Homeಮುಖಪುಟಯುಪಿಯ 8 ಪೋಲಿಸರ ಹತ್ಯೆ : ದೆಹಲಿ ಹೋಟೆಲ್‌ನಲ್ಲಿ ಆರೋಪಿ ವಿಕಾಸ್ ದುಬೆ ಸುಳಿವು...

ಯುಪಿಯ 8 ಪೋಲಿಸರ ಹತ್ಯೆ : ದೆಹಲಿ ಹೋಟೆಲ್‌ನಲ್ಲಿ ಆರೋಪಿ ವಿಕಾಸ್ ದುಬೆ ಸುಳಿವು…

8 ಪೊಲೀಸರ ಹತ್ಯೆಗೆ ಕಾರಣರಾದ ಮಾಹಿತಿಸೋರಿಕೆ ಶಂಕೆಯ ಆಧಾರದ ಮೇಲೆ ಶುಕ್ರವಾರದಂದು 68 ಪೊಲೀಸರನ್ನು ಕಾನ್ಪುರದ ಚೌಬೆಪುರ ಪೊಲೀಸ್ ಠಾಣೆಯಿಂದ ತೆಗೆದುಹಾಕಲಾಗಿದೆ.

- Advertisement -
- Advertisement -

ಉತ್ತರ ಪ್ರದೇಶದ ಕಾನ್ಪುರದಲ್ಲಿ ಕಳೆದ ವಾರ ಎಂಟು ಪೊಲೀಸರನ್ನು ಹೊಂಚು ಹಾಕಿ ಕೊಲೆ ಮಾಡಿದ ಪ್ರಮುಖ ಆರೋಪಿ ಕುಖ್ಯಾತ ದರೋಡೆಕೋರ ವಿಕಾಸ್ ದುಬೆ ಮಂಗಳವಾರ ದೆಹಲಿ ಬಳಿಯ ಹರಿಯಾಣದ ಫರಿದಾಬಾದ್‌ನ ಹೋಟೆಲ್‌ನಲ್ಲಿ ಕಾಣಿಸಿಕೊಂಡಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ.

ಮಂಗಳವಾರ ಮಧ್ಯಾಹ್ನ ಫರಿದಾಬಾದ್ ಹೋಟೆಲ್‌ನಲ್ಲಿ ಪೋಲಿಸರು ದಾಳಿ ನಡೆಸಲಾಗಿದ್ದು, ಇಬ್ಬರನ್ನು ಬಂಧಿಸಲಾಗಿದೆ. ಪೊಲೀಸರು ತಲುಪುವ ಮೊದಲೇ ವಿಕಾಸ್ ದುಬೆಯನ್ನು ಹೋಲುವ ವ್ಯಕ್ತಿಯೊಬ್ಬ ಹೋಟೆಲ್ ತೊರೆದಿದ್ದಾನೆ ಎಂದು ಹೋಟೆಲ್ ಮ್ಯಾನೇಜರ್ ಹೇಳಿದ್ದಾರೆ. ಆ ವ್ಯಕ್ತಿ ವಿಕಾಸ್ ದುಬೆ ಎಂದು ಪೊಲೀಸರು ನಂತರ ಖಚಿತಪಡಿಸಿದ್ದಾರೆ.

ಹೋಟೆಲ್‌ನ ವ್ಯವಸ್ಥಾಪಕ ರೋಮಿ NDTVಗೆ ನೀಡಿದ ಹೇಳಿಕೆಯಲ್ಲಿ, “ನಿನ್ನೆ ಮಧ್ಯಾಹ್ನ 12:30 ರ ಸುಮಾರಿಗೆ ಇಬ್ಬರು ಬಂದರು. ಅವರಲ್ಲಿ ಒಬ್ಬರು ಗುರುತಿನ ಚೀಟಿಗಳನ್ನು ತೋರಿಸಿದರು, ಫೋಟೋ ಸ್ಪಷ್ಟವಾಗಿರಲಿಲ್ಲ. ಈ ಐಡಿಯನ್ನು ಬಳಸಲಾಗುವುದಿಲ್ಲ ಎಂದು ನಾನು ಅವರಿಗೆ ಹೇಳಿದೆ. ಇದಕ್ಕೂ ಮೊದಲು ವಿಕಾಸ್ ದುಬೆ ಅವರನ್ನು ನೋಡಿರಲಿಲ್ಲ. ಸಂಜೆ 4:30 ರ ಸುಮಾರಿಗೆ ಪೊಲೀಸರು ಬಂದು ದುಬೆ ಅವರ ಕೋಣೆಯ ವಿವರಗಳನ್ನು ಕೇಳಿದರು. ನಂತರ CCTV ಕ್ಯಾಮರಾದ ತುಣುಕುಗಳನ್ನು ತೆಗೆದುಕೊಂಡರು” ಎಂದು ಹೇಳಿದ್ದಾರೆ.

