Homeಫ್ಯಾಕ್ಟ್‌ಚೆಕ್ಫ್ಯಾಕ್ಟ್‌ಚೆಕ್: ಮೋದಿಯ ಶಿಫಾರಸ್ಸಿನಂತೆ ಈ ಯುವ ವಿಜ್ಞಾನಿಯನ್ನು ಡಿಆರ್‌‌ಡಿಒಗೆ ಸೇರಿಸಲಾಗಿದೆಯೆ?

ಫ್ಯಾಕ್ಟ್‌ಚೆಕ್: ಮೋದಿಯ ಶಿಫಾರಸ್ಸಿನಂತೆ ಈ ಯುವ ವಿಜ್ಞಾನಿಯನ್ನು ಡಿಆರ್‌‌ಡಿಒಗೆ ಸೇರಿಸಲಾಗಿದೆಯೆ?

ಇವರು ಜರ್ಮನಿಯ ಹ್ಯಾನೋವರ್‌ನಲ್ಲಿ ನಡೆದ ಅಂತರರಾಷ್ಟ್ರೀಯ ಡ್ರೋನ್ ಎಕ್ಸ್‌ಪೋ 2018 ರಲ್ಲಿ ಆಲ್ಬರ್ಟ್ ಐನ್‌ಸ್ಟೈನ್ ಇನ್ನೋವೇಶನ್ ಚಿನ್ನದ ಪದಕವನ್ನು ಗೆದ್ದಿದ್ದರು.

- Advertisement -
- Advertisement -

ಅಸಾಮಾನ್ಯ ಸಾಧನೆ ಮಾಡಿದ ಈ ಯುವ ವಿಜ್ಞಾನಿಯನ್ನು ಸ್ವತಃ ಪ್ರಧಾನ ಮಂತ್ರಿ ನರೇಂದ್ರ ಮೋದಿಯವರೆ ರಕ್ಷಣಾ ಸಂಶೋಧನೆ ಮತ್ತು ಅಭಿವೃದ್ಧಿ ಸಂಸ್ಥೆ (ಡಿಆರ್‌ಡಿಒ)ಗೆ ಸೇರ್ಪಡೆ ಮಾಡಿದ್ದಾರೆ ಎಂದು ಹೇಳಲಾದ ಯುವ ಡ್ರೋನ್ ವಿಜ್ಞಾನಿ ‘ಪ್ರತಾಪ್’ ಅವರ ಕಥೆಯು ಸಾಮಾಜಿಕ ಜಾಲತಾಣದಲ್ಲಿ ಭಾರಿ ಸದ್ದು ಮಾಡಿದೆ.

ಟ್ವಿಟ್ಟರ್‌ ಬಳಕೆದಾರ ಅಮಿತ್ ಸಿಂಗ್ ರಾಜಾವತ್ (@satya_AmitSingh) ಎಂಬವರು, ಫ್ರಾನ್ಸ್‌ನಿಂದ ಉನ್ನತ ಉದ್ಯೋಗ ಪ್ರಸ್ತಾಪವನ್ನು ನಿರಾಕರಿಸಿದ ಪ್ರತಾಪ್ ಅನ್ನು ಪ್ರಧಾನಿ ನರೇಂದ್ರ ಮೋದಿ ಡಿಆರ್‌ಡಿಒಗೆ ಸೇರಲು ಸೂಚಿಸಿದ್ದಾರೆ ಎಂದು ಬರೆದಿ‌ದ್ದಾರೆ.

ಈ ಟ್ವೀಟ್‌ 7,400 ಕ್ಕೂ ಹೆಚ್ಚು ಲೈಕ್‌ಗಳು ಮತ್ತು 1,600 ರಿಟ್ವೀಟ್‌ಗಳಾಗಿವೆ.

ಇದೆ ಕತೆಯನ್ನು ಫೇಸ್‌ಬುಕ್‌ನಲ್ಲಿ ಕೂಡಾ ಹಂಚಿಕೊಳ್ಳಲಾಗುತ್ತಿದೆ.

ಇದೇ ಸುದ್ದಿಯನ್ನು ಸುಳ್ಳು ಮಾಹಿತಿಯೊಂದಿಗೆ ಇಂಡಿಯಾಗ್ಲಿಟ್ಜ್ ಎಂಬ ವೆಬ್‌ಸೈಟ್ ಸಹ ಹಂಚಿಕೊಂಡಿದೆ.

