Homeಕರ್ನಾಟಕದಲಿತ ವ್ಯಕ್ತಿಯ ನಿಗೂಢ ಸಾವು ಪ್ರಕರಣ: ಹಾಲಿ, ಮಾಜಿ ಶಾಸಕರ ಜಾಣಮೌನ

ದಲಿತ ವ್ಯಕ್ತಿಯ ನಿಗೂಢ ಸಾವು ಪ್ರಕರಣ: ಹಾಲಿ, ಮಾಜಿ ಶಾಸಕರ ಜಾಣಮೌನ

- Advertisement -
- Advertisement -

ತುಮಕೂರು ಜಿಲ್ಲೆಯಲ್ಲಿ ದಲಿತರ ಮೇಲಿನ ದೌರ್ಜನ್ಯ, ಹತ್ಯೆ ಪ್ರಕರಣಗಳು ಹೆಚ್ಚುತ್ತಿದ್ದರೂ ಜನಪ್ರತಿನಿಧಿಗಳು ಮತ್ತು ಜಿಲ್ಲಾಡಳಿತ ಜಾಣಮೌನಕ್ಕೆ ಶರಣಾಗಿದೆ. ಚುನಾವಣೆ ಬಂದಾಗ ಓಟಿಗಾಗಿ ದಲಿತರ ಜಪ ಮಾಡುವ ಸರ್ಕಾರ, ಜನಪತ್ರಿನಿಧಿಗಳು ನಂತರ ಮತದಾರರನ್ನು ಮರೆತುಬಿಡುತ್ತಾರೆಂಬುದಕ್ಕೆ ಜಿಲ್ಲೆಯಲ್ಲಿ ನಡೆಯುತ್ತಿರುವ ಘಟನೆಗಳೇ ಸಾಕ್ಷಿ ಎಂದು ದಲಿತ ಸಂಘಟನೆಗಳು ದೂರಿವೆ.

ಪ್ರಮುಖ ದಲಿತ ಅಧಿಕಾರಿಗಳ ಎತ್ತಂಗಡಿ ಒಂದೆಡೆಯಾದರೆ, ತುರುವೇಕೆರೆ, ಚಿಕ್ಕನಾಯಕನಹಳ್ಳಿ, ಕುಣಿಗಲ್ ಮತ್ತು ಮಧುಗಿರಿ ತಾಲೂಕುಗಳಲ್ಲಿ ದಲಿತರ ಮೇಲೆ ಮಾರಣಾಂತಿಕ ಹಲ್ಲೆಗಳು ನಡೆದಿವೆ. ತುರುವೇಕೆರೆಯ ಗಿರಿಯನಹಳ್ಳಿಯ ದಲಿತ ವ್ಯಕ್ತಿ ಕೆಂಪಯ್ಯ ನಿಗೂಢ ಸಾವನ್ನಪ್ಪಿ ಮೂರು ತಿಂಗಳು ಕಳೆದರೂ ಸ್ಥಳೀಯ ಶಾಸಕರು ತುಟಿ ಬಿಚ್ಚಿಲ್ಲದಿರುವುದಕ್ಕೆ ಮತ್ತು ಪರಸ್ಪರ ಕಚ್ಚಾಡುತ್ತಿರುವುದಕ್ಕೆ ಜನರಿಂದ ತೀವ್ರ ಆಕ್ರೋಶ ವ್ಯಕ್ತವಾಗಿದೆ.

ತುರುವೇಕೆರೆಯ ಮಾಜಿ ಶಾಸಕ ಎಂ.ಟಿ.ಕೃಷ್ಣಪ್ಪ ಮತ್ತು ಹಾಲಿ ಶಾಸಕ ಮಸಾಲ ಜಯರಾಂ, ದಲಿತ ವ್ಯಕ್ತಿ ಕೆಂಪಯ್ಯ ನಿಗೂಢ ಸಾವಿನ ಕುರಿತು ಒಂದು ಮಾತನ್ನು ಆಡಿಲ್ಲ. ಹಾಲಿ ಮತ್ತು ಮಾಜಿ ಶಾಸಕರು ಪ್ರತಿಷ್ಠೆಗೆ ಬಿದ್ದು ಜನರನ್ನು ಮರೆತಿದ್ದಾರೆ. ದಲಿತರನ್ನು ಕಡೆಗಣಿಸುತ್ತಿದ್ದಾರೆ ಎಂದು ದಲಿತ ಸಂಘಟನೆಗಳು ದೂರಿವೆ. ಕೂಡಲೇ ಹಾಲಿ ಮತ್ತು ಮಾಜಿ ಶಾಸಕರು ಕೆಂಪಯ್ಯ ಪ್ರಕರಣದ ಕುರಿತು ತಮ್ಮ ನಿಲುವೇನೆಂಬುದನ್ನು ವ್ಯಕ್ತಪಡಿಸಬೇಕೆಂದು ಆಗ್ರಹಿಸಿವೆ.

