Homeಮುಖಪುಟಡಾ.ಬಿ.ಆರ್.ಅಂಬೇಡ್ಕರ್‌ರವರ ಮುಂಬೈ ಮನೆ 'ರಾಜ್‌ಗೃಹ' ಮೇಲೆ ದಾಳಿ, ಧ್ವಂಸ

ಡಾ.ಬಿ.ಆರ್.ಅಂಬೇಡ್ಕರ್‌ರವರ ಮುಂಬೈ ಮನೆ ‘ರಾಜ್‌ಗೃಹ’ ಮೇಲೆ ದಾಳಿ, ಧ್ವಂಸ

ಪ್ರಕಾಶ್ ಅಂಬೇಡ್ಕರ್ ಅವರ ಕುಟುಂಬ ಸದಸ್ಯರು ಸಹ ಈ ಕಟ್ಟಡದಲ್ಲಿ ವಾಸಿಸುತ್ತಿದ್ದಾರೆ. ಅದರಲ್ಲಿ ಹೆಚ್ಚಿನ ಭಾಗವನ್ನು ಡಾ. ಅಂಬೇಡ್ಕರ್ ಅವರ ಪುಸ್ತಕಗಳು ಮತ್ತು ಇತರ ವಸ್ತುಗಳಿಗೆ ವಸ್ತು ಸಂಗ್ರಹಾಲಯವಾಗಿ ಬಳಸಲಾಗುತ್ತಿದೆ.

- Advertisement -
- Advertisement -

ಮುಂಬೈನ ದಾದರ್ ಪ್ರದೇಶದಲ್ಲಿರುವ ಡಾ.ಬಿ.ಆರ್ ಅಂಬೇಡ್ಕರ್ ಅವರ ಮನೆ ‘ರಾಜ್‌ಗೃಹ’ ಮೇಲೆ ಇಬ್ಬರು ಅಪರಿಚಿತ ಕಿಡಿಗೇಡಿಗಳು ಮಂಗಳವಾರ ಸಂಜೆ ದಾಳಿ ನಡೆಸಿ ಧ್ವಂಸ ಮಾಡಿದ್ದಾರೆ. ಮನೆಯ ಕಿಟಕಿ ಗಾಜುಗಳು ಮತ್ತು ಸಿಸಿಟಿವಿ ಕ್ಯಾಮೆರ ಮೇಲೆ ಮನಬಂದಂತೆ ಕಲ್ಲು ತೂರಿದ್ದಾರೆ ಎನ್ನಲಾಗಿದೆ. ಮನೆ ಮುಂದಿನ ಗಿಡಗಳನ್ನು ಕಿತ್ತೆಸೆದು ಚೆಲ್ಲಾಪಿಲ್ಲಿ ಮಾಡಲಾಗಿದೆ.

“ರಾಜ್‌ಗೃಹದ ಸಿಸಿಟಿವಿ ಕ್ಯಾಮೆರಾಗಳು ಮತ್ತು ಇತರ ವಸ್ತುಗಳನ್ನು ಧ್ವಂಸ ಮಾಡಲು ಇಬ್ಬರು ಪ್ರಯತ್ನಿಸಿದ್ದಾರೆ ಎಂಬುದು ನಿಜ. ಪೊಲೀಸರು ಪರಿಶೀಲಿಸುತ್ತಿದ್ದಾರೆ. ಎಲ್ಲಾ ಅಧಿಕಾರಿಗಳು ಸ್ಥಳಕ್ಕೆ ತಲುಪಿದ್ದಾರೆ ಮತ್ತು ವಿಚಾರಣೆ ನಡೆಯುತ್ತಿದೆ” ಎಂದು ಡಾ.ಅಂಬೇಡ್ಕರ್ ಅವರ ಮೊಮ್ಮಗ ಮತ್ತು ವಂಚಿತ್ ಬಹುಜನ ಅಗಾಡಿ ಮುಖಂಡ ಪ್ರಕಾಶ್ ಅಂಬೇಡ್ಕರ್ ವಿಡಿಯೋ ಹೇಳಿಕೆಯಲ್ಲಿ ತಿಳಿಸಿದ್ದಾರೆ.

