Homeಮುಖಪುಟಆನ್‌ಲೈನ್ ತರಗತಿಗಳಿಗೆ ಅತಿಥಿ ಶಿಕ್ಷಕರನ್ನು ನೇಮಿಸಿಕೊಳ್ಳಿ : ಸಿಸೋಡಿಯಾ

ಆನ್‌ಲೈನ್ ತರಗತಿಗಳಿಗೆ ಅತಿಥಿ ಶಿಕ್ಷಕರನ್ನು ನೇಮಿಸಿಕೊಳ್ಳಿ : ಸಿಸೋಡಿಯಾ

ಆದರೆ, ಸರ್ಕಾರಿ ಶಾಲಾ ಪ್ರತಿನಿಧಿಗಳು ಶಿಕ್ಷಣ ನಿರ್ದೇಶನಾಲಯದಿಂದ ಔಪಚಾರಿಕ ಆದೇಶವನ್ನು ಕಾಯುತ್ತಿದ್ದೇವೆ ಎಂದು ದಿ ಪ್ರಿಂಟ್‌ಗೆ ತಿಳಿಸಿದರು.

- Advertisement -
- Advertisement -

ದೆಹಲಿ ಉಪಮುಖ್ಯಮಂತ್ರಿ ಮತ್ತು ಶಿಕ್ಷಣ ಸಚಿವ ಮನೀಶ್ ಸಿಸೋಡಿಯಾ ಸೋಮವಾರ ಶಾಲೆಗಳಿಗೆ ಬರೆದ ಪತ್ರದಲ್ಲಿ, “ಜುಲೈ 2 ರಂದು ಸ್ಪಷ್ಟವಾದ ಸೂಚನೆಗಳನ್ನು ನೀಡಿದ್ದರೂ, ಅನೇಕ ಶಾಲೆಗಳು ಅತಿಥಿ ಶಿಕ್ಷಕರನ್ನು ನೇಮಿಸಿಕೊಂಡಿಲ್ಲ ಎಂಬುದು ನನ್ನ ಗಮನಕ್ಕೆ ಬಂದಿದೆ” ಎಂದು ಬೇಸರ ವ್ಯಕ್ತಪಡಿಸಿದ್ದಾರೆ.

ಆನ್‌ಲೈನ್ ತರಗತಿಗಳನ್ನು ನಡೆಸಲು ಅತಿಥಿ ಶಿಕ್ಷಕರನ್ನು ನೇಮಿಸಿಕೊಳ್ಳಿ ಎಂದು ಅರವಿಂದ್ ಕೇಜ್ರಿವಾಲ್ ಸರ್ಕಾರ ದೆಹಲಿ ಸರ್ಕಾರಿ ಶಾಲೆಗಳಿಗೆ ಸೂಚನೆಗಳನ್ನು ನೀಡಿತ್ತು.

ಮೇ ತಿಂಗಳಲ್ಲಿ ಬೇಸಿಗೆ ರಜೆಯ ಮೊದಲು ತಮ್ಮ ಸೇವೆಯನ್ನು ಸಲ್ಲಿಸಿದ ಅತಿಥಿ ಶಿಕ್ಷಕರನ್ನು ನೇಮಿಸಿಕೊಳ್ಳಿ. ಅವರು “ಬೋಧನೆ-ಕಲಿಕೆ ಅಥವಾ ಶಾಲೆಗೆ ನಿಯೋಜಿಸಲಾದ ಯಾವುದೇ ಕಾರ್ಯಗಳಲ್ಲಿ ತಮ್ಮ ಸೇವೆಯನ್ನು ಮುಂದುವರಿಸಲಿ” ಎಂದು ಶಾಲೆಗಳಿಗೆ ಒತ್ತಾಯಿಸಿದರು.

ಆದರೆ, ಸರ್ಕಾರಿ ಶಾಲಾ ಪ್ರತಿನಿಧಿಗಳು ಶಿಕ್ಷಣ ನಿರ್ದೇಶನಾಲಯದಿಂದ ಔಪಚಾರಿಕ ಆದೇಶವನ್ನು ಕಾಯುತ್ತಿದ್ದೇವೆ ಎಂದು ತಿಳಿಸಿದ್ದಾರೆ.

