Homeಕರೋನಾ ತಲ್ಲಣಕೋವಾಕ್ಸಿನ್ ಲಸಿಕೆ ಪ್ರಯೋಗಕ್ಕೆ ICMR ನಿಂದ ಒತ್ತಡ: AIIMS ಆಕ್ಚೇಪ

ಕೋವಾಕ್ಸಿನ್ ಲಸಿಕೆ ಪ್ರಯೋಗಕ್ಕೆ ICMR ನಿಂದ ಒತ್ತಡ: AIIMS ಆಕ್ಚೇಪ

ಭಾರತ್ ಬಯೋಟೆಕ್ ಮತ್ತು ಐಸಿಎಂಆರ್ ಅಭಿವೃದ್ಧಿಪಡಿಸಿದ ಕೊವಾಕ್ಸಿನ್‌ ಲಸಿಕೆಯ ಮಾನವ ಪ್ರಯೋಗಗಳಿಗೆ ಆಯ್ಕೆಯಾದ 10 ರಾಜ್ಯಗಳ 12 ಆಸ್ಪತ್ರೆಗಳಲ್ಲಿ ದೆಹಲಿಯ AIIMS ಆಸ್ಪತ್ರೆಯೂ ಒಂದಾಗಿದೆ.

- Advertisement -
- Advertisement -

ಭಾರತದಲ್ಲಿ ಅಭಿವೃದ್ಧಿ ಪಡಿಸಲಾಗಿದೆ ಎನ್ನಲಾಗಿರುವ ಕೊರೊನಾ ಲಸಿಕೆ ’ಕೊವಾಕ್ಸಿನ್’‌ ಅನ್ನು ವೈದ್ಯಕೀಯ ಪ್ರಯೋಗಕ್ಕೆ ದೆಹಲಿಯ AIIMS ಆಸ್ಪತ್ರೆ ಆಕ್ಷೇಪ ವ್ಯಕ್ತಪಡಿಸಿದೆ.

ಕೊರೊನಾ ರೋಗ ನಿವಾರಣೆಗಾಗಿ ಕಂಡುಹಿಡಿದಿದೆ ಎನ್ನಲಾಗಿರುವ ಲಸಿಕೆಯನ್ನು ತ್ವರಿತವಾಗಿ ಪ್ರಯೋಗಕ್ಕೆ ಒಳಪಡಿಸಲು ಸಾಧ್ಯವಿಲ್ಲ ಎಂದು ತನ್ನ ಸ್ಟಡಿ ಪ್ರೊಟೊಕಾಲ್‌ನಲ್ಲಿ ಪ್ರಯೋಗಕ್ಕೆ ಸಂಬಂಧಿಸಿದಂತೆ ಹಲವಾರು ಅಂಶಗಳನ್ನು ಆಕ್ಷೇಪಿಸಿದೆ.

ಭಾರತ್ ಬಯೋಟೆಕ್ ಮತ್ತು ಐಸಿಎಂಆರ್ ಅಭಿವೃದ್ಧಿಪಡಿಸಿದ ಕೊವಾಕ್ಸಿನ್‌ ಲಸಿಕೆಯ ಮಾನವ ಪ್ರಯೋಗಗಳಿಗೆ ಆಯ್ಕೆಯಾದ 10 ರಾಜ್ಯಗಳ 12 ಆಸ್ಪತ್ರೆಗಳಲ್ಲಿ ದೆಹಲಿಯ AIIMS ಆಸ್ಪತ್ರೆಯೂ ಒಂದಾಗಿದೆ.

ಪ್ರಯೋಗಕ್ಕಾಗಿ ಆಯ್ಕೆಯಾದ ಇತರ ಆಸ್ಪತ್ರೆಗಳು ಕೂಡ ಅಧ್ಯಯನ ವಿನ್ಯಾಸದಲ್ಲಿ ಬದಲಾವಣೆಗಳನ್ನು ಸೂಚಿಸಿರುವ ಅಧ್ಯಯನ ಪ್ರೋಟೋಕಾಲ್ ಅನ್ನು ಅನುಮೋದಿಸಿವೆ.