ಈ ಘಟನೆಯನ್ನು ಮಹಾರಾಷ್ಟ್ರ ಗೃಹ ಸಚಿವ ಅನಿಲ್ ದೇಶ್ಮುಖ್ ತೀವ್ರವಾಗಿ ಖಂಡಿಸಿದ್ದು, ಪೊಲೀಸರು ಈ ಪ್ರಕರಣವನ್ನು ಆದ್ಯತೆಯ ಆಧಾರದ ಮೇಲೆ ತನಿಖೆ ನಡೆಸುತ್ತಿದ್ದಾರೆ. ಅಪರಾಧಿಗಳು ಕಠಿಣ ಕ್ರಮ ಎದುರಿಸಬೇಕಾಗುತ್ತದೆ ಎಂದು ಹೇಳಿದ್ದಾರೆ.

‘ರಾಜ್‌ಗೃಹ’

ಡಾ.ಬಿ.ಆರ್.ಅಂಬೇಡ್ಕರ್ ಅವರ ಮನೆ ‘ರಾಜ್‌ಗೃಹ’ ಮೇಲಿನ ವಿಧ್ವಂಸಕ ಕೃತ್ಯಗಳನ್ನು ರಾಜ್ಯ ಸರ್ಕಾರ ಗಂಭೀರವಾಗಿ ಪರಿಗಣಿಸಿದೆ ಮತ್ತು ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ಮಹಾರಾಷ್ಟ್ರ ಉಪಮುಖ್ಯಮಂತ್ರಿ ಅಜಿತ್ ಪವಾರ್ ಹೇಳಿದ್ದಾರೆ.

ಇದು ದುಷ್ಟ ಮನೋಭಾವದ ಸಮಾಜ ವಿರೋಧಿ ಕೃತ್ಯವಾಗಿದೆ. ಪೊಲೀಸರು ತಕ್ಷಣ ಈ ಬಗ್ಗೆ ತನಿಖೆ ಆರಂಭಿಸಿದ್ದಾರೆ. ಆರೋಪಿಗಳನ್ನು ಶೀಘ್ರದಲ್ಲಿಯೇ ಪತ್ತೆ ಹಚ್ಚಲಾಗುವುದು ಮತ್ತು ಅವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುವುದು” ಎಂದು ಅವರು ಹೇಳಿದರು.

ಅಂಬೇಡ್ಕರ್ ಅವರ ಕೆಲಸ ಮತ್ತು ಸಿದ್ಧಾಂತವು ಜನರ ಮನಸ್ಸಿನಲ್ಲಿ ಆಳವಾಗಿ ಬೇರೂರಿದೆ. ಜನರಲ್ಲಿರುವ ಈ ನಂಬಿಕೆಯನ್ನು ತೆಗೆದುಹಾಕಲು ಯಾರಿಂದಲೂ ಸಾಧ್ಯವಿಲ್ಲ ಎಂದು ಉಪಮುಖ್ಯಮಂತ್ರಿ ಹೇಳಿದ್ದಾರೆ.

ಅಂಬೇಡ್ಕರ್‌ರವರ ಹಿಂದಿನ ಮನೆಯ ಸಿಸಿಟಿವಿ ದೃಶ್ಯಾವಳಿಗಳಲ್ಲಿ ಕಿಡಿಗೇಡಿಗಳು ಓಡಿಹೋಗುವ ಮೊದಲು ಕಾಂಪೌಂಡ್‌ನಲ್ಲಿದ್ದ ಹೂವಿನ ಮಡಿಕೆಗಳನ್ನು ಒಡೆಯುವುದನ್ನು ತೋರಿಸುತ್ತದೆ ಎಂದು ಪೊಲೀಸ್ ಅಧಿಕಾರಿ ತಿಳಿಸಿದ್ದಾರೆ. ಘಟನೆಯ ಕುರಿತು ಮಾತುಂಗ ಪೊಲೀಸರು ಎಫ್‌ಐಆರ್ ದಾಖಲಿಸಿದ್ದಾರೆ.