ನಗರದ 1,031 ಸರ್ಕಾರಿ ಶಾಲೆಗಳಲ್ಲಿ ಸುಮಾರು 20,000 ಅತಿಥಿ ಶಿಕ್ಷಕರು ಇದ್ದಾರೆ ಎಂದು ವರದಿಯಾಗಿದೆ.

ಶಾಶ್ವತ ಶಿಕ್ಷಕರಿಗಿಂತ ಭಿನ್ನವಾಗಿ, ಈ ಅತಿಥಿ ಶಿಕ್ಷಕರು ಪ್ರತಿವರ್ಷ ನವೀಕರಿಸಬೇಕಾದ ಒಪ್ಪಂದಗಳ ಮೇಲೆ ಕೆಲಸ ಮಾಡುತ್ತಾರೆ. ಅನೇಕರಿಗೆ ಪ್ರತಿದಿನವೂ ವೇತನ ಪಾವತಿಸಲಾಗುತ್ತದೆ, ದಿನಕ್ಕೆ 1,040 ರಿಂದ 1,400 ರೂವರಗೆ ವೇತನ ನೀಡಲಾಗುತ್ತಿದೆ.

ಸಾಂಕ್ರಾಮಿಕ ರೋಗದಿಂದಾಗಿ ಕಳೆದ ಎರಡು ಮೂರು ತಿಂಗಳುಗಳಿಂದ ಕೆಲಸವಿಲ್ಲದ ಕಾರಣ, ಅನೇಕರು ತಮ್ಮ ಸ್ಥಳೀಯ ಸ್ಥಳಗಳಿಗೆ ಮರಳಿದರು. ಇನ್ನೂ ಕೆಲವರು ರಸ್ತೆಬದಿಯಲ್ಲಿ ಹಣ್ಣುಗಳನ್ನು ಮಾರಾಟ ಮಾಡುವುದು, ಬೈಸಿಕಲ್ ರಿಪೇರಿ ಅಂಗಡಿಗಳನ್ನು ಸ್ಥಾಪಿಸುವುದು ಮುಂತಾದ ಪರ್ಯಾಯ ಜೀವನೋಪಾಯವನ್ನು ಆರಿಸಿಕೊಂಡಿದ್ದಾರೆ.

ಜುಲೈ 2 ರಂದು, ಸಿಸೋಡಿಯಾ ಮಾರ್ಚ್ 19 ರಿಂದ ಶಾಲೆಗಳನ್ನು ಸ್ಥಗಿತಗೊಳಿಸಿದ್ದರಿಂದ ಆನ್ಲೈನ್ ಬೋಧನೆ-ಕಲಿಕೆಯ ಯೋಜನೆಯನ್ನು ಘೋಷಿಸಿತ್ತು. ನಗರದಲ್ಲಿ ಕೋವಿಡ್ ಪ್ರಕರಣಗಳು ಹೆಚ್ಚುತ್ತಲೇ ಇದ್ದವು. ಶಾಲೆಗಳಲ್ಲಿ ಕೆಲಸ ಮಾಡುವ ಅತಿಥಿ ಶಿಕ್ಷಕರನ್ನು ಈ ಪ್ರಕ್ರಿಯೆಗೆ ಒಳಪಡಿಸಬೇಕು ಎಂದು ಸಿಸೋಡಿಯಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಆದಾಗ್ಯೂ, ಈ ಬಗ್ಗೆ ಔಪಚಾರಿಕ ಆದೇಶವನ್ನು ಇನ್ನೂ ಹೊರಡಿಸಲಾಗಿಲ್ಲ ಎಂದು ಶಾಲೆಗಳು ಹೇಳುತ್ತವೆ.

