Homeಮುಖಪುಟಆನ್‌ಲೈನ್ ತರಗತಿಗಳಿಗೆ ಅತಿಥಿ ಶಿಕ್ಷಕರನ್ನು ನೇಮಿಸಿಕೊಳ್ಳಿ : ಸಿಸೋಡಿಯಾ

ಆನ್‌ಲೈನ್ ತರಗತಿಗಳಿಗೆ ಅತಿಥಿ ಶಿಕ್ಷಕರನ್ನು ನೇಮಿಸಿಕೊಳ್ಳಿ : ಸಿಸೋಡಿಯಾ

ಆದರೆ, ಸರ್ಕಾರಿ ಶಾಲಾ ಪ್ರತಿನಿಧಿಗಳು ಶಿಕ್ಷಣ ನಿರ್ದೇಶನಾಲಯದಿಂದ ಔಪಚಾರಿಕ ಆದೇಶವನ್ನು ಕಾಯುತ್ತಿದ್ದೇವೆ ಎಂದು ದಿ ಪ್ರಿಂಟ್‌ಗೆ ತಿಳಿಸಿದರು.

- Advertisement -
- Advertisement -

ದೆಹಲಿ ಉಪಮುಖ್ಯಮಂತ್ರಿ ಮತ್ತು ಶಿಕ್ಷಣ ಸಚಿವ ಮನೀಶ್ ಸಿಸೋಡಿಯಾ ಸೋಮವಾರ ಶಾಲೆಗಳಿಗೆ ಬರೆದ ಪತ್ರದಲ್ಲಿ, “ಜುಲೈ 2 ರಂದು ಸ್ಪಷ್ಟವಾದ ಸೂಚನೆಗಳನ್ನು ನೀಡಿದ್ದರೂ, ಅನೇಕ ಶಾಲೆಗಳು ಅತಿಥಿ ಶಿಕ್ಷಕರನ್ನು ನೇಮಿಸಿಕೊಂಡಿಲ್ಲ ಎಂಬುದು ನನ್ನ ಗಮನಕ್ಕೆ ಬಂದಿದೆ” ಎಂದು ಬೇಸರ ವ್ಯಕ್ತಪಡಿಸಿದ್ದಾರೆ.

ಆನ್‌ಲೈನ್ ತರಗತಿಗಳನ್ನು ನಡೆಸಲು ಅತಿಥಿ ಶಿಕ್ಷಕರನ್ನು ನೇಮಿಸಿಕೊಳ್ಳಿ ಎಂದು ಅರವಿಂದ್ ಕೇಜ್ರಿವಾಲ್ ಸರ್ಕಾರ ದೆಹಲಿ ಸರ್ಕಾರಿ ಶಾಲೆಗಳಿಗೆ ಸೂಚನೆಗಳನ್ನು ನೀಡಿತ್ತು.

ಮೇ ತಿಂಗಳಲ್ಲಿ ಬೇಸಿಗೆ ರಜೆಯ ಮೊದಲು ತಮ್ಮ ಸೇವೆಯನ್ನು ಸಲ್ಲಿಸಿದ ಅತಿಥಿ ಶಿಕ್ಷಕರನ್ನು ನೇಮಿಸಿಕೊಳ್ಳಿ. ಅವರು “ಬೋಧನೆ-ಕಲಿಕೆ ಅಥವಾ ಶಾಲೆಗೆ ನಿಯೋಜಿಸಲಾದ ಯಾವುದೇ ಕಾರ್ಯಗಳಲ್ಲಿ ತಮ್ಮ ಸೇವೆಯನ್ನು ಮುಂದುವರಿಸಲಿ” ಎಂದು ಶಾಲೆಗಳಿಗೆ ಒತ್ತಾಯಿಸಿದರು.

ಆದರೆ, ಸರ್ಕಾರಿ ಶಾಲಾ ಪ್ರತಿನಿಧಿಗಳು ಶಿಕ್ಷಣ ನಿರ್ದೇಶನಾಲಯದಿಂದ ಔಪಚಾರಿಕ ಆದೇಶವನ್ನು ಕಾಯುತ್ತಿದ್ದೇವೆ ಎಂದು ತಿಳಿಸಿದ್ದಾರೆ.