‘ರಾಜ್‌ಗೃಹ’

ದಾದರ್‌ನ ಹಿಂದೂ ಕಾಲೋನಿಯಲ್ಲಿರುವ ಎರಡು ಅಂತಸ್ತಿನ ಪಾರಂಪರಿಕ ಬಂಗಲೆಯಲ್ಲಿ ಅಂಬೇಡ್ಕರ್ ಮ್ಯೂಸಿಯಂ ಇದೆ, ಅಲ್ಲಿ ಬಾಬಾಸಾಹೇಬರ ಪುಸ್ತಕಗಳು, ಭಾವಚಿತ್ರ, ಚಿತಾಭಸ್ಮ ಮತ್ತು ಹಡಗುಗಳು ಕಲಾಕೃತಿಗಳು ಇವೆ.

ಪ್ರಕಾಶ್ ಅಂಬೇಡ್ಕರ್ ಅವರ ಕುಟುಂಬ ಸದಸ್ಯರು ಸಹ ಈ ಕಟ್ಟಡದಲ್ಲಿ ವಾಸಿಸುತ್ತಿದ್ದಾರೆ. ಅದರಲ್ಲಿ ಹೆಚ್ಚಿನ ಭಾಗವನ್ನು ಡಾ. ಅಂಬೇಡ್ಕರ್ ಅವರ ಪುಸ್ತಕಗಳು ಮತ್ತು ಇತರ ವಸ್ತುಗಳಿಗೆ ವಸ್ತು ಸಂಗ್ರಹಾಲಯವಾಗಿ ಬಳಸಲಾಗುತ್ತಿದೆ.

ಈ ಘಟನೆಯು ಮಹಾರಾಷ್ಟ್ರದಲ್ಲಿ ದಲಿತರ ಪ್ರತಿಭಟನೆಯನ್ನು ಪ್ರಚೋದಿಸಬಹುದೆಂದು ಭಾವಿಸಿ ಪ್ರಕಾಶ್ ಅಂಬೇಡ್ಕರ್ ಅವರು ಶಾಂತಿಗಾಗಿ ಮನವಿ ಮಾಡಿದ್ದಾರೆ.

“ನಾನು ಎಲ್ಲರೂ ಶಾಂತವಾಗಿರಲು ಮನವಿ ಮಾಡುತ್ತೇನೆ. ಘಟನೆಯ ನಂತರ ಪೊಲೀಸರು ಅತ್ಯಂತ ವೇಗವಾಗಿ ಕಾರ್ಯನಿರ್ವಹಿಸುತ್ತಿದ್ದಾರೆ. ‘ರಾಜ್‌ಗೃಹ’ ಸುತ್ತ ಯಾರೂ ಗುಂಪುಗೂಡಬಾರದೆಂದು ನಾನು ವಿನಂತಿಸುತ್ತೇನೆ” ಎಂದು ಪ್ರಕಾಶ್ ಅಂಬೇಡ್ಕರ್ ಹೇಳಿದ್ದಾರೆ.

ಮಹಾರಾಷ್ಟ್ರದ ಮಾಜಿ ಸಿಎಂ ಮತ್ತು ವಿಧಾನಸಭೆಯ ಪ್ರತಿಪಕ್ಷದ ನಾಯಕ ದೇವೇಂದ್ರ ಫಡ್ನವಿಸ್ ಅವರು ಅಪರಾಧಿಗಳನ್ನು ತಕ್ಷಣ ಬಂಧಿಸುವಂತೆ ಒತ್ತಾಯಿಸಿದ್ದಾರೆ.


ಇದನ್ನೂ ಓದಿ: ಫ್ಯಾಕ್ಟ್‌ಚೆಕ್: ಕನ್ನಡ ಖಾಸಗಿ ಚಾನೆಲ್ ಮಾಲಕರು ಪ್ರತಿ ಜಿಲ್ಲೆಯಲ್ಲಿ ಕೊರೊನಾ ಆಸ್ಪತ್ರೆ ಕಟ್ಟುತ್ತಿರುವುದು ನಿಜವೇ ?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...

ಏಕರೂಪ ನಾಗರಿಕ ಸಂಹಿತೆಯನ್ನು ಸಂಸತ್ತಿನ ಬದಲು ರಾಜ್ಯಗಳ ಮೂಲಕವೇ ಜಾರಿಗೆ ಅಮಿತ್ ಶಾ ಮುಂದಾಗಿದ್ದೇಕೆ?

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೆಪ್ಟೆಂಬರ್ 13ರಂದು ಮುಂಬೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ, 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ಮತ್ತು ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ...