ಸರ್ಕಾರ ಮತ್ತು ಪೊಲೀಸ್ ವೈಫಲ್ಯ

ಕೆಂಪಯ್ಯ ನಿಗೂಢ ಸಾವು ಪ್ರಕರಣದಲ್ಲಿ ಪೊಲೀಸರು ದೂರುದಾರರ ಮನವಿಯ ಅಂಶಗಳನ್ನ ಪರಿಗಣಿಸಿಲ್ಲ. ತನಿಖೆಯ ಪ್ರಾಥಮಿಕ ಹಂತದ ಕ್ರಮಗಳನ್ನು ಅನುಸರಿಸಿಲ್ಲ. ಅಶಕ್ತ ಕುಟುಂಬದ ರಕ್ಷಣೆಗೆ ಮುಂದಾಗಿಲ್ಲ. ಪ್ರಕರಣದ ತನಿಖೆಯನ್ನು ಸಮರ್ಪಕವಾಗಿ ನಡೆಸುತ್ತಿಲ್ಲ. ಹಾಗಾಗಿ ಪೊಲೀಸ್ ಇಲಾಖೆ, ಜಿಲ್ಲಾಡಳಿತ ಮತ್ತು ರಾಜ್ಯ ಸರ್ಕಾರ ಈ ಪ್ರಕರಣದ ತನಿಖೆ ನಡೆಸುವಲ್ಲಿ ಸಂಪೂರ್ಣ ವಿಫಲವಾಗಿದೆ ಎಂದು ಸತ್ಯಶೋಧನ ಸಮಿತಿಯ ಸದಸ್ಯ ಮತ್ತು ಪಿಯುಸಿಎಲ್ ಅಧ್ಯಕ್ಷ ಕೆ.ದೊರೈರಾಜ್ ಆರೋಪಿಸಿದ್ದಾರೆ.

ಪಿಯುಸಿಎಲ್ ಮತ್ತು ಪರ್ಯಾಯ ಕಾನೂನು ವೇದಿಕೆ ಸದಸ್ಯರು ಏರ್ಪಡಿಸಿದ್ದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಸರ್ಕಾರದ ಸ್ವತ್ತನ್ನು ರಕ್ಷಿಸಲು ಮುಂದಾದ ನೌಕರರಿಗೆ ರಕ್ಷಣೆ ನೀಡಿಲ್ಲ. ಇದು ಸರ್ಕಾರದ ವೈಫಲ್ಯ. ಮೃತನ ಕುಟುಂಬದಲ್ಲಿ ಹೆಣ್ಣುಮಕ್ಕಳೇ ಇದ್ದು ಅವರಿಗೆ ರಕ್ಷಣೆ ಕೊಡಬೇಕಾದ ಪೊಲೀಸ್ ಇಲಾಖೆ ಕೈಚೆಲ್ಲಿ ಕುಳಿತಿದೆ.  ತರುವೇಕೆರೆಯಲ್ಲಿ ದೌರ್ಜನ್ಯಗಳು ನಡೆಯುತ್ತಿದ್ದರೂ ಬಡವರ ಗೋಳನ್ನು ಕೇಳುವವರೇ ಇಲ್ಲ. ಹಾಗಾಗಿ ಮೃತನ ಕುಟುಂಬಕ್ಕೆ ರಕ್ಷಣೆ ನೀಡಬೇಕು. ಕೆಂಪಯ್ಯ ನಿಗೂಢ ಸಾವು ಪ್ರಕರಣವನ್ನು ಸಿಐಡಿಗೆ ವಹಿಸಬೇಕು, ಬಡಕುಟುಂಬಕ್ಕೆ ನ್ಯಾಯ ಒದಗಿಸಬೇಕು ಎಂದು ಆಗ್ರಹಿಸಿದರು.

