Homeಕರೋನಾ ತಲ್ಲಣಬ್ರೆಜಿಲ್ ಅಧ್ಯಕ್ಷ ಜೈರ್ ಬೋಲ್ಸನಾರೊಗೆ ಕೊರೊನಾ ಪಾಸಿಟಿವ್! 

ಬ್ರೆಜಿಲ್ ಅಧ್ಯಕ್ಷ ಜೈರ್ ಬೋಲ್ಸನಾರೊಗೆ ಕೊರೊನಾ ಪಾಸಿಟಿವ್! 

65 ವರ್ಷದ ಅಧ್ಯಕ್ಷರು, ಆರ್ಥಿಕತೆಯನ್ನು ಪುನಃಶ್ಚೇತನಗೊಳಿಸುವ ಅಭಿಯಾನದಲ್ಲಿ ಇದು "ಸಣ್ಣ ಜ್ವರ" ಎಂದಿದ್ದರು. ಜೊತೆಗೆ ಮಾಸ್ಕ್ ಇಲ್ಲದೇ ಜನಸಂದಣಿಯಲ್ಲಿ ಬೆರೆಯುತ್ತಾ, ಜನರಿಗೆ ಹಸ್ತಲಾಘವ ನೀಡುತ್ತಾ ವೈಧ್ಯಕೀಯ ಸಲಹೆಗಳನ್ನು ಕಡೆಗಣಿಸಿದ್ದರು.

- Advertisement -
- Advertisement -

ಲ್ಯಾಟಿನ್ ಅಮೆರಿಕದ ಅತಿದೊಡ್ಡ ಆರ್ಥಿಕತೆಯನ್ನು ಆವರಿಸಿರುವ ಆರೋಗ್ಯ ಬಿಕ್ಕಟ್ಟಿನ ಉಲ್ಬಣದ ನಡುವೆ ಬ್ರೆಜಿಲ್ ಅಧ್ಯಕ್ಷ ಜೈರ್ ಬೋಲ್ಸನಾರೊ ಅವರಿಗೆ ಕೊರೊನಾ ಸೋಂಕು ತಗುಲಿರುವುದು ದೃಢಪಟ್ಟಿದೆ.

“ನಾನು ಸಂಪೂರ್ಣವಾಗಿ ಚೆನ್ನಾಗಿದ್ದೇನೆ” ಎಂದು ಬೋಲ್ಸನಾರೊ CNN ಬ್ರೆಜಿಲ್ ನ ನೇರ ಸಂದರ್ಶನದಲ್ಲಿ ತಮ್ಮ ಪರೀಕ್ಷೆಯ ಫಲಿತಾಂಶವನ್ನು ಘೋಷಿಸಿದ ನಂತರ ಹೇಳಿದ್ದಾರೆ.  ಹೈಡ್ರಾಕ್ಸಿಕ್ಲೋರೋಕ್ವಿನ್ ಎಂಬ ಮಲೇರಿಯಾ ವಿರೋಧಿ ಔಷಧಿಯನ್ನು ತೆಗೆದುಕೊಳ್ಳುತ್ತಿರುವ ಅವರು, ಇದು ವೈರಸ್ ವಿರುದ್ಧ ಪರಿಣಾಮಕಾರಿಯಾಗಿ ಕೆಲಸ ಮಾಡುತ್ತದೆ ಎಂದಿದ್ದಾರೆ. ಆದರೆ ಇದರ ಬಳಕೆಯನ್ನು ಜಾಗತಿಕವಾಗಿ ಹೆಚ್ಚಿನ ಆರೋಗ್ಯ ತಜ್ಞರು ಅಧಿಕೃತಗೊಳಿಸಿಲ್ಲ. ಹಾಗೆಯೇ ಇದು ಅಪಾಯಕಾರಿ ಅಡ್ಡಪರಿಣಾಮಗಳನ್ನು ಉಂಟುಮಾಡಬಹುದು ಎಂದೂ ಹೇಳಿದ್ದಾರೆ.