ಆಸ್ಪತ್ರೆಯ ಸಮಿತಿಯು ಪ್ರಸ್ತಾಪಿಸಿರುವ ಪ್ರೊಟೊಕಾಲ್‌ನಲ್ಲಿ 11 ಅಂಶಗಳಿಗೆ ಸಂಬಂಧಿಸಿದಂತೆ ಆಕ್ಷೇಪ ವ್ಯಕ್ತಪಡಿಸಿದೆ. ಅವುಗಳನ್ನು ತಿದ್ದುಪಡಿ ಮಾಡಲು ಸೂಚಿಸಿದೆ.

ಅದರಲ್ಲಿ ಪ್ರಮುಖವಾಗಿ, ಮೊದಲ ಮತ್ತು ಎರಡನೇ ಹಂತದ ಪ್ರಯೋಗಗಳಿಗಾಗಿ ಪ್ರಸ್ತಾಪಿಸಲಾಗಿರುವ 1,125 ಆರೋಗ್ಯವಂತ ಸ್ವಯಂಸೇವಕರ ಮಾದರಿ ಗಾತ್ರವನ್ನು ಅಧ್ಯಯನ ವಿನ್ಯಾಸದಲ್ಲಿ ಮಾರ್ಪಾಡು ಮಾಡಲು ನೈತಿಕ ಸಮಿತಿಯು ಒತ್ತಾಯಿಸಿದೆ. ಈ ಕುರಿತು ಮತ್ತೆ ಚರ್ಚಿಸಲಾಗುವುದು ಎಂದು ಸಂಸ್ಥೆಯ ಹಿರಿಯ ಅಧಿಕಾರಿಯೊಬ್ಬರು ಹೇಳಿದ್ದಾರೆ.

ಆಕ್ಷೇಪ ವ್ಯಕ್ತಪಡಿಸಿರುವ ಬಗ್ಗೆ ಪ್ರತಿಕ್ರಿಯಿಸಿರುವ AIIMS ಅಧಿಕಾರಿಯೊಬ್ಬರು “ಇದು AIIMS ಮತ್ತು ದೇಶದ ಇತರ ಸಂಸ್ಥೆಗಳ ನಡುವಿನ ವ್ಯತ್ಯಾಸ. ಪ್ರತಿಯೊಂದು ಸಂಶೋಧನಾ ಯೋಜನೆಗೂ ನಾವು ಅನುಸರಿಸುವ ಅತ್ಯುನ್ನತ ನೈತಿಕ ಮಾನದಂಡಗಳು ಮತ್ತು ಕಠಿಣತೆಯ ಬಗ್ಗೆ ನಾವು ಹೆಮ್ಮೆ ಪಡುತ್ತೇವೆ” ಎಂದು ಹೇಳಿದ್ದಾರೆ.

ಐಸಿಎಂಆರ್‌ ಸಂಸ್ಥೆಯು 12 ಆಸ್ಪತ್ರೆಗಳಿಗೆ  ಜುಲೈ 2ರಂದು ಬರೆದಿದ್ದ ಪತ್ರದಲ್ಲಿ ಪ್ರಯೋಗಗಳನ್ನು ತ್ವರಿತಗತಿಯಲ್ಲಿ ನಡೆಸಬೇಕೆಂದು ಒತ್ತಾಯಿಸಿತ್ತು. ಆಗಸ್ಟ್ 15 ರೊಳಗೆ ಲಸಿಕೆಯನ್ನು ದೇಶಾದ್ಯಂತ ಬಿಡುಗಡೆ ಮಾಡುವ, ಲಸಿಕೆಯ ಮೂಲಕ ಚಿಕಿತ್ಸೆ ಪ್ರಾರಂಭಿಸಲು ಉದ್ದೇಶಿಸಿದ್ದು, ಜುಲೈ 7 ರೊಳಗೆ ಪ್ರಯೋಗದ ವರದಿಯನ್ನು ನೀಡುವಂತೆ ಕೇಳಿತ್ತು.