ಪರ್ಯಾಯ ಕಾನೂನು ವೇದಿಕೆಯ ಸದಸ್ಯ ಹಾಗೂ ಹೈಕೋರ್ಟ್ ವಕೀಲ ಎಸ್. ಶಿವಮಣಿಥನ್ ಮಾತನಾಡಿ ಕೆಂಪಯ್ಯ ನಿಗೂಡ ಸಾವು ಪ್ರಕರಣದಲ್ಲಿ ಸ್ಥಳ ಮಹಜರು ಮಾಡಿಲ್ಲ. ಎ.ಎಸ್.ಪಿ. ಘಟನೆ ಸ್ಥಳದಲ್ಲಿ ಹೇಳಿಕೆ ಪಡೆಯದೇ ಸಾಕ್ಷ್ಯಗಳನ್ನು ತುಮಕೂರಿಗೆ ಕರೆಸಿಕೊಂಡು ಹೇಳಿಕೆ ಪಡೆದಿದ್ದಾರೆ. ಯಾವುದೇ ಪ್ರಕರಣವಾದರೂ ಸ್ಥಳ ತನಿಖೆ ನಡೆಸಿ ಸ್ಥಳದಲ್ಲೇ ಸಾಕ್ಷ್ಯಗಳ ಹೇಳಿಕೆ ಮತ್ತು ಸಹಿ ಪಡೆಯಬೇಕು. ಮಹಜರು ಮಾಡಬೇಕಾದಾಗ ಅನುಸರಿಸಬೇಕಾದ ಕ್ರಮಗಳನ್ನು ಅನುಸರಿಸಿಲ್ಲ. ಇದರಲ್ಲಿ ಪೊಲೀಸರ ವೈಫಲ್ಯ ಎದ್ದುಕಾಣುತ್ತದೆ ಎಂದು ಆರೋಪಿಸಿದ್ದಾರೆ.

ದಂಡಿನಶಿವರ ಪೊಲೀಸ್ ಠಾಣೆಯ ಹೆಡ್ ಕಾನ್ ಸ್ಟೇಬಲ್ ಗಂಗಣ್ಣ ಒತ್ತಾಯಪೂರಕವಾಗಿ ದೂರು ನೀಡಲು ವಿಳಂಬಕ್ಕೆ ಸಂಬಂಧಿಕರ ಜೊತೆ ಚರ್ಚಿಸಿದ್ದು ಕಾರಣ ಎಂದು ದೂರುದಾರರಿಂದ ಬರೆಸಿಕೊಂಡಿದ್ದಾರೆ. ದೂರು ದಾಖಲಿಸಲು ಮತ್ತು ಎಫ್ಐಆರ್ ದಾಖಲಿಸಲು ವಿಳಂಬಕ್ಕೆ ಪೊಲೀಸರೇ ಕಾರಣ. ಸಾರ್ವಜನಿಕ ಆಸ್ತಿ ರಕ್ಷಣೆಗೆ ಕ್ರಮ ಕೈಗೊಳ್ಳಬೇಕೆಂದು ಕೆಂಪಯ್ಯ ತಹಶೀಲ್ದಾರ್ ಅವರಿಗೆ ತಿಳಿಸಿದ್ದಾರೆ. ಹಾಗಾಗಿ ಗ್ರಾಮಲೆಕ್ಕಿಗರನ್ನು ಸ್ಥಳಕ್ಕೆ ಕಳುಹಿಸಿ ಮಣ್ಣು ಗಣಿ ನಡೆಸುತ್ತಿದ್ದವರಿಗೆ ಎಚ್ಚರಿಕೆ ನೀಡಲಾಗಿದೆ. ಆನಂತರ ಕೆಂಪಯ್ಯ ಅವರಿಗೆ ಅರೋಪಿಗಳು ಜೀವಬೆದರಿಕೆ ಹಾಕಿದ್ದು ಈ ಮಾಹಿತಿಯನ್ನು ಕಂದಾಯ ಅಧಿಕಾರಿಗೆ ತಿಳಿಸಿದ್ದಾರೆ. ಆದರೆ ಕಂದಾಯ ಅಧಿಕಾರಿ ಈ ಬಗ್ಗೆ ಯಾವುದೇ ಕ್ರಮ ಕೈಗೊಂಡಿಲ್ಲ ಎಂದು ಆಪಾದಿಸಿದ್ದಾರೆ.

