರು ಹೇಳಿದ್ದಾರೆ ಎಂದು ಹಫ್‌ಪೋಸ್ಟ್ ವರದಿ ಮಾಡಿದೆ.

ಈ ಆರೋಪಗಳು ಭಾರತಕ್ಕೆ ವೆಂಟಿಲೇಟರ್‌ಗಳನ್ನು ಪೂರೈಸುವ ವಿದೇಶಿ ಕಂಪೆನಿಗಳನ್ನು ಅಸಮಾಧಾನಗೊಳಿಸಿದ ಪರಿಣಾಮವಾಗಿದೆ ಎಂದು ಅಗ್ವಾ ಹೆಲ್ತ್ ಕೇರ್‌ನ ವೈಶ್ ಹೇಳಿದರು.

“ಅಂತರರಾಷ್ಟ್ರೀಯ ಮಾರಾಟಗಾರರ ನೆಕ್ಸಸ್ ತುಂಬಾ ಪ್ರಬಲವಾಗಿದೆ. ಭಾರತೀಯ ಮಿಲಿಟರಿ ಉಪಕರಣಗಳನ್ನು ದೇಶೀಕರಿಸುತ್ತಿದ್ದಂತೆಯೇ, ಸಾಕಷ್ಟು ನಕಾರಾತ್ಮಕ ವಿಮರ್ಶೆಗಳು ಬಂದವು. ಇಲ್ಲಿಯೂ ಅದೇ ನಡೆಯುತ್ತಿದೆ. 10 ಲಕ್ಷ ರೂ ವೆಂಟಿಲೇಟರ್ ಮಾಡುವ ಕೆಲಸವನ್ನು, ನಮ್ಮದು 1.5 ಲಕ್ಷ ರೂ.ಗಳಲ್ಲಿ ಮಾಡುತ್ತಿದೆ. ಅಂತರರಾಷ್ಟ್ರೀಯ ಸಂಘಗಳು, ಅಂತರರಾಷ್ಟ್ರೀಯ ಮಾರಾಟಗಾರರು ಇದನ್ನು ಸ್ವೀಕರಿಸುತ್ತಾರೆಯೇ? ಅದಕ್ಕಾಗಿಯೇ ಅವರು ವಿಧ್ವಂಸಕ ಪ್ರಯತ್ನ ಮಾಡುತ್ತಿದ್ದಾರೆ” ಎಂದು ಅವರು ಹೇಳಿದ್ದಾರೆ.

ದೆಹಲಿಯ LNGP ಆಸ್ಪತ್ರೆ ಆಗ್ವಾ ವೆಂಟಿಲೇಟರ್ ಅನ್ನು ತಿರಸ್ಕರಿಸಲಿಲ್ಲ ಎಂದು ವೈಶ್ ಹೇಳಿದರು.

“ಮುಂಬೈಗೆ ಸಂಬಂಧಿಸಿದಂತೆ, JJ ಆಸ್ಪತ್ರೆ ಮತ್ತು ಸೇಂಟ್ ಜಾರ್ಜ್ ಆಸ್ಪತ್ರೆ ಮೂರನೇ ವ್ಯಕ್ತಿಯ ಮೂಲಕ ಸ್ಥಾಪನೆಯಾಗಿದೆ. ಅವರು ಅದನ್ನು ಸರಿಯಾಗಿ ಸ್ಥಾಪಿಸಲಿಲ್ಲ. ಆದ್ದರಿಂದ, ಅವರ ವೈದ್ಯರು ಅದನ್ನು ಬಳಸಲಾಗಲಿಲ್ಲ. ನೀವು ಪೆಟ್ರೋಲ್ ಬದಲಿಗೆ ಡೀಸೆಲ್ ಹಾಕಿದರೆ ಏನು ಸಂಭವಿಸುತ್ತದೆ? ಎಂದು ANI ವೈಶ್ ಅವರ ಮಾತನ್ನು ಉಲ್ಲೇಖಿಸಿ ವರದಿ ಮಾಡಿದೆ.

ಸಾಂಕ್ರಾಮಿಕ ರೋಗವನ್ನು ನಿಯಂತ್ರಿಸಲು ಭಾರತದ ಸಿದ್ಧತೆಗಳ ಭಾಗವಾಗಿ ಕೇಂದ್ರ ಸರ್ಕಾರವು ಆಗ್ವಾ ಹೆಲ್ತ್‌ಕೇರ್‌ನಿಂದ 10,000 ಕೊರೊನಾ ಮಾದರಿ ವೆಂಟಿಲೇಟರ್‌ಗಳಿಗೆ ಆದೇಶ ನೀಡಿತು. ಈ ಹಣವು PMCARES‌ನಿಂದ ಬಂದಿದೆ.