ನಗರದ 1,031 ಸರ್ಕಾರಿ ಶಾಲೆಗಳಲ್ಲಿ ಸುಮಾರು 20,000 ಅತಿಥಿ ಶಿಕ್ಷಕರು ಇದ್ದಾರೆ ಎಂದು ವರದಿಯಾಗಿದೆ.

ಶಾಶ್ವತ ಶಿಕ್ಷಕರಿಗಿಂತ ಭಿನ್ನವಾಗಿ, ಈ ಅತಿಥಿ ಶಿಕ್ಷಕರು ಪ್ರತಿವರ್ಷ ನವೀಕರಿಸಬೇಕಾದ ಒಪ್ಪಂದಗಳ ಮೇಲೆ ಕೆಲಸ ಮಾಡುತ್ತಾರೆ. ಅನೇಕರಿಗೆ ಪ್ರತಿದಿನವೂ ವೇತನ ಪಾವತಿಸಲಾಗುತ್ತದೆ, ದಿನಕ್ಕೆ 1,040 ರಿಂದ 1,400 ರೂವರಗೆ ವೇತನ ನೀಡಲಾಗುತ್ತಿದೆ.

ಸಾಂಕ್ರಾಮಿಕ ರೋಗದಿಂದಾಗಿ ಕಳೆದ ಎರಡು ಮೂರು ತಿಂಗಳುಗಳಿಂದ ಕೆಲಸವಿಲ್ಲದ ಕಾರಣ, ಅನೇಕರು ತಮ್ಮ ಸ್ಥಳೀಯ ಸ್ಥಳಗಳಿಗೆ ಮರಳಿದರು. ಇನ್ನೂ ಕೆಲವರು ರಸ್ತೆಬದಿಯಲ್ಲಿ ಹಣ್ಣುಗಳನ್ನು ಮಾರಾಟ ಮಾಡುವುದು, ಬೈಸಿಕಲ್ ರಿಪೇರಿ ಅಂಗಡಿಗಳನ್ನು ಸ್ಥಾಪಿಸುವುದು ಮುಂತಾದ ಪರ್ಯಾಯ ಜೀವನೋಪಾಯವನ್ನು ಆರಿಸಿಕೊಂಡಿದ್ದಾರೆ.

ಜುಲೈ 2 ರಂದು, ಸಿಸೋಡಿಯಾ ಮಾರ್ಚ್ 19 ರಿಂದ ಶಾಲೆಗಳನ್ನು ಸ್ಥಗಿತಗೊಳಿಸಿದ್ದರಿಂದ ಆನ್ಲೈನ್ ಬೋಧನೆ-ಕಲಿಕೆಯ ಯೋಜನೆಯನ್ನು ಘೋಷಿಸಿತ್ತು. ನಗರದಲ್ಲಿ ಕೋವಿಡ್ ಪ್ರಕರಣಗಳು ಹೆಚ್ಚುತ್ತಲೇ ಇದ್ದವು. ಶಾಲೆಗಳಲ್ಲಿ ಕೆಲಸ ಮಾಡುವ ಅತಿಥಿ ಶಿಕ್ಷಕರನ್ನು ಈ ಪ್ರಕ್ರಿಯೆಗೆ ಒಳಪಡಿಸಬೇಕು ಎಂದು ಸಿಸೋಡಿಯಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಆದಾಗ್ಯೂ, ಈ ಬಗ್ಗೆ ಔಪಚಾರಿಕ ಆದೇಶವನ್ನು ಇನ್ನೂ ಹೊರಡಿಸಲಾಗಿಲ್ಲ ಎಂದು ಶಾಲೆಗಳು ಹೇಳುತ್ತವೆ.