ಘಟನೆ ಸಂಬಂಧ ಸಾಕ್ಷ್ಯ ಸಂಗ್ರಹ ಮಾಡಿಲ್ಲ. ಆರೋಪಿಗಳು ಸ್ಥಳದಲ್ಲಿದ್ದರೂ ಅವರ ಸಿಮ್ ಮತ್ತು ಕಾಲರ್ ಐಡಿ ಡಿಟೈಲ್ ಸಂಗ್ರಹಿಸಿಲ್ಲ. ಎ.ಎಸ್.ಪಿ ಚಾರ್ಜ್ ಶೀಟ್ ಸಲ್ಲಿಸಿಲ್ಲ. ಕುಟುಂಬದ ಸದಸ್ಯರಿಗೆ ಮರಣೋತ್ತರ ಪರೀಕ್ಷೆಯ ವರದಿ ನೀಡಿಲ್ಲ. ಇದನ್ನು ನೋಡಿದರೆ ಪೊಲೀಸರೊಂದಿಗೆ ವೈದ್ಯರು ಶಾಮೀಲಾಗಿದ್ದಾರೆ. ಪೊಲೀಸ್, ವೈದ್ಯರ ಲೋಪಗಳು ಎದ್ದುಕಾಣುತ್ತವೆ. ಎಫ್‌ಐಆರ್ ದಾಖಲಿಸಿ ತಿಂಗಳು ಕಳೆದರೂ ಚಾರ್ಜ್ ಶೀಟ್ ಏಕೆ ಸಲ್ಲಿಸಿಲ್ಲ ಎಂದು ಟೀಕಿಸಿದ್ದಾರೆ.

ಮೃತ ಕೆಂಪಯ್ಯ ಪುತ್ರಿ ಚೈತ್ರಾ ಮಾತನಾಡಿ, ನಮಗೆ ಪ್ರಾಣ ಬೆದರಿಕೆ ಇದೆ. ಪೊಲೀಸರು ರಕ್ಷಣೆ ಕೊಡುತ್ತಿಲ್ಲ. ನಾವು ಗ್ರಾಮದಲ್ಲಿ ವಾಸ ಮಾಡಲು ಕಷ್ಟವಾಗುತ್ತಿದೆ. ತಂದೆಯ ಮರಣೋತ್ತರ ಪರೀಕ್ಷೆಯ ವರದಿಯನ್ನು ಕೇಳಿದರೆ ಕೊಡುತ್ತಿಲ್ಲ. ಮನೆಯಲ್ಲಿ ಎಲ್ಲರೂ ಹೆಣ್ಣುಮಕ್ಕಳೇ ಇದ್ದೇವೆ. ನಮಗೆ ರಕ್ಷಣೆ ಬೇಕು. ನ್ಯಾಯ ಬೇಕು. ನಮ್ಮ ತಂದೆಯ ಸಾವಿಗೆ ಕಾರಣರಾರಿಗೆ ಕಾನೂನು ರೀತಿ ಶಿಕ್ಷೆಗೆ ಗುರಿಪಡಿಸಬೇಕು ಎಂದು ಮನವಿ ಮಾಡಿದರು.

ಪತ್ರಿಕಾಗೋಷ್ಠಿಯಲ್ಲಿ ಸ್ಲಂ ಜನಾಂದೋಲನ ಕರ್ನಾಟಕ ಸಂಚಾಲಕ ಎ.ನರಸಿಂಹಮೂರ್ತಿ, ಸತ್ಯಶೋಧನ ಸಮಿತಿಯ ಸದಸ್ಯ ಟಿ.ವಿ.ನರಸಿಂಹಪ್ಪ, ಪರ್ಯಾಯ ಕಾನೂನು ವೇದಿಕೆಯ ಬಸವಪ್ರಸಾದ್ ಕುನಾಲೆ, ಪಿಯುಸಿಎಲ್ ಉಪಾಧ್ಯಕ್ಷೆ ದೀಪಿಕ, ಸಿಐಟಿಯು ಜಿಲ್ಲಾಧ್ಯಕ್ಷ ಸೈಯದ್ ಮುಜೀಬ್, ಎನ್.ಕೆ.ಸುಬ್ರಮಣ್ಯ ಹಾಜರಿದ್ದರು.