65 ವರ್ಷದ ಅಧ್ಯಕ್ಷರು, ಆರ್ಥಿಕತೆಯನ್ನು ಪುನಃಶ್ಚೇತನಗೊಳಿಸುವ ಅಭಿಯಾನದಲ್ಲಿ ಇದು “ಸಣ್ಣ ಜ್ವರ” ಎಂದಿದ್ದರು. ಜೊತೆಗೆ ಮಾಸ್ಕ್ ಇಲ್ಲದೇ ಜನಸಂದಣಿಯಲ್ಲಿ ಬೆರೆಯುತ್ತಾ, ಜನರಿಗೆ ಹಸ್ತಲಾಘವ ನೀಡುತ್ತಾ ವೈಧ್ಯಕೀಯ ಸಲಹೆಗಳನ್ನು ಕಡೆಗಣಿಸಿದ್ದರು ಎಂಬ ಆರೋಪಗಳು ಅವರ ಮೇಲಿವೆ.

ಬೋಲ್ಸನಾರೊ ಸಾಮಾಜಿಕ ಜಾಲತಾಣಗಳಲ್ಲಿ ಗುರುವಾರ ಕಾಣಿಸಿಕೊಂಡ ಸಂದರ್ಭದಲ್ಲಿ ಕೆಮ್ಮುವುದನ್ನು ಕಾಣಬಹುದು. ಅವರ ಪಕ್ಕದಲ್ಲಿ ಕುಳಿತಿದ್ದ ಆರು ಜನರಲ್ಲಿ ಯಾರೂ ಮಾಸ್ಕ್ ಧರಿಸಲಿಲ್ಲ. ಅಲ್ಲಿದ್ದ ಅಧಿಕಾರಿಗಳಲ್ಲಿ ಪ್ರಾದೇಶಿಕ ಅಭಿವೃದ್ಧಿ ಸಚಿವ ರೊಜೆರಿಯೊ ಮರಿನ್ಹೋ, ಸರ್ಕಾರಿ ಸ್ವಾಮ್ಯದ ಬ್ಯಾಂಕ್ ಕೈಕ್ಸಾ ಎಕನಾಮಿಕಾ ಫೆಡರಲ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಪೆಡ್ರೊ ಗುಯಿಮರೇಸ್ ಸೇರಿದ್ದಾರೆ. ಅಂದಿನಿಂದ, ಅವರು ತಮ್ಮ ಆಡಳಿತದ ಸದಸ್ಯರು ಮತ್ತು ಸಾರ್ವಜನಿಕರೊಂದಿಗೆ ಬೆರೆಯುತ್ತಿದ್ದರು. ಜೊತೆಗೆ ಶನಿವಾರ ಬ್ರೆಜಿಲ್‌ನ US ರಾಯಭಾರಿಯೊಂದಿಗೆ ಊಟ ಮಾಡಿದ್ದರು.

ಬೋಲ್ಸನಾರೊರನ್ನು ಕೊರೊನಾ ಪರೀಕ್ಷೆಗೆ ಒಳಪಡಿಸಿರುವುದು ಇದೇ ಮೊದಲಲ್ಲ. ಇದುವರೆಗೂ ಮೂರು ಬಾರಿ ಅವರ ಪರೀಕ್ಷೆ ಫಲಿತಾಂಶ ನೆಗೆಟಿವ್ ಬಂದಿತ್ತು. ಲಕ್ಷಣಗಳು ಕಾಣಿಸಿಕೊಂಡ ನಂತರ ನಾಲ್ಕನೇ ಬಾರಿಯ ಪರೀಕ್ಷೆಯಲ್ಲಿ ಪಾಸಿಟಿವ್ ಬಂದಿದೆ.

ಹೊಂಡುರಾನ್ ಅಧ್ಯಕ್ಷ ಜುವಾನ್ ಒರ್ಲ್ಯಾಂಡೊ ಹೆರ್ನಾಂಡೆಜ್ ಮತ್ತು ಯು.ಕೆ. ಪ್ರಧಾನಿ ಬೋರಿಸ್ ಜಾನ್ಸನ್ ಸೇರಿದಂತೆ ಕೊರೊನಾ ದೃಢಪಟ್ಟಿರುವ ಇತರ ವಿಶ್ವ ನಾಯಕರ ಸಾಲಿಗೆ ಬೋಲ್ಸನಾರೊ ಸೇರಿಕೊಳ್ಳುತ್ತಾರೆ.