ಇದಕ್ಕೆ ತಜ್ಞರು ಅವಸರದ ಮತ್ತು ಅವಾಸ್ತವಿಕ ಕಾರ್ಯ ಹೇಳಿದ್ದಾರೆ. ಪ್ರಯೋಗದ ವರದಿಯ ದಾಖಲಾತಿ ಜುಲೈ 7 ರಿಂದ ಪ್ರಾರಂಭವಾಗಬಹುದು; ಅದನ್ನು ಪೂರ್ಣಗೊಳಿಸಲು ಹಲವಾರು ದಿನಗಳು ಬೇಕಾಗುತ್ತದೆ ಎಂದು ದೆಹಲಿಯ AIIMS ಮೂಲಗಳು ತಿಳಿಸಿವೆ.

ಮೂಲ ಪ್ರೋಟೋಕಾಲ್ ಪ್ರಕಾರ, ಮೊದಲ ಹಂತದಲ್ಲಿ ಲಸಿಕೆಯನ್ನು 375 ವ್ಯಕ್ತಿಗಳ ಮೇಲೆ ಪ್ರಯೋಗಿಸಿ ಅಧ್ಯಯನ ಮಾಡಬೇಕಾಗುತ್ತದೆ. ನಂತರ ಎರಡನೇ ಹಂತದಲ್ಲಿ ಅದರ ಸುರಕ್ಷತೆ, ಪ್ರತಿಕ್ರಿಯಾತ್ಮಕತೆ, ಸಹಿಷ್ಣುತೆ ಮತ್ತು ಇಮ್ಯುನೊಜೆನೆಸಿಟಿಯನ್ನು ಮೌಲ್ಯಮಾಪನ ಮಾಡಲಾಗುತ್ತದೆ. ಇದಕ್ಕಾಗಿ ಸ್ವಯಂಸೇವಕರಿಗೆ ಎರಡು ಇಂಟ್ರಾಮಸ್ಕುಲರ್ ನೀಡಲಾಗುತ್ತದೆ.

ಪ್ರಯೋಗಗಳಿಗೆ ವಯಸ್ಸಿನ ಆಧಾರದಲ್ಲಿ ಗುಂಪುಗಳನ್ನು ಮಾಡಲಾಗುತ್ತದೆ. ಮೊದಲ ಹಂತಕ್ಕೆ 18-55 ವಯಸ್ಸಿನವರು ಮತ್ತು ಎರಡನೇ ಹಂತಕ್ಕೆ 12-65 ವಯಸ್ಸಿನವರನ್ನು ಆಯ್ಕೆ ಮಾಡಲಾಗುತ್ತದೆ. ಆದಾಗ್ಯೂ,ದೆಹಲಿಯ AIIMS ಸಮಿತಿಯ ಆಕ್ಷೇಪಣೆಗಳ ನಂತರ ಅಧ್ಯಯನದ ವಿನ್ಯಾಸವು ಕೆಲವು ಬದಲಾವಣೆಗಳನ್ನು ಕಾಣಬಹುದು.


ಇದನ್ನೂ ಓದಿ : ಆಗಸ್ಟ್ 15 ರೊಳಗೆ ಕೊರೊನಾ ಲಸಿಕೆ ಬಿಡುಗಡೆ ಮಾಡಲಿರುವ ಐಸಿಎಂಆರ್


 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

SIR ಪ್ರಕ್ರಿಯೆಯಲ್ಲಿ ಯಾರ ಹೆಸರು ಬಿಟ್ಟುಹೋಗಬಾರದು: PRC ನೀಡಲು ವಿಳಂಬ ಬೇಡ ಡಾ. ಜಿ. ಪರಮೇಶ್ವರ್