ಇದನ್ನೂ ಓದಿ; ಬೋರ್‌ವೆಲ್ ಕೊರೆಸಿದ್ದಕ್ಕೆ ದಲಿತನ ಮೇಲೆ ಹಲ್ಲೆ: ಆರೋಪಿಗಳ ಬೆಂಬಲಕ್ಕೆ ನಿಂತ ರಾಜಕಾರಣಿ?

ಇದನ್ನೂ ಓದಿ: ತುರುವೇಕೆರೆಯಲ್ಲಿ ದಲಿತ ಮುಖಂಡನ ಸಂಶಯಾಸ್ಪದ ಸಾವು – ಪೊಲೀಸ್ ವೈಫಲ್ಯವೆಂದ ಪಿಯುಸಿಎಲ್ ಸತ್ಯಶೋಧನ ಸಮಿತಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ದೆಹಲಿ ಗಲಭೆ ಪ್ರಕರಣದಿಂದ ಒಂಬತ್ತು ಜನರನ್ನು ಖುಲಾಸೆಗೊಳಿಸಿದ ನ್ಯಾಯಾಲಯ

2020 ರ ದೆಹಲಿ ಗಲಭೆಗೆ ಸಂಬಂಧಿಸಿದ ಪ್ರಕರಣದಲ್ಲಿ ಒಂಬತ್ತು ಜನರನ್ನು ನ್ಯಾಯಾಲಯವು ಖುಲಾಸೆಗೊಳಿಸಿದೆ. ಸಾಕ್ಷ್ಯಗಳು ನಿರ್ದಿಷ್ಟತೆಯ ಕೊರತೆ ಮತ್ತು ಸಾಮಾನ್ಯ ಸ್ವರೂಪದ್ದಾಗಿರುವುದರಿಂದ ಪ್ರಕರಣದಲ್ಲಿ ಅವುಗಳನ್ನು ನಂಬಲಾಗುವುದಿಲ್ಲ ಎಂ ನ್ಯಾಯಾಲಯ ಹೇಳಿದೆ. ಹೆಚ್ಚುವರಿ ಸೆಷನ್ಸ್ ನ್ಯಾಯಾಧೀಶ...

ಚುನಾವಣಾ ಕಾರ್ಯಕ್ಕೆ ಅರಣ್ಯ ಸಿಬ್ಬಂದಿ : ಅಸ್ಸಾಂ ಸರ್ಕಾರದ ಆದೇಶಕ್ಕೆ ಎನ್‌ಜಿಟಿ ತಡೆ

ವಿಧಾನಸಭೆ ಚುನಾವಣೆಗೆ ಅಸ್ಸಾಂ ಅರಣ್ಯ ಸಂರಕ್ಷಣಾ ಪಡೆಯ 1,600 ಸಿಬ್ಬಂದಿಯನ್ನು ನಿಯೋಜಿಸಲು ಕೋರಿದ್ದ ಅಸ್ಸಾಂ ಸರ್ಕಾರದ ಆದೇಶವನ್ನು ರಾಷ್ಟ್ರೀಯ ಹಸಿರು ನ್ಯಾಯಮಂಡಳಿಯ (ಎನ್‌ಜಿಟಿ) ಪೂರ್ವ ವಲಯ ಪೀಠ ಗುರುವಾರ (ಮಾ.2) ತಡೆಹಿಡಿದಿದೆ. ಈ ಆದೇಶವನ್ನು...

‘ಕರೂರು ದುರಂತದಲ್ಲಿ ಪಿತೂರಿ ಇದೆ’ ಈ ಘಟನೆಯಲ್ಲಿ ನನಗೂ ನ್ಯಾಯ ಬೇಕು: ಟಿವಿಕೆ ಮುಖ್ಯಸ್ಥ ನಟ, ರಾಜಕಾರಣಿ ವಿಜಯ್ ಆರೋಪ  

ಕರೂರಿನಲ್ಲಿ ನಡೆದ ದುರಂತ ಕಾಲ್ತುಳಿತ ಮತ್ತು ಅವರ ಕೊನೆಯ ಚಿತ್ರ ಜನನಾಯಗನ್ ಬಿ ಡುಗಡೆಯ ಹಿಂದೆ ಜಂಟಿ ಕುತಂತ್ರ ಮತ್ತು ಪಿತೂರಿ ಇದೆ ಎಂದು ಟಿವಿಕೆ ಮುಖ್ಯಸ್ಥ ವಿಜಯ್ ಗುರುವಾರ ಆರೋಪಿಸಿದ್ದಾರೆ ಮತ್ತು...