ಇದನ್ನೂ ಓದಿ : ಚೀನಾ ಮುಂದಿಟ್ಟ ಎರಡು ಹೆಜ್ಜೆಯಲ್ಲಿ ಒಂದು ಹೆಜ್ಜೆ ಹಿಂದಿಟ್ಟಿದೆ, ಅದು ಹಿನ್ನೆಡೆಯೋ? ಮುನ್ನೆಡೆಯೋ?; ಜಸ್ಟ್‌ ಆಸ್ಕಿಂಗ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕರಾವಳಿ ಸಮಸ್ಯೆಗೆ ಶಾಶ್ವತ ಪರಿಹಾರದ ಭರವಸೆ: ಸಚಿವ ಕೆ.ಎಸ್.ಬಸವಂತಪ್ಪ

ರಾಜ್ಯದ ಕರಾವಳಿ ಭಾಗದಲ್ಲಿ ಮೀನುಗಾರಿಕೆ ಕ್ಷೇತ್ರದ ಅಭಿವೃದ್ಧಿ ಕುಂಠಿತವಾಗುತ್ತಿರುವ ಕುರಿತು ಕಳವಳ ವ್ಯಕ್ತವಾಗುತ್ತಿರುವ ಬೆನ್ನಲ್ಲೇ, ಸ್ಥಳೀಯ ಸಮಸ್ಯೆಗಳಿಗೆ ಸ್ಪಂದಿಸಲು ಸರ್ಕಾರ ಮುಂದಾಗಿದೆ. ಕರಾವಳಿ ವ್ಯಾಪ್ತಿಯ ಬಂದರುಗಳು, ಮೀನು ಮಾರುಕಟ್ಟೆಗಳು, ಬ್ರೇಕ್‌ವಾಟರ್‌ಗಳು ಹಾಗೂ ಜೆಟ್ಟಿಗಳಿಗೆ...

SIR ಪ್ರಕ್ರಿಯೆಯಲ್ಲಿ ಯಾರ ಹೆಸರು ಬಿಟ್ಟುಹೋಗಬಾರದು: PRC ನೀಡಲು ವಿಳಂಬ ಬೇಡ ಡಾ. ಜಿ. ಪರಮೇಶ್ವರ್

ಉದ್ಯೋಗ ಅಥವಾ ವಿವಿಧ ಕಾರಣಗಳಿಂದಾಗಿ ತಮ್ಮ ಸ್ವಂತ ಊರು ತೊರೆದು ಬೇರೆಡೆಗೆ ಸ್ಥಳಾಂತರಗೊಂಡು ನೆಲೆಸಿರುವ ರಾಜ್ಯದ ಯಾವುದೇ ನಾಗರಿಕರು ಯಾವುದೇ ಕಾರಣಕ್ಕೂ ಮತದಾರರ ಪಟ್ಟಿಯಿಂದ ಹೊರಗುಳಿಯಬಾರದು ಎಂದು ಉಪಮುಖ್ಯಮಂತ್ರಿ ಹಾಗೂ ಕಂದಾಯ ಸಚಿವರಾದ...

ಬಿಹಾರ ಪ್ರವಾಹದ ನಡುವೆ ಮೋದಿ ಹುಟ್ಟುಹಬ್ಬದ ಪ್ರಯುಕ್ತ ದೀಪೋತ್ಸವ; ‘ಆಶೀರ್ವಾದ್ ಕಾ ದಿಯಾ’ ಕಾರ್ಯಕ್ರಮಕ್ಕೆ ತೇಜಸ್ವಿ ಯಾದವ್ ಆಕ್ಷೇಪ

ಬಿಹಾರದಲ್ಲಿ ಪ್ರವಾಹ ಪರಿಸ್ಥಿತಿ ಮುಂದುವರಿದಿರುವ ನಡುವೆಯೇ ಪ್ರಧಾನಿ ನರೇಂದ್ರ ಮೋದಿ ಅವರ ಹುಟ್ಟುಹಬ್ಬದ ಅಂಗವಾಗಿ ಸೆಪ್ಟೆಂಬರ್ 17ರಂದು ‘ಆಶೀರ್ವಾದ್ ಕಾ ದಿಯಾ’ ಕಾರ್ಯಕ್ರಮ ಆಯೋಜಿಸಿರುವುದು ರಾಜಕೀಯ ಚರ್ಚೆಗೆ ಕಾರಣವಾಗಿದೆ. ರಾಜ್ಯದ 15 ಜಿಲ್ಲೆಗಳಲ್ಲಿ...