ದಿಶಾ ಸಾಲಿಯಾನ್ ಸಾವಿನ ಪ್ರಕರಣ : ಸಿಬಿಐ ಎಫ್ಐಆರ್‌ನಲ್ಲಿ ಆದಿತ್ಯ ಠಾಕ್ರೆ, ರಿಯಾ ಚಕ್ರವರ್ತಿ ಸೇರಿದಂತೆ ಹಲವರ ಹೆಸರು

ಬಾಂಬೆ ಹೈಕೋರ್ಟ್ ಆದೇಶದ ಮೇರೆಗೆ, ಕೇಂದ್ರೀಯ ತನಿಖಾ ದಳವು (ಸಿಬಿಐ) ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಅವರ ನಿಗೂಢ ಸಾವಿಗೆ ಸಂಬಂಧಿಸಿದಂತೆ ಸೋಮವಾರ(ಸೆ.14) ಎಫ್‌ಐಆರ್ ದಾಖಲಿಸಿದೆ. ಶಿವಸೇನೆ...

ಟಿ. ನರಸೀಪುರ ಇನ್ಸ್‌ಪೆಕ್ಟರ್‌ ಧನಂಜಯ್‌ ಹೇಳಿದ್ದರಲ್ಲಿ ತಪ್ಪೇನಿದೆ? ಸಾರ್ವಜನಿಕರಿಂದ ಬೆಂಬಲ

ಮಸೀದಿಗಳ ಮುಂಭಾಗ ಯಾವುದೇ ಪ್ರಚೋದನಕಾರಿ ಕೃತ್ಯಗಳಿಗೆ ಆಸ್ಪದ ನೀಡದೆ, ರಾತ್ರಿ 10:30ರ ಒಳಗಾಗಿ ಡಿಜೆ ಸದ್ದಿಲ್ಲದೆ ನಿಯಮಾನುಸಾರ ಮೆರವಣಿಗೆ ಮುಗಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಂಡ ಇನ್ಸ್‌ಪೆಕ್ಟರ್ ಧನಂಜಯ್ ಅವರ ಪರವಾಗಿ ಈಗ ಸಾಮಾಜಿಕ...

ಅತ್ಯಾಚಾರ ಪ್ರಕರಣದಲ್ಲಿ 10 ವರ್ಷ ಜೈಲು ಶಿಕ್ಷೆ: ‘ತೆಹಲ್ಕಾ’ ಸಂಸ್ಥಾಪಕ ತರುಣ್ ತೇಜ್‌ಪಾಲ್ ನ್ಯಾಯಾಲಯಕ್ಕೆ ಶರಣು, ಜೈಲಿಗೆ ರವಾನೆ 

ಪಣಜಿ: 2013ರ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್‌ನ ಗೋವಾ ಪೀಠದಿಂದ ದೋಷಿ ಎಂದು ತೀರ್ಪುಗೊಂಡು 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆಗೆ ಗುರಿಯಾಗಿರುವ ‘ತೆಹಲ್ಕಾ’ ಸಂಸ್ಥಾಪಕ ಹಾಗೂ ಮಾಜಿ ಪ್ರಧಾನ ಸಂಪಾದಕ...

ಹೈದರಾಬಾದ್‌ನಲ್ಲಿ ಗಣೇಶ ವಿಗ್ರಹ ಖರೀದಿ ವಿಚಾರಕ್ಕೆ ಘರ್ಷಣೆ: 34 ವರ್ಷದ ವ್ಯಕ್ತಿ ಸಾವು: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹ

ಹೈದರಾಬಾದ್: ಗಣೇಶ ಚತುರ್ಥಿ ಆಚರಣೆಗೆ ಮುನ್ನ ಗಣೇಶ ವಿಗ್ರಹ ಖರೀದಿಸುವ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ವಾಗ್ವಾದವು ಹಿಂಸಾತ್ಮಕ ಘರ್ಷಣೆಗೆ ತಿರುಗಿ 34 ವರ್ಷದ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಹೈದರಾಬಾದ್‌ನ ಜೋಡಿಮೆಟ್ಲಾ ಪ್ರದೇಶದಲ್ಲಿ ನಡೆದಿದೆ....