ತೆಲಂಗಾಣ| ಗೋಮಾಂಸ ಮಾರಾಟ ಆರೋಪ; ಮುಸ್ಲಿಂ ಸಮುದಾಯದ ತಂದೆ-ಮಗನ ಮೇಲೆ ಹಲ್ಲೆ

ಹನುಮಾನ್ ಜಯಂತಿ ಸಂದರ್ಭದಲ್ಲಿ ಗೋಮಾಂಸ ಮಾರಾಟ ಮಾಡಿದ ಆರೋಪದ ಮೇಲೆ ಹಿಂದುತ್ವವಾದಿ ಗುಂಪೊಂದು 60 ವರ್ಷದ ಮುಸ್ಲಿಂ ವ್ಯಕ್ತಿ ಮತ್ತು ಆತನ ಹದಿಹರೆಯದ ಮಗನ ಮೇಲೆ ಹಲ್ಲೆ ನಡೆಸಿರುವ ಘಟನೆ ತೆಲಂಗಾಣದ ಜಗ್ತಿಯಾಲ್...

‘ಕೇವಲ ಮುಸ್ಲಿಮರೇ ಶಾಸಕರಾಗಿದ್ದಾರೆ’..ಚುನಾವಣೆ ಗೆಲ್ಲಲು ಧರ್ಮ ಮುಂದಿಟ್ಟ ಗುರುವಾಯೂರು ಬಿಜೆಪಿ ಅಭ್ಯರ್ಥಿ

ಕೇರಳದ ಗುರುವಾಯೂರು ವಿಧಾನಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಬಿ. ಗೋಪಾಲಕೃಷ್ಣನ್ ಚುನಾವಣೆ ಗೆಲ್ಲಲು ಧರ್ಮವನ್ನೇ ಮುಖ್ಯ ಅಸ್ತ್ರವನ್ನಾಗಿ ಬಳಸಿಕೊಂಡಿದ್ದು, ಕಳೆದ 50 ವರ್ಷಗಳಲ್ಲಿ ಕೇವಲ ಮುಸ್ಲಿಮರೇ ಶಾಸಕರಾಗಿದ್ದಾರೆ ಎಂಬುವುದನ್ನು ಪುನರುಚ್ಚರಿಸಿದ್ದಾರೆ. ಚುನಾವಣಾ ಪ್ರಚಾರದ ಭಾಗವಾಗಿ...

ಹೊಸ ಹಿಂದೂ ದೇವಾಲಯಕ್ಕೆ ಭೂಮಿ ಮಂಜೂರು ಮಾಡಿದ ಸಿಂಗಾಪುರ ಆಡಳಿತ

ಸಿಂಗಪುರದಲ್ಲಿ ಹೆಚ್ಚುತ್ತಿರುವ ಹಿಂದೂ ಸಮುದಾಯದ ಅಗತ್ಯಗಳನ್ನು ಪೂರೈಸಲು ಸಿಂಗಾಪುರ ಸರ್ಕಾರವು ನಗರ-ರಾಜ್ಯದ ಯಿಶುನ್ ಅವೆನ್ಯೂ 3 ರಲ್ಲಿ ಹೊಸ ಹಿಂದೂ ದೇವಾಲಯವನ್ನು ನಿರ್ಮಿಸಲು ಭೂಮಿ ಮಂಜೂರು ಮಾಡಿದೆ. ಏಪ್ರಿಲ್ 1 ರ ಬುಧವಾರದ ಮಾಧ್ಯಮ...

ಕೇರಳ ಚುನಾವಣೆಗೆ ಮುನ್ನ ಕಾಂಗ್ರೆಸ್ ನೇತೃತ್ವದ ಯುಡಿಎಫ್ ಗೆ ಬೆಂಬಲ ಘೋಷಿಸಿದ ‘ಅಂಬೇಡ್ಕರ್‌ವಾದಿ ಪ್ರಜಾಸತ್ತಾತ್ಮಕ ರಂಗ’

ಎಡ ಸರ್ಕಾರ ಕೈಗೊಂಡ ಅಭಿವೃದ್ಧಿ ಉಪಕ್ರಮಗಳು ಆದಿವಾಸಿ, ದಲಿತ ಮತ್ತು ಇತರ ಅಂಚಿನಲ್ಲಿರುವ ಸಮುದಾಯಗಳನ್ನು ಬದಿಗಿಟ್ಟಿವೆ ಎಂದು ಆರೋಪಿಸಿ, ಅಂಬೇಡ್ಕರ್‌ವಾದಿ ಪ್ರಜಾಸತ್ತಾತ್ಮಕ ರಂಗ (ಎಡಿಎಫ್) ಬುಧವಾರ ಕಾಂಗ್ರೆಸ್ ನೇತೃತ್ವದ ಯುನೈಟೆಡ್ ಪ್ರಜಾಸತ್ತಾತ್ಮಕ ರಂಗ...