ಸರ್ಕಾರಿ ಶಾಲಾ ಶಿಕ್ಷಕರ ಸಂಘದ (ಜಿಎಸ್‌ಟಿಎ) ಪಶ್ಚಿಮ-A ಜಿಲ್ಲಾ ಕಾರ್ಯದರ್ಶಿ ಸಂತ ರಾಮ್, “ಸರ್ಕಾರ ಈ ಆದೇಶವನ್ನು ಮೊದಲೇ ನೀಡಿದ್ದರೂ, ಶಿಕ್ಷಣ ನಿರ್ದೇಶನಾಲಯವು ಔಪಚಾರಿಕ ಆದೇಶವನ್ನು ಇನ್ನೂ ನೀಡದ ಕಾರಣ ಅತಿಥಿ ಶಿಕ್ಷಕರು ತರಗತಿಗಳಲ್ಲಿ ಮತ್ತೆ ತೊಡಗಿಸಿಕೊಂಡಿಲ್ಲ” ಎಂದಿದ್ದಾರೆ.

ಸೋಮವಾರ ಟೈಮ್ಸ್ ಆಫ್ ಇಂಡಿಯಾ ವರದಿಯ ಪ್ರಕಾರ, ದೆಹಲಿಯ 20,000 ಅತಿಥಿ ಶಿಕ್ಷಕರಲ್ಲಿ ಶೇಕಡಾ 3 ರಷ್ಟು ಮಂದಿ ಮತ್ತೆ ಸೇರಲು ಪ್ರಾಂಶುಪಾಲರು ಕೇಳಿಕೊಂಡರು. ಆದರೆ ಅವರಿಗೆ ಸಂಬಳ ನೀಡಲಾಗುತ್ತದೆಯೇ ಎಂಬ ಬಗ್ಗೆ ಸ್ಪಷ್ಟತೆ ಇಲ್ಲ.

ಸಿಸೋಡಿಯಾ ಅವರ ಇತ್ತೀಚಿನ ಪತ್ರವನ್ನು ಸ್ವಾಗತಿಸಿದರೂ, ಸುಂದರ್ ನಗ್ರಿಯ ಸರ್ಕಾರಿ ಶಾಲೆಯಲ್ಲಿ ಕೆಲಸ ಮಾಡುತ್ತಿರುವ ಅತಿಥಿ ಶಿಕ್ಷಕ ಶೋಯೆಬ್ ರಾಣಾ, ಈ ಹಿಂದೆ ಒಬ್ಬ ಅತಿಥಿ ಶಿಕ್ಷಕನನ್ನು ಶಾಲೆಯ ರೋಸ್ಟರ್‌ನಲ್ಲಿ ಸೇರಿಸಲಾಗಿಲ್ಲ ಎಂದು ಹಿಂಜರಿಕೆಯಿಂದ ದೂರಿದ್ದಾರೆ.

” ವಿಶೇಷವಾಗಿ ಶಿಕ್ಷಣ ನಿರ್ದೇಶನಾಲಯದಿಂದ ನೋಟಿಸ್ ವಿತರಿಸಲಾಗುವುದು ಎಂಬ ಭರವಸೆಯೊಂದಿಗೆ, ಈ ಆದೇಶವು ಬಂದಿರುವುದಕ್ಕೆ ನನಗೆ ಖುಷಿಯಾಗಿದೆ,  ಆದರೆ ಇದು ಎಷ್ಟು ತಾತ್ಕಾಲಿಕವಾಗಿರುತ್ತದೆ ಎಂದು ಗೊತ್ತಿಲ್ಲ. ದೆಹಲಿಯ ಅತಿಥಿ ಶಿಕ್ಷಕರಿಗೆ ಇನ್ನೂ ಉದ್ಯೋಗ ಭದ್ರತೆ ಇಲ್ಲ” ಎಂದು ರಾಣಾ ಹೇಳಿದ್ದಾರೆ.