ಈ ನಿಧಿಯೂ ಮಾಹಿತಿ ಹಕ್ಕು ಕಾಯ್ದೆಯ ಅಡಿಯಲ್ಲಿ ಬರುವುದಿಲ್ಲ ಎನ್ನಲಾಗಿದೆ.


ಇದನ್ನೂ ಓದಿ: ಪಿಎಂ ಕೇರ್ಸ್ ನಿಧಿಯಡಿ ಖರೀದಿಸಿರುವ ವೆಂಟಿಲೇಟರ್ ಬಳಸಬೇಕಾದರೆ ‘ಬ್ಯಾಕಪ್’ ವೆಂಟಿಲೇಟರ್ ಅಗತ್ಯ..!


 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...

‘ಬೀಬಿ ನೀನು ಅಡಗಿಕೊಳ್ಳಲು ಸಾಧ್ಯವಿಲ್ಲ’: ವಾಷಿಂಗ್ಟನ್‌ ಗೆ ಭೇಟಿ ನೀಡಿದ ನೆತನ್ಯಾಹು ವಿರುದ್ಧ ಜನಾಕ್ರೋಶ: ಐಸಿಸಿ ವಾರಂಟ್ ನಿರ್ಲಕ್ಷಿಸಿ ಟ್ರಂಪ್ ಆತಿಥ್ಯ

ಇಸ್ರೇಲ್ ಪ್ರಧಾನಿ ಬೆಂಜಮಿನ್ ನೆತನ್ಯಾಹು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರೊಂದಿಗಿನ ಮಾತುಕತೆಗಾಗಿ ವಾಷಿಂಗ್ಟನ್ ಡಿಸಿಗೆ ಭೇಟಿ ನೀಡುತ್ತಿದ್ದಂತೆಯೇ, ರಾಜಧಾನಿಯಾದ್ಯಂತ ಅವರ ವಿರುದ್ಧ ಕಟು ಆಕ್ರೋಶ ಮತ್ತು ಪ್ರತಿಭಟನೆಗಳ ಕಾವು ತೀವ್ರಗೊಂಡಿದೆ. ಅಂತರರಾಷ್ಟ್ರೀಯ...

SIR: ಕರ್ನಾಟಕದಲ್ಲಿ 43 ಲಕ್ಷಕ್ಕೂ ಹೆಚ್ಚು ಜನರಿಂದ ಸಿಗದ ಸಹಿ ಮಾಡಿದ ನಮೂನೆ; ಕರಡು ಪಟ್ಟಿಯಿಂದ ಹೆಸರು ಕೈಬಿಡುವ ಭೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯು ಪ್ರಮುಖ ಮೈಲಿಗಲ್ಲುಗಳನ್ನು ತಲುಪಿದ್ದು, ರಾಜ್ಯಾದ್ಯಂತ ಶೇಕಡಾ 77ರಷ್ಟು ಗಣತಿ ನಮೂನೆಗಳು ಡಿಜಿಟಲೀಕರಣಗೊಂಡಿವೆ. ಆದಾಗ್ಯೂ, ರಾಜ್ಯದ 43.24 ಲಕ್ಷಕ್ಕೂ ಹೆಚ್ಚು ಮತದಾರರು...

ನೀಟ್‌ ಪ್ರತಿಭಟನೆಯಲ್ಲಿ ಉಮರ್ ಖಾಲಿದ್‌ಗೆ ಬೆಂಬಲ; ಸಂಘಟಕರನ್ನು ವಿಚಾರಣೆಗೆ ಒಳಪಡಿಸಿದ ಗೋವಾ ಪೊಲೀಸರು

ಗೋವಾದ ಪಣಜಿಯಲ್ಲಿ ನಡೆದ ನೀಟ್-ಯುಜಿ ಪ್ರತಿಭಟನೆಯಲ್ಲಿ ಉಮರ್ ಖಾಲಿದ್ ಪರ ಘೋಷಣೆಗಳನ್ನು ಕೂಗಿದ ಕೆಲವು ವಿದ್ಯಾರ್ಥಿಗಳ ಪ್ರತಿಭಟನೆ ಹಿಂದಿನ ಹಣಕಾಸು ಮತ್ತು ಉದ್ದೇಶದ ಬಗ್ಗೆ ಗೋವಾ ಪೊಲೀಸರು ಸಂಘಟಕರನ್ನು ವಿಚಾರಣೆಗೆ ಒಳಪಡಿಸಿದ್ದಾರೆ ಎಂದು...