ಉಮರ್ ಖಾಲಿದ್ ಅವರನ್ನು ‘ದೇಶಪ್ರೇಮಿ’ ಎಂದ ಬಿ.ಕೆ. ಹರಿಪ್ರಸಾದ್; ವಿಧಾನಸೌಧ ಪೊಲೀಸ್ ಠಾಣೆಯಲ್ಲಿ ದೂರು ದಾಖಲು

ಬೆಂಗಳೂರಿನ ರಾಷ್ಟ್ರೀಯ ಕಾನೂನು ಶಾಲೆ (ಎನ್‌ಎಲ್‌ಎಸ್‌ಐಯು) ಯೂನಿವರ್ಸಿಟಿಯಲ್ಲಿ ಜೈಲಿನಲ್ಲಿರುವ ಹೋರಾಟಗಾರ ಉಮರ್ ಖಾಲಿದ್ ಕುರಿತಾದ ಸಾಕ್ಷ್ಯಚಿತ್ರಕ್ಕೆ ಸಂಬಂಧಿಸಿದಂತೆ ನಡೆಯುತ್ತಿರುವ ವಿವಾದದ ನಡುವೆ, ಅವರನ್ನು "ರಾಷ್ಟ್ರಪ್ರೇಮಿ" ಎಂದು ಕರೆದಿರುವ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ...

ಇಂದಿರಾ ಗಾಂಧಿಯಂತೆ ನೇರವಾಗಿ ನಿಲ್ಲಿ, ಟ್ರಂಪ್ ಮುಂದೆ ಮಂಡಿಯೂರುತ್ತಿದ್ದೀರಿ: ‘UPI ಟ್ಯಾಕ್ಸ್’ ಬಗ್ಗೆ ಮೋದಿ ವಿರುದ್ಧ ರಾಹುಲ್ ವಾಗ್ದಾಳಿ!

ಯುಪಿಐ (UPI) ವಹಿವಾಟುಗಳಿಗೆ ಸಂಬಂಧಿಸಿದಂತೆ ಜಾರಿಯಾಗುತ್ತಿರುವ ಹೊಸ 'ಮರ್ಚೆಂಟ್ ಡಿಸ್ಕೌಂಟ್ ರೇಟ್' (MDR) ವ್ಯವಸ್ಥೆ ಇದೀಗ ತೀವ್ರ ರಾಜಕೀಯ ಸಂಘರ್ಷಕ್ಕೆ ಕಾರಣವಾಗಿದೆ. ಇದನ್ನು "ಬ್ಯಾಂಕ್‌ಗಳು ವಿಧಿಸುವ ಸೇವಾ ಶುಲ್ಕ" ಎಂದು ಸರ್ಕಾರ ಸಮರ್ಥಿಸಿಕೊಳ್ಳುತ್ತಿದ್ದರೂ,...

ಲಿಯೋನೆಲ್ ಮೆಸ್ಸಿ ಕೇರಳ ಭೇಟಿ ಪ್ರಕರಣ: ಕೊಚ್ಚಿಯ ‘ರಿಪೋರ್ಟರ್ ಟಿವಿ’ ಕಚೇರಿಯಲ್ಲಿ ಪೊಲೀಸರಿಂದ ಶೋಧ

ಮಲಯಾಳಂ ಸುದ್ದಿ ವಾಹಿನಿ 'ರಿಪೋರ್ಟರ್ ಟಿವಿ'ಯ ಕೊಚ್ಚಿ ಪ್ರಧಾನ ಕಚೇರಿಯಲ್ಲಿ ಬುಧವಾರ (ಸೆ.16) ಮುಂಜಾನೆ ಪೊಲೀಸ್ ತಂಡವೊಂದು ಶೋಧ ಕಾರ್ಯ ನಡೆಸಿದ್ದು, ಇದರಿಂದಾಗಿ ತನ್ನ ಸುದ್ದಿ ಪ್ರಸಾರ ಕಾರ್ಯಾಚರಣೆಗೆ ಅಡಚಣೆಯಾಗಿದೆ ಎಂದು ವಾಹಿನಿ...