ಮಹಿಳಾ ಬೈಕರ್‌ಗೆ ಬೇಕಂತಲೇ ಢಿಕ್ಕಿ ಹೊಡೆದು ಪರಾರಿಯಾದ ಕಾರು ಸವಾರ! ಬೆಚ್ಚಿಬೀಳಿಸುವ ವಿಡಿಯೋ ವೈರಲ್

ಹರ್ಯಾಣದ ಗುರುಗ್ರಾಮದ ಗಾಲ್ಫ್ ಕೋರ್ಸ್ ರಸ್ತೆಯಲ್ಲಿ ಅತಿವೇಗವಾಗಿ ಬಂದ ಕಾರೊಂದು ಮಹಿಳಾ ಬೈಕ್ ಸವಾರಿಗೆ ಉದ್ದೇಶಪೂರ್ವಕವಾಗಿ ಢಿಕ್ಕಿ ಹೊಡೆದು ಪರಾರಿಯಾಗಿರುವ ಭೀಕರ ಘಟನೆ ನಡೆದಿದೆ. ಹಿಟ್ ಆ್ಯಂಡ್ ರನ್ ಶಂಕೆ ವ್ಯಕ್ತವಾಗಿರುವ ಈ...

ಪ. ಬಂಗಾಳ | 252 ಮದ್ರಸಾಗಳನ್ನು ಮುಚ್ಚಲು ಆದೇಶಿಸಿದ ಬಿಜೆಪಿ ಸರ್ಕಾರ; 100 ಸಂಸ್ಥೆಗಳಿಗೆ ಕಾರಣ ಕೇಳಿ ನೋಟಿಸ್

ರಾಜ್ಯದಾದ್ಯಂತ ಮದ್ರಸಾಗಳ ಸಮೀಕ್ಷೆಯನ್ನು ಪ್ರಾರಂಭಿಸಿದ ಮೂರು ತಿಂಗಳ ನಂತರ, ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಅನುಮೋದನೆಯ ಕೊರತೆ ಅಥವಾ ಇತರ ಅಕ್ರಮಗಳನ್ನು ಉಲ್ಲೇಖಿಸಿ 252 ಸಂಸ್ಥೆಗಳನ್ನು ಮುಚ್ಚಲು ಆದೇಶಿಸಿದೆ ಮತ್ತು ಇತರ...

ಟಿ. ನರಸೀಪುರ ಪ್ರತಿಭಟನೆ ವೇಳೆ ವಾಕ್ಸಮರ: ಪ್ರತಾಪ್ ಸಿಂಹ ಹಾಗೂ ಎಲ್. ನಾಗೇಂದ್ರ ನಡುವೆ ಬಹಿರಂಗ ನೂಕಾಟ-ತಳ್ಳಾಟ!

ಟಿ. ನರಸೀಪುರದಲ್ಲಿ ಗಣೇಶೋತ್ಸವ ಮೆರವಣಿಗೆಗೆ ಸಂಬಂಧಿಸಿದ ವಿವಾದದ ಹಿನ್ನೆಲೆಯಲ್ಲಿ ಬಿಜೆಪಿ ಹಮ್ಮಿಕೊಂಡಿದ್ದ ಪ್ರತಿಭಟನೆ ವೇಳೆ ಮೈಸೂರು ಬಿಜೆಪಿಯಲ್ಲಿನ ಆಂತರಿಕ ಭಿನ್ನಮತ ಬಹಿರಂಗಗೊಂಡಿದೆ. ಪೊಲೀಸ್ ಇನ್ಸ್‌ಪೆಕ್ಟರ್ ಧನಂಜಯ್ ವಿರುದ್ಧ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ಮಾಜಿ...

ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನ ಮುಂದೂಡಿದ NLSIU ವಿದ್ಯಾರ್ಥಿ ಸಂಘ; ಯಾವುದೇ ಒತ್ತಡಕ್ಕೆ ಮಣಿದಿಲ್ಲವೆಂದು ಸ್ಪಷ್ಟನೆ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯ (NLSIU) ಲಾ ಅಂಡ್ ಸೊಸೈಟಿ ಕಮಿಟಿಯು (LawSoc) ಉಮರ್ ಖಾಲಿದ್ ಅವರ ಜೈಲುವಾಸದ ಕುರಿತು ಲಲಿತ್ ವಾಚಾನಿ ನಿರ್ಮಿಸಿರುವ 'ಪ್ರಿಸನರ್ ನಂ. 626710...