ಪೊಲೀಸರು ವಶಪಡಿಸಿಕೊಂಡ CCTV ದೃಶ್ಯಾವಳಿಗಳು ವಿಕಾಸ್ ದುಬೆ ಮಾಸ್ಕ್‌ ಧರಿಸಿರುವುದು ಖಚಿತವಾಗಿದೆ. ಮಂಗಳವಾರ ಬಂಧಿಸಲ್ಪಟ್ಟ ಇಬ್ಬರಲ್ಲಿ, ಕುಖ್ಯಾತ ಅಪರಾಧಿಗೆ ತಲೆಮರೆಸಿಕೊಳ್ಳಲು ಸಹಾಯ ಮಾಡಿದ ಅಂಕುರ್. ಮತ್ತೊಬ್ಬ ಪ್ರಭಾತ ಎಂಬುವವನು ಸಂಚುಕೋರರ ಗ್ರಾಮದವನು ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಶುಕ್ರವಾರ ನಡೆದ ಹತ್ಯಾಕಾಂಡದ ನಂತರ ನಾಪತ್ತೆಯಾಗಿದ್ದ ವಿಕಾಸ್ ದುಬೆಯನ್ನು ಬಂಧಿಸಲು ಯುಪಿ ಪೊಲೀಸರ ಇಪ್ಪತ್ತೈದು ತಂಡಗಳು ದಾಳಿ/ತನಿಖೆ ನಡೆಸುತ್ತಿವೆ. ಆರೋಪಿಯ ಬಗ್ಗೆ ಸುಳಿವು ಕೊಟ್ಟವರಿಗೆ 2.5 ಲಕ್ಷ ಬಹುಮಾನ ಘೋಷಿಸಲಾಗಿದೆ.

ದೆಹಲಿಯ ಸಮೀಪವಿರುವ ಹರಿಯಾಣದ ಎರಡು ನಗರಗಳು – ಫರಿದಾಬಾದ್ ಮತ್ತು ಗುರಗಾಂವ್ ಹೈ-ಅಲರ್ಟ್ ಘೋಷಿಸಿವೆ. ಈ ಎಚ್ಚರಿಕೆಯ ನಡುವೆಯೇ ಕುಖ್ಯಾತ ಅಪರಾಧಿ ರಾಷ್ಟ್ರೀಯ ರಾಜಧಾನಿ ಪ್ರದೇಶದಲ್ಲಿ ಶರಣಾಗಬಹುದು ಎಂಬ ಊಹಾಪೋಹಗಳಿವೆ.

ಬುಧವಾರ ಮುಂಜಾನೆ ಯುಪಿ ವಿಶೇಷ ಕಾರ್ಯಪಡೆ (ಎಸ್‌ಟಿಎಫ್)  ರಾಜ್ಯ ರಾಜಧಾನಿ ಲಕ್ನೋದಿಂದ 200 ಕಿ.ಮೀ ದೂರದ ಹಮೀರ್‌ಪುರ ಜಿಲ್ಲೆಯಲ್ಲಿ ನಡೆಸಿದ ಎನ್‌ಕೌಂಟರ್‌ನಲ್ಲಿ ಯುಪಿ ದರೋಡೆಕೋರನ ಆಪ್ತ ಸಹಾಯಕ ಅಮರ್ ದುಬೆ ಮೃತಪಟ್ಟಿದ್ದಾನೆ. ಕಾನ್ಪುರದಲ್ಲಿ  ಶ್ಯಾಮು ಬಾಜ್‌ಪೈ ಎಂಬ ಇನ್ನೊಬ್ಬ ಸಹಾಯಕನನ್ನು ಬಂಧಿಸಲಾಗಿದೆ.