ಉದ್ಯೋಗ ಅಥವಾ ವಿವಿಧ ಕಾರಣಗಳಿಂದಾಗಿ ತಮ್ಮ ಸ್ವಂತ ಊರು ತೊರೆದು ಬೇರೆಡೆಗೆ ಸ್ಥಳಾಂತರಗೊಂಡು ನೆಲೆಸಿರುವ ರಾಜ್ಯದ ಯಾವುದೇ ನಾಗರಿಕರು ಯಾವುದೇ ಕಾರಣಕ್ಕೂ ಮತದಾರರ ಪಟ್ಟಿಯಿಂದ ಹೊರಗುಳಿಯಬಾರದು ಎಂದು ಉಪಮುಖ್ಯಮಂತ್ರಿ ಹಾಗೂ ಕಂದಾಯ ಸಚಿವರಾದ...

ಬಿಹಾರ ಪ್ರವಾಹದ ನಡುವೆ ಮೋದಿ ಹುಟ್ಟುಹಬ್ಬದ ಪ್ರಯುಕ್ತ ದೀಪೋತ್ಸವ; ‘ಆಶೀರ್ವಾದ್ ಕಾ ದಿಯಾ’ ಕಾರ್ಯಕ್ರಮಕ್ಕೆ ತೇಜಸ್ವಿ ಯಾದವ್ ಆಕ್ಷೇಪ

ಬಿಹಾರದಲ್ಲಿ ಪ್ರವಾಹ ಪರಿಸ್ಥಿತಿ ಮುಂದುವರಿದಿರುವ ನಡುವೆಯೇ ಪ್ರಧಾನಿ ನರೇಂದ್ರ ಮೋದಿ ಅವರ ಹುಟ್ಟುಹಬ್ಬದ ಅಂಗವಾಗಿ ಸೆಪ್ಟೆಂಬರ್ 17ರಂದು ‘ಆಶೀರ್ವಾದ್ ಕಾ ದಿಯಾ’ ಕಾರ್ಯಕ್ರಮ ಆಯೋಜಿಸಿರುವುದು ರಾಜಕೀಯ ಚರ್ಚೆಗೆ ಕಾರಣವಾಗಿದೆ. ರಾಜ್ಯದ 15 ಜಿಲ್ಲೆಗಳಲ್ಲಿ...

ಉಮರ್ ಖಾಲಿದ್ ಅವರನ್ನು ‘ದೇಶಪ್ರೇಮಿ’ ಎಂದ ಬಿ.ಕೆ. ಹರಿಪ್ರಸಾದ್; ವಿಧಾನಸೌಧ ಪೊಲೀಸ್ ಠಾಣೆಯಲ್ಲಿ ದೂರು ದಾಖಲು

ಬೆಂಗಳೂರಿನ ರಾಷ್ಟ್ರೀಯ ಕಾನೂನು ಶಾಲೆ (ಎನ್‌ಎಲ್‌ಎಸ್‌ಐಯು) ಯೂನಿವರ್ಸಿಟಿಯಲ್ಲಿ ಜೈಲಿನಲ್ಲಿರುವ ಹೋರಾಟಗಾರ ಉಮರ್ ಖಾಲಿದ್ ಕುರಿತಾದ ಸಾಕ್ಷ್ಯಚಿತ್ರಕ್ಕೆ ಸಂಬಂಧಿಸಿದಂತೆ ನಡೆಯುತ್ತಿರುವ ವಿವಾದದ ನಡುವೆ, ಅವರನ್ನು "ರಾಷ್ಟ್ರಪ್ರೇಮಿ" ಎಂದು ಕರೆದಿರುವ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ...

ಇಂದಿರಾ ಗಾಂಧಿಯಂತೆ ನೇರವಾಗಿ ನಿಲ್ಲಿ, ಟ್ರಂಪ್ ಮುಂದೆ ಮಂಡಿಯೂರುತ್ತಿದ್ದೀರಿ: ‘UPI ಟ್ಯಾಕ್ಸ್’ ಬಗ್ಗೆ ಮೋದಿ ವಿರುದ್ಧ ರಾಹುಲ್ ವಾಗ್ದಾಳಿ!