‘ಏಕರೂಪತೆ ಸಮಾನತೆಯಲ್ಲ’: 2029ಕ್ಕೂ ಮುನ್ನ 21 ರಾಜ್ಯಗಳಲ್ಲಿ ಯುಸಿಸಿ ಜಾರಿ ಘೋಷಿಸಿದ ಅಮಿತ್ ಶಾಗೆ ಪ್ರತಿಪಕ್ಷಗಳ ತೀವ್ರ ತಿರುಗೇಟು

ನವದೆಹಲಿ/ಮುಂಬೈ: 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ನೇತೃತ್ವದ ಎನ್‌ಡಿಎ ಸರ್ಕಾರಗಳಿರುವ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆ (ಯುಸಿಸಿ) ಜಾರಿಗೆ ತರಲಾಗುವುದು ಎಂಬ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ...

KPSC ಅಧ್ಯಕ್ಷರ ಪುತ್ರಿಯ ನಕಲಿ ಪ್ರಮಾಣಪತ್ರ ಹಗರಣ: ಅಕ್ರಮಕ್ಕೆ ಸಾಥ್ ನೀಡಿದ್ದ ಅಧಿಕಾರಿಯ ಜಾಮೀನು ಅರ್ಜಿ ವಜಾ

ಕೆಪಿಎಸ್‌ಸಿ (KPSC) ಅಧ್ಯಕ್ಷರ ಪುತ್ರಿಗೆ ಅಕ್ರಮವಾಗಿ ನಕಲಿ ಆದಾಯ ಪ್ರಮಾಣಪತ್ರ ನೀಡಿದ ಆರೋಪ ಎದುರಿಸುತ್ತಿರುವ ಕಂದಾಯ ಅಧಿಕಾರಿಯ ನಿರೀಕ್ಷಣಾ ಜಾಮೀನು ಅರ್ಜಿಯನ್ನು ಬೆಂಗಳೂರಿನ ನಗರ ಸಿವಿಲ್ ಮತ್ತು ಸೆಷನ್ಸ್ ನ್ಯಾಯಾಲಯ ಮಂಗಳವಾರ ವಜಾಗೊಳಿಸಿದೆ....

ಬಂಗಾಳದಲ್ಲಿ ಬಿಜೆಪಿ ಸರ್ಕಾರದ ನಿರ್ಬಂಧ; ನೆಲಕಚ್ಚಿದ ದನದ ಮಾಂಸ ವ್ಯಾಪಾರ

ಪಶು ಹತ್ಯೆಯ ಕುರಿತು ಮುಖ್ಯಮಂತ್ರಿ ಸುವೇಂಧು ಅಧಿಕಾರಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಸೂಚನೆ ಹೊರಡಿಸಿದ ನಂತರ, ಮಾಂಸದ ವ್ಯಾಪಾರಿ ಮುಷ್ತಾಕ್ ಕಳೆದ ಮೂರು ತಿಂಗಳಿನಿಂದ ಒಂದು ಪೈಸೆಯನ್ನೂ ಗಳಿಸಿಲ್ಲ. "ಚುನಾವಣೆಯ ಕಾರಣದಿಂದ...

ತೀವ್ರಗೊಂಡ ಸೌದಿ-ಹೌತಿ ಸಂಘರ್ಷ : ಮಕ್ಕಾ ಗುರಿಯಾಗಿಸಿದ್ದ ಡ್ರೋನ್ ಹೊಡೆದುರುಳಿಸಿದ್ದೇವೆ ಎಂದ ಸೌದಿ; ತಳ್ಳಿಹಾಕಿದ ಹೌತಿ

ಯೆಮನ್‌ನ ರೆಬೆಲ್ ಗ್ರೂಪ್ ಹೌತಿ ಮತ್ತು ಸೌದಿ ಬೆಂಬಲಿತ ಪಡೆಗಳ ಸಂಘರ್ಷ ತೀವ್ರಗೊಂಡಿದ್ದು, ಇತಿಹಾಸದಲ್ಲೇ ಮೊದಲ ಬಾರಿಗೆ ಮುಸ್ಲಿಮರ ಪವಿತ್ರ ನಗರ ಮಕ್ಕಾದಲ್ಲಿ ಸೌದಿ ಅರೇಬಿಯಾದ ನಾಗರಿಕ ರಕ್ಷಣಾ (ಸಿವಿಲ್ ಡಿಫೆನ್ಸ್) ಇಲಾಖೆಯು...