ಇದನ್ನೂ ಓದಿ: 35,000 ಕ್ಕೂ ಹೆಚ್ಚು ಖಾಸಗಿ ಶಾಲಾ ಶಿಕ್ಷಕರು ವಜಾ: 8 ಅತಿಥಿ ಉಪನ್ಯಾಸಕರ ಆತ್ಮಹತ್ಯೆ!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಇರಾನ್ ಮೇಲೆ ದಾಳಿ : ಅಮೆರಿಕ ವಿಮಾನಗಳಿಗೆ ತನ್ನ ವಾಯುಪ್ರದೇಶ ಮುಚ್ಚಿದ ಸ್ಪೇನ್

ಇರಾನ್ ಮೇಲಿನ ದಾಳಿಗಳಲ್ಲಿ ಭಾಗಿಯಾಗಿರುವ ಅಮೆರಿಕದ ವಿಮಾನಗಳಿಗೆ ಸ್ಪೇನ್ ತನ್ನ ವಾಯುಪ್ರದೇಶವನ್ನು ನಿರ್ಬಂಧಿಸಿದೆ ಎಂದು ರಕ್ಷಣಾ ಸಚಿವೆ ಮಾರ್ಗರಿಟಾ ರೋಬಲ್ಸ್ (ಮಾ.30) ಸೋಮವಾರ ತಿಳಿಸಿದ್ದಾರೆ. ಜಂಟಿಯಾಗಿ ನಿರ್ವಹಿಸುವ ಸೇನಾ ನೆಲೆಗಳನ್ನು ಬಳಸಲು ಈ...

ಜನಗಣತಿ-2027 : ‘ಸ್ಥಿರ’ ಲಿವ್-ಇನ್ ಜೋಡಿಗೆ ವೈವಾಹಿಕ ಸ್ಥಾನಮಾನ

ತಮ್ಮ ಸಂಬಂಧ 'ಸ್ಥಿರ' ಎಂದು ಹೇಳಿಕೊಳ್ಳುವ ಲಿವ್-ಇನ್ ಜೋಡಿಗಳನ್ನು 2027ರ ಜನಗಣತಿಯಲ್ಲಿ ವಿವಾಹಿತ ದಂಪತಿಯೆಂದು ಪರಿಗಣಿಸಲಾಗುತ್ತದೆ ಎಂದು ವರದಿಯಾಗಿದೆ. ಜನಗಣತಿ ವೆಬ್‌ಸೈಟ್‌ನ FAQ (ಪದೇ ಪದೇ ಕೇಳಲಾಗುವ ಪ್ರಶ್ನೆಗಳು) ವಿಭಾಗದಲ್ಲಿ ಈ ಬಗ್ಗೆ ಸ್ಪಷ್ಟನೆ...

ಉನ್ನತ ಸಾಂಸ್ಥಿಕ ಹುದ್ದೆಗಳಲ್ಲಿ ‘ಬಹುಜನ’ ಪ್ರಾತಿನಿಧ್ಯದ ಕೊರತೆ: ವ್ಯವಸ್ಥಿತ ತಾರತಮ್ಯದ ರೂಪ ಎಂದ ರಾಹುಲ್ ಗಾಂಧಿ 

ಉನ್ನತ ಸಂಸ್ಥೆಗಳ ಹಿರಿಯ ನಾಯಕತ್ವದಲ್ಲಿ "ಬಹುಜನ" ಸಮುದಾಯಗಳಿಗೆ ಪ್ರಾತಿನಿಧ್ಯದ ಕೊರತೆಯಿದೆ ಎಂದು ರಾಹುಲ್ ಗಾಂಧಿ ಸೋಮವಾರ ಆರೋಪಿಸಿದ್ದಾರೆ. ಇದು ವ್ಯವಸ್ಥಿತ ತಾರತಮ್ಯದ ಒಂದು ರೂಪವಾಗಿದ್ದು ಅದನ್ನು ಪರಿಹರಿಸಬೇಕು ಎಂದು ಹೇಳಿದ್ದಾರೆ.  ಲೋಕಸಭೆಯ ವಿರೋಧ ಪಕ್ಷದ...