8 ಪೊಲೀಸರ ಹತ್ಯೆಗೆ ಕಾರಣರಾದ ಮಾಹಿತಿಸೋರಿಕೆ ಶಂಕೆಯ ಆಧಾರದ ಮೇಲೆ ಶುಕ್ರವಾರದಂದು 68 ಪೊಲೀಸರನ್ನು ಕಾನ್ಪುರದ ಚೌಬೆಪುರ ಪೊಲೀಸ್ ಠಾಣೆಯಿಂದ ತೆಗೆದುಹಾಕಲಾಗಿದೆ. ದುಬೆಯ ಬಿಕ್ರು ಗ್ರಾಮವು ಚೌಬೆಪುರ ಪೊಲೀಸ್ ಠಾಣೆ ವ್ಯಾಪ್ತಿಗೆ ಬರುತ್ತದೆ.

ಕಾನ್ಪುರ ಪೊಲೀಸರ ಮಾಜಿ ಮುಖ್ಯಸ್ಥ ಅನಂತ್ ಡಿಯೋ ಅವರನ್ನು ಯುಪಿ ಸರ್ಕಾರ ವರ್ಗಾಯಿಸಿದೆ. ಎಸ್‌ಟಿಎಫ್‌ನೊಂದಿಗೆ ಡೆಪ್ಯೂಟಿ ಇನ್ಸ್‌ಪೆಕ್ಟರ್ ಜನರಲ್ ಆಗಿರುವ ಡಿಯೊ ಅವರನ್ನು ಮೊರಾದಾಬಾದ್‌ನ ಪ್ರಾಂತೀಯ ಸಶಸ್ತ್ರ ಕಾನ್‌ಸ್ಟಾಬ್ಯುಲರಿಗೆ ವರ್ಗಾಯಿಸಲಾಗಿದೆ. ಶುಕ್ರವಾರ ಕೊಲೆಯಾದ ಉಪ ಪೊಲೀಸ್ ವರಿಷ್ಠಾಧಿಕಾರಿ ದೇವೇಂದ್ರ ಮಿಶ್ರಾ ಅವರು ಮಾರ್ಚ್‌ನಲ್ಲಿ ಬರೆದ ಪತ್ರವೊಂದನ್ನು ಅವರು ನಿರ್ಲಕ್ಷಿಸಿದ್ದಾರೆ ಎಂದು ಆರೋಪಿಸಲಾಗಿದೆ.

ದೇವೇಂದ್ರ ಮಿಶ್ರಾ ಬರೆದಿದ್ದಾರೆ ಎನ್ನಲಾಗಿರುವ ಪತ್ರದಲ್ಲಿ, ಚೌಬೆಪುರ ಪೊಲೀಸ್ ಠಾಣೆಯ ಸ್ಟೇಷನ್ ಆಫೀಸರ್ ವಿನಯ್ ತಿವಾರಿ ದರೋಡೆಕೋರರಿಗೆ ಸಹಾಯ ಮಾಡುತ್ತಿದ್ದಾರೆ ಎಂದು  ಆರೋಪ ಮಾಡಿದ್ದರು. ದೂರನ್ನು ನಿರ್ಲಕ್ಷಿಸಿದರೆ “ದೊಡ್ಡ ಅಚಾತುರ್ಯ” ನಡೆಯುವ ಬಗ್ಗೆ ಪತ್ರದಲ್ಲಿ ಎಚ್ಚರಿಕೆ ನೀಡಿದ್ದರು. ಪತ್ರದ ನಕಲನ್ನು ಸಾಮಾಜಿಕ ಮಾಧ್ಯಮದಲ್ಲಿ ವ್ಯಾಪಕವಾಗಿ ಪ್ರಸಾರ ಮಾಡಲಾಗುತ್ತಿದೆ. ಆದರೆ ಪತ್ರ ಸಿಕ್ಕಿಲ್ಲ ಎಂದು ಪೊಲೀಸರು ಹೇಳಿದ್ದಾರೆ. ವಿನಯ್ ತಿವಾರಿ ಅವರನ್ನು ಭಾನುವಾರ ಅಮಾನತು ಮಾಡಲಾಗಿದೆ.


ಇದನ್ನೂ ಓದಿ: ಯುಪಿ ದಾಳಿಯಲ್ಲಿ ಕೊಲ್ಲಲ್ಪಟ್ಟ ಅಧಿಕಾರಿ ಬರೆದ ಪತ್ರ ವೈರಲ್; ನಮಗೆ ಸಿಕ್ಕಿಲ್ಲವೆಂದ ಪೊಲೀಸರು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...