ಯುಪಿಐ (UPI) ವಹಿವಾಟುಗಳಿಗೆ ಸಂಬಂಧಿಸಿದಂತೆ ಜಾರಿಯಾಗುತ್ತಿರುವ ಹೊಸ 'ಮರ್ಚೆಂಟ್ ಡಿಸ್ಕೌಂಟ್ ರೇಟ್' (MDR) ವ್ಯವಸ್ಥೆ ಇದೀಗ ತೀವ್ರ ರಾಜಕೀಯ ಸಂಘರ್ಷಕ್ಕೆ ಕಾರಣವಾಗಿದೆ. ಇದನ್ನು "ಬ್ಯಾಂಕ್‌ಗಳು ವಿಧಿಸುವ ಸೇವಾ ಶುಲ್ಕ" ಎಂದು ಸರ್ಕಾರ ಸಮರ್ಥಿಸಿಕೊಳ್ಳುತ್ತಿದ್ದರೂ,...

ಲಿಯೋನೆಲ್ ಮೆಸ್ಸಿ ಕೇರಳ ಭೇಟಿ ಪ್ರಕರಣ: ಕೊಚ್ಚಿಯ ‘ರಿಪೋರ್ಟರ್ ಟಿವಿ’ ಕಚೇರಿಯಲ್ಲಿ ಪೊಲೀಸರಿಂದ ಶೋಧ

ಮಲಯಾಳಂ ಸುದ್ದಿ ವಾಹಿನಿ 'ರಿಪೋರ್ಟರ್ ಟಿವಿ'ಯ ಕೊಚ್ಚಿ ಪ್ರಧಾನ ಕಚೇರಿಯಲ್ಲಿ ಬುಧವಾರ (ಸೆ.16) ಮುಂಜಾನೆ ಪೊಲೀಸ್ ತಂಡವೊಂದು ಶೋಧ ಕಾರ್ಯ ನಡೆಸಿದ್ದು, ಇದರಿಂದಾಗಿ ತನ್ನ ಸುದ್ದಿ ಪ್ರಸಾರ ಕಾರ್ಯಾಚರಣೆಗೆ ಅಡಚಣೆಯಾಗಿದೆ ಎಂದು ವಾಹಿನಿ...

‘ಏಕರೂಪತೆ ಸಮಾನತೆಯಲ್ಲ’: 2029ಕ್ಕೂ ಮುನ್ನ 21 ರಾಜ್ಯಗಳಲ್ಲಿ ಯುಸಿಸಿ ಜಾರಿ ಘೋಷಿಸಿದ ಅಮಿತ್ ಶಾಗೆ ಪ್ರತಿಪಕ್ಷಗಳ ತೀವ್ರ ತಿರುಗೇಟು

ನವದೆಹಲಿ/ಮುಂಬೈ: 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ನೇತೃತ್ವದ ಎನ್‌ಡಿಎ ಸರ್ಕಾರಗಳಿರುವ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆ (ಯುಸಿಸಿ) ಜಾರಿಗೆ ತರಲಾಗುವುದು ಎಂಬ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ...

KPSC ಅಧ್ಯಕ್ಷರ ಪುತ್ರಿಯ ನಕಲಿ ಪ್ರಮಾಣಪತ್ರ ಹಗರಣ: ಅಕ್ರಮಕ್ಕೆ ಸಾಥ್ ನೀಡಿದ್ದ ಅಧಿಕಾರಿಯ ಜಾಮೀನು ಅರ್ಜಿ ವಜಾ

ಕೆಪಿಎಸ್‌ಸಿ (KPSC) ಅಧ್ಯಕ್ಷರ ಪುತ್ರಿಗೆ ಅಕ್ರಮವಾಗಿ ನಕಲಿ ಆದಾಯ ಪ್ರಮಾಣಪತ್ರ ನೀಡಿದ ಆರೋಪ ಎದುರಿಸುತ್ತಿರುವ ಕಂದಾಯ ಅಧಿಕಾರಿಯ ನಿರೀಕ್ಷಣಾ ಜಾಮೀನು ಅರ್ಜಿಯನ್ನು ಬೆಂಗಳೂರಿನ ನಗರ ಸಿವಿಲ್ ಮತ್ತು ಸೆಷನ್ಸ್ ನ್ಯಾಯಾಲಯ ಮಂಗಳವಾರ ವಜಾಗೊಳಿಸಿದೆ....