ಗಾಯಗಳ ತೀವ್ರತೆಯಿಂದಾಗಿ ನೌಕಾಪಡೆಯ ಮುಖ್ಯಸ್ಥ ತಂಗ್ಸಿರಿ ಸಾವನ್ನಪ್ಪಿದ್ದಾರೆ: ದೃಢಪಡಿಸಿದ ಇರಾನ್

ತಾನು ನಡೆಸಿದ ದಾಳಿಯಿಂದ ಇರಾನ್‌ ನೌಕಾಪಡೆಯ ರಿಯರ್ ಅಡ್ಮಿರಲ್ ಅಲಿರೆಜಾ ತಂಗ್ಸಿರಿ ಸಾವನ್ನಪ್ಪಿದ್ದಾರೆ ಎಂದು ಕಳೆದ ಗುರುವಾರ (ಮಾ.26) ಇಸ್ರೇಲ್ ಹೇಳಿಕೊಂಡಿತ್ತು. ಸುದ್ದಿ ಖಷಿತಪಡಿಸಿರುವ ಇರಾನ್, ದಾಳಿಯಿಂದ ಸಂಭವಿಸಿದ ತೀವ್ರ ಗಾಯಗಳಿಂದ ತಂಗ್ಸಿರಿ...

ಬಹುಭಾಷಾ ನಟ ಪ್ರಕಾಶ್ ರಾಜ್‌ ತಾಯಿ ಸ್ವರ್ಣಲತಾ ನಿಧನ

ಬಹುಭಾಷಾ ನಟ ಪ್ರಕಾಶ್ ರಾಜ್ ಅವರ ತಾಯಿ ಸ್ವರ್ಣಲತಾ ಅವರು ತಮ್ಮ 86 ನೇ ವಯಸ್ಸಿನಲ್ಲಿ ನಿಧನರಾಗಿದ್ದಾರೆ. ಅವರು ವಯೋಸಹಜ ಅನಾರೋಗ್ಯದಿಂದ ಸಾವನ್ನಪ್ಪಿದ್ದಾರೆ. ನಟ ಪ್ರಕಾಶ್‌ ರಾಜ್‌ ಅವರು ತಮ್ಮ ತಾಯಿಯೊಂದಿಗೆ ಇದ್ದ...

ಮುಂಬೈ: ಸ್ವ-ಘೋಷಿತ ದೇವಮಾನವ ಅಶೋಕ್ ಖರತ್ ವಿರುದ್ಧ ಆಕ್ರೋಶ: ದಾದರ್‌ನಲ್ಲಿ ಮೂಢನಂಬಿಕೆ ವಿರೋಧಿ ಅಭಿಯಾನ

ಮುಂಬೈ: ಸ್ವಯಂ ಘೋಷಿತ ದೇವಮಾನವ ಅಶೋಕ್ ಖರತ್ ಅವರ ಚಟುವಟಿಕೆಗಳ ಸುತ್ತ ವ್ಯಾಪಕ ಆಕ್ರೋಶ ವ್ಯಕ್ತವಾಗಿರುವ ಹಿನ್ನೆಲೆಯಲ್ಲಿ, ವಿವೇಕ್ ಜಾಗರ್ ಉಪಕ್ರಮದಡಿಯಲ್ಲಿ ಮಹಾರಾಷ್ಟ್ರ ಅಂಧಾಶ್ರದ್ಧ ನಿರ್ಮೂಲನ ಸಮಿತಿ (MANS) ಮಹಾರಾಷ್ಟ್ರ ಘಟಕವು ಭಾನುವಾರ...

ನೋಟಿಸ್ ನೀಡದೆ ಮಸೀದಿ ಬಂದ್; ಉತ್ತರ ಪ್ರದೇಶ ಸರ್ಕಾರವನ್ನು ಪ್ರಶ್ನಿಸಿದ ಅಲಹಾಬಾದ್ ಹೈಕೋರ್ಟ್

ಪೂರ್ವ ಸೂಚನೆ ನೀಡದೆ ಅಥವಾ ಮಾಲೀಕರಿಗೆ ವಿಚಾರಣೆಗೆ ಅವಕಾಶ ನೀಡದೆ ಪ್ರಾರ್ಥನಾ ಸ್ಥಳಕ್ಕೆ ಬೀಗ ಹಾಕಬಹುದೇ ಎಂಬ ಬಗ್ಗೆ ವಿವರಣೆ ನೀಡಬೇಕು ಎಂದು ಅಲಹಾಬಾದ್ ಹೈಕೋರ್ಟ್ ಉತ್ತರ ಪ್ರದೇಶ ಸರ್ಕಾರವನ್ನು ಕೇಳಿದೆ. ಮುಜಫರ್‌ನಗರದಲ್ಲಿ ಮಸೀದಿಯನ್ನು...