ಸರ್ಕಾರಿ ಶಾಲಾ ಶಿಕ್ಷಕರ ಸಂಘದ (ಜಿಎಸ್‌ಟಿಎ) ಪಶ್ಚಿಮ-A ಜಿಲ್ಲಾ ಕಾರ್ಯದರ್ಶಿ ಸಂತ ರಾಮ್, “ಸರ್ಕಾರ ಈ ಆದೇಶವನ್ನು ಮೊದಲೇ ನೀಡಿದ್ದರೂ, ಶಿಕ್ಷಣ ನಿರ್ದೇಶನಾಲಯವು ಔಪಚಾರಿಕ ಆದೇಶವನ್ನು ಇನ್ನೂ ನೀಡದ ಕಾರಣ ಅತಿಥಿ ಶಿಕ್ಷಕರು ತರಗತಿಗಳಲ್ಲಿ ಮತ್ತೆ ತೊಡಗಿಸಿಕೊಂಡಿಲ್ಲ” ಎಂದಿದ್ದಾರೆ.

ಸೋಮವಾರ ಟೈಮ್ಸ್ ಆಫ್ ಇಂಡಿಯಾ ವರದಿಯ ಪ್ರಕಾರ, ದೆಹಲಿಯ 20,000 ಅತಿಥಿ ಶಿಕ್ಷಕರಲ್ಲಿ ಶೇಕಡಾ 3 ರಷ್ಟು ಮಂದಿ ಮತ್ತೆ ಸೇರಲು ಪ್ರಾಂಶುಪಾಲರು ಕೇಳಿಕೊಂಡರು. ಆದರೆ ಅವರಿಗೆ ಸಂಬಳ ನೀಡಲಾಗುತ್ತದೆಯೇ ಎಂಬ ಬಗ್ಗೆ ಸ್ಪಷ್ಟತೆ ಇಲ್ಲ.

ಸಿಸೋಡಿಯಾ ಅವರ ಇತ್ತೀಚಿನ ಪತ್ರವನ್ನು ಸ್ವಾಗತಿಸಿದರೂ, ಸುಂದರ್ ನಗ್ರಿಯ ಸರ್ಕಾರಿ ಶಾಲೆಯಲ್ಲಿ ಕೆಲಸ ಮಾಡುತ್ತಿರುವ ಅತಿಥಿ ಶಿಕ್ಷಕ ಶೋಯೆಬ್ ರಾಣಾ, ಈ ಹಿಂದೆ ಒಬ್ಬ ಅತಿಥಿ ಶಿಕ್ಷಕನನ್ನು ಶಾಲೆಯ ರೋಸ್ಟರ್‌ನಲ್ಲಿ ಸೇರಿಸಲಾಗಿಲ್ಲ ಎಂದು ಹಿಂಜರಿಕೆಯಿಂದ ದೂರಿದ್ದಾರೆ.

” ವಿಶೇಷವಾಗಿ ಶಿಕ್ಷಣ ನಿರ್ದೇಶನಾಲಯದಿಂದ ನೋಟಿಸ್ ವಿತರಿಸಲಾಗುವುದು ಎಂಬ ಭರವಸೆಯೊಂದಿಗೆ, ಈ ಆದೇಶವು ಬಂದಿರುವುದಕ್ಕೆ ನನಗೆ ಖುಷಿಯಾಗಿದೆ,  ಆದರೆ ಇದು ಎಷ್ಟು ತಾತ್ಕಾಲಿಕವಾಗಿರುತ್ತದೆ ಎಂದು ಗೊತ್ತಿಲ್ಲ. ದೆಹಲಿಯ ಅತಿಥಿ ಶಿಕ್ಷಕರಿಗೆ ಇನ್ನೂ ಉದ್ಯೋಗ ಭದ್ರತೆ ಇಲ್ಲ” ಎಂದು ರಾಣಾ ಹೇಳಿದ್ದಾರೆ.


ಇದನ್ನೂ ಓದಿ: 35,000 ಕ್ಕೂ ಹೆಚ್ಚು ಖಾಸಗಿ ಶಾಲಾ ಶಿಕ್ಷಕರು ವಜಾ: 8 ಅತಿಥಿ ಉಪನ್ಯಾಸಕರ ಆತ್ಮಹತ್ಯೆ!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...