ಬಂಗಾಳದಲ್ಲಿ ಬಿಜೆಪಿ ಸರ್ಕಾರದ ನಿರ್ಬಂಧ; ನೆಲಕಚ್ಚಿದ ದನದ ಮಾಂಸ ವ್ಯಾಪಾರ

ಪಶು ಹತ್ಯೆಯ ಕುರಿತು ಮುಖ್ಯಮಂತ್ರಿ ಸುವೇಂಧು ಅಧಿಕಾರಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಸೂಚನೆ ಹೊರಡಿಸಿದ ನಂತರ, ಮಾಂಸದ ವ್ಯಾಪಾರಿ ಮುಷ್ತಾಕ್ ಕಳೆದ ಮೂರು ತಿಂಗಳಿನಿಂದ ಒಂದು ಪೈಸೆಯನ್ನೂ ಗಳಿಸಿಲ್ಲ. "ಚುನಾವಣೆಯ ಕಾರಣದಿಂದ...

ತೀವ್ರಗೊಂಡ ಸೌದಿ-ಹೌತಿ ಸಂಘರ್ಷ : ಮಕ್ಕಾ ಗುರಿಯಾಗಿಸಿದ್ದ ಡ್ರೋನ್ ಹೊಡೆದುರುಳಿಸಿದ್ದೇವೆ ಎಂದ ಸೌದಿ; ತಳ್ಳಿಹಾಕಿದ ಹೌತಿ

ಯೆಮನ್‌ನ ರೆಬೆಲ್ ಗ್ರೂಪ್ ಹೌತಿ ಮತ್ತು ಸೌದಿ ಬೆಂಬಲಿತ ಪಡೆಗಳ ಸಂಘರ್ಷ ತೀವ್ರಗೊಂಡಿದ್ದು, ಇತಿಹಾಸದಲ್ಲೇ ಮೊದಲ ಬಾರಿಗೆ ಮುಸ್ಲಿಮರ ಪವಿತ್ರ ನಗರ ಮಕ್ಕಾದಲ್ಲಿ ಸೌದಿ ಅರೇಬಿಯಾದ ನಾಗರಿಕ ರಕ್ಷಣಾ (ಸಿವಿಲ್ ಡಿಫೆನ್ಸ್) ಇಲಾಖೆಯು...

ಸೌದಿಗೆ ಪ್ರಯಾಣಿಸುವ ತನ್ನ ನಾಗರಿಕರಿಗೆ ಎಚ್ಚರಿಕೆ ನೀಡಿದ ಅಮೆರಿಕ

ಸೌದಿ ಅರೇಬಿಯಾ ಬೆಂಬಲಿತ ಪಡೆಗಳು ಮತ್ತು ಯೆಮೆನ್‌ನ ಹೌದಿ ಬಂಡುಕೋರರ ನಡುವಿನ ಸಂಘರ್ಷ ತೀವ್ರಗೊಂಡಿದ್ದು, ಸೌದಿ ಯುದ್ಧ ವಿಮಾನವೊಂದನ್ನು ಹೊಡೆದುರುಳಿಸಿರುವುದಾಗಿ ಹೌದಿ ಪಡೆಗಳು ಪ್ರತಿಪಾದಿಸಿವೆ. ಮತ್ತೊಂದೆಡೆ, ಪವಿತ್ರ ನಗರಿ ಮಕ್ಕಾದ ದಕ್ಷಿಣ ಭಾಗದಲ್ಲಿ...