ಬಿಜು ಪಟ್ನಾಯಕ್ ಕುರಿತು ಹೇಳಿಕೆ : ಬಿಜೆಪಿ ಸಂಸದ ನಿಶಿಕಾಂತ್ ದುಬೆ ವಿರುದ್ಧ ತೀವ್ರ ಆಕ್ರೋಶ

ಒಡಿಶಾದ ಮಾಜಿ ಮುಖ್ಯಮಂತ್ರಿ ಬಿಜು ಪಟ್ನಾಯಕ್ ಅವರ ಕುರಿತು ಬಿಜೆಪಿ ಸಂಸದ ನಿಶಿಕಾಂತ್ ದುಬೆ ನೀಡಿರುವ ಹೇಳಿಕೆಗೆ ತೀವ್ರ ಆಕ್ರೋಶ ವ್ಯಕ್ತವಾಗಿದೆ. ದುಬೆ ನೇತೃತ್ವದ ಸಂವಹನ ಮತ್ತು ಐಟಿ ಕುರಿತ ಸಂಸದೀಯ ಸ್ಥಾಯಿ...

ಮುರ್ಷಿದಾಬಾದ್ ರಾಮನವಮಿ ಹಿಂಸಾಚಾರ; ಆರ್‌ಎಸ್‌ಎಸ್ ನಾಯಕ ಸೇರಿದಂತೆ 30 ಜನರ ಬಂಧನ

ಮಾರ್ಚ್ 27 ರಂದು ಮುರ್ಷಿದಾಬಾದ್ ಜಿಲ್ಲೆಯ ಜಂಗಿಪುರ ಉಪವಿಭಾಗದ ರಘುನಾಥಗಂಜ್‌ನಲ್ಲಿ ನಡೆದ ರಾಮನವಮಿ ಮೆರವಣಿಗೆ ಹಿಂಸಾಚಾರಕ್ಕೆ ತಿರುಗಿದ ನಂತರ ಸುಮಾರು 30 ಜನರು ಗಾಯಗೊಂಡರು. ಈ ಘಟನೆಯು ವ್ಯಾಪಕ ಉದ್ವಿಗ್ನತೆಗೆ ಕಾರಣವಾಗಿದ್ದು, ಅಂಗಡಿ...

ದೆಹಲಿ ಗಲಭೆ ಪ್ರಕರಣ: ಮಧ್ಯಂತರ ಜಾಮೀನು ಅವಧಿ ಅಂತ್ಯ; ಇಂದು ತಿಹಾರ್ ಜೈಲಿಗೆ ಮರಳಲಿರುವ ಶಾರ್ಜೀಲ್ ಇಮಾಮ್

2020 ರ ಈಶಾನ್ಯ ದೆಹಲಿ ಗಲಭೆಯ ಹಿಂದಿನ ದೊಡ್ಡ ಪಿತೂರಿ ಪ್ರಕರಣಕ್ಕೆ ಸಂಬಂಧಿಸಿದಂತೆ ದೆಹಲಿ ನ್ಯಾಯಾಲಯವು ನೀಡಿದ್ದ 10 ದಿನಗಳ ಮಧ್ಯಂತರ ಜಾಮೀನು ಅವಧಿ ಮುಗಿದ ಹಿನ್ನೆಲೆಯಲ್ಲಿ ವಿದ್ಯಾರ್ಥಿ ಕಾರ್ಯಕರ್ತ ಶಾರ್ಜೀಲ್ ಇಮಾಮ್...