ಐಎಎಸ್‌ ಅಧಿಕಾರಿ ರೋಹಿಣಿ ಸಿಂಧೂರಿ ವಿರುದ್ಧ ತನಿಖೆಗೆ ಪೂರ್ವಾನುಮತಿ ನೀಡಲು ಹೈಕೋರ್ಟ್ ನಿರ್ದೇಶನ

ಪರಿಸರ ಸ್ನೇಹಿ ಬಟ್ಟೆ ಚೀಲಗಳ ಖರೀದಿಯಲ್ಲಿ ನಡೆದಿದೆ ಎನ್ನಲಾದ ಅಕ್ರಮಗಳಿಗೆ ಸಂಬಂಧಿಸಿದಂತೆ, ಐಎಎಸ್ ಅಧಿಕಾರಿ ರೋಹಿಣಿ ಸಿಂಧೂರಿ ವಿರುದ್ಧ ಎಫ್‌ಐಆರ್ ದಾಖಲಿಸಲು ಅನುಮತಿಸುವಂತೆ ಹೈಕೋರ್ಟ್ ರಾಜ್ಯ ಸರ್ಕಾರಕ್ಕೆ ನಿರ್ದೇಶನ ನೀಡಿದೆ ಎಂದು ವರದಿಯಾಗಿದೆ....

ನ್ಯಾಯಾಂಗ ಅಧಿಕಾರಿಗಳನ್ನು ರಕ್ಷಿಸುವಲ್ಲಿ ಚುನಾವಣಾ ಆಯೋಗ ವಿಫಲವಾಗಿದೆ: ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳದ ಮಾಲ್ಡಾ ಜಿಲ್ಲೆಯಲ್ಲಿ ಎಸ್‌ಐಆರ್ ಕಾರ್ಯದಲ್ಲಿ ತೊಡಗಿರುವ ನ್ಯಾಯಾಂಗ ಅಧಿಕಾರಿಗಳನ್ನು 'ರಕ್ಷಿಸುವಲ್ಲಿ ಚುನಾವಣಾ ಆಯೋಗ ವಿಫಲವಾಗಿದೆ' ಎಂದು ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ದೂಷಿಸಿದ್ದಾರೆ. ಮತದಾರರ ಪಟ್ಟಿಯಿಂದ ಹೆಸರುಗಳನ್ನು ಅಳಿಸಿಹಾಕಿದ್ದಕ್ಕಾಗಿ ಬುಧವಾರ ಪ್ರತಿಭಟನಾಕಾರರು ಹಲವಾರು...

ಎಎಪಿಯ ರಾಜ್ಯಸಭಾ ಉಪನಾಯಕ ಸ್ಥಾನದಿಂದ ರಾಘವ್ ಚಡ್ಡಾಗೆ ಕೋಕ್, ಅಶೋಕ್ ಮಿತ್ತಲ್ ಗೆ ಅಧಿಕಾರ: ವರದಿ

ಮಹತ್ವದ ಬೆಳವಣಿಗೆಯೊಂದರಲ್ಲಿ, ಆಮ್ ಆದ್ಮಿ ಪಕ್ಷ (ಎಎಪಿ) ರಾಜ್ಯಸಭೆಯಲ್ಲಿ ರಾಘವ್ ಚಡ್ಡಾ ಅವರನ್ನು ಉಪನಾಯಕ ಹುದ್ದೆಯಿಂದ ಬದಲಾಯಿಸಲು ಮುಂದಾಗಿದ್ದು, ಇದು ಪಕ್ಷದೊಳಗಿನ ಆಂತರಿಕ ಬಿರುಕು ಉಂಟಾಗಿರುವ ಲಕ್ಷಣಗಳನ್ನು ಸೂಚಿಸುತ್ತದೆ. ಮೇಲ್ಮನೆಯಲ್ಲಿ ಪಕ್ಷದ ಹೊಸ...