ಅಸ್ಸಾಂ ಪ್ರವಾಹದ ಭೀಕರತೆ: 78 ಬಲಿ, 3 ಲಕ್ಷ ಜನರ ಬದುಕು ಸಂಕಷ್ಟಕ್ಕೆ: ವ್ಯವಸ್ಥೆಯ ವೈಫಲ್ಯಕ್ಕೆ ಬೆಲೆ ತೆತ್ತುತ್ತಿರುವ ನಾಗರಿಕರು

ಈಶಾನ್ಯ ಭಾರತದ ಗೇಟ್‌ವೇ ಎಂದೇ ಕರೆಯಲ್ಪಡುವ ಅಸ್ಸಾಂನಲ್ಲಿ ಪ್ರವಾಹದ ಅಟ್ಟಹಾಸ ಮುಂದುವರಿದಿದ್ದು, ಸಾವಿನ ಸಂಖ್ಯೆ 78ಕ್ಕೆ ಏರಿಕೆಯಾಗಿದೆ. ಇತ್ತೀಚಿನ ಅಧಿಕೃತ ವರದಿಗಳ ಪ್ರಕಾರ, ಶಿವಸಾಗರ್ ಜಿಲ್ಲೆಯಲ್ಲಿ ಇಬ್ಬರು ಹಾಗೂ ಗೋಲಾಘಾಟ್‌ನಲ್ಲಿ ಒಬ್ಬರು ನೀರಿನಲ್ಲಿ...

ನೀಟ್ ಪ್ರತಿಭಟನೆಯಲ್ಲಿ ಪೆಲೆಟ್ ಗನ್ ಬಳಕೆ ಆರೋಪ; RAF ಮದ್ದುಗುಂಡುಗಳ ದಾಖಲೆ ಕೇಳಿದ ಸುಪ್ರೀಂ ಕೋರ್ಟ್

ನೀಟ್-ಯುಜಿ ಪ್ರಶ್ನೆ ಪತ್ರಿಕೆ ಸೋರಿಕೆ ವಿರುದ್ಧ ವಿದ್ಯಾರ್ಥಿಗಳು ನಡೆಸಿದ ಪ್ರತಿಭಟನೆಯ ಸಂದರ್ಭದಲ್ಲಿ ಜಂತರ್ ಮಂತರ್‌ನಲ್ಲಿ ನಿಯೋಜಿಸಲಾಗಿದ್ದ ಕ್ಷಿಪ್ರ ಕಾರ್ಯ ಪಡೆ (RAF) ಯ ಮದ್ದುಗುಂಡುಗಳ ದಾಖಲೆಯನ್ನು ಸಂರಕ್ಷಿಸುವಂತೆ ಸುಪ್ರೀಂ ಕೋರ್ಟ್ ಗುರುವಾರ (ಜುಲೈ...

ಕ್ರಿಸ್ತನಿಗಿಂತ ಮೊದಲೇ ಇಲ್ಲಿದ್ದೇವೆ..ನಮಗೆ ಯಾವುದೇ ದಾಖಲೆಗಳು ಬೇಡ : ಎಸ್‌ಐಆರ್ ತಿರಸ್ಕರಿಸಿದ ಜಾರ್ಖಂಡ್‌ನ ಆದಿವಾಸಿಗಳು

ಜಾರ್ಖಂಡ್‌ನ ಖುಂತಿ ಜಿಲ್ಲೆಯ ದಟ್ಟ ಅರಣ್ಯ ಭಾಗದಲ್ಲಿ ವಾಸಿಸುವ ಮುಂಡಾ ಬುಡಕಟ್ಟು ಸಮುದಾಯದ ಒಂದು ವರ್ಗವು ಚುನಾವಣಾ ಆಯೋಗದ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಪ್ರಕ್ರಿಯೆಯನ್ನು ತೀವ್ರವಾಗಿ ವಿರೋಧಿಸಿದ್ದು, ಆಧುನಿಕ...