ಫ್ಯಾಕ್ಟ್‌‌ಚೆಕ್‌

“ಪ್ರತಾಪ್ ಡ್ರೋನ್ ವಿಜ್ಞಾನಿ” ಎಂಬ ಪದಗಳನ್ನು ಬಳಸಿ ಗೂಗಲ್‌ನಲ್ಲಿ ಹುಡುಕಾಡಿದರೆ 2019 ರ ಡಿಸೆಂಬರ್‌ನಿಂದ ಹಲವಾರು ಸುದ್ದಿ ವರದಿಗಳು ಕಾಣಬಹುದಾಗಿದೆ. ಇದರಲ್ಲಿ ಇರುವ 22 ವರ್ಷದ ‘ಡ್ರೋನ್ ಬಾಯ್’ ಪ್ರತಾಪ್ ನಮ್ಮ ಕರ್ನಾಟಕದ ಕೃಷಿಕ ಕುಟುಂಬದಿಂದ ಬಂದ ಯುವ ವಿಜ್ಞಾನಿ ಎಂದು ಉಲ್ಲೇಖಿಸಲಾಗಿದೆ. ಜರ್ಮನಿಯ ಹ್ಯಾನೋವರ್‌ನಲ್ಲಿ ನಡೆದ ಅಂತರರಾಷ್ಟ್ರೀಯ ಡ್ರೋನ್ ಎಕ್ಸ್‌ಪೋ 2018 ರಲ್ಲಿ ಇವರು ಆಲ್ಬರ್ಟ್ ಐನ್‌ಸ್ಟೈನ್ ಇನ್ನೋವೇಶನ್ ಚಿನ್ನದ ಪದಕವನ್ನು ಗೆದ್ದಿದ್ದರು.

ಈ ಬಗ್ಗೆ “ದಿಕ್ವಿಂಟ್” ಸುದ್ದ ಜಾಲತಾಣ ಪ್ರತಾಪ್ ಅವರನ್ನು ಸಂಪರ್ಕಿಸಿ ಮಾಹಿತಿ ಪಡೆದಿದೆ. ಅವರೇ ಹೇಳುವಂತೆ “ನಾನು ಯೋಜನೆಗಾಗಿ ಡಿಆರ್ಡಿಒ ಜೊತೆ ಮಾತುಕತೆ ನಡೆಸುತ್ತಿದ್ದೇನೆ, ಅದರ ಬಗ್ಗೆ ಏನನ್ನೂ ಬಹಿರಂಗಪಡಿಸಲು ಸಾಧ್ಯವಿಲ್ಲ. ಆದರೆ ಇನ್ನೂ ಪ್ರಧಾನಿ ಅಥವಾ ಪ್ರಧಾನ ಮಂತ್ರಿ ಕಚೇರಿಯಿಂದ ಯಾವುದೇ ಸಂವಹನ ನಡೆದಿಲ್ಲ. ಡಿಆರ್‌ಡಿಒಗೆ ನಾನು ಹೋಗುತ್ತಿದ್ದೇನೆ ಎಂಬ ಸುದ್ದಿ ಸುಳ್ಳಾಗಿದೆ.” ಎಂದು ಹೇಳಿದ್ದಾರೆ.

ಇಂಡಿಯಾ ಟೈಮ್ಸ್ 30 ಡಿಸೆಂಬರ್ 2019 ರ ವರದಿಯು “ನಿರ್ಣಾಯಕ ರಾಷ್ಟ್ರೀಯ ಯೋಜನೆಗಳಲ್ಲಿ ಡ್ರೋನ್ ಅನ್ವಯಿಕೆಗಾಗಿ ಡಿಆರ್ಡಿಒ ಜೊತೆಗಿನ ಯೋಜನೆಯಲ್ಲಿ ಕೆಲಸ ಮಾಡುತ್ತಿದ್ದಾರೆ” ಎಂದು ಹೇಳುತ್ತದೆ.

ಈ ಬಗ್ಗೆ ಕೇಳಿದಾಗ ಪ್ರತಾಪ್, “ನಾನು ಡಿಆರ್ಡಿಒ ದೊಂದಿಗೆ ಕೆಲಸ ಮಾಡಿದ್ದೇನೆ ಆದರೆ ನೇರವಾಗಿ ಅಲ್ಲ. ಡಿಆರ್‌ಡಿಒನ ಯೋಜನೆಯಲ್ಲಿ ಕೆಲಸ ಮಾಡುತ್ತಿರುವ ಮತ್ತೊಂದು ಕಂಪನಿಯೊಂದಿಗೆ ಪಾಲುದಾರಿಕೆ ಹೊಂದಿದ್ದೇನೆ” ಎಂದು ಹೇಳಿದ್ದಾರೆ.

ಡಿಆರ್‌ಡಿಒದಲ್ಲಿ ಪ್ರವೇಶ ಪ್ರವೇಶ ಪಡೆಯಲು ಕನಿಷ್ಠ ಅರ್ಹತೆಯಾದ ಸ್ನಾತಕೋತ್ತರ ಪದವಿಯನ್ನು ಪ್ರತಾಪ್ ಪ್ರಸ್ತುತ ಹೊಂದಿಲ್ಲ ಎಂಬುದನ್ನು ಸಹ ಗಮನಿಸಬೇಕಾಗುತ್ತದೆ.

ಇಲ್ಲಿಗೆ ಪ್ರತಾಪ್ ಡಿಆರ್‌ಡಿಒ ದಲ್ಲಿ ಕೆಲಸ ಮಾಡುತ್ತಿಲ್ಲ ಎಂದು ಸ್ಪಷ್ಟವಾಗಿ ಹೇಳಬಹುದಾಗಿದೆ.


ಓದಿ: ತೈಲ ಬೆಲೆ ಏರಿಕೆ ಖಂಡಿಸಿ ಪೆಟ್ರೋಲ್ ಬಂಕ್‌ ಮೇಲೆ ದಾಳಿ?; ಫ್ಯಾಕ್ಟ್‌‌ಚೆಕ್‌


 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...